Author: Tulunada Surya

ಮಂಗಳೂರು, ಸೆ.20: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ಇಬ್ಬರು ಮಕ್ಕಳನ್ನು ಮನೆಯ ಸಮೀಪದ ಬಾವಿಗೆ ಎಸೆದಿದ್ದಾರೆ ಎಂಬ ಆರೋಪ ದಕ್ಷಿಣ ಕನ್ನಡ ಜಿಲ್ಲೆಯ ಪೆರ್ನೆಯಲ್ಲಿ ನಡೆದಿದೆ. ಘಟನೆಯಲ್ಲಿ ಸುಮಾರು ಮೂರು ವರ್ಷದ ಮಗು ಮೃತಪಟ್ಟಿದ್ದು, ಮತ್ತೊಂದು ಮಗು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದೆ. ಪೆರ್ನೆ ನಿವಾಸಿಗಳಾದ ಸಿನಾನ್ (32) ಮತ್ತು ನೂರುನ್ನಿಸಾ (28) ದಂಪತಿ ನಡುವೆ ವೈವಾಹಿಕ ವಿಚಾರಕ್ಕೆ ಸಂಬಂಧಿಸಿ ಫೋನ್ ಕರೆಯಲ್ಲಿ ಮಾತಿನ ಚಕಮಕಿ ನಡೆದಿತ್ತು ಎನ್ನಲಾಗಿದೆ. ಈ ಸಂದರ್ಭದಲ್ಲಿ ಕೋಪಗೊಂಡ ನೂರುನ್ನಿಸಾ, ಮನೆಯಲ್ಲಿದ್ದ ತನ್ನ ಸುಮಾರು ಮೂರುವರೆ ವರ್ಷದ ಮಗು ಹಾಗೂ ಪತಿಯ ತಂಗಿಯ ಸುಮಾರು ಮೂರು ವರ್ಷದ ಮಗುವನ್ನು ಮನೆಯ ಸಮೀಪದಲ್ಲಿದ್ದ ಬಾವಿಗೆ ಎಸೆದಿದ್ದಾರೆ ಎಂದು ಆರೋಪಿಸಲಾಗಿದೆ. ಮಕ್ಕಳು ಬಾವಿಗೆ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿ ಇಬ್ಬರು ಮಕ್ಕಳನ್ನೂ ಬಾವಿಯಿಂದ ಮೇಲಕ್ಕೆತ್ತಿದ್ದಾರೆ. ಆದರೆ ಪತಿಯ ತಂಗಿಯ ಮಗು ಮೃತಪಟ್ಟಿರುವುದು ಬಳಿಕ ದೃಢಪಟ್ಟಿದೆ. ನೂರುನ್ನಿಸಾ ಅವರ ಮಗುವನ್ನು ಗಂಭೀರ ಸ್ಥಿತಿಯಲ್ಲಿ ಮಂಗಳೂರಿನ ಆಸ್ಪತ್ರೆಗೆ…

Read More

ಬೆಂಗಳೂರು, ಸೆ.20: ರಾಜ್ಯ ಸರ್ಕಾರವು ತುಳು ಭಾಷೆಗೆ ಹೆಚ್ಚುವರಿ ಆಡಳಿತ ಭಾಷೆಯ ಸ್ಥಾನಮಾನ ನೀಡಿರುವುದು ಕರಾವಳಿ ಭಾಗದ ಜನರ ದೀರ್ಘಕಾಲದ ಭಾಷಾ ಆಶಯಕ್ಕೆ ದೊರೆತ ಮಹತ್ವದ ಮಾನ್ಯತೆಯಾಗಿದೆ. ಇದು ಕೇವಲ ಸಾಂಸ್ಕೃತಿಕ ವಿಜಯವಲ್ಲ; ತುಳು ಭಾಷೆಯ ಅಸ್ಮಿತೆ, ಆಡಳಿತಾತ್ಮಕ ಒಳಗೊಳ್ಳುವಿಕೆ ಹಾಗೂ ಭಾಷೆಯ ಕಾನೂನಾತ್ಮಕ ಸ್ಥಾನಮಾನವನ್ನು ಬಲಪಡಿಸುವ ಮಹತ್ವದ ಹೆಜ್ಜೆಯಾಗಿದೆ ಎಂದು ತುಳು ಕೂಟ ಮೂಡಬಿದಿರೆ ಉಪಾಧ್ಯಕ್ಷೆ ಶ್ವೇತಾ ಜೈನ್ ತಿಳಿಸಿದ್ದಾರೆ. ಸಾವಿರಾರು ವರ್ಷಗಳ ಶ್ರೀಮಂತ ಇತಿಹಾಸ, ವಿಶಿಷ್ಟ ಸಾಹಿತ್ಯ ಪರಂಪರೆ ಹಾಗೂ ಸಮೃದ್ಧ ಸಾಂಸ್ಕೃತಿಕ ಹಿನ್ನೆಲೆಯನ್ನು ಹೊಂದಿರುವ ತುಳು ಭಾಷೆಗೆ ಸೂಕ್ತ ಮಾನ್ಯತೆ ದೊರಕಬೇಕೆಂಬುದು ಕರಾವಳಿಯ ಜನರ ಬಹುದಿನಗಳ ಬೇಡಿಕೆಯಾಗಿತ್ತು. ಈ ನಿಟ್ಟಿನಲ್ಲಿ ಹಲವು ವರ್ಷಗಳಿಂದ ತುಳುಪರ ಸಂಘಟನೆಗಳು, ಸಾಹಿತಿಗಳು, ಕಲಾವಿದರು ಹಾಗೂ ಭಾಷಾಭಿಮಾನಿಗಳು ನಡೆಸಿಕೊಂಡು ಬಂದ ನಿರಂತರ ಹೋರಾಟ, ಜಾಗೃತಿ ಅಭಿಯಾನ ಮತ್ತು ಪ್ರಯತ್ನಗಳಿಗೆ ಇದೀಗ ಮಹತ್ವದ ಫಲ ದೊರೆತಿದೆ ಎಂದು ಅವರು ಹೇಳಿದರು. ತುಳು ಭಾಷೆಯ ಮಾನ್ಯತೆಗಾಗಿ ಶ್ರಮಿಸಿದ ಪ್ರತಿಯೊಬ್ಬ ಹೋರಾಟಗಾರ, ಸಂಘಟನೆ, ಸಾಹಿತಿ, ಕಲಾವಿದ ಹಾಗೂ…

Read More

ಉಡುಪಿ, ಸೆ.18: ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡುವ ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿರುವ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ತುಳುನಾಡು ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ಶುಕ್ರವಾರ ಅದ್ದೂರಿ ವಿಜಯೋತ್ಸವ ನಡೆಯಿತು.ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ಕುರಿತು ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ನಗರದ ಕ್ಲಾಕ್ ಟವರ್ ಎದುರು ತುಳುನಾಡು ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚಿಕೊಂಡು ಸಂಭ್ರಮಿಸಿದರು. ತುಳು ಭಾಷೆಯ ಅಧಿಕೃತ ಮಾನ್ಯತೆಗಾಗಿ ಕಳೆದ 17 ವರ್ಷಗಳಿಂದ ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅದ್ಯಕ್ಷರಾದ ಯೋಗಿಶ್ ಶೆಟ್ಟಿ ಜಪ್ಪುರವರ ನೇತ್ರತ್ವದಲ್ಲಿ ನಡೆದ ನಿರಂತರ ಹೋರಾಟಕ್ಕೆ ಈ ನಿರ್ಧಾರ ಮಹತ್ವದ ಮೈಲಿಗಲ್ಲಾಗಿದೆ ಎಂದು ಮುಖಂಡರು ಹರ್ಷ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ತುಳುನಾಡು ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಅಧ್ಯಕ್ಷ ಫ್ರ್ಯಾಂಕಿ ಡಿಸೋಜ…

