- ಉಡುಪಿ ಜಿಲ್ಲಾ ಆಸ್ಪತ್ರೆಯನ್ನು ತಕ್ಷಣ ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭಗೊಳಿಸಿ ಆರೋಗ್ಯ ಸಚಿವ ಯು.ಟಿ. ಖಾದರ್ ರಿಗೆ ತುಳುನಾಡ ರಕ್ಷಣಾ ವೇದಿಕೆ – ಆಗ್ರಹ
- ಅತ್ತಾವರದಲ್ಲಿ ಮಾದಕ ವಸ್ತು ಸೇವನೆ: ಇಬ್ಬರು ಯುವಕರು ಪೊಲೀಸ್ ಬಲೆಗೆ
- ಮೂಲ್ಕಿಯಲ್ಲಿ ಬ್ಯಾರಿ ಸಾಹಿತ್ಯ ಪರಿಷತ್ ತಾಲೂಕು ಘಟಕಕ್ಕೆ ಚಾಲನೆ: ಸದಸ್ಯತ್ವ ಅಭಿಯಾನ, ಸಮಿತಿ ರಚನೆ ಹಾಗೂ ಸಾಧಕರಿಗೆ ಸನ್ಮಾನ
- ಬಿಕರ್ಣಕಟ್ಟೆ–ಬಜ್ಜೋಡಿ ಗುಡ್ಡ ಕುಸಿತದ ಆತಂಕದ ಪ್ರದೇಶಕ್ಕೆ ಜೆಡಿಎಸ್ ಮುಖಂಡರ ಭೇಟಿ,ನಾಗೋರಿ ದುರಂತ ಮರುಕಳಿಸದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಿ; ಜೀವಹಾನಿಗೂ ಮುನ್ನ ಸರ್ಕಾರ ಎಚ್ಚೆತ್ತುಕೊಳ್ಳಲಿ – ಜೆಡಿಎಸ್ ಆಗ್ರಹ
- ಮಲ್ಲಾರು–ಮಜೂರು ಬದ್ರಿಯಾ ಜುಮುಅ ಮಸೀದಿ ಆಡಳಿತ ಸಮಿತಿಗೆ ಗೌರವಾಭಿನಂದನೆ
- ವೃಕ್ಷ ಸಂತ್ರಸ್ತರಿಗೆ ತ್ವರಿತ ನ್ಯಾಯ, ಕೊಳಂಬೆ ಜಲಾವೃತ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ಅಪರ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ತುಳುನಾಡ ರಕ್ಷಣಾ ವೇದಿಕೆ ಮನವಿ
- ಸಕ್ರಿಯ ರಾಜಕಾರಣಕ್ಕೆ ಮಾಜಿ ತಾಲೂಕು ಪಂಚಾಯತ್ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಅಸೈಗೋಳಿ ಮರಳಿಕೆ; ಜೆಡಿಎಸ್ಗೆ ಮತ್ತಷ್ಟು ಬಲ
- ಹೊಂಡಕ್ಕೆ ಬಿದ್ದು ಪ್ರಾಣಾಪಾಯದಲ್ಲಿದ್ದ ಗೋವಿನ ರಕ್ಷಣೆ ಮಾಡಿದ ಬಾಲಕರು
Author: Tulunada Surya
ಉಡುಪಿ, ಜುಲೈ 5: ಅಜ್ಜರಕಾಡಿನ ನೂತನ ಜಿಲ್ಲಾ ಸರ್ಕಾರಿ ಆಸ್ಪತ್ರೆಯನ್ನು ತಕ್ಷಣವೇ ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭಗೊಳಿಸಿ, ಜಿಲ್ಲೆಯ ಸಾರ್ವಜನಿಕರಿಗೆ ಗುಣಮಟ್ಟದ ಹಾಗೂ ಸಮಗ್ರ ಆರೋಗ್ಯ ಸೇವೆಯನ್ನು ಒದಗಿಸಬೇಕು ಎಂದು ಆಗ್ರಹಿಸಿ ತುಳುನಾಡು ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕವು