Author: Tulunada Surya

ಉಡುಪಿ, ಆ. 9: ಕಾಂಗ್ರೆಸ್ ಮುಖಂಡ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜಾ ಅವರ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಯುಪಿಸಿಎಲ್ ಗುತ್ತಿಗೆ ವ್ಯವಹಾರಕ್ಕೆ ಸಂಬಂಧಿಸಿದ ಆರ್ಥಿಕ ವೈಮನಸ್ಸೇ ಕೊಲೆಗೆ ಪ್ರಮುಖ ಕಾರಣವಾಗಿರುವ ಸಾಧ್ಯತೆ ಇದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ. ಆರೋಪಿಗಳ ಬಂಧನದ ಬಳಿಕ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಕರಣದ ತನಿಖೆಯ ವಿವರಗಳನ್ನು ಬಹಿರಂಗಪಡಿಸಿದ ಎಸ್ಪಿ, ಪ್ರಕರಣದ ಎ1 ಆರೋಪಿ ರಾಜು ಎಂಬಾತನ ಬ್ಯಾಂಕ್ ಖಾತೆಗೆ ₹2 ಲಕ್ಷಕ್ಕೂ ಅಧಿಕ ಹಣ ವರ್ಗಾವಣೆಯಾಗಿರುವುದು ತನಿಖೆಯಲ್ಲಿ ಪತ್ತೆಯಾಗಿದೆ ಎಂದು ಹೇಳಿದರು. ಕೊಲೆಗೂ ಮುನ್ನ ಹಾಗೂ ಕೊಲೆಯ ಬಳಿಕ ಹಂತ ಹಂತವಾಗಿ ಹಣ ಪಾವತಿಯಾಗಿರುವುದು ಗಮನಕ್ಕೆ ಬಂದಿದ್ದು, ಹಣದ ಮೂಲ ಹಾಗೂ ಅದನ್ನು ಪಾವತಿಸಿದವರ ಬಗ್ಗೆ ತನಿಖೆ ಮುಂದುವರಿದಿದೆ ಎಂದರು. ₹2–3 ಕೋಟಿ ಗುತ್ತಿಗೆ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜಾ ಅವರು ಗುತ್ತಿಗೆ ಕೆಲಸ ಮಾಡಿಕೊಂಡಿದ್ದು, ಸುಮಾರು ₹2ರಿಂದ ₹3 ಕೋಟಿ ಮೊತ್ತದ ಯುಪಿಸಿಎಲ್…

Read More

ಮಂಗಳೂರು, ಆ. 9: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಜನತಾದಳ (ಜಾತ್ಯತೀತ) ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಭೆಯನ್ನು ಆಗಸ್ಟ್ 9, 2026ರ ಭಾನುವಾರ ಸಂಜೆ 5 ಗಂಟೆಗೆ ಮಲ್ಲಿಕಟ್ಟೆಯ ಸುಮಾ ಸದನದಲ್ಲಿ ಆಯೋಜಿಸಲಾಗಿದೆ. ಕ್ಷೇತ್ರದಲ್ಲಿ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವುದು, ಪಕ್ಷದ ಮುಂದಿನ ಕಾರ್ಯಚಟುವಟಿಕೆಗಳು ಹಾಗೂ ಸಂಘಟನಾ ವಿಚಾರಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ. ಸಭೆಗೆ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಎಲ್ಲಾ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಕಡ್ಡಾಯವಾಗಿ ಭಾಗವಹಿಸಿ, ಸಮಯಕ್ಕೆ ಸರಿಯಾಗಿ ಹಾಜರಾಗುವಂತೆ ಕ್ಷೇತ್ರದ ಅಧ್ಯಕ್ಷರಾದ ಎನ್.ಪಿ. ಪುಷ್ಪರಾಜನ್ ಅವರು ಮನವಿ ಮಾಡಿದ್ದಾರೆ. ಸಭೆಯ ವಿವರ:📅 ದಿನಾಂಕ: 09-08-2026, ಭಾನುವಾರ⏰ ಸಮಯ: ಸಂಜೆ 5:00 ಗಂಟೆಗೆ📍 ಸ್ಥಳ: ಸುಮಾ ಸದನ, ಮಲ್ಲಿಕಟ್ಟೆ, ಮಂಗಳೂರು ಎನ್.ಪಿ. ಪುಷ್ಪರಾಜನ್ಅಧ್ಯಕ್ಷರುಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರಜನತಾದಳ (ಜಾತ್ಯತೀತ)