Read More

ಮಂಗಳೂರು, ಸೆ.18: ತುಳು ಭಾಷೆಯ ಅಧಿಕೃತ ಮಾನ್ಯತೆಯ ದಶಕಗಳ ಬೇಡಿಕೆಗೆ ಇಂದು ಐತಿಹಾಸಿಕ ತಿರುವು ದೊರೆತಿದೆ. ಮಂಗಳೂರಿನಲ್ಲಿ ಶುಕ್ರವಾರ ನಡೆದ ರಾಜ್ಯ ಸಚಿವ ಸಂಪುಟದ ಸಭೆಯಲ್ಲಿ ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ಪ್ರಸ್ತಾವನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಕರಾವಳಿ ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ನಡೆದ ಮಹತ್ವದ ಸಚಿವ ಸಂಪುಟ ಸಭೆಯು ಸುಮಾರು ಮೂರು ಗಂಟೆಗಳ ಕಾಲ ನಡೆಯಿತು. ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ತುಳು ಭಾಷೆಗೆ ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ಕುರಿತು ಸಚಿವ ಸಂಪುಟ ಸಮ್ಮತಿ ಸೂಚಿಸಿದೆ ಎಂದು ತಿಳಿಸಿದರು. “ಹಿಂದಿನ ಸರ್ಕಾರಗಳು ಈ ನಿರ್ಧಾರವನ್ನು ಯಾಕೆ ಕೈಗೊಂಡಿಲ್ಲ ಎಂಬ ಪ್ರಶ್ನೆಯನ್ನು ನಾವು ಮಾಡುವುದಿಲ್ಲ. ನಮ್ಮ ಸರ್ಕಾರಕ್ಕೆ ಈ ವಿಷಯದಲ್ಲಿ ಸ್ಪಷ್ಟ ಬದ್ಧತೆ ಇದೆ. ನಾವು ಭಾವನೆಗಳ ಮೇಲೆ ರಾಜಕಾರಣ ಮಾಡುವುದಿಲ್ಲ; ಜನರ ಬದುಕಿಗೆ ಸಂಬಂಧಿಸಿದ ವಿಚಾರಗಳ ಮೇಲೆ ಕೆಲಸ ಮಾಡುತ್ತೇವೆ” ಎಂದು ಮುಖ್ಯಮಂತ್ರಿ ಹೇಳಿದರು.…

Read More

ಮಂಗಳೂರು, ಸೆ.18: ಕರಾವಳಿ ಕರ್ನಾಟಕದ ಅಭಿವೃದ್ಧಿಗೆ ಹೊಸ ವೇಗ ಹಾಗೂ ದಿಕ್ಕು ನೀಡುವ ನಿರೀಕ್ಷೆ ಮೂಡಿಸಿರುವ ರಾಜ್ಯ ಸಚಿವ ಸಂಪುಟದ ವಿಶೇಷ ಸಭೆ ಇಂದು ಮಂಗಳೂರಿನ ಪಡೀಲ್‌ನಲ್ಲಿರುವ ಪ್ರಜಾ ಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಆರಂಭಗೊಂಡಿದೆ. ಕರ್ನಾಟಕ ರಾಜ್ಯದ ರಾಜಧಾನಿ ಬೆಂಗಳೂರಿನ ಹೊರಗೆ ನಡೆಯುತ್ತಿರುವ ಮೊದಲ ವಿಶೇಷ ಸಚಿವ ಸಂಪುಟ ಸಭೆ ಎಂಬ ವಿಶೇಷತೆ ಈ ಸಭೆಗಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಸೇರಿದಂತೆ ಕರಾವಳಿ ಮತ್ತು ಮಲೆನಾಡು ಭಾಗದ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಪ್ರಮುಖ ವಿಚಾರಗಳು ಸಭೆಯ ಚರ್ಚೆಯ ಕೇಂದ್ರಬಿಂದುವಾಗಿವೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಸಚಿವ ಸಂಪುಟದ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದು, ವಿವಿಧ ಇಲಾಖೆಗಳ ಪ್ರಮುಖ ಪ್ರಸ್ತಾವನೆಗಳು, ಪ್ರಾದೇಶಿಕ ಬೇಡಿಕೆಗಳು ಹಾಗೂ ಕರಾವಳಿ ಭಾಗದ ಅಭಿವೃದ್ಧಿಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚೆ ನಡೆಯುತ್ತಿದೆ. ಕರಾವಳಿಯ ಸಂಸ್ಕೃತಿಯೊಂದಿಗೆ ಸಚಿವ ಸಂಪುಟಕ್ಕೆ ಅದ್ದೂರಿ ಸ್ವಾಗತ ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ಮಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿ…

