Author: Tulunada Surya

ಪುತ್ತೂರು: “ನನ್ನ ಮಗಳಿಗೆ ನ್ಯಾಯ ದೊರೆಯದಿದ್ದರೆ, ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಧ್ವಜಸ್ತಂಭದ ಮುಂದೆ ಕುಳಿತು ಪ್ರತಿಭಟನೆ ನಡೆಸುತ್ತೇನೆ” ಎಂದು ಸಂತ್ರಸ್ತೆಯ ತಾಯಿ ನಮಿತಾ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪುತ್ತೂರಿನ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣ ನಡೆದಿದ್ದು ಒಂದು ವರ್ಷ ಕಳೆದರೂ ನ್ಯಾಯ ಸಿಗದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ಪಿ.ಜಿ. ಜಗನ್ನಿವಾಸ್ ರಾವ್ ಇಂದಿಗೂ ಧಾರ್ಮಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿರುವುದನ್ನು ಪ್ರಶ್ನಿಸಿದ ಅವರು, “ನನ್ನ ಮಗಳಿಗೆ ಆಗಿರುವ ಅನ್ಯಾಯದ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ಆರೋಪಿಸಿದರು. ಮತ್ತಷ್ಟು ವಿವರಿಸಿದ ಅವರು, “ತಮ್ಮ ಮಗ ಕೃಷ್ಣ ಜೆ. ರಾವ್ ಮತ್ತು ಸಂತ್ರಸ್ತೆಯ ಮದುವೆ ಮಾಡಿಸುವುದಾಗಿ ಭರವಸೆ ನೀಡಿದ್ದರು. ಅದಕ್ಕಾಗಿ ಮುಚ್ಚಳಿಕೆ ಪತ್ರವನ್ನೂ ಬರೆದು ಜವಾಬ್ದಾರಿ ಹೊತ್ತುಕೊಂಡಿದ್ದರು. ಆದರೆ ಒಂಬತ್ತು ತಿಂಗಳವರೆಗೆ ನಮ್ಮನ್ನು ದಾರಿ ತಪ್ಪಿಸಿ, ಈಗ ಮಗುವಿಗೆ 10 ತಿಂಗಳು ಆದರೂ ಮದುವೆ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇನ್ನೂ ಮುಂದುವರೆದು, “ಇಲ್ಲಿವರೆಗೆ ಅವರ ಧಾರ್ಮಿಕ ಸೇವೆಗಳ ಬಗ್ಗೆ…

Read More

ಉಡುಪಿ: ನೆಲ್ಯಾಡಿ ಮೂಲದ ಉದ್ಯಮಿ ಸುದೀಪ್ ರೈ ಅವರ ಆತ್ಮಹತ್ಯೆ ಪ್ರಕರಣ ಉಡುಪಿ ಜಿಲ್ಲೆಯಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ನಡುವೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಬೆಳವಣಿಗೆಗಳು ಬೆಳಕಿಗೆ ಬರುತ್ತಿವೆ. ಈ ಹಿನ್ನೆಲೆಯಲ್ಲಿ ಸುದೀಪ್ ರೈ ಅವರ ಪತ್ನಿ ಸೌಮ್ಯ ಶೆಟ್ಟಿ ಮಾಧ್ಯಮಗಳ ಮುಂದೆ ಹಾಜರಾಗಿ ತಮ್ಮ ವಿರುದ್ಧ ಕೇಳಿಬರುತ್ತಿರುವ ಆರೋಪಗಳಿಗೆ ಸ್ಪಷ್ಟನೆ ನೀಡಿದ್ದಾರೆ. “ನನ್ನ ವಿರುದ್ಧ ಹರಿದಾಡುತ್ತಿರುವ ಹನಿ ಟ್ರ್ಯಾಪ್ ಆರೋಪಗಳು ಸಂಪೂರ್ಣ ಸುಳ್ಳು ಮತ್ತು ನಿರಾಧಾರ. ಇದು ನನ್ನ ವ್ಯಕ್ತಿತ್ವ ಹಾನಿಗೆ ಉದ್ದೇಶಿತ ಪ್ರಯತ್ನ” ಎಂದು ಸೌಮ್ಯ ಶೆಟ್ಟಿ ತೀವ್ರವಾಗಿ ಖಂಡಿಸಿದ್ದಾರೆ. ಸುದೀಪ್ ರೈ ಅವರ ಸಾವಿನ ಸಂದರ್ಭವನ್ನು ವಿವರಿಸಿದ ಅವರು, “ಘಟನೆ ಸಂಭವಿಸಿದ ವೇಳೆ ಸುದೀಪ್ ಅವರು ತಮ್ಮ ತಂದೆಯ ಮನೆಯಲ್ಲಿ ಇದ್ದರು. ಈ ಘಟನೆಗೆ ನನ್ನನ್ನು ಸಂಬಂಧಿಸುವುದು ನ್ಯಾಯಸಮ್ಮತವಲ್ಲ. ಪ್ರಕರಣದ ಎಲ್ಲಾ ಅಂಶಗಳ ಕುರಿತು ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಯಬೇಕು” ಎಂದು ಆಗ್ರಹಿಸಿದರು. ಪ್ರಕರಣದಲ್ಲಿ ಉಲ್ಲೇಖವಾಗುತ್ತಿರುವ ವೇಣುಗೋಪಾಲ್ ಶೆಟ್ಟಿ ಕುರಿತು ಮಾತನಾಡಿದ ಸೌಮ್ಯ ಶೆಟ್ಟಿ, “ಅವರು…