ಆರೋಗ್ಯ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಅವರಿಗೆ ಮನವಿ ಸಲ್ಲಿಸಿ ಆಗ್ರಹಿಸಿತ್ತು. ಉಡುಪಿ ಜಿಲ್ಲಾ ಪ್ರವಾಸದ ಸಂದರ್ಭದಲ್ಲಿ ಸಚಿವರನ್ನು ಭೇಟಿ ಮಾಡಿದ ವೇದಿಕೆಯ ಪದಾಧಿಕಾರಿಗಳು, ಅಜ್ಜರಕಾಡಿನಲ್ಲಿ ನಿರ್ಮಾಣಗೊಂಡಿರುವ ನೂತನ ಜಿಲ್ಲಾ ಆಸ್ಪತ್ರೆ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಸಜ್ಜುಗೊಂಡಿದ್ದರೂ, ಆಸ್ಪತ್ರೆಯ ಎಲ್ಲಾ ವಿಭಾಗಗಳು ಇನ್ನೂ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸದಿರುವುದು ಸಾರ್ವಜನಿಕರಲ್ಲಿ ತೀವ್ರ ನಿರಾಸೆ ಮೂಡಿಸಿದೆ ಎಂದು ತಿಳಿಸಿದರು. ಜಿಲ್ಲೆಯ ಸಾವಿರಾರು ಬಡವರು, ಕಾರ್ಮಿಕರು, ರೈತರು, ಹಿರಿಯ ನಾಗರಿಕರು ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗದ ಜನರು ಸರ್ಕಾರಿ ಆಸ್ಪತ್ರೆಗಳನ್ನೇ ಅವಲಂಬಿಸಿರುವುದರಿಂದ ಸಮರ್ಪಕ ಆರೋಗ್ಯ ಸೇವೆ ಲಭ್ಯವಾಗದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಇದರ ಪರಿಣಾಮವಾಗಿ ಅನಿವಾರ್ಯವಾಗಿ ದುಬಾರಿ ಖಾಸಗಿ ಆಸ್ಪತ್ರೆಗಳ ಮೊರೆ ಹೋಗಬೇಕಾಗಿ…
ಮಂಗಳೂರು, ಜುಲೈ 4: ನಗರದ ಅತ್ತಾವರದಲ್ಲಿ ಮಾದಕ ವಸ್ತು ಸೇವನೆ ಮಾಡಿದ್ದ ಇಬ್ಬರು ಯುವಕರನ್ನು ಮಂಗಳೂರು ದಕ್ಷಿಣ ಠಾಣೆ ಪೊಲೀಸರು ವಶಕ್ಕೆ ಪಡೆದು, ಎನ್ಡಿಪಿಎಸ್ (NDPS) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಜುಲೈ 2ರಂದು ತಡರಾತ್ರಿ ಸುಮಾರು 12.30 ಗಂಟೆಗೆ ಅತ್ತಾವರ ಪ್ರದೇಶದಲ್ಲಿ ಗಸ್ತು ಕರ್ತವ್ಯದಲ್ಲಿದ್ದ ಎಎಸ್ಐ ಗಣೇಶ್ ಕುಮಾರ್ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಶಿವಾನಂದ ಅವರಿಗೆ ಅತ್ತಾವರಕಟ್ಟೆ ಸಮೀಪ ಇಬ್ಬರು ಮಾದಕ ವಸ್ತು ಸೇವಿಸಿರುವ ಕುರಿತು ಮಾಹಿತಿ ದೊರೆತಿದೆ. ತಕ್ಷಣ ಸ್ಥಳಕ್ಕೆ ತೆರಳಿದ ವೇಳೆ, ಸಮವಸ್ತ್ರದಲ್ಲಿದ್ದ ಪೊಲೀಸರನ್ನು ಕಂಡು ಇಬ್ಬರು ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಅವರನ್ನು