Read More

ಮಂಗಳೂರು, ಸೆ.18: ಮಂಗಳೂರಿನಲ್ಲಿ ನಡೆಯುತ್ತಿರುವ ರಾಜ್ಯ ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಕರಾವಳಿ ಭಾಗದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ 11 ಪ್ರಮುಖ ಬೇಡಿಕೆಗಳನ್ನು ಮಾಜಿ ಕರ್ನಾಟಕ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಸರ್ಕಾರಿ ಭರವಸೆಗಳ ಸಮಿತಿ ಅಧ್ಯಕ್ಷ ಬಿ.ಎಂ. ಫಾರೂಕ್ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ. ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸುತ್ತಿರುವ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿರುವ ಫಾರೂಕ್, ಸರ್ಕಾರವನ್ನು ಜನರ ಬಳಿಗೆ ಕೊಂಡೊಯ್ಯುವ ಹಾಗೂ ಕರಾವಳಿ ಭಾಗದಲ್ಲಿ ಉದ್ಯಮ, ಪ್ರವಾಸೋದ್ಯಮ ಮತ್ತು ಶಿಕ್ಷಣ ಕ್ಷೇತ್ರಗಳಿಗೆ ಹೊಸ ವೇಗ ನೀಡುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕ ವಿಧಾನ ಪರಿಷತ್ ಸದಸ್ಯರಾಗಿ ಹಾಗೂ ಭರವಸೆಗಳ ಸಮಿತಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಅನುಭವದ ಹಿನ್ನೆಲೆಯಲ್ಲಿ ಕರಾವಳಿಯ ಅಭಿವೃದ್ಧಿಗೆ ಅಗತ್ಯವಿರುವ ಕೆಲವು ಪ್ರಮುಖ ವಿಷಯಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದಿರುವುದಾಗಿ ಅವರು ತಿಳಿಸಿದ್ದಾರೆ. ಕರಾವಳಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ಒತ್ತು ದಕ್ಷಿಣ…

Read More

ಮಂಗಳೂರು, ಸೆ.17: ಕರಾವಳಿ ಭಾಗದ ಸಮಗ್ರ ಅಭಿವೃದ್ಧಿಗೆ ಹೊಸ ರೂಪ ನೀಡುವ ಉದ್ದೇಶದಿಂದ ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕರಾವಳಿ ಹಾಗೂ ಮಲೆನಾಡು ಪ್ರದೇಶಗಳು ವಿದ್ಯಾವಂತರು ಮತ್ತು ಬುದ್ಧಿವಂತರು ಹೆಚ್ಚಿನ ಸಂಖ್ಯೆಯಲ್ಲಿ ಇರುವ ಜಿಲ್ಲೆಗಳಾಗಿದ್ದು, ಈ ಭಾಗಕ್ಕೆ ಮತ್ತಷ್ಟು ಶಕ್ತಿ ತುಂಬುವ ಉದ್ದೇಶದಿಂದ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗುತ್ತಿದೆ ಎಂದು ತಿಳಿಸಿದರು. ಕರಾವಳಿ ಭಾಗದ ಶಾಸಕರು ಹಾಗೂ ಸಂಸದರು ತಮ್ಮನ್ನು ಭೇಟಿಯಾಗಿ ಸ್ಥಳೀಯ ಸಮಸ್ಯೆಗಳು ಮತ್ತು ವಿವಿಧ ಅಭಿವೃದ್ಧಿ ಬೇಡಿಕೆಗಳನ್ನು ತಮ್ಮ ಗಮನಕ್ಕೆ ತಂದಿದ್ದಾರೆ. ಅವರ ಬೇಡಿಕೆಗಳನ್ನು ಸಚಿವ ಸಂಪುಟ ಸಭೆಯಲ್ಲಿಯೂ ಪ್ರಸ್ತಾಪಿಸಲಾಗಿದೆ. ಇಲ್ಲಿನ ಅಭಿವೃದ್ಧಿಗೆ ಸರ್ಕಾರದೊಂದಿಗೆ ಕೈಜೋಡಿಸುವಂತೆ ಜನಪ್ರತಿನಿಧಿಗಳು ಮನವಿ ಮಾಡಿದ್ದಾರೆ. ಸಾಧ್ಯವಾದಷ್ಟು ಬೇಡಿಕೆಗಳನ್ನು ಈಡೇರಿಸಲು ಸಚಿವ ಸಂಪುಟ ಸಭೆಯಲ್ಲಿ ಪ್ರಯತ್ನಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು. ಕಸ್ತೂರಿ ರಂಗನ್ ವರದಿ ಕುರಿತು ವಿಶೇಷ ಚರ್ಚೆ ಕಸ್ತೂರಿ ರಂಗನ್ ವರದಿ…

