- ಹೊಸ ಸದಸ್ಯರ ಸೇರ್ಪಡೆಯೊಂದಿಗೆ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕಕ್ಕೆ ಮತ್ತಷ್ಟು ಬಲ
- ತುಳುನಾಡ ರಕ್ಷಣಾ ವೇದಿಕೆ ಹಲವಾರು ಗಣ್ಯರು ಸೇರ್ಪಡೆ, ಮಹಿಳಾ ಜಿಲ್ಲಾದ್ಯಕ್ಷೆಯಾಗಿ ನಾಗಲಕ್ಷ್ಮಿ ಸುಬ್ರಹ್ಮಣ್ಯ ನಗರ, ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಶಂಕರ ಉಡುಪಿ, ಹಾಗೂ ಸಂಘಟನಾ ಸಹ ಕಾರ್ಯದರ್ಶಿಯಾಗಿ ಕೃಷ್ಣ ಪೂಜಾರಿ ಮಾರ್ಪಳ್ಳಿ ಆಯ್ಕೆ
- ಶಿವಮೊಗ್ಗದಲ್ಲಿ ಪೊಲೀಸ್ ಫೈರಿಂಗ್ : ಪ್ರಮುಖ ಆರೋಪಿ ಮಧು ಕಾಲಿಗೆ ಗುಂಡು
- ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಾಧನೆಗೆ ಅಂತರರಾಷ್ಟ್ರೀಯ ವಿಮಾ ಕ್ಷೇತ್ರದ ಪ್ರಶಸ್ತಿ
- ಮಜೂರು ಮದ್ರಸದಲ್ಲಿ ಉನ್ನತ ತರಗತಿಗೆ ಚಾಲನೆ /ಅಧ್ಯಕ್ಷ ಡಾ. ಫಾರೂಕ್ ಚಂದ್ರನಗರ
- ಪರಿಹಾರ ಧನ ವಿಳಂಬಕ್ಕೆ ಆಕ್ರೋಶ: ಬಿಟಿಡಿಎ ಕಚೇರಿಯಲ್ಲಿ ಸಿಬ್ಬಂದಿಗೆ ಚಪ್ಪಲಿಯಿಂದ ಹಲ್ಲೆ
- ತುಳು ಅಭಿವೃದ್ಧಿ ನಿಗಮ ಸ್ಥಾಪನೆ ಹಾಗೂ ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಮುಖ್ಯಮಂತ್ರಿ ಅವರಿಗೆ ಮುನಿಯಾಲ್ ಉದಯ ಕುಮಾರ್ ಶೆಟ್ಟಿ ಮನವಿ
- ಹೆಬ್ರಿ ತಾಲೂಕಿನ ರಸ್ತೆ ದುಸ್ಥಿತಿಗೆ ಜೆಡಿಎಸ್ ಆಕ್ರೋಶ – ಅಧಿಕಾರಿಗಳಿಗೆ ತರಾಟೆ, ಶೀಘ್ರ ದುರಸ್ತಿಗೆ ಭರವಸೆ
Author: Tulunada Surya
ಉಡುಪಿ, ಜೂನ್ 14: ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ಸಂಘಟನಾ ಬಲವರ್ಧನೆ ಹಾಗೂ ಮುಂದಿನ ಕಾರ್ಯಚಟುವಟಿಕೆಗಳ ರೂಪುರೇಷೆಗಳನ್ನು ಸಿದ್ಧಪಡಿಸುವ ಉದ್ದೇಶದಿಂದ ವಿಶೇಷ ಸಭೆಯು ದಿನಾಂಕ 14-06-2026ರಂದು ಉಡುಪಿ ಸಿಟಿ ಬಸ್ ನಿಲ್ದಾಣದ ಸಮೀಪದ ಅಕ್ಷಯ ಟವರ್ಸ್ನಲ್ಲಿ ಜಿಲ್ಲಾ ಅಧ್ಯಕ್ಷ ಫ್ರಾಂಕಿ ಡಿಸೋಜಾ ಕೊಳಲಗಿರಿ ಅವರ ಅಧ್ಯಕ್ಷತೆಯಲ್ಲಿ ಹೊಸ ಸದಸ್ಯರ ಸೇರ್ಪಡೆ ನಡೆಯಿತು. ಈ ಸಂದರ್ಭದಲ್ಲಿ ಸಂಘಟನೆಗೆ ಹೊಸದಾಗಿ ಸೇರ್ಪಡೆಗೊಂಡ ಪವಿತ್ರ ಆಚಾರ್ಯ, ವನಿತಾ ಹರೀಶ್, ವೀಣಾ ಪ್ರಾಣೇಶ್, ಉಮೇಶ್ ಬೈಲೂರು, ಆಕಾಶ್ ಕೊರಂಕ್ರಪಾಡಿ, ಸತೀಶ್ ಬೈರಂಪಳ್ಳಿ, ದಿಶಾಂತ್ ಪೂಜಾರಿ ಹಾಗೂ ಮಂಜುಳಾ ಪೂಜಾರಿ ಅವರನ್ನು ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅದ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪುರವರು ಆತ್ಮೀಯವಾಗಿ ಸ್ವಾಗತಿಸಿ ಸಂಘಟನೆಗೆ ಬರಮಾಡಿ ಕೊಂಡರು ಅಧ್ಯಕ್ಷತೆ ವಹಿಸಿ ಮಾತನಾಡಿದ ಫ್ರಾಂಕಿ ಡಿಸೋಜಾ ಕೊಳಲಗಿರಿ ಅವರು, ತುಳುನಾಡಿನ ಹಕ್ಕುಗಳು, ಸಂಸ್ಕೃತಿ ಮತ್ತು ಜನಪರ ವಿಚಾರಗಳಿಗಾಗಿ ಸಂಘಟನೆ ನಿರಂತರ ಹೋರಾಟ ನಡೆಸುತ್ತಿದ್ದು, ಹೊಸ ಸದಸ್ಯರ ಸೇರ್ಪಡೆಯಿಂದ ಸಂಘಟನೆಗೆ ಮತ್ತಷ್ಟು ಶಕ್ತಿ ದೊರೆಯಲಿದೆ…
ಉಡುಪಿ, ಜೂನ್ 14: ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ನಿಷ್ಠಾವಂತ ಕಾರ್ಯಕರ್ತರಿಗೆ ಅಧಿಕಾರ ಹಸ್ತಾಂತರ ಹಾಗೂ ಸಂಘಟನಾ ಬಲವರ್ಧನೆ ಕುರಿತ ವಿಶೇಷ ಸಭೆಯು ದಿನಾಂಕ 14-06-2026 ರಂದು ಉಡುಪಿ ಸಿಟಿ ಬಸ್ ನಿಲ್ದಾಣದ ಸಮೀಪದ ಅಕ್ಷಯ ಟವರ್ಸ್ನಲ್ಲಿ ಜಿಲ್ಲಾ ಅಧ್ಯಕ್ಷ ಫ್ರಾಂಕಿ ಡಿಸೋಜಾ ಕೊಳಲಗಿರಿ ಅವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನಡೆಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕ ಅಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು ಅವರು, ತುಳುನಾಡಿನ ಅಸ್ಮಿತೆ, ಭಾಷೆ, ಸಂಸ್ಕೃತಿ ಹಾಗೂ ಹಕ್ಕುಗಳ ರಕ್ಷಣೆಗೆ ಸಂಘಟನೆಯ ಕಾರ್ಯಕರ್ತರು ನಿರಂತರವಾಗಿ ಶ್ರಮಿಸುತ್ತಿದ್ದು, ಸಂಘಟನೆಯನ್ನು ಮತ್ತಷ್ಟು ಜನಪರ ಹಾಗೂ ಬಲಿಷ್ಠವಾಗಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬ ಕಾರ್ಯಕರ್ತನ ಮೇಲಿದೆ ಎಂದು ಹೇಳಿದರು. ಯುವಜನರನ್ನು