Author: Tulunada Surya

ಮಂಗಳೂರು, ಮೇ 27 : ದಕ್ಷಣ ಭಾರತದ ಪ್ರಾಚೀನ ಹೆಮ್ಮೆಯಾದ ತುಳು ಭಾಷೆಗೆ ಮಾನ್ಯತೆ ದೊರಕಿಸುವ ನಿಟ್ಟಿನಲ್ಲಿ ಅಖಿಲ ಭಾರತ ತುಳು ಒಕ್ಕೂಟ ಮಹತ್ವದ ಹೆಜ್ಜೆಯನ್ನು ಇಟ್ಟಿದ್ದು, ಶೀಘ್ರದಲ್ಲೇ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಸಮಗ್ರ ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ಒಕ್ಕೂಟದ ಅಧ್ಯಕ್ಷ ಎ.ಸಿ. ಭಂಡಾರಿ ತಿಳಿಸಿದ್ದಾರೆ. ಮಂಗಳೂರಿನ ಕಾವೂರಿನ ಗಾಂಧಿನಗರದಲ್ಲಿರುವ ಮುಗ್ರೋಡಿ ಎನ್‌ಕ್ಲೇವ್ ಕಚೇರಿ ಸಭಾಂಗಣದಲ್ಲಿ ನಡೆದ ಅಖಿಲ ಭಾರತ ತುಳು ಒಕ್ಕೂಟದ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತುಳು ಭಾಷೆ, ತುಳು ಲಿಪಿ, ಸಂಸ್ಕೃತಿ ಹಾಗೂ ಪರಂಪರೆಯ ಉಳಿವು ಮತ್ತು ಅಭಿವೃದ್ಧಿಗೆ ಸಂಬಂಧಿಸಿದಂತೆ ಈಗಾಗಲೇ ಸರ್ಕಾರದ ವಿವಿಧ ಇಲಾಖೆಗೆ ಅಗತ್ಯ ದಾಖಲೆಗಳು ಹಾಗೂ ಪೂರಕ ಮಾಹಿತಿಗಳನ್ನು ಸಲ್ಲಿಸಲಾಗಿದೆ. ಆದಾಗ್ಯೂ ತುಳು ಭಾಷೆಗೆ ಮಾನ್ಯತೆ ನೀಡುವ ಪ್ರಕ್ರಿಯೆಯಲ್ಲಿ ಇನ್ನೂ ಸ್ಪಷ್ಟ ಪ್ರಗತಿ ಕಂಡುಬಂದಿಲ್ಲ ಎಂಬುದಾಗಿ ವಿಷಾದ ವ್ಯಕ್ತಪಡಿಸಿದರು. ತುಳು ಭಾಷೆಗೆ ಅಧಿಕ್ರತ ಭಾಷಾ ಸ್ಥಾನಮಾನ ನೀಡಬೇಕೆಂಬ ಬೇಡಿಕೆ ಹಲವು ದಶಕಗಳಿಂದ ಮುಂದುವರಿದಿದ್ದು, ಈ ಕುರಿತು ದೇಶದ…

