- ಹಿರಿಯರ ಜೀವನ ಪದ್ಧತಿ, ಸಂಸ್ಕೃತಿ, ಸಂಪ್ರದಾಯ ಇಂದಿನ ಯುವಪೀಳಿಗೆಗೆ ಉಳಿಸಿ ಬೆಳೆಸಬೇಕಾಗಿದೆ: ಅರ್ಪಿತಾ ಪ್ರಶಾಂತ್ ಶೆಟ್ಟಿ
- ಮಂಗಳೂರು ಯಾತ್ರೆ ಮುಗಿಸಿ ಮರಳುತ್ತಿದ್ದ ಪುತ್ತೂರು ಮೂಲದ ಉದ್ಯಮಿ ಬಳ್ಳಾರಿಯಲ್ಲಿ ಹೃದಯಾಘಾತದಿಂದ ನಿಧನ
- ತಂಬಾಕು
- ದೆಹಲಿಯಲ್ಲಿ ಸಂಭ್ರಮದ ಆಟಿ ಅಮಾವಾಸ್ಯೆ ಆಚರಣೆ,ತುಳುವರಿಂದ ಆಟಿ ಕಷಾಯ ಹಾಗೂ ಮೆಂತ್ಯ ಗಂಜಿ ವಿತರಣೆ
- ಉಡುಪಿಯಲ್ಲಿ ತುಳುನಾಡ ರಕ್ಷಣಾ ವೇದಿಕೆಯಿಂದ ಆಟಿ ಅಮಾವಾಸ್ಯೆ ಪ್ರಯುಕ್ತ ಪಾಲೆ ಕತ್ತೆ ಕಷಾಯ ವಿತರಣೆ,3 ಸಾವಿರಕ್ಕೂ ಅಧಿಕ ಮಂದಿ ಕಷಾಯ ಸೇವನೆ; 17 ವರ್ಷಗಳ ಪರಂಪರೆ ಮುಂದುವರಿಕೆ
- ಕೆನರಾ ಕಾಲೇಜಿನಲ್ಲಿ ಸಡಗರದಿಂದ ‘ಆಟಿಡೊಂಜಿ ದಿನ’ ಆಚರಣೆ ತುಳುನಾಡಿನ ಸಂಸ್ಕೃತಿ, ಪರಂಪರೆ ಮತ್ತು ಆಟಿ ತಿಂಗಳ ವೈಶಿಷ್ಟ್ಯ ಪರಿಚಯ
- ಆಚರಣೆಗಳನ್ನು ಸಾಮೂಹಿಕವಾಗಿ ಆಚರಿಸಿದಾಗ ಮಾತ್ರ ಮುಂದಿನ ಪೀಳಿಗೆಗೆ ವರ್ಗಾವಣೆ ಮಾಡಲು ಸಾಧ್ಯ- ಆಟಿ ಕಷಾಯ ಮತ್ತು ಗಂಜಿ ಹಂಚುವ ಕಾರ್ಯಕ್ರಮದಲ್ಲಿ ಡಾ ಅಣ್ಣಯ್ಯ ಕುಲಾಲ್ ಉಳ್ತೂರು.
- ತುಳುನಾಡಿನ ಸಂಪ್ರದಾಯ, ಆರೋಗ್ಯದ ಪರಂಪರೆಯ ಪ್ರತೀಕ ‘ಆಟಿ ಕಷಾಯ’ಡಿಂಕಿ ಡೈನ್–ತುಳುವ ಬೊಳ್ಳಿ ಪ್ರತಿಷ್ಠಾನದಿಂದ ಆಟಿ ಅಮಾವಾಸ್ಯೆ ವಿಶೇಷ ಕಾರ್ಯಕ್ರಮ
Author: Tulunada Surya
ಮಂಗಳೂರು: ಹಿರಿಯರ ಜೀವನ ಪದ್ಧತಿ, ಸಂಸ್ಕೃತಿ, ಸಂಪ್ರದಾಯ, ಆಚಾರ-ವಿಚಾರ, ಆರೋಗ್ಯ ಕಾಳಜಿ ಹಾಗೂ ಪ್ರಕೃತಿ ಪ್ರೇಮವನ್ನು ಇಂದಿನ ಯುವಪೀಳಿಗೆಗೆ ಉಳಿಸಿ ಬೆಳೆಸಬೇಕಾಗಿದೆ ಎಂದು ಉಡುಪಿ ಸಹಾಯಕ ಪ್ರಾಧ್ಯಾಪಕರಾದ ಶ್ರೀಮತಿ ಅರ್ಪಿತಾ ಪ್ರಶಾಂತ್ ಶೆಟ್ಟಿ ಹೇಳಿದರು. ಕಾವೂರು ಬಂಟರ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ಬಂಟರ ಮಹಿಳಾ ವಿಭಾಗದ ವತಿಯಿಂದ ನಡೆದ ಆಟಿಡೊಂಜಿ ದಿನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹಿಂದಿನ ಕಾಲದಲ್ಲಿ ನಮ್ಮ ಹಿರಿಯರು ಕುಟುಂಬದ ನಿರ್ವಹಣೆಯಲ್ಲಿ ಅತ್ಯಂತ ಜಾಣ್ಮೆ ಹೊಂದಿದ್ದರು. ಮಳೆಗಾಲದಲ್ಲಿ ಅಗತ್ಯವಿರುವ ಪ್ರತಿಯೊಂದು ವಸ್ತುವನ್ನು ಮುಂಗಡವಾಗಿ ಸಂಗ್ರಹಿಸಿ, ತಮ್ಮ ಆರ್ಥಿಕ ಸ್ಥಿತಿಗೆ ಅನುಗುಣವಾಗಿ ಜೀವನ ನಡೆಸುತ್ತಿದ್ದರು. ಅಂದಿನ ಆಹಾರ ಪದ್ಧತಿಯಿಂದಾಗಿ ಅವರು ದೀರ್ಘಾಯುಷ್ಯವನ್ನು ಹೊಂದಿದ್ದರು ಎಂದು ಅವರು ಹೇಳಿದರು. ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ ಮಧು ಕನ್ಸ್ಟ್ರಕ್ಷನ್ನ ವಿಜಯಲಕ್ಷ್ಮೀ ಎಂ. ಮಲ್ಲಿ, ತುಳುನಾಡಿನ ಸಂಸ್ಕೃತಿ ಹಾಗೂ ಸಂಪ್ರದಾಯವನ್ನು ಉಳಿಸಿ ಬೆಳೆಸುವಲ್ಲಿ ಮಹಿಳೆಯರ ಪಾತ್ರ ಶ್ಲಾಘನೀಯವಾಗಿದೆ. ಹಿರಿಯರ ಜೀವನಜ್ಞಾನವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಇಂತಹ ಕಾರ್ಯಕ್ರಮಗಳಿಂದ ಅದು…
ಮಂಗಳೂರು/ಪುತ್ತೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ದರ್ಶನ ಮುಗಿಸಿ ಮಂಗಳೂರಿಗೆ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿಯೊಬ್ಬರು ಬಳ್ಳಾರಿ ಬಸ್ ನಿಲ್ದಾಣದಲ್ಲಿ ಹೃದಯಾಘಾತಕ್ಕೊಳಗಾಗಿ ಅಕಾಲಿಕವಾಗಿ ನಿಧನರಾದ ಘಟನೆ ನಡೆದಿದೆ.