- ಕಾಪು ತಾಲೂಕು–ಬೈರಂಪಳ್ಳಿ ಘಟಕದ ತುಳುನಾಡ ರಕ್ಷಣಾ ವೇದಿಕೆ ಕಾರ್ಯಕರ್ತರ ಸ್ನೇಹ ಸಮ್ಮಿಲನ ಯಶಸ್ವಿ ,ಹಲವರು ಸದಸ್ಯತ್ವ ಪಡೆದು ಸಂಘಟನೆಗೆ ಸೇರ್ಪಡೆ – ತುಳುನಾಡಿನ ಭಾಷೆ, ಸಂಸ್ಕೃತಿ ಉಳಿವಿಗೆ ಯುವಜನತೆಗೆ ಯೋಗಿಶ್ ಶೆಟ್ಟಿ ಜಪ್ಪು ಕರೆ
- ಉಳ್ಳಾಲ – ಭಗವತೀ ಕ್ಷೇತ್ರ ವಿವಾದದಲ್ಲಿ ಬೆದರಿಕೆ ಆರೋಪ: ಕಾಂಗ್ರೆಸ್ ಮುಖಂಡನ ಆಡಿಯೋ ವೈರಲ್ ಆಡಿಯೋ ಕುರಿತು ಪೊಲೀಸರಿಗೆ ದೂರು
- ಕುಂದಾಪುರ ಶೂಟೌಟ್ ಪ್ರಕರಣ: ಪ್ರಮುಖ ಆರೋಪಿ ಡೆರಿಕ್ ಕ್ರಾಸ್ತಾ ಬಂಧನ
- ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡಿದ ಕಿಡಿಗೇಡಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಎನ್.ಪಿ. ಪುಷ್ಪರಾಜನ್ ಆಗ್ರಹ
- ಕಡಬ: ಬಿರುಗಾಳಿಗೆ ಅಡಿಕೆಮರ ಮುರಿದು ಬಿದ್ದು ವ್ಯಕ್ತಿ ದುರ್ಮರಣ
- ಕಾನೂನುಬದ್ಧ ನೋಂದಾಯಿತ ಆಯುಷ್ ವೈದ್ಯರನ್ನು ‘ನಕಲಿ ವೈದ್ಯರು’ ಎಂದು ಕರೆಯುವುದು ಸರಿಯಲ್ಲ: NCISM ಸ್ಪಷ್ಟನೆ
- ರತ್ನಾಕರ್ ಸುವರ್ಣರ ಸುಳ್ಳು ಮರಣ ಸುದ್ದಿ ಹರಡಿದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ: ಪೊಲೀಸ್ ಠಾಣೆಗೆ ಭೇಟಿ ನೀಡಿ ಜೆಡಿಎಸ್ ಮುಖಂಡರ ಮನವಿ
- ಜೆಡಿಎಸ್ ಮುಖಂಡ ರತ್ನಾಕರ್ ಸುವರ್ಣ ಅವರ ಬಗ್ಗೆ ಸುಳ್ಳು ಮರಣ ಸುದ್ದಿ: ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಉಮೇಶ್ ಕುಮಾರ್ ವೈ. ಆಗ್ರಹ
Author: Tulunada Surya
ಬೈರಂಪಳ್ಳಿ, ಆ. 2: ತುಳುನಾಡಿನ ಭಾಷೆ, ಸಂಸ್ಕೃತಿ, ಸಂಪ್ರದಾಯ, ಆಚರಣೆ, ಪರಂಪರೆ ಹಾಗೂ ಜನಪರ ಹಕ್ಕುಗಳ ಸಂರಕ್ಷಣೆ ಮತ್ತು ಅಭಿವೃದ್ಧಿಯನ್ನು ಧ್ಯೇಯವಾಗಿಸಿಕೊಂಡಿರುವ ತುಳುನಾಡ ರಕ್ಷಣಾ ವೇದಿಕೆ (ರಿ) ಕಾಪು ತಾಲೂಕು ಹಾಗೂ ಬೈರಂಪಳ್ಳಿ ಘಟಕದ ಆಶ್ರಯದಲ್ಲಿ ಭಾನುವಾರ ಬೈರಂಪಳ್ಳಿ ಸಾಂತ್ಯಾರ್ನ ಅಂಬೇಡ್ಕರ್ ಸಭಾಭವನದಲ್ಲಿ ಕಾರ್ಯಕರ್ತರ ಸ್ನೇಹ ಸಮ್ಮಿಲನ ಹಾಗೂ ನೂತನ ಸದಸ್ಯತ್ವ ಸೇರ್ಪಡೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವು ನವ್ಯ, ದಿವ್ಯ, ಹರ್ಷಿಣಿ ಹಾಗೂ ನಮೃತ ಅವರ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ಕಾಪು ತಾಲೂಕು ಅಧ್ಯಕ್ಷ ನಿತಿನ್ ಕುಮಾರ್ ಶೆಟ್ಟಿ ಹಾಗೂ ರಂಜಿತ್ ಕುಲಾಲ್ ಅತಿಥಿಗಳನ್ನು ಸ್ವಾಗತಿಸಿದರು. ಸಂಘಟನೆಯ ಸ್ಥಾಪಕ ಅಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ತುಳುನಾಡಿನ ಭಾಷೆ, ಸಂಸ್ಕೃತಿ, ನೆಲ-ಜಲ, ಪರಂಪರೆ ಹಾಗೂ ಐತಿಹಾಸಿಕ ಮೌಲ್ಯಗಳ ಸಂರಕ್ಷಣೆ ಪ್ರತಿಯೊಬ್ಬ ತುಳುವರ ಜವಾಬ್ದಾರಿಯಾಗಿದೆ ಎಂದರು. ಸಮಾಜಸೇವೆ, ಪರಿಸರ ಸಂರಕ್ಷಣೆ, ಸಾಮಾಜಿಕ ನ್ಯಾಯ ಹಾಗೂ ಜನಜಾಗೃತಿ ಕಾರ್ಯಕ್ರಮಗಳ ಮೂಲಕ ತುಳುನಾಡ ರಕ್ಷಣಾ ವೇದಿಕೆ ಜನಪರ…
ಮಂಗಳೂರು, ಆ. 1: ತೀಯಾ ಸಮಾಜದ ಆರಾಧ್ಯ ಕ್ಷೇತ್ರವಾದ ಉಳ್ಳಾಲ ಶ್ರೀ ಚಿರುಂಭ ಭಗವತೀ ಕ್ಷೇತ್ರದ ಆಡಳಿತಕ್ಕೆ ಸಂಬಂಧಿಸಿದ ವಿವಾದ ಇದೀಗ ಹೊಸ ತಿರುವು ಪಡೆದಿದೆ. ಕ್ಷೇತ್ರದ ಆಡಳಿತ ಸಮಿತಿಯ ಅಧ್ಯಕ್ಷ ಚಿದಾನಂದ ಗುರಿಕಾರ ಅವರು ಎರಡು ವರ್ಷದ ಅಧಿಕಾರಾವಧಿ ಪೂರ್ಣಗೊಂಡಿದ್ದರೂ ಮಹಾಸಭೆ ಕರೆಯದೇ ಅಧಿಕಾರ ಮುಂದುವರಿಸಿರುವುದಾಗಿ ಆರೋಪಿಸಿ, ಆಡಳಿತ ಸಮಿತಿ ಸದಸ್ಯ ಪವನ್ ರಾಜ್ ಕೊಲ್ಯ ಅವರು ಜಿಲ್ಲಾ ನೋಂದಣಾಧಿಕಾರಿಗೆ ಸಲ್ಲಿಸಿದ್ದ ದೂರಿನ ಬೆನ್ನಲ್ಲೇ, ದೂರು ಹಿಂಪಡೆಯುವಂತೆ ಜೀವ ಬೆದರಿಕೆ ಹಾಕಿರುವ ಆರೋಪದ ಆಡಿಯೋ ವೈರಲ್ ಆಗಿದೆ. ವೈರಲ್ ಆಗಿರುವ ಆಡಿಯೋದಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಬೆಂಗಳೂರಿನ ಉದ್ಯಮಿ ಪ್ರಕಾಶ್ ಕುಂಪಲ ಅವರು ಪವನ್ ರಾಜ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ದೂರು ಹಿಂಪಡೆಯುವಂತೆ ಒತ್ತಡ ಹೇರಿರುವುದಾಗಿ ಆರೋಪಿಸಲಾಗಿದೆ. ಆಡಿಯೋದಲ್ಲಿನ ಸಂಭಾಷಣೆಯಲ್ಲಿ, “ಜಿಲ್ಲಾ ನೋಂದಣಾಧಿಕಾರಿಗೆ ನಾನು ಮಾತನಾಡಿದ್ದೇನೆ. ನೀನು ಮೌನವಾಗಿದ್ದರೆ ಮೇಲಾಧಿಕಾರಿಗಳಿಂದ ಕರೆ ಬರುತ್ತದೆ. ಭಗವತೀ ಕ್ಷೇತ್ರದ ವಿಚಾರದಲ್ಲಿ ಕೈ ಹಾಕಬೇಡ. ಮುಜರಾಯಿ ಇಲಾಖೆಯ ಕಮಿಷನರ್, ಜಿಲ್ಲಾಧಿಕಾರಿ ಸೇರಿದಂತೆ ವಿವಿಧ…