Read More

ಕುಂದಾಪುರ: ತಾಲೂಕಿನ ವಂತ್ಸೆ ಹೋಬಳಿ ಹೊಸೂರು ಗ್ರಾಮದ ಸರ್ವೆ ನಂಬರ್ 141ರ ಕೋಟ್ಯಂತರ ರೂಪಾಯಿ ಮೌಲ್ಯದ ಸರ್ಕಾರಿ ಜಮೀನನ್ನು ಅಕ್ರಮವಾಗಿ ಕಬಳಿಸಲು ಕಂದಾಯ ಇಲಾಖೆಯ ಅಧಿಕಾರಿಗಳೇ ಶಾಮೀಲಾಗಿದ್ದಾರೆ ಎಂದು ಆರೋಪಿಸಿ, ದಲಿತ ಪರ ಹೋರಾಟಗಾರ್ತಿ ನಾಗರತ್ನ ನೇತೃತ್ವದಲ್ಲಿ ಕುಂದಾಪುರ ಉಪ ವಿಭಾಗ ಸಹಾಯಕ ಕಮಿಷನರ್ (AC) ಕಚೇರಿ ಮುಂದೆ ಇಂದಿನಿಂದ “ಒಲೆ ಹೂಡಿ – ಅನ್ನ ಬೇಯಿಸುವ” ವಿಭಿನ್ನ ಹಾಗೂ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಗೊಂಡಿದೆ. ರಾಜ್ಯ ಕಂದಾಯ ಸಚಿವರಿಗೆ ಉಪ ವಿಭಾಗಾಧಿಕಾರಿಗಳ ಮೂಲಕ ಹಕ್ಕೊತ್ತಾಯ ಪತ್ರ ಸಲ್ಲಿಸಿರುವ ಪ್ರತಿಭಟನಾಕಾರರು, ಸರ್ಕಾರಿ ಜಮೀನು ಒತ್ತುವರಿಗೆ ನೇರ ಸಹಕಾರ ನೀಡಿದ ವಂಡ್ರೆ ಹೋಬಳಿ ಕಂದಾಯ ನಿರೀಕ್ಷಕ (FDA) ರಾಘವೇಂದ್ರ ಮತ್ತು ಕರ್ತವ್ಯ ಲೋಪ ಎಸಗಿದ ಕುಂದಾಪುರ ತಹಶೀಲ್ದಾರ್ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಹಾಗೂ ಅಕ್ರಮ ಕಟ್ಟಡಗಳನ್ನು ತಕ್ಷಣ ನೆಲಸಮಗೊಳಿಸುವಂತೆ ಆಗ್ರಹಿಸಿದ್ದಾರೆ. ತಹಸೀಲ್ದಾರ್ ರವರು ಸಹಾಯಕ ಕಮಿಷನರ್ ಪರವಾಗಿ ಮನವಿ ಸ್ವೀಕರಿಸಿ, ಕಾನೂನು ಪ್ರಕಾರ ಕ್ರಮ ಕೈಗೊಳ್ಳಲು ಸೂಚಿಸುತ್ತೇವೆ ಎಂದು ಭರವಸೆ…

Read More

ಕಾಪು, ಮೇ 27: ಸಾರ್ವಜನಿಕರ ಆರೋಗ್ಯ ಕಾಳಜಿಯನ್ನು ಕೇಂದ್ರಬಿಂದುವಾಗಿಸಿಕೊಂಡು ಚಂದ್ರನಗರದ ಬಟರ್ ಫ್ಲೈ ಹಾಲ್ ಸಭಾಂಗಣದಲ್ಲಿ ಆಯೋಜಿಸಲಾದ ಉಚಿತ ಸಮಗ್ರ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿಯಾಗಿ ನಡೆಯಿತು. ಆರೋಗ್ಯ ತಪಾಸಣೆ ಜೊತೆಗೆ ಜನರಲ್ಲಿ ಆರೋಗ್ಯ ಜಾಗೃತಿ ಮೂಡಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾದ ಈ ಶಿಬಿರಕ್ಕೆ ಸ್ಥಳೀಯರು ಉತ್ತಮ ಸ್ಪಂದನೆ ವ್ಯಕ್ತಪಡಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವಿಕೆ ಘಟಕ ಉಡುಪಿ, ಶಿರ್ವ ಸಮುದಾಯ ಆರೋಗ್ಯ ಕೇಂದ್ರ, ಬಟರ್ ಫ್ಲೈ ಗೆಸ್ಟ್ ಹೌಸ್ & ಪಾರ್ಟಿ ಹಾಲ್ ಚಂದ್ರನಗರ, ಕುತ್ಯಾರು/ಕಳತ್ತೂರು ಗ್ರಾಮ ಪಂಚಾಯತ್, ಅಲಯನ್ಸ್ ಕ್ಲಬ್ ಉಡುಪಿ ರಾಯಲ್ ಹಾಗೂ ರೋಟರಿ ಕ್ಲಬ್ ಶಿರ್ವ ಇವರ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮಾಜ ಸೇವಕರೂ ಆಗಿರುವ ಬಟರ್ ಫ್ಲೈ ಪಾರ್ಟಿ ಹಾಲ್ ಮಾಲಕರಾದ ಡಾ. ಫಾರೂಕ್ ಚಂದ್ರನಗರ ವಹಿಸಿದ್ದರು. ಬಳಿಕ ಮಾತನಾಡಿದ ಅವರು, “ಆರೋಗ್ಯವೇ ನಿಜವಾದ ಸಂಪತ್ತು. ಗ್ರಾಮೀಣ ಭಾಗದ ಜನರಿಗೆ…

