- ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ನಿಂದ “ಹಲಸು–ಮಾವು ಮೇಳ” ಆಯೋಜನೆ
- ಹಿರಿಯ ನಾಟಕಕಾರ, ಸಿನಿಮಾ ನಿರ್ಮಾಪಕ ಡಾ.ಸಂಜೀವ ದಂಡಕೇರಿ ಅವರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ
- ಭಟ್ಕಳ ದುರಂತ: ಮೃತರ ಕುಟುಂಬಗಳಿಗೆ ತಲಾ ₹10 ಲಕ್ಷ ಪರಿಹಾರ ನೀಡಬೇಕು – ಜೆಡಿಎಸ್ ರಾಜ್ಯ ಮೀನುಗಾರರ ಘಟಕದ ಅಧ್ಯಕ್ಷ ರತ್ನಾಕರ ಸುವರ್ಣ ಆಗ್ರಹ
- ಶಿರಾಲಿಯಲ್ಲಿ ಹೃದಯವಿದ್ರಾವಕ ಜಲ ದುರಂತ: ಒಂದೇ ಕುಟುಂಬದ 8 ಮಂದಿ ನೀರಿನಲ್ಲಿ ಕೊಚ್ಚಿ ಸಾವು
- ಸೂಟರ್ಪೇಟೆ-ಕನಕರಬೆಟ್ಟು ತಡೆಗೋಡೆ ಪುನರ್ನಿರ್ಮಾಣಕ್ಕೆ ಚಾಲನೆ, ₹20 ಲಕ್ಷ ವೆಚ್ಚದ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಭೂಮಿ ಪೂಜೆ
- 26ರಂದು ಬಟರ್ ಫ್ಲೈ ಚಂದ್ರನಗರದಲ್ಲಿ ಉಚಿತ ಸಮಗ್ರ ಆರೋಗ್ಯ ತಪಾಸಣಾ ಶಿಬಿರ
- ಆಸ್ಪತ್ರೆಗೆ ತೆರಳುವ ಸಾರ್ವಜನಿಕರಿಗೆ ತೊಂದರೆ: ತುರ್ತು ಚಿಕಿತ್ಸಾ ವಾಹನಗಳ ಸುಗಮ ಸಂಚಾರಕ್ಕೆ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಮನವಿ
- ಕ್ರಿಕೆಟ್ ಜೋಷ್… ತುಳು ನಾಡಿನ ಭಾವನೆ… “ಗಜಾನನ ಕ್ರಿಕೆಟರ್ಸ್” ಭರ್ಜರಿ ಎಂಟ್ರಿ!ಕರಾವಳಿಯ ಸಿನಿಪ್ರೇಮಿಗಳ ಬಹು ನಿರೀಕ್ಷಿತ ತುಳು ಚಲನಚಿತ್ರ
Author: Tulunada Surya
ಮಂಗಳೂರು, ಮೇ 25: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ (ನಿ.) ವತಿಯಿಂದ ಸ್ಥಳೀಯ ರೈತರಿಗೆ ಉತ್ತೇಜನ ನೀಡುವ ಹಾಗೂ ಗ್ರಾಹಕರಿಗೆ ತಾಜಾ ಮತ್ತು ಗುಣಮಟ್ಟದ ಹಣ್ಣುಗಳನ್ನು ಒದಗಿಸುವ ಉದ್ದೇಶದಿಂದ “ಹಲಸು–ಮಾವು ಮೇಳ”ವನ್ನು ಆಯೋಜಿಸಲಾಗಿದೆ. ಈ ವಿಶೇಷ ಮೇಳವು ಜೂನ್ 5, 6 ಮತ್ತು 7ರಂದು ಕೆ.ವಿ.ಎಸ್.