Read More

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆ ಕಾಪಾಡಲು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಲು ಜಿಲ್ಲಾ ಪಂಚಾಯತ್ ಸಜ್ಜಾಗಿದೆ. ಈ ಸಂಬಂಧ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನರ್ವಡೆ ವಿನಾಯಕ ಕಾರ್ಭಾರಿ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳೊಂದಿಗೆ ವೀಡಿಯೋ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಅವರು, ಗ್ರಾಮ ಪಂಚಾಯತ್ ವ್ಯಾಪ್ತಿಯ ರಸ್ತೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ಎಸೆಯುವ ಹಾಗೂ ಸುಡುವ ಪ್ರಕರಣಗಳನ್ನು ಗುರುತಿಸಿ ತಕ್ಷಣ ದಂಡ ವಿಧಿಸುವಂತೆ ಸೂಚಿಸಿದರು. ದಂಡ ಪಾವತಿಸಲು ವಿಫಲವಾದವರ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸುವುದಾಗಿ ಎಚ್ಚರಿಕೆ ನೀಡಿದರು. ಪ್ರತಿ ತಾಲೂಕಿನಿಂದ ತಪ್ಪಿತಸ್ಥರ ವಿರುದ್ಧ ಕೈಗೊಂಡ ಕ್ರಮಗಳ ವರದಿಯನ್ನು ಕೂಡಲೇ ಸಲ್ಲಿಸುವಂತೆ ಆದೇಶಿಸಿದರು. ಪ್ರತಿ ತಿಂಗಳ 1ನೇ ಮತ್ತು 3ನೇ ಶನಿವಾರ ನಡೆಯುವ ‘ಸ್ವಚ್ಛ ಶನಿವಾರ’ ಅಭಿಯಾನವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು, ಗ್ರಾಮ ಪಂಚಾಯತ್‌ಗಳು ತಮ್ಮ ವ್ಯಾಪ್ತಿಯ ಎಲ್ಲಾ ರಸ್ತೆಗಳ ಇಕ್ಕೆಲಗಳನ್ನು ಸಂಪೂರ್ಣ ಸ್ವಚ್ಛಗೊಳಿಸಬೇಕು…

