- ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಮಾಜ ಕಲ್ಯಾಣ ಯೋಜನೆಯಡಿಯಲ್ಲಿ ದತ್ತು ಸ್ವೀಕರಿಸಿ ಮಾಸಿಕ ಧನಸಹಾಯ ಪಡೆಯುತ್ತಿರುವ ಪಲಾನುಭವಿಗಳಿಗೆ ಸಹಾಯಧನದ ಚೆಕ್ ವಿತರಣಾ ಕಾರ್ಯಕ್ರಮ
- ಉಡುಪಿ : ಕಟಪಾಡಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ – ಅನಿಲ ಸೋರಿಕೆ ಶಂಕೆ, ಅಗ್ನಿಶಾಮಕ ದಳದಿಂದ ತುರ್ತು ಕಾರ್ಯಾಚರಣೆ
- ಕರವೇ ಉಡುಪಿ ಜಿಲ್ಲಾ ಸಂಘಟನೆಗೆ ರಿಕ್ಷಾ ಚಾಲಕರ ಸೇರ್ಪಡೆ
- ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದಿಂದ ರಂಜಾನ್ ಸೌಹಾರ್ಧ ಇಫ್ತಾರ್ ಕೂಟ – ಶಾಂತಿ ಸಂದೇಶ ಸಾರಿದ ಕಾರ್ಯಕ್ರಮ
- ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ವೇಳಾಪಟ್ಟಿ ಘೋಷಣೆ. ಕೇರಳ, ಅಸ್ಸಾಂ, ತಮಿಳುನಾಡು ಹಾಗೂ ಪುದುಚೇರಿಯಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಪಶ್ಚಿಮ ಬಂಗಾಳದಲ್ಲಿ ಎರಡು ಹಂತಗಳಲ್ಲಿ ಚುನಾವಣೆ
- ದಕ್ಷಿಣ ಕನ್ನಡ ಜಿಲ್ಲಾ ವಿದ್ಯಾರ್ಥಿ ಜನತಾದಳಕ್ಕೆ ನೂತನ ಪದಾಧಿಕಾರಿಗಳ ನೇಮಕ – ಸಂಘಟನೆ ಬಲವರ್ಧನೆಗೆ ಹೊಸ ಚೈತನ್ಯ
- ಗೋಡೆ–ಕಟ್ಟಡಗಳ ಮೇಲಿನ ಜಾಹೀರಾತುಗಳಿಗೆ ತೆರಿಗೆ: ರಾಜ್ಯ ಸರ್ಕಾರದ ಹೊಸ ತಿದ್ದುಪಡಿ
- ಚಿಕ್ಕಮಂಗಳೂರು: ಎಸ್.ಎಲ್. ಭೋಜೇಗೌಡ ನಿವಾಸಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ಶಶಿರಾಜ್ ಶೆಟ್ಟಿ ಕೊಳಂಬೆ ಮತ್ತು ಯೋಗಿಶ್ ಶೆಟ್ಟಿ ಜಪ್ಪು – ಪಕ್ಷ ಸಂಘಟನೆ ಬಲವರ್ಧನೆ ಕುರಿತು ಚರ್ಚೆ
Author: Tulunada Surya
ಮಂಗಳೂರು: ನಗರದ ಬಂಟ್ಸ್ ಹಾಸ್ಟೆಲ್ ಅಮೃತೋತ್ಸವ ಕಟ್ಟಡ ಸಭಾಂಗಣದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಮಾಜ ಕಲ್ಯಾಣ ಯೋಜನೆಯಡಿಯಲ್ಲಿ ದತ್ತು ಸ್ವೀಕರಿಸಿ ಮಾಸಿಕ ಧನಸಹಾಯ ಪಡೆಯುತ್ತಿರುವ ಪಲಾನುಭವಿಗಳಿಗೆ ಸಹಾಯಧನದ ಚೆಕ್ ವಿತರಣಾ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ವಹಿಸಿ, ಸಮಾಜ ಸೇವಾ ಕಾರ್ಯಗಳ ಮೂಲಕ ಬಡವರ ಮತ್ತು ಅಗತ್ಯವಿರುವವರ ಜೀವನಕ್ಕೆ ನೆರವಾಗುವುದು ಒಕ್ಕೂಟದ ಪ್ರಮುಖ ಉದ್ದೇಶವೆಂದು ಹೇಳಿದರು. ಸಮಾಜದ ಸಹಕಾರದಿಂದ ಇಂತಹ ಯೋಜನೆಗಳನ್ನು