- ಬ್ರಹ್ಮಾವರ: ತುಳುನಾಡ ರಕ್ಷಣಾ ವೇದಿಕೆ ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ
- 48ನೇ ವೆಲೆನ್ಸಿಯ ವಾರ್ಡಿನ ರಸ್ತೆಯ ಅಭಿವೃದ್ಧಿ ಕಾಮಗಾರಿಯು 20ಲಕ್ಷ ರೂ. ವಿಶೇಷ ಅನುದಾನದಲ್ಲಿ ನಡೆಯಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಗುದ್ದಲಿ ಪೂಜೆ
- ಪಬ್ನಲ್ಲಿ ಬಿಲ್ ಪಾವತಿ ವಿಚಾರಕ್ಕೆ ಗಲಾಟೆ; ಮ್ಯಾನೇಜರ್ ಮೇಲೆ ಹಲ್ಲೆ, ಚಿನ್ನದ ಸರ ಕಳವು ಆರೋಪ
- ಕಾರಿನೊಳಗಿನ ಪ್ರೇಮ ಕಲಹ ಭೀಕರ ದುರಂತಕ್ಕೆ ಅಂತ್ಯ: ಪ್ರೇಯಸಿಗೆ ಚಾಕು ಇರಿದು ಬಳಿಕ ಪೆಟ್ರೋಲ್ ಬಾಂಬ್ ಸಿಡಿಸಿಕೊಂಡು ಯುವಕ ಸಜೀವ ದಹನ
- ಧರ್ಮಕ್ಕಿಂತ ಮಾನವೀಯತೆ ಶ್ರೇಷ್ಠ: ಮಾಜಿ ಆರ್ಎಸ್ಎಸ್ ಕಾರ್ಯಕರ್ತನ ಅಂತ್ಯಸಂಸ್ಕಾರ ನೆರವೇರಿಸಿದ ಮುಸ್ಲಿಂ ಮಹಿಳೆ
- ಬಜಪೆಯಲ್ಲಿ ಎಸ್ಡಿಪಿಐ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಬೃಹತ್ ರಕ್ತದಾನ ಶಿಬಿರ: 153 ಯುನಿಟ್ ರಕ್ತ ಸಂಗ್ರಹ
- ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ವಿಭಾಗಕ್ಕೆ ನೂತನ ಪದಾಧಿಕಾರಿಗಳ ನೇಮಕ
- ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಹಿಲ್ಡಾ ಆಳ್ವ ನಿಧನಕ್ಕೆ ಜೆಡಿಎಸ್ ಜಿಲ್ಲಾ ಘಟಕದ ತೀವ್ರ ಸಂತಾಪ
Author: Tulunada Surya
ಉಡುಪಿ ಬ್ರಹ್ಮಾವರ, ಜೂನ್ 28: ತುಳುನಾಡಿನ ಆಚಾರ-ವಿಚಾರ, ಸಂಸ್ಕೃತಿ, ಭಾಷೆ ಹಾಗೂ ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸಂಘಟಿತ ಹೋರಾಟದ ಅಗತ್ಯವಿದೆ ಎಂದು ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಅಧ್ಯಕ್ಷ ಫ್ರಾಂಕಿ ಡಿಸೋಜಾ ಅಭಿಪ್ರಾಯಪಟ್ಟರು. ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲೆ, ಬ್ರಹ್ಮಾವರ ಘಟಕದ ಪೂರ್ವಭಾವಿ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮವು ಭಾನುವಾರ ಬೆಳಿಗ್ಗೆ 10 ಗಂಟೆಗೆ ಆರೂರಿನ ಶ್ರೀ ಬಬ್ಬು ಸ್ವಾಮಿ ದೈವಸ್ಥಾನದ ಸಮೀಪದ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಜಿಲ್ಲಾ ಅಧ್ಯಕ್ಷ ಫ್ರಾಂಕಿ ಡಿಸೋಜಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಅವರು ತುಳುನಾಡಿನ ಇತಿಹಾಸ, ಸಂಸ್ಕೃತಿ, ಸಂಪ್ರದಾಯ, ಹೋರಾಟದ ಉದ್ದೇಶ ಹಾಗೂ ಸಂಘಟನೆಯ ಕಾರ್ಯಚಟುವಟಿಕೆಗಳ ಕುರಿತು ಸಮಗ್ರ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಬ್ರಹ್ಮಾವರ ಘಟಕದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ತುಳುನಾಡಿನ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಸೂರ್ಯ-ಚಂದ್ರರ ಶಾಲು ಹೊದಿಸಿ ನೂತನ ಪದಾಧಿಕಾರಿಗಳನ್ನು ಗೌರವಪೂರ್ವಕವಾಗಿ ಸ್ವಾಗತಿಸಿ ಅಭಿನಂದಿಸಲಾಯಿತು. ಸಭೆಯಲ್ಲಿ ಬ್ರಹ್ಮಾವರ…
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 48ನೇ ವೆಲೆನ್ಸಿಯ ವಾರ್ಡಿನ ರೆಡ್ ಬಿಲ್ಡಿಂಗ್ ರೋಹನ್ ಕಾರ್ಪೋರೇಷನ್ ಹಿಂಭಾಗ ರಸ್ತೆಯ ಅಭಿವೃದ್ಧಿ ಕಾಮಗಾರಿಯು 20ಲಕ್ಷ ರೂ. ವಿಶೇಷ ಅನುದಾನದಲ್ಲಿ ನಡೆಯಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಗುದ್ದಲಿ ಪೂಜೆಯು ನಡೆಯಿತು. ನಂತರ ಮಾತನಾಡಿದ ಶಾಸಕರು, ಈ ಭಾಗದಲ್ಲಿ ಸುಮಾರು 300 ಮನೆಗಳಿದ್ದು ಅವರೆಲ್ಲರ ಬಹುದಿನಗಳ ಬೇಡಿಕೆಯಂತೆ ಈ ರಸ್ತೆಯು ನಿರ್ಮಾಣವಾಗಲಿದ್ದು ಕಾಮಗಾರಿ ವೇಳೆ ಉಂಟಾಗುವ ಅಡಚಣೆಗೆ ಸಹಕರಿಸಿ ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ನಿಕಟಪೂರ್ವ ಪಾಲಿಕೆ ಸದಸ್ಯರಾದ ಸಂದೀಪ್ ಗರೋಡಿ, ಪ್ರಮುಖರಾದ ಪ್ರಕಾಶ್ ಗರೋಡಿ, ಜೇಮ್ಸ್ ಡಿಸೋಜ, ಪ್ರವೀಣ್ ನಿಡ್ಡೆಲ್, ವರುಣ್ ರಾಜ್ ಅಂಬಟ್, ಪದ್ಮನಾಭ, ನಾಗರಾಜ್, ಕೃತಿಕ್ ಉಜ್ಜೋಡಿ, ಮನ್ವಿತ್, ಸೇರಿದಂತೆ ಪರಿಸರದ ನಿವಾಸಿಗಳು, ವಾರ್ಡಿನ ಕಾರ್ಯಕರ್ತರು ಉಪಸ್ಥಿತರಿದ್ದರು.
