Author: Tulunada Surya

ಬ್ರಹ್ಮಾವರ: ಬಾಲ್ಕುದ್ರು–ಮಾಬುಕಳದ ನಿವಾಸಿಯಾಗಿದ್ದ ಶತಾಯುಷಿ ಸಿಲ್ವೆಸ್ಟರ್ ಡಯಾಸ್ (104) ಅವರು ಜೂನ್ 28, 2026ರಂದು ವಯೋಸಹಜ ಅನಾರೋಗ್ಯದಿಂದ ನಿಧನರಾದರು. ಇವರು ನಿಧನರಾದ ರೋಸಿ ಡಯಾಸ್ ಅವರ ಪತಿಯಾಗಿದ್ದು, ಸೆಲಿನ್, ದಿವಂಗತ ರೋನಿ ಮೊನಿಸ್, ಲ್ಯೂಕಾಸ್, ಫ್ರೆಡ್ಡಿ, ಹ್ಯಾರಿ, ಐರಿನ್, ಗ್ಲಾಡಿಸ್, ಅಲ್ಬನ್, ಗ್ಲೋರಿಯಾ ಹಾಗೂ ನೆಲ್ಸನ್ ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಅಲ್ಲದೆ ಅನೇಕ ಮೊಮ್ಮಕ್ಕಳು, ಮರಿಮೊಮ್ಮಕ್ಕಳು ಹಾಗೂ 12 ಮಂದಿ ಮರಿ-ಮರಿಮೊಮ್ಮಕ್ಕಳನ್ನು ಅಗಲಿದ್ದಾರೆ. ಅಂತ್ಯಕ್ರಿಯೆಯ ವಿವರ:ಜೂನ್ 30, 2026 (ಮಂಗಳವಾರ) ಬೆಳಿಗ್ಗೆ 10:30 ಗಂಟೆಗೆ ಮಾಬುಕಳದ “ಶಾಲೋಮ್” ನಿವಾಸದಿಂದ ಅಂತಿಮ ಯಾತ್ರೆ ಹೊರಡಲಿದ್ದು, ಬಳಿಕ ಬ್ರಹ್ಮಾವರದ ಸೇಂಟ್ ಮೇರೀಸ್ ಸಿರಿಯನ್ ಆರ್ಥಡಾಕ್ಸ್ ಚರ್ಚ್‌ನಲ್ಲಿ ಬೆಳಿಗ್ಗೆ 11:00 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ. ಸಂಪರ್ಕ: 95353 25866 ಭಾವಪೂರ್ಣ ಶ್ರದ್ಧಾಂಜಲಿ. 🙏

Read More

ಜೂನ್ 26: ಜನತಾದಳ (ಜಾತ್ಯತೀತ) ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಮಹಿಳಾ ಕಾರ್ಯಕರ್ತರ ಸಭೆಯು ಜೂನ್ 26, 2026ರಂದು ಪಡೀಲ್‌ನ ನಿಟ್ಟೆ ಎಜುಕೇಷನ್ ಟ್ರಸ್ಟ್ ಸಭಾಂಗಣದಲ್ಲಿ ಮಾಜಿ ಮಹಿಳಾ ಅಧ್ಯಕ್ಷೆ ಸುಮತಿ ಹೆಗ್ಡೆ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಮಹಿಳಾ ಅಧ್ಯಕ್ಷೆ ವೀಣಾ ಶೆಟ್ಟಿ, ಪಕ್ಷ ಸಂಘಟನೆಯನ್ನು ತಳಮಟ್ಟದಲ್ಲಿ ಇನ್ನಷ್ಟು ಬಲಪಡಿಸುವ ಅಗತ್ಯವನ್ನು ಒತ್ತಿ ಹೇಳಿದರು. ಮಹಿಳೆಯರು ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದ ಅವರು, ಇದೇ ಸಂದರ್ಭದಲ್ಲಿ ಹಲವಾರು ಮಹಿಳೆಯರನ್ನು ಜನತಾದಳ (ಜಾತ್ಯತೀತ) ಪಕ್ಷಕ್ಕೆ ಸೇರ್ಪಡೆಗೊಳಿಸಿದರು.ಅಂದು ವಿಶ್ವ ತಂಬಾಕು ಮುಕ್ತ ದಿನದ ಅಂಗವಾಗಿ ಆಯೋಜಿಸಿದ್ದ ವಿಶೇಷ ಜಾಗೃತಿ ಕಾರ್ಯಕ್ರಮದಲ್ಲಿ ತಂಬಾಕು ಮುಕ್ತ ಸಮಾಜ ನಿರ್ಮಾಣದ ಅಗತ್ಯತೆ ಹಾಗೂ ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಉಪನ್ಯಾಸ ನಡೆಯಿತು. ಆರೋಗ್ಯಕರ ಜೀವನಶೈಲಿಯ ಮಹತ್ವದ ಬಗ್ಗೆ ಕಾರ್ಯಕರ್ತರಿಗೆ ಅರಿವು ಮೂಡಿಸಲಾಯಿತು.ಕಾರ್ಯಕ್ರಮದಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಎನ್.ಟಿ. ಪುಷ್ಪರಾಜನ್ ಉಪಸ್ಥಿತರಿದ್ದು,…

