- ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಮಂಗಳೂರು, ಉಪ್ಪಿನಂಗಡಿ, ಸುರತ್ಕಲ್ ಠಾಣೆಗಳ ಹಲವು ಕ್ರಿಮಿನಲ್ ಪ್ರಕರಣಗಳ ಆರೋಪಿ ಕೊನೆಗೂ ಪೊಲೀಸರ ವಶಕ್ಕೆ
- ಕರ್ನಾಟಕ ರಾಜಕೀಯದಲ್ಲಿ ಅಸ್ಥಿರತೆ ಹೆಚ್ಚಳ: ಸಿದ್ದರಾಮಯ್ಯ ರಾಜಿನಾಮೆ ಕಾಂಗ್ರೆಸ್ ಒಳಜಗಳದ ಪರಾಕಾಷ್ಠೆಯೇ?
- ಮೇ 30ರಂದು ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ ಪ್ರಮುಖ ಕಾರ್ಯಕರ್ತರ ಮಹಾ ಸಭೆ ಪಕ್ಷ ಸಂಘಟನೆ ಬಲವರ್ಧನೆ,ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆ ಹಾಗೂ ಜನಪರ ಹೋರಾಟಗಳ ಕುರಿತು ಮಹತ್ವದ ಚರ್ಚೆ
- ಕುಂದಾಪುರ : ರಾಜ್ಯದ ಅಭಿವೃದ್ಧಿಗೆ ಜೆಡಿಎಸ್ ಕೊಡುಗೆ ಅಪಾರ- ಕೃಷ್ಣ ರೆಡ್ಡಿ
- ಅಖಿಲ ಭಾರತ ತುಳು ಒಕ್ಕೂಟ ನಿಯೋಗ : ತುಳು ಭಾಷೆಗೆ ಮಾನ್ಯತೆಗೆ ಮುಖ್ಯಮಂತ್ರಿ ಭೇಟಿ ಮಾಡಿ ಮನವಿ ಸಲ್ಲಿಸಲು ನಿರ್ಧಾರ – ಎ.ಸಿ. ಭಂಡಾರಿ
- ಕುಂದಾಪುರ: ಹೊಸೂರು ಸರ್ಕಾರಿ ಜಮೀನು ಒತ್ತುವರಿ ಹಗರಣ – ಭ್ರಷ್ಟ ಅಧಿಕಾರಿಗಳ ವಿರುದ್ಧ ಕುಂದಾಪುರ ಎಸಿ ಕಚೇರಿ ಮುಂದೆ ಒಲೆ ಹೂಡಿ ಅನ್ನ ಬೇಯಿಸುವ’ ವಿಭಿನ್ನ ಪ್ರತಿಭಟನೆ!
- ಚಂದ್ರನಗರದಲ್ಲಿ ಉಚಿತ ಸಮಗ್ರ ಆರೋಗ್ಯ ಶಿಬಿರಕ್ಕೆ ಭಾರೀ ಸ್ಪಂದನೆ ಆರೋಗ್ಯ ಜಾಗೃತಿ, ಉಚಿತ ತಪಾಸಣೆ ಮೂಲಕ ಜನಸೇವೆಯ ಹೊಸ ಹೆಜ್ಜೆ
- ಬ್ರಹ್ಮಾವರ ತಹಶೀಲ್ದಾರ್ ಕಚೇರಿಗೆ ಲೋಕಾಯುಕ್ತ ದಿಢೀರ್ ದಾಳಿ ನೂರಾರು ಕಡತಗಳ ಪರಿಶೀಲನೆ – ಮಹತ್ವದ ದಾಖಲೆ ವಶಕ್ಕೆ
Author: Tulunada Surya
ಮಂಗಳೂರು : ಹಲವು ಪ್ರಕರಣಗಳಲ್ಲಿ ಆರೋಪಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ “ಬಿ” ರೌಡಿ ಶೀಟರ್ನನ್ನು ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತ ಆರೋಪಿಯನ್ನು ಮೊಹಮ್ಮದ್ ಅಶ್ರಫ್ @ ಅಜ್ಜು @ ನಿಜಾಮ್ @ ಅಡ್ಡು @ ಸಮೀರ್, ಮಾವಿನಕಟ್ಟೆ, ಅಜಿಲಮೊಗರು, ಬೆಳ್ತಂಗಡಿ ನಿವಾಸಿ ಎಂದು ಗುರುತಿಸಲಾಗಿದೆ. ಈತ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ “ಬಿ” ರೌಡಿ ಶೀಟರ್ ಆಗಿದ್ದು, ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ ಎನ್ನಲಾಗಿದೆ. ಆರೋಪಿಯ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಅ.ಕ್ರ.ಸಂ 136/2018, 119/2024, 130/2024 ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿದ್ದವು. ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ಎಲ್ಪಿಸಿ ವಾರಂಟ್ ಜಾರಿಗೊಳಿಸಲಾಗಿತ್ತು. ಇದಲ್ಲದೆ, ಉಪ್ಪಿನಂಗಡಿ ಪೊಲೀಸ್ ಠಾಣೆಯ ಅ.ಕ್ರ.ಸಂ 232/2017 ಪ್ರಕರಣದಲ್ಲಿಯೂ ನ್ಯಾಯಾಲಯವು ವಾರಂಟ್ ಹೊರಡಿಸಿತ್ತು. ಸುರತ್ಕಲ್ ಪೊಲೀಸ್ ಠಾಣೆಯ ಅ.ಕ್ರ.ಸಂ 63/2025 ಪ್ರಕರಣದಲ್ಲಿಯೂ ಆರೋಪಿಯಾಗಿದ್ದ ಈತ ಹಲವು ದಿನಗಳಿಂದ ಪೊಲೀಸರಿಗೆ ಸಿಗದೆ ತಪ್ಪಿಸಿಕೊಳ್ಳುತ್ತಿದ್ದನು…
ಬೆಂಗಳೂರು, ಮೇ 28 : ಮುಖ್ಯಮಂತ್ರಿ Siddaramaiah ಅವರ ರಾಜೀನಾಮೆ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಕಾಂಗ್ರೆಸ್ ಪಕ್ಷದ ಒಳಜಗಳ ಮತ್ತು ಅಧಿಕಾರದ ಕದನ ಇದೀಗ ಬಹಿರಂಗಗೊಂಡಿದೆ ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ಜೋರಾಗಿವೆ. ಕಳೆದ ಕೆಲವು ತಿಂಗಳುಗಳಿಂದ ಕಾಂಗ್ರೆಸ್ ಒಳಗೆ ಸಿಎಂ ಸ್ಥಾನ ಬದಲಾವಣೆ ಕುರಿತ ಅಸಮಾಧಾನ, ಗುಂಪುಗಾರಿಕೆ ಹಾಗೂ ನಾಯಕತ್ವದ ಸಂಘರ್ಷ ನಡೆಯುತ್ತಿತ್ತು ಎಂಬ ಆರೋಪಗಳ ನಡುವೆ ಸಿದ್ದರಾಮಯ್ಯ ಅವರ ರಾಜೀನಾಮೆ ಬೆಳವಣಿಗೆ ಮಹತ್ವ ಪಡೆದುಕೊಂಡಿದೆ. ಅಧಿಕಾರಕ್ಕಾಗಿ ಕಾಂಗ್ರೆಸ್ನಲ್ಲಿ ತೆರೆಮರೆಯ ಕದನ — ರಾಜ್ಯ ರಾಜಕೀಯದಲ್ಲಿ ಅನಿಶ್ಚಿತತೆ ರಾಜ್ಯಪಾಲ Thawar Chand Gehlot ಅವರು