Read More

ಬೆಂಗಳೂರು, ಸೆ.16: ಕರ್ನಾಟಕ ಮಾತ್ರವಲ್ಲದೆ ಕೇರಳ, ಮುಂಬೈ, ಪುಣೆ, ನಾಸಿಕ್ ಸೇರಿದಂತೆ ದೇಶದ ವಿವಿಧ ರಾಜ್ಯಗಳು ಹಾಗೂ ವಿದೇಶಗಳಲ್ಲಿ ನೆಲೆಸಿರುವ ತುಳುವರು ಒಗ್ಗಟ್ಟಾಗಿ, ಸಂಘಟಿತರಾಗಿ ತುಳು ಭಾಷೆಗೆ ಅಧಿಕೃತ ಮಾನ್ಯತೆ ದೊರಕಬೇಕೆಂಬ ಆಶಯದೊಂದಿಗೆ ಹಲವು ವರ್ಷಗಳಿಂದ ನಿರಂತರವಾಗಿ ಹೋರಾಟ ನಡೆಸುತ್ತಿದ್ದು, ಸರ್ಕಾರದ ನಿರ್ಣಯಕ್ಕಾಗಿ ಕಾತರದಿಂದ ಎದುರು ನೋಡುತ್ತಿದ್ದಾರೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ಮಾಜಿ ಸದಸ್ಯ ಹಾಗೂ ತುಳುವೆರೆ ಚಾವಡಿಯ ಗೌರವಾಧ್ಯಕ್ಷ ಪುರುಷೋತ್ತಮ್ ಚೇಂಡ್ಲಾ ತಿಳಿಸಿದ್ದಾರೆ. ಕರ್ನಾಟಕದ ಕರಾವಳಿ ಪ್ರದೇಶ, ಮಲೆನಾಡು, ಮಡಿಕೇರಿ ಹಾಗೂ ಕಾಸರಗೋಡು ಭಾಗಗಳಲ್ಲಿ ತುಳು ಭಾಷಿಗರ ಸಂಖ್ಯೆ ಗಣನೀಯವಾಗಿದೆ. ತುಳು ಭಾಷೆಗೆ ಕರ್ನಾಟಕದ ಹೆಚ್ಚುವರಿ ಅಧಿಕೃತ ಆಡಳಿತ ಭಾಷೆ ಅಥವಾ ರಾಜ್ಯದ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡಬೇಕೆಂಬ ಬೇಡಿಕೆ ಹಲವು ವರ್ಷಗಳಿಂದ ವಿವಿಧ ಸಂಘಟನೆಗಳು, ತುಳುಪರ ಹೋರಾಟಗಾರರು ಹಾಗೂ ವಿಶ್ವದಾದ್ಯಂತ ನೆಲೆಸಿರುವ ತುಳುವರಿಂದ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದಿಂದ ಅನುಮೋದನೆಯ ಸುದಿನ ಯಾವಾಗ ಬರಲಿದೆ ಎಂಬ ನಿರೀಕ್ಷೆಯಲ್ಲಿ ತುಳುವರು ಇದ್ದಾರೆ. ದೇಶ-ವಿದೇಶಗಳಲ್ಲಿ ನೆಲೆಸಿರುವ ತುಳು…

Read More

ಉಡುಪಿ, ಸೆ.14: ನಾಗರಿಕ ವೇದಿಕೆ ನರ್ನಾಡು–ಮದಗ ಲೇಔಟ್, ಉಪ್ಪೂರು ಇದರ ವತಿಯಿಂದ ಆಯೋಜಿಸಲಾದ 4ನೇ ವರ್ಷದ ಸಾರ್ವಜನಿಕ ಗಣೇಶೋತ್ಸವವು ಸೆ.14ರಂದು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಿತು. ಗಣೇಶೋತ್ಸವದ ಅಂಗವಾಗಿ ಗಣೇಶ ವಿಗ್ರಹವನ್ನು ವಿಶಿಷ್ಟವಾಗಿ ಅಲಂಕರಿಸಿದ ಪಲ್ಲಕ್ಕಿಯಲ್ಲಿ ಭವ್ಯ ಮೆರವಣಿಗೆಯ ಮೂಲಕ ಕರೆತಂದು ಗಣೇಶ ಮಂಟಪದಲ್ಲಿ ಪ್ರತಿಷ್ಠಾಪಿಸಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಉತ್ಸವಕ್ಕೆ ಚಾಲನೆ ನೀಡಲಾಯಿತು. ನಾಗರಿಕ ವೇದಿಕೆಯ ಗೌರವಾಧ್ಯಕ್ಷರಾದ ಹರೀಶ್ ಅಮೀನ್ ಹಾಗೂ ಅವರ ಧರ್ಮಪತ್ನಿ ಶ್ರೀ ದೇವರ ಗಣಯಾಗ ಸೇವೆಯನ್ನು ನೆರವೇರಿಸಿದರು. ಬೆಳಿಗ್ಗೆ ಗಣೇಶೋತ್ಸವದ ವೇದಿಕೆಯಲ್ಲಿ ಸ್ಥಳೀಯರ ಭಜನಾ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ ಲೇಔಟ್‌ನ ವಿವಿಧ ಪ್ರತಿನಿಧಿಗಳ ಸಹಕಾರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಸಂಜೆ 4.30ಕ್ಕೆ ನಡೆದ ಧಾರ್ಮಿಕ ಸಭೆಯನ್ನು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಸಾದ್ ನೇತ್ರಾಲಯ, ಉಡುಪಿ ಇದರ ಡಾ. ಕೃಷ್ಣಪ್ರಸಾದ್, ನಾಗರಿಕ ವೇದಿಕೆ ನಡೆಸುತ್ತಿರುವ ಸಮಾಜಮುಖಿ ಹಾಗೂ ಜನಪರ ಕಾರ್ಯಗಳನ್ನು…