Read More

ಮಂಗಳೂರು, ಜೂನ್ 28: ಸಮಸ್ತ ಕೇರಳ ಜಂಇಯ್ಯತುಲ್ ಉಲಮಾದ ಶತಮಾನೋತ್ಸವದ ಅಂಗವಾಗಿ ಮಲ್ಲಾರು ಮಜೂರಿನ ಬದ್ರಿಯಾ ಜುಮುಅ ಮಸ್ಜಿದ್‌ನಲ್ಲಿ ಭಾನುವಾರ ಧ್ವಜಾರೋಹಣ ಕಾರ್ಯಕ್ರಮವು ಭಕ್ತಿಭಾವದಿಂದ ನಡೆಯಿತು. ಕಾರ್ಯಕ್ರಮದಲ್ಲಿ ಬದ್ರಿಯಾ ಜುಮುಅ ಮಸ್ಜಿದ್ ಅಧ್ಯಕ್ಷ ಡಾ. ಎಂ. ಫಾರೂಕ್ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. “1926ರ ಜೂನ್ 26ರಂದು ಸ್ಥಾಪನೆಯಾದ ಸಮಸ್ತ ಉಲಮಾ ಸಂಘಟನೆ ಇಂದು ಶತಮಾನೋತ್ಸವವನ್ನು ಆಚರಿಸುತ್ತಿರುವುದು ಮುಸ್ಲಿಂ ಸಮುದಾಯಕ್ಕೆ ಹೆಮ್ಮೆಯ ಸಂಗತಿಯಾಗಿದೆ. ಕಳೆದ ನೂರು ವರ್ಷಗಳಿಂದ ಧಾರ್ಮಿಕ ಮಾರ್ಗದರ್ಶನ, ಶೈಕ್ಷಣಿಕ ಪ್ರಗತಿ, ಸಾಮಾಜಿಕ ಸೇವೆ ಹಾಗೂ ದೇಶದ ಸರ್ವತೋಮುಖ ಅಭಿವೃದ್ಧಿಗೆ ಸಮಸ್ತ ನೀಡಿರುವ ಕೊಡುಗೆ ಅಪಾರವಾಗಿದೆ. ಇಂತಹ ಮಹತ್ವದ ಸಂಘಟನೆಯ ಶತಮಾನೋತ್ಸವದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ಆಯೋಜಿಸಿರುವುದು ಸಂತಸದ ವಿಷಯವಾಗಿದೆ” ಎಂದು ಅವರು ಹೇಳಿದರು. ಸ್ಥಳೀಯ ಖತೀಬ್ ಅಬ್ದುರ್ರಶೀದ್ ಸಖಾಫಿ ದುವಾ ಪ್ರಾರ್ಥನೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಸಮಸ್ತ ಮದರಸ ತಪಾಸಣಾಧಿಕಾರಿ ಹಸನ್ ಸಖಾಫಿ, ಸುನ್ನೀ ಅಧ್ಯಾಪಕರ ಒಕ್ಕೂಟದ ಉಡುಪಿ ಜಿಲ್ಲಾ ಕಾರ್ಯದರ್ಶಿ ಅಬ್ದುಲ್ ರಹಮಾನ್ ಸಅದಿ, ಆಡಳಿತ ಸಮಿತಿಯ ಉಪಾಧ್ಯಕ್ಷ ಹಸನಬ್ಬ…

