Author: Tulunada Surya

ಮಂಗಳೂರು, ಜು. 26: 1971ರ ಭಾರತ–ಪಾಕಿಸ್ತಾನ ಯುದ್ಧದಲ್ಲಿ ಬಳಸಲ್ಪಟ್ಟ ಹಾಗೂ ಸುಮಾರು ನಾಲ್ಕು ದಶಕಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದ ಐತಿಹಾಸಿಕ ಟಿ-55 ಯುದ್ಧ ಟ್ಯಾಂಕ್ ಅನ್ನು ಮಂಗಳೂರಿನ ಕದ್ರಿಯ ಯುದ್ಧ ಸ್ಮಾರಕದ ಆವರಣದಲ್ಲಿ ಭಾನುವಾರ ಸಾರ್ವಜನಿಕರ ವೀಕ್ಷಣೆಗೆ ಲೋಕಾರ್ಪಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಹಾಗೂ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕ ವೇದವ್ಯಾಸ ಕಾಮತ್, ಮಾಜಿ ಸಚಿವ ನಾಗರಾಜ ಶೆಟ್ಟಿ, ನಿವೃತ್ತ ಯೋಧ ಕರ್ನಲ್ ಶರತ್ ಭಂಡಾರಿ, ಬ್ರಿಗೇಡಿಯರ್ ಜಿನನ್ ರೈ, ನಿವೃತ್ತ ಸೈನಿಕರ ಸಂಘದ ಅಧ್ಯಕ್ಷ ಶ್ರೀಕಾಂತ್ ಶೆಟ್ಟಿ, ಡಿಎಫ್ ಅಧ್ಯಕ್ಷ ರಾಘವೇಂದ್ರ, ಸತ್ಯಜಿತ್ ಸುರತ್ಕಲ್ ಸೇರಿದಂತೆ ಅನೇಕ ಗಣ್ಯರು, ನಿವೃತ್ತ ಯೋಧರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ನಿವೃತ್ತ ಸೈನಿಕರ ಸಂಘ, ರೋಟರಿ ಹಾಗೂ ಲಯನ್ಸ್ ಕ್ಲಬ್ ಸಹಯೋಗದಲ್ಲಿ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಗಣ್ಯರು, ಗಡಿಯಲ್ಲಿ ಸಾವಿರಾರು ಅಡಿ ಎತ್ತರದ ದುರ್ಗಮ ಪ್ರದೇಶಗಳಲ್ಲಿ ಬೆನ್ನಿಗೆ…

Read More

ಉಡುಪಿ, ಜು. 26: ತುಳುನಾಡಿನ ಸಂಸ್ಕೃತಿ, ಪರಂಪರೆ ಹಾಗೂ ಜನಪದ ಆಚರಣೆಗಳ ಪ್ರತೀಕವಾಗಿರುವ ‘ಆಟಿಡೊಂಜಿ ದಿನ’ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಯೋಜಿಸುವ ನಿಟ್ಟಿನಲ್ಲಿ ತುಳುನಾಡ ರಕ್ಷಣಾ ವೇದಿಕೆ (ರಿ.) ಉಡುಪಿ ಜಿಲ್ಲಾ ಘಟಕದ ಪೂರ್ವಭಾವಿ ಸಭೆಯು ಭಾನುವಾರ ಉಡುಪಿಯ ಕಾಪಿಯಾ ಹೋಟೆಲ್ ಸಮೀಪದ ಅಕ್ಷಯ ಟವರ್ಸ್‌ನಲ್ಲಿರುವ ಜಿಲ್ಲಾ ಕಚೇರಿಯಲ್ಲಿ ನಡೆಯಿತು. ಸಭೆಯು ಉಡುಪಿ ಜಿಲ್ಲಾ ಅಧ್ಯಕ್ಷರಾದ ಫ್ರಾಂಕಿ ಡಿಸೋಜಾ ಕೊಳಲಗಿರಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಆಟಿಡೊಂಜಿ ದಿನಾಚರಣೆಯನ್ನು ಯಶಸ್ವಿಗೊಳಿಸಲು ಅಗತ್ಯವಾದ ಸಿದ್ಧತೆಗಳು, ಕಾರ್ಯಕ್ರಮದ ರೂಪುರೇಷೆ, ವಿವಿಧ ಜವಾಬ್ದಾರಿಗಳ ಹಂಚಿಕೆ ಹಾಗೂ ಸದಸ್ಯರ ಪಾತ್ರದ ಕುರಿತು ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಯಿತು. ಜಿಲ್ಲಾ ಅಧ್ಯಕ್ಷರಾದ ಫ್ರಾಂಕಿ ಡಿಸೋಜಾ ಕೊಳಲಗಿರಿ ಅವರು ಮಾತನಾಡಿ, ತುಳುನಾಡಿನ ಆಚಾರ-ವಿಚಾರ, ಸಂಸ್ಕೃತಿ ಹಾಗೂ ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಆಟಿಡೊಂಜಿ ದಿನಾಚರಣೆಯಂತಹ ಕಾರ್ಯಕ್ರಮಗಳು ಅತ್ಯಂತ ಮಹತ್ವದ್ದಾಗಿದ್ದು, ಪ್ರತಿಯೊಬ್ಬ ಸದಸ್ಯರು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಂದ್ರ…

