- ಇಂಟರ್ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ವತಿಯಿಂದ ಮರವುರಿನಲ್ಲಿ ಮರಿಯಾಳದ ಮಿನದನ ಸಮಾರೋಪ ಸಮಾರಂಭ
- ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಆಚರಣೆ
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಶೀಘ್ರ ಅನುದಾನ ಬಿಡುಗಡೆಗೆ ಮನವಿ
- ಕಡಬದಲ್ಲಿ ‘ಕಿಂಗ್ಸ್ ಬಜಾರ್’ ಹೆಸರಿನಲ್ಲಿ ಹೂಡಿಕೆ ವಂಚನೆ ಆರೋಪ: ಸಭೆಗೆ ಪೊಲೀಸ್ ದಾಳಿ; ಏಳು ಮಂದಿ ವಿರುದ್ಧ ಪ್ರಕರಣ
- ಜಿಲ್ಲಾ ಬ್ಯಾಂಕ್ನಿಂದ ಉಪ್ಪೂರು ಸಹಕಾರಿ ಸಂಘಕ್ಕೆ ಪ್ರತಿಷ್ಠಿತ ಸಾಧನಾ ಪ್ರಶಸ್ತಿ
- ಮಲ್ಪೆ ಬಂದರಿನಲ್ಲಿ ಮೀನುಗಾರ ಕಾರ್ಮಿಕನ ಕೊಲೆಬೋಟಿನ ಕ್ಯಾಬಿನ್ನಲ್ಲೇ ಚೂರಿ ಇರಿತ; ಪರಾರಿಯಾಗುತ್ತಿದ್ದ ಆರೋಪಿ ರೈಲು ನಿಲ್ದಾಣದಲ್ಲಿ ಬಂಧನ
- ₹5 ಕೋಟಿಗೂ ಅಧಿಕ ಹಣ ಸಂಗ್ರಹದ ಲೆಕ್ಕಪತ್ರ ಎಲ್ಲಿದೆ? — ಮಂಗಳಾ ಸ್ವಿಮ್ಮಿಂಗ್ ಕ್ಲಬ್ ವಿರುದ್ಧ ಮಾಜಿ ಕಾರ್ಯದರ್ಶಿ ಆರ್. ಧನರಾಜ್ ಆರೋಪ
- ಮುದರಂಗಡಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಮುಂಬೈ ನಟೋರಿಯಸ್ ಗ್ಯಾಂಗ್ಸ್ಟರ್ ಅನುಜ್ ಪಾಟೀಲ್ ಬಂಧನ
Author: Tulunada Surya
ಸಾಮಾಜಿಕಮುಖಿ ಕೆಲಸ ಕಾರ್ಯಗಳಿಂದ ಸಂಘ ಸಂಸ್ಥೆಗಳು ಬಲಿಷ್ಠವಾಗಿ ಬೆಳೆಯಲು ಸಾಧ್ಯ: ಡಾ. ಅತ್ತೂರು ಸದಾನಂದ ಶೆಟ್ಟಿ ಮಂಗಳೂರು: ಸಾರ್ವಜನಿಕ ಸೇವಾ ಸಂಘ ಸಂಸ್ಥೆಗಳ ನಿರಂತರ ಸಾಮಾಜಿಕಮುಖಿ ಕೆಲಸ ಕಾರ್ಯಗಳಿಂದ ಸಂಘಟನೆಗಳು ಬಲಿಷ್ಠವಾಗಿ ಬೆಳೆಯಲು ಸಾಧ್ಯ. ಈ ನಿಟ್ಟಿನಲ್ಲಿ ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಕಾರ್ಯಕ್ರಮಗಳ ಯಶಸ್ಸಿನಲ್ಲಿ ನಾವೆಲ್ಲರೂ ಜೊತೆಯಾಗಿ ಕೆಲಸ ಮಾಡಬೇಕಾಗಿದೆ ಎಂದು ಇಂಟರ್ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ನ ಸ್ಥಾಪಕ ಅಧ್ಯಕ್ಷ ಡಾ. ಅತ್ತೂರು ಸದಾನಂದ ಶೆಟ್ಟಿ ಅಭಿಪ್ರಾಯಪಟ್ಟರು. ಗ್ರ್ಯಾಂಡ್ ಬೇ ಮರವುರಿನಲ್ಲಿ ನಡೆದ ಮರಿಯಾಳದ ಮಿನದನ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮುಖ್ಯ ಅತಿಥಿಯಾಗಿ ಮಾತನಾಡಿದ ಕರುಣಾಕರ ಎಂ. ಶೆಟ್ಟಿ, ಮಧ್ಯಗುತುತ್ತು, ವಿ.ಕೆ. ಗ್ರೂಪ್ನ ವ್ಯವಸ್ಥಾಪಕ ನಿರ್ದೇಶಕರು, ಮುಂಬೈ, ಅವರು ಮಾತನಾಡಿ, ಹಲವಾರು ವರ್ಷಗಳಿಂದ ಇಂಟರ್ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ನಮ್ಮ ಸಂಸ್ಕೃತಿ ಹಾಗೂ ಸಂಪ್ರದಾಯ ಉಳಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಹಾಗೂ ಸಮಾರಂಭಗಳನ್ನು ನಡೆಸುತ್ತಿರುವುದು ಶ್ಲಾಘನೀಯ. ಯುವ ಪ್ರತಿಭೆಗಳನ್ನು ಗುರುತಿಸಿ, ಅವರನ್ನು ಉಳಿಸಿ ಬೆಳೆಸುವಲ್ಲಿ ನಾವೆಲ್ಲರೂ…
ಬಿಜೆಪಿ ಮಂಗಳೂರು ನಗರ ದಕ್ಷಿಣದ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಆಚರಣೆ ಅಂಗವಾಗಿ ನಗರದ ನಾರಾಯಣಗುರು ವೃತ್ತದಲ್ಲಿರುವ ಪೂಜ್ಯರ ಪ್ರತಿಮೆಗೆ ಪುಷ್ಪ ನಮನಗಳನ್ನು ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ಸಾಮಾಜಿಕ ಪರಿವರ್ತನೆಯ ಹರಿಕಾರರಾಗಿ ಹಿಂದುಳಿದವರ ಸಹಿತ ಸರ್ವರ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ಇಂತಹ ಮಹಾನ್ ಸಂತರ ಗೌರವಾರ್ಥ ಹಿಂದಿನ ಬಿಜೆಪಿ ಸರ್ಕಾರ ಅವಧಿಯಲ್ಲಿ ಮಂಗಳೂರಿನ ಹೃದಯ ಭಾಗದಲ್ಲಿರುವ ಈ ವೃತ್ತಕ್ಕೆ ನಾರಾಯಣಗುರು ವೃತ್ತ ಎಂದು ಮರುನಾಮಕರಣ ಮಾಡಿ, ಪೂಜ್ಯರ ಪ್ರತಿಮೆಯನ್ನು ಸ್ಥಾಪಿಸಲಾಗಿತ್ತು. ನಂತರ ಉರ್ವದಲ್ಲಿ ಗುರುಗಳ ಸುಂದರವಾದ ಮಂದಿರ ಕಟ್ಟಲಾಗಿತ್ತು. ಅಲ್ಲದೇ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನೂ ಸಹ ಅಸ್ತಿತ್ವಕ್ಕೆ ತರಲಾಗಿತ್ತು. ನಂತರ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರವು ಮೂರು ವರ್ಷಗಳ ನಂತರ ಕಾಟಾಚಾರಕ್ಕೆ ನಿಗಮಕ್ಕೆ ಅಧ್ಯಕ್ಷರನ್ನು ನೇಮಕ ಮಾಡಿತು. ಆದರೆ ಪ್ರತಿ ವರ್ಷ 500 ಕೋಟಿ ಕೊಡುವುದಾಗಿ ನೀಡಿದ್ದ ಭರವಸೆ ನೀಡಿದ್ದ ಕಾಂಗ್ರೆಸ್ ಸರ್ಕಾರ ಒಂದು ಪೈಸೆಯನ್ನೂ…
ಮಂಗಳೂರು, ಆ.26: ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಶೀಘ್ರ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಜಿಲ್ಲಾ ಆದಿದ್ರಾವಿಡ ಸಮಾಜ ಸೇವಾ ಸಂಘದ ನಿಯೋಗವು ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ. ಆ.21ರಂದು ಬೆಂಗಳೂರಿನಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಅವರ ನೇತೃತ್ವದಲ್ಲಿ ನಿಯೋಗವು ಸಚಿವರನ್ನು ಭೇಟಿ ಮಾಡಿ, ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಅಗತ್ಯವಿರುವ ಅನುದಾನವನ್ನು ಶೀಘ್ರ ಬಿಡುಗಡೆ ಮಾಡುವಂತೆ ಮನವಿ ಮಾಡಿತು. ಅಂಬೇಡ್ಕರ್ ಭವನವು ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಪ್ರಮುಖ ಕೇಂದ್ರವಾಗಲಿದ್ದು, ಇದರ ನಿರ್ಮಾಣ ಕಾರ್ಯವನ್ನು ಶೀಘ್ರ ಆರಂಭಿಸಲು ಸರ್ಕಾರದಿಂದ ಅಗತ್ಯ ಅನುದಾನ ಮಂಜೂರು ಮಾಡಬೇಕು ಎಂದು ನಿಯೋಗವು ಸಚಿವರಲ್ಲಿ ಮನವಿ ಮಾಡಿತು. ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ಸಂಜೀವ ಕೋಟ್ಯಾನ್, ಗೌರವಾಧ್ಯಕ್ಷ ರಘುನಾಥ ಅತ್ತಾವರ, ಉಪಾಧ್ಯಕ್ಷ ಅಣ್ಣು ಕುಂಜತ್ತ್ ಬೈಲ್, ಚೈತನ್ಯ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಕೃಷ್ಣ ಸೂಟರ್ ಪೇಟೆ, ಜಿಲ್ಲಾ ವಕ್ತಾರ ರಾಮ್ ಕುಮಾರ್…
ಕಡಬ: ಕಡಿಮೆ ಅವಧಿಯಲ್ಲಿ ಹೂಡಿಕೆ ಹಣವನ್ನು ದುಪ್ಪಟ್ಟುಗೊಳಿಸುವುದಾಗಿ ಆಮಿಷವೊಡ್ಡಿ ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಕಡಬ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ‘ಕಿಂಗ್ಸ್ ಬಜಾರ್’ ಹೆಸರಿನ ಹೂಡಿಕೆ ಯೋಜನೆಗೆ ಸಂಬಂಧಿಸಿದಂತೆ ಏಳು ಮಂದಿಯನ್ನು ಆರೋಪಿಗಳನ್ನಾಗಿ ಮಾಡಿ ಪ್ರಕರಣ ದಾಖಲಿಸಿದ್ದಾರೆ.