ಕುಂದಾಪುರ, ಆ. 1: ಕುಂದಾಪುರದ ಚರ್ಚ್ ರಸ್ತೆಯಲ್ಲಿ ಜುಲೈ 31ರಂದು ಶುಕ್ರವಾರ ನಸುಕಿನ ವೇಳೆ ನಡೆದ ಗುಂಡಿನ ದಾಳಿ ಹಾಗೂ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಅವರ ನೇತೃತ್ವದಲ್ಲಿ ರಚಿಸಲಾದ ವಿಶೇಷ ಪೊಲೀಸ್ ತಂಡ ಬಂಧಿಸಿದೆ. ಬಂಧಿತ ಆರೋಪಿಯನ್ನು ಹೆಮ್ಮಾಡಿ ಸಮೀಪದ ಕನ್ನಡಕುದ್ರು ಮೂಲದ, ಪ್ರಸ್ತುತ ಕುಂದಾಪುರದ ಫ್ಲ್ಯಾಟ್ನಲ್ಲಿ ವಾಸವಿರುವ ಡೆರಿಕ್ ಕ್ರಾಸ್ತಾ (55) ಎಂದು ಗುರುತಿಸಲಾಗಿದೆ. ಈತ ಹೆಬ್ರಿ ಮೂಲದ, ಪ್ರಸ್ತುತ ಬಾರ್ಕೂರು ಸಮೀಪದ ಕಚ್ಚೂರಿನ ಬಾಡಿಗೆ ಮನೆಯಲ್ಲಿ ವಾಸವಿದ್ದ ಐವನ್ ರಿಚರ್ಡ್ ಮಸ್ಕರೇನಸ್ ಅಲಿಯಾಸ್ ಮುನ್ನಾ (45) ಅವರನ್ನು ಗುಂಡಿಕ್ಕಿ ಹತ್ಯೆಗೈದ ಆರೋಪ ಎದುರಿಸುತ್ತಿದ್ದನು. ಘಟನೆ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದ. ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ವಿಶೇಷ ಪೊಲೀಸ್ ತಂಡವು ಶನಿವಾರ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ ಬೆಳಕೆ–ಹೇರಬುಡಿಕೆ ಪ್ರದೇಶದಲ್ಲಿ ಆರೋಪಿಯನ್ನು ಬಂಧಿಸಿದೆ. ಬಂಧಿತ ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ…
ಕರ್ನಾಟಕ ಪ್ರದೇಶ ಜಾತ್ಯಾತೀತ ಜನತಾದಳದ ರಾಜ್ಯ ಮೀನುಗಾರ ಘಟಕದ ಅಧ್ಯಕ್ಷರಾದ ಶ್ರೀ ರತ್ನಾಕರ್ ಸುವರ್ಣ ಅವರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅವರು ನಿಧನರಾಗಿದ್ದಾರೆ ಎಂಬ ಸುಳ್ಳು ಸುದ್ದಿಯನ್ನು ನಕಲಿ ಪೋಸ್ಟರ್ ಮೂಲಕ ಹರಡುವ ದುಷ್ಕೃತ್ಯವನ್ನು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಎನ್.ಪಿ. ಪುಷ್ಪರಾಜನ್ ತೀವ್ರವಾಗಿ ಖಂಡಿಸಿದ್ದಾರೆ. ಜೀವಂತವಾಗಿರುವ ವ್ಯಕ್ತಿಯನ್ನು ಮೃತಪಟ್ಟಿದ್ದಾರೆ ಎಂದು ಬಿಂಬಿಸುವುದು ಕೇವಲ ಸುಳ್ಳು ಮಾಹಿತಿ ಹರಡುವ ಕೃತ್ಯವಲ್ಲ; ಅದು ವ್ಯಕ್ತಿಯ ಗೌರವಕ್ಕೆ ಧಕ್ಕೆ ತರುವುದರ ಜೊತೆಗೆ ಅವರ ಕುಟುಂಬದವರು, ಸ್ನೇಹಿತರು ಹಾಗೂ ಸಾರ್ವಜನಿಕರಲ್ಲಿ ಅನಗತ್ಯ ಆತಂಕ ಮತ್ತು ಗೊಂದಲ ಉಂಟುಮಾಡುವ ಅತ್ಯಂತ ಜವಾಬ್ದಾರಿಯಿಲ್ಲದ ನಡೆ. ಸಾಮಾಜಿಕ ಜಾಲತಾಣಗಳ ದುರುಪಯೋಗದ ಮೂಲಕ ಇಂತಹ ಸುಳ್ಳು ಸುದ್ದಿಗಳನ್ನು ಹರಡುವವರ ವಿರುದ್ಧ ಕಾನೂನು ತನ್ನ ಕೆಲಸವನ್ನು ಕಟ್ಟುನಿಟ್ಟಾಗಿ ಮಾಡಬೇಕು. ಭಿನ್ನಾಭಿಪ್ರಾಯಗಳು ಪ್ರಜಾಪ್ರಭುತ್ವದ ಭಾಗವಾಗಿದ್ದರೂ, ವ್ಯಕ್ತಿಯ ತೇಜೋವಧೆ ಮಾಡುವ ಉದ್ದೇಶದಿಂದ ಸುಳ್ಳು ಪೋಸ್ಟರ್ಗಳನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದು ಯಾವುದೇ ನಾಗರಿಕ ಸಮಾಜ ಒಪ್ಪಿಕೊಳ್ಳುವಂತಹ ಕೃತ್ಯವಲ್ಲ. ಇಂತಹ ವಿಕೃತ ಮನೋಭಾವದ ಕೃತ್ಯಗಳು…
ಕಡಬ , ಜು. 31: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಂತೂರು ಗ್ರಾಮದ ಕೇವಳದಲ್ಲಿ ಶನಿವಾರ ಸುರಿದ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಅಡಿಕೆಮರವೊಂದು ಮುರಿದು ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಮೃತ ವ್ಯಕ್ತಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಏಕಾಏಕಿ ಬೀಸಿದ ಬಿರುಗಾಳಿಗೆ ಅಡಿಕೆಮರ ಮುರಿದು ಅವರ ಮೇಲೆ ಬಿದ್ದಿದೆ. ತೀವ್ರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ಮಾಹಿತಿ ದೊರಕುತ್ತಿದ್ದಂತೆಯೇ ಕಡಬ ತಹಶೀಲ್ದಾರ್ ಗಣೇಶ್ ಸವಣೂರ, ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಯ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
ನವದೆಹಲಿ, ಜುಲೈ 31: ಭಾರತೀಯ ವೈದ್ಯಕೀಯ ಪದ್ಧತಿಯ ರಾಷ್ಟ್ರೀಯ ಆಯೋಗ (NCISM) ಮಹತ್ವದ ಸುತ್ತೋಲೆಯನ್ನು ಹೊರಡಿಸಿದ್ದು, ಕಾನೂನುಬದ್ಧವಾಗಿ ನೋಂದಾಯಿತರಾಗಿರುವ ಆಯುಷ್ ವೈದ್ಯರನ್ನು “ನಕಲಿ ವೈದ್ಯರು (Quacks)” ಅಥವಾ “ಬೋಗಸ್ ವೈದ್ಯರು” ಎಂದು ಕರೆಯುವುದಕ್ಕೆ ಯಾವುದೇ ಕಾನೂನು ಆಧಾರವಿಲ್ಲ ಎಂದು ಸ್ಪಷ್ಟಪಡಿಸಿದೆ. NCISM ಕಾಯಿದೆ, 2020ರ ಅಡಿಯಲ್ಲಿ ಹೊರಡಿಸಲಾದ ಈ ಸುತ್ತೋಲೆಯಲ್ಲಿ, ಬ್ಯಾಚುಲರ್ ಆಫ್ ಆಯುರ್ವೇದಿಕ್ ಮೆಡಿಸಿನ್ ಅಂಡ್ ಸರ್ಜರಿ (BAMS), ಬ್ಯಾಚುಲರ್ ಆಫ್ ಯುನಾನಿ ಮೆಡಿಸಿನ್ ಅಂಡ್ ಸರ್ಜರಿ (BUMS), ಬ್ಯಾಚುಲರ್ ಆಫ್ ಸಿದ್ಧ ಮೆಡಿಸಿನ್ ಅಂಡ್ ಸರ್ಜರಿ (BSMS) ಹಾಗೂ ಬ್ಯಾಚುಲರ್ ಆಫ್ ಸೋವಾ-ರಿಗ್ಪಾ ಮೆಡಿಸಿನ್ ಅಂಡ್ ಸರ್ಜರಿ (BSRMS) ಪದವಿಗಳನ್ನು ಪಡೆದ, ಸಂಬಂಧಪಟ್ಟ ರಾಜ್ಯ ಭಾರತೀಯ ವೈದ್ಯಕೀಯ ಮಂಡಳಿಗಳಲ್ಲಿ ನಿಯಮಾನುಸಾರ ನೋಂದಾಯಿತರಾಗಿರುವ ವೈದ್ಯರು ಕಾನೂನುಬದ್ಧವಾಗಿ ಮಾನ್ಯತೆ ಪಡೆದ ಆರೋಗ್ಯ ವೃತ್ತಿಪರರು ಎಂದು ತಿಳಿಸಲಾಗಿದೆ. ಸಾಮಾಜಿಕ ಜಾಲತಾಣಗಳು, ಮುದ್ರಣ ಹಾಗೂ ದೃಶ್ಯ ಮಾಧ್ಯಮಗಳು ಸೇರಿದಂತೆ ವಿವಿಧ ಸಾರ್ವಜನಿಕ ವೇದಿಕೆಗಳಲ್ಲಿ ಕೆಲವರು ಇಂತಹ ವೈದ್ಯರನ್ನು “ನಕಲಿ ವೈದ್ಯರು” ಅಥವಾ “ಬೋಗಸ್ ವೈದ್ಯರು”…
ಮಂಗಳೂರು, ಜುಲೈ 31: ಜನತಾದಳ (ಜಾತ್ಯತೀತ) ಪಕ್ಷದ ಮೀನುಗಾರ ಘಟಕದ ರಾಜ್ಯಾಧ್ಯಕ್ಷ ರತ್ನಾಕರ್ ಸುವರ್ಣ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾವಚಿತ್ರದೊಂದಿಗೆ ಸುಳ್ಳು ಮರಣ ಸುದ್ದಿಯನ್ನು ಹರಿಬಿಟ್ಟು ಮಾನಹಾನಿ ಹಾಗೂ ಸಾರ್ವಜನಿಕರಲ್ಲಿ ಆತಂಕ ಮತ್ತು ಗೊಂದಲ ಸೃಷ್ಟಿಸಿರುವ ಘಟನೆ ಅತ್ಯಂತ ಖಂಡನೀಯ ಎಂದು ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಯೋಗಿಶ್ ಶೆಟ್ಟಿ ಜಪ್ಪು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾರೋ ದುಷ್ಕರ್ಮಿಗಳು ಉದ್ದೇಶಪೂರ್ವಕವಾಗಿ ರತ್ನಾಕರ್ ಸುವರ್ಣ ಅವರು ಮೃತಪಟ್ಟಿದ್ದಾರೆ ಎಂಬ ಸುಳ್ಳು ಮಾಹಿತಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಿರುವ ಪರಿಣಾಮ ಅವರ ಕುಟುಂಬದ ಸದಸ್ಯರು, ಸಂಬಂಧಿಕರು, ಸ್ನೇಹಿತರು, ಪಕ್ಷದ ಮುಖಂಡರು ಹಾಗೂ ಹಿತೈಷಿಗಳು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಇಂತಹ ದುರುದ್ದೇಶಪೂರಿತ ಕೃತ್ಯಗಳು ವ್ಯಕ್ತಿಯ ಘನತೆ, ಗೌರವ ಹಾಗೂ ಸಾಮಾಜಿಕ ವಿಶ್ವಾಸಕ್ಕೆ ಧಕ್ಕೆ ತರುವುದಲ್ಲದೆ, ಸಮಾಜದಲ್ಲಿ ಸುಳ್ಳು ಸುದ್ದಿಗಳಿಗೆ ಉತ್ತೇಜನ ನೀಡುವ ಅಪಾಯಕಾರಿ ಪ್ರವೃತ್ತಿಯಾಗಿದೆ ಎಂದು ಅವರು ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣಗಳ ದುರುಪಯೋಗ ಮಾಡಿಕೊಂಡು ಸುಳ್ಳು ಮಾಹಿತಿ ಹರಡುವುದು ಗಂಭೀರ…