ಎಸ್. ಕಾನ್ಫರೆನ್ಸ್ ಹಾಲ್, ಕೋಟೆಕಾರು ಬೀರಿ ಜಂಕ್ಷನ್ನಲ್ಲಿ ನಡೆಯಲಿದೆ. ಪ್ರತಿದಿನ ಬೆಳಗ್ಗೆ 9 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಸಾರ್ವಜನಿಕರಿಗೆ ಮೇಳ ಮುಕ್ತವಾಗಿರುತ್ತದೆ. ಮೇಳದಲ್ಲಿ ವಿವಿಧ ತಳಿಗಳ ರುಚಿಕರ ಮಾವು ಹಾಗೂ ಹಲಸು ಹಣ್ಣುಗಳನ್ನು ಪ್ರದರ್ಶನ ಮತ್ತು ಮಾರಾಟಕ್ಕೆ ಇಡಲಾಗುತ್ತಿದ್ದು, ಸ್ಥಳೀಯ ರೈತರಿಗೆ ತಮ್ಮ ಉತ್ಪನ್ನಗಳನ್ನು ನೇರವಾಗಿ ಗ್ರಾಹಕರಿಗೆ ತಲುಪಿಸುವ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ, ಹಣ್ಣು ಪ್ರಿಯರಿಗೆ ಉತ್ತಮ ಗುಣಮಟ್ಟದ ಹಣ್ಣುಗಳನ್ನು ಒಂದೇ ವೇದಿಕೆಯಲ್ಲಿ ಪಡೆಯುವ ಅವಕಾಶವೂ ದೊರೆಯಲಿದೆ. ಈ ಕುರಿತು ಪ್ರಕಟಣೆ ನೀಡಿದ ಬ್ಯಾಂಕ್ ಅಧ್ಯಕ್ಷರಾದ ಕೃಷ್ಣ ಶೆಟ್ಟಿ ಅವರು, “ಸ್ಥಳೀಯ ರೈತರಿಗೆ ಪ್ರೋತ್ಸಾಹ ನೀಡುವ ಜೊತೆಗೆ ಸಾರ್ವಜನಿಕರಿಗೆ ತಾಜಾ ಹಣ್ಣುಗಳನ್ನು ಪರಿಚಯಿಸುವ…
ಬೆಂಗಳೂರು: ಕಳೆದ ಬಾರಿ ಸುವರ್ಣ ಸಂಭ್ರಮವನ್ನಾಚರಿಸಿದ ಅಂತಾರಾಷ್ಟ್ರೀಯ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯು ತನ್ನ 51ನೇ ವರ್ಷದ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ ಸಮಾರಂಭವನ್ನು 2026 ಮೇ 23ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಏರ್ಪಡಿಸಿತ್ತು. ಕಾರ್ಯಕ್ರಮವನ್ನು ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ನ್ಯಾಯಮೂರ್ತಿ ರಾಜೇಂದ್ರ ಬಾದಾಮಿಕರ್ ದೀಪ ಬೆಳಗಿ ಉದ್ಘಾಟಿಸಿದರು. ಸಮಾರಂಭದಲ್ಲಿ ತುಳು ರಂಗಭೂಮಿ ಸಿನಿಮಾರಂಗ, ಉದ್ಯಮ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಮಹತ್ವದ ಸೇವೆ ಸಲ್ಲಿಸಿದ ಬಯ್ಯಮಲ್ಲಿಗೆ ಖ್ಯಾತಿಯ ಹಿರಿಯ ನಾಟಕಕಾರ ಡಾ.ಸಂಜೀವ ದಂಡಕೇರಿ ಅವರಿಗೆ ಈ ಬಾರಿಯ ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ದಂಡಕೇರಿಯವರ ಪತ್ನಿ ಶ್ರೀಮತಿ ಜಲಜಾಕ್ಷಿ ದಂಡಕೇರಿ ಮತ್ತು ಕುಟುಂಬ ಸದಸ್ಯರು ಸಮಾರಂಭದಲ್ಲಿ ಪಾಲ್ಗೊಂಡರು.ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ. ಹೆಚ್.