ಕಡಬದಲ್ಲಿ ಹೂಡಿಕೆದಾರರನ್ನು ಸೇರಿಸಿ ಸಭೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿದ ಹಿನ್ನೆಲೆಯಲ್ಲಿ ತಕ್ಷಣ ಸ್ಥಳಕ್ಕೆ ತೆರಳಿದ ಪೊಲೀಸರು ಸಭೆಗೆ ದಾಳಿ ನಡೆಸಿ, ಅಲ್ಲಿದ್ದವರನ್ನು ವಿಚಾರಣೆಗೊಳಪಡಿಸಿದ್ದಾರೆ. ಈ ವೇಳೆ ಹೂಡಿಕೆ ಯೋಜನೆಗೆ ಸಂಬಂಧಿಸಿದ ದಾಖಲೆಗಳು ಹಾಗೂ ಹಣಕಾಸಿನ ವ್ಯವಹಾರಗಳ ಮಾಹಿತಿಯನ್ನು ಪರಿಶೀಲಿಸಲಾಗಿದೆ.ದುಪ್ಪಟ್ಟು ಲಾಭದ ಆಮಿಷ‘ಕಿಂಗ್ಸ್ ಬಜಾರ್’ ಸಂಸ್ಥೆಯಲ್ಲಿ ಸದಸ್ಯರಾಗಿ ಹಣ ಹೂಡಿಕೆ ಮಾಡಿದರೆ ಕಡಿಮೆ ಅವಧಿಯಲ್ಲಿ ಹೆಚ್ಚಿನ ಲಾಭ ಪಡೆಯಬಹುದು, ಬೆಲೆಬಾಳುವ ವಸ್ತುಗಳನ್ನು ರಿಯಾಯಿತಿ ದರದಲ್ಲಿ ಖರೀದಿಸಬಹುದು ಹಾಗೂ ಹೊಸ ಸದಸ್ಯರನ್ನು ಸೇರ್ಪಡೆಗೊಳಿಸಿದವರಿಗೆ ಭಾರೀ ಕಮಿಷನ್ ನೀಡಲಾಗುತ್ತದೆ ಎಂದು ಸಾರ್ವಜನಿಕರನ್ನು ಸೆಳೆಯಲಾಗುತ್ತಿತ್ತು ಎನ್ನಲಾಗಿದೆ.ಸ್ಥಳೀಯವಾಗಿ ಕೆಲವರನ್ನು ಏಜೆಂಟರನ್ನಾಗಿ ನೇಮಿಸಿ, ಅವರ ಮೂಲಕ ಹೊಸ ಸದಸ್ಯರ ಸೇರ್ಪಡೆ ಹಾಗೂ ಹಣ ಸಂಗ್ರಹಿಸುವ ಚಟುವಟಿಕೆ ನಡೆಸಲಾಗುತ್ತಿತ್ತು ಎಂಬ…
.ಉಡುಪಿ: ಸೀಮಿತ ಕಾರ್ಯವ್ಯಾಪ್ತಿಯಲ್ಲಿಯೇ ಗಮನಾರ್ಹ ಸಾಧನೆ ದಾಖಲಿಸಿರುವ ಉಪ್ಪೂರು ವ್ಯವಸಾಯ ಸೇವಾ ಸಹಕಾರಿ ಸಂಘವು 2025–26ನೇ ಸಾಲಿನ ‘ಎ’ ವರ್ಗದ ಸಹಕಾರಿ ಸಂಘಗಳ ಜಿಲ್ಲಾ ಬ್ಯಾಂಕಿನ ಸಾಧನಾ ಪ್ರಶಸ್ತಿಗೆ ಆಯ್ಕೆಯಾಗಿರುವುದು ಹೆಮ್ಮೆಯ ಸಂಗತಿಯಾಗಿದೆ. ಮಂಗಳೂರಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯ ಸಂದರ್ಭದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಉಪ್ಪೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಎನ್. ರಮೇಶ್ ಶೆಟ್ಟಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂದೀಪ ಶೆಟ್ಟಿ ಅವರನ್ನು ಸನ್ಮಾನಿಸಿ, ಪ್ರಶಸ್ತಿ ಪತ್ರ ಹಾಗೂ ಗೌರವ ಸ್ಮರಣಿಕೆಯನ್ನು ನೀಡಿ ಗೌರವಿಸಿದರು. ಉಪ್ಪೂರು