Read More

ಬ್ರಹ್ಮಾವರ, ಮೇ 26: ಸಾರ್ವಜನಿಕರಿಂದ ನಿರಂತರವಾಗಿ ಕೇಳಿಬಂದಿದ್ದ ಭ್ರಷ್ಟಾಚಾರ, ಕಡತಗಳ ವಿಳಂಬ ಹಾಗೂ ಆಡಳಿತಾತ್ಮಕ ಲೋಪಗಳ ಕುರಿತು ಬಂದ ಗಂಭೀರ ದೂರುಗಳ ಹಿನ್ನೆಲೆ, ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಬ್ರಹ್ಮಾವರ ತಾಲೂಕು ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯ ಮೇಲೆ ಮಂಗಳವಾರ ದಿಢೀರ್ ದಾಳಿ ನಡೆಸಿದರು. ಬೆಂಗಳೂರಿನ ಲೋಕಾಯುಕ್ತ ಮುಖ್ಯ ಕಚೇರಿಯಿಂದ ವಿಶೇಷ ಶೋಧನಾ ವಾರಂಟ್ ಪಡೆದುಕೊಂಡು ನಡೆಸಲಾದ ಈ ಕಾರ್ಯಾಚರಣೆ ಮಂಗಳೂರು ಲೋಕಾಯುಕ್ತ ಎಸ್‌ಪಿ ದಿನೇಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಜರುಗಿತು. ಉಡುಪಿ ಹಾಗೂ ಮಂಗಳೂರು ಲೋಕಾಯುಕ್ತ ಕಚೇರಿಗಳ ಜಂಟಿ ತಂಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದು, ಉಡುಪಿ ಲೋಕಾಯುಕ್ತ ಡಿವೈಎಸ್ಪಿ ಹಾಲಮೂರ್ತಿ ರಾವ್, ಪೊಲೀಸ್ ಇನ್ಸ್‌ಪೆಕ್ಟರ್‌ಗಳಾದ ಮಂಜುನಾಥ್, ರಾಜೇಂದ್ರ ನಾಯ್ಕ್ ಹಾಗೂ ಮಂಗಳೂರು ಲೋಕಾಯುಕ್ತ ಇನ್ಸ್‌ಪೆಕ್ಟರ್ ಭಾರತಿ ತಂಡದ ನೇತೃತ್ವ ವಹಿಸಿದ್ದರು. ತಹಶೀಲ್ದಾರ್ ಕಚೇರಿಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿದ ಅಧಿಕಾರಿಗಳು, ಸಾರ್ವಜನಿಕ ಅರ್ಜಿಗಳು, ಜಮೀನು ಸಂಬಂಧಿತ ದಾಖಲೆಗಳು ಹಾಗೂ ದೀರ್ಘಕಾಲದಿಂದ ಬಾಕಿ ಉಳಿದಿದ್ದ ನೂರಾರು ಕಡತಗಳನ್ನು ತೀವ್ರ ಪರಿಶೀಲನೆಗೆ ಒಳಪಡಿಸಿದರು. ಕೆಲವು ಕಡತಗಳು ನಿಯಮಬಾಹಿರವಾಗಿ…

