Author: Tulunada Surya

ಮಂಗಳೂರು, ಜೂನ್ 9: ನಗರದ ಖ್ಯಾತ ಉದ್ಯಮಿಯೊಬ್ಬರನ್ನು ಹನಿಟ್ರ್ಯಾಪ್‌ಗೆ ಒಳಪಡಿಸಿ ಖಾಸಗಿ ಫೋಟೋ ಹಾಗೂ ವಿಡಿಯೊಗಳನ್ನು ಬಳಸಿಕೊಂಡು ಬ್ಲ್ಯಾಕ್‌ಮೇಲ್ ನಡೆಸಿ ಕೋಟ್ಯಂತರ ರೂಪಾಯಿ ಹಣ ವಸೂಲಿ ಮಾಡಿದ ಆರೋಪದ ಮೇರೆಗೆ ಇಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ. ಉದ್ಯಮಿ ನೀಡಿದ ದೂರಿನ ಪ್ರಕಾರ, 2024ರಲ್ಲಿ ಜಿತೇಶ್ ಎಂಬಾತ ಉದ್ಯಮಿಯ ಖಾಸಗಿ ಫೋಟೋ ಮತ್ತು ವಿಡಿಯೊಗಳನ್ನು ತನ್ನ ವಶದಲ್ಲಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಲು ಆರಂಭಿಸಿದ್ದಾನೆ ಎನ್ನಲಾಗಿದೆ. ಈ ದೃಶ್ಯಗಳನ್ನು ಉದ್ಯಮಿಯ ಪತ್ನಿಗೆ ತೋರಿಸುವುದಾಗಿ ಬೆದರಿಕೆ ಹಾಕಿ ಆರಂಭದಲ್ಲಿ ₹35 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ವಿಚಾರವನ್ನು ಉದ್ಯಮಿ ತನ್ನ ಪರಿಚಯಸ್ಥನಾದ ನಿಝಾಮ್‌ಗೆ ತಿಳಿಸಿದ ಬಳಿಕವೂ ಸಮಸ್ಯೆ ಬಗೆಹರಿಯದೇ, ನಿಝಾಮ್ ಕೂಡ ಜಿತೇಶ್ ಜೊತೆ ಸೇರಿ ಮತ್ತಷ್ಟು ಹಣಕ್ಕಾಗಿ ಒತ್ತಡ ಹೇರಿದ್ದಾನೆ ಎಂದು ಆರೋಪಿಸಲಾಗಿದೆ. ಬಳಿಕ ಜಿತೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಸುಳ್ಳು ಕಥೆಯನ್ನು ಸೃಷ್ಟಿಸಿ, ಆತ ಬರೆದಿದ್ದಾನೆ ಎನ್ನಲಾದ ಡೆತ್ ನೋಟ್‌ನಲ್ಲಿ ಉದ್ಯಮಿಯ ಹೆಸರನ್ನು ಉಲ್ಲೇಖಿಸಲಾಗಿದೆ ಎಂದು…

Read More

ಬೆಂಗಳೂರು, ಜೂನ್ 9: ರಾಜ್ಯದ ಯುವಜನರ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ಅಪ್ರಾಪ್ತ ವಯಸ್ಕರಿಗೆ ಮದ್ಯ ಲಭ್ಯವಾಗುವುದನ್ನು ತಡೆಯಲು ಕರ್ನಾಟಕ ಸರ್ಕಾರ ಮಹತ್ವದ ಹಾಗೂ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಬೆಂಗಳೂರಿನಲ್ಲಿ ಅಪ್ರಾಪ್ತ ವಯಸ್ಕರು ಸುಲಭವಾಗಿ ಮದ್ಯ ಪಡೆಯುತ್ತಿರುವ ಬಗ್ಗೆ ವ್ಯಕ್ತವಾಗುತ್ತಿರುವ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ ಗೃಹ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ನಗರದಲ್ಲಿನ ಎಲ್ಲಾ ಪಬ್‌ಗಳು, ಬ್ರೂವರೀಸ್‌, ಬಾರ್‌ಗಳು, ಕ್ಲಬ್‌ಗಳು, ಲಾಂಜ್‌ಗಳು ಹಾಗೂ ಮದ್ಯ ಪೂರೈಸುವ ರೆಸ್ಟೋರೆಂಟ್‌ಗಳಲ್ಲಿ ಕಡ್ಡಾಯ ವಯೋಮಿತಿ ಪರಿಶೀಲನೆ ಜಾರಿಗೊಳಿಸುವಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಇತ್ತೀಚೆಗೆ ನಡೆಸಲಾದ ಮಹತ್ವದ ಅಧ್ಯಯನವೊಂದರಲ್ಲಿ ಬೆಂಗಳೂರಿನ 4,000ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಸಮೀಕ್ಷೆಗೆ ಒಳಪಡಿಸಲಾಗಿದ್ದು, ಸುಮಾರು ಮೂರರಲ್ಲಿ ಒಬ್ಬ ಯುವಕ ಅಥವಾ ಯುವತಿ ಮದ್ಯ ಅಥವಾ ತಂಬಾಕು ಬಳಕೆಯಿಂದ ಆರೋಗ್ಯ ಸಮಸ್ಯೆಗಳ ಅಪಾಯದಲ್ಲಿರುವುದು ಬೆಳಕಿಗೆ ಬಂದಿದೆ. ಇನ್ನೂ ಆತಂಕಕಾರಿ ಸಂಗತಿಯೆಂದರೆ, ಕೆಲವರು 17 ವರ್ಷ ತುಂಬುವ ಮುನ್ನವೇ ಮದ್ಯ ಸೇವನೆ ಆರಂಭಿಸಿರುವುದು ಅಧ್ಯಯನದಲ್ಲಿ ಬಹಿರಂಗಗೊಂಡಿದೆ. ಈ ಅಂಶಗಳು ಸರ್ಕಾರದ ಗಮನ ಸೆಳೆದಿದ್ದು,…

Read More

ಮಿಂಡಾನಾವೊ (ಫಿಲಿಪ್ಪೀನ್ಸ್): ಮಿಂಡಾನಾವೊ ಪ್ರಾಂತ್ಯದಲ್ಲಿ ಸಂಭವಿಸಿದ ಪ್ರಬಲ ಭೂಕಂಪವು ಶಾಲೆಗಳ ಪುನರಾರಂಭದ ಮೊದಲ ದಿನವೇ ಸಂಭವಿಸಿದ್ದು, ಸಾವಿರಾರು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಲ್ಲಿ ತೀವ್ರ ಆತಂಕ ಹಾಗೂ ಭೀತಿಯನ್ನು ಉಂಟುಮಾಡಿದೆ. ಸುದೀರ್ಘ ರಜೆಯ ಬಳಿಕ ಮಕ್ಕಳು ಹೊಸ ಉತ್ಸಾಹದೊಂದಿಗೆ ಶಾಲೆಗೆ ಆಗಮಿಸಿದ್ದ ಸಂದರ್ಭದಲ್ಲಿ ಈ ಪ್ರಕೃತಿ ವಿಕೋಪ ಸಂಭವಿಸಿರುವುದು ದುರಂತದ ತೀವ್ರತೆಯನ್ನು ಮತ್ತಷ್ಟು ಹೆಚ್ಚಿಸಿದೆ. ಸೋಮವಾರ ಮುಂಜಾನೆ ವಿವಿಧ ಶಾಲೆಗಳಲ್ಲಿ ಧ್ವಜಾರೋಹಣ ಮತ್ತು ಪ್ರಾರ್ಥನಾ ಸಭೆಗಳು ನಡೆಯುತ್ತಿದ್ದ ವೇಳೆ ಏಕಾಏಕಿ ಭೂಮಿ ಭಾರೀ ಪ್ರಮಾಣದಲ್ಲಿ ಕಂಪಿಸಲು ಆರಂಭಿಸಿತು. ಮಹಾಯಾಹಾಯ್ ಪ್ರಾಥಮಿಕ ಶಾಲೆ ಸೇರಿದಂತೆ ಹಲವು ಶಾಲೆಗಳಲ್ಲಿ ನೂರಾರು ವಿದ್ಯಾರ್ಥಿಗಳು ಸಾಲಾಗಿ ನಿಂತಿದ್ದಾಗಲೇ ಭೂಕಂಪ ಸಂಭವಿಸಿದ್ದು, ಪರಿಸ್ಥಿತಿ ಕೆಲ ಕ್ಷಣಗಳಲ್ಲೇ ಭಯಾನಕ ರೂಪ ಪಡೆದುಕೊಂಡಿತು. ಭೂಕಂಪದ ತೀವ್ರತೆಗೆ ಬೆಚ್ಚಿಬಿದ್ದ ಮಕ್ಕಳು ಕಿರುಚಾಡುತ್ತಾ, ಅಳುತ್ತಾ ಪ್ರಾಣಭಯದಿಂದ ಎಲ್ಲೆಡೆ ಓಡಲಾರಂಭಿಸಿದರು. ಅನೇಕ ಶಾಲೆಗಳಲ್ಲಿ ಉಂಟಾದ ಗೊಂದಲ ಮತ್ತು ಆತಂಕದಿಂದ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಜ್ಞೆ ತಪ್ಪಿ ಬಿದ್ದಿರುವುದಾಗಿ ವರದಿಯಾಗಿದೆ. ಕೆಲವು ಹಳೆಯ ಶಾಲಾ ಕಟ್ಟಡಗಳ ಮೇಲ್ಛಾವಣಿಗಳ ಶೆಡ್‌ಗಳು…