ಮತ್ತು ಹಾವಂಜೆ ಎಂಬ ಕೇವಲ ಎರಡು ಗ್ರಾಮಗಳನ್ನು ಕಾರ್ಯವ್ಯಾಪ್ತಿಯಾಗಿ ಹೊಂದಿರುವ ಸಂಘವು ವರದಿ ಸಾಲಿನಲ್ಲಿ ₹400 ಕೋಟಿಗೂ ಅಧಿಕ ವ್ಯವಹಾರ ನಡೆಸಿರುವುದು ವಿಶೇಷ ಸಾಧನೆಯಾಗಿದೆ. ಇದೇ ಅವಧಿಯಲ್ಲಿ ₹103 ಕೋಟಿಗೂ ಅಧಿಕ ಠೇವಣಿ ಸಂಗ್ರಹಿಸಿ, ₹74 ಕೋಟಿಗೂ ಅಧಿಕ ಸಾಲ ವಿತರಣೆ ಮಾಡಿದ್ದು, ₹1.12 ಕೋಟಿ…
ಉಡುಪಿ: ಮಲ್ಪೆ ಬಂದರಿನಲ್ಲಿ ಲಂಗರು ಹಾಕಲಾಗಿದ್ದ ಮೀನುಗಾರಿಕಾ ಬೋಟೊಂದರ ಕ್ಯಾಬಿನ್ನಲ್ಲಿ ಮೀನುಗಾರ ಕಾರ್ಮಿಕರಿಬ್ಬರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಚೂರಿ ಇರಿತಕ್ಕೊಳಗಾದ ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ಮಂಗಳವಾರ ಬೆಳಗಿನ ಜಾವ ನಡೆದಿದೆ. ಮೃತರನ್ನು ಚಿಕ್ಕಮಗಳೂರು ಮೂಲದ ಅಭಿಷೇಕ್ ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದ ಎಂಬಾತನನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಸೋಮವಾರ ರಾತ್ರಿ ಬೋಟಿನಲ್ಲಿ ಗೋವಿಂದ ಹಾಗೂ ಅಭಿಷೇಕ್ ನಡುವೆ ಗಲಾಟೆ ನಡೆದಿತ್ತು. ಇದೇ ವಿಚಾರ ಮುಂದುವರಿದು ಮಂಗಳವಾರ ಬೆಳಗಿನ ಜಾವ ಇಬ್ಬರ ನಡುವೆ ಮತ್ತೆ ಸಂಘರ್ಷ ಉಂಟಾಗಿದ್ದು, ಈ ವೇಳೆ ಗೋವಿಂದ ಅಭಿಷೇಕ್ಗೆ ಚೂರಿಯಿಂದ ಇರಿದಿದ್ದಾನೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಅಭಿಷೇಕ್ ಮೃತಪಟ್ಟ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದನು. ಘಟನೆ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆ ಮಲ್ಪೆ ಪೊಲೀಸ್ ಠಾಣೆಯ ಅನೀಲ್ ಕುಮಾರ್ ಡಿ. ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಆದರ್ಶ ಮತ್ತು ಕುಬೇರ ಕಾರ್ಯಪ್ರವೃತ್ತರಾಗಿ, ಆರೋಪಿಯ ಪತ್ತೆಗೆ ತಕ್ಷಣ ಕಾರ್ಯಾಚರಣೆ ಆರಂಭಿಸಿದರು. ಪೊಲೀಸರ ತನಿಖೆಯಲ್ಲಿ ಆರೋಪಿ ಗೋವಿಂದ…
