Author: Tulunada Surya

ಮಾಜಿ ಪ್ರಧಾನಮಂತ್ರಿ ಹಾಗೂ ಜನತಾದಳ (ಜಾತ್ಯತೀತ)ದ ಹಿರಿಯ ರಾಷ್ಟ್ರ ನಾಯಕ ಎಚ್.ಡಿ. ದೇವೇಗೌಡ ಅವರ ಕುಟುಂಬದ ಹಿರಿಯ ಸದಸ್ಯೆ ಶ್ರೀಮತಿ ಚೆನ್ನಮ್ಮ ದೇವೇಗೌಡ ಅವರ ಅಗಲಿಕೆಯ ಸುದ್ದಿ ಮನಸ್ಸಿಗೆ ಅಪಾರ ನೋವನ್ನುಂಟು ಮಾಡಿದೆ. ಒಂದು ರಾಜಕೀಯ ಕುಟುಂಬದ ಯಶಸ್ಸಿನ ಹಿಂದೆ ವೇದಿಕೆಯ ಮೇಲೆ ಕಾಣಿಸಿಕೊಳ್ಳದ ಅನೇಕ ಮಹನೀಯರ ತ್ಯಾಗ, ಸಹನೆ ಮತ್ತು ಆಶೀರ್ವಾದ ಅಡಗಿರುತ್ತವೆ. ಅಂತಹ ಅಪರೂಪದ ವ್ಯಕ್ತಿತ್ವಗಳಲ್ಲಿ ಶ್ರೀಮತಿ ಚೆನ್ನಮ್ಮ ಅವರು ಪ್ರಮುಖರು. ಅವರು ಅಧಿಕಾರ, ಪ್ರಚಾರ ಅಥವಾ ಹುದ್ದೆಗಳಿಗಾಗಿ ಬದುಕಿದವರಲ್ಲ. ಕುಟುಂಬದ ಏಕತೆ, ಸಂಸ್ಕಾರ, ಮಾನವೀಯತೆ ಮತ್ತು ಸೇವೆಯ ಮೌಲ್ಯಗಳನ್ನು ತಮ್ಮ ಬದುಕಿನ ಮೂಲಕ ಸಾರಿದ ಆದರ್ಶ ಮಹಿಳೆಯಾಗಿದ್ದರು. ದೇವೇಗೌಡರು ರಾಷ್ಟ್ರ ರಾಜಕೀಯದಲ್ಲಿ ಅನೇಕ ಸವಾಲುಗಳನ್ನು ಎದುರಿಸಿ ದೇಶದ ಪ್ರಧಾನಮಂತ್ರಿಯಾಗಿ ಸೇವೆ ಸಲ್ಲಿಸುವವರೆಗಿನ ಪಯಣದಲ್ಲಿ, ಕುಟುಂಬದೊಳಗೆ ಧೈರ್ಯ, ಸ್ಥೈರ್ಯ ಮತ್ತು ನೈತಿಕ ಶಕ್ತಿಯನ್ನು ತುಂಬಿದ ಮಹಾನ್ ವ್ಯಕ್ತಿತ್ವ ಚೆನ್ನಮ್ಮ ಅವರದು. ಸಾರ್ವಜನಿಕ ಜೀವನದಲ್ಲಿ ಕಾಣಿಸದಿದ್ದರೂ, ಅವರ ತ್ಯಾಗ ಮತ್ತು ಮೌನ ಸೇವೆ ದೇವೇಗೌಡ ಕುಟುಂಬದ ಬಲಿಷ್ಠ ಅಡಿಪಾಯವಾಗಿತ್ತು. ಇಂದಿನ…