ಮೈಸೂರು, ಜೂನ್ 28: ನಗರದ ಅಗ್ರಹಾರದ ಸಿಪಾಯಿ ಗ್ರ್ಯಾಂಡೆ ಪಬ್ನಲ್ಲಿ ಬಿಲ್ ಪಾವತಿ ವಿಚಾರವಾಗಿ ಆರಂಭವಾದ ವಾಗ್ವಾದ ಹಲ್ಲೆಗೆ ತಿರುಗಿದ ಘಟನೆ ನಡೆದಿದೆ. ಘಟನೆಯ ಸಂಪೂರ್ಣ ದೃಶ್ಯಾವಳಿ ಪಬ್ನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಲಭ್ಯ ಮಾಹಿತಿಯ ಪ್ರಕಾರ, ಬರ್ತ್ಡೇ ಪಾರ್ಟಿ ಆಚರಿಸಲು ಪಬ್ಗೆ ಬಂದಿದ್ದ ಏಳು ಮಂದಿ ಯುವಕರ ತಂಡ ಸುಮಾರು ₹15 ಸಾವಿರದ ಬಿಲ್ ಮಾಡಿತ್ತು. ಬಿಲ್ ಪಾವತಿ ವಿಚಾರದಲ್ಲಿ ಪಬ್ ಸಿಬ್ಬಂದಿ ಹಾಗೂ ಯುವಕರ ನಡುವೆ ಮಾತಿನ ಚಕಮಕಿ ನಡೆದಿದ್ದು, ಅದು ಬಳಿಕ ಕೈಕೈ ಮಿಲಾಯಿಸುವ ಮಟ್ಟಕ್ಕೆ ತಲುಪಿದೆ. ಈ ವೇಳೆ ಪಬ್ನ ಮ್ಯಾನೇಜರ್ ವಿನಯ್ ಅವರನ್ನು ಹೊರಗೆ ಕರೆಸಿಕೊಂಡು ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಅಲ್ಲದೆ, ಹಲ್ಲೆಯ ವೇಳೆ ಅವರ ಕುತ್ತಿಗೆಯಲ್ಲಿದ್ದ ಸುಮಾರು 23 ಗ್ರಾಂ ತೂಕದ ಚಿನ್ನದ ಸರವನ್ನು ಕಸಿದುಕೊಂಡಿರುವ ಆರೋಪವೂ ದಾಖಲಾಗಿದೆ. ಘಟನೆಯ ಕುರಿತು ಕೆ.ಆರ್. ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಸಿಸಿಟಿವಿ ದೃಶ್ಯಾವಳಿ ಸೇರಿದಂತೆ…
ತುಮಕೂರು, ಜೂನ್ 28: ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನೊಳಗೆ ಪ್ರೇಮಿಗಳ ನಡುವಿನ ತೀವ್ರ ಕಲಹವು ಭೀಕರ ದುರಂತದಲ್ಲಿ ಅಂತ್ಯಗೊಂಡಿದೆ. ಪ್ರೇಯಸಿಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಯುವಕ, ಬಳಿಕ ಕಾರಿನಲ್ಲೇ ಪೆಟ್ರೋಲ್ ಬಾಂಬ್ ಸಿಡಿಸಿಕೊಂಡು ಸಜೀವ ದಹನವಾಗಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಜೋಗಿಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತನನ್ನು ಬೆಂಗಳೂರಿನ ನಾಗೇಂದ್ರ (30) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಯುವತಿಯನ್ನು ತುಮಕೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ನಾಗೇಂದ್ರ ಮತ್ತು ಯುವತಿ ಬೆಂಗಳೂರಿನಿಂದ ಬಾಡಿಗೆ ಕಾರಿನಲ್ಲಿ ಉತ್ತರ ಕನ್ನಡ ಜಿಲ್ಲೆಯ ಅಂಕೋಲದತ್ತ ಪ್ರಯಾಣಿಸುತ್ತಿದ್ದರು. ಶಿರಾ ತಾಲೂಕಿನ ಜೋಗಿಹಳ್ಳಿ ಬಳಿ ಸಾಗುತ್ತಿದ್ದ ವೇಳೆ ಇಬ್ಬರ ನಡುವೆ ವೈಯಕ್ತಿಕ ವಿಚಾರಕ್ಕೆ ಸಂಬಂಧಿಸಿದಂತೆ ತೀವ್ರ ವಾಗ್ವಾದ ನಡೆದಿದೆ. ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿದಾಗ ನಾಗೇಂದ್ರ ಯುವತಿಯ ತಲೆಗೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಹಲ್ಲೆಯಿಂದ ಯುವತಿ ರಕ್ತದ ಮಡುವಿನಲ್ಲಿ ಬಿದ್ದ…
ಕಾಸರಗೋಡು, ಜೂನ್ 27: ಧರ್ಮ, ಜಾತಿ ಮತ್ತು ರಾಜಕೀಯ ಭಿನ್ನಾಭಿಪ್ರಾಯಗಳ ನಡುವೆ ಮಾನವೀಯತೆಯೇ ಶ್ರೇಷ್ಠ ಎಂಬುದನ್ನು ಕೇರಳದ ಕಾಸರಗೋಡಿನಲ್ಲಿ ನಡೆದ ಅಪರೂಪದ ಘಟನೆಯೊಂದು ಮತ್ತೊಮ್ಮೆ ಸಾಬೀತುಪಡಿಸಿದೆ. ಕ್ಯಾನ್ಸರ್ನಿಂದ ಮೃತಪಟ್ಟ ಮಾಜಿ ಆರ್ಎಸ್ಎಸ್ ಕಾರ್ಯಕರ್ತ ನಾರಾಯಣ ತೊಟ್ಟತ್ತೋಡಿ (64) ಅವರ ಅಂತ್ಯಸಂಸ್ಕಾರವನ್ನು ಜಿಲ್ಲಾ ಪಂಚಾಯಿತಿ ಸದಸ್ಯೆ ಇರ್ಫಾನಾ ಇಕ್ಬಾಲ್ ಅವರು ಹಿಂದೂ ಸಂಪ್ರದಾಯದಂತೆ ನೆರವೇರಿಸಿದ್ದು, ಈ ಮಾನವೀಯ ನಡೆ ಎಲ್ಲೆಡೆ ಪ್ರಶಂಸೆಗೆ ಪಾತ್ರವಾಗಿದೆ. ಬಾಯಿಯ ಕ್ಯಾನ್ಸರ್ನಿಂದ ಬಳಲುತ್ತಿದ್ದ ನಾರಾಯಣ ತೊಟ್ಟತ್ತೋಡಿ ಅವರು ಚಿಕಿತ್ಸೆಗಾಗಿ ಕೋಝಿಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟರು. ಬಳಿಕ ಅವರ ಸ್ವಗ್ರಾಮವಾದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಬ್ಲಾಕ್ ವ್ಯಾಪ್ತಿಯ ಮೀಂಜ ಪಂಚಾಯಿತಿಯ ಚಿಗ್ರುಪಾಡವು ಗ್ರಾಮದಲ್ಲಿ ಅಂತಿಮ ವಿಧಿವಿಧಾನಗಳು ನೆರವೇರಿಸಲಾಯಿತು. ಸುಮಾರು ಒಂದು ತಿಂಗಳ ಹಿಂದೆ ಗ್ರಾಮದ ಅಂಗಡಿಯೊಂದರ ಬಳಿ ಅಸ್ವಸ್ಥ ಸ್ಥಿತಿಯಲ್ಲಿ ನಾರಾಯಣ ಪತ್ತೆಯಾಗಿದ್ದರು. ಕುಟುಂಬದ ಸಮಸ್ಯೆಗಳಿಂದ ನಿರಾಶ್ರಿತರಾಗಿದ್ದ ಅವರು ಕೊನೆಯ ಹಂತದ ಕ್ಯಾನ್ಸರ್ನಿಂದ ತೀವ್ರವಾಗಿ ಬಳಲುತ್ತಿದ್ದರು. ವಯೋವೃದ್ಧ ಸಹೋದರಿಗೆ ಅವರನ್ನು ನೋಡಿಕೊಳ್ಳುವ…
ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಬಜಪೆ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕಿನ್ನಿಪದವಿನ ಲೈಕೋರಿಸ್ ಟೌನ್ ಫ್ಲಾಟ್ನಲ್ಲಿ ಆಯೋಜಿಸಲಾದ ಬೃಹತ್ ರಕ್ತದಾನ ಶಿಬಿರವು ಅತ್ಯಂತ ಯಶಸ್ವಿಯಾಗಿ ನೆರವೇರಿತು. ಶಿಬಿರದಲ್ಲಿ ವಿವಿಧ ಸಮುದಾಯಗಳ ಜನರು ಸ್ವಯಂಪ್ರೇರಿತರಾಗಿ ಭಾಗವಹಿಸಿ ಒಟ್ಟು 153 ಯುನಿಟ್ ರಕ್ತದಾನ ಮಾಡುವ ಮೂಲಕ ಮಾನವೀಯ ಸೇವೆಯ ಮಹತ್ವವನ್ನು ಸಾರಿದರು. ಜಾತಿ, ಧರ್ಮ ಹಾಗೂ ರಾಜಕೀಯ ಭೇದಗಳನ್ನು ಮೀರಿ ಸಮಾಜಮುಖಿ ಕಾರ್ಯಕ್ಕೆ ಕೈಜೋಡಿಸಿದ ರಕ್ತದಾನಿಗಳ ಸೇವಾಭಾವನೆಗೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲು ಎಸ್ಡಿಪಿಐ ಬಜಪೆ ಸಮಿತಿಯ ಪದಾಧಿಕಾರಿಗಳು, ಕಾರ್ಯಕರ್ತರು, ಯುವಕರು ಹಾಗೂ ಸ್ವಯಂಸೇವಕರು ಶ್ರಮವಹಿಸಿದ್ದು, ಶಿಬಿರದ ಯಶಸ್ಸಿಗೆ ಸಹಕರಿಸಿದ ವೈದ್ಯಕೀಯ ಸಿಬ್ಬಂದಿ ಮತ್ತು ಎಲ್ಲ ಸಹಯೋಗಿಗಳಿಗೂ ಸಮಿತಿಯು ಕೃತಜ್ಞತೆ ಸಲ್ಲಿಸಿದೆ. ಈ ಸಂದರ್ಭದಲ್ಲಿ ಮಾತನಾಡಿದ ಎಸ್ಡಿಪಿಐ ಮುಖಂಡರು, “ರಕ್ತದಾನವು ಜೀವದಾನಕ್ಕೆ ಸಮಾನವಾದ ಮಹತ್ತರ ಸೇವೆಯಾಗಿದ್ದು, ಸಮಾಜದಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಇಂತಹ ಕಾರ್ಯಕ್ರಮಗಳನ್ನು ಮುಂದೆಯೂ ನಿರಂತರವಾಗಿ ಆಯೋಜಿಸಲಾಗುವುದು” ಎಂದು…
ಮಂಗಳೂರು, ಜೂನ್ 27: ಕರ್ನಾಟಕ ಜನತಾದಳ (ಜಾತ್ಯತೀತ) ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಘಟಕವನ್ನು ಮತ್ತಷ್ಟು ಸಂಘಟಿತವಾಗಿ ಬಲಪಡಿಸುವ ಉದ್ದೇಶದಿಂದ ಜಿಲ್ಲಾ ಮಹಿಳಾ ವಿಭಾಗದ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಜಿಲ್ಲಾ ಮಹಿಳಾ ವಿಭಾಗದ ಅಧ್ಯಕ್ಷೆಯಾಗಿ ರಮೀಝಾ ಬಾನು, ಕಾರ್ಯಾಧ್ಯಕ್ಷರಾಗಿ ಪ್ರಿಯ ಸಾಲಿಯಾನ್, ಪ್ರಧಾನ ಕಾರ್ಯದರ್ಶಿಯಾಗಿ ಜ್ಯೋತಿ ಜೈನ್, ಹಿರಿಯ ಉಪಾಧ್ಯಕ್ಷರಾಗಿ ಚೂಡಮಣಿ ಎಲ್. ಬಂಗೇರ ಅವರನ್ನು ನೇಮಕ ಮಾಡಲಾಗಿದೆ. ಉಪಾಧ್ಯಕ್ಷೆಯರಾಗಿ ಅನಿತಾ ಭಂಡಾರ್ಕರ್ ಹಾಗೂ ಶಾರದಾ ಶೆಟ್ಟಿ, ಕಾರ್ಯದರ್ಶಿಗಳಾಗಿ ಕವಿತಾ, ಸಲೀಮಾ ಖಾದರ್ ಮತ್ತು ರಾಜಶ್ರೀ ಉಳ್ಳಾಲ್, ಸಂಘಟನಾ ಕಾರ್ಯದರ್ಶಿಗಳಾಗಿ ಪದ್ಮಮಣಿ (ಪುತ್ತೂರು), ಪ್ಲೇವಿಯನ್ ಹಾಗೂ ಮೀರಾ (ಕಿನ್ನಿಗೋಳಿ) ಅವರನ್ನು ಆಯ್ಕೆ ಮಾಡಲಾಗಿದೆ. ಇದೇ ವೇಳೆ, ಜೆಡಿಎಸ್ ತಾಲೂಕು ಮಹಿಳಾ ಘಟಕಗಳ ಅಧ್ಯಕ್ಷೆಯರನ್ನೂ ನೇಮಕ ಮಾಡಲಾಗಿದ್ದು, ಅವರ ವಿವರಗಳು ಈ ಕೆಳಗಿನಂತಿವೆ:• ಪುತ್ತೂರು: ಮೀನಾಕ್ಷಿ ಎಂ.