Read More

ಉಡುಪಿ, ಜೂನ್ 7: ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಜನತಾದಳ (ಜಾತ್ಯತೀತ) ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಕ್ಷೇತ್ರ ಮಟ್ಟದ ಪ್ರಮುಖರ ಸಭೆಯು ಭಾನುವಾರ ಸಂಜೆ ಕ್ಷೇತ್ರಾಧ್ಯಕ್ಷರಾದ ಜಯ ಪೂಜಾರಿ ಲಕ್ಷಿನಗರ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಪಕ್ಷದ ಸಂಘಟನೆ, ಸದಸ್ಯತ್ವ ವಿಸ್ತರಣೆ ಹಾಗೂ ಮುಂಬರುವ ರಾಜಕೀಯ ಸವಾಲುಗಳನ್ನು ಎದುರಿಸುವ ಕುರಿತು ಸಭೆಯಲ್ಲಿ ವ್ಯಾಪಕ ಚರ್ಚೆ ನಡೆಯಿತು. ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಜೆಡಿಎಸ್ ಉಡುಪಿ ಜಿಲ್ಲಾ ಅಧ್ಯಕ್ಷರಾದ ಯೋಗೀಶ್ ವಿ. ಶೆಟ್ಟಿ ಬಾಲಾಜಿ ಅವರು, ಪಕ್ಷದ ಇತಿಹಾಸ, ತತ್ವಸಿದ್ಧಾಂತಗಳು ಹಾಗೂ ರಾಷ್ಟ್ರ ಮತ್ತು ರಾಜ್ಯ ರಾಜಕಾರಣದಲ್ಲಿ ಜೆಡಿಎಸ್ ಪಕ್ಷದ ಪಾತ್ರದ ಬಗ್ಗೆ ವಿವರಿಸಿದರು. ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಜನಪರ ಆಡಳಿತ, ರೈತಪರ ಯೋಜನೆಗಳು ಮತ್ತು ಅಭಿವೃದ್ಧಿ ಕಾರ್ಯಗಳನ್ನು ಸ್ಮರಿಸಿದ ಅವರು, ಪಕ್ಷದ ಕಾರ್ಯಕರ್ತರು ಈ ಸಾಧನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಮೂಲಕ ಪಕ್ಷವನ್ನು ಮತ್ತಷ್ಟು ಬಲಪಡಿಸಬೇಕೆಂದು ಕರೆ ನೀಡಿದರು. ಸಭೆಯಲ್ಲಿ ಜಿಲ್ಲಾ ಮಾಜಿ ಅಧ್ಯಕ್ಷರಾದ…