Read More

ಬಂಟ್ವಾಳ, ಆಗಸ್ಟ್ 08, 2026 (ತುಳುನಾಡ ಸೂರ್ಯ):ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಕಲ್ಲಡ್ಕದಲ್ಲಿ ಆಗಸ್ಟ್ 8ರಂದು ಬಂಟ್ವಾಳ ತಾಲ್ಲೂಕು ಪೊಲೀಸರು ನಡೆಸಿದ ವಾಹನ ತಪಾಸಣೆಯ ಸಂದರ್ಭದಲ್ಲಿ, ನಿಗದಿತ ಮಿತಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವಾಹನಗಳ ವಿರುದ್ಧ 8 ಪ್ರಕರಣಗಳನ್ನು ದಾಖಲಿಸಲಾಗಿದೆ. ಇದೇ ವೇಳೆ ವಾಹನಗಳ ದಾಖಲೆ ಪತ್ರಗಳ ಉಲ್ಲಂಘನೆಗೆ ಸಂಬಂಧಿಸಿದಂತೆ 5 ಪ್ರಕರಣಗಳನ್ನು ದಾಖಲಿಸಲಾಗಿದ್ದು, ಒಟ್ಟು 13 ಪ್ರಕರಣಗಳು ದಾಖಲಾಗಿವೆ. ಶಾಲಾ ಮಕ್ಕಳ ಸುರಕ್ಷತೆಯ ವಿಚಾರದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯಕ್ಕೆ ಅವಕಾಶ ನೀಡಬಾರದು. ಮಕ್ಕಳನ್ನು ಕರೆದೊಯ್ಯುವ ಶಾಲಾ ಬಸ್, ವ್ಯಾನ್ ಹಾಗೂ ಇತರ ವಾಹನಗಳು ನಿಗದಿತ ಸಾಮರ್ಥ್ಯಕ್ಕಿಂತ ಹೆಚ್ಚಿನ ಮಕ್ಕಳನ್ನು ಕರೆದೊಯ್ಯುವುದು ಅಪಾಯಕಾರಿ. ಇಂತಹ ವಾಹನಗಳಲ್ಲಿ ಅತಿಯಾದ ಸಂಖ್ಯೆಯಲ್ಲಿ ಮಕ್ಕಳನ್ನು ಕರೆದೊಯ್ಯುವುದರಿಂದ ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಹೆಚ್ಚಿನ ಅಪಾಯ ಎದುರಾಗುವ ಸಾಧ್ಯತೆ ಇದೆ. ಜನತಾದಳದಿಂದ ಆರ್‌ಟಿಒ ಅಧಿಕಾರಿಗಳಿಗೆ ಮನವಿಗೆ ಸ್ಪಂದನೆ ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳನ್ನು ಕರೆದೊಯ್ಯುವ ವಾಹನಗಳಲ್ಲಿ ನಡೆಯುತ್ತಿರುವ ನಿಯಮ ಉಲ್ಲಂಘನೆಗಳ ಕುರಿತು ಜನತಾದಳ (ಜಾತ್ಯತೀತ) ಪಕ್ಷದ…