Read More

ಪುತ್ತೂರು, ಜು. 26: ಬಹು ಚರ್ಚೆಗೆ ಗ್ರಾಸವಾಗಿದ್ದ ಅಕ್ಷಯ್ ಕಾಲೇಜು ಕೂಲೆ ಪ್ರಕರಣದಲ್ಲಿ ಆರೋಪಿ ಮನೀಷ್‌ಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿರುವುದು ನ್ಯಾಯಾಂಗದ ಮೇಲಿನ ವಿಶ್ವಾಸವನ್ನು ಮತ್ತಷ್ಟು ಬಲಪಡಿಸಿರುವ ಬೆಳವಣಿಗೆಯಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್‌ನ ನ್ಯಾಯಮೂರ್ತಿ ಜಸ್ಟಿಸ್ ವಿಶ್ವಜಿತ್ ಶೆಟ್ಟಿ ಅವರು ಎರಡೂ ಪಕ್ಷಗಳ ವಾದ-ಪ್ರತಿವಾದಗಳನ್ನು ಆಲಿಸಿದ ಬಳಿಕ, ಕಾನೂನಿನ ನಿಯಮಾವಳಿಗಳ ಪ್ರಕಾರ ನಿಗದಿತ ಷರತ್ತುಗಳೊಂದಿಗೆ ಜಾಮೀನು ನೀಡಲು ಆದೇಶಿಸಿದ್ದಾರೆ. ಈ ಆದೇಶವು ಯಾರನ್ನೂ ನಿರ್ದೋಷಿ ಎಂದು ಘೋಷಿಸುವುದಲ್ಲ; ಆದರೆ ಅಂತಿಮ ತೀರ್ಪು ಬರುವವರೆಗೆ ಪ್ರತಿಯೊಬ್ಬ ಆರೋಪಿಗೂ ನ್ಯಾಯಯುತ ಅವಕಾಶ ದೊರಕಬೇಕು ಎಂಬ ಸಂವಿಧಾನಾತ್ಮಕ ತತ್ವವನ್ನು ಪುನರುಚ್ಚರಿಸುತ್ತದೆ. ನ್ಯಾಯಾಲಯದ ಈ ನಿರ್ಧಾರವು ಕಾನೂನಿನ ಪ್ರಕ್ರಿಯೆ ಮತ್ತು ನ್ಯಾಯದ ಮೌಲ್ಯಗಳನ್ನು ಎತ್ತಿಹಿಡಿಯುವ ಹೆಜ್ಜೆಯಾಗಿದೆ. ಮನೀಷ್ ಕುಟುಂಬಸ್ಥರು ಹಾಗೂ ಆಪ್ತರು ಹೈಕೋರ್ಟ್ ಆದೇಶವನ್ನು ಸ್ವಾಗತಿಸಿದ್ದು, ಸತ್ಯವು ನ್ಯಾಯಾಲಯದ ಮುಂದೆ ಸಂಪೂರ್ಣವಾಗಿ ಹೊರಬಂದು ಅಂತಿಮವಾಗಿ ನ್ಯಾಯ ದೊರೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ತನಿಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಹಾಗೂ ನ್ಯಾಯಾಲಯ ವಿಧಿಸಿರುವ…