Read More

ಉಳ್ಳಾಲ, ಜೂನ್ 28: 114 ವರ್ಷಗಳ ಸೇವಾ ಪರಂಪರೆಯನ್ನು ಹೊಂದಿರುವ ಎಂಸಿಸಿ ಬ್ಯಾಂಕ್ ತನ್ನ 22ನೇ ಶಾಖೆಯನ್ನು ದೇರಳಕಟ್ಟೆಯಲ್ಲಿ ಆರಂಭಿಸುವ ಮೂಲಕ ಕರಾವಳಿ ಭಾಗದ ಬ್ಯಾಂಕಿಂಗ್ ಸೇವೆಯನ್ನು ಮತ್ತಷ್ಟು ವಿಸ್ತರಿಸಿದೆ. ಫಾದರ್ ಮುಲ್ಲರ್ಸ್ ಕಾಂಪ್ಲೆಕ್ಸ್‌ನ ನೆಲಮಹಡಿಯಲ್ಲಿ ಭಾನುವಾರ ನೂತನ ಶಾಖೆ, ಎಟಿಎಂ ಹಾಗೂ ಭದ್ರತಾ ಕೊಠಡಿಯನ್ನು ಉದ್ಘಾಟಿಸುವುದರೊಂದಿಗೆ ವಿವಿಧ ಸಮಾಜಮುಖಿ ಕಾರ್ಯಕ್ರಮಗಳಿಗೂ ಚಾಲನೆ ನೀಡಲಾಯಿತು. ಭದ್ರತಾ ಕೊಠಡಿಯನ್ನು ಉದ್ಘಾಟಿಸಿದ ಅರ್ಸುಲೈನ್ ಫ್ರಾನ್ಸಿಸ್ಕನ್ ಸಿಸ್ಟರ್ಸ್‌ನ ಸುಪೀರಿಯರ್ ಜನರಲ್ ಸಿ. ಮಿಲ್ಲಿ ಫೆರ್ನಾಂಡಿಸ್, ಸರ್ಕಾರದ ವಿವಿಧ ಜನಪರ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವಲ್ಲಿ ಬ್ಯಾಂಕ್‌ಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು. ವಿದ್ಯಾರ್ಥಿಗಳಲ್ಲಿ ಉಳಿತಾಯದ ಸಂಸ್ಕೃತಿ ಬೆಳೆಸುವುದು, ಹಿರಿಯ ನಾಗರಿಕರಿಗೆ ಪಿಂಚಣಿ ಸೇವೆಗಳನ್ನು ಸುಲಭಗೊಳಿಸುವುದು ಹಾಗೂ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸಾಲ ಮತ್ತು ಉಳಿತಾಯ ಯೋಜನೆಗಳ ಮೂಲಕ ಬೆಂಬಲ ನೀಡುವುದು ಬ್ಯಾಂಕ್‌ಗಳ ಸಾಮಾಜಿಕ ಜವಾಬ್ದಾರಿಯಾಗಿದೆ ಎಂದು ಅವರು ತಿಳಿಸಿದರು. ಎಟಿಎಂ ಕೇಂದ್ರವನ್ನು ಉದ್ಘಾಟಿಸಿದ ಫಾದರ್ ಮುಲ್ಲರ್ ಹೋಮಿಯೊಪತಿಕ್ ಕಾಲೇಜಿನ ಆಡಳಿತದಾರ ಫಾ. ನೀಲೆಶ್ ಕ್ರಾಸ್ತಾ, ಫಾದರ್…