ಇನ್ನಷ್ಟು ವಿಸ್ತರಿಸಲು ಸಾಧ್ಯವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಒಕ್ಕೂಟದ ಉಪಾಧ್ಯಕ್ಷರಾದ ಕರ್ನಿರೆ ವಿಶ್ವನಾಥ್ ಶೆಟ್ಟಿ, ಕಾರ್ಯದರ್ಶಿ ಜಯಕರ್ ಶೆಟ್ಟಿ ಇಂದ್ರಾಳಿ ಹಾಗೂ ಜೊತೆ ಕಾರ್ಯದರ್ಶಿ ಚಂದ್ರಹಾಸ್ ಡಿ. ಶೆಟ್ಟಿ ರಂಗೋಲಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಒಕ್ಕೂಟದ ಸಂಚಾಲಕರಾದ ಕೊಲ್ಲಾಡಿ ಬಾಲಕೃಷ್ಣ ರೈ, ಆಹ್ವಾನಿತ ಸದಸ್ಯರಾದ ರವಿರಾಜ್ ಶೆಟ್ಟಿ ಜತ್ತಬೆಟ್ಟು, ಪಲಾನುಭವಿಗಳು ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು. ನಂತರ ಪಲಾನುಭವಿಗಳಿಗೆ ಸಹಾಯಧನದ ಚೆಕ್ಗಳನ್ನು ವಿತರಿಸಲಾಯಿತು.
ಉಡುಪಿ : ಜಿಲ್ಲೆಯ ಕಟಪಾಡಿ ಸಮೀಪ ಸೋಮವಾರ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿಯಾದ ಪರಿಣಾಮ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣಗೊಂಡ ಘಟನೆ ಸಂಭವಿಸಿದೆ. ಅಪಘಾತದ ನಂತರ ಟ್ಯಾಂಕರ್ನಿಂದ ಅನಿಲ ಸೋರಿಕೆಯಾಗುತ್ತಿರುವ ಶಂಕೆ ವ್ಯಕ್ತವಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಅಗ್ನಿಶಾಮಕ ದಳ ಹಾಗೂ ತುರ್ತು ಸೇವಾ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಆರಂಭಿಸಿದ್ದಾರೆ.ಪ್ರಾಥಮಿಕ ಮಾಹಿತಿಯ ಪ್ರಕಾರ, ಮಂಗಳೂರಿನಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಕಟಪಾಡಿ ಬಳಿ ಇರುವ ತಿರುವಿನಲ್ಲಿ ಪಲ್ಟಿಯಾದುದಾಗಿ ತಿಳಿದುಬಂದಿದೆ. ಅಪಘಾತಕ್ಕೆ ನಿಖರವಾದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.ಘಟನೆಯ ಬಳಿಕ ಟ್ಯಾಂಕರ್ನಿಂದ ಅನಿಲ ಸೋರಿಕೆಯ ಸಾಧ್ಯತೆ ಇರುವುದಾಗಿ ಶಂಕೆ ವ್ಯಕ್ತವಾದ ಕಾರಣ ಸ್ಥಳೀಯ ನಿವಾಸಿಗಳು ಹಾಗೂ ವಾಹನ ಚಾಲಕರಲ್ಲಿ ಆತಂಕ ಉಂಟಾಯಿತು. ಪರಿಸ್ಥಿತಿ ಗಂಭೀರವಾಗದಂತೆ ತಡೆಯಲು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳವನ್ನು ಸುರಕ್ಷಿತಗೊಳಿಸಿ ಅನಿಲ ಸೋರಿಕೆ ನಿಯಂತ್ರಣಕ್ಕೆ ಕ್ರಮ ಕೈಗೊಂಡಿದ್ದಾರೆ.ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಅಧಿಕಾರಿಗಳು ಮುನ್ನೆಚ್ಚರಿಕಾ ಕ್ರಮವಾಗಿ ಅಪಘಾತ ಸಂಭವಿಸಿದ ಪ್ರದೇಶದಲ್ಲಿ ಸಂಚಾರವನ್ನು ತಾತ್ಕಾಲಿಕವಾಗಿ ನಿಯಂತ್ರಿಸಿದ್ದು, ಪರಿಸ್ಥಿತಿಯನ್ನು ಸಮರ್ಪಕವಾಗಿ…