Read More

ಮಂಗಳೂರು: ಪಳ್ಳಿ ದರ್ಸ್ ಎಂಬುದು ಇಸ್ಲಾಮಿನ ಪ್ರಾಚೀನ ಪರಂಪರೆಯಿಂದ ಬಂದಿರುವ ಶ್ರೇಷ್ಠ ಜ್ಞಾನ ವ್ಯವಸ್ಥೆಯಾಗಿದ್ದು, ಮಸೀದಿಯಲ್ಲಿ ದರ್ಸ್ ಆರಂಭವಾಗುವುದು ಆ ಊರಿನ ಆತ್ಮಿಕ ಹಾಗೂ ಶೈಕ್ಷಣಿಕ ಬೆಳವಣಿಗೆಗೆ ಹೊಸ ಬೆಳಕು ಮೂಡಿದಂತೆಯೇ ಎಂದು ಕುಂಬ್ರಾ ಮರ್ಕಝುಲ್ ಹುದಾ ಪ್ರಾಂಶುಪಾಲ ಯು.ಕೆ. ಮುಹಮ್ಮದ್ ಸಅದಿ ಅಭಿಪ್ರಾಯಪಟ್ಟರು. ಅವರು ಬದ್ರಿಯ ಜುಮಾ ಮಸೀದಿ, ಮಲ್ಲಾರು–ಮಜೂರಿನಲ್ಲಿ ಆಯೋಜಿಸಲಾದ “ಪಳ್ಳಿ ದರ್ಸ್” ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಭಾಷಣ ಮಾಡಿದರು. ದರ್ಸ್ ಪರಂಪರೆಯನ್ನು ಮುಂದಿನ ಪೀಳಿಗೆಗೂ ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಅವರು ಕರೆ ನೀಡಿದರು. ಸಮಾರಂಭದಲ್ಲಿ ದುಆ ಆಶೀರ್ವಚನ ನೀಡಿದ ಸಯ್ಯಿದ್ ಮುಹಮ್ಮದ್ ಮೌಲಾ ಜಮಲುಲ್ಲೈಲಿ ತಂಙಳ್ ಅವರು, ದರ್ಸ್ ಕೇವಲ ಧಾರ್ಮಿಕ ಶಿಕ್ಷಣ ನೀಡುವ ಕೇಂದ್ರವಲ್ಲ, ಉತ್ತಮ ವ್ಯಕ್ತಿತ್ವ ಮತ್ತು ಮೌಲ್ಯಗಳನ್ನು ರೂಪಿಸುವ ಜ್ಞಾನ ಮಂದಿರವಾಗಿದೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಮಾತ್ ಅಧ್ಯಕ್ಷ ಡಾ. ಎಂ. ಫಾರೂಕ್ ಚಂದ್ರನಗರ ಮಾತನಾಡಿ, “ನಮ್ಮ ಊರಿನಲ್ಲಿ ಪಳ್ಳಿ ದರ್ಸ್ ಆರಂಭವಾಗಬೇಕೆಂಬ ಕನಸು ಇಂದು…

Read More

ಮಂಗಳೂರು, ಜು. 25: ನಗರದ ಪ್ರತಿಷ್ಠಿತ ರೋಹನ್ ಕಾರ್ಪೊರೇಷನ್ ವತಿಯಿಂದ ‘ದಿ ಗ್ರಾಟಿಟ್ಯೂಡ್ ಗ್ಯಾದರಿಂಗ್ (The Gratitude Gathering)’ ಹೆಸರಿನ ವಿಶೇಷ ಕೃತಜ್ಞತಾ ಸಮಾರಂಭವು ನಗರದ ಬಿಜೈನಲ್ಲಿರುವ ರೋಹನ್ ಸಿಟಿಯಲ್ಲಿ ಅದ್ದೂರಿಯಾಗಿ ನಡೆಯಿತು. ಇತ್ತೀಚೆಗೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಡೆದ ಕರಾವಳಿಯ ಪ್ರತಿಭೆಗಳನ್ನು ಗೌರವಿಸುವ ಉದ್ದೇಶದಿಂದ ಆಯೋಜಿಸಲಾದ ಈ ಸಮಾರಂಭದಲ್ಲಿ ಪ್ರಶಸ್ತಿ ವಿಜೇತರಿಗೆ ಸನ್ಮಾನಿಸಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರಾದ ರೂಪಶ್ರೀ ವರ್ಕಾಡಿ, ನಿರ್ದೇಶಕ ಶಿವಧ್ವಜ್ ಶೆಟ್ಟಿ, ನಿರ್ಮಾಪಕ ಪ್ರಶಾಂತ್ ರೈ, ಡಾ. ಪ್ರದೀಪ್ ಕೆಂಚನೂರು ಹಾಗೂ ಬಾಲನಟ ಆತೀಶ್ ಎಸ್. ಶೆಟ್ಟಿ ಅವರನ್ನು ರೋಹನ್ ಕಾರ್ಪೊರೇಷನ್ ವತಿಯಿಂದ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ನಿರ್ದೇಶಕ ಶಿವಧ್ವಜ್ ಶೆಟ್ಟಿ, ಸಿನಿಮಾ ಕ್ಷೇತ್ರಕ್ಕೆ ರೋಹನ್ ಕಾರ್ಪೊರೇಷನ್ ನಿರಂತರವಾಗಿ ನೀಡುತ್ತಿರುವ ಪ್ರೋತ್ಸಾಹ ಶ್ಲಾಘನೀಯವಾಗಿದೆ ಎಂದು ಹೇಳಿದರು. ಇಂತಹ ಗೌರವಗಳು ಕಲಾವಿದರಿಗೆ ಮತ್ತಷ್ಟು ಸ್ಫೂರ್ತಿ ಹಾಗೂ ಜವಾಬ್ದಾರಿಯನ್ನು ನೀಡುತ್ತವೆ. ಕರ್ನಾಟಕ ಹಾಗೂ ಕರಾವಳಿಯಲ್ಲಿ…