ಬೆಂಗಳೂರಿನಲ್ಲಿ ಗೈರಾಗಿದ್ದ ಹಿನ್ನೆಲೆ, ಸಿದ್ದರಾಮಯ್ಯ ಅವರು ರಾಜಭವನಕ್ಕೆ ತೆರಳಿ ರಾಜ್ಯಪಾಲರ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಸಿದರು. ಆದರೆ ಈ ರಾಜೀನಾಮೆ ಸ್ವಯಂಪ್ರೇರಿತವೇ ಅಥವಾ ಪಕ್ಷದ ಒಳಒತ್ತಡದ ಪರಿಣಾಮವೇ ಎಂಬ ಪ್ರಶ್ನೆಗಳು ಇದೀಗ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿವೆ. ಕಾಂಗ್ರೆಸ್ ಸರ್ಕಾರದಲ್ಲಿ ಅಸಮಾಧಾನದ ಹೊಗೆ ರಾಜೀನಾಮೆ ಸಲ್ಲಿಸುವ ಸಂದರ್ಭದಲ್ಲಿ ಉಪಮುಖ್ಯಮಂತ್ರಿ D. K.…
ಮಂಗಳೂರು, ಮೇ 28 : ಜನತಾದಳ ಜಾತ್ಯತೀತ (JDS) ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ ಮಟ್ಟದ ಪ್ರಮುಖ ಕಾರ್ಯಕರ್ತರ ಮಹಾ ಸಭೆ ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಜಾಕೆ ಮಾಧವ ಗೌಡ ಅವರು ಅಧ್ಯಕ್ಷತೆಯಲ್ಲಿ 2026ರ ಮೇ 30ರಂದು ಬೆಳಿಗ್ಗೆ 10 ಗಂಟೆಗೆ ಮಂಗಳೂರಿನ ವುಡ್ ಲ್ಯಾಂಡ್ಸ್ ಹೋಟೆಲ್ನಲ್ಲಿ ನಡೆಯಲಿದೆ. ಸಭೆಗೆ ಪಕ್ಷದ ಮಾಜಿ ಜಿಲ್ಲಾಧ್ಯಕ್ಷರುಗಳಾದ ಶ್ರೀ ಎಂ.ಬಿ. ಸದಾಶಿವ ಹಾಗೂ ಶ್ರೀ ಮಹಮ್ಮದ್ ಕುಂಜ್ಞಿ ಅವರು ಗೌರವ ಉಪಸ್ಥಿತಿ ವಹಿಸಲಿದ್ದಾರೆ. ಜೊತೆಗೆ ರಾಜ್ಯ ಮುಖಂಡರು, ಜಿಲ್ಲಾ ನಾಯಕರು,ವಿವಿಧ ಘಟಕದ ಅದ್ಯಕ್ಷರುಗಳು, ವಿವಿಧ ತಾಲೂಕುಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಪ್ರಮುಖ ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಭೆಯ ಆರಂಭದಲ್ಲಿ ಪ್ರಾರ್ಥನೆ ಹಾಗೂ ಸ್ವಾಗತ ಭಾಷಣ ನಡೆಯಲಿದ್ದು, ಆಗಮಿಸಿದ ರಾಜ್ಯ ಹಾಗೂ ಜಿಲ್ಲಾ ಮಟ್ಟದ ನಾಯಕರು ಮತ್ತು ಕಾರ್ಯಕರ್ತರನ್ನು ಆತ್ಮೀಯವಾಗಿ ಸ್ವಾಗತಿಸಲಾಗುವುದು. ಬಳಿಕ ಸಭೆಯನ್ನು ಅಧಿಕೃತವಾಗಿ ಉದ್ಘಾಟಿಸಿ ಪಕ್ಷದ ಮುಂದಿನ ಸಂಘಟನೆ ಚಟುವಟಿಕೆಗಳು ಹಾಗೂ ರಾಜಕೀಯ ಕಾರ್ಯಯೋಜನೆಗಳ ಕುರಿತು ಸಮಗ್ರ ಚರ್ಚೆ…