ಉಡುಪಿ: ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಉಡುಪಿ ಜಿಲ್ಲಾ ಘಟಕಕ್ಕೆ ರಿಕ್ಷಾ ಚಾಲಕರಾದ ಎಂಟು ಮಂದಿ ಸದಸ್ಯರು ಸೇರ್ಪಡೆಗೊಂಡರು. ಸೋಮವಾರ (ಮಾ.16) ಬೆಳಿಗ್ಗೆ 11 ಗಂಟೆಗೆ ಉಡುಪಿಯ ಮಥುರಾ ಛತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಸದಸ್ಯ ಸೇರ್ಪಡೆ ನಡೆಯಿತು. ಕರವೇ ರಾಜ್ಯಾಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿ ಅವರ ಅನುಮತಿಯೊಂದಿಗೆ ನಡೆದ ಸದಸ್ಯತ್ವ ನೋಂದಣಿ ಕಾರ್ಯಕ್ರಮದಲ್ಲಿ ವಿಠ್ಠಲ್ ಶೆಟ್ಟಿ, ನಿತೇಶ್ ಶೆಟ್ಟಿ, ಪಾಂಡಪ್ಪ, ಸಂತೋಷ್, ಇಬ್ರಾಹಿಂ, ಸಿದ್ದ ರೂಢ್, ಎಲ್ಲಪ್ಪ ಹಾಗೂ ಪ್ರವೀಣ್ ಅವರು ಸಂಘಟನೆಗೆ ಅಧಿಕೃತವಾಗಿ ಸೇರ್ಪಡೆಗೊಂಡರು. ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿ ಅವರು ಹೊಸ ಸದಸ್ಯರಿಗೆ ಶಾಲು ಹೊದಿಸಿ ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಉಡುಪಿ ಜಿಲ್ಲೆಯಲ್ಲಿ ಸಂಘಟನೆಯನ್ನು ಮತ್ತಷ್ಟು ಬಲಿಷ್ಠಗೊಳಿಸಲು ಎಲ್ಲರೂ ಒಗ್ಗೂಡಿ ಕಾರ್ಯನಿರ್ವಹಿಸಬೇಕು ಎಂದು ರಿಕ್ಷಾ ಚಾಲಕರಿಗೆ ಕರೆ ನೀಡಿದರು. ಈ ಕಾರ್ಯಕ್ರಮದಲ್ಲಿ ಕರವೇ ಜಿಲ್ಲಾ ಮುಖಂಡರಾದ ಜಯಪ್ರಕಾಶ್ ಶೆಟ್ಟಿ, ಆನಂದ್ ಶೆಟ್ಟಿ ಹಾಗೂ ನಾಗರಾಜ್ ಉಪಸ್ಥಿತರಿದ್ದರು.
ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದಿಂದ ರಂಜಾನ್ ಸೌಹಾರ್ಧ ಇಫ್ತಾರ್ ಕೂಟ – ಶಾಂತಿ ಸಂದೇಶ ಸಾರಿದ ಕಾರ್ಯಕ್ರಮ
ಉಡುಪಿ: ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಹೋದರತ್ವವನ್ನು ಬಲಪಡಿಸುವ ಉದ್ದೇಶದಿಂದ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಉಡುಪಿ ಜಿಲ್ಲಾ ಘಟಕದ ವತಿಯಿಂದ ಮುಸ್ಲಿಂ ಬಾಂಧವರಿಗಾಗಿ ರಂಜಾನ್ ಸೌಹಾರ್ಧ ಇಫ್ತಾರ್ ಕೂಟವನ್ನು ಆಯೋಜಿಸಲಾಯಿತು. ಮಾರ್ಚ್ 15ರಂದು ಉಡುಪಿಯ ಶ್ರೀ ಕೃಷ್ಣ ಮಠದ ರಾಜಾಂಗಣದ ಸಮೀಪದಲ್ಲಿರುವ ಮಥುರಾ ಛತ್ರದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವಿವಿಧ ಸಮುದಾಯದ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿ ಧರ್ಮಸೌಹಾರ್ದತೆಯ ಸಂದೇಶವನ್ನು ಹಂಚಿಕೊಂಡರು. ಕಾರ್ಯಕ್ರಮದಲ್ಲಿ ಮಾತನಾಡಿದ ಕರವೇ ಉಡುಪಿ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ ಅವರು, “ಉಡುಪಿ ಜಿಲ್ಲೆ ಸದಾ ಶಾಂತಿ ಮತ್ತು ಸೌಹಾರ್ದತೆಯ ಪರಂಪರೆಯನ್ನು ಕಾಪಾಡಿಕೊಂಡು ಬಂದಿರುವ ಪವಿತ್ರ ನೆಲವಾಗಿದೆ. ರಂಜಾನ್ ಮಾಸವು ಸಹೋದರತ್ವ, ಸಹಾನುಭೂತಿ ಮತ್ತು ಶಾಂತಿಯ ಸಂದೇಶವನ್ನು ಸಾರುತ್ತದೆ. ಎಲ್ಲಾ ಸಮುದಾಯದವರು ಪರಸ್ಪರ ಗೌರವದಿಂದ ಬದುಕಿ ಉಡುಪಿ ಜಿಲ್ಲೆಯನ್ನು ಶಾಂತಿ ಸೌಹಾರ್ದತೆಯ ಮಾದರಿ ಜಿಲ್ಲೆಯನ್ನಾಗಿ ರೂಪಿಸೋಣ” ಎಂದು ಕರೆ ನೀಡಿದರು. ಇಫ್ತಾರ್ ಕೂಟದಲ್ಲಿ ಕರವೇ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ, ಸೈಯದ್ ನಿಜಾಮ್, ತಮೀಮ್ ಉಸ್ತಾದ್, ಅಬು…
ನವದೆಹಲಿ: Election Commission of India ಭಾನುವಾರ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಘೋಷಿಸಿದೆ. ಕೇರಳ, ಅಸ್ಸಾಂ, ತಮಿಳುನಾಡು ಹಾಗೂ ಪುದುಚೇರಿಯಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಪಶ್ಚಿಮ ಬಂಗಾಳದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಎಲ್ಲಾ ರಾಜ್ಯಗಳ ಮತ ಎಣಿಕೆ ಮೇ 4, 2026 ರಂದು ನಡೆಯಲಿದೆ. ನವದೆಹಲಿಯ Vigyan Bhavan ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ Gyanesh Kumar, ಚುನಾವಣಾ ಆಯುಕ್ತರಾದ Sukhbir Singh Sandhu ಹಾಗೂ Vivek Joshi ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದರು. ಈ ಐದು ಪ್ರದೇಶಗಳ ಚುನಾವಣೆಯಲ್ಲಿ ಒಟ್ಟಾರೆ 800ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳು ಸೇರಿದ್ದು, ಅವುಗಳ ಅವಧಿ ಈ ವರ್ಷದ ಮೇ ತಿಂಗಳಲ್ಲಿ ಅಂತ್ಯಗೊಳ್ಳಲಿದೆ. 🗳️ ರಾಜ್ಯವಾರು ಚುನಾವಣಾ ವೇಳಾಪಟ್ಟಿ 📍 Kerala (140 ಕ್ಷೇತ್ರಗಳು)• ನಾಮಪತ್ರ ಸಲ್ಲಿಕೆ ಕೊನೆ ದಿನ: ಮಾರ್ಚ್ 23• ನಾಮಪತ್ರ ವಾಪಸ್ ಕೊನೆ ದಿನ: ಮಾರ್ಚ್ 26• ಮತದಾನ: ಏಪ್ರಿಲ್ 9• ಮತ ಎಣಿಕೆ:…
ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಾತ್ಯಾತೀತ ಜನತಾದಳ (ಜೆಡಿಎಸ್) ಪಕ್ಷದ ವಿದ್ಯಾರ್ಥಿ ಘಟಕವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ದಿನಾಂಕ 15-03-2026 ರಂದು ಸುಳ್ಯದಲ್ಲಿರುವ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಜಾಕೆ ಮಾಧವ ಗೌಡ ಅವರು ವಿದ್ಯಾರ್ಥಿ ಜನತಾದಳದ ಜಿಲ್ಲಾ ಪದಾಧಿಕಾರಿಗಳನ್ನು ಅಧಿಕೃತವಾಗಿ ನೇಮಕ ಮಾಡಿದರು. ಈ ನೇಮಕಾತಿಯಲ್ಲಿ ಆಯುರ್ವೇದಿಕ್ ವಿದ್ಯಾರ್ಥಿ ನಿಹಾಲ್ ಎಸ್. ಕೋಡ್ತುಗುಳಿ ಅವರನ್ನು ಜಿಲ್ಲಾ ಅಧ್ಯಕ್ಷರಾಗಿ ನೇಮಕ ಮಾಡಲಾಗಿದ್ದು, ಪ್ರಣವ್ ಬಾಲಕೃಷ್ಣ ಹಾಗೂ ಶ್ರೇಯಸ್ ಸಿ. ಕುಕ್ಕುಜೆ ಅವರನ್ನು ಉಪಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಅದೇ ವೇಳೆ ರುತೇಶ್ ಜಾಕೆ ಮತ್ತು ಅಂಜನ್ ಮೂರ್ಜೆ ಅವರನ್ನು ಪ್ರಧಾನ ಕಾರ್ಯದರ್ಶಿಗಳಾಗಿ ನೇಮಕ ಮಾಡಲಾಗಿದೆ. ಇದರ ಜೊತೆಗೆ ಕಾರ್ಯಕಾರಿ ಸದಸ್ಯರಾಗಿ ಪ್ರೀತಮ್ ಮಾಜಿಕೋಡಿ, ಸಾಗರ್ ಹಾಗೂ ಸಾಯಿಸ್ಮರಣ್ ಅವರನ್ನು ಆಯ್ಕೆ ಮಾಡಲಾಗಿದೆ. ಸಭೆಯಲ್ಲಿ ಮಾತನಾಡಿದ ಜಿಲ್ಲಾ ಅಧ್ಯಕ್ಷ ಜಾಕೆ ಮಾಧವ ಗೌಡ, ಪಕ್ಷದ ಸಂಘಟನೆ ಬಲವರ್ಧನೆ ಮತ್ತು ಮುಂದಿನ…
ಬೆಂಗಳೂರು: ಮನೆಗಳು, ಖಾಸಗಿ ಕಟ್ಟಡಗಳು ಹಾಗೂ ಗೋಡೆಗಳ ಮೇಲೆ ಸಾರ್ವಜನಿಕರ ಗಮನ ಸೆಳೆಯುವಂತೆ ಪ್ರದರ್ಶಿಸುವ ಜಾಹೀರಾತುಗಳು ಮತ್ತು ಜಾಹೀರಾತು ಫಲಕಗಳಿಗೆ ಇನ್ನು ಮುಂದೆ ತೆರಿಗೆ ವಿಧಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಕುರಿತು ಕರ್ನಾಟಕ ಮುನ್ಸಿಪಾಲಿಟಿಗಳು ಮತ್ತು ಇತರ ಕಾನೂನುಗಳಲ್ಲಿ ತಿದ್ದುಪಡಿ ತರಲು ಸರ್ಕಾರ ಕ್ರಮ ಕೈಗೊಂಡಿದೆ. ಈ ಸಂಬಂಧದ ವಿಧೇಯಕವನ್ನು ನಗರಾಭಿವೃದ್ಧಿ ಸಚಿವ Bhairathi Suresh ಅವರು ಶುಕ್ರವಾರ Karnataka Legislative Assembly ಯಲ್ಲಿ ಮಂಡಿಸಿದರು. ಮುಂಬರುವ ವಾರದಲ್ಲಿ ಈ ವಿಧೇಯಕದ ಮೇಲೆ ಚರ್ಚೆ ನಡೆದು ಶಾಸನ ರೂಪ ಪಡೆಯುವ ಸಾಧ್ಯತೆ ಇದೆ. ತಿದ್ದುಪಡಿ ಪ್ರಕಾರ ಖಾಸಗಿ ಜಾಗಗಳಲ್ಲಿ ಸಾರ್ವಜನಿಕರಿಗೆ ಕಾಣುವ ರೀತಿಯಲ್ಲಿ ಪ್ರದರ್ಶಿಸುವ ಜಾಹೀರಾತುಗಳಿಗೆ ವಿವಿಧ ಸ್ಲ್ಯಾಬ್ಗಳಲ್ಲಿ ತೆರಿಗೆ ವಿಧಿಸಲು ಪ್ರಸ್ತಾವಿಸಲಾಗಿದೆ. ಒಂದು ಚದರ ಮೀಟರ್ ವರೆಗೆ ದೀಪಾಲಂಕಾರವಿಲ್ಲದ ಜಾಹೀರಾತುಗಳಿಗೆ ವಾರ್ಷಿಕ ₹10 ತೆರಿಗೆ ವಿಧಿಸಲಾಗುತ್ತದೆ. ಐದು ಚದರ ಮೀಟರ್ ವರೆಗಿನ ಜಾಹೀರಾತುಗಳಿಗೆ ₹25 ತೆರಿಗೆ ನಿಗದಿ ಮಾಡುವ ಪ್ರಸ್ತಾವವೂ ಇದೆ. ಇದಲ್ಲದೆ, ಒಂದು ಚದರ ಮೀಟರ್ ಮೀರಿದ…