Read More

ಮೂಡುಬಿದಿರೆ, ಜು. 24: ಭಾರತ ಸರ್ಕಾರದ ಜ್ಞಾನ ಭಾರತಂ ಮಿಷನ್ ಅಡಿಯಲ್ಲಿ, ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ವತಿಯಿಂದ ದೇಶದ ಅಮೂಲ್ಯ ಪ್ರಾಚೀನ ಹಸ್ತಪ್ರತಿಗಳನ್ನು ಗುರುತಿಸಿ ಸಂರಕ್ಷಿಸುವ ಮಹತ್ವಾಕಾಂಕ್ಷಿ ಯೋಜನೆಯ ಭಾಗವಾಗಿ ಕರ್ನಾಟಕ ರಾಜ್ಯದಲ್ಲಿ 2026ರ ಮಾರ್ಚ್‌ನಿಂದ ಮೇ ತಿಂಗಳವರೆಗೆ ಪ್ರಾಚೀನ ಹಸ್ತಪ್ರತಿಗಳ ಸಮೀಕ್ಷಾ ಅಭಿಯಾನ ಕೈಗೊಳ್ಳಲಾಗಿತ್ತು.ಈ ಅಭಿಯಾನದ ಮುಂದುವರಿದ ಭಾಗವಾಗಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಸ್ತಪ್ರತಿಗಳ ಸಮೀಕ್ಷೆ ಹಾಗೂ ಡಿಜಿಟಲೀಕರಣ ಕಾರ್ಯಕ್ರಮಕ್ಕೆ ಜುಲೈ 24ರಂದು ಸಂಜೆ 6.30ಕ್ಕೆ ಮೂಡುಬಿದಿರೆಯ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳು ಅಧಿಕೃತ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಮಹಾಸ್ವಾಮೀಜಿಗಳು, ನಮ್ಮ ದೇಶದ ಇತಿಹಾಸ, ಧರ್ಮ, ತತ್ವಶಾಸ್ತ್ರ, ಸಾಹಿತ್ಯ, ವೈದ್ಯಶಾಸ್ತ್ರ, ಗಣಿತ, ಖಗೋಳಶಾಸ್ತ್ರ ಸೇರಿದಂತೆ ಅನೇಕ ಅಮೂಲ್ಯ ಜ್ಞಾನಸಂಪತ್ತನ್ನು ಒಳಗೊಂಡಿರುವ ಪ್ರಾಚೀನ ಹಸ್ತಪ್ರತಿಗಳು ನಮ್ಮ ಸಾಂಸ್ಕೃತಿಕ ಪರಂಪರೆಯ ಅಮೂಲ್ಯ ನಿಧಿಯಾಗಿವೆ. ಇಂತಹ ಗ್ರಂಥಗಳನ್ನು ಗುರುತಿಸಿ ವೈಜ್ಞಾನಿಕವಾಗಿ ಸಂರಕ್ಷಿಸುವುದು ಇಂದಿನ ಅಗತ್ಯವಾಗಿದೆ. ಜಿಲ್ಲೆಯಲ್ಲಿರುವ ಪ್ರತಿಯೊಬ್ಬರೂ ತಮ್ಮ ಮನೆ, ಮಠ, ದೇವಸ್ಥಾನ, ಖಾಸಗಿ ಗ್ರಂಥಾಲಯ ಹಾಗೂ…

Read More

ಬೆಂಗಳೂರು: ಮದ್ಯಪಾನ ಮಾಡಿ ವಾಹನ ಚಲಾಯಿಸುವುದು ಕೇವಲ ಕಾನೂನು ಉಲ್ಲಂಘನೆಯಷ್ಟೇ ಅಲ್ಲ, ವಿಮಾ ಪರಿಹಾರದ ಹಕ್ಕೂ ಕಡಿಮೆಯಾಗುವ ಪರಿಸ್ಥಿತಿಗೆ ಕಾರಣವಾಗಬಹುದು ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. 2015ರಲ್ಲಿ ಬೆಂಗಳೂರಿನ ಬನಶಂಕರಿ ಪ್ರದೇಶದಲ್ಲಿ ನಡೆದ ಬೈಕ್ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಪಘಾತದ ವೇಳೆ ಮದ್ಯದ ಅಮಲಿನಲ್ಲಿ ವಾಹನ ಚಲಾಯಿಸಿದ್ದ ಸವಾರನ ಕುಟುಂಬಕ್ಕೆ ಪೂರ್ಣ ಪ್ರಮಾಣದ ಪರಿಹಾರ ನೀಡಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಬಿ. ಗೀತಾ ಅವರಿದ್ದ ಏಕಸದಸ್ಯ ಪೀಠ, ಅಪಘಾತಕ್ಕೆ ಮೃತರ ಸ್ವಂತ ನಿರ್ಲಕ್ಷ್ಯವೇ ಪ್ರಮುಖ ಕಾರಣವಾಗಿದ್ದು, ಅವರು ಮದ್ಯಪಾನ ಮಾಡಿ ವಾಹನ ಚಲಾಯಿಸಿದ್ದ ಸಂಗತಿ ದಾಖಲೆಗಳಿಂದ ಸಾಬೀತಾಗಿದೆ ಎಂದು ಅಭಿಪ್ರಾಯಪಟ್ಟಿತು. ಈ ಹಿನ್ನೆಲೆಯಲ್ಲಿ, ಮೋಟಾರು ಅಪಘಾತ ಪರಿಹಾರ ನ್ಯಾಯಾಧಿಕರಣ (MACT) ಮೊದಲು ನೀಡಿದ್ದ ₹3.44 ಲಕ್ಷ ಪರಿಹಾರವನ್ನು ಹೈಕೋರ್ಟ್ ₹1 ಲಕ್ಷಕ್ಕೆ ಇಳಿಸಿ ಆದೇಶಿಸಿದೆ. ಆದಾಗ್ಯೂ, ವಾಹನದ ಮಾಲೀಕರು ಪಡೆದಿದ್ದ ವೈಯಕ್ತಿಕ ಅಪಘಾತ ವಿಮಾ ಪಾಲಿಸಿಯ ನಿಯಮಗಳ ಪ್ರಕಾರ ಗರಿಷ್ಠ ₹1…

