Author: Tulunada Surya

ರಾಯಚೂರು ಜಿಲ್ಲೆಯ ಬಿಜನಗೇರಾ ಗ್ರಾಮದಲ್ಲಿ ಎರಡು ಎಕರೆ ಜಮೀನಿನ ಖಾತಾ ಉತಾರ ನೀಡಲು ವ್ಯಕ್ತಿಯೊಬ್ಬರಿಂದ ₹1.5 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ರಾಜ್ಯದ ಗ್ರಾಮೀಣ ಆಡಳಿತ ವ್ಯವಸ್ಥೆಯ ಮೇಲಿನ ಜನರ ವಿಶ್ವಾಸಕ್ಕೆ ದೊಡ್ಡ ಹೊಡೆತ ನೀಡಿದೆ. ಗ್ರಾಮ ಪಂಚಾಯಿತಿಗಳು ಗ್ರಾಮೀಣ ಜನರ ಅಭಿವೃದ್ಧಿ, ಮೂಲಭೂತ ಸೌಲಭ್ಯಗಳು ಹಾಗೂ ಸರ್ಕಾರಿ ಸೇವೆಗಳ ಪ್ರಮುಖ ಕೇಂದ್ರಗಳಾಗಿವೆ. ಆದರೆ ಜನಸೇವೆಗೆ ನೇಮಕಗೊಂಡ ಕೆಲ ಅಧಿಕಾರಿಗಳು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಸಾರ್ವಜನಿಕರಿಂದ ಲಂಚ ವಸೂಲಿ ಮಾಡುವ ಪ್ರವೃತ್ತಿ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ ಬಹುತೇಕ ಜನರು ರೈತರು, ಕೂಲಿ ಕಾರ್ಮಿಕರು ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗದವರಾಗಿದ್ದಾರೆ. ತಮ್ಮ ಜಮೀನು, ಮನೆ ಅಥವಾ ಇತರೆ ದಾಖಲೆಗಳಿಗೆ ಸಂಬಂಧಿಸಿದ ಕಾನೂನುಬದ್ಧ ಸೇವೆ ಪಡೆಯಲು ಅವರು ಸರ್ಕಾರಿ ಕಚೇರಿಗಳ ಬಾಗಿಲು ತಟ್ಟಬೇಕಾಗುತ್ತದೆ. ಆದರೆ ಹಕ್ಕಿನ ಸೇವೆಯನ್ನೇ ಪಡೆಯಲು ಲಕ್ಷಾಂತರ ರೂಪಾಯಿ ಲಂಚ ನೀಡುವಂತೆ…