Read More

ಮಂಗಳೂರು, ಮೇ 25: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ದಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ನಿಯೋಗವು ಇಂದು ಸಂಸ್ಥೆಯ ಅಧ್ಯಕ್ಷರಾದ ಅಲ್ ಹಾಜ್ ಕೆ.ಎಸ್. ಮೊಹಮ್ಮದ್ ಮಸೂದ್ ಅವರ ನಿರ್ದೇಶನದಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿ ಮಾಡಿ, ಮುಂಬರುವ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಧಾರ್ಮಿಕ ಆಚರಣೆಗಳು ಶಾಂತಿಯುತ ಹಾಗೂ ಸುವ್ಯವಸ್ಥಿತವಾಗಿ ನಡೆಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿತು. ನಿಯೋಗವು ಬಕ್ರೀದ್ ಹಬ್ಬದ ದಿನ ಹಾಗೂ ನಂತರದ ಮೂರು ದಿನಗಳ ಕಾಲ ನಡೆಯುವ ಧಾರ್ಮಿಕ ವಿಧಿ ವಿಧಾನಗಳು, ಪ್ರಾಣಿ ಬಲಿ ಅರ್ಪಣೆ ಸೇರಿದಂತೆ ಇಸ್ಲಾಮಿಕ್ ಸಂಪ್ರದಾಯಗಳನ್ನು ಕಾನೂನುಬದ್ಧವಾಗಿ ಹಾಗೂ ಶಾಂತಿಯುತವಾಗಿ ನೆರವೇರಿಸಲು ಸೂಕ್ತ ಭದ್ರತೆ ಮತ್ತು ಸಹಕಾರ ಒದಗಿಸಬೇಕೆಂದು ಅಧಿಕಾರಿಗಳ ಗಮನಕ್ಕೆ ತಂದಿತು. ಈ ಸಂದರ್ಭ ಮಾತನಾಡಿದ ಕಮಿಟಿ ಪ್ರತಿನಿಧಿಗಳು, ಜಿಲ್ಲೆಯಲ್ಲಿ ಸೌಹಾರ್ದಯುತ ವಾತಾವರಣ ನಿರ್ಮಾಣವಾಗಿದ್ದು, ಎಲ್ಲ ಸಮುದಾಯಗಳ ಸಹಕಾರದೊಂದಿಗೆ ಹಬ್ಬವನ್ನು ಶಾಂತಿಯುತವಾಗಿ ಆಚರಿಸುವ ಉದ್ದೇಶ ಹೊಂದಿದ್ದೇವೆ ಎಂದು ತಿಳಿಸಿದರು. ಯಾವುದೇ ರೀತಿಯ…

Read More

ಮಂಗಳೂರು, ಮೇ 25: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ (ನಿ.) ವತಿಯಿಂದ ಸ್ಥಳೀಯ ರೈತರಿಗೆ ಉತ್ತೇಜನ ನೀಡುವ ಹಾಗೂ ಗ್ರಾಹಕರಿಗೆ ತಾಜಾ ಮತ್ತು ಗುಣಮಟ್ಟದ ಹಣ್ಣುಗಳನ್ನು ಒದಗಿಸುವ ಉದ್ದೇಶದಿಂದ “ಹಲಸು–ಮಾವು ಮೇಳ”ವನ್ನು ಆಯೋಜಿಸಲಾಗಿದೆ. ಈ ವಿಶೇಷ ಮೇಳವು ಜೂನ್ 5, 6 ಮತ್ತು 7ರಂದು ಕೆ.ವಿ.ಎಸ್.ಎಸ್. ಕಾನ್ಫರೆನ್ಸ್ ಹಾಲ್, ಕೋಟೆಕಾರು ಬೀರಿ ಜಂಕ್ಷನ್‌ನಲ್ಲಿ ನಡೆಯಲಿದೆ. ಪ್ರತಿದಿನ ಬೆಳಗ್ಗೆ 9 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಸಾರ್ವಜನಿಕರಿಗೆ ಮೇಳ ಮುಕ್ತವಾಗಿರುತ್ತದೆ. ಮೇಳದಲ್ಲಿ ವಿವಿಧ ತಳಿಗಳ ರುಚಿಕರ ಮಾವು ಹಾಗೂ ಹಲಸು ಹಣ್ಣುಗಳನ್ನು ಪ್ರದರ್ಶನ ಮತ್ತು ಮಾರಾಟಕ್ಕೆ ಇಡಲಾಗುತ್ತಿದ್ದು, ಸ್ಥಳೀಯ ರೈತರಿಗೆ ತಮ್ಮ ಉತ್ಪನ್ನಗಳನ್ನು ನೇರವಾಗಿ ಗ್ರಾಹಕರಿಗೆ ತಲುಪಿಸುವ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ, ಹಣ್ಣು ಪ್ರಿಯರಿಗೆ ಉತ್ತಮ ಗುಣಮಟ್ಟದ ಹಣ್ಣುಗಳನ್ನು ಒಂದೇ ವೇದಿಕೆಯಲ್ಲಿ ಪಡೆಯುವ ಅವಕಾಶವೂ ದೊರೆಯಲಿದೆ. ಈ ಕುರಿತು ಪ್ರಕಟಣೆ ನೀಡಿದ ಬ್ಯಾಂಕ್ ಅಧ್ಯಕ್ಷರಾದ ಕೃಷ್ಣ ಶೆಟ್ಟಿ ಅವರು, “ಸ್ಥಳೀಯ ರೈತರಿಗೆ ಪ್ರೋತ್ಸಾಹ ನೀಡುವ ಜೊತೆಗೆ ಸಾರ್ವಜನಿಕರಿಗೆ ತಾಜಾ ಹಣ್ಣುಗಳನ್ನು ಪರಿಚಯಿಸುವ…