ಬೆನ್ನಟ್ಟಿದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಚಾರಣೆಯಲ್ಲಿ ಆರೋಪಿಗಳು ಕುದ್ರೋಳಿ ನಿವಾಸಿ 26 ವರ್ಷದ ಮೊಹಮ್ಮದ್ ಫರ್ಡೀನ್ ಹಾಗೂ ಸುರತ್ಕಲ್ ಕೃಷ್ಣಾಪುರ ನಿವಾಸಿ 27 ವರ್ಷದ ಅಮೀರ್ ಎಂದು ಗುರುತಿಸಲಾಗಿದೆ. ಅವರ ವರ್ತನೆ ಅನುಮಾನಾಸ್ಪದವಾಗಿದ್ದು, ಬಾಯಿಯಿಂದ ಅಮಲು ಪದಾರ್ಥದ ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಹೆಚ್ಚಿನ ವಿಚಾರಣೆ ನಡೆಸಿದಾಗ ಮಾದಕ ವಸ್ತು ಸೇವಿಸಿರುವುದನ್ನು ಒಪ್ಪಿಕೊಂಡಿದ್ದಾರೆ. ಬಳಿಕ ಇಬ್ಬರನ್ನೂ ವೈದ್ಯಕೀಯ…
ಮೂಲ್ಕಿ, ಜುಲೈ 3: ಬ್ಯಾರಿ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂರಕ್ಷಣೆ ಹಾಗೂ ಬೆಳವಣಿಗೆಗೆ ಮತ್ತೊಂದು ಮಹತ್ವದ ಹೆಜ್ಜೆಯಾಗಿ ಮೂಲ್ಕಿ ತಾಲೂಕು ಬ್ಯಾರಿ ಸಾಹಿತ್ಯ ಪರಿಷತ್ ವತಿಯಿಂದ ಉದ್ಘಾಟನಾ ಸಮಾರಂಭ, ಸದಸ್ಯತ್ವ ಅಭಿಯಾನ, ಪೂರ್ಣ ಪ್ರಮಾಣದ ಸಮಿತಿ ರಚನೆ ಮತ್ತು ಬ್ಯಾರಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಜುಲೈ 5ರಂದು (ಭಾನುವಾರ) ಹಳೆಯಂಗಡಿ ಸಾಗ್ ಬದ್ರಿಯಾ ಜುಮಾ ಮಸೀದಿಯ ಸಭಾಭವನದಲ್ಲಿ ನಡೆಯಲಿದೆ. ಮಧ್ಯಾಹ್ನ 2 ಗಂಟೆಗೆ ಆರಂಭಗೊಳ್ಳುವ ಕಾರ್ಯಕ್ರಮವನ್ನು ಸಾಗ್ ಬದ್ರಿಯಾ ಜುಮಾ ಮಸೀದಿಯ ಖತೀಬ್ ಇ.ಎಂ. ಅಬ್ದುಲ್ಲಾ ಮದನಿ ಅವರು ದುಆ ನೆರವೇರಿಸುವ ಮೂಲಕ ಉದ್ಘಾಟಿಸಲಿದ್ದಾರೆ. ಪರಿಷತ್ ಅಧ್ಯಕ್ಷ ನಿಸಾರ್ ಅಹ್ಮದ್ ಅಂಗರಗುಡ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಮೂಲ್ಕಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಬ್ಯಾರಿ ಸಮುದಾಯದ ಹಿರಿಯರು, ವಿವಿಧ ಸಂಘಟನೆಗಳ ಮುಖಂಡರು ಹಾಗೂ ಸಾಹಿತ್ಯಾಸಕ್ತರು ಉಪಸ್ಥಿತರಿರಲಿದ್ದಾರೆ. ಹಳೆಯಂಗಡಿ ಸಾಗ್ ಬದ್ರಿಯಾ ಜುಮಾ ಮಸೀದಿಯ ಅಧ್ಯಕ್ಷ ಅಬ್ದುಲ್ ಖಾದರ್ (ಅದ್ದು), ಅಬ್ದುಲ್ ರಹಿಮಾನ್ ಕುಡುಂಬೂರು,…