Read More

ಉಡುಪಿ, ಜೂನ್ 12: ಉಡುಪಿ ಎ.ಪಿ.ಎಂ.ಸಿ. ಮಾರುಕಟ್ಟೆ ಪ್ರಾಂಗಣದಲ್ಲಿ ಹಲವು ವರ್ಷಗಳಿಂದ ಬೆಳೆದು ನಿಂತಿರುವ ಮರಗಳಿಗೆ ರಾಸಾಯನಿಕ ಪದಾರ್ಥಗಳನ್ನು ಬಳಸಿ ಉದ್ದೇಶಪೂರ್ವಕವಾಗಿ ಹಾನಿ ಮಾಡಲಾಗುತ್ತಿದ್ದು, ಈ ಅಮಾನವೀಯ ಕೃತ್ಯದ ವಿರುದ್ಧ ಸಂಬಂಧಿತ ಅಧಿಕಾರಿಗಳು ತಕ್ಷಣ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪರಿಸರ ಪ್ರೇಮಿ ಹಾಗೂ ಎಸ್.ಬಿ. ಟ್ರೇಡರ್ಸ್‌ನ ಪ್ರೊಪ್ರೈಟರ್ ಎಂ. ಸುಶಾಂತ್ ಆಗ್ರಹಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಎ.ಪಿ.ಎಂ.ಸಿ. ಮಾರುಕಟ್ಟೆ ಆವರಣದಲ್ಲಿ ವ್ಯಾಪಾರ ನಡೆಸುತ್ತಿರುವ ತಾವು ಪ್ರತಿದಿನ ಬೆಳಿಗ್ಗೆ ಮಾರುಕಟ್ಟೆಗೆ ಆಗಮಿಸುವ ವೇಳೆ ಮರಗಳ ಸ್ಥಿತಿಯನ್ನು ಗಮನಿಸುತ್ತಿದ್ದು, ಕೆಲವು ಮರಗಳಿಗೆ ನಿರಂತರವಾಗಿ ಹಾನಿ ಉಂಟುಮಾಡುವ ಪ್ರಯತ್ನಗಳು ನಡೆಯುತ್ತಿರುವುದು ಕಂಡುಬಂದಿದೆ ಎಂದು ಅವರು ತಿಳಿಸಿದ್ದಾರೆ. ಮರಗಳ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದ್ದು, ಪರಿಸರ ಸಮತೋಲನ ಕಾಪಾಡುವಲ್ಲಿ ಅವುಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಮರಗಳನ್ನು ನಾಶಪಡಿಸುವ ಉದ್ದೇಶದಿಂದ ರಾಸಾಯನಿಕ ಪದಾರ್ಥಗಳನ್ನು ಬಳಸಿ ಅವುಗಳ ಜೀವವನ್ನೇ ಕಸಿದುಕೊಳ್ಳುವ ಮಟ್ಟಕ್ಕೆ ಕೆಲವರು ಇಳಿದಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ…

Read More

ಮಂಡ್ಯ, ಜೂನ್ 25: ಪ್ರವಾಸದ ಸಂತಸ ಕ್ಷಣಗಳು ಕೆಲವೇ ನಿಮಿಷಗಳಲ್ಲಿ ಶೋಕಸಾಗರವಾಗಿ ಮಾರ್ಪಟ್ಟ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿಯಲ್ಲಿ ನಡೆದಿದೆ. ಫೋಟೋ ತೆಗೆಯುವ ವೇಳೆ ಕಾವೇರಿ ನದಿಗೆ ಇಳಿದ ಒಂದೇ ಕುಟುಂಬದ ಐವರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದುರ್ಘಟನೆ ಬುಧವಾರ ಸಂಜೆ ಸಂಭವಿಸಿದೆ. ಮೃತರನ್ನು ಶ್ವೇತಾ (38), ಚೈತ್ರ (20), ವಿಜಯಮ್ಮ (50), ಪ್ರಿಯಾಂಕಾ (28) ಹಾಗೂ ಕಾರು ಚಾಲಕ ಮಹೇಶ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಚನ್ನಪಟ್ಟಣ ಮೂಲದವರಾಗಿದ್ದು, ಕುಟುಂಬ ಸಮೇತ ಮುತ್ತೆತ್ತರಾಯ ದೇವಾಲಯಕ್ಕೆ ಭೇಟಿ ನೀಡಿದ್ದರು. ದೇವರ ದರ್ಶನ ಮತ್ತು ಪೂಜೆ ಬಳಿಕ ಕುಟುಂಬಸ್ಥರು ಸಂಜೆ ವೇಳೆಗೆ ಕಾವೇರಿ ನದಿ ತಟಕ್ಕೆ ತೆರಳಿದ್ದರು. ನೆನಪಿಗಾಗಿ ಫೋಟೋ ತೆಗೆಯಲು ನೀರಿಗೆ ಇಳಿದಾಗ ವಿಜಯಮ್ಮ ಅವರು ಆಳವಾದ ಭಾಗಕ್ಕೆ ತೆರಳಿ ಮುಳುಗತೊಡಗಿದ್ದಾರೆ. ಅವರನ್ನು ರಕ್ಷಿಸಲು ಮುಂದಾದ ಉಳಿದವರೂ ನೀರಿನ ಸೆಳೆತಕ್ಕೆ ಸಿಲುಕಿ ಒಬ್ಬರ ಹಿಂದೆ ಒಬ್ಬರು ಮುಳುಗಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳದಲ್ಲಿದ್ದ ಹೋಂ ಗಾರ್ಡ್ ಸಿಬ್ಬಂದಿ ನೀರಿಗೆ ಇಳಿಯದಂತೆ ಮುನ್ನೆಚ್ಚರಿಕೆ…

Read More

ಮಂಗಳೂರು, ಜೂನ್ 24: ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಫಾರ್ಮಸಿ ಅಧಿಕಾರಿ ಚಂದ್ರಶೇಖರ್ ವಿರುದ್ಧ ಲೈಂಗಿಕ ಕಿರುಕುಳದ ಗಂಭೀರ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯವು ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದ್ದ ಗ್ರೂಪ್-ಡಿ ಮಹಿಳಾ ನೌಕರಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂಬ ದೂರಿನ ಆಧಾರದ ಮೇಲೆ ಪ್ರಕರಣದ ತನಿಖೆ ಕೈಗೊಳ್ಳಲಾಗಿತ್ತು. ಈ ಸಂಬಂಧ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಸಲ್ಲಿಸಿದ ವರದಿ, ಸಾಕ್ಷಿದಾರರ ಲಿಖಿತ ಹೇಳಿಕೆಗಳು ಹಾಗೂ ಇತರ ದಾಖಲೆಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ ಪರಿಶೀಲನೆ ನಡೆಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿರುವುದರ ಜೊತೆಗೆ ಲಭ್ಯವಿರುವ ದಾಖಲೆಗಳು ಮತ್ತು ಸಾಕ್ಷ್ಯಾಧಾರಗಳ ಆಧಾರದ ಮೇಲೆ ಆರೋಪವು ಮೇಲ್ನೋಟಕ್ಕೆ ದೃಢಪಟ್ಟಿದೆ ಎಂದು ಇಲಾಖೆ ಅಭಿಪ್ರಾಯಪಟ್ಟಿದೆ. ಇದರ ಪರಿಣಾಮವಾಗಿ ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳಡಿ…

Read More

ಮಂಗಳೂರು, ಜೂನ್ 24: 114 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಎಂಸಿಸಿ ಬ್ಯಾಂಕ್ ಲಿಮಿಟೆಡ್ 2025-26ನೇ ಹಣಕಾಸು ವರ್ಷದಲ್ಲಿ ಗಮನಾರ್ಹ ಸಾಧನೆ ದಾಖಲಿಸಿದ್ದು, ಬ್ಯಾಂಕಿನ ಒಟ್ಟು ವ್ಯವಹಾರ ವಹಿವಾಟು 22.89 ಶೇಕಡಾ ಏರಿಕೆಯೊಂದಿಗೆ ₹1,535 ಕೋಟಿ ತಲುಪಿದೆ ಎಂದು ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ತಿಳಿಸಿದ್ದಾರೆ. ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾಂಕಿನ ನಿವ್ವಳ ಮೌಲ್ಯ ₹83.76 ಕೋಟಿಯಿಂದ ₹91.80 ಕೋಟಿಗೆ ಏರಿಕೆಯಾಗಿದೆ. ವಿಶೇಷವಾಗಿ ಎನ್‌ಆರ್‌ಐ ಗ್ರಾಹಕರ ವಿಶ್ವಾಸ ಮತ್ತು ಬೆಂಬಲ ಬ್ಯಾಂಕಿನ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸಿದೆ ಎಂದು ಹೇಳಿದರು. 2018ರಲ್ಲಿ ಪ್ರಸ್ತುತ ಆಡಳಿತ ಮಂಡಳಿ ಅಧಿಕಾರ ವಹಿಸಿಕೊಂಡ ಬಳಿಕ ಬ್ಯಾಂಕ್ ವೇಗವಾಗಿ ಅಭಿವೃದ್ಧಿ ಹೊಂದಿದೆ. ಈ ಅವಧಿಯಲ್ಲಿ ಠೇವಣಿಗಳು ₹304 ಕೋಟಿಯಿಂದ ₹876 ಕೋಟಿಗೆ, ಸಾಲ ಮತ್ತು ಮುಂಗಡಗಳು ₹191 ಕೋಟಿಯಿಂದ ₹657 ಕೋಟಿಗೆ ಹಾಗೂ ಷೇರು ಬಂಡವಾಳ ₹13 ಕೋಟಿಯಿಂದ ₹34 ಕೋಟಿಗೆ ಏರಿಕೆಯಾಗಿದೆ. ಒಟ್ಟು ವ್ಯವಹಾರ ವಹಿವಾಟು ₹496 ಕೋಟಿಯಿಂದ ₹1,535 ಕೋಟಿಗೆ ತಲುಪುವ…

Read More

ಪಟ್ನಾ, ಜೂನ್ 24: ಬಿಹಾರದ ಬೋಜ್‌ಪುರ ಜಿಲ್ಲೆಯ ಬಿಲೌಟಿ ಗ್ರಾಮದಲ್ಲಿ ನಡೆದ ಸಾಮಾಜಿಕ ಕಾರ್ಯಕರ್ತ ಭರತ್ ಭೂಷಣ ತಿವಾರಿ ಎನ್‌ಕೌಂಟರ್ ಪ್ರಕರಣ ಇದೀಗ ದೇಶವ್ಯಾಪಿ ಸಂಚಲನ ಸೃಷ್ಟಿಸಿದೆ. ಆರಂಭದಲ್ಲಿ ಪೊಲೀಸರ ಯಶಸ್ವಿ ಕಾರ್ಯಾಚರಣೆ ಎಂದು ಬಿಂಬಿತವಾಗಿದ್ದ ಘಟನೆ, ಇದೀಗ ಗಂಭೀರ ಅನುಮಾನಗಳು, ವಿವಾದಗಳು ಮತ್ತು ಮಾನವ ಹಕ್ಕುಗಳ ಪ್ರಶ್ನೆಗಳನ್ನು ಎಬ್ಬಿಸಿದೆ. ಪ್ರಕರಣದಲ್ಲಿ ಅತ್ಯಂತ ಮಹತ್ವದ ಬೆಳವಣಿಗೆಯೆಂದರೆ, ಬಿಹಾರದ ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಸುಧಾಂಶು ಕುಮಾರ್ ಅವರು ಸ್ವತಃ ಮಾಧ್ಯಮಗಳ ಮುಂದೆ ಬಂದು “ಪೊಲೀಸ್ ನಿರ್ವಹಣೆಯಲ್ಲಿ ಲೋಪವಾಗಿದೆ” ಎಂದು ಒಪ್ಪಿಕೊಂಡಿರುವುದು. ಈ ಹೇಳಿಕೆ ಪ್ರಕರಣದ ದಿಕ್ಕನ್ನೇ ಬದಲಿಸಿದ್ದು, ಎನ್‌ಕೌಂಟರ್‌ನ ನೈಜತೆಯ ಕುರಿತು ಹೊಸ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ವೈರಲ್ ವಿಡಿಯೋದಿಂದ ಆರಂಭವಾದ ಕಥೆ ಜೂನ್ 16ರಂದು ಭರತ್ ಭೂಷಣ ತಿವಾರಿ ಅಕ್ರಮ ಪಿಸ್ತೂಲ್ ಹಿಡಿದು ಪೊಲೀಸರಿಗೆ ಸವಾಲು ಹಾಕುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ವಿಡಿಯೋ ರಾಜ್ಯ ಪೊಲೀಸ್ ಇಲಾಖೆಗೆ ದೊಡ್ಡ ಸವಾಲಾಗಿ ಪರಿಣಮಿಸಿತ್ತು. ಆದರೆ, ಘಟನೆಯ ಮರುದಿನವೇ ಎಸ್‌ಟಿಎಫ್…