ಎಲ್.ಎನ್. ರಾವ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಬೆಂಗಳೂರು ದೂರದರ್ಶನ ಕೇಂದ್ರದ ವಿಶ್ರಾಂತ ಹೆಚ್ಚುವರಿ ಮಹಾನಿರ್ದೇಶಕ ನಾಡೋಜ ಡಾ. ಮಹೇಶ್ ಜೋಶಿ, ಖ್ಯಾತ ವಿದ್ವಾಂಸ, ವಿದ್ಯಾ ವಾಚಸ್ಪತಿ ಡಾ.ಅರಳುಮಲ್ಲಿಗೆ ಪಾರ್ಥಸಾರಥಿ ಮುಖ್ಯ ಅತಿಥಿಗಳಾಗಿದ್ದರು.…
ಮಂಗಳೂರು/ಭಟ್ಕಳ, ಮೇ 25:ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಶಿರಾಲಿ ಸಮುದ್ರ ತೀರದಲ್ಲಿ ಸಂಭವಿಸಿದ ಹೃದಯವಿದ್ರಾವಕ ದುರಂತಕ್ಕೆ ಜೆಡಿಎಸ್ ಕರ್ನಾಟಕ ರಾಜ್ಯ ಮೀನುಗಾರರ ಘಟಕದ ಅಧ್ಯಕ್ಷರಾದ ರತ್ನಾಕರ ಸುವರ್ಣ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಒಂದೇ ಕುಟುಂಬದ ಎಂಟು ಮಂದಿ ಸಮುದ್ರದ ಅಲೆಗಳ ಅಬ್ಬರಕ್ಕೆ ಸಿಲುಕಿ ಜೀವ ಕಳೆದುಕೊಂಡಿರುವುದು ರಾಜ್ಯದ ಜನತೆಯನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ. ಜೀವನೋಪಾಯ ಹಾಗೂ ವಿಹಾರ ಉದ್ದೇಶದಿಂದ ಸಮುದ್ರ ತೀರಕ್ಕೆ ತೆರಳಿದ್ದ ಕುಟುಂಬದ ಸದಸ್ಯರು ಕ್ಷಣಾರ್ಧದಲ್ಲಿ ಜಲಸಮಾಧಿಯಾದ ಘಟನೆ ಅತ್ಯಂತ ನೋವುಂಟು ಮಾಡಿದೆ ಎಂದು ಅವರು ತಿಳಿಸಿದ್ದಾರೆ. ಸರ್ಕಾರ ಮೃತರ ಕುಟುಂಬಗಳಿಗೆ ಘೋಷಿಸಿರುವ ತಲಾ ₹5 ಲಕ್ಷ ಪರಿಹಾರವು ಈ ದುರಂತದ ತೀವ್ರತೆಗೆ ತಕ್ಕುದಲ್ಲ. ಕುಟುಂಬದ ಆಧಾರಸ್ತಂಭಗಳನ್ನೇ ಕಳೆದುಕೊಂಡಿರುವ ಹಿನ್ನೆಲೆಯಲ್ಲಿ ಸರ್ಕಾರ ತಕ್ಷಣವೇ ಮಧ್ಯಪ್ರವೇಶಿಸಿ ಮೃತರ ಕುಟುಂಬಗಳಿಗೆ ತಲಾ ₹10 ಲಕ್ಷ ಪರಿಹಾರ ಘೋಷಿಸಬೇಕು. ಜೊತೆಗೆ ಕುಟುಂಬದ ಸದಸ್ಯರಿಗೆ ಶಾಶ್ವತ ಪುನರ್ವಸತಿ, ಮಕ್ಕಳ ಶಿಕ್ಷಣ ಹಾಗೂ ಜೀವನೋಪಾಯಕ್ಕೆ ಅಗತ್ಯ ನೆರವು ಒದಗಿಸಬೇಕು ಎಂದು ರತ್ನಾಕರ ಸುವರ್ಣ ಅವರು…
