Author: Tulunada Surya

ಉಡುಪಿ, ಏಪ್ರಿಲ್ 25: ಕರ್ನಾಟಕ ಪರವಾನಗಿ ಭೂಮಾಪಕರ ಅನಿರ್ಧಿಷ್ಟಾವಧಿ ಮುಷ್ಕರದಿಂದ ಸಾರ್ವಜನಿಕ ಸೇವೆಗಳು ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದ್ದು, ಜನಸಾಮಾನ್ಯರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ತುಳುನಾಡ ರಕ್ಷಣಾ ವೇದಿಕೆ ಉಡುಪಿ ನಿಯೋಗ ಜಿಲ್ಲಾಧಿಕಾರಿಗಳನ್ನು ಭೇಟಿ ನೀಡಿ ಆಕ್ರೋಶ ವ್ಯಕ್ತಪಡಿಸಿದೆ.ಕಳೆದ ಮಾರ್ಚ್ 1ರಿಂದ ಆರಂಭವಾದ ಈ ಮುಷ್ಕರದಲ್ಲಿ ಭೂಮಾಪಕರು ತಮ್ಮ ಬೇಡಿಕೆಗಳಾದ ವಿಶೇಷ ನೇಮಕಾತಿ ಅಡಿಯಲ್ಲಿ ಶಾಶ್ವತಗೊಳಿಸುವುದು ಅಥವಾ ಸಮಾನ ವೇತನ ನೀಡುವಂತೆ ಆಗ್ರಹಿಸಿ ಹೋರಾಟ ನಡೆಸುತ್ತಿದ್ದಾರೆ. ಆದರೆ, ಇದರ ಪರಿಣಾಮವಾಗಿ ಜನಸಾಮಾನ್ಯರ ದೈನಂದಿನ ಜೀವನಕ್ಕೆ ಅಗತ್ಯವಾದ ಅನೇಕ ಸೇವೆಗಳು ವಿಳಂಬಗೊಳ್ಳುತ್ತಿವೆ.ಜಿಲ್ಲೆಯಲ್ಲಿ ಈ ತಿಂಗಳಲ್ಲಿ ಮಾತ್ರವೇ ಸುಮಾರು 15,000 ರಿಂದ 16,000 ಅರ್ಜಿಗಳು ಬಾಕಿ ಉಳಿದಿದ್ದು, ರಾಜ್ಯ ಮಟ್ಟದಲ್ಲಿ ಈ ಸಂಖ್ಯೆ ಸುಮಾರು 6 ಲಕ್ಷಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ. ಭೂಮಿ ದಾಖಲೆ, ಹೆಸರು ಬದಲಾವಣೆ, ಹಕ್ಕುಪತ್ರ ವಿತರಣೆ ಸೇರಿದಂತೆ ಅನೇಕ ಪ್ರಮುಖ ಸೇವೆಗಳು ತಡವಾಗುತ್ತಿದ್ದು, ಜನರು ಹಲವು ಬಾರಿ ಕಚೇರಿಗಳಿಗೆ ಭೇಟಿ ನೀಡಬೇಕಾದ ಅನಿವಾರ್ಯತೆ ಎದುರಿಸುತ್ತಿದ್ದಾರೆ.ಸಿಬ್ಬಂದಿ ಕೊರತೆ ಮತ್ತು ಆಡಳಿತಾತ್ಮಕ ಅಸಮರ್ಪಕತೆಯಿಂದಾಗಿ ಕಚೇರಿಗಳಲ್ಲಿ…