ಚಿಕ್ಕಮಂಗಳೂರು: ಇತ್ತೀಚೆಗೆ ಮರು ಸೇರ್ಪಡೆಗೊಂಡ ಕರಾವಳಿ ಭಾಗದ ಜೆಡಿಎಸ್ ಮುಖಂಡರಾದ ಶಶಿರಾಜ್ ಶೆಟ್ಟಿ ಕೊಳಂಬೆ ಹಾಗೂ ಯೋಗಿಶ್ ಶೆಟ್ಟಿ ಜಪ್ಪು ಅವರು ಚಿಕ್ಕಮಂಗಳೂರಿನಲ್ಲಿ ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್. ಭೋಜೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದು ಪಕ್ಷದ ಸಂಘಟನೆ ಬಲವರ್ಧನೆ, ಸಂಘಟನೆ ವಿಸ್ತರಣೆ ಹಾಗೂ ಮುಂದಿನ ರಾಜಕೀಯ ಕಾರ್ಯಚಟುವಟಿಕೆಗಳ ಕುರಿತು ಮಹತ್ವದ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಕರಾವಳಿ ಭಾಗದಲ್ಲಿ ಜೆಡಿಎಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವುದು, ಹೊಸ ಕಾರ್ಯಕರ್ತರನ್ನು ಸಂಘಟನೆಯಲ್ಲಿ ಸೇರಿಸುವುದು ಹಾಗೂ ಪಕ್ಷದ ಚಟುವಟಿಕೆಗಳನ್ನು ತಳಮಟ್ಟದಿಂದ ಗಟ್ಟಿಗೊಳಿಸುವ ಬಗ್ಗೆ ಸಮಾಲೋಚನೆ ನಡೆಯಿತು. ಭೇಟಿ ವೇಳೆ ಪರಸ್ಪರ ಸ್ನೇಹಪೂರ್ಣವಾಗಿ ವಿಚಾರ ವಿನಿಮಯ ಮಾಡಿಕೊಂಡ ನಾಯಕರು, ಹಿರಿಯ ನಾಯಕರಾದ ಎಸ್.ಎಲ್. ಭೋಜೇಗೌಡ ಅವರ ಮಾರ್ಗದರ್ಶನದಲ್ಲಿ ಪಕ್ಷದ ಸಂಘಟನೆ ಬಲಪಡಿಸಲು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವ ಸಂಕಲ್ಪವನ್ನು ವ್ಯಕ್ತಪಡಿಸಿದರು.ಮುಂದಿನ ದಿನಗಳಲ್ಲಿ ದಕ್ಷಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಸಕ್ರಿಯವಾಗಿ ಕೆಲಸ ಮಾಡುವವರನ್ನು ಸೇರಿಸಿಕೊಂಡು ಮುಂದಿನ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಪಕ್ಷವನ್ನು ತಯಾರಿ…
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ 2026-28 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣಾ ಕಾರ್ಯಕ್ರಮ ಎಸ್ ಡಿ ಎಮ್ ಸಭಾಂಗಣದಲ್ಲಿ ಇಂದು ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶರಾದ ಶ್ರೀ ಬಸವರಾಜ್ ಉದ್ಘಾಟಿಸಿದರು. ಕರ್ನಾಟಕ ವಕೀಲರ ಪರಿಷತ್ತಿನ ಮಾಜಿ ಅಧ್ಯಕ್ಷರು ಹಿರಿಯ ಹೈಕೋರ್ಟ್ ವಕೀಲರಾದ ಪಿಪಿ ಹೆಗಡೆಯವರು ವಿದ್ಯಾರ್ಥಿವೇತನ ಚೆಕ್ಕನ್ನು ವಿತರಿಸಿದರು. ಹಳೆ ವಿದ್ಯಾರ್ಥಿ ಸಂಘದ ಲೋಗೋವನ್ನು ಸುಪ್ರೀಂ ಕೋರ್ಟ್ ನ್ಯಾಯವಾದಿಗಳಾದ ಶ್ರೀ ರೋಹಿತ್ ರಾವ್ ರವರು ನೆರವೇರಿಸಿದರು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ್ ರವರು ಭಾಗವಹಿಸಿದ್ದರು ಅತಿಥಿಗಳಾಗಿ ಮಂಗಳೂರು ವಕೀಲರ ಸಂಘದ ಅಧ್ಯಕ್ಷರಾದ ಎಚ್ ವಿ ರಾಘವೇಂದ್ರ ಸಂಸ್ಥೆಯ ಮಾಜಿ ನಿರ್ದೇಶಕರಾದ ಡಾ. ದೇವರಾಜ್ ಕೆ ರವರು ಉಪಸ್ಥಿತರಿದ್ದರು. ಸಮಾರಂಭದ ಅಧ್ಯಕ್ಷತೆಯನ್ನು ಎಸ್ ಡಿ ಎಮ್ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಡಾ. ತಾರನಾಥ್ ವಹಿಸಿದ್ದರು. ಅತಿಥಿಗಳನ್ನು ಹಳೆ ವಿದ್ಯಾರ್ಥಿ…
ಉಡುಪಿ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಏಕಕಾಲದಲ್ಲಿ ನಡೆದ ಲೋಕಾಯುಕ್ತದ ಭರ್ಜರಿ ದಾಳಿಯ ಭಾಗವಾಗಿ ಉಡುಪಿ ಜಿಲ್ಲಾ ಅಬಕಾರಿ ಉಪ ಆಯುಕ್ತ (ಡಿಸಿ) ಶ್ರೀನಿವಾಸ್ ಟಿ.ಎಂ. ಅವರಿಗೆ ಸಂಬಂಧಿಸಿದ ಆಸ್ತಿಗಳ ಮೇಲೂ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿದ್ದು, ಕೋಟ್ಯಂತರ ಮೌಲ್ಯದ ಅಸಮತೋಲನ ಆಸ್ತಿ ಪತ್ತೆಯಾಗಿದೆ. ಮಂಗಳೂರು ಲೋಕಾಯುಕ್ತ ವಿಭಾಗದ ಎಸ್ಪಿ ದಿನೇಶ್ ಕುಮಾರ್ ನೇತೃತ್ವದಲ್ಲಿ ಮಾರ್ಚ್ 11ರಿಂದ 12ರವರೆಗೆ ಎರಡು ದಿನಗಳ ಕಾಲ ಈ ಕಾರ್ಯಾಚರಣೆ ನಡೆದಿದ್ದು, ಅಧಿಕಾರಿಗೆ ಸಂಬಂಧಿಸಿದಂತೆ ಒಟ್ಟು 15 ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ. ದಾಳಿಯ ವೇಳೆ ಅಧಿಕಾರಿಗಳಿಗೆ 11 ನಿವೇಶನಗಳು, 6 ವಾಸದ ಮನೆಗಳು ಹಾಗೂ 31 ಎಕರೆ ಕೃಷಿ ಜಮೀನು ಸೇರಿದಂತೆ ಸುಮಾರು ರೂ.6,90,64,716 ಮೌಲ್ಯದ ಸ್ಥಿರಾಸ್ತಿಗಳು ಪತ್ತೆಯಾಗಿವೆ. ಇದರ ಜೊತೆಗೆ ವಿವಿಧ ರೂಪದಲ್ಲಿ ಭಾರೀ ಪ್ರಮಾಣದ ಚರಾಸ್ತಿಯೂ ಪತ್ತೆಯಾಗಿದೆ.• ರೂ.3,95,941 ನಗದು• ರೂ.1,47,50,506 ಮೌಲ್ಯದ ಚಿನ್ನಾಭರಣ• ರೂ.17,00,000 ಮೌಲ್ಯದ ವಾಹನಗಳು• ರೂ.25,75,000 ಮೌಲ್ಯದ ಬ್ಯಾಂಕ್ ಠೇವಣಿ• ರೂ.72,68,554 ಮೌಲ್ಯದ ಇತರೆ ವಸ್ತುಗಳು ಈ ಮೂಲಕ ಒಟ್ಟು…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