ಸಂಘಟನೆಯತ್ತ ಆಕರ್ಷಿಸಿ ತುಳುನಾಡಿನ ವಿಚಾರಗಳಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು. ಸಭೆಯಲ್ಲಿ ಸಂಘಟನೆಯ ಮುಂದಿನ ಕಾರ್ಯಯೋಜನೆ, ಸದಸ್ಯತ್ವ ಅಭಿಯಾನ, ಸಾಮಾಜಿಕ ಚಟುವಟಿಕೆಗಳು, ತುಳುನಾಡಿನ ಹಿತಾಸಕ್ತಿ ವಿಚಾರಗಳು ಹಾಗೂ ಭವಿಷ್ಯದಲ್ಲಿ ಕೈಗೊಳ್ಳಬೇಕಾದ ಹೋರಾಟಗಳು…
ಶಿವಮೊಗ್ಗ, ಜೂನ್ 14: ರೌಡಿಶೀಟರ್ ನರಸಿಂಹ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮಧುಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಶಿವಮೊಗ್ಗ ತಾಲೂಕಿನ ಹೊಳೆಬೆನವಳ್ಳಿ ಸಮೀಪದ ರಿಂಗ್ರೋಡ್ನಲ್ಲಿ ಭಾನುವಾರ ನಡೆದಿದೆ. ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಮಧುವನ್ನು ತನಿಖೆಗಾಗಿ ಸ್ಥಳ ಮಹಜರಿಗೆ ಕರೆದೊಯ್ಯುವ ವೇಳೆ ಆತ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ. ಈ ಸಂದರ್ಭದಲ್ಲಿ ಕರ್ತವ್ಯದಲ್ಲಿದ್ದ ರೌಡಿ ಕ್ರೈಂ ವಿಭಾಗದ ಸಿಬ್ಬಂದಿ ಅಂಜನಪ್ಪ ಅವರ ಮೇಲೆ ಹಲ್ಲೆ ನಡೆಸಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ. ಆರೋಪಿಯನ್ನು ನಿಯಂತ್ರಿಸಲು ಮುಂದಾದ ಕೋಲೆ ಠಾಣೆಯ ಇನ್ಸ್ಪೆಕ್ಟರ್ ಹರೀಶ್ ಪಟೇಲ್ ಮೊದಲು ಎಚ್ಚರಿಕೆ ನೀಡಿದ್ದು, ಬಳಿಕ ಗಾಳಿಯಲ್ಲಿ ಗುಂಡು ಹಾರಿಸಿ ವಾರ್ನಿಂಗ್ ಕೊಟ್ಟಿದ್ದಾರೆ. ಆದರೂ ಮಧು ತನ್ನ ವರ್ತನೆ ಮುಂದುವರಿಸಿದ ಹಿನ್ನೆಲೆಯಲ್ಲಿ ಆತ್ಮರಕ್ಷಣೆ ಹಾಗೂ ಪರಿಸ್ಥಿತಿ ನಿಯಂತ್ರಣದ ಉದ್ದೇಶದಿಂದ ಆರೋಪಿಯ ಕಾಲಿಗೆ ಗುಂಡು ಹಾರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಆರೋಪಿ ಮಧು ಹಾಗೂ ಪೊಲೀಸ್ ಸಿಬ್ಬಂದಿ ಅಂಜನಪ್ಪ ಅವರನ್ನು ತಕ್ಷಣ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ…