Read More

ನವದೆಹಲಿ : ದೇಶದ ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸುವಂತಹ ಮಹತ್ವದ ಬೆಳವಣಿಗೆ ಸಂಭವಿಸಿದೆ. Aam Aadmi Party (ಎಎಪಿ)ಗೆ ಭಾರೀ ಹಿನ್ನಡೆಯಾಗುವ ರೀತಿಯಲ್ಲಿ, ಪಕ್ಷದ ರಾಜ್ಯಸಭಾ ಸದಸ್ಯರಾದ Raghav Chadha ಮತ್ತು Sandeep Pathak ಸೇರಿದಂತೆ ಒಟ್ಟು ಏಳು ಮಂದಿ ಸದಸ್ಯರು Bharatiya Janata Party (ಬಿಜೆಪಿ) ಸೇರ್ಪಡೆಯಾಗುತ್ತಿರುವುದಾಗಿ ಶುಕ್ರವಾರ ಘೋಷಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ Raghav Chadha, ಎಎಪಿಯ 10 ಮಂದಿ ರಾಜ್ಯಸಭಾ ಸದಸ್ಯರಲ್ಲಿ ಏಳು ಮಂದಿ ಬಿಜೆಪಿ ಸೇರಲು ನಿರ್ಧರಿಸಿರುವುದಾಗಿ ತಿಳಿಸಿದರು. ಈ ಸಂಬಂಧ ರಾಜ್ಯಸಭೆಯ ಸಭಾಪತಿ C. P. Radhakrishnan ಅವರಿಗೆ ಅಧಿಕೃತ ಪತ್ರ ಸಲ್ಲಿಸಲಾಗಿದ್ದು, ಅಗತ್ಯವಿರುವ ಎಲ್ಲಾ ಪ್ರಕ್ರಿಯೆಗಳು ಆರಂಭಗೊಂಡಿವೆ ಎಂದು ಹೇಳಿದರು. ಪಕ್ಷದ ಮೂರನೇ ಎರಡರಷ್ಟು ಸದಸ್ಯರು ಬಿಜೆಪಿಯೊಂದಿಗೆ ವಿಲೀನಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಂವಿಧಾನಾತ್ಮಕವಾಗಿ ಅಗತ್ಯವಿರುವ ದಾಖಲೆಗಳನ್ನು ಸಲ್ಲಿಸಲಾಗುತ್ತಿದೆ ಎಂದು ಅವರು ಸ್ಪಷ್ಟಪಡಿಸಿದರು. ಇದೇ ವೇಳೆ Harbhajan Singh, Rajendra Gupta, Vikram Sahney, Swati Maliwal ಹಾಗೂ Ashok Mittal ಕೂಡ ಬಿಜೆಪಿ ಸೇರ್ಪಡೆಯಾಗುತ್ತಿರುವುದಾಗಿ ತಿಳಿಸಿದರು.…

Read More

ದಕ್ಷಿಣ ವಲಯದ ಕಪಿತಾನಿಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಯಾದ ಅಖಿಲೇಶ್ ವಿಶೇಷ ಸಾಧನೆಗೈದು ಗಮನ ಸೆಳೆದಿದ್ದಾನೆ. ವಿಶೇಷ ಅಗತ್ಯವುಳ್ಳ ವಿದ್ಯಾರ್ಥಿಯಾಗಿರುವ ಅಖಿಲೇಶ್, ಇತ್ತೀಚೆಗೆ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ರಲ್ಲಿ 550 ಅಂಕಗಳನ್ನು ಪಡೆದು 58 ಶೇಕಡಾ ಫಲಿತಾಂಶ ದಾಖಲಿಸಿದ್ದಾನೆ. ಅಖಿಲೇಶ್ ಅವರ ತಂದೆ ಉದಯ್ ಕುಮಾರ್ ಫೋಟೋಗ್ರಾಫರ್ ಆಗಿದ್ದು, ತಾಯಿ ಕುಂಪಲಾ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ತಮ್ಮ ಮಗನ ಸಾಧನೆಗೆ ಪೋಷಕರು ಸಂತೋಷ ವ್ಯಕ್ತಪಡಿಸಿದ್ದಾರೆ. ಸಾಮಾನ್ಯ ಮಕ್ಕಳಿಗಿಂತ ನಾನು ಕಡಿಮೆ ಇಲ್ಲ ಎಂಬ ಮನೋಭಾವದೊಂದಿಗೆ ಅಖಿಲೇಶ್ ಈ ಸಾಧನೆ ಮಾಡಿದ್ದು, ಇತರ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದೆ. ಭವಿಷ್ಯದಲ್ಲಿ ಜಿಲ್ಲಾಧಿಕಾರಿಯಾಗಬೇಕು ಎಂಬುದು ಈ ವಿದ್ಯಾರ್ಥಿಯ ಕನಸಾಗಿದೆ. ಈ ಹಿನ್ನೆಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಅಖಿಲೇಶ್ ಅವರನ್ನು ಸನ್ಮಾನಿಸಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಚ್.ಆರ್. ಈಶ್ವರ್, ಬಿ.ಆರ್.ಸಿ. ಅಧಿಕಾರಿ ಸುಷ್ಮಾ ಕಿಣಿ ಹಾಗೂ ಕಚೇರಿಯ ಪತ್ರಾಂಕಿತ ವ್ಯವಸ್ಥಾಪಕರಾದ ಶ್ರೀಮತಿ ಶಾರಿಕಾ ಅವರು ವಿದ್ಯಾರ್ಥಿಗೆ ಅಭಿನಂದನೆ ಸಲ್ಲಿಸಿ ಗೌರವಿಸಿದರು. ಈ ಸಾಧನೆ ವಿಶೇಷ ಅಗತ್ಯವುಳ್ಳ ವಿದ್ಯಾರ್ಥಿಗಳ ಸಾಮರ್ಥ್ಯವನ್ನು…

Read More

ಮಂಗಳೂರು: ಮಹಿಳಾ ಮೀಸಲಾತಿ ಮಸೂದೆ ವಿಚಾರದಲ್ಲಿ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ಅನುಸರಿಸುತ್ತಿರುವ ಇಬ್ಬಂದಿ ನೀತಿಗೆ ದಕ್ಷಿಣ ಕನ್ನಡ ಜಿಲ್ಲಾ ಜನತಾದಳ (ಜಾತ್ಯತೀತ) ತೀವ್ರ ಖಂಡನೆ ವ್ಯಕ್ತಪಡಿಸಿದೆ. ಲೋಕಸಭೆಯಲ್ಲಿ ಇತ್ತೀಚೆಗೆ ನಡೆದ ಬೆಳವಣಿಗೆಗಳು ಪ್ರಜಾಪ್ರಭುತ್ವದ ಮೂಲಭೂತ ಆಶಯಗಳಿಗೆ ವಿರುದ್ಧವಾಗಿವೆ ಎಂದು ಆರೋಪಿಸಿದ ಪಕ್ಷದ ಮುಖಂಡರು, ಮಹಿಳೆಯರಿಗೆ ನ್ಯಾಯ ಒದಗಿಸುವಂತಹ ಮಹತ್ವದ ವಿಷಯದಲ್ಲಿ ರಾಜಕೀಯ ಮಾಡುವುದನ್ನು ತೀವ್ರವಾಗಿ ವಿರೋಧಿಸಿದರು. ಕೇಂದ್ರದ ಎನ್‌ಡಿಎ ಸರ್ಕಾರ ಮಹಿಳಾ ಮೀಸಲಾತಿಯನ್ನು ಕೇವಲ ಘೋಷಣೆಯಾಗಿ ಉಳಿಸದೇ ಕಾನೂನುಬದ್ಧಗೊಳಿಸಲು ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದೆ. ಆದರೆ, ಅಧಿಕಾರದಲ್ಲಿದ್ದಾಗ ಈ ವಿಚಾರವನ್ನು ಕಡೆಗಣಿಸಿದ ಕಾಂಗ್ರೆಸ್ ಈಗ ಮಸೂದೆ ಜಾರಿಗೆ ಬರುತ್ತಿರುವ ಹಂತದಲ್ಲಿ ಅಡ್ಡಿಪಡಿಸುತ್ತಿರುವುದು ಮಹಿಳಾ ವಿರೋಧಿ ಧೋರಣೆಯಾಗಿದೆ ಎಂದು ಟೀಕಿಸಿದರು. ಹಿಂದಿನ ಪ್ರಧಾನಿಯಾದ ಶ್ರೀ ಎಚ್.ಡಿ. ದೇವೇಗೌಡ ಅವರು ತಮ್ಮ ಅಧಿಕಾರಾವಧಿಯಲ್ಲಿ 33% ಮಹಿಳಾ ಮೀಸಲಾತಿ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಿದ್ದನ್ನು ಸ್ಮರಿಸಿದ ಅವರು, ಅಂದಿನ ಕಾಂಗ್ರೆಸ್ ಬೆಂಬಲಿಸದಿರುವುದು ಚರಿತ್ರೆಯಲ್ಲಿ ದಾಖಲಾಗಿದೆ ಎಂದರು. ಕರ್ನಾಟಕದಲ್ಲಿ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಿದ ಕೀರ್ತಿಯೂ…