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಶಿರಾಲಿ ಸಮೀಪ ಭಾನುವಾರ ಸಂಭವಿಸಿದ ಭೀಕರ ಜಲ ದುರಂತವು ಇಡೀ ಕರಾವಳಿಯನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ. ಜೀವನೋಪಾಯಕ್ಕಾಗಿ ನದಿಗೆ ಇಳಿದಿದ್ದ ಒಂದೇ ಕುಟುಂಬದ ಎಂಟು ಮಂದಿ ನೀರಿನ ರಭಸಕ್ಕೆ ಸಿಲುಕಿ ಜಲಸಮಾಧಿಯಾದ ದಾರುಣ ಘಟನೆ ಅಳ್ವೆಕೋಡಿ ಸಮೀಪದ ತಟ್ಟಿಹಕ್ಕಲ ಕಳಿನಟ್ಟಿ ಹೊಳೆಯಲ್ಲಿ ನಡೆದಿದೆ. ಕಪ್ಪೆಚಿಪ್ಪು ಸಂಗ್ರಹಿಸಲು ತೆರಳಿದ್ದ ಕುಟುಂಬ ಸ್ಥಳೀಯ ನಿವಾಸಿಗಳಾಗಿರುವ ಕುಟುಂಬದ ಸದಸ್ಯರು ನದಿಯಲ್ಲಿ ಕಪ್ಪೆಚಿಪ್ಪು (ಚಪ್ಪೆಕಲ್ಲು) ಸಂಗ್ರಹಿಸಲು ತೆರಳಿದ್ದರು. ನೀರಿನ ಆಳ ಹಾಗೂ ಹರಿವಿನ ತೀವ್ರತೆಯನ್ನು ಮನಗಂಡು, ಸುರಕ್ಷತೆಯ ದೃಷ್ಟಿಯಿಂದ ಒಬ್ಬರ ಕೈಯನ್ನು ಮತ್ತೊಬ್ಬರು ಹಿಡಿದು ಸರಪಳಿಯಂತೆ ನದಿಯಲ್ಲಿ ಸಾಗುತ್ತಿದ್ದರು. ಆದರೆ ಏಕಾಏಕಿ ನೀರಿನ ವೇಗ ಹೆಚ್ಚಾಗಿ ಒಬ್ಬರು ನಿಯಂತ್ರಣ ತಪ್ಪುತ್ತಿದ್ದಂತೆ, ಇಡೀ ಸರಪಳಿ ಕಳಚಿ ಎಂಟೂ ಮಂದಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಭಾರಿ ಮಳೆ – ಏಕಾಏಕಿ ಏರಿದ ನೀರಿನ ಮಟ್ಟ ಕಳೆದ ರಾತ್ರಿ ಭಟ್ಕಳ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸುರಿದ ಭಾರೀ ಮಳೆಯ ಪರಿಣಾಮ ನದಿಯಲ್ಲಿ ನೀರಿನ…
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 59ನೇ ಜೆಪ್ಪು ವಾರ್ಡಿನ ಸೂಟರ್ಪೇಟೆ 4ನೇ ಅಡ್ಡರಸ್ತೆ ಹಾಗೂ ಕನಕರಬೆಟ್ಟು ಪ್ರದೇಶದಲ್ಲಿ ಕುಸಿದ ತಡೆಗೋಡೆಯ ಪುನರ್ನಿರ್ಮಾಣ ಕಾಮಗಾರಿಗೆ ₹20 ಲಕ್ಷ ಅನುದಾನದಲ್ಲಿ ಚಾಲನೆ ನೀಡಲಾಗಿದ್ದು, ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಭೂಮಿ ಪೂಜೆ ನೆರವೇರಿತು. ಭೂಮಿ ಪೂಜೆಯ ಬಳಿಕ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ಕಳೆದ ಮಳೆಗಾಲದ ವೇಳೆ ಈ ಭಾಗದ ಹಲವು ರಾಜಕಾಲುವೆಗಳು ಹಾನಿಗೊಳಗಾಗಿದ್ದು, ಕೆಲವು ಕಾಲುವೆಗಳು ಕೆಳಮಟ್ಟದಲ್ಲಿರುವುದರಿಂದ ಮಳೆ ನೀರಿನ ಹರಿವು ಸಮಸ್ಯೆಯಾಗುತ್ತಿದೆ ಎಂದು ಹೇಳಿದರು. ಕಳೆದ ಮೂರು ವರ್ಷಗಳಲ್ಲಿ ಪ್ರಾಕೃತಿಕ ವಿಕೋಪಗಳಿಂದ ಕ್ಷೇತ್ರಕ್ಕೆ ₹300 ರಿಂದ ₹400 ಕೋಟಿಗೂ ಅಧಿಕ ಹಾನಿಯಾಗಿದ್ದರೂ, ರಾಜ್ಯ ಸರ್ಕಾರದಿಂದ ಅಗತ್ಯ ಪ್ರಮಾಣದ ಪರಿಹಾರ ಸಿಗದಿರುವುದು ವಿಷಾದನೀಯ ಎಂದರು. ಇತ್ತೀಚೆಗೆ ರಾಜ್ಯ ಸರ್ಕಾರ ವಿವಿಧ ಜಿಲ್ಲೆಗಳಿಗೆ ಮಳೆ ಪರಿಹಾರ ನಿಧಿ ಬಿಡುಗಡೆ ಮಾಡಿದ್ದು, ಅದರಲ್ಲಿ ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕರ ಹೆಸರಿನಲ್ಲಿ ₹10 ಕೋಟಿ ಅನುದಾನ ಮಂಜೂರಾಗಿದೆ. ಅದರ ಭಾಗವಾಗಿ ಜೆಪ್ಪು ವಾರ್ಡಿನ ಈ…
ಕಾಪು, ಮೇ 24: ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ಉಚಿತ ಸಮಗ್ರ ಆರೋಗ್ಯ ತಪಾಸಣಾ ಶಿಬಿರವು ಮೇ 26, 2026 ಮಂಗಳವಾರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಚಂದ್ರನಗರದ ಬಟರ್ ಫ್ಲೈ ಪಾರ್ಟಿ ಹಾಲ್ನಲ್ಲಿ ನಡೆಯಲಿದೆ.ಶಿಬಿರದಲ್ಲಿ ಉಚಿತ ನೇತ್ರ ತಪಾಸಣೆ, ಮಧುಮೇಹ ಪರೀಕ್ಷೆ, ರಕ್ತದೊತ್ತಡ ತಪಾಸಣೆ ಹಾಗೂ ದಂತ ತಪಾಸಣೆ ಸೇವೆಗಳು ಲಭ್ಯವಿರಲಿವೆ.ಈ ಆರೋಗ್ಯ ಶಿಬಿರವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವಿಕೆ ಘಟಕ ಉಡುಪಿ, ಸಮುದಾಯ ಆರೋಗ್ಯ ಕೇಂದ್ರ ಶಿರ್ವ, ಬಟರ್ ಫ್ಲೈ ಗೆಸ್ಟ್ ಹೌಸ್ & ಪಾರ್ಟಿ ಹಾಲ್ ಚಂದ್ರನಗರ, ಗ್ರಾಮ ಪಂಚಾಯತ್ ಕುತ್ಯಾರು/ಕಳತ್ತೂರು, ಅಲಯನ್ಸ್ ಕ್ಲಬ್ ಉಡುಪಿ ರಾಯಲ್ ಹಾಗೂ ರೋಟರಿ ಕ್ಲಬ್ ಶಿರ್ವ ಇವರ ಸಹಯೋಗದಲ್ಲಿ ಆಯೋಜಿಸಲಾಗಿದೆ.ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಉಚಿತ ಆರೋಗ್ಯ ಸೇವೆಯ ಪ್ರಯೋಜನ ಪಡೆದುಕೊಳ್ಳುವಂತೆ ಸಮುದಾಯ ಆರೋಗ್ಯ ಕೇಂದ್ರ ಶಿರ್ವದ ಆಡಳಿತ ವೈದ್ಯಾಧಿಕಾರಿ ಹಾಗೂ ಬಟರ್ ಫ್ಲೈ ಗೆಸ್ಟ್ ಹೌಸ್…