Read More

ಬೆಂಗಳೂರು, ಜೂನ್ 6: ಮಾಜಿ ಶಾಸಕರು ಹಾಗೂ ಗ್ರೇಟರ್ ಬೆಂಗಳೂರು ಪಕ್ಷದ ರಾಜ್ಯಾಧ್ಯಕ್ಷರಾದ ಎಚ್.ಎಂ. ರಮೇಶ್ ಗೌಡ ಅವರ ಅಧ್ಯಕ್ಷತೆಯಲ್ಲಿ ಇಂದು ಜೆ.ಪಿ. ಭವನದಲ್ಲಿ ಗ್ರೇಟರ್ ಬೆಂಗಳೂರು ಪಕ್ಷದ ಮುಸ್ಲಿಂ ಅಲ್ಪಸಂಖ್ಯಾತರ ವಿಭಾಗದ ಪ್ರಮುಖ ಸಭೆ ನಡೆಯಿತು. ಮುಂಬರುವ ಜಿಬಿಎ (ಗ್ರೇಟರ್ ಬೆಂಗಳೂರು ಅಥಾರಿಟಿ) ಚುನಾವಣೆಯ ಪೂರ್ವ ಸಿದ್ಧತೆ, ಪಕ್ಷದ ಸಂಘಟನೆ ಬಲವರ್ಧನೆ, BLA-1 ಮತ್ತು BLA-2 ನೇಮಕಾತಿ, ಅವರ ಕರ್ತವ್ಯಗಳು ಹಾಗೂ ಜವಾಬ್ದಾರಿಗಳ ಕುರಿತು ಸಭೆಯಲ್ಲಿ ಸಮಗ್ರ ಚರ್ಚೆ ನಡೆಯಿತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಎಚ್.ಎಂ. ರಮೇಶ್ ಗೌಡ ಅವರು, ಚುನಾವಣಾ ಯಶಸ್ಸಿಗೆ ಸಂಘಟನೆಯ ಬಲವರ್ಧನೆ ಹಾಗೂ ಮತದಾರರೊಂದಿಗೆ ನಿರಂತರ ಸಂಪರ್ಕ ಅತ್ಯಂತ ಅಗತ್ಯವಾಗಿದೆ ಎಂದು ಹೇಳಿದರು. ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲಿಯೂ ಪಕ್ಷದ ಸಂಘಟನೆಯನ್ನು ಇನ್ನಷ್ಟು ಗಟ್ಟಿಗೊಳಿಸುವ ಜೊತೆಗೆ, ಮತದಾರರ ಪಟ್ಟಿಯಲ್ಲಿನ ಲೋಪದೋಷಗಳನ್ನು ಸರಿಪಡಿಸುವ ಕಾರ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಕರೆ ನೀಡಿದರು. ಇದೇ ಸಂದರ್ಭದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision -…

Read More

ಮಂಗಳೂರು, ಜೂನ್ 6: ಪ್ರತಿಷ್ಠಿತ ಪಿ.ಪಿ. ಗೋಮತಿ ಸ್ಮಾರಕ ಉಪನ್ಯಾಸ ಮಾಲಿಕೆ-2026ರ ಅಂಗವಾಗಿ ಖ್ಯಾತ ಲೇಖಕಿ ಹಾಗೂ ದೀಪಾ ಭಸ್ತಿ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮವು ಜೂನ್ 9ರಂದು ಬೆಳಿಗ್ಗೆ 10.30ಕ್ಕೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ. ಈ ಕುರಿತು ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಪ್ರೊ. ಪಿ.ಎಲ್. ಧರ್ಮ ರವರು ಪಿ.ಪಿ. ಗೋಮತಿ ಎಜುಕೇಶನ್ ಟ್ರಸ್ಟ್, ಮಂಗಳೂರು ವಿಶ್ವವಿದ್ಯಾನಿಲಯ, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು. ಈ ವರ್ಷದ ಉಪನ್ಯಾಸದಲ್ಲಿ ದೀಪಾ ಭಸ್ತಿ ಅವರು “ಚಿಂತನೆಯೇ ಭಿನ್ನಮತವಾದಾಗ: ಭಾಷೆ ಮತ್ತು ಸಂಸ್ಕೃತಿ ಕುರಿತು ಕೆಲವು ಆಲೋಚನೆಗಳು” ಎಂಬ ವಿಷಯದ ಕುರಿತು ಮಾತನಾಡಲಿದ್ದಾರೆ. ಭಾಷೆ, ಸಂಸ್ಕೃತಿ, ವೈವಿಧ್ಯತೆ ಮತ್ತು ಭಿನ್ನಾಭಿಪ್ರಾಯಗಳ ಮಹತ್ವವನ್ನು ಸಮಕಾಲೀನ ಸಾಮಾಜಿಕ ಸನ್ನಿವೇಶದಲ್ಲಿ ವಿಶ್ಲೇಷಿಸುವ ಈ ಉಪನ್ಯಾಸವು ಸಾಹಿತ್ಯಾಸಕ್ತರು, ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರಿಗೆ ಹೊಸ ದೃಷ್ಟಿಕೋನ…