ಮಂಗಳೂರು, ಜುಲೈ 3: ಕೆಲವು ದಿನಗಳ ಹಿಂದೆ ಮಂಗಳೂರಿನ ನಾಗೋರಿ ಪ್ರದೇಶದಲ್ಲಿ ಭಾರೀ ಮಳೆಯ ಪರಿಣಾಮ ಸಂಭವಿಸಿದ ಗುಡ್ಡ ಕುಸಿತದ ದುರಂತದಲ್ಲಿ ಅಮೂಲ್ಯ ಜೀವಗಳು ಬಲಿಯಾದ ಘಟನೆ ಇನ್ನೂ ಜನರ ಮನಸ್ಸಿನಿಂದ ಮಾಸುವ ಮುನ್ನವೇ, ನಗರದ ಬಿಕರ್ಣಕಟ್ಟೆ–ಬಜ್ಜೋಡಿ ಪ್ರದೇಶದಲ್ಲೂ ಗುಡ್ಡ ಕುಸಿತದ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಜನತಾದಳ (ಜಾತ್ಯತೀತ) ಪಕ್ಷದ ಮುಖಂಡರು ಇಂದು ಅಪಾಯದ ಪ್ರದೇಶಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಯೋಗೀಶ್ ಶೆಟ್ಟಿ ಜಪ್ಪು ರವರು ಅಪಾಯದ ಪ್ರದೇಶವನ್ನು ವೀಕ್ಷಿಸಿ ಸ್ಥಳೀಯ ನಿವಾಸಿಗಳ ಅಹವಾಲುಗಳನ್ನು ಆಲಿಸಿತು. ನಿರಂತರ ಮಳೆಯಿಂದ ಗುಡ್ಡದಲ್ಲಿ ಬಿರುಕುಗಳು ಕಾಣಿಸಿಕೊಂಡಿದ್ದು, ಮತ್ತಷ್ಟು ಮಳೆಯಾದರೆ ಗುಡ್ಡ ಕುಸಿಯುವ ಆತಂಕ ಎದುರಾಗಿದೆ ಎಂದು ಸ್ಥಳೀಯರು ತಿಳಿಸಿದರು. ಹಲವು ಕುಟುಂಬಗಳು ಜೀವಭಯದ ನಡುವೆ ದಿನ ಕಳೆಯುತ್ತಿದ್ದು, ಆಡಳಿತ ತಕ್ಷಣ ಮಧ್ಯಪ್ರವೇಶಿಸಿ ಸುರಕ್ಷತಾ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು., “ನಾಗೋರಿ ದುರಂತದಲ್ಲಿ ಅಮೂಲ್ಯ ಜೀವಗಳು ಕಳೆದುಹೋದ ನಂತರ ಪರಿಹಾರ ಕಾರ್ಯಗಳು ನಡೆದವು.…
ಉಡುಪಿ ಜಿಲ್ಲಾ ಸುನ್ನೀ ಸಂಯುಕ್ತ ಜಮಾಅತ್ ಇದರ ಜನಪರ, ಸಾಮಾಜಿಕ ಚಟುವಟಿಕೆಗಳಲ್ಲಿ ಸಂಪೂರ್ಣ ಸಹಕಾರ ಹಾಗು ಉಡುಪಿ ಜಿಲ್ಲಾ ಖಾಝಿ ಯಾಗಿದ್ದ ತಾಜುಲ್ ಫುಕಹಾಹ್ ಬೇಕಲ್ ಉಸ್ತಾದ್ ಇಬ್ರಾಹಿಂ ಮುಸ್ಲಿಯಾರ್ ಅವರ ಅನುಸ್ಮರಣೆ ನಿಮಿತ್ತ ನಡೆದ ಬೃಹತ್ ವಿದ್ವಾಂಸ, ಉಮರಾ ಸಮಾವೇಶಕ್ಕೆ ಸ್ಥಳಾವಕಾಶ ಹಾಗೂ ಸಂಪೂರ್ಣ ಸಹಕಾರ ನೀಡಿದ ಬದ್ರಿಯಾ ಜುಮುಅ ಮಸ್ಜಿದ್ ಮಲ್ಲಾರು – ಮಜೂರು ಆಡಳಿತ ಸಮಿತಿಗೆ ಸುನ್ನೀ ಸಂಯುಕ್ತ ಜಮಾಅತ್ ಕಮಿಟಿ ವತಿಯಿಂದ ಮೂಳೂರು ಸುನ್ನೀ ಸೆಂಟರ್ ನಲ್ಲಿ ನಡೆದ ಅಸಂಬ್ಲೇಜ್ ಕಾರ್ಯಕ್ರಮದಲ್ಲಿ ಉಪ ಖಾಝಿ ಅಬ್ದುರ್ರಹ್ಮಾನ್ ಮದನಿ ಯವರ ದಿವ್ಯ ಹಸ್ತದ ಮೂಲಕಗೌರವ ಸಲ್ಲಿಸಲಾಯಿತು. ಗೌರವ ಸಮರ್ಪಣೆಯನ್ನು ಸ್ವೀಕರಿಸಿದ ಅಧ್ಯಕ್ಷ ಡಾ.