- ಮಲ್ಪೆ ಬಂದರಿನಲ್ಲಿ ಮೀನುಗಾರ ಕಾರ್ಮಿಕನ ಕೊಲೆಬೋಟಿನ ಕ್ಯಾಬಿನ್ನಲ್ಲೇ ಚೂರಿ ಇರಿತ; ಪರಾರಿಯಾಗುತ್ತಿದ್ದ ಆರೋಪಿ ರೈಲು ನಿಲ್ದಾಣದಲ್ಲಿ ಬಂಧನ
- ₹5 ಕೋಟಿಗೂ ಅಧಿಕ ಹಣ ಸಂಗ್ರಹದ ಲೆಕ್ಕಪತ್ರ ಎಲ್ಲಿದೆ? — ಮಂಗಳಾ ಸ್ವಿಮ್ಮಿಂಗ್ ಕ್ಲಬ್ ವಿರುದ್ಧ ಮಾಜಿ ಕಾರ್ಯದರ್ಶಿ ಆರ್. ಧನರಾಜ್ ಆರೋಪ
- ಮುದರಂಗಡಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಮುಂಬೈ ನಟೋರಿಯಸ್ ಗ್ಯಾಂಗ್ಸ್ಟರ್ ಅನುಜ್ ಪಾಟೀಲ್ ಬಂಧನ
- ಆಟಿದ ಐಸಿರಿ’ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸದಸ್ಯರಿಗೆ ಗೌರವ ಅಭಿನಂದನೆ
- 30–50ರ ವಯೋಮಾನದವರಲ್ಲಿ ಸ್ಟ್ರೋಕ್ ಪ್ರಕರಣಗಳ ಏರಿಕೆ; ‘ಸುವರ್ಣಾವಧಿ’ಯಲ್ಲಿ ಚಿಕಿತ್ಸೆ ಪಡೆಯಲು ಕರೆ
- ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲಿನ ಹಲ್ಲೆ ಖಂಡನೀಯ: ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಉಡುಪಿ ಪತ್ರಕರ್ತರ ಸಂಘ ಆಗ್ರಹ
- ಆರೂರು ಅಡ್ಜಿಲು ಭಾಗದ ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಮೆಸ್ಕಾಂ ಒಂದು ತಿಂಗಳೊಳಗೆ ಹೊಸ ಟಿಸಿ ಅಳವಡಿಸುವ ಭರವಸೆ – ತುಳುನಾಡು ರಕ್ಷಣಾ ವೇದಿಕೆ ಆಗ್ರಹ
- ಆಗಸ್ಟ್ 23ರಂದು ಮಂಗಳೂರಿನಲ್ಲಿ ಅಂತರರಾಷ್ಟ್ರೀಯ ಬಂಟ್ಸ್ ವೆಲ್ಫೇರ್ ಟ್ರಸ್ಟ್ ವತಿಯಿಂದ “ಮರಿಯಾಳದ ಮಿನದನ” ಪೂರ್ವಭಾವಿ ಸಭೆ
Author: Tulunada Surya
ಉಡುಪಿ: ಮಲ್ಪೆ ಬಂದರಿನಲ್ಲಿ ಲಂಗರು ಹಾಕಲಾಗಿದ್ದ ಮೀನುಗಾರಿಕಾ ಬೋಟೊಂದರ ಕ್ಯಾಬಿನ್ನಲ್ಲಿ ಮೀನುಗಾರ ಕಾರ್ಮಿಕರಿಬ್ಬರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಚೂರಿ ಇರಿತಕ್ಕೊಳಗಾದ ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ಮಂಗಳವಾರ ಬೆಳಗಿನ ಜಾವ ನಡೆದಿದೆ. ಮೃತರನ್ನು ಚಿಕ್ಕಮಗಳೂರು ಮೂಲದ ಅಭಿಷೇಕ್ ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದ ಎಂಬಾತನನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಸೋಮವಾರ ರಾತ್ರಿ ಬೋಟಿನಲ್ಲಿ ಗೋವಿಂದ ಹಾಗೂ ಅಭಿಷೇಕ್ ನಡುವೆ ಗಲಾಟೆ ನಡೆದಿತ್ತು. ಇದೇ ವಿಚಾರ ಮುಂದುವರಿದು ಮಂಗಳವಾರ ಬೆಳಗಿನ ಜಾವ ಇಬ್ಬರ ನಡುವೆ ಮತ್ತೆ ಸಂಘರ್ಷ ಉಂಟಾಗಿದ್ದು, ಈ ವೇಳೆ ಗೋವಿಂದ ಅಭಿಷೇಕ್ಗೆ ಚೂರಿಯಿಂದ ಇರಿದಿದ್ದಾನೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಅಭಿಷೇಕ್ ಮೃತಪಟ್ಟ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದನು. ಘಟನೆ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆ ಮಲ್ಪೆ ಪೊಲೀಸ್ ಠಾಣೆಯ ಅನೀಲ್ ಕುಮಾರ್ ಡಿ. ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಆದರ್ಶ ಮತ್ತು ಕುಬೇರ ಕಾರ್ಯಪ್ರವೃತ್ತರಾಗಿ, ಆರೋಪಿಯ ಪತ್ತೆಗೆ ತಕ್ಷಣ ಕಾರ್ಯಾಚರಣೆ ಆರಂಭಿಸಿದರು. ಪೊಲೀಸರ ತನಿಖೆಯಲ್ಲಿ ಆರೋಪಿ ಗೋವಿಂದ…
ಮಂಗಳೂರು: ಕಳೆದ 36 ವರ್ಷಗಳಿಂದ ಸಾರ್ವಜನಿಕರು ಹಾಗೂ ಕ್ರೀಡಾ ವಿದ್ಯಾರ್ಥಿಗಳಿಂದ ಮಂಗಳಾ ಸ್ವಿಮ್ಮಿಂಗ್ ಕ್ಲಬ್ ಸಂಗ್ರಹಿಸಿರುವ ಹಣದ ಹಣಕಾಸು ವ್ಯವಹಾರಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಕ್ಲಬ್ನ ಮಾಜಿ ಕಾರ್ಯದರ್ಶಿ ಆರ್. ಧನರಾಜ್ ಆಗ್ರಹಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳಾ ಸ್ವಿಮ್ಮಿಂಗ್ ಕ್ಲಬ್ 1990ರವರೆಗೆ ಸಹಕಾರ ಸಂಘಗಳ ಉಪನಿಬಂಧಕರ ಕಚೇರಿಯಲ್ಲಿ ನೋಂದಣಿಯಾಗಿತ್ತು. ಬಳಿಕ ಕ್ಲಬ್ನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮಕ್ಕಳಿಂದ ಮತ್ತು ಸಾರ್ವಜನಿಕರಿಂದ ವಿವಿಧ ರೂಪದಲ್ಲಿ ಹಣ ಸಂಗ್ರಹಿಸುತ್ತಿದ್ದು, ಈ ಹಣದ ಸಮರ್ಪಕ ಲೆಕ್ಕಪತ್ರ ನಿರ್ವಹಿಸಲಾಗಿಲ್ಲ ಎಂಬ ಗಂಭೀರ ಆರೋಪ ಮಾಡಿದರು. ಕಳೆದ 36 ವರ್ಷಗಳ ಅವಧಿಯಲ್ಲಿ ಸುಮಾರು ₹5 ಕೋಟಿಗೂ ಅಧಿಕ ಹಣ ಸಂಗ್ರಹವಾಗಿರುವ ಸಾಧ್ಯತೆಯಿದ್ದು, ಈ ಹಣದ ಬಳಕೆ ಹಾಗೂ ಹಣಕಾಸು ವ್ಯವಹಾರಗಳ ಬಗ್ಗೆ ಪಾರದರ್ಶಕತೆ ಅಗತ್ಯವಾಗಿದೆ ಎಂದು ಧನರಾಜ್ ಹೇಳಿದರು. ಕ್ಲಬ್ನ ಆದಾಯ, ವೆಚ್ಚ, ಬ್ಯಾಂಕ್ ಖಾತೆಗಳು, ಶುಲ್ಕ ಸಂಗ್ರಹ ಹಾಗೂ ಇತರ ಹಣಕಾಸು ವ್ಯವಹಾರಗಳ ಕುರಿತು ಸಂಬಂಧಪಟ್ಟ ಇಲಾಖೆಗಳಿಂದ ಸ್ವತಂತ್ರ…
ಉಡುಪಿ: ಕಾಪು ತಾಲೂಕಿನ ಮುದರಂಗಡಿಯಲ್ಲಿ ನಡೆದ ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಹಾಗೂ ಮುಂಬೈ ಮೂಲದ ನಟೋರಿಯಸ್ ಗ್ಯಾಂಗ್ಸ್ಟರ್ ಅನುಜ್ ಪಾಟೀಲ್ನನ್ನು ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್ 7ರಂದು ಮುದರಂಗಡಿಯ ಸೈಂಟ್ ಕ್ಷೇವಿಯರ್ ಚರ್ಚ್ ಕಾಂಪ್ಲೆಕ್ಸ್ನಲ್ಲಿ ಪ್ರಿನ್ಸ್ ಎಂಟರ್ಪ್ರೈಸಸ್ ಮಾಲೀಕ ಡೇವಿಡ್ ಡಿಸೋಜಾ ಅವರ ತಲೆಗೆ ಪಿಸ್ತೂಲ್ನಿಂದ ಗುಂಡು ಹಾರಿಸಿ ಹತ್ಯೆ ಮಾಡಲಾಗಿತ್ತು. ಪ್ರಕರಣದ ತನಿಖೆ ನಡೆಸುತ್ತಿದ್ದ ಕುಂದಾಪುರ ಹಾಗೂ ಕೊಲ್ಲೂರು ಠಾಣೆ ಪೊಲೀಸರ ತಂಡ ಸೋಮವಾರ ಬೆಳಗ್ಗೆ ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನುಜ್ ಪಾಟೀಲ್ನನ್ನು ವಶಕ್ಕೆ ಪಡೆದಿದೆ. ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ, ಪಿಎಸ್ಐ ಆಯುಧ ಕಸಿದು ಗುಂಡಿನ ದಾಳಿ ಆರೋಪಿಯನ್ನು ಪೊಲೀಸ್ ಠಾಣೆಗೆ ಕರೆತರುತ್ತಿದ್ದ ಸಂದರ್ಭದಲ್ಲಿ ಆತ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ, ಕೊಲ್ಲೂರು ಠಾಣೆ ಪಿಎಸ್ಐ ವಿನಯ್ ಅವರ ಸರ್ವಿಸ್ ಆಯುಧವನ್ನು ಕಸಿದುಕೊಂಡು ಗುಂಡು ಹಾರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ವೇಳೆ ಆತ್ಮರಕ್ಷಣೆಗಾಗಿ ಕುಂದಾಪುರ ಪಿಎಸ್ಐ ನಂಜ ನಾಯಕ್…