Read More

ಕೇರಳ ವಿಧಾನಸಭಾ ಚುನಾವಣೆಯ ಅಂಗವಾಗಿ ಗಡಿಭಾಗದ ಪ್ರತಿಷ್ಠಿತ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ರವರ ಗೆಲುವಿಗಾಗಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ವೇದವ್ಯಾಸ ಕಾಮತ್ ಅವರು ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದರು. ಮಂಜೇಶ್ವರದ ಪ್ರಸಿದ್ಧ ಪುಣ್ಯಕ್ಷೇತ್ರವಾದ ಶ್ರೀ ಮದನಂತೇಶ್ವರ ದೇವಸ್ಥಾನ ಹಾಗೂ ಕೀರ್ತೇಶ್ವರ ಪರಿಸರ, ಕುಂಬ್ಳೆ ಪಂಚಾಯತ್ ವ್ಯಾಪ್ತಿಯ ಕುಂಟಗೇರಡ್ಕದ ಪರಿಶಿಷ್ಟ ಪಂಗಡ ಕಾಲೋನಿ, ಗುಡ್ಡೆಕೇರಿ, ಬಡಾಜೆ ಪ್ರದೇಶಗಳು ಸೇರಿದಂತೆ ಹಲವು ಮನೆಗಳಿಗೆ ಕಾರ್ಯಕರ್ತರೊಂದಿಗೆ ಭೇಟಿ ನೀಡಿದರು. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಜನಪರ ಯೋಜನೆಗಳು, ಸಾಧನೆಗಳನ್ನು ತಿಳಿಸಿ ಅಭಿವೃದ್ಧಿಯ ದೃಷ್ಟಿಯಿಂದ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮನವಿ ಮಾಡಿದರು. ಮಂಜೇಶ್ವರದಲ್ಲಿ ಈ ಬಾರಿ ತಾವರೆ ಅರಳುವುದು ಶತ ಸಿದ್ದವಾಗಿದ್ದು ಪೂರಕ ವಾತಾವರಣ ನಿರ್ಮಾಣವಾಗಿದೆ ಎಂದರು. ಪ್ರಮುಖರಾದ ರಮೇಶ್ ಹೆಗ್ಡೆ, ಪ್ರಶಾಂತ್ ಪೈ, ಪೂಜಾ ಪೈ, ವರುಣ್ ಅಂಬಟ್, ಯಾದವ ಬಡಾಜೆ, ಆದರ್ಶ್, ಹರೀಶ್ಚಂದ್ರ ಮಂಜೇಶ್ವರ, ಸೇರಿದಂತೆ ಕ್ಷೇತ್ರದ ನೂರಾರು ಸಂಖ್ಯೆಯ ಕಾರ್ಯಕರ್ತರು ಉಪಸ್ಥಿತರಿದ್ದರು

Read More

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.), ಮಂಗಳೂರು ಇದರ ಬಜ್ಪೆ ಶಾಖೆಯ 12ನೇ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣೆ ಮತ್ತು ದಂತ ಚಿಕಿತ್ಸಾ ಶಿಬಿರವು ರೋಟರಿ ಕ್ಲಬ್ ಬಜ್ಪೆ, ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ.) ಬಜ್ಪೆ, ಕರಂಬಾರು ಹಾಗೂ ಎನ್.ಜಿ.ಒ. ವರ್ಲ್ಡ್ ಚಾರಿಟೇಬಲ್ ಟ್ರಸ್ಟ್ (ರಿ.) ಮಂಗಳೂರು ಇವರ ಸಹಯೋಗದೊಂದಿಗೆ ಬ್ರಹ್ಮಶ್ರೀ ನಾರಾಯಣ ಗುರು ಸಮಾಜದ ಭವನದಲ್ಲಿ ನಡೆಯಿತು.ಈ ಶಿಬಿರವನ್ನು ಎನ್.ಜಿ.ಒ. ವರ್ಲ್ಡ್ ಚಾರಿಟೇಬಲ್ ಟ್ರಸ್ಟ್ (ರಿ.) ಮಂಗಳೂರು ಇದರ ಸದಸ್ಯರಾದ ಶ್ರೀಮತಿ ಲಿಲ್ಲಿ ಮೇರಿ ಅವರು ಉದ್ಘಾಟಿಸಿ ಮಾತನಾಡಿ, “ಆರೋಗ್ಯದ ರಕ್ಷಣೆಯು ತುಂಬಾ ಮಹತ್ವದ್ದಾಗಿದೆ. ನಾವು ಆರೋಗ್ಯವಾಗಿದ್ದರೆ ಎಲ್ಲವನ್ನೂ ಸಂಪಾದಿಸಬಹುದು. ಇಂದಿನ ಆಧುನಿಕ ಯುಗದಲ್ಲಿ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರ ನೇತೃತ್ವದಲ್ಲಿ ಇಂತಹ ಶಿಬಿರಗಳನ್ನು ಆಯೋಜಿಸಿ ಜನರ ಆರೋಗ್ಯದ ಬಗ್ಗೆ…