Read More

ಮಂಗಳೂರು, ಜು. 24: ಜನತಾದಳ (ಜಾತ್ಯತೀತ) ರಾಜ್ಯ ನಾಯಕರೂ, ವಿಧಾನ ಪರಿಷತ್ ಸದಸ್ಯರೂ ಹಾಗೂ ಕರ್ನಾಟಕ ವಿಧಾನಮಂಡಲದ ಅಧೀನ ಶಾಸನ ರಚನಾ ಸಮಿತಿಯ ಸದಸ್ಯರೂ ಆದ ಟಿ.ಎ. ಶರವಣ ಅವರು ಇಂದು ಮಂಗಳೂರಿನ ಪಿಲಿಕುಳ ನಿಸರ್ಗಧಾಮಕ್ಕೆ ಭೇಟಿ ನೀಡಿ ಅಲ್ಲಿನ ವಿವಿಧ ಅಭಿವೃದ್ಧಿ ಯೋಜನೆಗಳು ಹಾಗೂ ಮೂಲಸೌಕರ್ಯಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಬಳಿಕ ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಧಿಕಾರಿಯವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ, ಪಿಲಿಕುಳ ನಿಸರ್ಗಧಾಮದ ಸಮಗ್ರ ಅಭಿವೃದ್ಧಿ, ಪ್ರವಾಸೋದ್ಯಮದ ಉತ್ತೇಜನ, ಪರಿಸರ ಸಂರಕ್ಷಣೆ, ಸಾರ್ವಜನಿಕರಿಗೆ ಉತ್ತಮ ಸೌಲಭ್ಯಗಳ ಕಲ್ಪನೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಸಭೆಯಲ್ಲಿ ಪಿಲಿಕುಳವನ್ನು ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದ ಪ್ರಮುಖ ಪ್ರವಾಸಿ ತಾಣವಾಗಿ ಇನ್ನಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಕುರಿತು ಚರ್ಚೆ ನಡೆಯಿತು. ಅಭಿವೃದ್ಧಿ ಯೋಜನೆಗಳನ್ನು ವೇಗಗೊಳಿಸಿ, ಸಾರ್ವಜನಿಕರ ನಿರೀಕ್ಷೆಗೆ ತಕ್ಕಂತೆ ಗುಣಮಟ್ಟದ ಸೌಲಭ್ಯಗಳನ್ನು ಕಲ್ಪಿಸುವ ಅಗತ್ಯವಿದೆ ಎಂದು ಟಿ.ಎ. ಶರವಣ ಅವರು ಅಭಿಪ್ರಾಯ…