Read More

ಉಡುಪಿ, ಆ. 8: ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ಆಗಸ್ಟ್ 16ರಂದು ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ ಆಯೋಜಿಸಲಾಗಿರುವ ‘ಆಟಿಡೊಂಜಿ ದಿನ’ ಕಾರ್ಯಕ್ರಮದ ಅಂಗವಾಗಿ ವಿವಿಧ ಕ್ಷೇತ್ರಗಳ ಗಣ್ಯರಿಗೆ ಆಮಂತ್ರಣ ಪತ್ರಿಕೆ ವಿತರಿಸಲಾಯಿತು. ತುಳುನಾಡಿನ ವಿಶಿಷ್ಟ ಸಂಸ್ಕೃತಿ, ಪರಂಪರೆ, ಆಚಾರ-ವಿಚಾರ ಹಾಗೂ ಆಟಿ ತಿಂಗಳ ಸಂಭ್ರಮವನ್ನು ಪರಿಚಯಿಸುವ ಉದ್ದೇಶದಿಂದ ಆಯೋಜಿಸಲಾಗಿರುವ ಈ ಕಾರ್ಯಕ್ರಮಕ್ಕೆ ಗಣ್ಯರನ್ನು ಆಹ್ವಾನಿಸುವ ಕಾರ್ಯವನ್ನು ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದ ಪದಾಧಿಕಾರಿಗಳ ತಂಡ ಕೈಗೊಂಡಿತು. ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾಧ್ಯಕ್ಷ ಫ್ರಾಂಕಿ ಡಿಸೋಜ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಪೂಜಾರಿ ಹಾವಂಜೆ, ಜಿಲ್ಲಾ ಉಪಾಧ್ಯಕ್ಷರಾದ ಉಮೇಶ್ ಶೆಟ್ಟಿ ಹಾವಂಜಿ ಹಾಗೂ ಮನೋಜ್ ಕೆ.ಜಿ. ರೋಡ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶಂಕರ್ ಉಡುಪಿ, ಜಿಲ್ಲಾ ಸಂಘಟನಾ ಸಹ ಕಾರ್ಯದರ್ಶಿ ಕೃಷ್ಣ ಮಾರ್ಪಳ್ಳಿ ಅವರ ನೇತೃತ್ವದ ತಂಡವು ಗಣ್ಯರನ್ನು ಭೇಟಿ ಮಾಡಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಹಸ್ತಾಂತರಿಸಿತು. ಈ ಸಂದರ್ಭದಲ್ಲಿ ನ್ಯಾಯವಾದಿ ರವಿಕಿರಣ್ ಮುರ್ಡೇಶ್ವರ,,…

Read More

ಉಡುಪಿ, ಆ. 8: ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ಆಗಸ್ಟ್ 16ರಂದು ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ ಆಯೋಜಿಸಲಾಗಿರುವ ‘ಆಟಿಡೊಂಜಿ ದಿನ’ ಕಾರ್ಯಕ್ರಮಕ್ಕೆ ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಮಾನ್ಯ ಶ್ರೀ ಯು.ಟಿ. ಖಾದರ್ ಅವರನ್ನು ಭೇಟಿಯಾಗಿ ಅಧಿಕೃತವಾಗಿ ಆಮಂತ್ರಿಸಲಾಯಿತು. ತುಳುನಾಡಿನ ವಿಶಿಷ್ಟ ಸಂಸ್ಕೃತಿ, ಸಂಪ್ರದಾಯ, ಆಚರಣೆ ಹಾಗೂ ಜನಪದ ಪರಂಪರೆಯನ್ನು ಪರಿಚಯಿಸುವ ಮತ್ತು ಉಳಿಸಿ ಬೆಳೆಸುವ ಉದ್ದೇಶದಿಂದ ಆಯೋಜಿಸಲಾಗಿರುವ ‘ಆಟಿಡೊಂಜಿ ದಿನ’ ಕಾರ್ಯಕ್ರಮದ ಆಮಂತ್ರಣ ಪತ್ರವನ್ನು ಸಚಿವರಿಗೆ ನೀಡಿ, ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಆಹ್ವಾನಿಸಲಾಯಿತು. ಈ ಸಂದರ್ಭದಲ್ಲಿ ತುಳುನಾಡ ರಕ್ಷಣಾ ವೇದಿಕೆ ಬೈರಂಪಳ್ಳಿ ಘಟಕದ ಅಧ್ಯಕ್ಷರಾದ ಕೃಷ್ಣಾನಂದ ನಾಯಕ್, ಉಡುಪಿ ಜಿಲ್ಲಾ ಸಂಘಟನಾ ಜೊತೆ ಕಾರ್ಯದರ್ಶಿ ಕೃಷ್ಣ ಮಾರ್ಪಳ್ಳಿ ಹಾಗೂ ಅಜಯ್ ಕುಲಾಲ್ ಉಪಸ್ಥಿತರಿದ್ದರು. ತುಳುನಾಡಿನ ಸಾಂಸ್ಕೃತಿಕ ವೈಭವವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ‘ಆಟಿಡೊಂಜಿ ದಿನ’ದಂತಹ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಸಂಘಟನೆಯ…

Read More

ಹೆಬ್ರಿ, ಆ. 8: ಧನಲಕ್ಷ್ಮೀ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಸದಸ್ಯರು ಮರುಪಾವತಿಸಿದ ಸಾಲದ ಹಣವನ್ನು ಒಕ್ಕೂಟದ ಖಾತೆಗೆ ಜಮಾ ಮಾಡದೆ, ನಕಲಿ ದಾಖಲೆಗಳನ್ನು ಸೃಷ್ಟಿಸಿ ಸುಮಾರು ₹28.19 ಲಕ್ಷ ಹಣವನ್ನು ದುರುಪಯೋಗಪಡಿಸಿಕೊಂಡಿರುವ ಆರೋಪ ಕೇಳಿಬಂದಿದೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಕ್ಕೂಟದಲ್ಲಿ ಸುಮಾರು 8 ವರ್ಷಗಳಿಂದ ಮುಖ್ಯ ಪುಸ್ತಕ ಬರಹಗಾರರಾಗಿ (ಮುಖ್ಯ ಬುಕ್ ಕೀಪರ್) ಕಾರ್ಯನಿರ್ವಹಿಸುತ್ತಿದ್ದ ನಂದಿನಿ ಎಂಬವರ ವಿರುದ್ಧ ದೂರು ನೀಡಲಾಗಿದೆ.ದೂರಿನ ಪ್ರಕಾರ, 2020ರಿಂದ 2026ರವರೆಗೆ ವಿವಿಧ ಸ್ವಸಹಾಯ ಸಂಘಗಳ ಸದಸ್ಯರು ಸಾಲದ ಕಂತು ಹಾಗೂ ಮರುಪಾವತಿ ರೂಪದಲ್ಲಿ ಒಕ್ಕೂಟಕ್ಕೆ ನೀಡಿದ ಹಣವನ್ನು ಸಮರ್ಪಕವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡದೆ, ಎರಡು ಪ್ರತ್ಯೇಕ ಖಾತೆ ಪುಸ್ತಕಗಳು ಹಾಗೂ ರಶೀದಿ ಪುಸ್ತಕಗಳನ್ನು ನಿರ್ವಹಿಸಿ, ವ್ಯತ್ಯಾಸದ ದಾಖಲೆಗಳನ್ನು ಸೃಷ್ಟಿಸಲಾಗಿದೆ ಎಂದು ಆರೋಪಿಸಲಾಗಿದೆ.ಅಲ್ಲದೆ, ಒಕ್ಕೂಟದ ಅಧ್ಯಕ್ಷರು ಹಾಗೂ ಕಾರ್ಯದರ್ಶಿಯವರ ಸಹಿಗಳನ್ನು ನಕಲು ಮಾಡಿ ದಾಖಲೆಗಳನ್ನು ಸಿದ್ಧಪಡಿಸಿ, ಸದಸ್ಯರಿಂದ ಸಂಗ್ರಹಿಸಲಾದ ಒಟ್ಟು ₹28,19,489 ಹಣವನ್ನು ಸ್ವಂತ ಬಳಕೆಗೆ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.ಈ ಮೂಲಕ ಒಕ್ಕೂಟದ…