Read More

ಬೆಂಗಳೂರು: ಕಳೆದ ಬಾರಿ ಸುವರ್ಣ ಸಂಭ್ರಮವನ್ನಾಚರಿಸಿದ ಅಂತಾರಾಷ್ಟ್ರೀಯ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯು ತನ್ನ 51ನೇ ವರ್ಷದ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ ಸಮಾರಂಭವನ್ನು 2026 ಮೇ 23ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಏರ್ಪಡಿಸಿತ್ತು. ಕಾರ್ಯಕ್ರಮವನ್ನು ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ನ್ಯಾಯಮೂರ್ತಿ ರಾಜೇಂದ್ರ ಬಾದಾಮಿಕರ್ ದೀಪ ಬೆಳಗಿ ಉದ್ಘಾಟಿಸಿದರು. ಸಮಾರಂಭದಲ್ಲಿ ತುಳು ರಂಗಭೂಮಿ ಸಿನಿಮಾರಂಗ, ಉದ್ಯಮ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಮಹತ್ವದ ಸೇವೆ ಸಲ್ಲಿಸಿದ ಬಯ್ಯಮಲ್ಲಿಗೆ ಖ್ಯಾತಿಯ ಹಿರಿಯ ನಾಟಕಕಾರ ಡಾ.ಸಂಜೀವ ದಂಡಕೇರಿ ಅವರಿಗೆ ಈ ಬಾರಿಯ ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ದಂಡಕೇರಿಯವರ ಪತ್ನಿ ಶ್ರೀಮತಿ ಜಲಜಾಕ್ಷಿ ದಂಡಕೇರಿ ಮತ್ತು ಕುಟುಂಬ ಸದಸ್ಯರು ಸಮಾರಂಭದಲ್ಲಿ ಪಾಲ್ಗೊಂಡರು.ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ. ಹೆಚ್.ಎಲ್.ಎನ್. ರಾವ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಬೆಂಗಳೂರು ದೂರದರ್ಶನ ಕೇಂದ್ರದ ವಿಶ್ರಾಂತ ಹೆಚ್ಚುವರಿ ಮಹಾನಿರ್ದೇಶಕ ನಾಡೋಜ ಡಾ. ಮಹೇಶ್ ಜೋಶಿ, ಖ್ಯಾತ ವಿದ್ವಾಂಸ, ವಿದ್ಯಾ ವಾಚಸ್ಪತಿ ಡಾ.ಅರಳುಮಲ್ಲಿಗೆ ಪಾರ್ಥಸಾರಥಿ ಮುಖ್ಯ ಅತಿಥಿಗಳಾಗಿದ್ದರು.…