ಬ್ರಹ್ಮಾವರ: ಹುಟ್ಟಿನಿಂದ ಬದುಕಿನ ಕೊನೆಯ ಕ್ಷಣದವರೆಗೆ ಪ್ರತಿಯೊಂದು ಕ್ಷಣವೂ ಸ್ಮರಣೀಯವಾಗಿರುವುದಿಲ್ಲ. ಆದರೆ ಬದುಕಿನಲ್ಲಿ ದೊರೆಯುವ ಕೆಲವು ಅವಕಾಶಗಳು ಹಾಗೂ ಸಂದರ್ಭಗಳು ಆ ಕ್ಷಣಗಳನ್ನು ಅವಿಸ್ಮರಣೀಯವಾಗಿಸುತ್ತವೆ. ಅಂತಹ ಅವಿಸ್ಮರಣೀಯ ಕ್ಷಣಗಳಿಗೆ ಸಾಕ್ಷಿಯಾದ ಕಾರ್ಯಕ್ರಮವೇ ತುಳುನಾಡು ರಕ್ಷಣಾ ವೇದಿಕೆ (ರಿ.) ಉಡುಪಿ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಲಾಗಿದ್ದ ‘ಆಟಿಡೊಂಜಿ ದಿನ’ದ ‘ಆಟಿದ ಐಸಿರಿ’ ಸಾಂಸ್ಕೃತಿಕ ಕಲಾ ವೈಭವ ಎಂದು ತುಳುನಾಡು ರಕ್ಷಣಾ ವೇದಿಕೆಯ ಮುಖಂಡರು ಅಭಿಪ್ರಾಯಪಟ್ಟರು. ಇತ್ತೀಚೆಗೆ ನಡೆದ ಉಡುಪಿ ಜಿಲ್ಲಾ ಘಟಕದ ‘ಆಟಿಡೊಂಜಿ ದಿನ’ ಕಾರ್ಯಕ್ರಮದಲ್ಲಿ ತುಳುನಾಡು ರಕ್ಷಣಾ ವೇದಿಕೆ (ರಿ.) ಬ್ರಹ್ಮಾವರ ತಾಲೂಕು ಘಟಕದ ವತಿಯಿಂದ ‘ಆಟಿದ ಐಸಿರಿ’ ಎಂಬ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮವನ್ನು ಪ್ರಸ್ತುತಪಡಿಸಲಾಗಿತ್ತು. ತುಳುನಾಡಿನ ಸಂಸ್ಕೃತಿ, ಆಚಾರ–ವಿಚಾರ, ಜನಪದ ಕಲೆ ಹಾಗೂ ಪರಂಪರೆಯನ್ನು ಪರಿಚಯಿಸುವಲ್ಲಿ ಕಾರ್ಯಕ್ರಮ ಯಶಸ್ವಿಯಾಗಿತ್ತು. ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದ ಬ್ರಹ್ಮಾವರ ತಾಲೂಕು ಘಟಕದ ಪ್ರತಿಯೊಬ್ಬ ಸದಸ್ಯರನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ವಿಶೇಷ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ತಾಲೂಕು ಘಟಕದ ಅಧ್ಯಕ್ಷರಾದ ಶರತ್ ರಾಜ್ ಆರೂರು ಅವರ…
ಮಂಗಳೂರು, ಆ.22: ಪಾರ್ಶ್ವವಾಯು (ಸ್ಟ್ರೋಕ್) ಎಂದರೆ ವಯಸ್ಸಾದವರಿಗಷ್ಟೇ ಬರುವ ಕಾಯಿಲೆ ಎಂಬ ಸಾಮಾನ್ಯ ಕಲ್ಪನೆ ಬದಲಾಗಬೇಕಿದೆ. ಇತ್ತೀಚಿನ ದಿನಗಳಲ್ಲಿ 30ರಿಂದ 50 ವರ್ಷದೊಳಗಿನ ಯುವ ವಯಸ್ಕರಲ್ಲೂ ಸ್ಟ್ರೋಕ್ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಕೆಎಂಸಿ ಆಸ್ಪತ್ರೆ ಮಂಗಳೂರಿನ ತಜ್ಞ ವೈದ್ಯರು ಎಚ್ಚರಿಸಿದ್ದಾರೆ. ಸ್ಟ್ರೋಕ್ ಆರೈಕೆಯಲ್ಲಿ 30 ವರ್ಷಗಳ ಸೇವೆಯನ್ನು ಪೂರೈಸಿದ ಹಿನ್ನೆಲೆಯಲ್ಲಿ ಕೆಎಂಸಿ ಆಸ್ಪತ್ರೆ ಮಂಗಳೂರಿನ ಸಮಗ್ರ ಸ್ಟ್ರೋಕ್ ಸಿದ್ಧತಾ ಘಟಕದ ವತಿಯಿಂದ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ನರವಿಜ್ಞಾನ, ನರಶಸ್ತ್ರಚಿಕಿತ್ಸೆ, ಇಂಟರ್ವೆನ್ಷನಲ್ ನ್ಯೂರೋರೇಡಿಯಾಲಜಿ, ಕ್ರಿಟಿಕಲ್ ಕೇರ್, ತುರ್ತು ವೈದ್ಯಕೀಯ ಹಾಗೂ ಪುನರ್ವಸತಿ ವಿಭಾಗಗಳ ತಜ್ಞರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಸ್ಟ್ರೋಕ್ನ ಲಕ್ಷಣಗಳನ್ನು ಆರಂಭಿಕ ಹಂತದಲ್ಲೇ ಗುರುತಿಸುವುದು ಮತ್ತು ವಿಳಂಬವಿಲ್ಲದೆ ಚಿಕಿತ್ಸೆ ಪಡೆಯುವ ಅಗತ್ಯವನ್ನು ವಿವರಿಸಿದರು. ಕಳೆದ ಮೂರು ದಶಕಗಳಲ್ಲಿ ಕೆಎಂಸಿ ಆಸ್ಪತ್ರೆಯ ತಂಡವು 25 ಸಾವಿರಕ್ಕೂ ಅಧಿಕ ಸ್ಟ್ರೋಕ್ ಪ್ರಕರಣಗಳಿಗೆ ಚಿಕಿತ್ಸೆ ನೀಡಿದೆ. ನರವಿಜ್ಞಾನ, ನರಶಸ್ತ್ರಚಿಕಿತ್ಸೆ, ಇಂಟರ್ವೆನ್ಷನಲ್ ರೇಡಿಯಾಲಜಿ, ನ್ಯೂರೋ-ಐಸಿಯು, ತುರ್ತು ವೈದ್ಯಕೀಯ ಹಾಗೂ ನ್ಯೂರೋ-ರಿಹ್ಯಾಬಿಲಿಟೇಶನ್ ಸೇರಿದಂತೆ ವಿವಿಧ ವಿಭಾಗಗಳ ಸಮನ್ವಯದೊಂದಿಗೆ…
ಕುಂದಾಪುರ: ಕರ್ತವ್ಯ ನಿರ್ವಹಿಸುತ್ತಿದ್ದ ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಅವರ ಮೇಲೆ ಹಲ್ಲೆ ನಡೆದಿದೆ ಎನ್ನಲಾದ ಘಟನೆಗೆ ಉಡುಪಿ ಪತ್ರಕರ್ತರ ಸಂಘ ತೀವ್ರ ಆಕ್ರೋಶ ಹಾಗೂ ಖಂಡನೆ ವ್ಯಕ್ತಪಡಿಸಿದೆ. ಪತ್ರಕರ್ತರ ಮೇಲೆ ಯಾವುದೇ ರೀತಿಯ ದೌರ್ಜನ್ಯ, ಬೆದರಿಕೆ ಅಥವಾ ಹಲ್ಲೆ ನಡೆಸುವ ಕೃತ್ಯವನ್ನು ಸಹಿಸಲು ಸಾಧ್ಯವಿಲ್ಲ ಎಂದು ಸಂಘ ಸ್ಪಷ್ಟಪಡಿಸಿದೆ. ಕುಂದಾಪುರದಲ್ಲಿ ನಡೆದ ಈ ಘಟನೆಗೆ ಸಂಬಂಧಿಸಿದಂತೆ ವೈದ್ಯಾಧಿಕಾರಿ ಡಾ. ಮಹೇಂದ್ರ ಶೆಟ್ಟಿ ಅವರ ವಿರುದ್ಧ ಹಲ್ಲೆಯ ಆರೋಪ ಕೇಳಿಬಂದಿದ್ದು, ಘಟನೆ ಕುರಿತು ಪೊಲೀಸರು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಉಡುಪಿ ಪತ್ರಕರ್ತರ ಸಂಘ ಒತ್ತಾಯಿಸಿದೆ. ಪತ್ರಕರ್ತರು ಸಮಾಜದ ಆಗುಹೋಗುಗಳನ್ನು ಜನರಿಗೆ ತಲುಪಿಸುವ ಜವಾಬ್ದಾರಿಯುತ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಾರ್ವಜನಿಕ ಸೇವೆಯಲ್ಲಿರುವ ಅಧಿಕಾರಿಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿರುವ ವ್ಯಕ್ತಿಗಳ ಕುರಿತು ವರದಿ ಮಾಡುವ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಭಿನ್ನಾಭಿಪ್ರಾಯಗಳು ಉಂಟಾಗಬಹುದು. ಆದರೆ ಯಾವುದೇ ಭಿನ್ನಾಭಿಪ್ರಾಯಕ್ಕೆ ಹಲ್ಲೆ ಅಥವಾ ದೌರ್ಜನ್ಯ ಉತ್ತರವಾಗಬಾರದು. ಕಾನೂನುಬದ್ಧ ಮಾರ್ಗದಲ್ಲಿ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕು ಎಂದು ಸಂಘ ತಿಳಿಸಿದೆ. ಪತ್ರಕರ್ತ ಶ್ರೀಕಾಂತ್…
ಉಡುಪಿ/ಬ್ರಹ್ಮಾವರ: ಆರೂರು ಗ್ರಾಮದ ಅಡ್ಜಿಲು ಭಾಗದಲ್ಲಿ ಪದೇಪದೇ ಉಂಟಾಗುತ್ತಿರುವ ವಿದ್ಯುತ್ ವ್ಯತ್ಯಯಕ್ಕೆ ಶಾಶ್ವತ ಪರಿಹಾರ ಒದಗಿಸುವಂತೆ ತುಳುನಾಡು ರಕ್ಷಣಾ ವೇದಿಕೆ (ರಿ.) ಉಡುಪಿ ಜಿಲ್ಲೆ, ಬ್ರಹ್ಮಾವರ ತಾಲೂಕು ಘಟಕದ ವತಿಯಿಂದ ಸಲ್ಲಿಸಲಾಗಿದ್ದ ಮನವಿಗೆ ಮೆಸ್ಕಾಂ ಅಧಿಕಾರಿಗಳು ಸ್ಪಂದಿಸಿದ್ದಾರೆ. ಅಡ್ಜಿಲು ಭಾಗದಲ್ಲಿ ಸುಮಾರು 100ರಿಂದ 150ಕ್ಕೂ ಹೆಚ್ಚು ಮನೆಗಳು ಇರುವುದರಿಂದ ಪ್ರಸ್ತುತ ವಿದ್ಯುತ್ ಪರಿವರ್ತಕದ (ಟಿಸಿ) ಮೇಲೆ ಹೆಚ್ಚಿನ ಒತ್ತಡ ಉಂಟಾಗುತ್ತಿದೆ. ಇದರಿಂದ ಕಳೆದ ಮೂರು ವರ್ಷಗಳಿಂದ ಪದೇಪದೇ ವಿದ್ಯುತ್ ವ್ಯತ್ಯಯ ಉಂಟಾಗುತ್ತಿದ್ದು, ಗ್ರಾಮಸ್ಥರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಒಂದು ತಿಂಗಳ ಹಿಂದೆ ತುಳುನಾಡು ರಕ್ಷಣಾ ವೇದಿಕೆ ವತಿಯಿಂದ ಮೆಸ್ಕಾಂ ಬ್ರಹ್ಮಾವರ ಅಧಿಕಾರಿಗಳಿಗೆ ಹೊಸ ಟಿಸಿ ಅಳವಡಿಸುವಂತೆ ಮನವಿ ಸಲ್ಲಿಸಲಾಗಿತ್ತು. ಮನವಿಗೆ ಸ್ಪಂದಿಸಿದ ಮೆಸ್ಕಾಂ ಬ್ರಹ್ಮಾವರ ಕಾರ್ಯ ಮತ್ತು ಪಾಲನಾ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸತೀಶ್ ಅವರು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ವಿದ್ಯುತ್ ಸಮಸ್ಯೆಯನ್ನು ಪರಿಶೀಲಿಸಿದರು. ಅಡ್ಜಿಲು ಭಾಗದ ವಿದ್ಯುತ್ ಬೇಡಿಕೆ ಹಾಗೂ ಮನೆಗಳ ಸಂಖ್ಯೆಯನ್ನು ಪರಿಗಣಿಸಿ…
