- NEET ಪರೀಕ್ಷಾ ವ್ಯವಸ್ಥೆಯ ಅಮಾನವೀಯ ಧೋರಣೆ ಖಂಡನೀಯ: ತುಳುನಾಡ ರಕ್ಷಣಾ ವೇದಿಕೆ
- ಉಡುಪಿ ಸಂತೆಕಟ್ಟೆ: ಅಕ್ರಮ ದತ್ತು ಪ್ರಕರಣ ಬೆಳಕಿಗೆ: ವೈದ್ಯ ಸೇರಿದಂತೆ ಇಬ್ಬರ ಬಂಧನ
- ಬೀದಿ ಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ: ಬಡವರ ಮೇಲೆಯೇ ಕಾನೂನು ಯಾಕೆ? – ತುಳುನಾಡ ರಕ್ಷಣಾ ವೇದಿಕೆ ಕಾರ್ಮಿಕ ಘಟಕ ರಾಜ್ಯ ಸಂಚಾಲಕ ಪ್ರಶಾಂತ್ ಭಟ್ ಕಡಬ ಪ್ರಶ್ನೆ
- ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಮಹಿಳಾ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ
- ಮೂಡುಬಿದಿರೆಯಲ್ಲಿ ಆಗಸ್ಟ್ 7-8ರಂದು ಆಳ್ವಾಸ್ ಪ್ರಗತಿ ಬೃಹತ್ ಉದ್ಯೋಗ ಮೇಳ 300ಕ್ಕೂ ಅಧಿಕ ಕಂಪನಿಗಳ ಭಾಗಿ; ಸಾವಿರಾರು ಉದ್ಯೋಗಾವಕಾಶಗಳ ನಿರೀಕ್ಷೆ
- ಪಡಿತರ ಚೀಟಿ ಸಮಸ್ಯೆ: ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ಜೆಡಿಎಸ್ ನಿಯೋಗ ಭೇಟಿ, ಅಧಿಕಾರಿಗಳಿಗೆ ತರಾಟೆ
- ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕ ಹಾಗೂ ಮುಖ್ಯೋಪಾಧ್ಯಾಯನ ವಿರುದ್ಧ ಪ್ರಕರಣ
- ಬೆಳಗಾವಿ ಸಮೀಪ ಭೀಕರ ರಸ್ತೆ ಅಪಘಾತ: ಲಾರಿಗೆ ಬೆಂಕಿ, 500ಕ್ಕೂ ಹೆಚ್ಚು ಜೋಳದ ಚೀಲಗಳು ಭಸ್ಮ
Author: Tulunada Surya
ಮಂಗಳೂರು, ಜೂನ್ 22: ಕೇವಲ ಎರಡು ನಿಮಿಷ ತಡವಾಗಿ ಬಂದ ಕಾರಣಕ್ಕೆ ವಿದ್ಯಾರ್ಥಿನಿಯರನ್ನು NEET ಮರುಪರೀಕ್ಷೆಯಿಂದ ವಂಚಿಸಿರುವ ಘಟನೆ ಶಿಕ್ಷಣ ವ್ಯವಸ್ಥೆಯ ಕ್ರೌರ್ಯ ಮತ್ತು ಅಮಾನವೀಯ ಮುಖವನ್ನು ಬಯಲಿಗೆಳೆದಿದೆ ಎಂದು ಅಂತರಾಷ್ಟೀಯ ತುಳುನಾಡ ರಕ್ಷಣಾ ವೇದಿಕೆಯ ಪ್ರಧಾನ ಕಾರ್ಯದರ್ಶಿ ವಿವೇಕಾನಂದ ರಾವ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಧ್ಯಪ್ರದೇಶದ ವಿದಿಶಾದಲ್ಲಿ ನಡೆದ NEET ಮರುಪರೀಕ್ಷೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ಕೇವಲ ಎರಡು ನಿಮಿಷ ತಡವಾಗಿ ಬಂದ ಕಾರಣ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಲಾಗಿದೆ. ಮತ್ತೊಬ್ಬ ವಿದ್ಯಾರ್ಥಿನಿ ಹಳೆಯ ಅಡ್ಮಿಟ್ ಕಾರ್ಡ್ ತಂದಿದ್ದ ಕಾರಣ ಪರೀಕ್ಷೆಯಿಂದ ವಂಚಿತಳಾಗಿದ್ದಾಳೆ. ಇದೇ ಸಂದರ್ಭದಲ್ಲಿ ತಮಿಳುನಾಡಿನಲ್ಲಿ ತಪ್ಪು ಪರೀಕ್ಷಾ ಕೇಂದ್ರಕ್ಕೆ ತೆರಳಿದ್ದ ವಿದ್ಯಾರ್ಥಿಯನ್ನು ಪೊಲೀಸರು ತಮ್ಮ ವಾಹನದಲ್ಲೇ ಸರಿಯಾದ ಪರೀಕ್ಷಾ ಕೇಂದ್ರಕ್ಕೆ ತಲುಪಿಸಿ ಮಾನವೀಯತೆಯ ಉದಾಹರಣೆ ಮೆರೆದಿದ್ದಾರೆ. ಒಂದೆಡೆ ವಿದ್ಯಾರ್ಥಿಯ ಭವಿಷ್ಯ ಉಳಿಸಲು ಆಡಳಿತ ವ್ಯವಸ್ಥೆ ಕೈಜೋಡಿಸುತ್ತಿದ್ದರೆ, ಮತ್ತೊಂದೆಡೆ ಕೇವಲ ಎರಡು ನಿಮಿಷಗಳ ವಿಳಂಬದ ನೆಪದಲ್ಲಿ ವಿದ್ಯಾರ್ಥಿಗಳ ಕನಸುಗಳನ್ನು ನಾಶಪಡಿಸುವ ಧೋರಣೆ ಖಂಡನೀಯವಾಗಿದೆ. ಇದು ಪರೀಕ್ಷಾ ವ್ಯವಸ್ಥೆಯಲ್ಲ, ಶಿಕ್ಷಾ ವ್ಯವಸ್ಥೆಯಾಗಿದೆ…
ಉಡುಪಿ, ಜೂನ್ 22: ಕಾನೂನುಬದ್ಧ ದತ್ತು ಪ್ರಕ್ರಿಯೆ ಅನುಸರಿಸದೇ ನವಜಾತ ಹೆಣ್ಣು ಮಗುವನ್ನು ಸಾಕುತ್ತಿದ್ದ ಪ್ರಕರಣವೊಂದು ಉಡುಪಿಯಲ್ಲಿ ಬೆಳಕಿಗೆ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಆಸ್ಪತ್ರೆಯ ವೈದ್ಯರು ಹಾಗೂ ಮಗುವನ್ನು ಸಾಕುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಂತೆಕಟ್ಟೆ-ನೇಜಾರು ನಿವಾಸಿಗಳಾದ ಪ್ರಕಾಶ್ ಮತ್ತು ಪೂರ್ಣಿಮಾ ದಂಪತಿ ಸುಮಾರು ಒಂದು ತಿಂಗಳ ಹೆಣ್ಣು ಮಗುವನ್ನು ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ಸಾಕುತ್ತಿರುವ ಬಗ್ಗೆ ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಶಿಶು ಅಭಿವೃದ್ಧಿ ಇಲಾಖೆ ಮತ್ತು ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಜೂನ್ 19ರಂದು ದಂಪತಿಯ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತನಿಖೆ ವೇಳೆ ದಂಪತಿಗೆ ವಿವಾಹವಾಗಿ 11 ವರ್ಷಗಳಾದರೂ ಸಂತಾನವಾಗದ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂಬುದು ತಿಳಿದುಬಂದಿದೆ. ಈ ಸಂದರ್ಭದಲ್ಲಿ ಆಸ್ಪತ್ರೆಯೊಂದರಲ್ಲಿ ನವಜಾತ ಶಿಶು ಇರುವ ಮಾಹಿತಿ ದೊರೆತಿದ್ದು, ಅದರ ಆಧಾರದ ಮೇಲೆ ಉಡುಪಿಯ ಕಾಮತ್ ನರ್ಸಿಂಗ್ ಹೋಂನ ವೈದ್ಯ ಡಾ. ಕೆ. ಸುರೇಂದ್ರ ಕಾಮತ್ ಅವರನ್ನು ಸಂಪರ್ಕಿಸಿ ಮಗುವನ್ನು…
ಮಂಗಳೂರು, ಜೂನ್ 22: ಮಂಗಳೂರು ಮಹಾನಗರ ಪಾಲಿಕೆ ನಗರ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸುತ್ತಿರುವ ಕ್ರಮವು ಬಡ ಹಾಗೂ ದುಡಿಯುವ ವರ್ಗದ ಜನರ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರುತ್ತಿದ್ದು, ಈ ಕಾರ್ಯಾಚರಣೆಯು ಸಾಮಾಜಿಕ ನ್ಯಾಯದ ತತ್ವಗಳಿಗೆ ವಿರುದ್ಧವಾಗಿದೆ ಎಂದು ತುಳುನಾಡ ರಕ್ಷಣಾ ವೇದಿಕೆ ಕಾರ್ಮಿಕ ಘಟಕದ ರಾಜ್ಯ ಸಂಚಾಲಕ ಪ್ರಶಾಂತ್ ಭಟ್ ಕಡಬ ಅವರು ಆರೋಪಿಸಿದ್ದಾರೆ. ನಗರದ ವಿವಿಧ ಪ್ರದೇಶಗಳಲ್ಲಿ ಹಲವು ವರ್ಷಗಳಿಂದ ಸಣ್ಣ ವ್ಯಾಪಾರ ನಡೆಸಿಕೊಂಡು ಜೀವನ ಸಾಗಿಸುತ್ತಿರುವ ಬೀದಿ ಬದಿ ವ್ಯಾಪಾರಿಗಳನ್ನು ಯಾವುದೇ ಪರ್ಯಾಯ ವ್ಯವಸ್ಥೆ ಅಥವಾ ಪುನರ್ವಸತಿ ಯೋಜನೆ ರೂಪಿಸದೆ ತೆರವುಗೊಳಿಸಲಾಗುತ್ತಿದೆ. ಇದರಿಂದ ನೂರಾರು ಕುಟುಂಬಗಳು ತಮ್ಮ ಜೀವನೋಪಾಯದ ಮೂಲವನ್ನೇ ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ವಿಶೇಷವಾಗಿ ಅಂಗವಿಕಲರು, ಮಹಿಳೆಯರು, ವಿಧವೆಯರು, ಹಿರಿಯ ನಾಗರಿಕರು ಹಾಗೂ ನಿರುದ್ಯೋಗಿ ಯುವಕರು ಈ ಕ್ರಮದಿಂದ ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಒಂದು ಕಡೆ ಬದುಕಿಗಾಗಿ ದುಡಿಯುತ್ತಿರುವ ಬಡ ವ್ಯಾಪಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿರುವ ಮಹಾನಗರ…
ಉಡುಪಿ, ಜೂನ್ 21: ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ಮಹಿಳಾ ಘಟಕದ ಪದಾಧಿಕಾರಿಗಳ ಆಯ್ಕೆ ಸಭೆಯು ಭಾನುವಾರ ಉಡುಪಿ ಬಸ್ ನಿಲ್ದಾಣದ ಸಮೀಪದ ಅಕ್ಷಯ ಟವರ್ನಲ್ಲಿ ಯಶಸ್ವಿಯಾಗಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ನಾಗಲಕ್ಷ್ಮಿ ವಹಿಸಿದ್ದರು. ಸಭೆಯಲ್ಲಿ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಜಿಲ್ಲಾ ಮಹಿಳಾ ಘಟಕದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಆಯ್ಕೆಯಾದ ಪದಾಧಿಕಾರಿಗಳ ವಿವರ ಹೀಗಿದೆ: ಸಭೆಯಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ಅಧ್ಯಕ್ಷರಾದ ಫ್ರಾಂಕಿ ಡಿಸೋಜ ಕೊಳಲಗಿರಿ ಅವರು ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳನ್ನು ಅಭಿನಂದಿಸಿ ಸನ್ಮಾನಿಸಿದರು. ಮಹಿಳಾ ಘಟಕದ ಮೂಲಕ ಸಂಘಟನೆಯನ್ನು ಗ್ರಾಮ ಮಟ್ಟದವರೆಗೆ ಬಲಪಡಿಸುವಂತೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷರಾದ ಜಯ ಪೂಜಾರಿ, ಜಿಲ್ಲಾ ಜೊತೆ ಕಾರ್ಯದರ್ಶಿ ಪ್ರೀತಮ್ ಡಿಕೋಸ್ಟ, ಕಾಪು ತಾಲೂಕು ಘಟಕದ ಅಧ್ಯಕ್ಷ ನಿತಿನ್ ಕುಮಾರ್ ಶೆಟ್ಟಿ, ಕಾಪು ಮಹಿಳಾ ಘಟಕದ ಅಧ್ಯಕ್ಷೆ ಅನುಸೂಯಾ ಶೆಟ್ಟಿ, ಬೈರಂಪಳ್ಳಿ ಘಟಕದ…