Read More

ಮಂಗಳೂರು / ಮುಂಬೈ: ಸಾಂಸ್ಕೃತಿಕ ವೈಭವ ಮತ್ತು ಸಮುದ್ರ ಪ್ರವಾಸದ ಅಪೂರ್ವ ಸಂಯೋಜನೆಯೊಂದಿಗೆ, Yakshadrva Patla Foundation Mangalore ಮತ್ತು Triranga Sangama Mumbai ಸಂಸ್ಥೆಗಳು ಸಂಯುಕ್ತವಾಗಿ ವಿಶಿಷ್ಟ ಸಮುದ್ರಯಾನ ಕಾರ್ಯಕ್ರಮವನ್ನು ಘೋಷಿಸಿವೆ. “ಸಮುದ್ರದ ಅಲೆಗಳ ಮೇಲೆ ಸಂಚರಿಸುವ ಭವ್ಯ ನೌಕೆ” ಎಂಬ ಶೀರ್ಷಿಕೆಯಲ್ಲಿ ನಡೆಯುವ ಈ ವಿಶೇಷ ಕ್ರೂಸ್‌ ಯಾತ್ರೆ, ಜೂನ್ 1 ರಿಂದ ಜೂನ್ 5, 2026 ರವರೆಗೆ ಮುಂಬೈ – ಲಕ್ಷದ್ವೀಪ – ಮುಂಬೈ ಮಾರ್ಗದಲ್ಲಿ ಆಯೋಜಿಸಲಾಗಿದೆ. ಯಾತ್ರೆಯ ವಿವರಗಳು: 🔹 ಜೂನ್ 1 (ಸೋಮವಾರ): ಮಧ್ಯಾಹ್ನ 11:30ರಿಂದ 2:30ರವರೆಗೆ ಚೆಕ್-ಇನ್. ಸಂಜೆ 4 ಗಂಟೆಗೆ ಮುಂಬೈನಿಂದ ನೌಕೆಯ ಪ್ರಯಾಣ ಪ್ರಾರಂಭ. ರಾತ್ರಿ ಮನರಂಜನಾ ಕಾರ್ಯಕ್ರಮಗಳು. 🔹 ಜೂನ್ 2 (ಮಂಗಳವಾರ): ಸಮುದ್ರದಲ್ಲೇ ಪೂರ್ಣ ದಿನ ಮನರಂಜನೆ. ಬೆಳಿಗ್ಗೆ 11ರಿಂದ ಮಧ್ಯಾಹ್ನ 1:30ರವರೆಗೆ ಮೊದಲ ಯಕ್ಷಗಾನ ಪ್ರದರ್ಶನ. 🔹 ಜೂನ್ 3 (ಬುಧವಾರ): ಬೆಳಿಗ್ಗೆ 9:30ಕ್ಕೆ ಲಕ್ಷದ್ವೀಪ ತಲುಪುವುದು. ದ್ವೀಪ, ಕಡಲತೀರಗಳ ವೀಕ್ಷಣೆ. ಸಂಜೆ 5:30ಕ್ಕೆ ಮುಂಬೈಗೆ…

Read More

ಬ್ರಹ್ಮಾವರ, ಉಡುಪಿ: ವಸಂತ ಋತುವಿನ ವಿಶೇಷ ಖಗೋಳೀಯ ಘಟನೆಯಾದ ‘ಪಿಂಕ್ ಸೂಪರ್ ಮೂನ್’ ವೀಕ್ಷಣೆಗೆ ಕೊಳಲಗಿರಿಯಲ್ಲೊಂದು ವಿಶಿಷ್ಟ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಸ್ಥಳೀಯರು ಹಾಗೂ ವಿದ್ಯಾರ್ಥಿಗಳಿಂದ ಭಾರೀ ಸ್ಪಂದನೆ ವ್ಯಕ್ತವಾಯಿತು. ಕೊಳಲಗಿರಿಯ ವಿಹಂಗಮ ನೋಟ ಹೊಂದಿರುವ ಬ್ಯಾಂಕ್ ಆಫ್ ಬರೋಡಾ ಸಮೀಪದ ಮಂಜುನಾಥ್ ಕುಲಾಲ್ ಅವರ ಮನೆಯ ತಾರಸಿನ ಮೇಲೆ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ತುಳುನಾಡ ರಕ್ಷಣಾ ವೇದಿಕೆಯ ಜಿಲ್ಲಾ ಅಧ್ಯಕ್ಷರಾದ ಫ್ರಾಂಕಿ ಡಿಸೋಜ ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ತುಳುನಾಡಿನ ಹೆಮ್ಮೆ ಆಗಿರುವ ಆರ್. ಮನೋಹರ್ ಅವರ ಸಾಧನೆಯನ್ನು ಶ್ಲಾಘಿಸಿ, ವಿಶ್ವಮಟ್ಟದಲ್ಲಿ ಮಾನ್ಯತೆ ಪಡೆದ ದೂರದರ್ಶಕದ ಮೂಲಕ ಜನಸಾಮಾನ್ಯರಿಗೆ ‘ಪಿಂಕ್ ಸೂಪರ್ ಮೂನ್’ ಅನ್ನು ಹತ್ತಿರದಿಂದ ನೋಡುವ ಅವಕಾಶ ಕಲ್ಪಿಸಿರುವುದು ಅಭಿನಂದನೀಯ ಎಂದರು. ಆರ್. ಮನೋಹರ್ ಅವರ ವಿಶೇಷ ದೂರದರ್ಶಕದ ನೆರವಿನಿಂದ ಭಾಗವಹಿಸಿದವರು ಚಂದ್ರನ ಅದ್ಭುತ ದೃಶ್ಯವನ್ನು ಸಮೀಪದಿಂದ ವೀಕ್ಷಿಸಿ ಕಣ್ತುಂಬಿಕೊಂಡರು. ವಿಶೇಷವಾಗಿ ವಿದ್ಯಾರ್ಥಿಗಳು ಹಾಗೂ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಖಗೋಳ ವಿಜ್ಞಾನದ…