Read More

ಧಾರವಾಡ, ಜುಲೈ 19: ಧಾರವಾಡ ಜಿಲ್ಲೆಯ ಅಳ್ನಾವರ ಸಮೀಪದ ಕಸ್ತೂರಬಾ ಬಾಲಕಿಯರ ವಸತಿ ಶಾಲೆಯಲ್ಲಿ 34 ವಿದ್ಯಾರ್ಥಿನಿಯರು ಏಕಾಏಕಿ ಅಸ್ವಸ್ಥಗೊಂಡಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ವಿದ್ಯಾರ್ಥಿನಿಯರು 10 ರಿಂದ 15 ನಿಮಿಷಗಳಿಗೊಮ್ಮೆ ಒದ್ದಾಡುವುದು, ಚೀರಾಡುವುದು ಹಾಗೂ ಅಸಹಜವಾಗಿ ವರ್ತಿಸುವಂತಹ ಲಕ್ಷಣಗಳನ್ನು ತೋರಿಸುತ್ತಿದ್ದು, ಪೋಷಕರು ಮತ್ತು ಸ್ಥಳೀಯರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.ಪ್ರಾಥಮಿಕ ವೈದ್ಯಕೀಯ ಮಾಹಿತಿಯ ಪ್ರಕಾರ, ವೈರಲ್ ಜ್ವರದ ಹಿನ್ನೆಲೆಯಲ್ಲೇ ಈ ಲಕ್ಷಣಗಳು ಕಾಣಿಸಿಕೊಂಡಿರುವ ಸಾಧ್ಯತೆ ಇದ್ದು, ಇನ್‌ಫ್ಲೂಯೆನ್ಸಾ A ಮತ್ತು B ಸೋಂಕು ಇರಬಹುದೆಂಬ ಶಂಕೆ ವ್ಯಕ್ತವಾಗಿದೆ. ಸೋಂಕಿತ ವಿದ್ಯಾರ್ಥಿನಿಯರ ಪೈಕಿ 8 ಮಂದಿಯ ಆರೋಗ್ಯ ಸ್ಥಿತಿ ಗಂಭೀರವಾಗಿರುವುದರಿಂದ ಅವರನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ತಜ್ಞ ವೈದ್ಯರ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ ಕೆಲ ವಿದ್ಯಾರ್ಥಿನಿಯರಿಗೆ ಅಳ್ನಾವರ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.ಆಸ್ಪತ್ರೆಯಲ್ಲಿಯೂ ವಿದ್ಯಾರ್ಥಿನಿಯರು ಒದ್ದಾಡುವುದು ಹಾಗೂ ಚೀರಾಡುತ್ತಿರುವ ದೃಶ್ಯಗಳು ಪೋಷಕರ ಆತಂಕವನ್ನು ಮತ್ತಷ್ಟು ಹೆಚ್ಚಿಸಿವೆ. ಮಕ್ಕಳ ಆರೋಗ್ಯದ ಬಗ್ಗೆ ನಿಖರ ಮಾಹಿತಿ ನೀಡುವಂತೆ ಪೋಷಕರು ಅಧಿಕಾರಿಗಳನ್ನು ಒತ್ತಾಯಿಸುತ್ತಿದ್ದಾರೆ.ಘಟನೆಯ ಬೆನ್ನಲ್ಲೇ ವಸತಿ…

Read More

ಉಡುಪಿ ಜಿಲ್ಲೆ 317 ಡಿ 2025-26ನೇ ಸಾಲಿನ ಜಿಲ್ಲಾ ರಾಜ್ಯಪಾಲರಾದ ಶ್ರೀ ಅರವಿಂದ್ ಶೆಣೈ ಅವರು 2026-27ನೇ ಸಾಲಿನ ಜಿಲ್ಲಾ ರಾಜ್ಯಪಾಲರಾದ ತಾರಾನಾಥ್ ಎಚ್.ಎಂ ಅವರಿಗೆ ಜಿಲ್ಲಾ ಕಚೇರಿಯಲ್ಲಿ ಅಧಿಕಾರ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಪ್ರಥಮ ಉಪರಾಜ್ಯಪಾಲ ಗೋವರ್ಧನ್ ಶೆಟ್ಟಿ, ದ್ವಿತೀಯ ಉಪರಾಜ್ಯಪಾಲ ವೆಂಕಟೇಶ್ ಹೆಬ್ಬಾರ್, ನಿಕಟಪೂರ್ವ ಕೋಶಾಧಿಕಾರಿ ಬಾಲಕೃಷ್ಣ ಹೆಗಡೆ, ನಿಕಟಪೂರ್ವ ಪಿ.ಆರ್.ಒ. ಸುಧರ್ಶನ್ ಪಡಿಯಾರ್ ವಿಟ್ಲ, ನಿಕಟಪೂರ್ವ ಹೆಚ್ಚುವರಿ ಕಾರ್ಯದರ್ಶಿ ಚಂದ್ರಹಾಸ ರೈ ಹಾಗೂ ಪ್ರಥಮ ಮಹಿಳಾ ಸಭಿತಾ ತಾರಾನಾಥ್ ಉಪಸ್ಥಿತರಿದ್ದರು.