Read More

ಹೆಬ್ರಿ, ಜೂನ್ 24: ಸಾರ್ವಜನಿಕರ ಭದ್ರತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಪ್ರಮುಖ ಕೇಂದ್ರವಾಗಿರುವ ಹೆಬ್ರಿ ಪೊಲೀಸ್ ಠಾಣೆಯು ಪೇಟೆಯಿಂದ ಸುಮಾರು ಒಂದೂವರೆ ಕಿಲೋಮೀಟರ್ ದೂರದ ಕಾಡಿನ ಮಧ್ಯೆ ಕಾರ್ಯನಿರ್ವಹಿಸುತ್ತಿರುವುದರಿಂದ ಸಾರ್ವಜನಿಕರು ಮತ್ತು ಪೊಲೀಸ್ ಸಿಬ್ಬಂದಿ ನಾನಾ ರೀತಿಯ ತೊಂದರೆಗಳನ್ನು ಎದುರಿಸುತ್ತಿದ್ದಾರೆ ಎಂದು ಜೆಡಿಎಸ್ ಹೆಬ್ರಿ ತಾಲೂಕು ಅಧ್ಯಕ್ಷ ಶ್ರೀಕಾಂತ್ ಪೂಜಾರಿ ಕುಚ್ಚೂರು ಆರೋಪಿಸಿದ್ದಾರೆ. ಪೊಲೀಸ್ ಠಾಣೆಗೆ ಸಂಪರ್ಕಿಸುವ ರಸ್ತೆಯು ಸಮರ್ಪಕವಾಗಿ ಅಭಿವೃದ್ಧಿಯಾಗಿಲ್ಲ. ರಸ್ತೆ ಡಾಂಬರೀಕರಣಗೊಂಡಿಲ್ಲದ ಕಾರಣ ಸಾರ್ವಜನಿಕರು ಕಷ್ಟಪಟ್ಟು ಠಾಣೆಗೆ ತೆರಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಜೊತೆಗೆ ರಸ್ತೆಯುದ್ದಕ್ಕೂ ದಾರಿದೀಪಗಳ ವ್ಯವಸ್ಥೆ ಇಲ್ಲದ ಕಾರಣ ರಾತ್ರಿ ವೇಳೆಯಲ್ಲಿ ಸಂಚರಿಸುವುದು ಅಪಾಯಕಾರಿಯಾಗಿದೆ. ತುರ್ತು ಸಂದರ್ಭದಲ್ಲಿ ದೂರು ದಾಖಲಿಸಲು ಅಥವಾ ಪೊಲೀಸ್ ನೆರವು ಪಡೆಯಲು ಬರುವ ಮಹಿಳೆಯರು, ಹಿರಿಯ ನಾಗರಿಕರು ಹಾಗೂ ಸಾರ್ವಜನಿಕರು ಭಯ ಮತ್ತು ಅನಾನುಕೂಲತೆಯನ್ನು ಎದುರಿಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಹೆಬ್ರಿ ಪೇಟೆಯ ಸಮೀಪದಲ್ಲೇ ಸಾರ್ವಜನಿಕ ಸೌಲಭ್ಯಗಳಿಗೆ ಅನುಕೂಲಕರವಾದ ಸ್ಥಳಗಳಿದ್ದರೂ, ಪೊಲೀಸ್ ಠಾಣೆಯನ್ನು ಜನವಸತಿ ಪ್ರದೇಶದಿಂದ ದೂರದಲ್ಲಿ ಸ್ಥಾಪಿಸಿರುವುದು ಸಾರ್ವಜನಿಕ ಸೇವೆಯ…

Read More

ಮಂಗಳೂರು, ಜೂನ್ 23: ದಕ್ಷಿಣ ಕನ್ನಡ ಜಿಲ್ಲೆಯ ಖಾಝಿಯಾಗಿ ಸೇವೆ ಸಲ್ಲಿಸಿದ್ದ ಗೌರವಾನ್ವಿತ ಧಾರ್ಮಿಕ ನಾಯಕ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರ ನಿಧನಕ್ಕೆ ಆರೋಗ್ಯ ಸಚಿವರಾದ ಯುಟಿ ಕಾದರ್, ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್ ಮುಖಂಡರು ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದಾರೆ. ಸಂತಾಪ ಸಂದೇಶದಲ್ಲಿ ಸಚಿವ ಯು.ಟಿ. ಖಾದರ್ ಅವರು, ಮುಸ್ಲಿಯಾರ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಮುಸ್ಲಿಂ ಸಮುದಾಯಕ್ಕೆ ದೀರ್ಘಕಾಲ ಧಾರ್ಮಿಕ ಮಾರ್ಗದರ್ಶನ ನೀಡಿದ ಅಪರೂಪದ ಧಾರ್ಮಿಕ ನಾಯಕರಾಗಿದ್ದರು. ತಮ್ಮ ಜೀವನವನ್ನೆಲ್ಲ ಧರ್ಮ, ಶಿಕ್ಷಣ ಹಾಗೂ ಸಮಾಜ ಸೇವೆಗೆ ಸಮರ್ಪಿಸಿ ಸಾವಿರಾರು ಜನರಿಗೆ ದಾರಿದೀಪರಾಗಿದ್ದರು ಎಂದು ಸ್ಮರಿಸಿದ್ದಾರೆ. ಜೆಡಿಎಸ್ ಮುಖಂಡರಿಂದ ಸಂತಾಪ : ಜೆಡಿಎಸ್ ಮುಖಂಡರು ಸಂತಾಪ ಸೂಚಿಸಿ ಅವರ ಸರಳತೆ, ಆಳವಾದ ಧಾರ್ಮಿಕ ಜ್ಞಾನ, ಮಾನವೀಯತೆ ಹಾಗೂ ಸಮನ್ವಯದ ಮನೋಭಾವ ಎಲ್ಲರಿಗೂ ಪ್ರೇರಣೆಯಾಗಿತ್ತು. ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಧಾರ್ಮಿಕ ಮೌಲ್ಯಗಳನ್ನು ಬಲಪಡಿಸುವಲ್ಲಿ ಅವರು ಮಹತ್ವದ ಪಾತ್ರ ವಹಿಸಿದ್ದರು. ಅವರ ಅಗಲಿಕೆ ಮುಸ್ಲಿಂ ಸಮುದಾಯಕ್ಕೆ ಮಾತ್ರವಲ್ಲದೆ ಸಮಸ್ತ…

Read More

ಮಂಗಳೂರು, ಜೂನ್ 23: ಕಳೆದ ಎರಡು ವರ್ಷಗಳಿಂದ ರಾಜ್ಯದಲ್ಲಿ ಹೊಸ ಪಡಿತರ ಚೀಟಿ (ರೇಷನ್ ಕಾರ್ಡ್) ವಿತರಣೆಯ ಪ್ರಕ್ರಿಯೆ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಎದುರಿಸುತ್ತಿರುವ ಗಂಭೀರ ಸಮಸ್ಯೆಗಳ ಬಗ್ಗೆ ಜನತಾದಳ (ಜಾತ್ಯತೀತ) ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ನಿಯೋಗವು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು ಮತ್ತು ಜಿಲ್ಲಾಧಿಕಾರಿಗಳ ಮೂಲಕ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರಿಗೆ ಮನವಿ ಸಲ್ಲಿಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿತು. ಮನವಿಯಲ್ಲಿ, ರಾಜ್ಯದಾದ್ಯಂತ ಸಾವಿರಾರು ಅರ್ಹ ಕುಟುಂಬಗಳು ಹೊಸ ಪಡಿತರ ಚೀಟಿ ಪಡೆಯಲು ಎರಡು ವರ್ಷಗಳಿಂದ ಕಾಯುತ್ತಿರುವುದರಿಂದ ಸರ್ಕಾರದ ವಿವಿಧ ಜನಪರ ಯೋಜನೆಗಳು ಹಾಗೂ ಮೂಲಭೂತ ಸೌಲಭ್ಯಗಳಿಂದ ವಂಚಿತರಾಗುತ್ತಿರುವ ವಿಚಾರವನ್ನು ಗಂಭೀರವಾಗಿ ಪ್ರಸ್ತಾಪಿಸಲಾಯಿತು. ಹೊಸದಾಗಿ ವಿವಾಹವಾದ ದಂಪತಿಗಳು, ಪ್ರತ್ಯೇಕ ಕುಟುಂಬವಾಗಿ ಜೀವನ ಆರಂಭಿಸಿರುವವರು, ಬಾಡಿಗೆ ಮನೆಗಳಲ್ಲಿ ವಾಸಿಸುವವರು, ಆರ್ಥಿಕವಾಗಿ ಹಿಂದುಳಿದ ಕುಟುಂಬಗಳು ಸೇರಿದಂತೆ ಅನೇಕ ನಾಗರಿಕರು ಪಡಿತರ ಚೀಟಿ ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ತಿಳಿಸಲಾಯಿತು.…