ಕುಂದಾಪುರ :ಜನತಾದಳ (ಜಾತ್ಯತೀತ) ಪಕ್ಷವು ರಾಜ್ಯದ ಅಭಿವೃದ್ಧಿ, ರೈತರ ಪರವಾದ ಯೋಜನೆಗಳು ಹಾಗೂ ಹಿಂದುಳಿದ ವರ್ಗಗಳ ಏಳಿಗೆಗಾಗಿ ಕಳೆದ 25 ವರ್ಷಗಳಿಂದ ಮಹತ್ವದ ಕೊಡುಗೆ ನೀಡುತ್ತಾ ಬಂದಿದೆ ಎಂದು ವಿಧಾನಸಭೆಯ ಮಾಜಿ ಸಭಾಪತಿ ಹಾಗೂ ಹಿರಿಯ ರಾಜಕೀಯ ನಾಯಕ ಕೃಷ್ಣ ರೆಡ್ಡಿ ಅಭಿಪ್ರಾಯಪಟ್ಟರು. ಕುಂದಾಪುರದ ನೆಹರೂ ಮೈದಾನದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಸಮಿತಿ ವತಿಯಿಂದ ಆಯೋಜಿಸಲಾದ ಜೆಡಿಎಸ್ ರಜತ ಮಹೋತ್ಸವ ಸಮಾರಂಭದಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜೆಡಿಎಸ್ ಪಕ್ಷವು ಅಧಿಕಾರದಲ್ಲಿದ್ದ ಅವಧಿಯಲ್ಲಿ ರಾಜ್ಯದಾದ್ಯಂತ ಜನಪರ ಯೋಜನೆಗಳನ್ನು ಜಾರಿಗೆ ತಂದು ಗ್ರಾಮೀಣ ಭಾಗದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದೆ. ರೈತರು, ಕಾರ್ಮಿಕರು, ಮೀನುಗಾರರು ಹಾಗೂ ಬಡವರ ಪರವಾಗಿ ಹಲವಾರು ಕಲ್ಯಾಣಕಾರಿ ಕಾರ್ಯಕ್ರಮಗಳನ್ನು ಜಾರಿಗೆ ತಂದಿರುವುದು ಪಕ್ಷದ ದೊಡ್ಡ ಸಾಧನೆಯಾಗಿದೆ ಎಂದು ಅವರು ಹೇಳಿದರು. ಮುಂದಿನ ದಿನಗಳಲ್ಲಿ ಜೆಡಿಎಸ್ ರಾಜ್ಯ ರಾಜಕೀಯದಲ್ಲಿ ಇನ್ನಷ್ಟು ಬಲಿಷ್ಠವಾಗಿ ಹೊರಹೊಮ್ಮಲಿದ್ದು, 2028ರ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದು ಕೃಷ್ಣ ರೆಡ್ಡಿ ಹೇಳಿದರು. ರಾಜ್ಯದ…
ಮಂಗಳೂರು, ಮೇ 27 : ದಕ್ಷಣ ಭಾರತದ ಪ್ರಾಚೀನ ಹೆಮ್ಮೆಯಾದ ತುಳು ಭಾಷೆಗೆ ಮಾನ್ಯತೆ ದೊರಕಿಸುವ ನಿಟ್ಟಿನಲ್ಲಿ ಅಖಿಲ ಭಾರತ ತುಳು ಒಕ್ಕೂಟ ಮಹತ್ವದ ಹೆಜ್ಜೆಯನ್ನು ಇಟ್ಟಿದ್ದು, ಶೀಘ್ರದಲ್ಲೇ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಸಮಗ್ರ ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ಒಕ್ಕೂಟದ ಅಧ್ಯಕ್ಷ ಎ.