Read More

ಬೆಂಗಳೂರು, ಜುಲೈ 19: ಮಾಜಿ ಪ್ರಧಾನಮಂತ್ರಿ ಹಾಗೂ ಜನತಾದಳ (ಜಾತ್ಯತೀತ)ದ ರಾಷ್ಟ್ರೀಯ ನಾಯಕ ಎಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ಶ್ರೀಮತಿ ಚೆನ್ನಮ್ಮ ದೇವೇಗೌಡ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ಸೂಚಿಸಿ, ಕುಟುಂಬದ ದುಃಖದಲ್ಲಿ ಭಾಗಿಯಾಗಿದ್ದಾರೆ. ಶ್ರೀಮತಿ ಚೆನ್ನಮ್ಮ ದೇವೇಗೌಡ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣ ‘ಎಕ್ಸ್’ ಮೂಲಕ ಭಾವುಕ ಸಂತಾಪ ಸಂದೇಶ ಪ್ರಕಟಿಸಿದರು. ತಮ್ಮ ಸಂದೇಶದಲ್ಲಿ, ಚೆನ್ನಮ್ಮ ದೇವೇಗೌಡ ಅವರ ಅಗಲಿಕೆಯಿಂದ ಉಂಟಾಗಿರುವ ನೋವಿಗೆ ಸಂತಾಪ ಸೂಚಿಸಿ, ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಾಗೂ ಕುಟುಂಬದ ಸದಸ್ಯರಿಗೆ ಈ ದುಃಖವನ್ನು ಭರಿಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಿದರು. ಬಳಿಕ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ, ಚೆನ್ನಮ್ಮ ದೇವೇಗೌಡ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಪುಷ್ಪನಮನ ಸಲ್ಲಿಸಿದರು. ಬಳಿಕ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರೊಂದಿಗೆ ಕೆಲಕಾಲ ಕುಳಿತು ಮಾತನಾಡಿದ ಅವರು, ದೇವೇಗೌಡರ ಕೈಹಿಡಿದು…

Read More

ಮಂಗಳೂರು, ಜುಲೈ 18: ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಪ್ರಧಾನಮಂತ್ರಿ ಹಾಗೂ ಜನತಾದಳ (ಜಾತ್ಯತೀತ)ದ ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ. ದೇವೇಗೌಡ ಅವರ ಕುಟುಂಬದ ಹಿರಿಯ ಸದಸ್ಯೆ ಶ್ರೀಮತಿ ಚೆನ್ನಮ್ಮ ದೇವೆಗೌಡ ಅವರ ನಿಧನದ ಸುದ್ದಿ ಅತ್ಯಂತ ದುಃಖಕರವಾಗಿದೆ. ಅವರ ಅಗಲಿಕೆಯು ದೇವೇಗೌಡರ ಕುಟುಂಬಕ್ಕೆ ಮಾತ್ರವಲ್ಲದೆ, ಜನತಾದಳ (ಜಾತ್ಯತೀತ) ಪಕ್ಷದ ಸಮಸ್ತ ಕಾರ್ಯಕರ್ತರು ಹಾಗೂ ಅಭಿಮಾನಿಗಳಿಗೆ ಅಪಾರ ನೋವನ್ನುಂಟು ಮಾಡಿದ್ದು, ತುಂಬಲಾರದ ನಷ್ಟವಾಗಿದೆ ಎಂದು ಜನತಾದಳ (ಜಾತ್ಯತೀತ) ದಕ್ಷಿಣ ಕನ್ನಡ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಂತಾಪ ಸಂದೇಶ ನೀಡಿರುವ ಅವರು, ಶ್ರೀಮತಿ ಚೆನ್ನಮ್ಮ ದೇವೆಗೌಡ ಅವರು ಸರಳತೆ, ಸೌಜನ್ಯ, ಮಾನವೀಯ ಮೌಲ್ಯಗಳು ಹಾಗೂ ಕುಟುಂಬದ ಒಗ್ಗಟ್ಟಿನ ಪ್ರತೀಕವಾಗಿದ್ದರು. ತಮ್ಮ ಜೀವನದುದ್ದಕ್ಕೂ ಕುಟುಂಬದ ಆಧಾರಸ್ತಂಭವಾಗಿ ನಿಂತು ಉತ್ತಮ ಸಂಸ್ಕಾರ, ಸೇವಾ ಮನೋಭಾವ ಹಾಗೂ ಸಾಮಾಜಿಕ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ನೀಡಿದ ಆದರ್ಶ ವ್ಯಕ್ತಿತ್ವ ಅವರದ್ದಾಗಿತ್ತು. ಅವರ ಜೀವನ ಶೈಲಿ ಎಲ್ಲರಿಗೂ ಪ್ರೇರಣೆಯಾಗಿದ್ದು,…

Read More

ಬಂಟ್ವಾಳ, ಜುಲೈ 18: ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್‌ನಲ್ಲಿ ನಡೆದ ಯುವತಿ ಲಾವಣ್ಯ ಅವರ ಅಮಾನುಷ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ, ಜನತಾದಳ (ಜಾತ್ಯತೀತ) ದಕ್ಷಿಣ ಕನ್ನಡ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ ಅವರ ನಿರ್ದೇಶನದ ಮೇರೆಗೆ ಜೆಡಿಎಸ್ ನಿಯೋಗವು ಮೃತೆಯ ನಿವಾಸಕ್ಕೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ ದುಃಖದಲ್ಲಿ ಭಾಗಿಯಾಯಿತು. ಬಳಿಕ ನಿಯೋಗವು ಬಂಟ್ವಾಳ ಪೊಲೀಸ್ ಠಾಣೆಗೆ ತೆರಳಿ ಪೊಲೀಸ್ ನಿರೀಕ್ಷಕರಿಗೆ ಮನವಿ ಸಲ್ಲಿಸಿತು. ಈ ವೇಳೆ ಮಾತನಾಡಿದ ಜೆಡಿಎಸ್ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಯೋಗೀಶ್ ಶೆಟ್ಟಿ ಜಪ್ಪು, ಲಾವಣ್ಯ ಹತ್ಯೆ ಪ್ರಕರಣವು ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿರುವ ಅಮಾನವೀಯ ಕೃತ್ಯವಾಗಿದ್ದು, ಆರೋಪಿಯ ವಿರುದ್ಧ ಯಾವುದೇ ರೀತಿಯ ಒತ್ತಡಗಳಿಗೆ ಮಣಿಯದೆ ಸಂಪೂರ್ಣ ಪಾರದರ್ಶಕ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು. ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ವೈಜ್ಞಾನಿಕ ಸಾಕ್ಷ್ಯಾಧಾರಗಳನ್ನು ಸಮರ್ಪಕವಾಗಿ ಸಂಗ್ರಹಿಸಿ, ಶೀಘ್ರದಲ್ಲಿಯೇ ಬಲಿಷ್ಠ ದೋಷಾರೋಪಣಾ ಪತ್ರ (ಚಾರ್ಜ್‌ಶೀಟ್) ಸಲ್ಲಿಸಿ, ನ್ಯಾಯಾಲಯದಲ್ಲಿ ಸಮರ್ಥವಾಗಿ ಪ್ರಕರಣ ಮಂಡಿಸುವ ಮೂಲಕ…

Read More

ಉಡುಪಿ, ಜುಲೈ 18: ಉಡುಪಿ ಜಿಲ್ಲೆಯ ಸಂತೆಕಟ್ಟೆ ಪ್ರದೇಶದಲ್ಲಿ ಸುಮಾರು ಐವತ್ತು ವರ್ಷಗಳಿಂದ ಸಾರ್ವಜನಿಕರಿಗೆ ವಿಶಾಲವಾದ ನೆರಳು, ಶುದ್ಧ ಗಾಳಿ ಹಾಗೂ ಪರಿಸರ ಸಮತೋಲನವನ್ನು ಒದಗಿಸುತ್ತಿದ್ದ ಬೃಹತ್ ಮರವನ್ನು ಏಕಾಏಕಿ ಕಡಿದು ಹಾಕಿರುವ ಘಟನೆಗೆ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕ ತೀವ್ರ ಆಕ್ರೋಶ ಹಾಗೂ ಖಂಡನೆ ವ್ಯಕ್ತಪಡಿಸಿದೆ. ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾಧ್ಯಕ್ಷ ಪ್ರಾಂಕಿ ಡಿಸೋಜ ಕೊಳಲಗಿರಿ ಮಾತನಾಡಿ, ದಶಕಗಳಿಂದ ಸಾವಿರಾರು ಸಾರ್ವಜನಿಕರಿಗೆ ಆಶ್ರಯ ನೀಡುತ್ತಿದ್ದ, ಪರಿಸರದ ಅಮೂಲ್ಯ ಸಂಪತ್ತಾಗಿದ್ದ ಮರವನ್ನು ಯಾವುದೇ ಸ್ಪಷ್ಟ ಕಾರಣವಿಲ್ಲದೆ ಹಾಗೂ ಸಾರ್ವಜನಿಕರ ಭಾವನೆಗಳನ್ನು ಲೆಕ್ಕಿಸದೆ ಕಡಿದು ಹಾಕಿರುವುದು ಅತ್ಯಂತ ದುಃಖಕರ ಮತ್ತು ಖಂಡನೀಯ ಕೃತ್ಯವಾಗಿದೆ. ಇದು ಕೇವಲ ಒಂದು ಮರದ ನಾಶವಲ್ಲ, ಪ್ರಕೃತಿಯ ಮೇಲಿನ ಕ್ರೌರ್ಯ ಹಾಗೂ ಪರಿಸರ ಸಂರಕ್ಷಣೆಯ ಮೌಲ್ಯಗಳಿಗೆ ಮಾಡಿದ ಅಪಮಾನವಾಗಿದೆ ಎಂದು ಹೇಳಿದರು. ಇತ್ತೀಚಿನ ದಿನಗಳಲ್ಲಿ ಹವಾಮಾನ ವೈಪರೀತ್ಯ, ಅತಿಯಾದ ಉಷ್ಣಾಂಶ ಹಾಗೂ ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಸಂದರ್ಭದಲ್ಲಿ, ಹಳೆಯ ಮರಗಳನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ.…

Read More

ಉಡುಪಿ, ಜುಲೈ 18: ಮುಂಗಾರು ಮಳೆಯ ತೀವ್ರ ಕೊರತೆಯಿಂದ ಉಡುಪಿ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಬರದ ಛಾಯೆ ಆವರಿಸಿದ್ದು, ಕೃಷಿ ಚಟುವಟಿಕೆಗಳು ಸಂಪೂರ್ಣವಾಗಿ ಹಿನ್ನಡೆ ಅನುಭವಿಸುತ್ತಿವೆ. ರೈತರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯರು ಹಾಗೂ ಜೆಡಿಎಸ್ ನೆರೆ-ಬರ ಅಧ್ಯಯನ ತಂಡದ ಅಧ್ಯಕ್ಷರಾದ ಎಸ್.ಎಲ್. ಭೋಜೇಗೌಡ ಅವರು, ಜಾತ್ಯತೀತ ಜನತಾದಳ ಉಡುಪಿ ಜಿಲ್ಲಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಅವರ ನೇತೃತ್ವದಲ್ಲಿಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ರೈತರ ಸಮಸ್ಯೆಗಳನ್ನು ಆಲಿಸಿದರು. ಬಳಿಕ ಮಾತನಾಡಿದ ಎಸ್.ಎಲ್. ಭೋಜೇಗೌಡ ಅವರು, ಈ ವರ್ಷ ನಿರೀಕ್ಷಿತ ಪ್ರಮಾಣದಲ್ಲಿ ಮುಂಗಾರು ಮಳೆಯಾಗದ ಕಾರಣ ರೈತರು ಬಿತ್ತನೆ ಮಾಡಿದ ಭತ್ತ ಸೇರಿದಂತೆ ಹಲವು ಬೆಳೆಗಳು ಒಣಗಿ ನಾಶವಾಗುತ್ತಿವೆ. ಅನೇಕ ಪ್ರದೇಶಗಳಲ್ಲಿ ಬಿತ್ತನೆಯೇ ಸಾಧ್ಯವಾಗದೆ ರೈತರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಕುಡಿಯುವ ನೀರು ಹಾಗೂ ಕೃಷಿಗೆ ಅಗತ್ಯವಾದ ನೀರಿನ ಕೊರತೆಯೂ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಗ್ರಾಮೀಣ ಜನತೆ ಸಂಕಷ್ಟದ ಜೀವನ ನಡೆಸುವಂತಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು. ರೈತರು ಎದುರಿಸುತ್ತಿರುವ…

Read More

ಉಡುಪಿ, ಜುಲೈ 17: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ (UUDA) ಆಯುಕ್ತ ಮಂಜುನಾಥ್ ಅವರು ದಕ್ಷತೆ, ಪಾರದರ್ಶಕತೆ ಹಾಗೂ ಜನಪರ ಆಡಳಿತದ ಮೂಲಕ ಉತ್ತಮ ಕಾರ್ಯನಿರ್ವಹಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ನಮ್ಮ ಕರ್ನಾಟಕ ಸೇನೆ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು. ಶುಕ್ರವಾರ ನಮ್ಮ ಕರ್ನಾಟಕ ಸೇನೆ ಉಡುಪಿ ಜಿಲ್ಲಾಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸುಜಯ ಪೂಜಾರಿ ಅವರ ನೇತೃತ್ವದಲ್ಲಿ ನಿಯೋಗವು ಆಯುಕ್ತರ ಕಚೇರಿಗೆ ಭೇಟಿ ನೀಡಿ ಗೌರವಿಸಿ ಶುಭ ಹಾರೈಸಿತು. ಈ ವೇಳೆ ಮಾತನಾಡಿದ ಸುಜಯ ಪೂಜಾರಿ, ಕಳೆದ ಮೂರು ತಿಂಗಳ ಅವಧಿಯಲ್ಲಿ ಸುಮಾರು 600ಕ್ಕೂ ಹೆಚ್ಚು ಕಡತಗಳನ್ನು ವಿಲೇವಾರಿ ಮಾಡುವ ಮೂಲಕ ಸಾರ್ವಜನಿಕರ ಕೆಲಸಗಳಿಗೆ ವೇಗ ನೀಡಿರುವುದು ಶ್ಲಾಘನೀಯ ಸಾಧನೆ ಎಂದು ಹೇಳಿದರು. ಜನಸ್ನೇಹಿ ಆಡಳಿತ ನೀಡುತ್ತಿರುವ ಅಧಿಕಾರಿಗಳ ವಿರುದ್ಧ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಸುಳ್ಳು ಆರೋಪಗಳನ್ನು ಮಾಡಿ ಅವರ ಆತ್ಮಸ್ಥೈರ್ಯ ಕುಗ್ಗಿಸಲು ಯತ್ನಿಸುತ್ತಿರುವುದು ಖಂಡನೀಯ ಎಂದರು. ಯಾವುದೇ ವದಂತಿಗಳಿಗೆ ಕಿವಿಗೊಡದೆ, ಸಾರ್ವಜನಿಕರು ತಮ್ಮ ಕೆಲಸಗಳಿಗೆ ನೇರವಾಗಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರನ್ನು…

Read More

ವಿಶೇಷ ವರದಿ | ತುಳುನಾಡ ಸೂರ್ಯ ಮಂಗಳೂರು, ಜುಲೈ 17: ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆದ ಭೀಕರ ಚೂರಿ ದಾಳಿಯಲ್ಲಿ ಮೃತಪಟ್ಟ ಯುವತಿ ಲಾವಣ್ಯ ಅವರ ಮರಣೋತ್ತರ ಪರೀಕ್ಷೆ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ಪೂರ್ಣಗೊಂಡಿದೆ. ಮರಣೋತ್ತರ ಪರೀಕ್ಷೆಯ ಬಳಿಕ ಲಾವಣ್ಯ ಅವರ ಪಾರ್ಥಿವ ಶರೀರವನ್ನು ಬಂಟ್ವಾಳ ತಾಲೂಕಿನ ಕಕ್ಯಪದವು ಗ್ರಾಮದ ಕೊಡಂಗೆಯಲ್ಲಿರುವ ನಿವಾಸಕ್ಕೆ ರವಾನೆ ಮಾಡಲಾಗಿದೆ. ಮೃತದೇಹದ ಅಂತಿಮ ದರ್ಶನಕ್ಕೆ ಕುಟುಂಬಸ್ಥರು, ಬಂಧು-ಬಳಗ, ಸ್ನೇಹಿತರು ಹಾಗೂ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದ್ದು, ನೂರಾರು ಮಂದಿ ಆಗಮಿಸಿ ಕಂಬನಿ ಮಿಡಿಯುತ್ತಿದ್ದಾರೆ. ಗ್ರಾಮದಲ್ಲಿ ಶೋಕದ ವಾತಾವರಣ ಆವರಿಸಿದೆ. ಶುಕ್ರವಾರ ಸಂಜೆ ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಎದುರಲ್ಲೇ ನಡೆದ ಮಾರಕ ಚೂರಿ ದಾಳಿಯಲ್ಲಿ ಲಾವಣ್ಯ ಅವರು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದರು. ಈ ಘಟನೆ ದಕ್ಷಿಣ ಕನ್ನಡ ಜಿಲ್ಲೆಯನ್ನೇ ಬೆಚ್ಚಿಬೀಳಿಸಿದ್ದು, ಮಹಿಳೆಯರ ಸುರಕ್ಷೆ ಕುರಿತ ಚರ್ಚೆಗೆ ಮತ್ತೆ ವೇದಿಕೆ ಒದಗಿಸಿದೆ. ಪ್ರಕರಣ ಸಂಬಂಧ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಹತ್ಯೆಗೆ ಕಾರಣವಾದ…

Read More