ಸಹಕಾರ ಕ್ಷೇತ್ರದಲ್ಲಿ ನಿರಂತರ ಸಾಧನೆ ಮಾಡುತ್ತಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು, ಥೈಲ್ಯಾಂಡ್ನ ಬ್ಯಾಂಕಾಕ್ನಲ್ಲಿ ಆಯೋಜಿಸಲಾದ ಮಣಿಪಾಲ್ ಸಿಗ್ನಾ ಹೆಲ್ತ್ ಇನ್ಶೂರೆನ್ಸ್ ಕಂಪನಿಯ “ಲಕ್ಷ್ಯ–2026” ಪ್ರತಿಷ್ಠಿತ ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ.ಈ ಸಮ್ಮೇಳನದಲ್ಲಿ ಮಣಿಪಾಲ್ ಸಿಗ್ನಾ ಹೆಲ್ತ್ ಇನ್ಶೂರೆನ್ಸ್ ಕಂಪನಿಯ ರಿಟೇಲ್ ಬಿಸಿನೆಸ್ನಲ್ಲಿ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡ ಹಾಗೂ ಆರೋಗ್ಯ ವಿಮಾ ಯೋಜನೆಯ ಗುರಿ ಮೀರಿ ಸಾಧನೆಗೈದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರಿಗೆ ಮಣಿಪಾಲ್ ಸಿಗ್ನಾ ಹೆಲ್ತ್ ಇನ್ಶೂರೆನ್ಸ್ ಕಂಪನಿ (ಲಿ.) ಇಂಡಿಯಾದ ಮುಖ್ಯಸ್ಥರಾದ ಶ್ರೀ ಶಶಾಂಕ್ ಚಾಪೇಕರ್ ಹಾಗೂ ಏಜೆನ್ಸಿ ವಿಸ್ತರಣಾ ಮುಖ್ಯಸ್ಥರಾದ ಶ್ರೀ ಪ್ರಸಾದ್ ಶೆಟ್ಟಿ ಅವರು ಪ್ರಶಸ್ತಿಯನ್ನು ನೀಡಿ ಗೌರವಿಸಿದರು.ಈ ಸಮಾರಂಭದಲ್ಲಿ ದಕ್ಷಿಣ ವಲಯ ಮುಖ್ಯಸ್ಥರಾದ ಶ್ರೀ ದವೇರ್ಶ್ ಮೊಹಮ್ಮದ್, ಸೌತ್ ಇಂಡಿಯಾ ಏಜೆನ್ಸಿ ಮುಖ್ಯಸ್ಥರಾದ ಶ್ರೀ ವಿಶಾಲ್ ಸುರಣ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿಂಗ್ ಸೇವೆಯ…
ಮಕ್ಕಳು ಶಿಕ್ಷಣದ ಕುರಿತು ತುಂಬಾ ಉತ್ಸಾಹದಿಂದ ಮುನ್ನುಗ್ಗಬೇಕು. ಶಾಲಾ ಶಿಕ್ಷಣದೊಂದಿಗೆ ಮದ್ರಸ ಶಿಕ್ಷಣವನ್ನು ಪೂರೈಸಬೇಕು. ಇದು ವಿಜಯದ ಹಾದಿಗೆ ಪೂರಕವಾಗಿದೆ. ಹತ್ತನೇ ತರಗತಿ ಕಲಿತು, ಹೋಗಿ ಮದ್ರಸ ಬಗ್ಗೆ ಸಂಬಂಧ ಮುರಿಯದೇ ಇರಲೂ ಶಿಕ್ಷಣವನ್ನು ಎಂದೆಂದಿಗೂ ನಿರಂತರ ಗೊಳಿಸುವ ನಿಟ್ಟಿನಲ್ಲಿ ನಮ್ಮ ಮದ್ರಸದಲ್ಲಿ ಹನ್ನೊಂದನೇ (+1) ತರಗತಿಯನ್ನು ಪ್ರಾರಂಭಿಸಿಸುತ್ತೇವೆ. ವಿದ್ಯಾರ್ಥಿಗಳು ಇದರ ಫಲ ಪಡೆಯುವಂತೆ ಮಲ್ಲಾರು – ಮಜೂರು ಬದ್ರಿಯಾ ಜುಮುಅ ಮಸ್ಜಿದ್ ಇದರ ಅಧ್ಯಕ್ಷರಾದ ಡಾ. ಎಂ.