Read More

ಉಡುಪಿ, ಏಪ್ರಿಲ್ 24:ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಗ್ರಾಮ ಸಹಾಯಕನೊಬ್ಬರು ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿರುವ ಘಟನೆ ಸಾರ್ವಜನಿಕರಲ್ಲಿ ಆತಂಕ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ಮೃತರನ್ನು ಸದಾನಂದ ಎಂದು ಗುರುತಿಸಲಾಗಿದೆ. ಮಾಹಿತಿಯ ಪ್ರಕಾರ, ಮಾವಿನ ಹಣ್ಣು ತೆಗೆಯಲು ಮರಕ್ಕೆ ಹತ್ತಿದ ವೇಳೆ ಸಮೀಪದಲ್ಲಿದ್ದ ವಿದ್ಯುತ್ ತಂತಿಗೆ ಸ್ಪರ್ಶವಾದ ಪರಿಣಾಮ ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಸಾರ್ವಜನಿಕ ಸ್ಥಳದಲ್ಲೇ ಈ ರೀತಿಯ ಅಪಾಯಕಾರಿ ಪರಿಸ್ಥಿತಿ ಉಂಟಾಗಿರುವುದು ಭದ್ರತಾ ಕ್ರಮಗಳ ಗಂಭೀರ ಕೊರತೆಯನ್ನು ಬೆಳಕಿಗೆ ತಂದಿದೆ. ಈ ಘಟನೆಗೆ ಸಂಬಂಧಿಸಿ ತುಳುನಾಡ ರಕ್ಷಣಾ ವೇದಿಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆಗಳ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ ಎಂದು ಆರೋಪಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮೂಲಭೂತ ಭದ್ರತಾ ವ್ಯವಸ್ಥೆಗಳನ್ನು ಖಚಿತಪಡಿಸದೇ ಇರುವುದರಿಂದ ಇಂತಹ ಘಟನೆಗಳು ಮರುಕಳಿಸುತ್ತಿವೆ ಎಂದು ಸಂಘಟನೆ ಅಭಿಪ್ರಾಯಪಟ್ಟಿದೆ. ಈ ಹಿನ್ನೆಲೆಯಲ್ಲಿ ವೇದಿಕೆಯ ಪದಾಧಿಕಾರಿಗಳು ಇಂದು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ, ಘಟನೆ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥ ಅಧಿಕಾರಿಗಳ…

Read More

ಉಡುಪಿ: ಜಿಲ್ಲೆಯ ವಿದ್ಯಾರ್ಥಿಗಳಿಗೆ ಮಹತ್ವದ ಘಟ್ಟವಾದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಏಪ್ರಿಲ್ 23 ಮತ್ತು 24 ರಂದು ನಡೆಯಲಿದ್ದು, ಅದನ್ನು ವಿದ್ಯಾರ್ಥಿ ಸ್ನೇಹಿಯಾಗಿ, ಸುವ್ಯವಸ್ಥಿತವಾಗಿ ನಡೆಸಲು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಿಇಟಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ–2ರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಉಡುಪಿ ಜಿಲ್ಲೆಯ ಉಡುಪಿ, ಕುಂದಾಪುರ ಮತ್ತು ಕಾರ್ಕಳ ತಾಲೂಕುಗಳಲ್ಲಿ ಒಟ್ಟು 23 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದ್ದು, ಈ ಬಾರಿ 8,746 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ತಿಳಿಸಿದರು. ಉಡುಪಿಯಲ್ಲಿ 11, ಕಾರ್ಕಳದಲ್ಲಿ 5 ಮತ್ತು ಕುಂದಾಪುರದಲ್ಲಿ 7 ಕೇಂದ್ರಗಳನ್ನು ಸಿದ್ಧಪಡಿಸಲಾಗಿದೆ. ವಿದ್ಯಾರ್ಥಿಗಳು ಪರೀಕ್ಷೆ ಆರಂಭವಾಗುವ ಕನಿಷ್ಠ ಎರಡೂವರೆ ಗಂಟೆ ಮೊದಲು ಪರೀಕ್ಷಾ ಕೇಂದ್ರಕ್ಕೆ ಆಗಮಿಸಬೇಕು. ಪರಿಶೋಧನಾ ಪ್ರಕ್ರಿಯೆಯನ್ನು ಗೊಂದಲವಿಲ್ಲದೆ ಸುಗಮವಾಗಿ ನಡೆಸಿ, ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೊಠಡಿಗಳಿಗೆ ಪ್ರವೇಶಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಪ್ರತಿ ಪರೀಕ್ಷಾ ಕೊಠಡಿಯಲ್ಲಿ ಗಡಿಯಾರ ವ್ಯವಸ್ಥೆ,…