Read More

ಮುದರಂಗಡಿ: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮುದರಂಗಡಿ ಪೇಟೆಯಲ್ಲಿ ಹಾಡಹಗಲೇ ಕಾಂಗ್ರೆಸ್ ಮುಖಂಡ ಹಾಗೂ ಮುದರಂಗಡಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜಾ (ಪ್ರಿನ್ಸ್) ಅವರನ್ನು ಗುಂಡಿಕ್ಕಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ಕಾಪು ಪೊಲೀಸ್ ಠಾಣೆಯ ಪಿಎಸ್‌ಐ ತೇಜಸ್ವಿ ಹಾಗೂ ಕಾಪು ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ಪ್ರಸನ್ನ ಅವರ ನೇತೃತ್ವದ ಪೊಲೀಸ್ ತಂಡ ಬಂಧಿಸಿ ಕರೆದೊಯ್ಯುತ್ತಿದ್ದ ವೇಳೆ ಘಟನೆ ನಡೆದಿದೆ ಎನ್ನಲಾಗಿದೆ. ಬಂಧನಕ್ಕೆ ಪ್ರತಿರೋಧ ತೋರಿದ ಆರೋಪಿಯು ಪೊಲೀಸರ ಮೇಲೆ ಹಲ್ಲೆಗೆ ಮುಂದಾದನು ಎನ್ನಲಾಗಿದ್ದು, ಈ ಸಂದರ್ಭದಲ್ಲಿ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ ಎಂದು ತಿಳಿದುಬಂದಿದೆ. ಗುಂಡೇಟಿನಿಂದ ಗಾಯಗೊಂಡ ಆರೋಪಿಯನ್ನು ತಕ್ಷಣವೇ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಘಟನೆಯ ಬಳಿಕ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಹರಿರಾಮ್ ಶಂಕರ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಗೊಂಡ ಆರೋಪಿಯ ವಿಚಾರಣೆ ನಡೆಸಿದ್ದಾರೆ. ಮುದರಂಗಡಿ ಪೇಟೆಯಲ್ಲಿ ನಡೆದಿದ್ದ ಈ…

Read More

ಉಡುಪಿ, ಆ. 7: ಉಡುಪಿ ನಗರದ ನಾರಾಯಣ ಗುರು ಸಭಾಂಗಣದಲ್ಲಿ ಇಂದು ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಅವರು ಭೇಟಿ ನೀಡಿದ ಸಂದರ್ಭದಲ್ಲಿ, ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ತುಳುನಾಡಿನ ಸಾಂಸ್ಕೃತಿಕ ಗುರುತಿನ ಪ್ರತೀಕವಾದ ಸೂರ್ಯ–ಚಂದ್ರ ಚಿಹ್ನೆ ಹೊಂದಿರುವ ಶಾಲನ್ನು ಹೊದಿಸಿ, ಪುಷ್ಪಗುಚ್ಛ ನೀಡಿ ಗೌರವಿಸಲಾಯಿತು. ಬಳಿಕ ಇದೇ ಆಗಸ್ಟ್ 16ರಂದು ನಡೆಯಲಿರುವ “ಆಟಿಡೊಂಜಿ ದಿನ” ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ನೀಡಿ, ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸುವಂತೆ ಆಹ್ವಾನಿಸಲಾಯಿತು. ನಟ ಚೇತನ್ ಅಹಿಂಸಾ ಅವರು ತುಳುನಾಡಿನ ಸಂಸ್ಕೃತಿ, ಭಾಷೆ ಹಾಗೂ ಪರಂಪರೆಯ ಸಂರಕ್ಷಣೆಗೆ ತುಳುನಾಡ ರಕ್ಷಣಾ ವೇದಿಕೆ ಕೈಗೊಂಡಿರುವ ವಿವಿಧ ಸಾಮಾಜಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಆಟಿಡೊಂಜಿ ದಿನದಂತಹ ಕಾರ್ಯಕ್ರಮಗಳು ತುಳುನಾಡಿನ ವೈಶಿಷ್ಟ್ಯಪೂರ್ಣ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ಅವರು ಅಭಿಪ್ರಾಯಪಟ್ಟರು. ಈ ಸಂದರ್ಭದಲ್ಲಿ ತುಳುನಾಡ ರಕ್ಷಣಾ…