ಮಂಗಳೂರು: ಕಳೆದ 36 ವರ್ಷಗಳಿಂದ ಸಾರ್ವಜನಿಕರು ಹಾಗೂ ಕ್ರೀಡಾ ವಿದ್ಯಾರ್ಥಿಗಳಿಂದ ಮಂಗಳಾ ಸ್ವಿಮ್ಮಿಂಗ್ ಕ್ಲಬ್ ಸಂಗ್ರಹಿಸಿರುವ ಹಣದ ಹಣಕಾಸು ವ್ಯವಹಾರಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಕ್ಲಬ್ನ ಮಾಜಿ ಕಾರ್ಯದರ್ಶಿ ಆರ್. ಧನರಾಜ್ ಆಗ್ರಹಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳಾ ಸ್ವಿಮ್ಮಿಂಗ್ ಕ್ಲಬ್ 1990ರವರೆಗೆ ಸಹಕಾರ ಸಂಘಗಳ ಉಪನಿಬಂಧಕರ ಕಚೇರಿಯಲ್ಲಿ ನೋಂದಣಿಯಾಗಿತ್ತು. ಬಳಿಕ ಕ್ಲಬ್ನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮಕ್ಕಳಿಂದ ಮತ್ತು ಸಾರ್ವಜನಿಕರಿಂದ ವಿವಿಧ ರೂಪದಲ್ಲಿ ಹಣ ಸಂಗ್ರಹಿಸುತ್ತಿದ್ದು, ಈ ಹಣದ ಸಮರ್ಪಕ ಲೆಕ್ಕಪತ್ರ ನಿರ್ವಹಿಸಲಾಗಿಲ್ಲ ಎಂಬ ಗಂಭೀರ ಆರೋಪ ಮಾಡಿದರು. ಕಳೆದ 36 ವರ್ಷಗಳ ಅವಧಿಯಲ್ಲಿ ಸುಮಾರು ₹5 ಕೋಟಿಗೂ ಅಧಿಕ ಹಣ ಸಂಗ್ರಹವಾಗಿರುವ ಸಾಧ್ಯತೆಯಿದ್ದು, ಈ ಹಣದ ಬಳಕೆ ಹಾಗೂ ಹಣಕಾಸು ವ್ಯವಹಾರಗಳ ಬಗ್ಗೆ ಪಾರದರ್ಶಕತೆ ಅಗತ್ಯವಾಗಿದೆ ಎಂದು ಧನರಾಜ್ ಹೇಳಿದರು. ಕ್ಲಬ್ನ ಆದಾಯ, ವೆಚ್ಚ, ಬ್ಯಾಂಕ್ ಖಾತೆಗಳು, ಶುಲ್ಕ ಸಂಗ್ರಹ ಹಾಗೂ ಇತರ ಹಣಕಾಸು ವ್ಯವಹಾರಗಳ ಕುರಿತು ಸಂಬಂಧಪಟ್ಟ ಇಲಾಖೆಗಳಿಂದ ಸ್ವತಂತ್ರ…
ಉಡುಪಿ: ಕಾಪು ತಾಲೂಕಿನ ಮುದರಂಗಡಿಯಲ್ಲಿ ನಡೆದ ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಹಾಗೂ ಮುಂಬೈ ಮೂಲದ ನಟೋರಿಯಸ್ ಗ್ಯಾಂಗ್ಸ್ಟರ್ ಅನುಜ್ ಪಾಟೀಲ್ನನ್ನು ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್ 7ರಂದು ಮುದರಂಗಡಿಯ ಸೈಂಟ್ ಕ್ಷೇವಿಯರ್ ಚರ್ಚ್ ಕಾಂಪ್ಲೆಕ್ಸ್ನಲ್ಲಿ ಪ್ರಿನ್ಸ್ ಎಂಟರ್ಪ್ರೈಸಸ್ ಮಾಲೀಕ ಡೇವಿಡ್ ಡಿಸೋಜಾ ಅವರ ತಲೆಗೆ ಪಿಸ್ತೂಲ್ನಿಂದ ಗುಂಡು ಹಾರಿಸಿ ಹತ್ಯೆ ಮಾಡಲಾಗಿತ್ತು. ಪ್ರಕರಣದ ತನಿಖೆ ನಡೆಸುತ್ತಿದ್ದ ಕುಂದಾಪುರ ಹಾಗೂ ಕೊಲ್ಲೂರು ಠಾಣೆ ಪೊಲೀಸರ ತಂಡ ಸೋಮವಾರ ಬೆಳಗ್ಗೆ ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನುಜ್ ಪಾಟೀಲ್ನನ್ನು ವಶಕ್ಕೆ ಪಡೆದಿದೆ. ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ, ಪಿಎಸ್ಐ ಆಯುಧ ಕಸಿದು ಗುಂಡಿನ ದಾಳಿ ಆರೋಪಿಯನ್ನು ಪೊಲೀಸ್ ಠಾಣೆಗೆ ಕರೆತರುತ್ತಿದ್ದ ಸಂದರ್ಭದಲ್ಲಿ ಆತ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ, ಕೊಲ್ಲೂರು ಠಾಣೆ ಪಿಎಸ್ಐ ವಿನಯ್ ಅವರ ಸರ್ವಿಸ್ ಆಯುಧವನ್ನು ಕಸಿದುಕೊಂಡು ಗುಂಡು ಹಾರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ವೇಳೆ ಆತ್ಮರಕ್ಷಣೆಗಾಗಿ ಕುಂದಾಪುರ ಪಿಎಸ್ಐ ನಂಜ ನಾಯಕ್…
ಬ್ರಹ್ಮಾವರ: ಹುಟ್ಟಿನಿಂದ ಬದುಕಿನ ಕೊನೆಯ ಕ್ಷಣದವರೆಗೆ ಪ್ರತಿಯೊಂದು ಕ್ಷಣವೂ ಸ್ಮರಣೀಯವಾಗಿರುವುದಿಲ್ಲ. ಆದರೆ ಬದುಕಿನಲ್ಲಿ ದೊರೆಯುವ ಕೆಲವು ಅವಕಾಶಗಳು ಹಾಗೂ ಸಂದರ್ಭಗಳು ಆ ಕ್ಷಣಗಳನ್ನು ಅವಿಸ್ಮರಣೀಯವಾಗಿಸುತ್ತವೆ. ಅಂತಹ ಅವಿಸ್ಮರಣೀಯ ಕ್ಷಣಗಳಿಗೆ ಸಾಕ್ಷಿಯಾದ ಕಾರ್ಯಕ್ರಮವೇ ತುಳುನಾಡು ರಕ್ಷಣಾ ವೇದಿಕೆ (ರಿ.) ಉಡುಪಿ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಲಾಗಿದ್ದ ‘ಆಟಿಡೊಂಜಿ ದಿನ’ದ ‘ಆಟಿದ ಐಸಿರಿ’ ಸಾಂಸ್ಕೃತಿಕ ಕಲಾ ವೈಭವ ಎಂದು ತುಳುನಾಡು ರಕ್ಷಣಾ ವೇದಿಕೆಯ ಮುಖಂಡರು ಅಭಿಪ್ರಾಯಪಟ್ಟರು. ಇತ್ತೀಚೆಗೆ ನಡೆದ ಉಡುಪಿ ಜಿಲ್ಲಾ ಘಟಕದ ‘ಆಟಿಡೊಂಜಿ ದಿನ’ ಕಾರ್ಯಕ್ರಮದಲ್ಲಿ ತುಳುನಾಡು ರಕ್ಷಣಾ ವೇದಿಕೆ (ರಿ.) ಬ್ರಹ್ಮಾವರ ತಾಲೂಕು ಘಟಕದ ವತಿಯಿಂದ ‘ಆಟಿದ ಐಸಿರಿ’ ಎಂಬ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮವನ್ನು ಪ್ರಸ್ತುತಪಡಿಸಲಾಗಿತ್ತು. ತುಳುನಾಡಿನ ಸಂಸ್ಕೃತಿ, ಆಚಾರ–ವಿಚಾರ, ಜನಪದ ಕಲೆ ಹಾಗೂ ಪರಂಪರೆಯನ್ನು ಪರಿಚಯಿಸುವಲ್ಲಿ ಕಾರ್ಯಕ್ರಮ ಯಶಸ್ವಿಯಾಗಿತ್ತು. ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದ ಬ್ರಹ್ಮಾವರ ತಾಲೂಕು ಘಟಕದ ಪ್ರತಿಯೊಬ್ಬ ಸದಸ್ಯರನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ವಿಶೇಷ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ತಾಲೂಕು ಘಟಕದ ಅಧ್ಯಕ್ಷರಾದ ಶರತ್ ರಾಜ್ ಆರೂರು ಅವರ…
ಮಂಗಳೂರು, ಆ.22: ಪಾರ್ಶ್ವವಾಯು (ಸ್ಟ್ರೋಕ್) ಎಂದರೆ ವಯಸ್ಸಾದವರಿಗಷ್ಟೇ ಬರುವ ಕಾಯಿಲೆ ಎಂಬ ಸಾಮಾನ್ಯ ಕಲ್ಪನೆ ಬದಲಾಗಬೇಕಿದೆ. ಇತ್ತೀಚಿನ ದಿನಗಳಲ್ಲಿ 30ರಿಂದ 50 ವರ್ಷದೊಳಗಿನ ಯುವ ವಯಸ್ಕರಲ್ಲೂ ಸ್ಟ್ರೋಕ್ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಕೆಎಂಸಿ ಆಸ್ಪತ್ರೆ ಮಂಗಳೂರಿನ ತಜ್ಞ ವೈದ್ಯರು ಎಚ್ಚರಿಸಿದ್ದಾರೆ. ಸ್ಟ್ರೋಕ್ ಆರೈಕೆಯಲ್ಲಿ 30 ವರ್ಷಗಳ ಸೇವೆಯನ್ನು ಪೂರೈಸಿದ ಹಿನ್ನೆಲೆಯಲ್ಲಿ ಕೆಎಂಸಿ ಆಸ್ಪತ್ರೆ ಮಂಗಳೂರಿನ ಸಮಗ್ರ ಸ್ಟ್ರೋಕ್ ಸಿದ್ಧತಾ ಘಟಕದ ವತಿಯಿಂದ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ನರವಿಜ್ಞಾನ, ನರಶಸ್ತ್ರಚಿಕಿತ್ಸೆ, ಇಂಟರ್ವೆನ್ಷನಲ್ ನ್ಯೂರೋರೇಡಿಯಾಲಜಿ, ಕ್ರಿಟಿಕಲ್ ಕೇರ್, ತುರ್ತು ವೈದ್ಯಕೀಯ ಹಾಗೂ ಪುನರ್ವಸತಿ ವಿಭಾಗಗಳ ತಜ್ಞರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಸ್ಟ್ರೋಕ್ನ ಲಕ್ಷಣಗಳನ್ನು ಆರಂಭಿಕ ಹಂತದಲ್ಲೇ ಗುರುತಿಸುವುದು ಮತ್ತು ವಿಳಂಬವಿಲ್ಲದೆ ಚಿಕಿತ್ಸೆ ಪಡೆಯುವ ಅಗತ್ಯವನ್ನು ವಿವರಿಸಿದರು. ಕಳೆದ ಮೂರು ದಶಕಗಳಲ್ಲಿ ಕೆಎಂಸಿ ಆಸ್ಪತ್ರೆಯ ತಂಡವು 25 ಸಾವಿರಕ್ಕೂ ಅಧಿಕ ಸ್ಟ್ರೋಕ್ ಪ್ರಕರಣಗಳಿಗೆ ಚಿಕಿತ್ಸೆ ನೀಡಿದೆ. ನರವಿಜ್ಞಾನ, ನರಶಸ್ತ್ರಚಿಕಿತ್ಸೆ, ಇಂಟರ್ವೆನ್ಷನಲ್ ರೇಡಿಯಾಲಜಿ, ನ್ಯೂರೋ-ಐಸಿಯು, ತುರ್ತು ವೈದ್ಯಕೀಯ ಹಾಗೂ ನ್ಯೂರೋ-ರಿಹ್ಯಾಬಿಲಿಟೇಶನ್ ಸೇರಿದಂತೆ ವಿವಿಧ ವಿಭಾಗಗಳ ಸಮನ್ವಯದೊಂದಿಗೆ…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