Read More

ಮಂಗಳೂರು: ಕರಾವಳಿ ಸಿನಿ ಪ್ರೇಕ್ಷಕರಿಗೆ ಮತ್ತೊಂದು ಹೊಸ ಮನರಂಜನಾ ಪ್ಯಾಕೇಜ್ ಸಿದ್ಧವಾಗಿದೆ. ಜಯಂತಿ ಪ್ರೊಡಕ್ಷನ್ ಲಾಂಛನದಲ್ಲಿ, ಡಿ.ಎಸ್ ಎಂಟರ್ಟೈನೆಂಟ್ಸ್ ಹಾಗೂ ಅಪ್ಸರಾ ಎಂಟರ್ಟೈನೆಂಟ್ಸ್ ಸಹಭಾಗಿತ್ವದಲ್ಲಿ ತಯಾರಾದ ತುಳು ಚಲನಚಿತ್ರ “ದೇವ್ ದಾಸ್ ನ ಲೀಲಾ” ಇದೇ ಏಪ್ರಿಲ್ 24ರಂದು ಕರಾವಳಿಯಾದ್ಯಂತ ತೆರೆಗೆ ಬರಲು ಸಜ್ಜಾಗಿದೆ. ನಗರದ ಪ್ರೆಸ್ ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಿರ್ದೇಶಕ ತೇಜೇಶ್ ಪೂಜಾರಿ, ತಮ್ಮ ಹಿಂದಿನ ಯಶಸ್ವಿ ತುಳು ಚಿತ್ರ “ಯಶಸ್ವಿ ತುಡರ್” ನಂತರ ಮತ್ತೊಂದು ವಿಭಿನ್ನ ಕಥಾಹಂದರದೊಂದಿಗೆ ಈ ಚಿತ್ರವನ್ನು ಪ್ರೇಕ್ಷಕರ ಮುಂದಿಡುತ್ತಿರುವುದಾಗಿ ತಿಳಿಸಿದರು. ಈಗಾಗಲೇ ಚಿತ್ರದ ಟೀಸರ್, ಹಾಡುಗಳು ಮತ್ತು ಟ್ರೇಲರ್ ಜಯಂತಿ ಪ್ರೊಡಕ್ಷನ್ ಯೂಟ್ಯೂಬ್ ಚಾನಲ್‌ನಲ್ಲಿ ಬಿಡುಗಡೆಯಾಗಿ ಉತ್ತಮ ಪ್ರತಿಕ್ರಿಯೆ ಪಡೆದಿವೆ ಎಂದರು. ಚಿತ್ರದಲ್ಲಿ ಎಲ್ಟನ್ ಜೆಫ್ ನಾಯಕನಾಗಿ, ಅದ್ವಿತಿ ಶೆಟ್ಟಿ ನಾಯಕಿಯಾಗಿ ಅಭಿನಯಿಸಿದ್ದು, ಹಾಸ್ಯ ಮತ್ತು ಮನರಂಜನೆಗೆ ಹೆಚ್ಚಿನ ಒತ್ತು ನೀಡಲಾಗಿದೆ. ಕುಟುಂಬ ಸಮೇತರಾಗಿ ವೀಕ್ಷಿಸಬಹುದಾದ ಸಂಪೂರ್ಣ ಮನರಂಜನಾ ಚಿತ್ರವಾಗಿರಲಿದೆ ಎಂಬ ವಿಶ್ವಾಸವನ್ನು ನಿರ್ದೇಶಕರು ವ್ಯಕ್ತಪಡಿಸಿದರು. ಸುಮಾರು 35 ದಿನಗಳ ಕಾಲ…

Read More

ಮಂಗಳೂರು :ಪ್ರಾರ್ಥನಾ ಕ್ರಿಯೇಷನ್ಸ್ ಮಂಗಳೂರು ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಬಹುಭಾಷಾ ಚಿತ್ರ “ಕೊರಗ್ಲಾ ತನಿಯಾ” ಹಾಗೂ ತುಳು ಚಲನಚಿತ್ರ “ಕನ” ಚಿತ್ರದ ಮುಹೂರ್ತ ಸಮಾರಂಭವು ಏಪ್ರಿಲ್ 23ರಂದು ಗುರುವಾರ ಬೆಳಿಗ್ಗೆ 9 ಗಂಟೆಗೆ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದಲ್ಲಿ ನಡೆಯಲಿದೆ ಎಂದು ನಿರ್ದೇಶಕ ಆರ್. ಧನರಾಜ್ ತಿಳಿಸಿದ್ದಾರೆ. ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ದೀಪ ಪ್ರಜ್ವಲನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದು ಹೇಳಿದರು. “ಕೊರಗ್ಲಾ ತನಿಯಾ” ಸಿನಿಮಾಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆರಂಭ ಫಲಕ ತೋರಿಸಲಿದ್ದು, ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಕ್ಯಾಮೆರಾ ಚಾಲನೆಗೈಯಲಿದ್ದಾರೆ. ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ ವೇದವ್ಯಾಸ ಕಾಮತ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಇನ್ನೊಂದೆಡೆ “ಕನ” ತುಳು ಸಿನಿಮಾಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಆರಂಭ ಫಲಕ ತೋರಿಸಲಿದ್ದು, ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಹಾಗೂ…

Read More

ಮಂಗಳೂರು, ಮೇ 28–29: ವಿಶ್ವವಿಖ್ಯಾತ ಆದ್ಯತ್ಮಿಕ ನಾಯಕಿ ಮಾತಾ ಅಮೃತಾನಂದಮಯಿ ಅಮ್ಮ ಮಂಗಳೂರಿಗೆ ಆಗಮಿಸುವ ಹಿನ್ನೆಲೆಯಲ್ಲಿ, ನಗರದ ಬೋಳೂರಿನಲ್ಲಿರುವ ಮಾತಾ ಅಮೃತಾನಂದಮಯಿ ಮಠದಲ್ಲಿ ಭಾನುವಾರ ಪೂರ್ವಭಾವಿ ಪ್ರಾರ್ಥನಾ ಸಭೆ ಭಕ್ತಿಭಾವದಿಂದ ಜರುಗಿತು. ಕಾರ್ಯಕ್ರಮಕ್ಕೆ ಪೂರ್ವಾಹ್ನ ಶ್ರೀ ಬ್ರಹ್ಮಸ್ಥಾನಂ ಕ್ಷೇತ್ರದಲ್ಲಿ ಶಿವಶಕ್ತಿ ಹೋಮದೊಂದಿಗೆ ಚಾಲನೆ ನೀಡಲಾಯಿತು. ಸ್ವಾಮಿನಿ ಮಂಗಳಾಮೃತ ಪ್ರಾಣ ಅವರ ಸಾನ್ನಿಧ್ಯದಲ್ಲಿ ಬ್ರಹ್ಮಚಾರಿ ರತೀಶ್ ಹೋಮ ನೆರವೇರಿಸಿದರು. ಅರ್ಚಕ ಗೋವಿಂದ ಸಹಕರಿಸಿದರು. ಬಳಿಕ ನಡೆದ “ಗುರುವಂದನ” ಕಾರ್ಯಕ್ರಮದಲ್ಲಿ ಸೇವಾ ಸಮಿತಿಯ ಅಧ್ಯಕ್ಷ ಸುರೇಶ್ ಅಮಿನ್ ದಂಪತಿಗಳು ಪಾದಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಸ್ವಾಮಿನಿ ಮಂಗಳಾಮೃತ ಪ್ರಾಣ, ಕಳೆದ ಏಳು ವರ್ಷಗಳಿಂದ ಅಮ್ಮನವರ ಆಗಮನಕ್ಕಾಗಿ ಭಕ್ತರು ಮತ್ತು ಸ್ವಯಂಸೇವಕರು ಅಪಾರ ಭಕ್ತಿಭಾವದಿಂದ ಕಾಯುತ್ತಿರುವುದಾಗಿ ತಿಳಿಸಿದರು. “ಅಮ್ಮನವರ ದರ್ಶನವು ಜೀವನದಲ್ಲಿ ನವಚೈತನ್ಯ ತುಂಬುವ ಅನುಭವ. ಮಂಗಳೂರಿನ ಮೇಲಿನ ವಿಶೇಷ ಒಲವಿನಿಂದ ಈ ಬಾರಿ ಇಲ್ಲಿ ದರ್ಶನದ ಸೌಭಾಗ್ಯ ದೊರೆತಿದೆ” ಎಂದರು. ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲು ಸರ್ವರ ಸಹಕಾರ ಕೋರಿದರು. ವಿಶೇಷ “ಉದಯಾಸ್ತಮಾನ”…