Read More

ಮಂಗಳೂರು/ಭಟ್ಕಳ, ಮೇ 25:ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಶಿರಾಲಿ ಸಮುದ್ರ ತೀರದಲ್ಲಿ ಸಂಭವಿಸಿದ ಹೃದಯವಿದ್ರಾವಕ ದುರಂತಕ್ಕೆ ಜೆಡಿಎಸ್ ಕರ್ನಾಟಕ ರಾಜ್ಯ ಮೀನುಗಾರರ ಘಟಕದ ಅಧ್ಯಕ್ಷರಾದ ರತ್ನಾಕರ ಸುವರ್ಣ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಒಂದೇ ಕುಟುಂಬದ ಎಂಟು ಮಂದಿ ಸಮುದ್ರದ ಅಲೆಗಳ ಅಬ್ಬರಕ್ಕೆ ಸಿಲುಕಿ ಜೀವ ಕಳೆದುಕೊಂಡಿರುವುದು ರಾಜ್ಯದ ಜನತೆಯನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ. ಜೀವನೋಪಾಯ ಹಾಗೂ ವಿಹಾರ ಉದ್ದೇಶದಿಂದ ಸಮುದ್ರ ತೀರಕ್ಕೆ ತೆರಳಿದ್ದ ಕುಟುಂಬದ ಸದಸ್ಯರು ಕ್ಷಣಾರ್ಧದಲ್ಲಿ ಜಲಸಮಾಧಿಯಾದ ಘಟನೆ ಅತ್ಯಂತ ನೋವುಂಟು ಮಾಡಿದೆ ಎಂದು ಅವರು ತಿಳಿಸಿದ್ದಾರೆ. ಸರ್ಕಾರ ಮೃತರ ಕುಟುಂಬಗಳಿಗೆ ಘೋಷಿಸಿರುವ ತಲಾ ₹5 ಲಕ್ಷ ಪರಿಹಾರವು ಈ ದುರಂತದ ತೀವ್ರತೆಗೆ ತಕ್ಕುದಲ್ಲ. ಕುಟುಂಬದ ಆಧಾರಸ್ತಂಭಗಳನ್ನೇ ಕಳೆದುಕೊಂಡಿರುವ ಹಿನ್ನೆಲೆಯಲ್ಲಿ ಸರ್ಕಾರ ತಕ್ಷಣವೇ ಮಧ್ಯಪ್ರವೇಶಿಸಿ ಮೃತರ ಕುಟುಂಬಗಳಿಗೆ ತಲಾ ₹10 ಲಕ್ಷ ಪರಿಹಾರ ಘೋಷಿಸಬೇಕು. ಜೊತೆಗೆ ಕುಟುಂಬದ ಸದಸ್ಯರಿಗೆ ಶಾಶ್ವತ ಪುನರ್ವಸತಿ, ಮಕ್ಕಳ ಶಿಕ್ಷಣ ಹಾಗೂ ಜೀವನೋಪಾಯಕ್ಕೆ ಅಗತ್ಯ ನೆರವು ಒದಗಿಸಬೇಕು ಎಂದು ರತ್ನಾಕರ ಸುವರ್ಣ ಅವರು…

Read More

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಶಿರಾಲಿ ಸಮೀಪ ಭಾನುವಾರ ಸಂಭವಿಸಿದ ಭೀಕರ ಜಲ ದುರಂತವು ಇಡೀ ಕರಾವಳಿಯನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ. ಜೀವನೋಪಾಯಕ್ಕಾಗಿ ನದಿಗೆ ಇಳಿದಿದ್ದ ಒಂದೇ ಕುಟುಂಬದ ಎಂಟು ಮಂದಿ ನೀರಿನ ರಭಸಕ್ಕೆ ಸಿಲುಕಿ ಜಲಸಮಾಧಿಯಾದ ದಾರುಣ ಘಟನೆ ಅಳ್ವೆಕೋಡಿ ಸಮೀಪದ ತಟ್ಟಿಹಕ್ಕಲ ಕಳಿನಟ್ಟಿ ಹೊಳೆಯಲ್ಲಿ ನಡೆದಿದೆ. ಕಪ್ಪೆಚಿಪ್ಪು ಸಂಗ್ರಹಿಸಲು ತೆರಳಿದ್ದ ಕುಟುಂಬ ಸ್ಥಳೀಯ ನಿವಾಸಿಗಳಾಗಿರುವ ಕುಟುಂಬದ ಸದಸ್ಯರು ನದಿಯಲ್ಲಿ ಕಪ್ಪೆಚಿಪ್ಪು (ಚಪ್ಪೆಕಲ್ಲು) ಸಂಗ್ರಹಿಸಲು ತೆರಳಿದ್ದರು. ನೀರಿನ ಆಳ ಹಾಗೂ ಹರಿವಿನ ತೀವ್ರತೆಯನ್ನು ಮನಗಂಡು, ಸುರಕ್ಷತೆಯ ದೃಷ್ಟಿಯಿಂದ ಒಬ್ಬರ ಕೈಯನ್ನು ಮತ್ತೊಬ್ಬರು ಹಿಡಿದು ಸರಪಳಿಯಂತೆ ನದಿಯಲ್ಲಿ ಸಾಗುತ್ತಿದ್ದರು. ಆದರೆ ಏಕಾಏಕಿ ನೀರಿನ ವೇಗ ಹೆಚ್ಚಾಗಿ ಒಬ್ಬರು ನಿಯಂತ್ರಣ ತಪ್ಪುತ್ತಿದ್ದಂತೆ, ಇಡೀ ಸರಪಳಿ ಕಳಚಿ ಎಂಟೂ ಮಂದಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಭಾರಿ ಮಳೆ – ಏಕಾಏಕಿ ಏರಿದ ನೀರಿನ ಮಟ್ಟ ಕಳೆದ ರಾತ್ರಿ ಭಟ್ಕಳ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸುರಿದ ಭಾರೀ ಮಳೆಯ ಪರಿಣಾಮ ನದಿಯಲ್ಲಿ ನೀರಿನ…