ಮಂಗಳೂರು, ಮೇ 23: ಉಳ್ಳಾಲ ತಾಲೂಕು ತೊಕ್ಕೊಟ್ಟು ಬಟ್ನಗರದಲ್ಲಿರುವ ನೇತಾಜಿ-ಎ ಯಲ್ಲಪ್ಪ ಮೆಮೋರಿಯಲ್ ಹಾಸ್ಪಿಟಲ್ ಎದುರಿನ ರಾಷ್ಟ್ರೀಯ ಹೆದ್ದಾರಿ ಸರ್ವಿಸ್ ರಸ್ತೆಯಲ್ಲಿ ದಿನನಿತ್ಯ ಹೆಚ್ಚುತ್ತಿರುವ ಅನಧಿಕೃತ ವಾಹನ ಪಾರ್ಕಿಂಗ್ ಸಮಸ್ಯೆಯನ್ನು ತಡೆಗಟ್ಟುವಂತೆ ಆಗ್ರಹಿಸಿ ಆಸ್ಪತ್ರೆ ಮುಖ್ಯಸ್ಥರು ಹಾಗೂ ಸಾರ್ವಜನಿಕ ಹಿತಾಸಕ್ತಿಯ ಪ್ರತಿನಿಧಿಗಳು ಶನಿವಾರ 23-05-2026 ರಂದು ಬೆಳ್ಳಿಗೆ 10 ಗಂಟೆಗೆ ಉಳ್ಳಾಲ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಿಗೆ ಮನವಿ ಸಲ್ಲಿಸಿದರು. ಆಸ್ಪತ್ರೆಯ ಮುಖ್ಯಸ್ಥರಾದ ಪ್ರಭಾಕರ್ ಅವರು ತುಳುನಾಡ ರಕ್ಷಣಾ ವೇದಿಕೆ ಕೇಂದ್ರಿಯ ಅದ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ಅವರೊಂದಿಗೆ ಪೊಲೀಸ್ ಠಾಣೆಗೆ ತೆರಳಿ ಸಮಸ್ಯೆಯ ಗಂಭೀರತೆಯನ್ನು ಅಧಿಕಾರಿಗಳ ಗಮನಕ್ಕೆ ತಂದು ಮನವಿ ಪತ್ರ ಸಲ್ಲಿಸಿದ್ದು ತೊಕ್ಕೊಟ್ಟು ಭಾಗದಲ್ಲಿರುವ ನೇತಾಜಿ-ಎ ಯಲ್ಲಪ್ಪ ಮೆಮೋರಿಯಲ್ ಹಾಸ್ಪಿಟಲ್ ಕರಾವಳಿ ಭಾಗದ ಅನೇಕ ಜನರಿಗೆ ತುರ್ತು ಹಾಗೂ ಸಾಮಾನ್ಯ ಆರೋಗ್ಯ ಸೇವೆಗಳನ್ನು ನೀಡುತ್ತಿರುವ ಪ್ರಮುಖ ಆಸ್ಪತ್ರೆಯಾಗಿದ್ದು, ಆಸ್ಪತ್ರೆ ಎದುರಿನ ಸರ್ವಿಸ್ ರಸ್ತೆಯಲ್ಲಿ ಕಾರುಗಳು, ಲಾರಿಗಳು, ಆಟೋ ರಿಕ್ಷಾಗಳು ಸೇರಿದಂತೆ ವಿವಿಧ ವಾಹನಗಳನ್ನು ನಿಯಮಬಾಹಿರವಾಗಿ ನಿಲ್ಲಿಸಲಾಗುತ್ತಿರುವುದರಿಂದ ಸಂಚಾರ ದಟ್ಟಣೆ ದಿನದಿಂದ…
“ಗಜಾನನ ಕ್ರಿಕೆಟರ್ಸ್ (ಜಂತೊಟ್ಟು ಸಿನ್ಸ್ 1983)” ಅದ್ದೂರಿಯಾಗಿ ತೆರೆಕಂಡಿದ್ದು, ಮಂಗಳೂರು ಸೇರಿದಂತೆ ಕರಾವಳಿಯ ವಿವಿಧ ಭಾಗಗಳಲ್ಲಿ ಭರ್ಜರಿ ಪ್ರತಿಕ್ರಿಯೆ ಪಡೆಯುತ್ತಿದೆ.ಪ್ರಜ್ವಲ್ ಫಿಲಂಸ್ ಲಾಂಛನದಲ್ಲಿ ನಿರ್ಮಾಣಗೊಂಡಿರುವ ಈ ಚಿತ್ರವನ್ನು ಯುವ ನಿರ್ಮಾಪಕ ಪ್ರಜ್ವಲ್ ಶೆಟ್ಟಿ ನಿರ್ಮಿಸಿದ್ದು, ಕತೆ, ಚಿತ್ರಕಥೆ ಹಾಗೂ ನಿರ್ದೇಶನವನ್ನು ಪ್ರತಿಭಾವಂತ ನಿರ್ದೇಶಕ ಕೀರ್ತನ್ ಭಂಡಾರಿ ನಿರ್ವಹಿಸಿದ್ದಾರೆ. ಕ್ರಿಕೆಟ್ ಹಿನ್ನೆಲೆಯ ಭಾವನಾತ್ಮಕ ಕಥಾವಸ್ತುವಿನೊಂದಿಗೆ ಮೂಡಿಬಂದಿರುವ ಈ ಸಿನಿಮಾ ತುಳು ಚಿತ್ರರಂಗದಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ. ಭಾರತ್ ಸಿನಿಮಾಸ್ನಲ್ಲಿ ಅದ್ದೂರಿ ಬಿಡುಗಡೆ ಸಮಾರಂಭಮಂಗಳೂರಿನ ಭಾರತ್ ಸಿನಿಮಾಸ್ನಲ್ಲಿ ನಡೆದ ಭವ್ಯ ಬಿಡುಗಡೆ ಸಮಾರಂಭದಲ್ಲಿ ಚಿತ್ರತಂಡದೊಂದಿಗೆ ಹಲವಾರು ಗಣ್ಯರು, ಕಲಾವಿದರು, ಸಮಾಜಮುಖಿ ನಾಯಕರು ಹಾಗೂ ತುಳು ಚಿತ್ರರಂಗದ ಪ್ರಮುಖರು ಭಾಗವಹಿಸಿ ಚಿತ್ರಕ್ಕೆ ಶುಭ ಹಾರೈಸಿದರು. ದೀಪ ಬೆಳಗಿಸುವ ಮೂಲಕ ಸಮಾರಂಭಕ್ಕೆ ಚಾಲನೆ ನೀಡಲಾಯಿತು.ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಗಣ್ಯರುವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ಹಿರಿಯ ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್ ಬೈಲ್ಖ್ಯಾತ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ್ಉದ್ಯಮಿ ಮೈಕಲ್ ಡಿ’ಸೋಜಕಲಾ ನಿರ್ದೇಶಕ ತಮ್ಮ ಲಕ್ಷ್ಮಣ್ತುಳುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷ ಯೋಗೀಶ್ ಶೆಟ್ಟಿ…
ಮಂಗಳೂರು, ಮೇ 23:ಜನತಾದಳ (ಜಾತ್ಯತೀತ) ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಯುವ ಘಟಕದ ಅದ್ಯಕ್ಷ ಅಕ್ಷಿತ್ ಸುವರ್ಣ ನೇತ್ರತ್ವದ ನಿಯೋಗವು ಶನಿವಾರ ಮಂಗಳೂರಿನಲ್ಲಿ ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವರಾದ ಶ್ರೀ ವಿ. ಸೋಮಣ್ಣ ಅವರನ್ನು ಭೇಟಿ ಮಾಡಿ, ಮಂಗಳೂರು ಮತ್ತು ಕರಾವಳಿ ಕರ್ನಾಟಕ ಭಾಗದ ಬಹುಕಾಲದ ಪ್ರಮುಖ ರೈಲ್ವೆ ಸಮಸ್ಯೆಗಳ ಕುರಿತು ಸಮಗ್ರ ಮನವಿಪತ್ರ ಸಲ್ಲಿಸಿತು. ಕರಾವಳಿ ಭಾಗದ ಜನರ ಬಹುಕಾಲದ ಬೇಡಿಕೆಯಾದ ಪ್ರತ್ಯೇಕ “ಮಂಗಳೂರು ರೈಲ್ವೆ ವಿಭಾಗ” ರಚನೆಗೆ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿತು. ಪ್ರಸ್ತುತ ಮಂಗಳೂರು ಪಾಲಕ್ಕಾಡ್ ರೈಲ್ವೆ ವಿಭಾಗದ ಅಧೀನದಲ್ಲಿರುವುದರಿಂದ ಆಡಳಿತಾತ್ಮಕ ವಿಳಂಬಗಳು ಉಂಟಾಗುತ್ತಿದ್ದು, ಕರಾವಳಿ ಭಾಗದ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಪ್ರಯಾಣಿಕರ ಅಗತ್ಯತೆಗಳಿಗೆ ಸಮರ್ಪಕ ಆದ್ಯತೆ ಸಿಗುತ್ತಿಲ್ಲ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಪ್ರತ್ಯೇಕ ಮಂಗಳೂರು ರೈಲ್ವೆ ವಿಭಾಗ ಸ್ಥಾಪನೆಯಾದರೆ ರೈಲ್ವೆ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ಸಿಗುವುದರ ಜೊತೆಗೆ ಪ್ರಯಾಣಿಕರ ಸೌಲಭ್ಯ, ಕಾರ್ಯಾಚರಣಾ ದಕ್ಷತೆ ಮತ್ತು ಹೊಸ ಯೋಜನೆಗಳ ಅನುಷ್ಠಾನ ಸುಗಮವಾಗಲಿದೆ…
ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಕರ್ನಾಟಕದ ಲಕ್ಷಾಂತರ ಜನರಿಗೆ ಸುಲಭ, ವೇಗವಾದ ಹಾಗೂ ಸಮೀಪದ ನ್ಯಾಯದಾನ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಮಂಗಳೂರಿನಲ್ಲಿಯೇ ಹೈಕೋರ್ಟ್ ಸಂಚಾರಿ ಪೀಠವನ್ನು ಸ್ಥಾಪಿಸಬೇಕೆಂದು ಶಾಸಕ ವೇದವ್ಯಾಸ ಕಾಮತ್ ಬಲವಾದ ಆಗ್ರಹ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, “ಕರಾವಳಿ ಭಾಗದ ಜನರು ಸಣ್ಣ ಹಾಗೂ ಮಧ್ಯಮ ಮಟ್ಟದ ನ್ಯಾಯಾಂಗ ವಿಚಾರಗಳಿಗೂ ಬೆಂಗಳೂರಿನವರೆಗೆ ತೆರಳಬೇಕಾದ ಪರಿಸ್ಥಿತಿ ಇಂದಿಗೂ ಮುಂದುವರಿದಿದೆ. ಇದರಿಂದ ಸಾಮಾನ್ಯ ನಾಗರಿಕರು, ಬಡವರು, ರೈತರು, ಮೀನುಗಾರರು, ಕಾರ್ಮಿಕರು ಮತ್ತು ಮಹಿಳೆಯರು ಆರ್ಥಿಕ ಹಾಗೂ ಮಾನಸಿಕ ಸಂಕಷ್ಟ ಅನುಭವಿಸುತ್ತಿದ್ದಾರೆ. ನ್ಯಾಯದಾನ ಪ್ರಕ್ರಿಯೆ ಜನಸಾಮಾನ್ಯರಿಗೆ ಇನ್ನಷ್ಟು ಹತ್ತಿರವಾಗಬೇಕಾದರೆ ಮಂಗಳೂರಿನಲ್ಲಿಯೇ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ ಅನಿವಾರ್ಯ” ಎಂದು ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬೇಡಿಕೆಗೆ ಸಕಾರಾತ್ಮಕ ಸ್ಪಂದನೆ ನೀಡಿರುವುದು ಕರಾವಳಿ ಭಾಗದ ಜನರಲ್ಲಿ ಹೊಸ ಆಶಾಭರವನ್ನೂ ಮೂಡಿಸಿದೆ. ಇದು ಕೇವಲ ಆಡಳಿತಾತ್ಮಕ ನಿರ್ಧಾರವಲ್ಲ, ದೀರ್ಘಕಾಲದಿಂದ ನಡೆಯುತ್ತಿರುವ ಜನಪರ ಹೋರಾಟಕ್ಕೆ ದೊರೆತ ಗೌರವವಾಗಿದೆ ಎಂದು ಕಾಮತ್…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