ಮಂಗಳೂರು, ಜೂನ್ 20: ಗ್ರಾಮೀಣ ಹಾಗೂ ನಗರ ಪ್ರದೇಶದ ಪ್ರತಿಭಾವಂತ ಯುವಕರಿಗೆ ಗುಣಮಟ್ಟದ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಆಯೋಜಿಸಲಾಗುವ ಆಳ್ವಾಸ್ ಪ್ರಗತಿ ಬೃಹತ್ ಉದ್ಯೋಗ ಮೇಳ–2026ರ 16ನೇ ಆವೃತ್ತಿಯು ಆಗಸ್ಟ್ 7 ಮತ್ತು 8ರಂದು ಮೂಡುಬಿದಿರೆಯ ವಿದ್ಯಾಗಿರಿ ಆವರಣದಲ್ಲಿ ನಡೆಯಲಿದೆ ಎಂದು ಡಾ. ಎಂ. ಮೋಹನ್ ಆಳ್ವ ತಿಳಿಸಿದ್ದಾರೆ. ಮಂಗಳೂರಿನ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2007ರಲ್ಲಿ ಆರಂಭವಾದ ಆಳ್ವಾಸ್ ಪ್ರಗತಿ ಇಂದು ಕರ್ನಾಟಕ ಸೇರಿದಂತೆ ನೆರೆಯ ರಾಜ್ಯಗಳ ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ವಿಶ್ವಾಸಾರ್ಹ ಉದ್ಯೋಗ ವೇದಿಕೆಯಾಗಿ ಬೆಳೆದಿದೆ ಎಂದು ಹೇಳಿದರು. ಸಾಮಾಜಿಕ ಹೊಣೆಗಾರಿಕೆ (CSR) ಕಾರ್ಯಕ್ರಮದ ಅಂಗವಾಗಿ ಸಂಪೂರ್ಣ ಉಚಿತವಾಗಿ ಆಯೋಜಿಸಲಾಗುವ ಈ ಮೇಳದಲ್ಲಿ ಅಭ್ಯರ್ಥಿಗಳು ಮತ್ತು ಕಂಪನಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ. ಇದುವರೆಗೆ ನಡೆದ 22 ಉದ್ಯೋಗ ಮೇಳಗಳಲ್ಲಿ 66 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳು ಶಾರ್ಟ್ಲಿಸ್ಟ್ ಆಗಿದ್ದು, 40 ಸಾವಿರಕ್ಕೂ ಅಧಿಕ ಮಂದಿಗೆ ಸ್ಥಳದಲ್ಲೇ ಉದ್ಯೋಗ ಆಫರ್ ದೊರೆತಿದೆ ಎಂದು ಮಾಹಿತಿ ನೀಡಿದರು. ಈ ಬಾರಿಯ ಮೇಳದಲ್ಲಿ 300ಕ್ಕೂ…
ಮಂಗಳೂರು, ಜೂನ್ 20: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಪಡಿತರ ಚೀಟಿಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳು ಹೆಚ್ಚಾಗುತ್ತಿದ್ದು, ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಜನತಾದಳ (ಜಾತ್ಯತೀತ) ದಕ್ಷಿಣ ಕನ್ನಡ ಜಿಲ್ಲಾ ಘಟಕದ ನಿಯೋಗವು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿತು. ಪಡಿತರ ಚೀಟಿಗಳ ಮಂಜೂರಾತಿಯಲ್ಲಿ ವಿಳಂಬ, ಹೊಸ ಅರ್ಜಿಗಳ ವಿಲೇವಾರಿಯಲ್ಲಿ ನಿರ್ಲಕ್ಷ್ಯ, ಹೆಸರು ಸೇರ್ಪಡೆ ಹಾಗೂ ತಿದ್ದುಪಡಿ ಪ್ರಕ್ರಿಯೆಯಲ್ಲಿನ ತಾಂತ್ರಿಕ ಅಡಚಣೆಗಳು, ಅರ್ಹ ಫಲಾನುಭವಿಗಳಿಗೆ ಪಡಿತರ ಚೀಟಿ ದೊರೆಯದಿರುವುದು ಸೇರಿದಂತೆ ಹಲವು ಸಮಸ್ಯೆಗಳ ಕುರಿತು ಅಧಿಕಾರಿಗಳ ಗಮನ ಸೆಳೆದ ಜೆಡಿಎಸ್ ಮುಖಂಡರು, ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸಬೇಕೆಂದು ಒತ್ತಾಯಿಸಿದರು. ಬಡವರು, ಕಾರ್ಮಿಕರು ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಪಡಿತರ ಚೀಟಿ ಅತ್ಯಂತ ಅವಶ್ಯಕ ದಾಖಲೆ ಆಗಿದ್ದು, ಇಲಾಖೆಯ ನಿರ್ಲಕ್ಷ್ಯದಿಂದ ಸಾವಿರಾರು ಕುಟುಂಬಗಳು ಸರ್ಕಾರದ ವಿವಿಧ ಸೌಲಭ್ಯಗಳಿಂದ ವಂಚಿತರಾಗುತ್ತಿರುವುದು ಖಂಡನೀಯ ಎಂದು ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ಜನರು…
ಚಿಕ್ಕಮಗಳೂರು, ಜೂನ್ 20: ಜಿಲ್ಲೆಯ ಕಡೂರು ತಾಲೂಕಿನ ಗ್ರಾಮವೊಂದರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿದ್ದ ಮೂವರು ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಶಾಲೆಯ ಶಿಕ್ಷಕ ಹಾಗೂ ಮುಖ್ಯೋಪಾಧ್ಯಾಯನ ವಿರುದ್ಧ ಪ್ರಕರಣ ದಾಖಲಾಗಿರುವ ಘಟನೆ ಬೆಳಕಿಗೆ ಬಂದಿದೆ. ಲಭ್ಯವಾದ ಮಾಹಿತಿಯ ಪ್ರಕಾರ, ಶಾಲೆಯ ಶಿಕ್ಷಕ ನಾಗರಾಜಪ್ಪ ಎಂಬಾತ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ವಿದ್ಯಾರ್ಥಿನಿಯರ ಬಳಿ ಮನೆಯಿಂದ ಮೊಬೈಲ್ ಫೋನ್ ತರಿಸಿಕೊಳ್ಳುತ್ತಿದ್ದ ಆತ, ಬಳಿಕ ಅಶ್ಲೀಲ ವಿಡಿಯೋಗಳು ಹಾಗೂ ಅಸಭ್ಯ ಸಂದೇಶಗಳನ್ನು ಕಳುಹಿಸುತ್ತಿದ್ದ ಎನ್ನಲಾಗಿದೆ. ಅಲ್ಲದೆ, ವಿದ್ಯಾರ್ಥಿನಿಯರು ಧರಿಸಿಕೊಂಡು ಬರುತ್ತಿದ್ದ ಉಡುಪುಗಳ ಬಗ್ಗೆ ಅನಗತ್ಯ ಪ್ರಶ್ನೆಗಳನ್ನು ಕೇಳಿ, ಅವರ ವೈಯಕ್ತಿಕ ಗೌರವಕ್ಕೆ ಧಕ್ಕೆ ಉಂಟುಮಾಡುವ ರೀತಿಯಲ್ಲಿ ವರ್ತಿಸುತ್ತಿದ್ದ ಆರೋಪವೂ ವ್ಯಕ್ತವಾಗಿದೆ. ಈ ವಿಚಾರವನ್ನು ವಿದ್ಯಾರ್ಥಿನಿಯರು ತಮ್ಮ ಪೋಷಕರ ಗಮನಕ್ಕೆ ತಂದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಪೋಷಕರು ಹಾಗೂ ಗ್ರಾಮಸ್ಥರು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ದೂರು ನೀಡಿದ್ದು, ಘಟನೆ ಕುರಿತು ಸಮಗ್ರ ತನಿಖೆ…