ಎಂ.ಫಾರೂಕ್ ರವರು ತುಂಬು ಹೃದಯದ ಕೃತಜ್ಞತೆಗಳನ್ನು ಸಲ್ಲಿಸಿದರು. ಮುಂದಿನ ದಿನಗಳಲ್ಲಿ ನಮ್ಮ ಸಹಕಾರವು ಮುಂದುವರೆಯಲಿದೆ ಎಂದು ಡಾ.ಫಾರೂಕ್ ರವರು ತಿಳಿಸಿದರು.ಸಂಯುಕ್ತ ಜಮಾಅತ್ ಅಧ್ಯಕ್ಷ ಹಾಜಿ ಅಬೂಬಕರ್ ನೇಜಾರ್,ಕಾರ್ಯದರ್ಶಿ ಬಾವು ಹಾಜಿ ಮೂಳೂರು, ಖತೀಬ್ ಅಬ್ದುರ್ರಶೀದ್ ಸಖಾಫಿ, ಮೂಳೂರು ಮುದರ್ರಿಸ್ ಹಾಫಿಳ್ ಅಶ್ರಫ್ ಸಖಾಫಿ, ಸುನ್ನೀ…
ಮಂಗಳೂರು : ವೃಕ್ಷ ಬಿಸಿನೆಸ್ ಸೊಲ್ಯೂಷನ್ ಸಂಸ್ಥೆಯಿಂದ ವಂಚನೆಗೊಳಗಾದ ಸಾವಿರಾರು ಠೇವಣಿದಾರರಿಗೆ ತ್ವರಿತ ನ್ಯಾಯ, ಹಣ ಮರುಪಾವತಿ ಹಾಗೂ ಕೊಳಂಬೆ ಗ್ರಾಮದ ಕೃತಕ ಜಲಾವೃತ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಅನುಪಸ್ಥಿತಿಯಲ್ಲಿ ಅಪರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಬುಧವಾರ ಎರಡು ಪ್ರತ್ಯೇಕ ಮನವಿಗಳನ್ನು ತುಳುನಾಡ ರಕ್ಷಣಾ ವೇದಿಕೆ ರಾಜ್ಯಾದ್ಯಕ್ಷರಾದ ಯೋಗಿಶ್ ಶೆಟ್ಟಿ ಜಪ್ಪುರವರ ನೇತೃತ್ವದಲ್ಲಿ ಸಲ್ಲಿಸಲಾಯಿತು. ವೃಕ್ಷ ಬಿಸಿನೆಸ್ ಸೊಲ್ಯೂಷನ್ ಸಂಸ್ಥೆಯು ಹೆಚ್ಚಿನ ಲಾಭಾಂಶದ ಆಮಿಷವೊಡ್ಡಿ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ನೆರೆಯ ಕೇರಳದ ಸಾವಿರಾರು ಸಾರ್ವಜನಿಕರಿಂದ ಕೋಟ್ಯಾಂತರ ರೂಪಾಯಿ ಠೇವಣಿಗಳನ್ನು ಸಂಗ್ರಹಿಸಿ ಬಳಿಕ ಹಣ ಮರುಪಾವತಿಸದೆ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಹಲವು ವರ್ಷಗಳಿಂದ ತುಳುನಾಡ ರಕ್ಷಣಾ ವೇದಿಕೆ ನಿರಂತರ ಹೋರಾಟ ನಡೆಸುತ್ತಿದ್ದು, ಸಂತ್ರಸ್ತರ ಪರವಾಗಿ ಸರ್ಕಾರ ಮತ್ತು ನ್ಯಾಯಾಲಯಗಳ ಮಟ್ಟದಲ್ಲಿ ನ್ಯಾಯಕ್ಕಾಗಿ ಧ್ವನಿ ಎತ್ತುತ್ತಿದೆ. ಪ್ರಕರಣವನ್ನು ಕರ್ನಾಟಕ ಉಚ್ಚ ನ್ಯಾಯಾಲಯದ ನಿರ್ದೇಶನದಂತೆ…