ಫಾರೂಕ್ ಚಂದ್ರನಗರ ರವರು ಹೇಳಿದರು. ಸದ್ರಿ ಮದ್ರಸದಲ್ಲಿ ಹನ್ನೊಂದನೇ ತರಗತಿ ಪ್ರಾರಂಭ ಗೊಂಡ ಸಂದರ್ಭದಲ್ಲಿ ಶುಭಾಶಂಸ ಭಾಷಣದಲ್ಲಿ ಹೇಳಿದರು. ಅದೇ ರೀತಿ 2025 -26 ನೇ ಸಾಲಿನ ಮದ್ರಸ ಪಬ್ಲಿಕ್ ಪರೀಕ್ಷೆಯಲ್ಲಿ ಐದು, ಏಳು, ಹತ್ತನೇ ತರಗತಿಯಲ್ಲಿ ಕಾಪು ರೇಂಜ್ ಮಟ್ಟದಲ್ಲಿ ಪ್ರಥಮ ಅಂಕ ಪಡೆದು ಮದ್ರಸಕ್ಕೆ ಕೀರ್ತಿ ತಂದ ವಿದ್ಯಾರ್ಥಿಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ಸ್ಥಳೀಯ ಖತೀಬ್ ಅಬ್ದಲ್ ರಶೀದ್ ಸಖಾಫಿ, ಮುಖ್ಯಧ್ಯಾಪಕರಾದ ಅಬೂಬಕ್ಕರ್…
ಬಾಗಲಕೋಟೆ, ಜೂನ್ 13: ಹಲವು ವರ್ಷಗಳಿಂದ ಭೂಸ್ವಾಧೀನಕ್ಕೆ ಸಂಬಂಧಿಸಿದ ಪರಿಹಾರ ಧನ ದೊರೆಯದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ರೈತನೊಬ್ಬ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ (ಬಿಟಿಡಿಎ) ಕಚೇರಿಯಲ್ಲಿ ಸಿಬ್ಬಂದಿಗೆ ಚಪ್ಪಲಿಯಿಂದ ಹಲ್ಲೆ ನಡೆಸಿದ ಘಟನೆ ಶನಿವಾರ ನಡೆದಿದೆ. ಬಾಗಲಕೋಟೆ ನಗರದ ದಡ್ಡೇನವರ ವೃತ್ತದ ಸಮೀಪ ರಸ್ತೆ ನಿರ್ಮಾಣ ಕಾಮಗಾರಿಗಾಗಿ ರೈತ ಬಸವರಾಜ ದೊಡ್ಡಮನಿ ಅವರ ಜಮೀನನ್ನು 2004ರಲ್ಲಿ ಭೂಸ್ವಾಧೀನಪಡಿಸಿಕೊಳ್ಳಲಾಗಿತ್ತು. ಆದರೆ ಭೂಮಿ ಕಳೆದುಕೊಂಡಿದ್ದರೂ ಸಮರ್ಪಕ ಪರಿಹಾರ ಧನ ಇನ್ನೂ ದೊರೆತಿಲ್ಲ ಎಂಬ ಆರೋಪದಿಂದ ಅವರು ತೀವ್ರ ಅಸಮಾಧಾನಗೊಂಡಿದ್ದರು ಎಂದು ತಿಳಿದುಬಂದಿದೆ. ಬಿಟಿಡಿಎ ಕಚೇರಿಯಲ್ಲಿ ಹಕ್ಕುಪತ್ರ ವಿತರಣಾ ಸಭೆ ನಡೆಯುತ್ತಿದ್ದ ವೇಳೆ ತಮ್ಮ ಸಮಸ್ಯೆಗೆ ಪರಿಹಾರ ಸಿಗದಿರುವುದನ್ನು ಪ್ರಶ್ನಿಸಿದ ಬಸವರಾಜ ದೊಡ್ಡಮನಿ, ಮಾತಿನ ಚಕಮಕಿಯ ಬಳಿಕ ಬಿಟಿಡಿಎ ಕೇಸ್ ವರ್ಕರ್ ಅಂಕದ ಅವರ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಘಟನೆಯಿಂದ ಕೆಲಕಾಲ ಕಚೇರಿ ಆವರಣದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದ್ದು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಅಚ್ಚರಿಗೆ ಒಳಗಾದರು. ಬಳಿಕ ಸ್ಥಳದಲ್ಲಿದ್ದವರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ…