Read More

ರಾಷ್ಟ್ರೀಯ ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿ ಸಂಗಮ ಪ್ರದೇಶವಾದ ಕೆ.ಜಿ.ರೋಡ್ ಇಲ್ಲಿ ಸುಗಮ ಸಂಚಾರಕ್ಕಾಗಿ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದಿಂದ ಸಾರ್ವಜನಿಕರ ಪರವಾಗಿ ಮನವಿ… ಉಡುಪಿ: ಕೆ.ಜಿ. ರೋಡ್ ಪ್ರದೇಶದಲ್ಲಿ ದಿನೇದಿನೇ ಹೆಚ್ಚುತ್ತಿರುವ ವಾಹನ ಸಂಚಾರ ಹಾಗೂ ಅಪಘಾತಗಳ ಪ್ರಮಾಣವನ್ನು ಗಮನದಲ್ಲಿಟ್ಟುಕೊಂಡು, ಅಂಡರ್ ಪಾಸ್ ಮತ್ತು ಸರ್ವಿಸ್ ರೋಡ್ ನಿರ್ಮಾಣಕ್ಕೆ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕ ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆಗಳ ಗಮನಕ್ಕೆ ತಂದಿದೆ. ಈ ಕುರಿತು ಪ್ರಕಟಣೆ ನೀಡಿದ ಸಂಘಟನೆಯ ಪದಾಧಿಕಾರಿಗಳು, ಕೆ.ಜಿ. ರೋಡ್ ರಾಜ್ಯದ ಪ್ರಮುಖ ಸಂಪರ್ಕ ಮಾರ್ಗವಾಗಿದ್ದು, ದಿನನಿತ್ಯ ಸಾವಿರಾರು ವಾಹನಗಳ ಸಂಚಾರ ನಡೆಯುತ್ತದೆ. ಆದರೆ ಮೂಲಭೂತ ರಸ್ತೆ ಸೌಕರ್ಯಗಳ ಕೊರತೆ, ಸಮರ್ಪಕ ಸರ್ವಿಸ್ ರೋಡ್ ವ್ಯವಸ್ಥೆಯ ಅಭಾವ ಮತ್ತು ಪಾದಚಾರಿಗಳಿಗೆ ಸುರಕ್ಷಿತವಾಗಿ ರಸ್ತೆ ದಾಟಲು ಅಗತ್ಯವಾದ ಅಂಡರ್ ಪಾಸ್ ಇಲ್ಲದಿರುವುದು ಸಾರ್ವಜನಿಕರಿಗೆ ಗಂಭೀರ ಸಮಸ್ಯೆಯಾಗುತ್ತಿದೆ ಎಂದು ತಿಳಿಸಿದ್ದಾರೆ. ವಿಶೇಷವಾಗಿ ಶಾಲಾ ಮಕ್ಕಳು, ಹಿರಿಯ ನಾಗರಿಕರು ಹಾಗೂ…

