- ಮಂಗಳೂರು ಪಶ್ಚಿಮ ವಲಯದ ಐಜಿಪಿ ಅಮಿತ್ ಸಿಂಗ್ ವರ್ಗಾವಣೆ – ಆರ್. ಚೇತನ್ ನೂತನ ಡಿಐಜಿಯಾಗಿ ನೇಮಕ
- ಕಾನ್ಪುರ ತರಬೇತಿ ವಿಮಾನ ದುರಂತ – ಕರ್ನಾಟಕದ ಯುವ ಪೈಲಟ್ ಸಾವು
- ಶೃಂಗೇರಿ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ಶ್ರೀ ದುರ್ಗಾನಂದ ಸ್ವಾಮೀಜಿಗೆ ಮಂತ್ರೋಪದೇಶ
- ಗುರು ವಂದನಾ: ಡಾ. ಸಿಸ್ಟರ್ ಸಾಧನಾ ಅವರಿಗೆ ‘ಅಧ್ಯಕ್ಷ ಆಚಾರ್ಯ’ ಪ್ರಶಸ್ತಿ ಶಿಕ್ಷಣ ಕ್ಷೇತ್ರದ ಸಮರ್ಪಣೆ, ಶೈಕ್ಷಣಿಕ ನಾಯಕತ್ವ ಹಾಗೂ ಆಡಳಿತ ಸೇವೆಗೆ ಸಂದ ಗೌರವ
- ಮುಡಾಗೆ ನೂತನ ಅಧ್ಯಕ್ಷರ ನೇಮಕ ,ಸದಾಶಿವ ಉಲ್ಲಾಳ್ ಬದಲಿಗೆ ಸಂತೋಷ್ ಕುಮಾರ್ ಶೆಟ್ಟಿ ಅಧಿಕಾರಕ್ಕೆ
- ವಾಮಂಜೂರಿನಲ್ಲಿ ‘ರೇ ಫಿಯೆಸ್ಟಾ 2K26’ ಸಂಭ್ರಮ ವಿದ್ಯಾರ್ಥಿಗಳ ಪ್ರತಿಭೆ, ಸೃಜನಶೀಲತೆ ಹಾಗೂ ಆತ್ಮವಿಶ್ವಾಸ ಅನಾವರಣ
- ಆಗಸ್ಟ್29ರಂದು ಆತ್ಮಾಶಕ್ತಿ ಸಹಕಾರ ಸಂಘದಲ್ಲಿ ಸಹಕಾರ ಸಂಘಗಳ ಕಾನೂನು, ಭದ್ರತೆ, ಸುರಕ್ಷತೆ ಕುರಿತು ಅರಿವು ಕಾರ್ಯಕ್ರಮ
- ಹೊಟೇಲ್ ನ್ಯೂ ಜಯಭಾರತ್ ಫ್ಯಾಮಿಲಿ ರೆಸ್ಟೋರೆಂಟ್ಗೆ ಆಗಸ್ಟ್ 28ರಂದು ಚಾಲನೆ
Author: Tulunada Surya
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಆಡಳಿತಾತ್ಮಕ ಬದಲಾವಣೆ ನಡೆದಿದ್ದು, ಹಲವು ಹಿರಿಯ ಐಪಿಎಸ್ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವರ್ಗಾವಣೆ ಆದೇಶದನ್ವಯ ಮಂಗಳೂರು ಪಶ್ಚಿಮ ವಲಯದ ಐಜಿಪಿಯಾಗಿ (IGP) ಕಾರ್ಯನಿರ್ವಹಿಸುತ್ತಿದ್ದ ಅಮಿತ್ ಸಿಂಗ್, IPS (KN 2007) ಅವರನ್ನು ಕರ್ನಾಟಕ ರಾಜ್ಯ ಮೀಸಲು ಪೊಲೀಸ್ನ (KSRP) ಐಜಿಪಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಅಮಿತ್ ಸಿಂಗ್ ಅವರ ಸ್ಥಾನಕ್ಕೆ ಆರ್. ಚೇತನ್, IPS (KN 2010) ಅವರನ್ನು ಮಂಗಳೂರು ಪಶ್ಚಿಮ ವಲಯದ ಡಿಐಜಿ (DIG) ಆಗಿ ನೇಮಕ ಮಾಡಲಾಗಿದೆ. ರಾಜ್ಯ ಸರ್ಕಾರದ ಆದೇಶದಂತೆ ಈ ವರ್ಗಾವಣೆ ಹಾಗೂ ನೇಮಕಾತಿಗಳು ತಕ್ಷಣದಿಂದ ಜಾರಿಗೆ ಬರಲಿವೆ. ಈ ಮೂಲಕ ಮಂಗಳೂರು ಪಶ್ಚಿಮ ವಲಯದ ಪೊಲೀಸ್ ಆಡಳಿತದಲ್ಲಿ ಮಹತ್ವದ ಬದಲಾವಣೆ ಸಂಭವಿಸಿದೆ. ಮಂಗಳೂರು ಪಶ್ಚಿಮ ವಲಯ ವ್ಯಾಪ್ತಿಯ ಪೊಲೀಸ್ ಆಡಳಿತ, ಕಾನೂನು ಮತ್ತು ಸುವ್ಯವಸ್ಥೆ ಹಾಗೂ ವಿವಿಧ ಭದ್ರತಾ ಕಾರ್ಯಚಟುವಟಿಕೆಗಳ ಮೇಲ್ವಿಚಾರಣೆಯಲ್ಲಿ ನೂತನ ಡಿಐಜಿ ಆರ್. ಚೇತನ್…
ಕಾನ್ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಕಾನ್ಪುರದಲ್ಲಿ ಗುರುವಾರ ಸಂಭವಿಸಿದ ತರಬೇತಿ ವಿಮಾನ ಅಪಘಾತದಲ್ಲಿ ಕರ್ನಾಟಕದ ಉಡುಪಿ ಮೂಲದ ಯುವ ತರಬೇತಿ ಪೈಲಟ್ ಸೇರಿದಂತೆ ಇಬ್ಬರು ದುರ್ಮರಣಕ್ಕೀಡಾಗಿದ್ದಾರೆ. ಗಂಗಾ ನದಿ ತೀರದ ನತ್ತುಪುರವಾ ಗ್ರಾಮದ ಗಂಗಾ ಬ್ಯಾರೇಜ್ ಪ್ರದೇಶದಲ್ಲಿ ಈ ಡಬಲ್ ಎಂಜಿನ್ ವಿಮಾನ ಪತನಗೊಂಡಿದೆ. ಮೃತರನ್ನು ಉಡುಪಿ ಜಿಲ್ಲೆಯ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಕಣಜಾರು ಗ್ರಾಮದ ಕಡೇಬೆರ್ಕೆ ಮೂಲದ ಅಭಿಷೇಕ್ ಪೂಜಾರಿ ಎಂದು ಗುರುತಿಸಲಾಗಿದೆ. ಅಭಿಷೇಕ್ ಪೂಜಾರಿ ಹಿನ್ನೆಲೆ: ಕಳೆದ ಎರಡೂವರೆ ವರ್ಷಗಳಿಂದ ಕಾನ್ಪುರದಲ್ಲಿ ಖಾಸಗಿ ವಿಮಾನಯಾನ ತರಬೇತಿ ಕೇಂದ್ರದಲ್ಲಿ ಟ್ರೈನಿ ಪೈಲಟ್ ಆಗಿ ತರಬೇತಿ ಪಡೆಯುತ್ತಿದ್ದರು. ಇವರ ಪೋಷಕರಾದ ಪ್ರಭಾಕರ ಪೂಜಾರಿ ಹಾಗೂ ಶಶಿಕಲಾ ಪೂಜಾರಿ ಮುಂಬೈನಲ್ಲಿ ನೆಲೆಸಿದ್ದಾರೆ. ಅಭಿಷೇಕ್ ಆಗಾಗ್ಗೆ ತಮ್ಮ ಕುಟುಂಬದೊಂದಿಗೆ ಹಿರಿಯಡ್ಕ ಕಣಜಾರುವಿನಲ್ಲಿರುವ ಮಾವ ಜೀವನ್ ಕುಮಾರ್ ಅವರ ಮನೆಗೆ ಭೇಟಿ ನೀಡುತ್ತಿದ್ದರು. ಘಟನೆಯ ವಿವರ: ಪೊಲೀಸ್ ಆಯುಕ್ತ ರಘುಬೀರ್ ಲಾಲ್ ಅವರ ಮಾಹಿತಿ ಪ್ರಕಾರ, ಆಗಸ್ಟ್ 27 ರಂದು ಬೆಳಿಗ್ಗೆ ಸುಮಾರು…