Read More

ಪುತ್ತೂರು, ಜೂನ್ 6: ಪುತ್ತೂರು ವಿಧಾನಸಭಾ ಕ್ಷೇತ್ರದ ಜನತಾದಳ (ಜಾತ್ಯತೀತ) ಪಕ್ಷದ ಪ್ರಮುಖರ ಸಭೆಯು ಶನಿವಾರ ಬೆಳಿಗ್ಗೆ 10.30 ಗಂಟೆಗೆ ಬೋಳ್ವಾರಿನ ದುರ್ವ ಕಾಂಪ್ಲೆಕ್ಸ್‌ನ ನೆಮ್ಮದಿ ವೆಲ್‌ನೆಸ್ ಸೆಂಟರ್ ಆವರಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಕ್ಷೇತ್ರಾಧ್ಯಕ್ಷರಾದ ಅಸ್ರಫ್ ಕಲ್ಲೇಗ ವಹಿಸಿದ್ದರು.ಹಿಂದುಳಿದ ವರ್ಗದ ಜಿಲ್ಲಾದ್ಯಕ್ಷ ಪ್ರಭಾಕರ್ ಸಾಲಿಯಾನ್ ಪ್ರಸ್ತಾವಿಕ ಬಾಷಣ ಮಾಡಿದರು. ಸಭೆಯಲ್ಲಿ ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಜಾಕೆ ಮಾಧವ ಗೌಡ ಅವರು ಮಾತನಾಡಿ, ಪಕ್ಷದ ಸಂಘಟನೆಯನ್ನು ಗ್ರಾಮ ಮಟ್ಟದಿಂದ ಬಲಪಡಿಸುವ ನಿಟ್ಟಿನಲ್ಲಿ ಎಲ್ಲ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕೆಂದು ಕರೆ ನೀಡಿದರು. ಪಕ್ಷದ ತತ್ವ, ಸಿದ್ಧಾಂತ ಹಾಗೂ ಜನಪರ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಮೂಲಕ ಪಕ್ಷದ ನೆಲೆಯನ್ನು ಇನ್ನಷ್ಟು ಗಟ್ಟಿಗೊಳಿಸುವ ಅಗತ್ಯವಿದೆ ಎಂದು ಹೇಳಿದರು. ಮಾಜಿ ಜಿಲ್ಲಾಧ್ಯಕ್ಷರಾದ ಮಹಮ್ಮದ್ ಕುಂಞ ಅವರು ಮಾತನಾಡಿ, ಪಕ್ಷದ ಸಂಘಟನೆಗೆ ಪ್ರತಿಯೊಬ್ಬ ಕಾರ್ಯಕರ್ತನ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಿ, ಅವರ ಧ್ವನಿಯಾಗಿ ಕೆಲಸ ಮಾಡುವ ಮೂಲಕ ಪಕ್ಷವನ್ನು ಇನ್ನಷ್ಟು ಜನರ ಹತ್ತಿರ…