Read More

ಉಡುಪಿ (ಕಾಪು): ಕಾಂಗ್ರೆಸ್ ಮುಖಂಡ, ಉಡುಪಿ ಹಾಗೂ ಮುದರಂಗಡಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜಾ (ಪ್ರಿನ್ಸ್) ಅವರ ಮೇಲೆ ದುಷ್ಕರ್ಮಿಗಳು ದಿಢೀರ್ ಗುಂಡಿನ ದಾಳಿ ನಡೆಸಿ ಭೀಕರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ.ಸ್ಥಳೀಯವಾಗಿ ಅತ್ಯಂತ ಪ್ರಭಾವಿ ಹಾಗೂ ಜನಪ್ರಿಯ ನಾಯಕರಾಗಿದ್ದ ಡೇವಿಡ್ ಡಿಸೋಜಾ ಅವರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಈ ಹಠಾತ್ ಶೂಟೌಟ್ ಘಟನೆಯಿಂದಾಗಿ ಕಾಪು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ತೀವ್ರ ಆತಂಕ ಹಾಗೂ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.ಗುಂಡಿನ ದಾಳಿಗೆ ನಿಖರವಾದ ಕಾರಣ ಏನೆಂಬುದು ತನಿಖೆಗೆ ತಿಳಿದುಬಂದಿಲ್ಲ. ಹತ್ಯೆಯ ಹಿಂದೆ ವೈಯಕ್ತಿಕ ದ್ವೇಷ, ಹಣಕಾಸು ವ್ಯವಹಾರ ಅಥವಾ ಇತರ ರಾಜಕೀಯ ಕಾರಣಗಳಿವೆಯೇ ಎಂಬ ಸತ್ಯಾಸತ್ಯತೆಯನ್ನು ಪೊಲೀಸರು ಜಾಲ ಬೀಸಿದ್ದಾರೆ.

Read More

ಬಂಟ್ವಾಳ, ಆ. 6: ಬಿ.ಸಿ.ರೋಡ್ ಸಮೀಪದ ಎನ್.ಜಿ. ಸರ್ಕಲ್‌ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್‌ನ ಹಿಂಬದಿ ಸವಾರ ಮೃತಪಟ್ಟಿದ್ದು, ಪ್ರಕರಣ ಸಂಬಂಧ ಟಿಪ್ಪರ್ ಚಾಲಕನನ್ನು ಬಂಟ್ವಾಳ ಸಂಚಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪೊಲೀಸ್ ಮಾಹಿತಿಯ ಪ್ರಕಾರ, ಬಂಟ್ವಾಳ ತಾಲೂಕಿನ ಪಲ್ಲಂಬೆಟ್ಟು ನಿವಾಸಿ ಸಲ್ಮಾನ್ ಫಾರೂಕ್ (33) ಚಾಲನೆ ಮಾಡುತ್ತಿದ್ದ ಟಿಪ್ಪರ್ ಲಾರಿಯು ಅತಿವೇಗ ಮತ್ತು ಅಜಾಗರೂಕತೆಯಿಂದ ಸಂಚರಿಸುತ್ತಿದ್ದ ವೇಳೆ ಮಂಗಳೂರಿನಿಂದ ಧರ್ಮಸ್ಥಳದ ಕಡೆಗೆ ಸರ್ವಿಸ್ ರಸ್ತೆಯಲ್ಲಿ ತೆರಳುತ್ತಿದ್ದ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತ ಗುರುವಾರ ಸಂಜೆ ಸುಮಾರು 6 ಗಂಟೆಗೆ ನಡೆದಿದೆ.ಡಿಕ್ಕಿಯ ಪರಿಣಾಮ ಸ್ಕೂಟರ್ ಸವಾರ ದಯಾನಂದ ಹಾಗೂ ಹಿಂಬದಿ ಸವಾರ ಯಶ್ವಂತ್ ಕುಲಾಲ್ ಗಂಭೀರವಾಗಿ ಗಾಯಗೊಂಡಿದ್ದು, ಇಬ್ಬರನ್ನೂ ತಕ್ಷಣ ಮಂಗಳೂರಿನ ಜಿಲ್ಲಾ ವೆನ್‌ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಯಶ್ವಂತ್ ಕುಲಾಲ್ ಅವರು ಮಧ್ಯರಾತ್ರಿ ಮೃತಪಟ್ಟಿದ್ದಾರೆ. ದಯಾನಂದ ಅವರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಈ ಸಂಬಂಧ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಅಪರಾಧ…

Read More