ಶೃಂಗೇರಿ: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕೊಂಡಾಣದ ಶ್ರೀ ಶಿವ ದುರ್ಗಾಂಭ ಮಠ ಶಿವಗಿರಿಯ ಪರಮಪೂಜ್ಯ ಶ್ರೀ ಶ್ರೀ ಶ್ರೀ ಶಿವಯೋಗಿ ದುರ್ಗಾನಂದ ಸ್ವಾಮೀಜಿಯವರು, ಶೃಂಗೇರಿ ಜಗದ್ಗುರು ಶ್ರೀ ಶ್ರೀ ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ಮಂತ್ರೋಪದೇಶವನ್ನು ಸ್ವೀಕರಿಸಿದ ಪಾವನ ಸಂದರ್ಭವು ಭಕ್ತರು ಹಾಗೂ ಅನುಯಾಯಿಗಳ ಪಾಲಿಗೆ ಅತ್ಯಂತ ಸಂತೋಷ, ಭಕ್ತಿಭಾವ ಮತ್ತು ಹೆಮ್ಮೆಯ ಕ್ಷಣವಾಗಿ ಪರಿಣಮಿಸಿತು. ಬಹುಕಾಲದಿಂದ ನಿರೀಕ್ಷಿಸಲಾಗುತ್ತಿದ್ದ ಈ ಶುಭ ಸಂದರ್ಭದಲ್ಲಿ ಜಗದ್ಗುರುಗಳ ಪಾವನ ಸಾನ್ನಿಧ್ಯದಲ್ಲಿ ಮಂತ್ರೋಪದೇಶವನ್ನು ಸ್ವೀಕರಿಸಿದ ಶ್ರೀ ದುರ್ಗಾನಂದ ಸ್ವಾಮೀಜಿಯವರ ಆಧ್ಯಾತ್ಮಿಕ ಪಯಣವು ಮತ್ತಷ್ಟು ಶ್ರೇಯಸ್ಸು, ಶಕ್ತಿ ಹಾಗೂ ಲೋಕಕಲ್ಯಾಣದ ಸಂಕಲ್ಪದೊಂದಿಗೆ ಮುಂದುವರಿಯಲಿ ಎಂದು ಭಕ್ತರು ಪ್ರಾರ್ಥಿಸಿದರು. ಜಗದ್ಗುರುಗಳ ಆಶೀರ್ವಾದ ಹಾಗೂ ಅನುಗ್ರಹದೊಂದಿಗೆ ನಡೆದ ಈ ಧಾರ್ಮಿಕ ಹಾಗೂ ಆಧ್ಯಾತ್ಮಿಕ ಕ್ಷಣವು ಶ್ರೀ ಶಿವ ದುರ್ಗಾಂಭ ಕ್ಷೇತ್ರದ ಭಕ್ತರಿಗೆ ವಿಶೇಷ ಮಹತ್ವವನ್ನು ಪಡೆದುಕೊಂಡಿದೆ. ಈ ಪವಿತ್ರ ಸಂದರ್ಭಕ್ಕೆ ಸಾಕ್ಷಿಯಾದ ಭಕ್ತರು ಹಾಗೂ ಗಣ್ಯರು ತಮ್ಮ ಸಂತಸವನ್ನು ವ್ಯಕ್ತಪಡಿಸಿ, ಶ್ರೀ ದುರ್ಗಾನಂದ ಸ್ವಾಮೀಜಿಯವರಿಗೆ…
ಮಂಗಳೂರು: ವಾಮಂಜೂರಿನ ಸೇಂಟ್ ರೇಮಂಡ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಿಸ್ಟರ್ ಡಾ. ಸಾಧನಾ ಅವರಿಗೆ ಪ್ರತಿಷ್ಠಿತ WIN Foundation ವತಿಯಿಂದ ಶಿಕ್ಷಣ ಕ್ಷೇತ್ರದ ಗಣನೀಯ ಸೇವೆ ಹಾಗೂ ಶೈಕ್ಷಣಿಕ ನಾಯಕತ್ವವನ್ನು ಗುರುತಿಸಿ ‘ಅಧ್ಯಕ್ಷ ಆಚಾರ್ಯ’ (Adhyaksha Acharya) ಪ್ರಶಸ್ತಿ ನೀಡಿ ಗೌರವಿಸಲಾಗಿದೆ. 2026ರ ಆಗಸ್ಟ್ 15ರಂದು ಸ್ವಾತಂತ್ರ್ಯೋತ್ಸವದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಶಿಕ್ಷಣ ಕ್ಷೇತ್ರದಲ್ಲಿ ಸಿಸ್ಟರ್ ಡಾ. ಸಾಧನಾ ಅವರು ತೋರುತ್ತಿರುವ ಅದ್ವಿತೀಯ ಸಮರ್ಪಣೆ, ಪರಿಣಾಮಕಾರಿ ಆಡಳಿತ, ಶೈಕ್ಷಣಿಕ ನಾಯಕತ್ವ ಹಾಗೂ ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಗೆ ನೀಡುತ್ತಿರುವ ಕೊಡುಗೆಯನ್ನು ಪರಿಗಣಿಸಿ ಈ ಗೌರವಕ್ಕೆ ಆಯ್ಕೆ ಮಾಡಲಾಗಿದೆ. ಬೆಥನಿ ಸಿಸ್ಟರ್ ಆಗಿರುವ ಸಿಸ್ಟರ್ ಡಾ. ಸಾಧನಾ ಅವರು ವಿದ್ಯಾರ್ಥಿಗಳಲ್ಲಿ ಶೈಕ್ಷಣಿಕ ಜ್ಞಾನ ಮಾತ್ರವಲ್ಲದೆ, ಮೌಲ್ಯಗಳು, ಶಿಸ್ತು, ವ್ಯಕ್ತಿತ್ವ ವಿಕಸನ ಹಾಗೂ ಸಾಮಾಜಿಕ ಹೊಣೆಗಾರಿಕೆಯ ಮನೋಭಾವ ಬೆಳೆಸುವ ನಿಟ್ಟಿನಲ್ಲಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಅವರ ನಾಯಕತ್ವದಲ್ಲಿ ಸಂಸ್ಥೆಯ ಶೈಕ್ಷಣಿಕ ಗುಣಮಟ್ಟ ಹಾಗೂ ವಿವಿಧ ಅಭಿವೃದ್ಧಿ ಚಟುವಟಿಕೆಗಳಿಗೆ ಹೆಚ್ಚಿನ ಒತ್ತು…
ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ಕ್ಕೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಮಂಗಳೂರಿನ ಕೊಟ್ಟಾರ ನಿವಾಸಿ ಸಂತೋಷ್ ಕುಮಾರ್ ಶೆಟ್ಟಿ, ಬಿನ್ ಕೆ. ರಾಘವ ಶೆಟ್ಟಿ ಅವರನ್ನು ಮುಡಾ ಅಧ್ಯಕ್ಷರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ. ಈ ಹಿಂದೆ ಮುಡಾ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ ಸದಾಶಿವ ಉಲ್ಲಾಳ್ ಅವರ ಸ್ಥಾನಕ್ಕೆ ಸಂತೋಷ್ ಕುಮಾರ್ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ. ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ಕಾಯ್ದೆ, 1987ರ ಕಲಂ 3ರ ಉಪಕಲಂ 3(ಎ) ಹಾಗೂ 3(4)ರ ಅಡಿಯಲ್ಲಿ ಸರ್ಕಾರಕ್ಕೆ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ಈ ನೇಮಕಾತಿ ಮಾಡಲಾಗಿದೆ. ಆಗಸ್ಟ್ 29, 2026ರಿಂದಲೇ ನೇಮಕಾತಿ ಜಾರಿಗೆ ಬರಲಿದ್ದು, ಸರ್ಕಾರದ ಮುಂದಿನ ಆದೇಶ ಹೊರಬರುವವರೆಗೆ ಸಂತೋಷ್ ಕುಮಾರ್ ಶೆಟ್ಟಿ ಅವರು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ. ಈ ಕುರಿತು ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಲತಾ ಕೆ. ಅವರು ಅಧಿಸೂಚನೆ ಹೊರಡಿಸಿದ್ದಾರೆ. ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆಯ ಪ್ರತಿಯನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ…
ಮಂಗಳೂರು, ಆ.29: ವಾಮಂಜೂರಿನ ಸೇಂಟ್ ರೇಮಂಡ್ ಪದವಿಪೂರ್ವ ಕಾಲೇಜಿನ ವತಿಯಿಂದ ವಿದ್ಯಾರ್ಥಿಗಳ ಪ್ರತಿಭೆ, ಸೃಜನಶೀಲತೆ, ಆತ್ಮವಿಶ್ವಾಸ ಹಾಗೂ ತಂಡದ ಮನೋಭಾವವನ್ನು ಅನಾವರಣಗೊಳಿಸುವ ಉದ್ದೇಶದಿಂದ ‘ರೇ ಫಿಯೆಸ್ಟಾ 2K26 – ಪ್ರತಿಭಾ ಉತ್ಸವ’ ಕಾರ್ಯಕ್ರಮವನ್ನು ಶನಿವಾರ ಕಾಲೇಜು ಆವರಣದಲ್ಲಿ ಸಂಭ್ರಮದಿಂದ ಆಯೋಜಿಸಲಾಯಿತು. “ಪ್ರತಿಭೆಯನ್ನು ಅನಾವರಣಗೊಳಿಸಿ, ಜಗತ್ತಿಗೆ ಸ್ಫೂರ್ತಿ ನೀಡಿ” ಎಂಬ ಆಶಯದೊಂದಿಗೆ ನಡೆದ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಅಡಗಿರುವ ವಿವಿಧ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವುದರ ಜೊತೆಗೆ, ಆರೋಗ್ಯಕರ ಸ್ಪರ್ಧೆ, ಸಹಕಾರ ಮತ್ತು ಪರಸ್ಪರ ಮೆಚ್ಚುಗೆಯ ಮನೋಭಾವವನ್ನು ಬೆಳೆಸುವಲ್ಲಿ ಯಶಸ್ವಿಯಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೆವರೆಂಡ್ ಸಿಸ್ಟರ್ ಡಾ. ಸಾಧನಾ ಬಿ.ಎಸ್. ವಹಿಸಿದ್ದರು. ಅಧ್ಯಕ್ಷೀಯ ಭಾಷಣದಲ್ಲಿ ಅವರು ರೇ ಫಿಯೆಸ್ಟಾ 2K26ರ ಯಶಸ್ವಿ ಆಯೋಜನೆಗೆ ಶ್ರಮಿಸಿದ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯನ್ನು ಅಭಿನಂದಿಸಿದರು. ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಯನ್ನು ಗುರುತಿಸಿ, ಶಿಸ್ತು, ಸಮರ್ಪಣೆ ಮತ್ತು ಆತ್ಮವಿಶ್ವಾಸದಿಂದ ಅದನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು. ಶಿಕ್ಷಣವು ಕೇವಲ ಪಠ್ಯಾಧಾರಿತ ಜ್ಞಾನಕ್ಕೆ ಸೀಮಿತವಾಗಿರದೆ, ಸೃಜನಶೀಲತೆ, ನಾಯಕತ್ವ, ತಂಡದ ಕಾರ್ಯಕ್ಷಮತೆ ಹಾಗೂ ಉತ್ತಮ ವ್ಯಕ್ತಿತ್ವ…