Read More

ತ್ರಿಶೂರ್: ಕೇರಳದ ತ್ರಿಶೂರ್ ಪೂರಂ ಹಬ್ಬಕ್ಕೆ ಭರ್ಜರಿ ಸಿದ್ಧತೆ ನಡೆಸುತ್ತಿದ್ದಾಗಲೇ ದೊಡ್ಡ ದುರಂತ ಸಂಭವಿಸಿದ್ದು, ತಿರುವಂಬಾಡಿ ದೇವಸ್ಥಾನಕ್ಕೆ ಸಂಬಂಧಿಸಿದ ಪಟಾಕಿ ಕಾರ್ಖಾನೆಯಲ್ಲಿ ಪ್ರಬಲವಾದ ಸ್ಫೋಟ ಸಂಭವಿಸಿದ್ದು, 20 ಕ್ಕೂ ಹೆಚ್ಚು ಕಾರ್ಮಿಕರು ಮೃತಪಟ್ಟಿದ್ದಾರೆ ಮತ್ತು ಹಲವಾರಿಗೆ ಗಂಭೀರ ಸುಟ್ಟ ಗಾಯಗಳಾಗಿವೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾದ್ಯತೆ ಇದೆ ಎಂದು ಮೂಲಗಳಿಂದ ತಿಳಿದು ಬಂದಿದೆ ಅಧಿಕಾರಿಗಳ ಪ್ರಕಾರ, ಸ್ಫೋಟ ಸಂಭವಿಸಿದಾಗ ಸುಮಾರು 70 ಕಾರ್ಮಿಕರು ಕಾರ್ಖಾನೆಯಲ್ಲಿದ್ದರು ಮತ್ತು ಅವರಲ್ಲಿ ಹೆಚ್ಚಿನವರು ಕುಂದನೂರಿನವರು ಎನ್ನಲಾಗಿದೆ. ಈ ಸ್ಫೋಟ ಎಷ್ಟು ಪ್ರಬಲವಾಗಿತ್ತೆಂದರೆ, ಹತ್ತಿರದ ಅನೇಕ ನಿವಾಸಿಗಳು ಆರಂಭದಲ್ಲಿ ಇದನ್ನು ಭೂಕಂಪ ಎಂದು ತಪ್ಪಾಗಿ ಭಾವಿಸಿದ್ದರು. ಆದರೆ ಆ ಪ್ರದೇಶದಲ್ಲಿ ದಟ್ಟವಾದ ಹೊಗೆ ಆವರಿಸಿದ ನಂತರ ಇದು ಸ್ಫೋಟ ಎಂದು ತಿಳಿದು ಬಂದಿದೆ. ಕೇರಳದ ತ್ರಿಶೂರ್ ಜಿಲ್ಲೆಯ ಮುಂಡತ್ತಿಕ್ಕೋಡ್‌ನಲ್ಲಿ ನಡೆದ ಭೀಕರ ಪಟಾಕಿ ಸ್ಫೋಟ ಪ್ರಕರಣದ ನಂತರ, ಇದೇ ತಿಂಗಳ 24ರಂದು ನಡೆಯಲಿರುವ ಪ್ರಸಿದ್ಧ ತ್ರಿಶೂರ್ ಪೂರಂ ಉತ್ಸವದ ಪಟಾಕಿ ಪ್ರದರ್ಶನ ನಡೆಸುವ ಬಗ್ಗೆ ಅಂತಿಮ ನಿರ್ಧಾರವನ್ನು…

Read More