ಮಂಗಳೂರು: ಅಂತರರಾಷ್ಟ್ರೀಯ ಬಂಟ್ಸ್ ವೆಲ್ಫೇರ್ ಟ್ರಸ್ಟ್ (ರಿ.), ಮಂಗಳೂರು ಇದರ ವತಿಯಿಂದ ಆಗಸ್ಟ್ 23ರಂದು ಆದಿತ್ಯವಾರ ಗ್ರ್ಯಾಂಡ್ ಬೇ ಮರಾವೂರು ಇಲ್ಲಿ ಬೆಳಿಗ್ಗೆ 8ರಿಂದ ರಾತ್ರಿ 9ರವರೆಗೆ “ಮರಿಯಾಳದ ಮಿನದನ” ಕಾರ್ಯಕ್ರಮ/ಸಮಾರಂಭ ನಡೆಯಲಿದೆ. ಈ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಹೋಟೆಲ್ ಕುಡ್ಲ ಪೆವಿಲಿಯನ್ ಸಭಾಂಗಣದಲ್ಲಿ ಕಾರ್ಯಾಧ್ಯಕ್ಷ ದೇವಿ ಚರಣ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಆಗಸ್ಟ್ 23ರಂದು ಬೆಳಿಗ್ಗೆ 9 ಗಂಟೆಗೆ ಡಾ. ಅತ್ತೂರು ಸದಾನಂದ ಶೆಟ್ಟಿ ಹಾಗೂ ಪದ್ಮಚಿತ್ತರಂಜನ್ ರೈ ದಂಪತಿಗಳು “ಮರಿಯಾಳದ ಮಿನದನ” ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ವಿವಿಧ ಕ್ರೀಡೆಗಳು ಹಾಗೂ ಸ್ಪರ್ಧೆಗಳು ನಡೆಯಲಿವೆ. ಸಂಜೆ 5 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಟ್ರಸ್ಟ್ನ ಸಂಸ್ಥಾಪಕಾಧ್ಯಕ್ಷ ಡಾ. ಅತ್ತೂರು ಸದಾನಂದ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಡಾ. ಮೋಹನ್ ಆಳ್ವ ಅವರು ದೀಪ ಪ್ರಜ್ವಲನೆ ನೆರವೇರಿಸಲಿದ್ದಾರೆ. ಗೌರವಾನ್ವಿತ ಅತಿಥಿಗಳು:ಶಶಿಧರ ಶೆಟ್ಟಿ ಬರೋಡಾ, ಮುಖ್ಯ ಅತಿಥಿಗಳಾಗಿ ಶ್ರೀ ಪಾದೆ ಅಜಿತ್ ರೈ, ಕರುಣಾಕರ ಎಂ. ಶೆಟ್ಟಿ, ಅಜಿತ್ ಹೆಗ್ಡೆ, ವೇಣುಗೋಪಾಲ…
ಬೆಂಗಳೂರು: ಪ್ರತಿಷ್ಠಿತ ಔಷಧಿ ಕಂಪನಿಗಳ ಹೆಸರನ್ನು ದುರ್ಬಳಕೆ ಮಾಡಿಕೊಂಡು ನಕಲಿ ಔಷಧಿಗಳನ್ನು ಮರುಪ್ಯಾಕಿಂಗ್ ಮಾಡಿ ಮಾರುಕಟ್ಟೆಗೆ ಪೂರೈಸುತ್ತಿದ್ದ ಆರೋಪದ ಮೇಲೆ ಬೆಂಗಳೂರು ದಕ್ಷಿಣ ತಾಲೂಕಿನ ಸಿ.ಕೆ. ತಾಂಡ್ಯ ಸಮೀಪದ ಫಾರ್ಮ್ಹೌಸ್ವೊಂದರ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಯಾವುದೇ ಅಗತ್ಯ ಪರವಾನಗಿ ಇಲ್ಲದೆ ನಡೆಯುತ್ತಿದ್ದ ಈ ಅಕ್ರಮ ಘಟಕದಲ್ಲಿ ಸುಮಾರು ₹5 ಕೋಟಿ ಮೌಲ್ಯದ ಔಷಧಿಗಳು ಹಾಗೂ ವಿವಿಧ ಸಾಮಗ್ರಿಗಳನ್ನು ಜಪ್ತಿ ಮಾಡಲಾಗಿದೆ. ಆಹಾರ ಸುರಕ್ಷತೆ ಮತ್ತು ಔಷಧಿ ಆಡಳಿತ ಇಲಾಖೆ ಹಾಗೂ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಅಕ್ರಮ ಜಾಲದ ಕಾರ್ಯವೈಖರಿ ಬೆಳಕಿಗೆ ಬಂದಿದೆ. ಸ್ಥಳೀಯರಿಂದ ಫಾರ್ಮ್ಹೌಸ್ನ್ನು ಗುತ್ತಿಗೆಗೆ ಪಡೆದಿದ್ದ ಪ್ರಶಾಂತ್ ಎಂಬಾತ ಕಳೆದ ಒಂದು ವರ್ಷದಿಂದ ಈ ದಂಧೆ ನಡೆಸುತ್ತಿದ್ದ ಎನ್ನಲಾಗಿದೆ. ಕಡಿಮೆ ಬೆಲೆಯ ಔಷಧಿಗೆ ದುಬಾರಿ ಕಂಪನಿಯ ಲೇಬಲ್ ತೆಲಂಗಾಣ ಮತ್ತು ಹಿಮಾಚಲ ಪ್ರದೇಶದಿಂದ ಕಡಿಮೆ ಬೆಲೆಗೆ ಔಷಧಿಗಳನ್ನು ತರಿಸಿಕೊಂಡು, ಅವುಗಳ ಮೇಲೆ ಪ್ರತಿಷ್ಠಿತ ಬಹುರಾಷ್ಟ್ರೀಯ ಕಂಪನಿಗಳ ಹೆಸರಿನ ನಕಲಿ ಲೇಬಲ್ಗಳನ್ನು ಅಂಟಿಸಿ ಮರುಪ್ಯಾಕಿಂಗ್ ಮಾಡಲಾಗುತ್ತಿತ್ತು ಎನ್ನಲಾಗಿದೆ. ಅಧಿಕಾರಿಗಳ…
ತುಳುನಾಡು ರಕ್ಷಣಾ ವೇದಿಕೆ (ರಿ.) ಉಡುಪಿ ಜಿಲ್ಲಾ ಘಟಕದ ವತಿಯಿಂದ ಉಡುಪಿಯ ಬ್ರಹ್ಮಗಿರಿ ಲಯನ್ಸ್ ಭವನದಲ್ಲಿ ಆಯೋಜಿಸಿದ್ದ ‘ಆಟಿಡೊಂಜಿ ದಿನ’ ಕಾರ್ಯಕ್ರಮವು ತುಳುನಾಡಿನ ಸಾಂಸ್ಕೃತಿಕ ವೈಭವವನ್ನು ಅನಾವರಣಗೊಳಿಸುವ ಮೂಲಕ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆ 9 ಗಂಟೆಗೆ ಸಾಂಸ್ಕೃತಿಕ ಮೆರವಣಿಗೆ ನಡೆಯಿತು. ಉಪ್ಪೂರು ಗ್ರಾಮ ಪಂಚಾಯತ್ ಅಧ್ಯಕ್ಷ ಎನ್. ರಮೇಶ್ ಶೆಟ್ಟಿ ಉಪ್ಪೂರು ಅವರು ಧ್ವಜ ಹಸ್ತಾಂತರಿಸುವ ಮೂಲಕ ಮೆರವಣಿಗೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವಿಲ್ಸನ್ ಫೆರ್ನಾಂಡಿಸ್ ಹಾಗೂ ಯೋಗಿಶ್ ಶೆಟ್ಟಿ ಬಾಲಾಜಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮವು ತುಳುನಾಡು ರಕ್ಷಣಾ ವೇದಿಕೆ (ರಿ.) ಉಡುಪಿ ಜಿಲ್ಲಾ ಅಧ್ಯಕ್ಷ ಫ್ರ್ಯಾಂಕಿ ಡಿಸೋಜ ಕೊಳಲಗಿರಿ ಅವರ ಅಧ್ಯಕ್ಷತೆಯಲ್ಲಿ ಆಗಸ್ಟ್ 16ರಂದು ಕಾರ್ಯಕ್ರಮ ನಡೆಯಿತು. ತುಳುನಾಡಿನ ಸಂಸ್ಕೃತಿ, ಸಂಸ್ಕಾರ, ಆಚಾರ–ವಿಚಾರ, ಜಾನಪದ ಕಲೆಗಳು ಹಾಗೂ ವಿಶಿಷ್ಟ ಜೀವನ ಪದ್ಧತಿಗಳು ಇಡೀ ದೇಶವೇ ಹೆಮ್ಮೆಪಡುವಂತಹ ಶ್ರೀಮಂತ ಪರಂಪರೆಯಾಗಿದೆ. ಪೂರ್ವಜರಿಂದ ಬಳುವಳಿಯಾಗಿ ಬಂದಿರುವ ಈ ಅಮೂಲ್ಯ ಸಾಂಸ್ಕೃತಿಕ…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