ಮೃತರನ್ನು ಪುತ್ತೂರಿನ ಬೆಳ್ಳಿಯೂರುಕಟ್ಟೆ ನಿವಾಸಿ ನಿವಾಸಿ ಪ್ರಸಾದ್ ಮಂಗಳೂರು (44) ಎಂದು ಗುರುತಿಸಲಾಗಿದೆ.ಆಗಸ್ಟ್ 9ರಂದು ಮಂಗಳೂರಿನಿಂದ ಮಂತ್ರಾಲಯಕ್ಕೆ ತೆರಳಿದ್ದ ಅವರು, ದರ್ಶನ ಮುಗಿಸಿ ವಾಪಸಾಗುವ ವೇಳೆ ಆಗಸ್ಟ್ 10ರಂದು ರಾತ್ರಿ ಬಸ್ ಮೂಲಕ ಬಳ್ಳಾರಿಗೆ ಆಗಮಿಸಿದ್ದರು. ರಾತ್ರಿ ಸುಮಾರು 2.30ರ ವೇಳೆಗೆ ಬಸ್ನಿಂದ ಕೆಳಗಿಳಿದ ಅವರು, ಬಳ್ಳಾರಿ ಬಸ್ ನಿಲ್ದಾಣದ ಆಸನದಲ್ಲಿ ಕುಳಿತಿದ್ದರು.ಈ ವೇಳೆ ಅವರಿಗೆ ಏಕಾಏಕಿ ಹೃದಯಾಘಾತ ಸಂಭವಿಸಿದ್ದು, ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ನಡೆದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಘಟನೆ ಗಮನಿಸಿದ ಸಹಪ್ರಯಾಣಿಕರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಮರಣವನ್ನು ದೃಢಪಡಿಸಿಕೊಂಡಿದ್ದಾರೆ.ಬಳಿಕ ಮೃತರ ಪುತ್ರ, ಪಿಯುಸಿ ವಿದ್ಯಾರ್ಥಿ ದೀಪಕ್ ಅವರ ಮೊಬೈಲ್ಗೆ ಸಂದೇಶ…
ಬೆಂಗಳೂರು, ಆ.12: ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಕರ್ನಾಟಕ ಸರ್ಕಾರ ಗುಟ್ಕಾ ಹಾಗೂ ಪಾನ್ ಮಸಾಲಾ ಮಾರಾಟಕ್ಕೆ ಕಠಿಣ ಕಡಿವಾಣ ಹಾಕಿದೆ. ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ಇಂತಹ ಉತ್ಪನ್ನಗಳ ಉತ್ಪಾದನೆ, ಸಂಗ್ರಹಣೆ, ವಿತರಣೆ, ಸಾಗಣೆ ಹಾಗೂ ಮಾರಾಟವನ್ನು ಒಂದು ವರ್ಷದ ಅವಧಿಗೆ ಸಂಪೂರ್ಣವಾಗಿ ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ. ಅಧಿಸೂಚನೆ ಹೊರಡಿಸಿದ ದಿನದಿಂದಲೇ ನಿಷೇಧ ಜಾರಿಗೆ ಬಂದಿದ್ದು, ತಂಬಾಕು ಮತ್ತು ನಿಕೋಟಿನ್ ಅನ್ನು ಪ್ರತ್ಯೇಕ ಪ್ಯಾಕೆಟ್ಗಳಲ್ಲಿ ಮಾರಾಟ ಮಾಡಿ, ಬಳಿಕ ಗ್ರಾಹಕರು ಅವುಗಳನ್ನು ಮಿಶ್ರಣ ಮಾಡಿಕೊಂಡು ಸೇವಿಸುವ ರೀತಿಯ ಉತ್ಪನ್ನಗಳಿಗೂ ಈ ನಿಷೇಧ ಅನ್ವಯವಾಗಲಿದೆ. ಪ್ಯಾಕೆಟ್, ಸ್ಯಾಚೆಟ್ ಸೇರಿದಂತೆ ಯಾವುದೇ ರೂಪದಲ್ಲಿ ನಿಷೇಧಿತ ಗುಟ್ಕಾ ಅಥವಾ ಪಾನ್ ಮಸಾಲಾ ಉತ್ಪನ್ನಗಳನ್ನು ಉತ್ಪಾದಿಸುವುದು, ಸಂಗ್ರಹಿಸುವುದು, ಸಾಗಿಸುವುದು, ವಿತರಿಸುವುದು ಅಥವಾ ಮಾರಾಟ ಮಾಡುವುದು ಕಂಡುಬಂದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ನಿಷೇಧ ಆದೇಶವನ್ನು ರಾಜ್ಯಾದ್ಯಂತ ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಆಹಾರ ಸುರಕ್ಷತಾ ಅಧಿಕಾರಿಗಳಿಗೆ ಸರ್ಕಾರ ಸೂಚನೆ ನೀಡಿದೆ. ಸಾರ್ವಜನಿಕರ ಆರೋಗ್ಯದ ಮೇಲೆ…
ನವದೆಹಲಿ, ಆ. 12, 2026: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನೆಲೆಸಿರುವ ತುಳುನಾಡಿಗರು ಕರಾವಳಿಯ ವಿಶಿಷ್ಟ ಸಾಂಸ್ಕೃತಿಕ ಪರಂಪರೆಯ ಪ್ರತೀಕವಾದ **“ಆಟಿ ಅಮಾವಾಸ್ಯೆ”**ಯನ್ನು ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ಆಚರಿಸಿದರು. ಕಳೆದ ಐದು ವರ್ಷಗಳಿಂದ ನಿರಂತರವಾಗಿ ಪ್ರಕಾಶ್ ಶೆಟ್ಟಿ ಉಳೆಪಾಡಿ ಹಾಗೂ ಉಸ್ಮಾನ್ ಅಬ್ದುಲ್ ಷರೀಫ್ ಅವರ ನೇತೃತ್ವದಲ್ಲಿ ಆಯೋಜಿಸಲಾಗುತ್ತಿರುವ ಈ ವಿಶೇಷ ಕಾರ್ಯಕ್ರಮದಲ್ಲಿ ಈ ಬಾರಿ 150ಕ್ಕೂ ಅಧಿಕ ತುಳು-ಕನ್ನಡಿಗರು ಸೇರಿದಂತೆ ಉತ್ತರ ಭಾರತದ ವಿವಿಧ ಭಾಗಗಳ ಜನರು ಉತ್ಸಾಹದಿಂದ ಪಾಲ್ಗೊಂಡರು. ಆಟಿ ಅಮಾವಾಸ್ಯೆಯ ವಿಶೇಷತೆಯನ್ನು ಪರಿಚಯಿಸುವ ಉದ್ದೇಶದಿಂದ ಆಗಮಿಸಿದ ಬಂಧು-ಮಿತ್ರರಿಗೆ ಸಾಂಪ್ರದಾಯಿಕ ಆಟಿ ಕಷಾಯ ಹಾಗೂ ಮೆಂತ್ಯ ಗಂಜಿಯನ್ನು ಉಚಿತವಾಗಿ ವಿತರಿಸಲಾಯಿತು. ಕರಾವಳಿಯ ಜನಜೀವನದಲ್ಲಿ ಆಟಿ ತಿಂಗಳು ಮತ್ತು ಆಟಿ ಅಮಾವಾಸ್ಯೆಗೆ ಇರುವ ಸಾಂಸ್ಕೃತಿಕ ಹಾಗೂ ಆಹಾರ ಪರಂಪರೆಯ ಮಹತ್ವವನ್ನು ಕಾರ್ಯಕ್ರಮದ ಮೂಲಕ ದೆಹಲಿಯಲ್ಲೂ ಪರಿಚಯಿಸಲಾಯಿತು. ಕಾರ್ಯಕ್ರಮವನ್ನು ಪಾರಸ್ ಹೆಲ್ತ್ ಆಸ್ಪತ್ರೆಯ ಸರ್ಜಿಕಲ್ ಆಂಕಾಲಜಿ ವಿಭಾಗದ ಉಪಾಧ್ಯಕ್ಷರಾದ ಡಾ. ನಿರಂಜನ್ ನಾಯಕ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಆಟಿ ಕಷಾಯದ…