ಬಿಸಿರೋಡ್, ಜು.31: ಜೆಡಿಎಸ್ ಮುಖಂಡ ರತ್ನಾಕರ್ ಸುವರ್ಣ ಅವರ ಕುರಿತು ಸಾಮಾಜಿಕ ಜಾಲತಾಣಗಳು ಹಾಗೂ ಕೆಲವು ಮಾಧ್ಯಮಗಳಲ್ಲಿ ಸುಳ್ಳು ಮರಣ ಸುದ್ದಿಯನ್ನು ಉದ್ದೇಶಪೂರ್ವಕವಾಗಿ ಹರಡಿರುವ ಘಟನೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಅಡ್ವಕೇಟ್ ಉಮೇಶ್ ಕುಮಾರ್ ವೈ. ಅವರು, ಯಾವುದೇ ಸತ್ಯಾಸತ್ಯತೆ ಪರಿಶೀಲಿಸದೆ ಇಂತಹ ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡುವುದು ಅತ್ಯಂತ ಬೇಜವಾಬ್ದಾರಿಯ ಕೃತ್ಯವಾಗಿದೆ. ಇದರಿಂದ ಸಂಬಂಧಪಟ್ಟ ವ್ಯಕ್ತಿಯ ಘನತೆಗೆ ಧಕ್ಕೆ ಉಂಟಾಗುವುದಲ್ಲದೆ, ಅವರ ಕುಟುಂಬಸ್ಥರು, ಸ್ನೇಹಿತರು, ಅಭಿಮಾನಿಗಳು ಹಾಗೂ ಸಾರ್ವಜನಿಕರಲ್ಲಿ ಆತಂಕ ಮತ್ತು ಗೊಂದಲ ಸೃಷ್ಟಿಯಾಗುತ್ತದೆ ಎಂದು ಹೇಳಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳನ್ನು ದುರುಪಯೋಗಪಡಿಸಿಕೊಂಡು ಸುಳ್ಳು ಸುದ್ದಿಗಳು, ವದಂತಿಗಳು ಹಾಗೂ ಅಪಪ್ರಚಾರಗಳನ್ನು ಹರಡುವ ಪ್ರವೃತ್ತಿ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಸುಳ್ಳು ಮಾಹಿತಿ ಹರಡುವುದನ್ನು ಯಾವುದೇ ಕಾರಣಕ್ಕೂ ಸಮರ್ಥಿಸಲು ಸಾಧ್ಯವಿಲ್ಲ. ಇಂತಹ ಕೃತ್ಯಗಳು ಸಮಾಜದ ಶಾಂತಿ ಹಾಗೂ ಸಾರ್ವಜನಿಕರ ವಿಶ್ವಾಸಕ್ಕೆ ಧಕ್ಕೆ ತರುವಂತವು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಈ ಪ್ರಕರಣವನ್ನು ಪೊಲೀಸ್…
ಮಂಗಳೂರು, ಜುಲೈ 31: ಜನತಾದಳ (ಜಾತ್ಯತೀತ) ಪಕ್ಷದ ಮೀನುಗಾರ ಘಟಕದ ರಾಜ್ಯಾಧ್ಯಕ್ಷರಾದ ರತ್ನಾಕರ್ ಸುವರ್ಣ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮರಣ ಸುದ್ದಿಯನ್ನು ಅವರ ಭಾವಚಿತ್ರದೊಂದಿಗೆ ಹರಿಬಿಟ್ಟು ಮಾನಹಾನಿ ಹಾಗೂ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿರುವ ಘಟನೆ ಅತ್ಯಂತ ಖಂಡನೀಯ ಎಂದು ಜನತಾದಳ (ಜಾತ್ಯತೀತ) ದಕ್ಷಿಣ ಕನ್ನಡ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಯೋಗಿಶ್ ಶೆಟ್ಟಿ ಜಪ್ಪು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾರೋ ದುಷ್ಕರ್ಮಿಗಳು