Read More

ಬೆಂಗಳೂರು, ಜೂನ್ 5: ಜಾತ್ಯತೀತ ಜನತಾದಳ (ಜೆಡಿಎಸ್) ಪಕ್ಷದ ಸಂಘಟನೆಗೆ ಮತ್ತಷ್ಟು ಬಲ ತುಂಬುವ ಉದ್ದೇಶದಿಂದ ಮಹಿಳಾ ಘಟಕದ ಜಿಲ್ಲಾ ಮಟ್ಟದ ನೇಮಕಾತಿ ಪ್ರಕ್ರಿಯೆ ಮುಂದುವರಿದಿದ್ದು, 2026ರ ಜೂನ್ 5ರಂದು ಬೆಂಗಳೂರಿನ ಜೆ.ಪಿ. ಭವನದಲ್ಲಿ ನಡೆದ ರಾಜ್ಯ ಮಟ್ಟದ ಸಭೆಯಲ್ಲಿ ಅಂಕೋಲಾ ಮೂಲದ ಶ್ರೀಮತಿ ಮೋಹಿನಿ ನಾಯ್ಕ್ ಅವರನ್ನು ಜೆಡಿಎಸ್ ಮಹಿಳಾ ಘಟಕದ ಉತ್ತರ ಕನ್ನಡ ಜಿಲ್ಲಾ ಅಧ್ಯಕ್ಷೆಯಾಗಿ ನೇಮಕ ಮಾಡಲಾಯಿತು. ಪಕ್ಷದ ಕೋರ್ ಸಮಿತಿಯ ಅಧ್ಯಕ್ಷರಾದ ಎಂ. ಕೃಷ್ಣ ರೆಡ್ಡಿ ಅವರು ಮೋಹಿನಿ ನಾಯ್ಕ್ ಅವರಿಗೆ ಅಧಿಕೃತ ನೇಮಕಾತಿ ಪತ್ರವನ್ನು ಹಸ್ತಾಂತರಿಸಿ ಶುಭ ಹಾರೈಸಿದರು. ಈ ಮೂಲಕ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಹಿಳಾ ಘಟಕದ ಸಂಘಟನೆಗೆ ಹೊಸ ನಾಯಕತ್ವ ದೊರೆತಂತಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ಮುಖಂಡರು, ಮಹಿಳಾ ಸಬಲೀಕರಣ ಹಾಗೂ ಪಕ್ಷ ಸಂಘಟನೆಯಲ್ಲಿ ಮಹಿಳೆಯರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಮೋಹಿನಿ ನಾಯ್ಕ್ ಅವರ ನೇತೃತ್ವದಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಜೆಡಿಎಸ್ ಮಹಿಳಾ ಘಟಕ ಮತ್ತಷ್ಟು ಸಕ್ರಿಯವಾಗಿ ಕಾರ್ಯನಿರ್ವಹಿಸಲಿದೆ ಎಂಬ…

Read More

ಬ್ರಹ್ಮಾವರ, ಜೂನ್ 5: ಬ್ರಹ್ಮಾವರ ತಾಲೂಕಿನ ಹೆಬ್ರಿ ರಸ್ತೆಯಲ್ಲಿರುವ ಅಪಾರ್ಟ್‌ಮೆಂಟ್‌ನೊಂದರ ಕೊಠಡಿಯಲ್ಲಿ ಯುವತಿಯೊಬ್ಬರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಮೃತ ಯುವತಿ ಮೂರ್ಛೆ (ಎಪಿಲೆಪ್ಸಿ) ರೋಗದಿಂದ ಬಳಲುತ್ತಿದ್ದು, ಅದೇ ಕಾಯಿಲೆಯ ಪರಿಣಾಮವಾಗಿ ಸಾವನ್ನಪ್ಪಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಮೃತರನ್ನು ಚಾಂತಾರು ಗ್ರಾಮದ ನಿವಾಸಿ ಶ್ರೇಯಾ ಎಂದು ಗುರುತಿಸಲಾಗಿದೆ. ಅವರು ಹೆಬ್ರಿ ರಸ್ತೆಯಲ್ಲಿರುವ ಶ್ರೇಯಸ್ ಅಪಾರ್ಟ್‌ಮೆಂಟ್‌ನ ಎ-ಬ್ಲಾಕ್‌ನ 6ನೇ ಮಹಡಿಯ 605ನೇ ಕೊಠಡಿಯಲ್ಲಿ ವಾಸಿಸುತ್ತಿದ್ದು, ವೆಲೆನ್ಸಿಯಾ ಕ್ಯಾಶ್ಯೂ ಫ್ಯಾಕ್ಟರಿಯಲ್ಲಿ ಉದ್ಯೋಗಿಯಾಗಿದ್ದರು. ಪ್ರಕರಣದ ಮಾಹಿತಿ ನೀಡಿರುವ ಜಯಕರ (32) ಅವರು ಕೊಳರಬೆಟ್ಟು, ಕಳ್ತೂರು ಗ್ರಾಮದ ನಿವಾಸಿಯಾಗಿದ್ದು, ವೃತ್ತಿಯಲ್ಲಿ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಜೂನ್ 4ರಂದು ರಾತ್ರಿ ಸುಮಾರು 8 ಗಂಟೆಗೆ ಶ್ರೇಯಾ ಊಟ ಮುಗಿಸಿ ತಮ್ಮ ಕೊಠಡಿಗೆ ತೆರಳಿದ್ದರು. ಅವರೊಂದಿಗೆ ಆರುಷಿ ಎಂಬ ಯುವತಿಯೂ ಅದೇ ಕೊಠಡಿಯಲ್ಲಿ ವಾಸಿಸುತ್ತಿದ್ದರು. ಜೂನ್ 5ರ ಬೆಳಿಗ್ಗೆ ಶ್ರೇಯಾರನ್ನು ಕೆಲಸಕ್ಕೆ ಕರೆದುಕೊಂಡು ಹೋಗಲು ಜಯಕರ ಅಪಾರ್ಟ್‌ಮೆಂಟ್‌ಗೆ ಬಂದಿದ್ದರು. ಆಗ ಬೆಳಿಗ್ಗೆ ಸುಮಾರು 8.45 ಗಂಟೆಯಾದರೂ ಶ್ರೇಯಾ ಎದ್ದಿರಲಿಲ್ಲ ಎಂದು…