ಕಾರ್ಕಳ: ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳು ಭಾಷೆಯ ಸಮಗ್ರ ಅಭಿವೃದ್ಧಿ, ಸಂರಕ್ಷಣೆ ಹಾಗೂ ಪ್ರಚಾರಕ್ಕಾಗಿ ರಾಜ್ಯ ಸರ್ಕಾರವು ಶೀಘ್ರವಾಗಿ ತುಳು ಅಭಿವೃದ್ಧಿ ನಿಗಮ (ಪ್ರಾಧಿಕಾರ) ಸ್ಥಾಪಿಸಬೇಕು ಹಾಗೂ ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನಲ್ಲಿ ಸುಸಜ್ಜಿತ ತುಳು ಭವನ ನಿರ್ಮಾಣಕ್ಕೆ ಅಗತ್ಯ ಅನುದಾನ ಬಿಡುಗಡೆಗೊಳಿಸಬೇಕು ಎಂದು ಸಾಮಾಜಿಕ ಮುಖಂಡ ಮುನಿಯಾಲ್ ಉದಯ ಕುಮಾರ್ ಶೆಟ್ಟಿಯವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಲಿಖಿತ ಮನವಿ ಸಲ್ಲಿಸಿದ್ದಾರೆ. ತುಳು ಭಾಷೆಯು ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಪ್ರಾಚೀನ ದ್ರಾವಿಡ ಭಾಷೆಯಾಗಿದ್ದು, ಲಕ್ಷಾಂತರ ಜನರ ಮಾತೃಭಾಷೆಯಾಗಿದೆ. ತುಳುನಾಡಿನ ಸಂಸ್ಕೃತಿ, ಪರಂಪರೆ ಹಾಗೂ ಜೀವನಶೈಲಿಯ ಅವಿಭಾಜ್ಯ ಅಂಗವಾಗಿರುವ ತುಳು ಭಾಷೆಯ ಬಳಕೆ ಜಾಗತೀಕರಣದ ಪ್ರಭಾವದಿಂದ ಕುಗ್ಗುತ್ತಿರುವ ಹಿನ್ನೆಲೆಯಲ್ಲಿ ಅದರ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಸರ್ಕಾರ ವಿಶೇಷ ಕ್ರಮ ಕೈಗೊಳ್ಳಬೇಕಾದ ಅಗತ್ಯವಿದೆ ಎಂದು ಅವರು ಮನವಿಯಲ್ಲಿ ತಿಳಿಸಿದ್ದಾರೆ. ಯುನೆಸ್ಕೋ ಸಹ ಸಂರಕ್ಷಿಸಬೇಕಾದ ಭಾಷೆಗಳ ಪಟ್ಟಿಯಲ್ಲಿ ತುಳು ಭಾಷೆಯನ್ನು ಪರಿಗಣಿಸಿರುವ ಹಿನ್ನೆಲೆಯಲ್ಲಿ, ತುಳು ಭಾಷೆಯ ಉಳಿವು ಮತ್ತು ಬೆಳವಣಿಗೆಗಾಗಿ ವಿಶೇಷ…