ಉದ್ದೇಶಪೂರ್ವಕವಾಗಿ ರತ್ನಾಕರ್ ಸುವರ್ಣ ಅವರು ಮೃತಪಟ್ಟಿದ್ದಾರೆ ಎಂಬ ಸುಳ್ಳು ಮಾಹಿತಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಿರುವ ಪರಿಣಾಮ ಅವರ ಕುಟುಂಬದ ಸದಸ್ಯರು, ಸಂಬಂಧಿಕರು, ಸ್ನೇಹಿತರು, ಪಕ್ಷದ ಮುಖಂಡರು ಹಾಗೂ ಹಿತೈಷಿಗಳು ತೀವ್ರ ಆತಂಕ ಮತ್ತು ಗೊಂದಲಕ್ಕೆ ಒಳಗಾಗಿದ್ದಾರೆ. ಇಂತಹ ದುರುದ್ದೇಶಪೂರಿತ ಕೃತ್ಯಗಳು ವ್ಯಕ್ತಿಯ ಘನತೆ ಮತ್ತು ಗೌರವಕ್ಕೆ ಧಕ್ಕೆ ತರುವುದಲ್ಲದೆ, ಸಮಾಜದಲ್ಲಿ ಸುಳ್ಳು ಸುದ್ದಿಗಳಿಗೆ ಉತ್ತೇಜನ ನೀಡುವ ಅಪಾಯಕಾರಿ ಪ್ರವೃತ್ತಿಯಾಗಿದೆ ಎಂದು ಅವರು ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣಗಳ ದುರುಪಯೋಗ ಮಾಡಿ ಸುಳ್ಳು ಮಾಹಿತಿ ಹರಡುವುದು ಗಂಭೀರ…
ಕುಂದಾಪುರ, ಜು. 31: ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದ ವೈಷಮ್ಯ ಭೀಕರ ಹತ್ಯೆಯಲ್ಲಿ ಅಂತ್ಯಗೊಂಡಿದ್ದು, ರೌಡಿಶೀಟರ್ ಐವನ್ ರಿಚಾರ್ಡ್ ಮಸ್ಕರೇನಸ್ ಅಲಿಯಾಸ್ ಮುನ್ನಾ ಗುಂಡೇಟಿಗೆ ಬಲಿಯಾಗಿದ್ದಾರೆ. ಪೊಲೀಸ್ ಮಾಹಿತಿಯ ಪ್ರಕಾರ, ಜುಲೈ 30ರ ರಾತ್ರಿ ಐವನ್ ಹಾಗೂ ಡೆರಿಕ್ ಕ್ರಾಸ್ತಾ ನಡುವೆ ಹಣಕಾಸಿನ ವ್ಯವಹಾರದ ವಿಚಾರವಾಗಿ ತೀವ್ರ ಮಾತಿನ ಚಕಮಕಿ ನಡೆದಿತ್ತು. ಬಳಿಕ ಡೆರಿಕ್ ತನ್ನ ಲೊಕೇಶನ್ ಅನ್ನು ಕಳುಹಿಸಿ, ಕುಂದಾಪುರದ ಚರ್ಚ್ ರಸ್ತೆಯ ಹೋಲಿ ರೋಸಾರಿ ಚರ್ಚ್ ಎದುರು ಬರಲು ಸೂಚಿಸಿದ್ದಾನೆ ಎನ್ನಲಾಗಿದೆ. ಜುಲೈ 31ರ ಮುಂಜಾನೆ ಸುಮಾರು 3.15ರ ವೇಳೆಗೆ ಐವನ್ ಸ್ಥಳಕ್ಕೆ ಥಾರ್ ಕಾರಿನಲ್ಲಿ ಆಗಮಿಸಿದ್ದಾನೆ. ಕಾರಿನಿಂದ ಇಳಿದ ತಕ್ಷಣ ಆರೋಪಿ ಡೆರಿಕ್ ಕ್ರಾಸ್ತಾ ಗನ್ನಿಂದ ಗುಂಡು ಹಾರಿಸಿದ್ದು, ತೀವ್ರವಾಗಿ ಗಾಯಗೊಂಡ ಐವನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಹಣಕಾಸು ಹಾಗೂ ಇತರ ವ್ಯವಹಾರಗಳಿಗೆ ಸಂಬಂಧಿಸಿದ ಮನಸ್ತಾಪವೇ ಕೃತ್ಯಕ್ಕೆ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಕುಂದಾಪುರ ಪೊಲೀಸ್ ಠಾಣೆಯಲ್ಲಿ…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