ಉಡುಪಿ, ಆ.12: ತುಳುನಾಡ ರಕ್ಷಣಾ ವೇದಿಕೆ (ರಿ.) ಉಡುಪಿ ಜಿಲ್ಲಾ ಘಟಕದ ವತಿಯಿಂದ ಆಟಿ ಅಮಾವಾಸ್ಯೆಯ ಪ್ರಯುಕ್ತ ಸಾಂಪ್ರದಾಯಿಕ ಪಾಲೆ ಕತ್ತೆ ಕಷಾಯ ವಿತರಣಾ ಕಾರ್ಯಕ್ರಮವು ಬುಧವಾರ ಮುಂಜಾನೆ ಉಡುಪಿ ಕ್ಲಾಕ್ ಟವರ್ ಸಮೀಪ ನಡೆಯಿತು. ಬೆಳಗ್ಗೆ 4.30ಕ್ಕೆ ನಡೆದ ಕಾರ್ಯಕ್ರಮಕ್ಕೆ ಪೆರ್ನಾಂಡಿಸ್ ಗ್ರೂಪ್ನ ಚೇರ್ಮನ್ ವಿಲ್ಸನ್ ಫರ್ನಾಂಡಿಸ್ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ತುಳುನಾಡ ರಕ್ಷಣಾ ವೇದಿಕೆ ಕಳೆದ 17 ವರ್ಷಗಳಿಂದ ಪಾಲಿಸಿಕೊಂಡು ಬರುತ್ತಿರುವ ಈ ಸಂಪ್ರದಾಯವು ತುಳುನಾಡಿನ ಪಾರಂಪರಿಕ ಆಚರಣೆಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ಶ್ಲಾಘಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಅಧ್ಯಕ್ಷ ಫ್ರ್ಯಾಂಕಿ ಡಿಸೋಜ ಕೊಳಲಗಿರಿ, “ಪ್ರತಿವರ್ಷದಂತೆ ಈ ವರ್ಷವೂ ಆಟಿ ಅಮಾವಾಸ್ಯೆಯಂದು ಉಡುಪಿಯ ಹೃದಯ ಭಾಗದಲ್ಲಿ ಸಾರ್ವಜನಿಕರಿಗೆ ಪಾಲೆ ಕತ್ತೆ ಕಷಾಯವನ್ನು ವಿತರಿಸಲಾಗುತ್ತಿದೆ. ಸಾರ್ವಜನಿಕರಿಂದ ವರ್ಷದಿಂದ ವರ್ಷಕ್ಕೆ ಉತ್ತಮ ಸ್ಪಂದನೆ ದೊರೆಯುತ್ತಿರುವುದು ಸಂತಸ ತಂದಿದೆ” ಎಂದರು. ತುಳುನಾಡಿನ ನೆಲ, ಜಲ, ಭಾಷೆ, ಸಂಸ್ಕೃತಿ,…
ಮಂಗಳೂರು, ಆ.12: ನಗರದ ಕೆನರಾ ಕಾಲೇಜು (ಸ್ವಾಯತ್ತ)ದ ತುಳು ಸಂಘದ ಆಶ್ರಯದಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮವು ಸಡಗರ-ಸಂಭ್ರಮದಿಂದ ನಡೆಯಿತು. ತುಳುನಾಡಿನ ವಿಶಿಷ್ಟ ಸಂಸ್ಕೃತಿ, ಪರಂಪರೆ, ಆಚಾರ-ವಿಚಾರಗಳು ಹಾಗೂ ಆಟಿ ತಿಂಗಳ ವೈಶಿಷ್ಟ್ಯವನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಿಗೆ ತುಳುನಾಡಿನ ಸಾಂಪ್ರದಾಯಿಕ ಜೀವನ ಪದ್ಧತಿ ಮತ್ತು ಶ್ರೀಮಂತ ಸಾಂಸ್ಕೃತಿಕ ಪರಂಪರೆಯ ಅರಿವು ಮೂಡಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರೇಮಲತಾ ವಿ. ವಹಿಸಿದ್ದರು. ತುಳು ಭಾಷೆಯಲ್ಲೇ ಮಾತನಾಡಿದ ಅವರು, ಆಟಿ ತಿಂಗಳ ಮಹತ್ವವನ್ನು