ಮಂಗಳೂರು: ಸಹಕಾರ ಸಂಘಗಳ ಕಾನೂನು, ಭದ್ರತೆ ಹಾಗೂ ಸುರಕ್ಷತಾ ಕ್ರಮಗಳ ಕುರಿತು ಸಹಕಾರಿ ಸಂಘಗಳ ಆಡಳಿತ ಮಂಡಳಿ, ಅಧಿಕಾರಿಗಳು ಹಾಗೂ ಸಿಬ್ಬಂದಿಯಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಆಗಸ್ಟ್ 29ರಂದು ಮಂಗಳೂರಿನ ಆತ್ಮಾಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಪ್ರಧಾನ ಕಚೇರಿಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸಹಕಾರ ಸಂಘಗಳಿಗೆ ವಿಶೇಷ ಅರಿವು ಕಾರ್ಯಕ್ರಮ ಆಯೋಜಿಸಲಾಗಿದೆ. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಂಗಳೂರು ಇವರ ಸಹಯೋಗದೊಂದಿಗೆ ಆತ್ಮಾಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಪಡೀಲ್, ಮಂಗಳೂರು ಇದರ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ 10 ಗಂಟೆಗೆ ಆತ್ಮಾಶಕ್ತಿ ಸೌಧದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸಹಕಾರ ಸಂಘಗಳಿಗೆ ಸಂಬಂಧಿಸಿದ ಕಾನೂನು ವಿಚಾರಗಳು, ಸಂಘಗಳ ಭದ್ರತೆ ಮತ್ತು ಸುರಕ್ಷತಾ ಕ್ರಮಗಳು, ಕಾನೂನು ಸಮಸ್ಯೆಗಳಿಗೆ ಲಭ್ಯವಿರುವ ನೆರವು ಹಾಗೂ ಸಹಕಾರ ಸಂಘಗಳ ಸುಭದ್ರತೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ತಜ್ಞರಿಂದ ಮಾಹಿತಿ ನೀಡಲಾಗುವುದು.…
ಮಂಗಳೂರು: ಬಿಜೈ ಕಾಪಿಕಾಡ್ ರಸ್ತೆಯ ಜಯಲಕ್ಷ್ಮೀ–ಶೀಲಾ ಸಮೀಪದಲ್ಲಿ ನೂತನವಾಗಿ ಆರಂಭಗೊಳ್ಳಲಿರುವ ‘ಹೊಟೇಲ್ ನ್ಯೂ ಜಯಭಾರತ್’ ಫ್ಯಾಮಿಲಿ ರೆಸ್ಟೋರೆಂಟ್ನ ಉದ್ಘಾಟನಾ ಸಮಾರಂಭವು ಆಗಸ್ಟ್ 28, 2026ರಂದು ಶುಕ್ರವಾರ ಬೆಳಗ್ಗೆ 9 ಗಂಟೆಗೆ ನಡೆಯಲಿದೆ. ಗ್ರಾಹಕರಿಗೆ ಉತ್ತಮ ಗುಣಮಟ್ಟದ ಆಹಾರ, ರುಚಿಕರವಾದ ತಿನಿಸುಗಳು ಹಾಗೂ ಆತ್ಮೀಯ ಸೇವೆಯನ್ನು ಒದಗಿಸುವ ಉದ್ದೇಶದಿಂದ ಈ ನೂತನ ಫ್ಯಾಮಿಲಿ ರೆಸ್ಟೋರೆಂಟ್ನ್ನು