Read More

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬರಿಮಾರು ಸಮೀಪದ ಕಲ್ಲೆಟ್ಟಿ ದೈವಸ್ಥಾನದ ಬಳಿ ಬುಧವಾರ ಸಂಜೆ ನಡೆದ ಭೀಕರ ಅವಘಡದಲ್ಲಿ ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರದ ಪೂರ್ವ ಪ್ರಾಥಮಿಕ (ಎಲ್‌ಕೆಜಿ/ಯುಕೆಜಿ) ತರಗತಿಯ ಆರು ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿದ್ದು, ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ನಡೆದಿದೆ.ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್ ಕಲ್ಲೆಟ್ಟಿ ಸಮೀಪ ಸಂಚರಿಸುತ್ತಿದ್ದ ವೇಳೆ ರಸ್ತೆ ಬದಿಯಲ್ಲಿದ್ದ ಬೃಹತ್ ಗಾತ್ರದ ಮರ ಏಕಾಏಕಿ ಬಸ್ ಮೇಲೆ ಉರುಳಿ ಬಿದ್ದಿದೆ. ಮರ ಬಸ್‌ನ ಮೇಲ್ಭಾಗಕ್ಕೆ ಬಿದ್ದ ಪರಿಣಾಮ ಬಸ್‌ನೊಳಗಿದ್ದ ಮಕ್ಕಳು ಸಿಲುಕಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.ಘಟನೆಯ ತಕ್ಷಣ ಸ್ಥಳೀಯರು ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿ ಬಸ್‌ನೊಳಗಿದ್ದ ಮಕ್ಕಳನ್ನು ಸುರಕ್ಷಿತವಾಗಿ ಹೊರತೆಗೆದರು. ಆದರೆ ಗಂಭೀರವಾಗಿ ಗಾಯಗೊಂಡಿದ್ದ ಆರು ವರ್ಷದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.ಅವಘಡದಲ್ಲಿ ಗಾಯಗೊಂಡ ನಾಲ್ವರು ವಿದ್ಯಾರ್ಥಿಗಳನ್ನು ಸ್ಥಳೀಯರ ನೆರವಿನಿಂದ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಇತರ ವಿದ್ಯಾರ್ಥಿಗಳು ಹಾಗೂ ಬಸ್ ಸಿಬ್ಬಂದಿಯನ್ನು ಸಹ ಸುರಕ್ಷಿತವಾಗಿ…

Read More

ಮಂಗಳೂರು: ಜನತಾದಳ (ಜಾತ್ಯತೀತ) ರಾಜ್ಯ ನಾಯಕರೂ, ವಿಧಾನ ಪರಿಷತ್ ಸದಸ್ಯರೂ ಹಾಗೂ ಕರ್ನಾಟಕ ವಿಧಾನಮಂಡಲದ ಅಧೀನ ಶಾಸನ ರಚನಾ ಸಮಿತಿಯ ಸದಸ್ಯರೂ ಆದ ಟಿ.ಎ. ಶರವಣ ಅವರು ಇಂದು ರಾತ್ರಿ 8.30 ಗಂಟೆಗೆ ಮಂಗಳೂರು ಅಂತರರಾಷ್ಟ್ರೀಯ (ಬಜ್ಪೆ) ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರು ಹಾಗೂ ಪಕ್ಷದ ಪದಾಧಿಕಾರಿಗಳು ಅವರನ್ನು ಹೂ ಗುಚ್ಚ ನೀಡಿ ಆತ್ಮೀಯವಾಗಿ ಸ್ವಾಗತಿಸಿ, ಪಕ್ಷದ ಸಂಘಟನೆ ಹಾಗೂ ಜಿಲ್ಲೆಯ ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಕುರಿತು ಸಂಕ್ಷಿಪ್ತವಾಗಿ ಮಾತುಕತೆ ನಡೆಸಿದರು. ಈ ವೇಳೆ ಜೆಡಿಎಸ್ ಕಾರ್ಯಾಧ್ಯಕ್ಷ ವಸಂತ್ ಪೂಜಾರಿ, ಜೆಡಿಎಸ್ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಯೋಗಿಶ್ ಶೆಟ್ಟಿ ಜಪ್ಪು, ರಾಜ್ಯ ಮೀನುಗಾರ ಘಟಕದ ಅಧ್ಯಕ್ಷ ರತ್ನಾಕರ ಸುವರ್ಣ, ಪ್ರಶಾಂತ್ ಭಟ್ ಕಡಬ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು

Read More