• ಸುಳ್ಯ: ಡೈಝಿ ರೋಹನ್• ಕಡಬ: ಹೇಮಲತಾ• ಮಂಗಳೂರು ಉತ್ತರ: ಮೋಹಿನಿ ಶೆಟ್ಟಿ• ಮಂಗಳೂರು ದಕ್ಷಿಣ: ವೀಣಾ ಶೆಟ್ಟಿ• ಉಳ್ಳಾಲ: ಜೋಹರ• ಮುಲ್ಕಿ: ಶಶಿಪ್ರಭಾ…
ಮಂಗಳೂರು, ಜೂನ್ 25: ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಹಾಗೂ ಹಿರಿಯ ರಾಜಕಾರಣಿ ಹಿಲ್ಡಾ ಆಳ್ವಾ ಅವರು ಗುರುವಾರ (ಜೂನ್ 25) ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಕೆಲ ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಹಿಲ್ಡಾ ಆಳ್ವ ಅವರು ಮಂಗಳೂರು ನಗರದ ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ ನಾಯಕರಾಗಿದ್ದರು. ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಆಗಿ ಸೇವೆ ಸಲ್ಲಿಸುವ ಮೂಲಕ ನಗರದ ಅಭಿವೃದ್ಧಿಗೆ ಹಲವು ಮಹತ್ವದ ಯೋಜನೆಗಳನ್ನು ಜಾರಿಗೊಳಿಸಲು ಶ್ರಮಿಸಿದ್ದರು. ಸರಳ ವ್ಯಕ್ತಿತ್ವ, ಜನಸ್ನೇಹಿ ನಡೆ ಹಾಗೂ ಸಾರ್ವಜನಿಕ ಸೇವೆಯ ಮೂಲಕ ಅವರು ಅಪಾರ ಜನಾಭಿಮಾನವನ್ನು ಗಳಿಸಿದ್ದರು. ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ರಾಜಕೀಯ ಮುಖಂಡರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅನೇಕರು ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ. ಹಿಲ್ಡಾ ಆಳ್ವ ಅವರ ಅಂತ್ಯಕ್ರಿಯೆಯ ಕುರಿತು…
ರಾಯಚೂರು ಜಿಲ್ಲೆಯ ಬಿಜನಗೇರಾ ಗ್ರಾಮದಲ್ಲಿ ಎರಡು ಎಕರೆ ಜಮೀನಿನ ಖಾತಾ ಉತಾರ ನೀಡಲು ವ್ಯಕ್ತಿಯೊಬ್ಬರಿಂದ ₹1.5 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ರಾಜ್ಯದ ಗ್ರಾಮೀಣ ಆಡಳಿತ ವ್ಯವಸ್ಥೆಯ ಮೇಲಿನ ಜನರ ವಿಶ್ವಾಸಕ್ಕೆ ದೊಡ್ಡ ಹೊಡೆತ ನೀಡಿದೆ. ಗ್ರಾಮ ಪಂಚಾಯಿತಿಗಳು ಗ್ರಾಮೀಣ ಜನರ ಅಭಿವೃದ್ಧಿ, ಮೂಲಭೂತ ಸೌಲಭ್ಯಗಳು ಹಾಗೂ ಸರ್ಕಾರಿ ಸೇವೆಗಳ ಪ್ರಮುಖ ಕೇಂದ್ರಗಳಾಗಿವೆ. ಆದರೆ ಜನಸೇವೆಗೆ ನೇಮಕಗೊಂಡ ಕೆಲ ಅಧಿಕಾರಿಗಳು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಸಾರ್ವಜನಿಕರಿಂದ ಲಂಚ ವಸೂಲಿ ಮಾಡುವ ಪ್ರವೃತ್ತಿ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ ಬಹುತೇಕ ಜನರು ರೈತರು, ಕೂಲಿ ಕಾರ್ಮಿಕರು ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗದವರಾಗಿದ್ದಾರೆ. ತಮ್ಮ ಜಮೀನು, ಮನೆ ಅಥವಾ ಇತರೆ ದಾಖಲೆಗಳಿಗೆ ಸಂಬಂಧಿಸಿದ ಕಾನೂನುಬದ್ಧ ಸೇವೆ ಪಡೆಯಲು ಅವರು ಸರ್ಕಾರಿ ಕಚೇರಿಗಳ ಬಾಗಿಲು ತಟ್ಟಬೇಕಾಗುತ್ತದೆ. ಆದರೆ ಹಕ್ಕಿನ ಸೇವೆಯನ್ನೇ ಪಡೆಯಲು ಲಕ್ಷಾಂತರ ರೂಪಾಯಿ ಲಂಚ ನೀಡುವಂತೆ…
ಉಡುಪಿ, ಜೂನ್ 12: ಉಡುಪಿ ಎ.ಪಿ.ಎಂ.ಸಿ. ಮಾರುಕಟ್ಟೆ ಪ್ರಾಂಗಣದಲ್ಲಿ ಹಲವು ವರ್ಷಗಳಿಂದ ಬೆಳೆದು ನಿಂತಿರುವ ಮರಗಳಿಗೆ ರಾಸಾಯನಿಕ ಪದಾರ್ಥಗಳನ್ನು ಬಳಸಿ ಉದ್ದೇಶಪೂರ್ವಕವಾಗಿ ಹಾನಿ ಮಾಡಲಾಗುತ್ತಿದ್ದು, ಈ ಅಮಾನವೀಯ ಕೃತ್ಯದ ವಿರುದ್ಧ ಸಂಬಂಧಿತ ಅಧಿಕಾರಿಗಳು ತಕ್ಷಣ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪರಿಸರ ಪ್ರೇಮಿ ಹಾಗೂ ಎಸ್.ಬಿ. ಟ್ರೇಡರ್ಸ್ನ ಪ್ರೊಪ್ರೈಟರ್ ಎಂ. ಸುಶಾಂತ್ ಆಗ್ರಹಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಎ.ಪಿ.ಎಂ.ಸಿ. ಮಾರುಕಟ್ಟೆ ಆವರಣದಲ್ಲಿ ವ್ಯಾಪಾರ ನಡೆಸುತ್ತಿರುವ ತಾವು ಪ್ರತಿದಿನ ಬೆಳಿಗ್ಗೆ ಮಾರುಕಟ್ಟೆಗೆ ಆಗಮಿಸುವ ವೇಳೆ ಮರಗಳ ಸ್ಥಿತಿಯನ್ನು ಗಮನಿಸುತ್ತಿದ್ದು, ಕೆಲವು ಮರಗಳಿಗೆ ನಿರಂತರವಾಗಿ ಹಾನಿ ಉಂಟುಮಾಡುವ ಪ್ರಯತ್ನಗಳು ನಡೆಯುತ್ತಿರುವುದು ಕಂಡುಬಂದಿದೆ ಎಂದು ಅವರು ತಿಳಿಸಿದ್ದಾರೆ. ಮರಗಳ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದ್ದು, ಪರಿಸರ ಸಮತೋಲನ ಕಾಪಾಡುವಲ್ಲಿ ಅವುಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಮರಗಳನ್ನು ನಾಶಪಡಿಸುವ ಉದ್ದೇಶದಿಂದ ರಾಸಾಯನಿಕ ಪದಾರ್ಥಗಳನ್ನು ಬಳಸಿ ಅವುಗಳ ಜೀವವನ್ನೇ ಕಸಿದುಕೊಳ್ಳುವ ಮಟ್ಟಕ್ಕೆ ಕೆಲವರು ಇಳಿದಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