Read More

ಬಂಟ್ವಾಳ, ಜೂನ್ 5: ಮೆಲ್ಕಾರ್ ಫ್ಲೈಓವರ್ ಸಮೀಪ ಕಾರಿನಲ್ಲಿ ಸಾಗಿಸಲಾಗುತ್ತಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಎಂಡಿಎಂಎ (MDMA) ಮಾದಕ ವಸ್ತುವನ್ನು ಬಂಟ್ವಾಳ ನಗರ ಪೊಲೀಸರು ವಶಪಡಿಸಿಕೊಂಡು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಜೂನ್ 4ರಂದು ಸಂಜೆ ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಸಂದೀಪ್ ಕುಮಾರ್ ಶೆಟ್ಟಿ ಅವರ ನೇತೃತ್ವದ ಪೊಲೀಸ್ ತಂಡವು ಮೆಲ್ಕಾರ್ ಫ್ಲೈಓವರ್ ಬಳಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ಕಾರೊಂದನ್ನು ತಡೆದು ಪರಿಶೀಲನೆ ನಡೆಸಿತು. ಈ ವೇಳೆ ಕಾರಿನೊಳಗೆ ಮಾದಕ ವಸ್ತು ಸೇವನೆಗೆ ಬಳಸುವ ಸಾಧನಗಳು ಪತ್ತೆಯಾಗಿದ್ದು, ವಾಹನದಲ್ಲಿದ್ದ ವ್ಯಕ್ತಿಗಳನ್ನು ವಿಚಾರಣೆಗೆ ಒಳಪಡಿಸಲಾಯಿತು.ವಿಚಾರಣೆಯ ವೇಳೆ ಆರೋಪಿಗಳು ಬಂಟ್ವಾಳ ಪುದು ನಿವಾಸಿ ಎ. ಜುಬೇರ್ (39), ಸಜಿಪೆ ಮುನ್ನೂರು ನಿವಾಸಿ ಮೊಹಮ್ಮದ್ ಸವಾದ್ (36) ಹಾಗೂ ಬಿ. ಮೂಡ ನಿವಾಸಿ ಬಿ.ಎಂ. ರಶೀದ್ ಅಲಿಯಾಸ್ ಮಾರಿಯತ್ತು ಎಂದು ಗುರುತಿಸಲ್ಪಟ್ಟಿದ್ದಾರೆ. ಆರೋಪಿಗಳು ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಎಂಡಿಎಂಎ ಮಾದಕ ವಸ್ತು ಸಾಗಿಸುತ್ತಿದ್ದುದಾಗಿ ಒಪ್ಪಿಕೊಂಡಿದ್ದಾರೆ ಎಂದು…

Read More