Read More

ಉಡುಪಿ ಬ್ರಹ್ಮಾವರ, ಜೂನ್ 28: ತುಳುನಾಡಿನ ಆಚಾರ-ವಿಚಾರ, ಸಂಸ್ಕೃತಿ, ಭಾಷೆ ಹಾಗೂ ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸಂಘಟಿತ ಹೋರಾಟದ ಅಗತ್ಯವಿದೆ ಎಂದು ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಅಧ್ಯಕ್ಷ ಫ್ರಾಂಕಿ ಡಿಸೋಜಾ ಅಭಿಪ್ರಾಯಪಟ್ಟರು. ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲೆ, ಬ್ರಹ್ಮಾವರ ಘಟಕದ ಪೂರ್ವಭಾವಿ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮವು ಭಾನುವಾರ ಬೆಳಿಗ್ಗೆ 10 ಗಂಟೆಗೆ ಆರೂರಿನ ಶ್ರೀ ಬಬ್ಬು ಸ್ವಾಮಿ ದೈವಸ್ಥಾನದ ಸಮೀಪದ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಜಿಲ್ಲಾ ಅಧ್ಯಕ್ಷ ಫ್ರಾಂಕಿ ಡಿಸೋಜಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಅವರು ತುಳುನಾಡಿನ ಇತಿಹಾಸ, ಸಂಸ್ಕೃತಿ, ಸಂಪ್ರದಾಯ, ಹೋರಾಟದ ಉದ್ದೇಶ ಹಾಗೂ ಸಂಘಟನೆಯ ಕಾರ್ಯಚಟುವಟಿಕೆಗಳ ಕುರಿತು ಸಮಗ್ರ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಬ್ರಹ್ಮಾವರ ಘಟಕದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ತುಳುನಾಡಿನ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಸೂರ್ಯ-ಚಂದ್ರರ ಶಾಲು ಹೊದಿಸಿ ನೂತನ ಪದಾಧಿಕಾರಿಗಳನ್ನು ಗೌರವಪೂರ್ವಕವಾಗಿ ಸ್ವಾಗತಿಸಿ ಅಭಿನಂದಿಸಲಾಯಿತು. ಸಭೆಯಲ್ಲಿ ಬ್ರಹ್ಮಾವರ…

Read More

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 48ನೇ ವೆಲೆನ್ಸಿಯ ವಾರ್ಡಿನ ರೆಡ್ ಬಿಲ್ಡಿಂಗ್ ರೋಹನ್ ಕಾರ್ಪೋರೇಷನ್ ಹಿಂಭಾಗ ರಸ್ತೆಯ ಅಭಿವೃದ್ಧಿ ಕಾಮಗಾರಿಯು 20ಲಕ್ಷ ರೂ. ವಿಶೇಷ ಅನುದಾನದಲ್ಲಿ ನಡೆಯಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಗುದ್ದಲಿ ಪೂಜೆಯು ನಡೆಯಿತು. ನಂತರ ಮಾತನಾಡಿದ ಶಾಸಕರು, ಈ ಭಾಗದಲ್ಲಿ ಸುಮಾರು 300 ಮನೆಗಳಿದ್ದು ಅವರೆಲ್ಲರ ಬಹುದಿನಗಳ ಬೇಡಿಕೆಯಂತೆ ಈ ರಸ್ತೆಯು ನಿರ್ಮಾಣವಾಗಲಿದ್ದು ಕಾಮಗಾರಿ ವೇಳೆ ಉಂಟಾಗುವ ಅಡಚಣೆಗೆ ಸಹಕರಿಸಿ ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ನಿಕಟಪೂರ್ವ ಪಾಲಿಕೆ ಸದಸ್ಯರಾದ ಸಂದೀಪ್ ಗರೋಡಿ, ಪ್ರಮುಖರಾದ ಪ್ರಕಾಶ್ ಗರೋಡಿ, ಜೇಮ್ಸ್ ಡಿಸೋಜ, ಪ್ರವೀಣ್ ನಿಡ್ಡೆಲ್, ವರುಣ್ ರಾಜ್ ಅಂಬಟ್, ಪದ್ಮನಾಭ, ನಾಗರಾಜ್, ಕೃತಿಕ್ ಉಜ್ಜೋಡಿ, ಮನ್ವಿತ್, ಸೇರಿದಂತೆ ಪರಿಸರದ ನಿವಾಸಿಗಳು, ವಾರ್ಡಿನ ಕಾರ್ಯಕರ್ತರು ಉಪಸ್ಥಿತರಿದ್ದರು.