Read More

ಉಡುಪಿ, ಜೂನ್ 23: ಉದ್ಯಾವರ ಪಾಪನಾಶಿನಿ ಸೇತುವೆ ಮೇಲಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಯುವಕನ ಮೃತದೇಹ ಸತತ ಹುಡುಕಾಟದ ಬಳಿಕ ಪತ್ತೆಯಾಗಿದೆ.ಮೃತರನ್ನು ಹರ್ಷಿತ್ ಶೆಟ್ಟಿ (28) ಎಂದು ಗುರುತಿಸಲಾಗಿದ್ದು, ಅವರು ಉದ್ಯಾವರ ಪಿತ್ರೋಡಿ ನಿವಾಸಿಯಾಗಿದ್ದಾರೆ.ಮಾಹಿತಿಯ ಪ್ರಕಾರ, ಸೋಮವಾರ ಮುಂಜಾನೆ ಸುಮಾರು 5 ಗಂಟೆಗೆ ಕ್ರಿಕೆಟ್ ಆಡಲು ಬೋಳಾರುಗುಡ್ಡೆ ಮೈದಾನಕ್ಕೆ ತೆರಳುವುದಾಗಿ ಮನೆಯಿಂದ ಹೊರಟಿದ್ದ ಹರ್ಷಿತ್ ಬಳಿಕ ಮನೆಗೆ ಮರಳಿರಲಿಲ್ಲ. ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದ್ದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಆತಂಕಗೊಂಡಿದ್ದರು. ಈ ನಡುವೆ ಹರ್ಷಿತ್ ಬಳಸುತ್ತಿದ್ದ ದ್ವಿಚಕ್ರ ವಾಹನ ಉದ್ಯಾವರ ಪಾಪನಾಶಿನಿ ಸೇತುವೆಯ ಮೇಲೆ ಪತ್ತೆಯಾಗಿದ್ದು, ಅವರು ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿತ್ತು.ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ಸ್ಥಳೀಯರು ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಖ್ಯಾತ ಮುಳುಗು ತಜ್ಞ ಈಶ್ವರ್ ಮಲ್ಪೆ ನೇತೃತ್ವದ ತಂಡ ಸೇರಿದಂತೆ ಹಲವರು ನದಿಯಲ್ಲಿ ವ್ಯಾಪಕ ಹುಡುಕಾಟ ನಡೆಸಿದರು. ಅಂತಿಮವಾಗಿ ಸತತ ಕಾರ್ಯಾಚರಣೆಯ ಬಳಿಕ ಯುವಕನ ಮೃತದೇಹ ಪತ್ತೆಯಾಗಿದೆ.ಮೃತ ಹರ್ಷಿತ್ ಶೆಟ್ಟಿ ಅವರು ರಮೇಶ್…

Read More