ಹೆಬ್ರಿ, ಜೂನ್ 13: ಹೆಬ್ರಿ ತಾಲೂಕಿನ ಪ್ರಮುಖ ರಸ್ತೆಗಳಲ್ಲಿ ಇತ್ತೀಚೆಗೆ ಕೈಗೊಳ್ಳಲಾದ ನೀರಾವರಿ ಯೋಜನೆಗಳ ಕಾಮಗಾರಿಗಳ ಹಿನ್ನೆಲೆಯಲ್ಲಿ ಹೊಸದಾಗಿ ಅಭಿವೃದ್ಧಿಪಡಿಸಿ ನವೀಕರಿಸಲಾಗಿದ್ದ ರಸ್ತೆಗಳನ್ನು ಅಗೆದು ಪೈಪ್ಲೈನ್ ಅಳವಡಿಕೆ ಸೇರಿದಂತೆ ವಿವಿಧ ಕಾಮಗಾರಿಗಳನ್ನು ನಡೆಸಲಾಗಿದೆ. ಆದರೆ ಕಾಮಗಾರಿ ಪೂರ್ಣಗೊಂಡ ಬಳಿಕ ರಸ್ತೆಗಳನ್ನು ಸಮರ್ಪಕವಾಗಿ ಮರುನಿರ್ಮಿಸದೆ ಕೇವಲ ಕಾಟಾಚಾರದ ಪ್ಯಾಚ್ ವರ್ಕ್ ಮಾಡಿರುವುದರಿಂದ ಅನೇಕ ರಸ್ತೆಗಳು ಹೊಂಡ-ಗುಂಡಿಗಳಿಂದ ಹಾಗೂ ಅಸಮರ್ಪಕವಾಗಿ ನಿರ್ಮಾಣಗೊಂಡ ದೊಡ್ಡ ಗಾತ್ರದ ಹಂಪ್ಗಳಿಂದ ಕೂಡಿದ್ದು ವಾಹನ ಸವಾರರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಮಳೆಗಾಲ ಆರಂಭಗೊಂಡಿರುವ ಹಿನ್ನೆಲೆಯಲ್ಲಿ ರಸ್ತೆಗಳಲ್ಲಿನ ಹೊಂಡಗಳು ನೀರಿನಿಂದ ತುಂಬಿ ಕಾಣಿಸದ ಸ್ಥಿತಿ ನಿರ್ಮಾಣವಾಗಿದ್ದು, ವಾಹನ ಚಾಲಕರಿಗೆ ಗೊಂದಲ ಉಂಟಾಗುವ ಜೊತೆಗೆ ಅಪಘಾತಗಳ ಸಂಭವವೂ ಹೆಚ್ಚಾಗಿದೆ. ಸಾರ್ವಜನಿಕರಿಂದ ನಿರಂತರವಾಗಿ ದೂರುಗಳು ಬಂದ ಹಿನ್ನೆಲೆಯಲ್ಲಿ ಹೆಬ್ರಿ ಜೆಡಿಎಸ್ ಅಧ್ಯಕ್ಷರಾದ ಶ್ರೀಕಾಂತ್ ಪೂಜಾರಿ ಕುಚ್ಚೂರು ಅವರು ಸಂಬಂಧಪಟ್ಟ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ರಸ್ತೆ ದುಸ್ಥಿತಿಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಾರ್ವಜನಿಕರ ತೆರಿಗೆ ಹಣದಲ್ಲಿ ನಿರ್ಮಿಸಲಾದ ರಸ್ತೆಗಳನ್ನು…
ಕೊಲ್ಲೂರು, ಜೂನ್ 12: ತಮಿಳುನಾಡು ಮುಖ್ಯಮಂತ್ರಿ ಹಾಗೂ ಖ್ಯಾತ ನಟ ವಿಜಯ್ ಅವರು ಗುರುವಾರ ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ದೇವಾಲಯಕ್ಕೆ ಆಗಮಿಸಿದ ವಿಜಯ್ ಅವರನ್ನು ದೇವಸ್ಥಾನದ ವತಿಯಿಂದ ಪೂರ್ಣಕುಂಭ ಕಲಶದೊಂದಿಗೆ ಆತ್ಮೀಯವಾಗಿ ಸ್ವಾಗತಿಸಲಾಯಿತು. ಪ್ರಧಾನ ಅರ್ಚಕ ರಾಮಚಂದ್ರ ಅಡಿಗ, ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ಹಾಗೂ ಅಧಿಕಾರಿಗಳು ಅವರನ್ನು ಬರಮಾಡಿಕೊಂಡರು. ಬಳಿಕ ವಿಜಯ್ ಅವರು ಶ್ರೀ ಮೂಕಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಸಂಕಲ್ಪ ನೆರವೇರಿಸಿದರು. ದೇವಸ್ಥಾನ ಪ್ರವೇಶಿಸುವ ಮುನ್ನ ಧ್ವಜಸ್ತಂಭಕ್ಕೆ ನಮಿಸಿ ಭಕ್ತಿ ಸಮರ್ಪಿಸಿದ ಅವರು, ಕೈಮುಗಿದು ದೇವಿಯ ಆಶೀರ್ವಾದ ಪಡೆದರು. ಪೂಜಾ ವಿಧಿವಿಧಾನಗಳಲ್ಲಿ ಭಾಗವಹಿಸಿ ದೇವಿಯ ಕೃಪೆಗೆ ಪಾತ್ರರಾದರು. ಈ ಸಂದರ್ಭದಲ್ಲಿ ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ, ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಬು ಹೆಗ್ಡೆ ಸೇರಿದಂತೆ ಹಲವರು ಉಪಸ್ಥಿತರಿದ್ದರು. ದೇವಸ್ಥಾನದ ಆಡಳಿತ ಮಂಡಳಿಯ ವತಿಯಿಂದ ವಿಜಯ್…
ಬೆಳ್ತಂಗಡಿ, ಜೂನ್ 11: ಬೆಳ್ತಂಗಡಿ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಆಸ್ಪತ್ರೆಯ ಔಷಧ ವಿಭಾಗದ ಮುಖ್ಯಸ್ಥ ಚಂದ್ರಶೇಖರ್ ಪೂಜಾರಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಸ್ಪತ್ರೆಯ ಮಹಿಳಾ ಸಿಬ್ಬಂದಿಯೊಬ್ಬರು ನೀಡಿರುವ ದೂರಿನ ಆಧಾರದಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಆಸ್ಪತ್ರೆಯ ಉಗ್ರಾಣದಲ್ಲಿ ಆರೋಪಿ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಅಲ್ಲದೆ, ಈ ವಿಷಯವನ್ನು ಯಾರಿಗಾದರೂ ತಿಳಿಸಿದರೆ ಕೆಲಸದಿಂದ ತೆಗೆದುಹಾಕುವುದಾಗಿ ಬೆದರಿಕೆ ಹಾಕಿದ್ದಾನೆ ಎಂಬ ಗಂಭೀರ ಆರೋಪವೂ ದಾಖಲಾಗಿದೆ. ದೂರಿನ ಪ್ರಕಾರ, ಹಲವು ವರ್ಷಗಳಿಂದ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವ ಚಂದ್ರಶೇಖರ್ ಪೂಜಾರಿ ವಿರುದ್ಧ ಈ ಹಿಂದೆ ಕೂಡ ವಿವಿಧ ರೀತಿಯ ಆರೋಪಗಳು ಕೇಳಿಬಂದಿದ್ದವು ಎನ್ನಲಾಗಿದೆ. ವಿಶೇಷವಾಗಿ ಮಹಿಳಾ ಸಿಬ್ಬಂದಿಗಳೊಂದಿಗೆ ಅಸಭ್ಯ ವರ್ತನೆ ನಡೆಸುತ್ತಿರುವ ಬಗ್ಗೆ ಆಸ್ಪತ್ರೆಯ ಒಳವಲಯದಲ್ಲಿ ಚರ್ಚೆಗಳು ನಡೆದಿದ್ದರೂ, ಭಯ, ಒತ್ತಡ ಹಾಗೂ ಉದ್ಯೋಗದ ಅನಿಶ್ಚಿತತೆಯ ಕಾರಣದಿಂದ ಯಾರೂ…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