ವಿವರಿಸುವುದರೊಂದಿಗೆ, ತುಳುನಾಡಿನ ವಿಶಿಷ್ಟ ಸಂಸ್ಕೃತಿ ಮತ್ತು ಪರಂಪರೆಯನ್ನು ಇಂದಿನ ಯುವಜನತೆ ಅರಿತು, ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸುವ ಅಗತ್ಯವಿದೆ ಎಂದು ಹೇಳಿದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ತುಳುವರ್ಲ್ಡ್ ಫೌಂಡೇಶನ್, ಕಟೀಲು ಇದರ ನಿರ್ದೇಶಕ ಡಾ. ರಾಜೇಶ್ ಕೃಷ್ಣ ಆಳ್ವ ಭಾಗವಹಿಸಿದ್ದರು. ‘ತುಳುನಾಡಿನ ಸಂಸ್ಕೃತಿ ಬೊಕ್ಕ ಆಚರಣೆಲು’ ಎಂಬ ವಿಷಯದ ಕುರಿತು ಮಾತನಾಡಿದ ಅವರು, ‘ಆಟಿಡೊಂಜಿ ದಿನ’ ಆಚರಣೆಯ ಹಿನ್ನೆಲೆ, ಆಟಿ ತಿಂಗಳ…
ಮಂಗಳೂರು, ಆ. 12: ಯಾವುದೇ ಭಾಷೆ, ಸಂಪ್ರದಾಯ, ಆಚರಣೆ ಹಾಗೂ ವಿಚಾರಗಳನ್ನು ಕೇವಲ ಮಾತನಾಡುವುದರಿಂದ ಅವು ಉಳಿಯುವುದಿಲ್ಲ. ಅವುಗಳನ್ನು ನಿತ್ಯದ ಬದುಕಿನಲ್ಲಿ ಬಳಸಿಕೊಂಡು ಆಚರಿಸಿದಾಗ ಮಾತ್ರ ಮುಂದಿನ ಪೀಳಿಗೆ ಹಾಗೂ ಜನಾಂಗಕ್ಕೆ ವರ್ಗಾವಣೆಯಾಗಿ ಉಳಿದು ಬೆಳೆಯಲು ಸಾಧ್ಯ. ಇಲ್ಲವಾದರೆ ಒಂದು ತಲೆಮಾರಿನೊಂದಿಗೆ ಅವು ನಶಿಸಿಹೋಗುವ ಸಾಧ್ಯತೆ ಇದೆ ಎಂದು ಡಾ. ಅಣ್ಣಯ್ಯ ಕುಲಾಲ್ ಉಳ್ತೂರು ಅಭಿಪ್ರಾಯಪಟ್ಟರು. ಕದ್ರಿಯ ಡಿಂಕಿ ಡೈನ್ ಆವರಣದಲ್ಲಿ ಡಿಂಕಿ ಡೈನ್ನ ಸ್ವರ್ಣ ಸುಂದರ್, ತುಳುವ ಬೊಳ್ಳಿ ಪ್ರತಿಷ್ಠಾನದ ದಯಾನಂದ ಕತ್ತಲ್ಸಾರ್ ಹಾಗೂ ಸಮಾನ ಮನಸ್ಕ ಮಿತ್ರರ ಸಹಕಾರದಲ್ಲಿ ಆಯೋಜಿಸಿದ್ದ ಆಟಿ ಅಮಾವಾಸ್ಯೆ ಪ್ರಯುಕ್ತ ‘ಆಟಿ ಕಷಾಯ ಮತ್ತು ಗಂಜಿ’ ಸಾಮೂಹಿಕ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಪರಿಸರ, ಪ್ರಕೃತಿ, ಕಲೆ, ಸಾಹಿತ್ಯ ಹಾಗೂ ಸಾಮಾಜಿಕ-ಸಾಂಸ್ಕೃತಿಕ ಕ್ಷೇತ್ರದಲ್ಲಿ ಕಳೆದ ಹಲವು ವರ್ಷಗಳಿಂದ ನಿರಂತರವಾಗಿ ಕಾರ್ಯನಿರ್ವಹಿಸುತ್ತಿರುವ ಸ್ವರ್ಣ ಸುಂದರ್ ಹಾಗೂ ದಯಾನಂದ ಕತ್ತಲ್ಸಾರ್ ಸೇರಿದಂತೆ ಸಮಾನ ಮನಸ್ಕರು ಕಳೆದ 12 ವರ್ಷಗಳಿಂದ ಆಟಿ ಅಮಾವಾಸ್ಯೆಯ ಸಂದರ್ಭದಲ್ಲಿ ಹಿರಿಯರ ಸಂಪ್ರದಾಯದಂತೆ…