Read More

ಬಂಟ್ವಾಳ: ತಾಲೂಕಿನ ಸಜಿಪಮುನ್ನೂರು ಗ್ರಾಮದ ದಾಸರಗುಡ್ಡೆ ಪ್ರದೇಶದಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡವರನ್ನು ಉಳ್ಳಾಲ ತಾಲೂಕಿನ ಬೋಳಿಯಾರು ಗ್ರಾಮದ ಭಾರತಿ (48) ಎಂದು ಗುರುತಿಸಲಾಗಿದೆ. ಮಾಹಿತಿಯ ಪ್ರಕಾರ, ಭಾರತಿ ಅವರು ತಮ್ಮ ಮಗಳೊಂದಿಗೆ ಮಾರ್ಚ್ 30ರಂದು ದಾಸರಗುಡ್ಡೆ ಪ್ರದೇಶಕ್ಕೆ ಗುಳಿಗಜ್ಜ ಕಟ್ಟೆಗೆ ಹಣ ಹಾಕುವ ಸಲುವಾಗಿ ಬೆಳಿಗ್ಗೆ ಬಂದಿದ್ದರು. ಈ ವೇಳೆ ಮೆಲ್ಕಾರ್–ಮುಡಿಪು ರಾಜ್ಯ ಹೆದ್ದಾರಿಯನ್ನು ದಾಟಿ ರಸ್ತೆ ಅಂಚಿಗೆ ತಲುಪುತ್ತಿದ್ದಾಗ, ಮೆಲ್ಕಾರ್ ಕಡೆಯಿಂದ ಮುಡಿಪು ಕಡೆಗೆ ಬರುತ್ತಿದ್ದ ಕಾರು ಏಕಾಏಕಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಪರಿಣಾಮ ಭಾರತಿ ಅವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಸ್ತುತ ಅವರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಈ ಸಂಬಂಧ ಬಂಟ್ವಾಳ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ. 👉 ಸ್ಥಳೀಯರು ಈ ಹೆದ್ದಾರಿಯಲ್ಲಿ ವಾಹನಗಳ ವೇಗ…

Read More

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 55ನೇ ಅತ್ತಾವರ ವಾರ್ಡಿನ ಬಾಬುಗುಡ್ಡೆಯಿಂದ ಮಾರ್ನಮಿಕಟ್ಟೆ ಮುಖ್ಯ ರಸ್ತೆಯವರೆಗೆ ರೂ.1.52 ಕೋಟಿ ವೆಚ್ಚದಲ್ಲಿ ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಯಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಭೂಮಿ ಪೂಜೆಯು ನಡೆಯಿತು. ನಂತರ ಮಾತನಾಡಿದ ಶಾಸಕರು, ಇದು ಅನೇಕ ವರ್ಷಗಳಿಂದ ಬೇಡಿಕೆಯಿದ್ದ ಪ್ರಮುಖ ಕಾಮಗಾರಿಯಾಗಿದ್ದು ಇದೀಗ ಸಾಕಾರಗೊಳ್ಳುತ್ತಿದೆ. ಇಲ್ಲಿ ಕಾಂಕ್ರೀಟೀಕರಣ ಹಾಗೂ ಚರಂಡಿ ನಿರ್ಮಾಣ ಕಾಮಗಾರಿ ನಡೆಯಲಿದ್ದು ಸ್ಥಳೀಯ ನಿಕಟ ಪೂರ್ವ ಪಾಲಿಕೆ ಸದಸ್ಯರಾದ ಶೈಲೇಶ್ ಶೆಟ್ಟಿಯವರು ವಿಶೇಷ ಶ್ರಮ ವಹಿಸಿದ್ದಾರೆ. ಈ ಭಾಗವು ಹಲವು ಧಾರ್ಮಿಕ ಕೇಂದ್ರಗಳು, ಕುದ್ಮುಲ್ ರಂಗರಾವ್ ರವರ ಸಮಾಧಿ ಹಾಗೂ ಟ್ರಸ್ಟ್, ಮೆಸ್ಕಾಂ ಕಚೇರಿ ಸಹಿತ ಜನನಿಬಿಡ ಪ್ರದೇಶವಾಗಿದ್ದು, ಮುಖ್ಯ ರಸ್ತೆಯಾಗಿರುವ ಕಾರಣ ಕಾಮಗಾರಿ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಸಹಕಾರವೂ ಬಹಳ ಮುಖ್ಯ ಎಂದರು. ಈ ವೇಳೆ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ರಮೇಶ್ ಹೆಗ್ಡೆ, ಲಲ್ಲೆಶ್ ಕುಮಾರ್, ಪಶ್ಚಿಮ ಶಕ್ತಿ ಕೇಂದ್ರದ ಅಧ್ಯಕ್ಷರಾದ ಮೋಹನ್ ಪೂಜಾರಿ, ವಾರ್ಡ್ ಅಧ್ಯಕ್ಷರಾದ ಪುಷ್ಪರಾಜ್ ಶೆಟ್ಟಿ,…

Read More