Read More

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 59ನೇ ಜೆಪ್ಪು ವಾರ್ಡಿನ ಸೂಟರ್‌ಪೇಟೆ 4ನೇ ಅಡ್ಡರಸ್ತೆ ಹಾಗೂ ಕನಕರಬೆಟ್ಟು ಪ್ರದೇಶದಲ್ಲಿ ಕುಸಿದ ತಡೆಗೋಡೆಯ ಪುನರ್‌ನಿರ್ಮಾಣ ಕಾಮಗಾರಿಗೆ ₹20 ಲಕ್ಷ ಅನುದಾನದಲ್ಲಿ ಚಾಲನೆ ನೀಡಲಾಗಿದ್ದು, ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಭೂಮಿ ಪೂಜೆ ನೆರವೇರಿತು. ಭೂಮಿ ಪೂಜೆಯ ಬಳಿಕ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ಕಳೆದ ಮಳೆಗಾಲದ ವೇಳೆ ಈ ಭಾಗದ ಹಲವು ರಾಜಕಾಲುವೆಗಳು ಹಾನಿಗೊಳಗಾಗಿದ್ದು, ಕೆಲವು ಕಾಲುವೆಗಳು ಕೆಳಮಟ್ಟದಲ್ಲಿರುವುದರಿಂದ ಮಳೆ ನೀರಿನ ಹರಿವು ಸಮಸ್ಯೆಯಾಗುತ್ತಿದೆ ಎಂದು ಹೇಳಿದರು. ಕಳೆದ ಮೂರು ವರ್ಷಗಳಲ್ಲಿ ಪ್ರಾಕೃತಿಕ ವಿಕೋಪಗಳಿಂದ ಕ್ಷೇತ್ರಕ್ಕೆ ₹300 ರಿಂದ ₹400 ಕೋಟಿಗೂ ಅಧಿಕ ಹಾನಿಯಾಗಿದ್ದರೂ, ರಾಜ್ಯ ಸರ್ಕಾರದಿಂದ ಅಗತ್ಯ ಪ್ರಮಾಣದ ಪರಿಹಾರ ಸಿಗದಿರುವುದು ವಿಷಾದನೀಯ ಎಂದರು. ಇತ್ತೀಚೆಗೆ ರಾಜ್ಯ ಸರ್ಕಾರ ವಿವಿಧ ಜಿಲ್ಲೆಗಳಿಗೆ ಮಳೆ ಪರಿಹಾರ ನಿಧಿ ಬಿಡುಗಡೆ ಮಾಡಿದ್ದು, ಅದರಲ್ಲಿ ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕರ ಹೆಸರಿನಲ್ಲಿ ₹10 ಕೋಟಿ ಅನುದಾನ ಮಂಜೂರಾಗಿದೆ. ಅದರ ಭಾಗವಾಗಿ ಜೆಪ್ಪು ವಾರ್ಡಿನ ಈ…

Read More