ಮಂಗಳೂರು, ಜುಲೈ 2: ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿರುವ ಮಾಜಿ ತಾಲೂಕು ಪಂಚಾಯತ್ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಅಸೈಗೋಳಿ ಅವರು ಮತ್ತೆ ಸಕ್ರಿಯ ರಾಜಕಾರಣಕ್ಕೆ ಮರಳಿದ್ದು, ಜನತಾದಳ (ಜಾತ್ಯತೀತ) ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ. ಜಿಲ್ಲಾ ಅಧ್ಯಕ್ಷರಾದ ಜಾಕೆ ಮಾಧವ ಗೌಡ ಅವರ ನಿರ್ದೇಶನದಂತೆ ಗುರುವಾರ ದಿನಾಂಕ 02-07-2026 ರಂದು ಜೆಡಿಎಸ್ ರಾಜ್ಯ ಮೀನುಗಾರರ ಘಟಕದ ಅಧ್ಯಕ್ಷ ರತ್ನಾಕರ ಸುವರ್ಣ, ಜಿಲ್ಲಾ ಕಾರ್ಯಾಧ್ಯಕ್ಷರಾದ ಇಕ್ಬಾಲ್ ಅಹಮ್ಮದ್ ಮುಲ್ಕಿ ಹಾಗೂ ವಸಂತ್ ಪೂಜಾರಿ ಅವರ ಉಪಸ್ಥಿತಿಯಲ್ಲಿ ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ ಯೋಗಿಶ್ ಶೆಟ್ಟಿ ಜಪ್ಪು ಅವರು ಪಕ್ಷದ ಶಾಲು ಹೊದಿಸಿ ಪ್ರಕಾಶ್ ಶೆಟ್ಟಿ ಅಸೈಗೋಳಿ ಅವರನ್ನು ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಂಡರು. ಪ್ರಕಾಶ್ ಶೆಟ್ಟಿ ಅಸೈಗೋಳಿ ಅವರು ವಿದ್ಯಾರ್ಥಿ ಜೀವನದಿಂದಲೇ ನಾಯಕತ್ವದ ಗುಣಗಳನ್ನು ಬೆಳೆಸಿಕೊಂಡಿದ್ದು, ಮಂಗಳೂರು ಸರ್ಕಾರಿ ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಹಾಗೂ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದರು. ಬಳಿಕ ಸಾರ್ವಜನಿಕ ಸೇವೆಯಲ್ಲಿ ತೊಡಗಿ ತಾಲೂಕು…
ಮಂಗಳೂರು, ಜುಲೈ 2: ಹೊಂಡಕ್ಕೆ ಬಿದ್ದು ಪ್ರಾಣಾಪಾಯದಲ್ಲಿದ್ದ ಗೋವೊಂದನ್ನು ಸ್ಥಳೀಯ ಬಾಲಕರು ಸಮಯಪ್ರಜ್ಞೆ ಮೆರೆದು ಯಶಸ್ವಿಯಾಗಿ ರಕ್ಷಿಸಿದ ಘಟನೆ ನಡೆದಿದೆ. ಆಹಾರ ಅರಸಿ ತೆರಳಿದ್ದ ಗೋವು ಆಕಸ್ಮಿಕವಾಗಿ ಆಳವಾದ ಹೊಂಡಕ್ಕೆ ಬಿದ್ದು ಹೊರಬರಲು ಸಾಧ್ಯವಾಗದೆ ಪರದಾಡುತ್ತಿತ್ತು. ಇದನ್ನು ಗಮನಿಸಿದ ಸ್ಥಳೀಯ ಬಾಲಕರು ಕೂಡಲೇ ಸ್ಥಳಕ್ಕೆ ಧಾವಿಸಿ, ಹಗ್ಗದ ಹಲಗೆಯ ಸಹಾಯದಿಂದ ಹಾಗೂ ಸ್ಥಳೀಯರ ನೆರವಿನೊಂದಿಗೆ ಸುರಕ್ಷಿತವಾಗಿ ಗೋವನ್ನು ಮೇಲಕ್ಕೆ ಎತ್ತಿ ರಕ್ಷಿಸಿದರು. ಬಾಲಕರ ಮಾನವೀಯತೆ ಮತ್ತು ಸಮಯೋಚಿತ ಕಾರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಅವರ ಕಾರ್ಯವನ್ನು ಶ್ಲಾಘಿಸಿದ್ದಾರೆ.