Read More

ಮಂಗಳೂರು, ಸೆ.14: ವಿಘ್ನಗಳನ್ನು ನಿವಾರಿಸಿ ಸುಖ, ಶಾಂತಿ ಹಾಗೂ ಸಮೃದ್ಧಿ ಕರುಣಿಸುವ ವಿಘ್ನವಿನಾಯಕ ಗಣೇಶನ ಆರಾಧನೆಯ ಗಣೇಶ ಚತುರ್ಥಿ ಹಬ್ಬದ ಸಂಭ್ರಮ ಮಂಗಳೂರು, ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕದಾದ್ಯಂತ ಮನೆ ಮಾಡಿದೆ. ಮನೆಗಳು, ದೇವಸ್ಥಾನಗಳು ಹಾಗೂ ಸಾರ್ವಜನಿಕ ಗಣೇಶೋತ್ಸವ ಮಂಟಪಗಳು ಹೂವು, ವಿದ್ಯುತ್ ದೀಪಾಲಂಕಾರ ಹಾಗೂ ವಿವಿಧ ಅಲಂಕಾರಗಳಿಂದ ಕಂಗೊಳಿಸುತ್ತಿದ್ದು, ಭಕ್ತರು ಭಕ್ತಿ–ಭಾವದಿಂದ ಗಣೇಶನನ್ನು ಪ್ರತಿಷ್ಠಾಪಿಸಿ ಪೂಜಾ ಕೈಂಕರ್ಯಗಳಲ್ಲಿ ತೊಡಗಿದ್ದಾರೆ. ಬೆಳಗ್ಗೆಯಿಂದಲೇ ಗಣೇಶ ಮೂರ್ತಿಗಳನ್ನು ಮೆರವಣಿಗೆಯ ಮೂಲಕ ಮಂಟಪಗಳಿಗೆ ಕರೆತಂದು ಪ್ರತಿಷ್ಠಾಪಿಸುವ ದೃಶ್ಯಗಳು ಹಲವೆಡೆ ಕಂಡುಬಂದವು. ಗಣೇಶನ ದರ್ಶನ ಪಡೆಯಲು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು, ವಿವಿಧ ಗಣೇಶೋತ್ಸವ ಸಮಿತಿಗಳ ವತಿಯಿಂದ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನೂ ಆಯೋಜಿಸಲಾಗಿದೆ. ತುಳುನಾಡಿನಲ್ಲಿ ಸಾವಿರಾರು ಭಕ್ತರ ಸಂಭ್ರಮ ಈ ಬಾರಿ ದಕ್ಷಿಣ ಕನ್ನಡ ಪೊಲೀಸ್ ವ್ಯಾಪ್ತಿಯಲ್ಲಿ 230 ಸಾರ್ವಜನಿಕ ಗಣೇಶೋತ್ಸವ ಪ್ರತಿಷ್ಠಾಪನೆಗಳಿಗೆ ಅನುಮತಿ ನೀಡಲಾಗಿದ್ದು, ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 174 ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ನಡೆಯಲಿದೆ. ಅದೇ ರೀತಿ ಉಡುಪಿ…

Read More