ಆರಂಭಿಸಲಾಗುತ್ತಿದೆ. ಕುಟುಂಬ ಸಮೇತವಾಗಿ ಆಗಮಿಸಿ ಆಹಾರದ ಸವಿಯನ್ನು ಸವಿಯಲು ಅನುಕೂಲವಾಗುವಂತೆ ರೆಸ್ಟೋರೆಂಟ್ನ್ನು ರೂಪಿಸಲಾಗಿದೆ. ಉದ್ಘಾಟನಾ ಸಮಾರಂಭದಲ್ಲಿ ಗಣ್ಯರ ಉಪಸ್ಥಿತಿ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಿ ನೂತನ ರೆಸ್ಟೋರೆಂಟ್ಗೆ ಶುಭ ಹಾರೈಸಲಿದ್ದಾರೆ. ಶ್ರೀ ವಸಂತ್ ಪೂಜಾರಿ, ಅಧ್ಯಕ್ಷರು, ಉಡುಪಿ ವ್ಯವಸಾಯಿಕರ ಸಹಕಾರಿ ಸಂಘ ಹಾಗೂ ಕ್ಷೇತ್ರಕಲಾ ಗರಡಿ ಪರವಾರ ಮತ್ತು ದೈವಗಳ ಸೇವಾ ಟ್ರಸ್ಟ್, ಪಾಲೆಗುತ್ತು ಅವರು ಉದ್ಘಾಟನಾ ಸಮಾರಂಭದಲ್ಲಿ ಉಪಸ್ಥಿತರಿರುವರು. ಶ್ರೀ ಜನಾರ್ದನ ಪೂಜಾರಿ, ಅಧ್ಯಕ್ಷರು, ವೈದ್ಯನಾಥೇಶ್ವರ ದೈವಸ್ಥಾನ, ಪಾಲೆಗುತ್ತು; ಶ್ರೀ ಲಕ್ಷ್ಮಣ ಪೂಜಾರಿ ಬಾಳಿಗುಟ್ಟು, ಪಟೇಲರು, ಅನಂತಾತಿ ಉಳ್ಳಾಳ ಧೈವಸ್ಥಾನ; ಶ್ರೀ ಶ್ರೀಕಾಂತ್ ಪೂಜಾರಿ…
ಸುಳ್ಯ: ಸಾಮಾಜಿಕ ಸೇವೆ, ಸಂಘಟನಾ ಚಟುವಟಿಕೆ ಹಾಗೂ ಸಾರ್ವಜನಿಕ ಜೀವನದಲ್ಲಿ ಸಲ್ಲಿಸಿರುವ ಗಮನಾರ್ಹ ಸೇವೆಯನ್ನು ಗುರುತಿಸಿ ಸುಳ್ಯ ಪಯಸ್ವಿನಿ ಜೆಸಿಐನ ಮಾಜಿ ಅಧ್ಯಕ್ಷ, ಸುಳ್ಯ ಲಯನ್ಸ್ ಕ್ಲಬ್ನ ಮಾಜಿ ಅಧ್ಯಕ್ಷ, ಲಯನ್ಸ್ ಜಿಲ್ಲಾ ಮಾಜಿ ರಾಜ್ಯಪಾಲ ಹಾಗೂ ಎಂ.ಬಿ. ಫೌಂಡೇಶನ್ ಅಧ್ಯಕ್ಷ ಎಂ.ಬಿ. ಸದಾಶಿವ ಅವರಿಗೆ ಜೆಸಿಐ ಸುಳ್ಯ ಸಿಟಿ ವತಿಯಿಂದ ಪ್ರತಿಷ್ಠಿತ ‘ಇನ್ಸ್ಪೈರ್ ಅವಾರ್ಡ್’ ಪ್ರದಾನ ಮಾಡಲಾಗುತ್ತಿದೆ. ವಿವಿಧ ಸಾಮಾಜಿಕ ಹಾಗೂ ಸೇವಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಎಂ.ಬಿ. ಸದಾಶಿವ ಅವರು ಜೆಸಿಐ ಹಾಗೂ ಲಯನ್ಸ್ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಮೂಲಕ ಸಮಾಜಮುಖಿ ಕಾರ್ಯಗಳಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಸಂಘಟನಾ ಕ್ಷೇತ್ರದಲ್ಲಿ ವಿವಿಧ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸುವ ಮೂಲಕ ಸೇವಾ ಮನೋಭಾವ ಹಾಗೂ ನಾಯಕತ್ವದ ಗುಣಗಳನ್ನು ಪ್ರದರ್ಶಿಸಿರುವ ಅವರ ಸಾಧನೆಯನ್ನು ಗುರುತಿಸಿ ಈ ಗೌರವವನ್ನು ನೀಡಲಾಗುತ್ತಿದೆ. ಆ.29ರಂದು ಪ್ರಶಸ್ತಿ ಪ್ರದಾನ ಆಗಸ್ಟ್ 29ರಂದು ಸಂಜೆ ಪರಿವಾರಕಾನನದ ಉಡುಪಿ ಗಾರ್ಡನ್ ಗ್ರ್ಯಾಂಡ್ ಪಾರಿವಾರ್ ಸಭಾಭವನದಲ್ಲಿ ನಡೆಯಲಿರುವ ವಿಶೇಷ ಕಾರ್ಯಕ್ರಮದಲ್ಲಿ ಎಂ.ಬಿ.…
ಸಾಮಾಜಿಕಮುಖಿ ಕೆಲಸ ಕಾರ್ಯಗಳಿಂದ ಸಂಘ ಸಂಸ್ಥೆಗಳು ಬಲಿಷ್ಠವಾಗಿ ಬೆಳೆಯಲು ಸಾಧ್ಯ: ಡಾ. ಅತ್ತೂರು ಸದಾನಂದ ಶೆಟ್ಟಿ ಮಂಗಳೂರು: ಸಾರ್ವಜನಿಕ ಸೇವಾ ಸಂಘ ಸಂಸ್ಥೆಗಳ ನಿರಂತರ ಸಾಮಾಜಿಕಮುಖಿ ಕೆಲಸ ಕಾರ್ಯಗಳಿಂದ ಸಂಘಟನೆಗಳು ಬಲಿಷ್ಠವಾಗಿ ಬೆಳೆಯಲು ಸಾಧ್ಯ. ಈ ನಿಟ್ಟಿನಲ್ಲಿ ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಕಾರ್ಯಕ್ರಮಗಳ ಯಶಸ್ಸಿನಲ್ಲಿ ನಾವೆಲ್ಲರೂ ಜೊತೆಯಾಗಿ ಕೆಲಸ ಮಾಡಬೇಕಾಗಿದೆ ಎಂದು ಇಂಟರ್ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ನ ಸ್ಥಾಪಕ ಅಧ್ಯಕ್ಷ ಡಾ. ಅತ್ತೂರು ಸದಾನಂದ ಶೆಟ್ಟಿ ಅಭಿಪ್ರಾಯಪಟ್ಟರು. ಗ್ರ್ಯಾಂಡ್ ಬೇ ಮರವುರಿನಲ್ಲಿ ನಡೆದ ಮರಿಯಾಳದ ಮಿನದನ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮುಖ್ಯ ಅತಿಥಿಯಾಗಿ ಮಾತನಾಡಿದ ಕರುಣಾಕರ ಎಂ. ಶೆಟ್ಟಿ, ಮಧ್ಯಗುತುತ್ತು, ವಿ.ಕೆ. ಗ್ರೂಪ್ನ ವ್ಯವಸ್ಥಾಪಕ ನಿರ್ದೇಶಕರು, ಮುಂಬೈ, ಅವರು ಮಾತನಾಡಿ, ಹಲವಾರು ವರ್ಷಗಳಿಂದ ಇಂಟರ್ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ನಮ್ಮ ಸಂಸ್ಕೃತಿ ಹಾಗೂ ಸಂಪ್ರದಾಯ ಉಳಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಹಾಗೂ ಸಮಾರಂಭಗಳನ್ನು ನಡೆಸುತ್ತಿರುವುದು ಶ್ಲಾಘನೀಯ. ಯುವ ಪ್ರತಿಭೆಗಳನ್ನು ಗುರುತಿಸಿ, ಅವರನ್ನು ಉಳಿಸಿ ಬೆಳೆಸುವಲ್ಲಿ ನಾವೆಲ್ಲರೂ…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