Read More

ಮೈಸೂರು, ಜೂನ್ 28: ನಗರದ ಅಗ್ರಹಾರದ ಸಿಪಾಯಿ ಗ್ರ್ಯಾಂಡೆ ಪಬ್‌ನಲ್ಲಿ ಬಿಲ್ ಪಾವತಿ ವಿಚಾರವಾಗಿ ಆರಂಭವಾದ ವಾಗ್ವಾದ ಹಲ್ಲೆಗೆ ತಿರುಗಿದ ಘಟನೆ ನಡೆದಿದೆ. ಘಟನೆಯ ಸಂಪೂರ್ಣ ದೃಶ್ಯಾವಳಿ ಪಬ್‌ನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಲಭ್ಯ ಮಾಹಿತಿಯ ಪ್ರಕಾರ, ಬರ್ತ್‌ಡೇ ಪಾರ್ಟಿ ಆಚರಿಸಲು ಪಬ್‌ಗೆ ಬಂದಿದ್ದ ಏಳು ಮಂದಿ ಯುವಕರ ತಂಡ ಸುಮಾರು ₹15 ಸಾವಿರದ ಬಿಲ್ ಮಾಡಿತ್ತು. ಬಿಲ್ ಪಾವತಿ ವಿಚಾರದಲ್ಲಿ ಪಬ್ ಸಿಬ್ಬಂದಿ ಹಾಗೂ ಯುವಕರ ನಡುವೆ ಮಾತಿನ ಚಕಮಕಿ ನಡೆದಿದ್ದು, ಅದು ಬಳಿಕ ಕೈಕೈ ಮಿಲಾಯಿಸುವ ಮಟ್ಟಕ್ಕೆ ತಲುಪಿದೆ. ಈ ವೇಳೆ ಪಬ್‌ನ ಮ್ಯಾನೇಜರ್ ವಿನಯ್ ಅವರನ್ನು ಹೊರಗೆ ಕರೆಸಿಕೊಂಡು ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಅಲ್ಲದೆ, ಹಲ್ಲೆಯ ವೇಳೆ ಅವರ ಕುತ್ತಿಗೆಯಲ್ಲಿದ್ದ ಸುಮಾರು 23 ಗ್ರಾಂ ತೂಕದ ಚಿನ್ನದ ಸರವನ್ನು ಕಸಿದುಕೊಂಡಿರುವ ಆರೋಪವೂ ದಾಖಲಾಗಿದೆ. ಘಟನೆಯ ಕುರಿತು ಕೆ.ಆರ್. ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಸಿಸಿಟಿವಿ ದೃಶ್ಯಾವಳಿ ಸೇರಿದಂತೆ…

Read More

ತುಮಕೂರು, ಜೂನ್ 28: ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನೊಳಗೆ ಪ್ರೇಮಿಗಳ ನಡುವಿನ ತೀವ್ರ ಕಲಹವು ಭೀಕರ ದುರಂತದಲ್ಲಿ ಅಂತ್ಯಗೊಂಡಿದೆ. ಪ್ರೇಯಸಿಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಯುವಕ, ಬಳಿಕ ಕಾರಿನಲ್ಲೇ ಪೆಟ್ರೋಲ್ ಬಾಂಬ್ ಸಿಡಿಸಿಕೊಂಡು ಸಜೀವ ದಹನವಾಗಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಜೋಗಿಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತನನ್ನು ಬೆಂಗಳೂರಿನ ನಾಗೇಂದ್ರ (30) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಯುವತಿಯನ್ನು ತುಮಕೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ನಾಗೇಂದ್ರ ಮತ್ತು ಯುವತಿ ಬೆಂಗಳೂರಿನಿಂದ ಬಾಡಿಗೆ ಕಾರಿನಲ್ಲಿ ಉತ್ತರ ಕನ್ನಡ ಜಿಲ್ಲೆಯ ಅಂಕೋಲದತ್ತ ಪ್ರಯಾಣಿಸುತ್ತಿದ್ದರು. ಶಿರಾ ತಾಲೂಕಿನ ಜೋಗಿಹಳ್ಳಿ ಬಳಿ ಸಾಗುತ್ತಿದ್ದ ವೇಳೆ ಇಬ್ಬರ ನಡುವೆ ವೈಯಕ್ತಿಕ ವಿಚಾರಕ್ಕೆ ಸಂಬಂಧಿಸಿದಂತೆ ತೀವ್ರ ವಾಗ್ವಾದ ನಡೆದಿದೆ. ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿದಾಗ ನಾಗೇಂದ್ರ ಯುವತಿಯ ತಲೆಗೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಹಲ್ಲೆಯಿಂದ ಯುವತಿ ರಕ್ತದ ಮಡುವಿನಲ್ಲಿ ಬಿದ್ದ…

Read More

ಕಾಸರಗೋಡು, ಜೂನ್ 27: ಧರ್ಮ, ಜಾತಿ ಮತ್ತು ರಾಜಕೀಯ ಭಿನ್ನಾಭಿಪ್ರಾಯಗಳ ನಡುವೆ ಮಾನವೀಯತೆಯೇ ಶ್ರೇಷ್ಠ ಎಂಬುದನ್ನು ಕೇರಳದ ಕಾಸರಗೋಡಿನಲ್ಲಿ ನಡೆದ ಅಪರೂಪದ ಘಟನೆಯೊಂದು ಮತ್ತೊಮ್ಮೆ ಸಾಬೀತುಪಡಿಸಿದೆ. ಕ್ಯಾನ್ಸರ್‌ನಿಂದ ಮೃತಪಟ್ಟ ಮಾಜಿ ಆರ್‌ಎಸ್‌ಎಸ್ ಕಾರ್ಯಕರ್ತ ನಾರಾಯಣ ತೊಟ್ಟತ್ತೋಡಿ (64) ಅವರ ಅಂತ್ಯಸಂಸ್ಕಾರವನ್ನು ಜಿಲ್ಲಾ ಪಂಚಾಯಿತಿ ಸದಸ್ಯೆ ಇರ್ಫಾನಾ ಇಕ್ಬಾಲ್ ಅವರು ಹಿಂದೂ ಸಂಪ್ರದಾಯದಂತೆ ನೆರವೇರಿಸಿದ್ದು, ಈ ಮಾನವೀಯ ನಡೆ ಎಲ್ಲೆಡೆ ಪ್ರಶಂಸೆಗೆ ಪಾತ್ರವಾಗಿದೆ. ಬಾಯಿಯ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ನಾರಾಯಣ ತೊಟ್ಟತ್ತೋಡಿ ಅವರು ಚಿಕಿತ್ಸೆಗಾಗಿ ಕೋಝಿಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟರು. ಬಳಿಕ ಅವರ ಸ್ವಗ್ರಾಮವಾದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಬ್ಲಾಕ್ ವ್ಯಾಪ್ತಿಯ ಮೀಂಜ ಪಂಚಾಯಿತಿಯ ಚಿಗ್ರುಪಾಡವು ಗ್ರಾಮದಲ್ಲಿ ಅಂತಿಮ ವಿಧಿವಿಧಾನಗಳು ನೆರವೇರಿಸಲಾಯಿತು. ಸುಮಾರು ಒಂದು ತಿಂಗಳ ಹಿಂದೆ ಗ್ರಾಮದ ಅಂಗಡಿಯೊಂದರ ಬಳಿ ಅಸ್ವಸ್ಥ ಸ್ಥಿತಿಯಲ್ಲಿ ನಾರಾಯಣ ಪತ್ತೆಯಾಗಿದ್ದರು. ಕುಟುಂಬದ ಸಮಸ್ಯೆಗಳಿಂದ ನಿರಾಶ್ರಿತರಾಗಿದ್ದ ಅವರು ಕೊನೆಯ ಹಂತದ ಕ್ಯಾನ್ಸರ್‌ನಿಂದ ತೀವ್ರವಾಗಿ ಬಳಲುತ್ತಿದ್ದರು. ವಯೋವೃದ್ಧ ಸಹೋದರಿಗೆ ಅವರನ್ನು ನೋಡಿಕೊಳ್ಳುವ…