ಸಿ. ಭಂಡಾರಿ ತಿಳಿಸಿದ್ದಾರೆ. ಮಂಗಳೂರಿನ ಕಾವೂರಿನ ಗಾಂಧಿನಗರದಲ್ಲಿರುವ ಮುಗ್ರೋಡಿ ಎನ್ಕ್ಲೇವ್ ಕಚೇರಿ ಸಭಾಂಗಣದಲ್ಲಿ ನಡೆದ ಅಖಿಲ ಭಾರತ ತುಳು ಒಕ್ಕೂಟದ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತುಳು ಭಾಷೆ, ತುಳು ಲಿಪಿ, ಸಂಸ್ಕೃತಿ ಹಾಗೂ ಪರಂಪರೆಯ ಉಳಿವು ಮತ್ತು ಅಭಿವೃದ್ಧಿಗೆ ಸಂಬಂಧಿಸಿದಂತೆ ಈಗಾಗಲೇ ಸರ್ಕಾರದ ವಿವಿಧ ಇಲಾಖೆಗೆ ಅಗತ್ಯ ದಾಖಲೆಗಳು ಹಾಗೂ ಪೂರಕ ಮಾಹಿತಿಗಳನ್ನು ಸಲ್ಲಿಸಲಾಗಿದೆ. ಆದಾಗ್ಯೂ ತುಳು ಭಾಷೆಗೆ ಮಾನ್ಯತೆ ನೀಡುವ ಪ್ರಕ್ರಿಯೆಯಲ್ಲಿ ಇನ್ನೂ ಸ್ಪಷ್ಟ ಪ್ರಗತಿ ಕಂಡುಬಂದಿಲ್ಲ ಎಂಬುದಾಗಿ ವಿಷಾದ ವ್ಯಕ್ತಪಡಿಸಿದರು. ತುಳು ಭಾಷೆಗೆ ಅಧಿಕ್ರತ ಭಾಷಾ ಸ್ಥಾನಮಾನ ನೀಡಬೇಕೆಂಬ ಬೇಡಿಕೆ ಹಲವು ದಶಕಗಳಿಂದ ಮುಂದುವರಿದಿದ್ದು, ಈ ಕುರಿತು ದೇಶದ…
ಕುಂದಾಪುರ: ತಾಲೂಕಿನ ವಂತ್ಸೆ ಹೋಬಳಿ ಹೊಸೂರು ಗ್ರಾಮದ ಸರ್ವೆ ನಂಬರ್ 141ರ ಕೋಟ್ಯಂತರ ರೂಪಾಯಿ ಮೌಲ್ಯದ ಸರ್ಕಾರಿ ಜಮೀನನ್ನು ಅಕ್ರಮವಾಗಿ ಕಬಳಿಸಲು ಕಂದಾಯ ಇಲಾಖೆಯ ಅಧಿಕಾರಿಗಳೇ ಶಾಮೀಲಾಗಿದ್ದಾರೆ ಎಂದು ಆರೋಪಿಸಿ, ದಲಿತ ಪರ ಹೋರಾಟಗಾರ್ತಿ ನಾಗರತ್ನ ನೇತೃತ್ವದಲ್ಲಿ ಕುಂದಾಪುರ ಉಪ ವಿಭಾಗ ಸಹಾಯಕ ಕಮಿಷನರ್ (AC) ಕಚೇರಿ ಮುಂದೆ ಇಂದಿನಿಂದ “ಒಲೆ ಹೂಡಿ – ಅನ್ನ ಬೇಯಿಸುವ” ವಿಭಿನ್ನ ಹಾಗೂ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಗೊಂಡಿದೆ. ರಾಜ್ಯ ಕಂದಾಯ ಸಚಿವರಿಗೆ ಉಪ ವಿಭಾಗಾಧಿಕಾರಿಗಳ ಮೂಲಕ ಹಕ್ಕೊತ್ತಾಯ ಪತ್ರ ಸಲ್ಲಿಸಿರುವ ಪ್ರತಿಭಟನಾಕಾರರು, ಸರ್ಕಾರಿ ಜಮೀನು ಒತ್ತುವರಿಗೆ ನೇರ ಸಹಕಾರ ನೀಡಿದ ವಂಡ್ರೆ ಹೋಬಳಿ ಕಂದಾಯ ನಿರೀಕ್ಷಕ (FDA) ರಾಘವೇಂದ್ರ ಮತ್ತು ಕರ್ತವ್ಯ ಲೋಪ ಎಸಗಿದ ಕುಂದಾಪುರ ತಹಶೀಲ್ದಾರ್ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಹಾಗೂ ಅಕ್ರಮ ಕಟ್ಟಡಗಳನ್ನು ತಕ್ಷಣ ನೆಲಸಮಗೊಳಿಸುವಂತೆ ಆಗ್ರಹಿಸಿದ್ದಾರೆ. ತಹಸೀಲ್ದಾರ್ ರವರು ಸಹಾಯಕ ಕಮಿಷನರ್ ಪರವಾಗಿ ಮನವಿ ಸ್ವೀಕರಿಸಿ, ಕಾನೂನು ಪ್ರಕಾರ ಕ್ರಮ ಕೈಗೊಳ್ಳಲು ಸೂಚಿಸುತ್ತೇವೆ ಎಂದು ಭರವಸೆ…