ಬೆಳಗಾವಿ, ಜೂನ್ 20: ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ. ಹುಬ್ಬಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಲಾರಿಗೆ ಬೆಂಕಿ ಕಾಣಿಸಿಕೊಂಡು 500ಕ್ಕೂ ಹೆಚ್ಚು ಗೋವಿನ ಜೋಳದ ಚೀಲಗಳು ಸುಟ್ಟು ಭಸ್ಮವಾದ ಘಟನೆ ನಡೆದಿದೆ. ಕಿತ್ತೂರು ಮಾರ್ಗವಾಗಿ ಬೆಳಗಾವಿ ಕಡೆಗೆ ಬರುತ್ತಿದ್ದ ಹಾಲಿನ ಟ್ಯಾಂಕರ್, ಜೋಳದ ಚೀಲಗಳನ್ನು ತುಂಬಿಕೊಂಡು ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಡಿಕ್ಕಿಯ ರಭಸಕ್ಕೆ ಲಾರಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಬೆಂಕಿ ಸಂಪೂರ್ಣ ವಾಹನವನ್ನು ಆವರಿಸಿದೆ. ಲಾರಿಯಲ್ಲಿ ಸಾಗಿಸುತ್ತಿದ್ದ 500ಕ್ಕೂ ಹೆಚ್ಚು ಗೋವಿನ ಜೋಳದ ಚೀಲಗಳು ಬೆಂಕಿಗಾಹುತಿಯಾಗಿ ಸುಟ್ಟು ಕರಕಲಾಗಿವೆ. ಅಪಘಾತದ ತೀವ್ರತೆ ಭಾರೀ ಪ್ರಮಾಣದಲ್ಲಿದ್ದರೂ, ಎರಡೂ ವಾಹನಗಳ ಚಾಲಕರು ಸಮಯಪ್ರಜ್ಞೆಯಿಂದ ವಾಹನಗಳಿಂದ ಹೊರಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಮತ್ತು ಅಗ್ನಿ ನಂದಿಸುವ ಕಾರ್ಯಾಚರಣೆ…
ಮಂಗಳೂರು, ಜೂನ್ 20: ಬಿಡದಿ ಮತ್ತು ಹಾರೋಹಳ್ಳಿ ಹೋಬಳಿಗಳ ವ್ಯಾಪ್ತಿಯಲ್ಲಿರುವ ಫಲವತ್ತಾದ ಕೃಷಿ ಭೂಮಿಯ ಭೂಸ್ವಾಧೀನ ಪ್ರಕ್ರಿಯೆಯನ್ನು ತಕ್ಷಣವೇ ಕೈಬಿಡುವಂತೆ ಒತ್ತಾಯಿಸಿ, ಜನತಾದಳ (ಜಾತ್ಯತೀತ) ಪಕ್ಷದ ನಿಯೋಗವು ಜಿಲ್ಲಾದ್ಯಕ್ಷರಾದ ಜಾಕೆ ಮಾಧವ ಗೌಡರವರ ಮಾರ್ಗದರ್ಶನದಲ್ಲಿ ದಿನಾಂಕ 20-06-2026ರಂದು ಬೆಳಿಗ್ಗೆ 11 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಮನವಿ ಸಲ್ಲಿಸಿತು.ಮನವಿಯಲ್ಲಿ, ರಾಜ್ಯ ಸರ್ಕಾರ ಜಾರಿಗೊಳಿಸುತ್ತಿರುವ ಭೂಸ್ವಾಧೀನ ಯೋಜನೆಯು ರೈತ ವಿರೋಧಿ ನೀತಿಯಾಗಿದ್ದು, ಇದರಿಂದ ಸಾವಿರಾರು ರೈತ ಕುಟುಂಬಗಳ ಜೀವನಾಧಾರಕ್ಕೆ ಗಂಭೀರ ಧಕ್ಕೆಯಾಗುವ ಅಪಾಯವಿದೆ ಎಂದು ಆತಂಕ ವ್ಯಕ್ತಪಡಿಸಲಾಗಿದೆ. ಮೊದಲ ಹಂತದಲ್ಲೇ ಸುಮಾರು 498.34 ಎಕರೆ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಯಿಂದ 755 ರೈತ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಲಿದ್ದು, ಇವರಲ್ಲಿ ಬಹುಪಾಲು ಸಣ್ಣ ಹಾಗೂ ಅತಿ ಸಣ್ಣ ರೈತರಾಗಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಮುಂದಿನ ಹಂತಗಳಲ್ಲಿ 7,500 ಎಕರೆಗಿಂತಲೂ ಹೆಚ್ಚು ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಸ್ತಾವನೆಯಿಂದ ರೈತ ಸಮುದಾಯದಲ್ಲಿ ತೀವ್ರ ಆತಂಕ ಮನೆಮಾಡಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.…
ಮಂಗಳೂರು, ಜೂನ್ 19: ಜನತಾದಳ (ಜಾತ್ಯತೀತ) ಪಕ್ಷದ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ–203ರ ಮಹತ್ವದ ಸಂಘಟನಾ ಸಭೆಯು ಕ್ಷೇತ್ರಾಧ್ಯಕ್ಷರಾದ ಎನ್.ಪಿ. ಪುಷ್ಪರಾಜನ್ ಅವರ ಅಧ್ಯಕ್ಷತೆಯಲ್ಲಿ ನಗರದ ವುಡ್ಲ್ಯಾಂಡ್ಸ್ ಹೋಟೆಲ್ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು. ಸಭೆಯಲ್ಲಿ ಕ್ಷೇತ್ರದ ಸಂಘಟನೆಯನ್ನು ಮತ್ತಷ್ಟು ಸದೃಢಗೊಳಿಸುವುದು, ಸದಸ್ಯತ್ವ ಅಭಿಯಾನವನ್ನು ತೀವ್ರಗೊಳಿಸುವುದು, ಮುಂಬರುವ ರಾಜಕೀಯ ಹಾಗೂ ಸಾಮಾಜಿಕ ಕಾರ್ಯಕ್ರಮಗಳ ರೂಪುರೇಷೆಗಳನ್ನು ಸಿದ್ಧಪಡಿಸುವುದು ಮತ್ತು ಜನಸಾಮಾನ್ಯರ ಸಮಸ್ಯೆಗಳ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು. ಸಭೆಯ ಆರಂಭದಲ್ಲಿ ಪಕ್ಷದ ಬೆಳವಣಿಗೆ, ಸಂಘಟನಾ ಚಟುವಟಿಕೆಗಳು ಹಾಗೂ ಕ್ಷೇತ್ರದ ರಾಜಕೀಯ ಪರಿಸ್ಥಿತಿಯ ಕುರಿತು ವಿಸ್ತೃತವಾಗಿ ಚರ್ಚೆ ನಡೆಯಿತು. ಪಕ್ಷವನ್ನು ಬೂತ್ ಮಟ್ಟದಿಂದ ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬ ಕಾರ್ಯಕರ್ತರೂ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕೆಂದು ಮುಖಂಡರು ಕರೆ ನೀಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾ ಕಾರ್ಯಾಧ್ಯಕ್ಷ ವಸಂತ ಪೂಜಾರಿ ಅವರು, ಜೆಡಿಎಸ್ ಪಕ್ಷದ ತತ್ವ-ಸಿದ್ಧಾಂತಗಳು, ರೈತಪರ ಹಾಗೂ ಜನಪರ ಕಾರ್ಯಕ್ರಮಗಳನ್ನು ಮನೆಮನೆಗೆ ತಲುಪಿಸುವ ಕಾರ್ಯವನ್ನು ಪ್ರತಿಯೊಬ್ಬ ಕಾರ್ಯಕರ್ತರೂ ಕೈಗೊಳ್ಳಬೇಕು ಎಂದು ಹೇಳಿದರು. ಸದಸ್ಯತ್ವ ನೋಂದಣಿ ಅಭಿಯಾನವನ್ನು ಇನ್ನಷ್ಟು ವ್ಯಾಪಕವಾಗಿ ನಡೆಸಿ…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