Read More

ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಬಜಪೆ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕಿನ್ನಿಪದವಿನ ಲೈಕೋರಿಸ್ ಟೌನ್ ಫ್ಲಾಟ್‌ನಲ್ಲಿ ಆಯೋಜಿಸಲಾದ ಬೃಹತ್ ರಕ್ತದಾನ ಶಿಬಿರವು ಅತ್ಯಂತ ಯಶಸ್ವಿಯಾಗಿ ನೆರವೇರಿತು. ಶಿಬಿರದಲ್ಲಿ ವಿವಿಧ ಸಮುದಾಯಗಳ ಜನರು ಸ್ವಯಂಪ್ರೇರಿತರಾಗಿ ಭಾಗವಹಿಸಿ ಒಟ್ಟು 153 ಯುನಿಟ್ ರಕ್ತದಾನ ಮಾಡುವ ಮೂಲಕ ಮಾನವೀಯ ಸೇವೆಯ ಮಹತ್ವವನ್ನು ಸಾರಿದರು. ಜಾತಿ, ಧರ್ಮ ಹಾಗೂ ರಾಜಕೀಯ ಭೇದಗಳನ್ನು ಮೀರಿ ಸಮಾಜಮುಖಿ ಕಾರ್ಯಕ್ಕೆ ಕೈಜೋಡಿಸಿದ ರಕ್ತದಾನಿಗಳ ಸೇವಾಭಾವನೆಗೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲು ಎಸ್‌ಡಿಪಿಐ ಬಜಪೆ ಸಮಿತಿಯ ಪದಾಧಿಕಾರಿಗಳು, ಕಾರ್ಯಕರ್ತರು, ಯುವಕರು ಹಾಗೂ ಸ್ವಯಂಸೇವಕರು ಶ್ರಮವಹಿಸಿದ್ದು, ಶಿಬಿರದ ಯಶಸ್ಸಿಗೆ ಸಹಕರಿಸಿದ ವೈದ್ಯಕೀಯ ಸಿಬ್ಬಂದಿ ಮತ್ತು ಎಲ್ಲ ಸಹಯೋಗಿಗಳಿಗೂ ಸಮಿತಿಯು ಕೃತಜ್ಞತೆ ಸಲ್ಲಿಸಿದೆ. ಈ ಸಂದರ್ಭದಲ್ಲಿ ಮಾತನಾಡಿದ ಎಸ್‌ಡಿಪಿಐ ಮುಖಂಡರು, “ರಕ್ತದಾನವು ಜೀವದಾನಕ್ಕೆ ಸಮಾನವಾದ ಮಹತ್ತರ ಸೇವೆಯಾಗಿದ್ದು, ಸಮಾಜದಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಇಂತಹ ಕಾರ್ಯಕ್ರಮಗಳನ್ನು ಮುಂದೆಯೂ ನಿರಂತರವಾಗಿ ಆಯೋಜಿಸಲಾಗುವುದು” ಎಂದು…

Read More