ಮಂಗಳೂರು, ಜುಲೈ 2: ವೈಭವೀಕರಣಕ್ಕಿಂತ ವಾಸ್ತವಾಂಶಗಳಿಗೆ ಆದ್ಯತೆ ನೀಡುವ ಪತ್ರಿಕೋದ್ಯಮವೇ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಬುನಾದಿಯಾಗಿದ್ದು, ಪತ್ರಕರ್ತರು ಸದಾ ವಸ್ತುನಿಷ್ಠ, ಪಾರದರ್ಶಕ ಹಾಗೂ ಜವಾಬ್ದಾರಿಯುತ ವರದಿಗಾರಿಕೆಯನ್ನು ಪಾಲಿಸಬೇಕು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಕರೆ ನೀಡಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ ಕ್ಲಬ್ ಹಾಗೂ ಪತ್ರಿಕಾಭವನ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ಪತ್ರಿಕಾಭವನದಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಆಡಳಿತ ವ್ಯವಸ್ಥೆ ಮತ್ತು ಮಾಧ್ಯಮಗಳ ನಡುವೆ ಉತ್ತಮ ಸಮನ್ವಯ ಬೆಳೆಯುತ್ತಿರುವುದು ಪ್ರಜಾಪ್ರಭುತ್ವದ ದೃಷ್ಟಿಯಿಂದ ಆಶಾದಾಯಕ ಬೆಳವಣಿಗೆ ಎಂದು ಅವರು ಅಭಿಪ್ರಾಯಪಟ್ಟರು. ಹಿಂದೆ ಒಂದೇ ಘಟನೆಯನ್ನು ಹಲವು ರೀತಿಯಲ್ಲಿ ವೈಭವೀಕರಿಸಿ ಬಿಂಬಿಸಲಾಗುತ್ತಿತ್ತು. ಆದರೆ ಈಗ ಫ್ಯಾಕ್ಟ್ ಚೆಕ್ಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಸತ್ಯಾಧಾರಿತ ವರದಿಗಾರಿಕೆಯತ್ತ ಮಾಧ್ಯಮಗಳು ಸಾಗುತ್ತಿರುವುದು ಸ್ವಾಗತಾರ್ಹ ಎಂದರು. ಸಮಾಜದಲ್ಲಿ ಶಾಂತಿ, ಸೌಹಾರ್ದ ಮತ್ತು ಪರಸ್ಪರ ವಿಶ್ವಾಸ ಉಳಿಯಬೇಕಾದರೆ ಜವಾಬ್ದಾರಿಯುತ…
ಮಂಗಳೂರು, ಜುಲೈ 1: ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆಯ ಹಿಂಭಾಗದ ನಾಗೋರಿ ಪ್ರದೇಶದಲ್ಲಿ ಭಾರೀ ಮಳೆಯ ಪರಿಣಾಮ ಸಂಭವಿಸಿದ ಗೋಡೆ ಕುಸಿತದಿಂದ ಮನೆ ಭಾಗಶಃ ಕುಸಿದು ಮಹಿಳೆಯೊಬ್ಬರು ಹಾಗೂ ಇಬ್ಬರು ಬಾಲಕಿಯರು ಸೇರಿದಂತೆ ಮೂವರು ಮೃತಪಟ್ಟಿರುವ ದುರಂತದ ಹಿನ್ನೆಲೆಯಲ್ಲಿ ಜನತಾದಳ (ಜಾತ್ಯತೀತ) ಪಕ್ಷದ ನಿಯೋಗವು ಮಂಗಳವಾರ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ದುರಂತದಲ್ಲಿ ಅಮೂಲ್ಯ ಜೀವಗಳು ಬಲಿಯಾಗಿರುವುದು ಅತ್ಯಂತ ದುಃಖದ ಸಂಗತಿಯಾಗಿದೆ ಎಂದು ಸಂತಾಪ ವ್ಯಕ್ತಪಡಿಸಿದ ಜೆಡಿಎಸ್ ಮುಖಂಡರು, ಮೃತರ ಆತ್ಮಕ್ಕೆ ಚಿರಶಾಂತಿ ಹಾಗೂ ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದರು. ಅಲ್ಲದೆ, ಮೃತರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿ ದೊರೆಯಲಿ ಎಂದು ಸಾಂತ್ವನ ಹೇಳಿದರು. ಬಳಿಕ ಮಾತನಾಡಿದ ಜೆಡಿಎಸ್ ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ ಯೋಗೀಶ್ ಶೆಟ್ಟಿ ಜಪ್ಪು, ಕಳೆದ ಕೆಲವು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಸಂದರ್ಭಗಳಲ್ಲಿ ಭೂಕುಸಿತ, ಗುಡ್ಡ ಕುಸಿತ, ಮನೆ ಕುಸಿತ ಹಾಗೂ ನೆರೆ ಅವಾಂತರಗಳು ನಿರಂತರವಾಗಿ ಮರುಕಳಿಸುತ್ತಿವೆ. ಅಪಾಯದ…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