ಮಂಗಳೂರು, ಆ. 12: ತುಳುನಾಡಿನ ವಿಶಿಷ್ಟ ಆಚರಣೆ ಹಾಗೂ ಪಾರಂಪರಿಕ ಆರೋಗ್ಯ ಪರಂಪರೆಯ ಪ್ರತೀಕವಾಗಿರುವ ಆಟಿ ಅಮಾವಾಸ್ಯೆ ಪ್ರಯುಕ್ತ ಪಾಲೆ ಕೆತ್ತೆ ಕಷಾಯ ವಿತರಣೆ ಕಾರ್ಯಕ್ರಮವನ್ನು ಡಿಂಕಿ ಡೈನ್ ಮತ್ತು ತುಳುವ ಬೊಳ್ಳಿ ಪ್ರತಿಷ್ಠಾನದ ಜಂಟಿ ಆಶ್ರಯದಲ್ಲಿ ಬುಧವಾರ ಡಿಂಕಿ ಡೈನ್ ಆವರಣದಲ್ಲಿ ಆಯೋಜಿಸಲಾಯಿತು. ತುಳುನಾಡಿನ ಪದ್ದತಿ ಹಾಗೂ ಸಂಪ್ರದಾಯದಂತೆ ಆಟಿ ಅಮಾವಾಸ್ಯೆಯಂದು ಮದ್ದು ಗಂಜಿ ಹಾಗೂ ಪಾಲೆ ಕೆತ್ತೆ ಕಷಾಯ ಸೇವಿಸುವ ಆಚರಣೆಗೆ ವಿಶೇಷ ಮಹತ್ವವಿದೆ. ಈ ಪಾರಂಪರಿಕ ಆಚರಣೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಹಾಗೂ ಉಳಿಸಿ ಬೆಳೆಸುವ ಉದ್ದೇಶದಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಪಟ್ಲ ಫೌಂಡೇಶನ್ ಸ್ಥಾಪಕ ಸತೀಶ್ ಪಟ್ಲ ಹಾಗೂ ನಾಟಕ ಮತ್ತು ಚಲನಚಿತ್ರ ನಿರ್ಮಾಪಕ, ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್ಬೈಲ್ ಅವರು ಆಟಿ ಕಷಾಯದ ಪಾರಂಪರಿಕ ಮಹತ್ವ, ತುಳುನಾಡಿನ ಜನಜೀವನದಲ್ಲಿ ಅದರ ಸ್ಥಾನ ಹಾಗೂ ಆರೋಗ್ಯದ ದೃಷ್ಟಿಯಿಂದ ಹಿರಿಯರು ಪಾಲಿಸಿಕೊಂಡು ಬಂದಿರುವ ಆಚರಣೆಗಳ ಕುರಿತು ವಿವರಿಸಿದರು. ಕಾರ್ಯಕ್ರಮದಲ್ಲಿ ಜೋಗಿ ಸಮಾಜದ ಮುಖಂಡ ಕಿರಣ್ ಜೋಗಿ, ತುಳುನಾಡ ರಕ್ಷಣಾ…
ಹೆಬ್ರಿ, ಆ.11: ಹೆಬ್ರಿ ಭಾಗದಲ್ಲಿ ಸಾರ್ವಜನಿಕರು, ವಾಹನ ಸವಾರರು ಹಾಗೂ ಮನೆಗಳಿಗೆ ಅಪಾಯಕಾರಿಯಾಗಿರುವ ಒಣ ಹಾಗೂ ಹಸಿ ಮರಗಳನ್ನು ತಕ್ಷಣ ತೆರವುಗೊಳಿಸುವಂತೆ ಆಗ್ರಹಿಸಿ, ಇತ್ತೀಚೆಗೆ ಮರ ಬಿದ್ದು ಮೃತಪಟ್ಟ ಸದಾನಂದ ಪ್ರಭು ಅವರ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡುವಂತೆ ಸಾಮಾಜಿಕ ಕಾರ್ಯಕರ್ತ ಶ್ರೀಕಾಂತ್ ಪೂಜಾರಿ ಕುಚ್ಚೂರು ಅವರು ಅರಣ್ಯ ಇಲಾಖೆ ಹಾಗೂ ತಹಶೀಲ್ದಾರ್ ಕಚೇರಿಗೆ ಮನವಿ ಸಲ್ಲಿಸಿದ್ದಾರೆ. ಹೆಬ್ರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ರಸ್ತೆ ಬದಿಯಲ್ಲಿ ಅಪಾಯಕಾರಿಯಾಗಿ ಬೆಳೆದು ನಿಂತಿರುವ ಹಲವು ಮರಗಳು ಯಾವುದೇ ಸಂದರ್ಭದಲ್ಲಿ ಗಾಳಿ-ಮಳೆಗೆ ಉರುಳಿ ಬೀಳುವ ಆತಂಕವಿದೆ. ಇತ್ತೀಚೆಗೆ ಸಂಭವಿಸಿದ ಮರ ಬಿದ್ದು ಸದಾನಂದ ಪ್ರಭು ಮೃತಪಟ್ಟ ದುರಂತದ ಹಿನ್ನೆಲೆಯಲ್ಲಿ ಸಂಬಂಧಿಸಿದ ಇಲಾಖೆಗಳು ಇಂತಹ ಅಪಾಯಕಾರಿ ಮರಗಳನ್ನು ಗುರುತಿಸಿ, ಮುನ್ನೆಚ್ಚರಿಕಾ ಕ್ರಮವಾಗಿ ತೆರವುಗೊಳಿಸಬೇಕೆಂದು ಅವರು ಒತ್ತಾಯಿಸಿದ್ದಾರೆ. ಜೆಸಿಬಿ ಕಾಮಗಾರಿಯಿಂದ ಮರಗಳ ಬೇರು ಸಡಿಲ ರಸ್ತೆ ಬದಿಯಲ್ಲಿ ನೀರಿನ ಪೈಪ್, ಕೇಬಲ್ ಸೇರಿದಂತೆ ವಿವಿಧ ಕಾಮಗಾರಿಗಳಿಗಾಗಿ ನಿರಂತರವಾಗಿ ಜೆಸಿಬಿ ಮೂಲಕ ಆಳವಾಗಿ ಹೊಂಡ ತೆಗೆಯುತ್ತಿರುವುದರಿಂದ ಹಲವು ಮರಗಳ…
ಮಂಗಳೂರು, ಆ.11: ಶೀಟ್ ಮೇಲ್ಛಾವಣಿ ನಿರ್ಮಾಣ ಕಾಮಗಾರಿ ನಡೆಸುತ್ತಿದ್ದ ವೇಳೆ ಕಬ್ಬಿಣದ ರಾಡ್ ಹೈಟೆನ್ಷನ್ ವಿದ್ಯುತ್ ತಂತಿಗೆ ತಾಗಿ ವಿದ್ಯುತ್ ಪ್ರವಹಿಸಿದ ಪರಿಣಾಮ ಗುತ್ತಿಗೆದಾರರೊಬ್ಬರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕೃಷ್ಣಾಪುರ 6ನೇ ಬ್ಲಾಕ್ನಲ್ಲಿ ಸಂಭವಿಸಿದೆ. ಮೃತರನ್ನು ಕೃಷ್ಣಾಪುರ ಚಕ್ರವರ್ತಿ ಕ್ರೀಡಾಂಗಣ ಸಮೀಪದ ನಿವಾಸಿ ಹಾಗೂ ಶೀಟ್ ಮೇಲ್ಛಾವಣಿ ನಿರ್ಮಾಣ ಕಾಮಗಾರಿ ಗುತ್ತಿಗೆದಾರ ಭಾಸ್ಕರ ಎಂದು ಗುರುತಿಸಲಾಗಿದೆ. ಕೃಷ್ಣಾಪುರ 6ನೇ ಬ್ಲಾಕ್ನಲ್ಲಿರುವ ವಸತಿ ಸಮುಚ್ಚಯವೊಂದರಲ್ಲಿ ತಗುಡು ಶೀಟ್ ಮೇಲ್ಛಾವಣಿ ನಿರ್ಮಾಣ ಕಾಮಗಾರಿ ನಡೆಯುತ್ತಿತ್ತು. ಕಾಮಗಾರಿಯ ಭಾಗವಾಗಿ ಭಾಸ್ಕರ ಅವರು ಕಬ್ಬಿಣದ ರಾಡ್ ಬಳಸಿ ಅಳತೆ ತೆಗೆದುಕೊಳ್ಳುತ್ತಿದ್ದರು. ಈ ವೇಳೆ ಕಬ್ಬಿಣದ ರಾಡ್ ಅನ್ನು ಕಂಕುಳಲ್ಲಿಟ್ಟುಕೊಂಡು ತಿರುಗುತ್ತಿದ್ದ ಸಂದರ್ಭದಲ್ಲಿ, ಕಟ್ಟಡದ ಪಕ್ಕದಲ್ಲೇ ಹಾದುಹೋಗುತ್ತಿದ್ದ ಹೈಟೆನ್ಷನ್ ವಿದ್ಯುತ್ ತಂತಿಗೆ ರಾಡ್ ಆಕಸ್ಮಿಕವಾಗಿ ಸ್ಪರ್ಶಿಸಿದೆ ಎನ್ನಲಾಗಿದೆ. ತಂತಿಗೆ ರಾಡ್ ತಾಗುತ್ತಿದ್ದಂತೆಯೇ ಭಾರೀ ಪ್ರಮಾಣದ ವಿದ್ಯುತ್ ಪ್ರವಹಿಸಿದ್ದು, ತೀವ್ರ ವಿದ್ಯುತ್ ಆಘಾತಕ್ಕೊಳಗಾದ ಭಾಸ್ಕರ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