ಕಾಪು, ಮೇ 27: ಸಾರ್ವಜನಿಕರ ಆರೋಗ್ಯ ಕಾಳಜಿಯನ್ನು ಕೇಂದ್ರಬಿಂದುವಾಗಿಸಿಕೊಂಡು ಚಂದ್ರನಗರದ ಬಟರ್ ಫ್ಲೈ ಹಾಲ್ ಸಭಾಂಗಣದಲ್ಲಿ ಆಯೋಜಿಸಲಾದ ಉಚಿತ ಸಮಗ್ರ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿಯಾಗಿ ನಡೆಯಿತು. ಆರೋಗ್ಯ ತಪಾಸಣೆ ಜೊತೆಗೆ ಜನರಲ್ಲಿ ಆರೋಗ್ಯ ಜಾಗೃತಿ ಮೂಡಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾದ ಈ ಶಿಬಿರಕ್ಕೆ ಸ್ಥಳೀಯರು ಉತ್ತಮ ಸ್ಪಂದನೆ ವ್ಯಕ್ತಪಡಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವಿಕೆ ಘಟಕ ಉಡುಪಿ, ಶಿರ್ವ ಸಮುದಾಯ ಆರೋಗ್ಯ ಕೇಂದ್ರ, ಬಟರ್ ಫ್ಲೈ ಗೆಸ್ಟ್ ಹೌಸ್ & ಪಾರ್ಟಿ ಹಾಲ್ ಚಂದ್ರನಗರ, ಕುತ್ಯಾರು/ಕಳತ್ತೂರು ಗ್ರಾಮ ಪಂಚಾಯತ್, ಅಲಯನ್ಸ್ ಕ್ಲಬ್ ಉಡುಪಿ ರಾಯಲ್ ಹಾಗೂ ರೋಟರಿ ಕ್ಲಬ್ ಶಿರ್ವ ಇವರ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮಾಜ ಸೇವಕರೂ ಆಗಿರುವ ಬಟರ್ ಫ್ಲೈ ಪಾರ್ಟಿ ಹಾಲ್ ಮಾಲಕರಾದ ಡಾ. ಫಾರೂಕ್ ಚಂದ್ರನಗರ ವಹಿಸಿದ್ದರು. ಬಳಿಕ ಮಾತನಾಡಿದ ಅವರು, “ಆರೋಗ್ಯವೇ ನಿಜವಾದ ಸಂಪತ್ತು. ಗ್ರಾಮೀಣ ಭಾಗದ ಜನರಿಗೆ…
ಬ್ರಹ್ಮಾವರ, ಮೇ 26: ಸಾರ್ವಜನಿಕರಿಂದ ನಿರಂತರವಾಗಿ ಕೇಳಿಬಂದಿದ್ದ ಭ್ರಷ್ಟಾಚಾರ, ಕಡತಗಳ ವಿಳಂಬ ಹಾಗೂ ಆಡಳಿತಾತ್ಮಕ ಲೋಪಗಳ ಕುರಿತು ಬಂದ ಗಂಭೀರ ದೂರುಗಳ ಹಿನ್ನೆಲೆ, ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಬ್ರಹ್ಮಾವರ ತಾಲೂಕು ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯ ಮೇಲೆ ಮಂಗಳವಾರ ದಿಢೀರ್ ದಾಳಿ ನಡೆಸಿದರು. ಬೆಂಗಳೂರಿನ ಲೋಕಾಯುಕ್ತ ಮುಖ್ಯ ಕಚೇರಿಯಿಂದ ವಿಶೇಷ ಶೋಧನಾ ವಾರಂಟ್ ಪಡೆದುಕೊಂಡು ನಡೆಸಲಾದ ಈ ಕಾರ್ಯಾಚರಣೆ ಮಂಗಳೂರು ಲೋಕಾಯುಕ್ತ ಎಸ್ಪಿ ದಿನೇಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಜರುಗಿತು. ಉಡುಪಿ ಹಾಗೂ ಮಂಗಳೂರು ಲೋಕಾಯುಕ್ತ ಕಚೇರಿಗಳ ಜಂಟಿ ತಂಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದು, ಉಡುಪಿ ಲೋಕಾಯುಕ್ತ ಡಿವೈಎಸ್ಪಿ ಹಾಲಮೂರ್ತಿ ರಾವ್, ಪೊಲೀಸ್ ಇನ್ಸ್ಪೆಕ್ಟರ್ಗಳಾದ ಮಂಜುನಾಥ್, ರಾಜೇಂದ್ರ ನಾಯ್ಕ್ ಹಾಗೂ ಮಂಗಳೂರು ಲೋಕಾಯುಕ್ತ ಇನ್ಸ್ಪೆಕ್ಟರ್ ಭಾರತಿ ತಂಡದ ನೇತೃತ್ವ ವಹಿಸಿದ್ದರು. ತಹಶೀಲ್ದಾರ್ ಕಚೇರಿಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿದ ಅಧಿಕಾರಿಗಳು, ಸಾರ್ವಜನಿಕ ಅರ್ಜಿಗಳು, ಜಮೀನು ಸಂಬಂಧಿತ ದಾಖಲೆಗಳು ಹಾಗೂ ದೀರ್ಘಕಾಲದಿಂದ ಬಾಕಿ ಉಳಿದಿದ್ದ ನೂರಾರು ಕಡತಗಳನ್ನು ತೀವ್ರ ಪರಿಶೀಲನೆಗೆ ಒಳಪಡಿಸಿದರು. ಕೆಲವು ಕಡತಗಳು ನಿಯಮಬಾಹಿರವಾಗಿ…
ಮಂಗಳೂರು, ಮೇ 25: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ದಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ನಿಯೋಗವು ಇಂದು ಸಂಸ್ಥೆಯ ಅಧ್ಯಕ್ಷರಾದ ಅಲ್ ಹಾಜ್ ಕೆ.ಎಸ್. ಮೊಹಮ್ಮದ್ ಮಸೂದ್ ಅವರ ನಿರ್ದೇಶನದಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿ ಮಾಡಿ, ಮುಂಬರುವ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಧಾರ್ಮಿಕ ಆಚರಣೆಗಳು ಶಾಂತಿಯುತ ಹಾಗೂ ಸುವ್ಯವಸ್ಥಿತವಾಗಿ ನಡೆಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿತು. ನಿಯೋಗವು ಬಕ್ರೀದ್ ಹಬ್ಬದ ದಿನ ಹಾಗೂ ನಂತರದ ಮೂರು ದಿನಗಳ ಕಾಲ ನಡೆಯುವ ಧಾರ್ಮಿಕ ವಿಧಿ ವಿಧಾನಗಳು, ಪ್ರಾಣಿ ಬಲಿ ಅರ್ಪಣೆ ಸೇರಿದಂತೆ ಇಸ್ಲಾಮಿಕ್ ಸಂಪ್ರದಾಯಗಳನ್ನು ಕಾನೂನುಬದ್ಧವಾಗಿ ಹಾಗೂ ಶಾಂತಿಯುತವಾಗಿ ನೆರವೇರಿಸಲು ಸೂಕ್ತ ಭದ್ರತೆ ಮತ್ತು ಸಹಕಾರ ಒದಗಿಸಬೇಕೆಂದು ಅಧಿಕಾರಿಗಳ ಗಮನಕ್ಕೆ ತಂದಿತು. ಈ ಸಂದರ್ಭ ಮಾತನಾಡಿದ ಕಮಿಟಿ ಪ್ರತಿನಿಧಿಗಳು, ಜಿಲ್ಲೆಯಲ್ಲಿ ಸೌಹಾರ್ದಯುತ ವಾತಾವರಣ ನಿರ್ಮಾಣವಾಗಿದ್ದು, ಎಲ್ಲ ಸಮುದಾಯಗಳ ಸಹಕಾರದೊಂದಿಗೆ ಹಬ್ಬವನ್ನು ಶಾಂತಿಯುತವಾಗಿ ಆಚರಿಸುವ ಉದ್ದೇಶ ಹೊಂದಿದ್ದೇವೆ ಎಂದು ತಿಳಿಸಿದರು. ಯಾವುದೇ ರೀತಿಯ…
ಮಂಗಳೂರು, ಮೇ 25: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ (ನಿ.) ವತಿಯಿಂದ ಸ್ಥಳೀಯ ರೈತರಿಗೆ ಉತ್ತೇಜನ ನೀಡುವ ಹಾಗೂ ಗ್ರಾಹಕರಿಗೆ ತಾಜಾ ಮತ್ತು ಗುಣಮಟ್ಟದ ಹಣ್ಣುಗಳನ್ನು ಒದಗಿಸುವ ಉದ್ದೇಶದಿಂದ “ಹಲಸು–ಮಾವು ಮೇಳ”ವನ್ನು ಆಯೋಜಿಸಲಾಗಿದೆ. ಈ ವಿಶೇಷ ಮೇಳವು ಜೂನ್ 5, 6 ಮತ್ತು 7ರಂದು ಕೆ.ವಿ.ಎಸ್.ಎಸ್. ಕಾನ್ಫರೆನ್ಸ್ ಹಾಲ್, ಕೋಟೆಕಾರು ಬೀರಿ ಜಂಕ್ಷನ್ನಲ್ಲಿ ನಡೆಯಲಿದೆ. ಪ್ರತಿದಿನ ಬೆಳಗ್ಗೆ 9 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಸಾರ್ವಜನಿಕರಿಗೆ ಮೇಳ ಮುಕ್ತವಾಗಿರುತ್ತದೆ. ಮೇಳದಲ್ಲಿ ವಿವಿಧ ತಳಿಗಳ ರುಚಿಕರ ಮಾವು ಹಾಗೂ ಹಲಸು ಹಣ್ಣುಗಳನ್ನು ಪ್ರದರ್ಶನ ಮತ್ತು ಮಾರಾಟಕ್ಕೆ ಇಡಲಾಗುತ್ತಿದ್ದು, ಸ್ಥಳೀಯ ರೈತರಿಗೆ ತಮ್ಮ ಉತ್ಪನ್ನಗಳನ್ನು ನೇರವಾಗಿ ಗ್ರಾಹಕರಿಗೆ ತಲುಪಿಸುವ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ, ಹಣ್ಣು ಪ್ರಿಯರಿಗೆ ಉತ್ತಮ ಗುಣಮಟ್ಟದ ಹಣ್ಣುಗಳನ್ನು ಒಂದೇ ವೇದಿಕೆಯಲ್ಲಿ ಪಡೆಯುವ ಅವಕಾಶವೂ ದೊರೆಯಲಿದೆ. ಈ ಕುರಿತು ಪ್ರಕಟಣೆ ನೀಡಿದ ಬ್ಯಾಂಕ್ ಅಧ್ಯಕ್ಷರಾದ ಕೃಷ್ಣ ಶೆಟ್ಟಿ ಅವರು, “ಸ್ಥಳೀಯ ರೈತರಿಗೆ ಪ್ರೋತ್ಸಾಹ ನೀಡುವ ಜೊತೆಗೆ ಸಾರ್ವಜನಿಕರಿಗೆ ತಾಜಾ ಹಣ್ಣುಗಳನ್ನು ಪರಿಚಯಿಸುವ…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
