Author: Tulunada Surya

ಮಂಗಳೂರು: ವಾಮಂಜೂರಿನ ಸೇಂಟ್ ರೇಮಂಡ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಿಸ್ಟರ್ ಡಾ. ಸಾಧನಾ ಅವರಿಗೆ ಪ್ರತಿಷ್ಠಿತ WIN Foundation ವತಿಯಿಂದ ಶಿಕ್ಷಣ ಕ್ಷೇತ್ರದ ಗಣನೀಯ ಸೇವೆ ಹಾಗೂ ಶೈಕ್ಷಣಿಕ ನಾಯಕತ್ವವನ್ನು ಗುರುತಿಸಿ ‘ಅಧ್ಯಕ್ಷ ಆಚಾರ್ಯ’ (Adhyaksha Acharya) ಪ್ರಶಸ್ತಿ ನೀಡಿ ಗೌರವಿಸಲಾಗಿದೆ. 2026ರ ಆಗಸ್ಟ್ 15ರಂದು ಸ್ವಾತಂತ್ರ್ಯೋತ್ಸವದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಶಿಕ್ಷಣ ಕ್ಷೇತ್ರದಲ್ಲಿ ಸಿಸ್ಟರ್ ಡಾ. ಸಾಧನಾ ಅವರು ತೋರುತ್ತಿರುವ ಅದ್ವಿತೀಯ ಸಮರ್ಪಣೆ, ಪರಿಣಾಮಕಾರಿ ಆಡಳಿತ, ಶೈಕ್ಷಣಿಕ ನಾಯಕತ್ವ ಹಾಗೂ ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಗೆ ನೀಡುತ್ತಿರುವ ಕೊಡುಗೆಯನ್ನು ಪರಿಗಣಿಸಿ ಈ ಗೌರವಕ್ಕೆ ಆಯ್ಕೆ ಮಾಡಲಾಗಿದೆ. ಬೆಥನಿ ಸಿಸ್ಟರ್ ಆಗಿರುವ ಸಿಸ್ಟರ್ ಡಾ. ಸಾಧನಾ ಅವರು ವಿದ್ಯಾರ್ಥಿಗಳಲ್ಲಿ ಶೈಕ್ಷಣಿಕ ಜ್ಞಾನ ಮಾತ್ರವಲ್ಲದೆ, ಮೌಲ್ಯಗಳು, ಶಿಸ್ತು, ವ್ಯಕ್ತಿತ್ವ ವಿಕಸನ ಹಾಗೂ ಸಾಮಾಜಿಕ ಹೊಣೆಗಾರಿಕೆಯ ಮನೋಭಾವ ಬೆಳೆಸುವ ನಿಟ್ಟಿನಲ್ಲಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಅವರ ನಾಯಕತ್ವದಲ್ಲಿ ಸಂಸ್ಥೆಯ ಶೈಕ್ಷಣಿಕ ಗುಣಮಟ್ಟ ಹಾಗೂ ವಿವಿಧ ಅಭಿವೃದ್ಧಿ ಚಟುವಟಿಕೆಗಳಿಗೆ ಹೆಚ್ಚಿನ ಒತ್ತು…

Read More

ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ಕ್ಕೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಮಂಗಳೂರಿನ ಕೊಟ್ಟಾರ ನಿವಾಸಿ ಸಂತೋಷ್ ಕುಮಾರ್ ಶೆಟ್ಟಿ, ಬಿನ್ ಕೆ. ರಾಘವ ಶೆಟ್ಟಿ ಅವರನ್ನು ಮುಡಾ ಅಧ್ಯಕ್ಷರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ. ಈ ಹಿಂದೆ ಮುಡಾ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ ಸದಾಶಿವ ಉಲ್ಲಾಳ್ ಅವರ ಸ್ಥಾನಕ್ಕೆ ಸಂತೋಷ್ ಕುಮಾರ್ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ. ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ಕಾಯ್ದೆ, 1987ರ ಕಲಂ 3ರ ಉಪಕಲಂ 3(ಎ) ಹಾಗೂ 3(4)ರ ಅಡಿಯಲ್ಲಿ ಸರ್ಕಾರಕ್ಕೆ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ಈ ನೇಮಕಾತಿ ಮಾಡಲಾಗಿದೆ. ಆಗಸ್ಟ್ 29, 2026ರಿಂದಲೇ ನೇಮಕಾತಿ ಜಾರಿಗೆ ಬರಲಿದ್ದು, ಸರ್ಕಾರದ ಮುಂದಿನ ಆದೇಶ ಹೊರಬರುವವರೆಗೆ ಸಂತೋಷ್ ಕುಮಾರ್ ಶೆಟ್ಟಿ ಅವರು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ. ಈ ಕುರಿತು ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಲತಾ ಕೆ. ಅವರು ಅಧಿಸೂಚನೆ ಹೊರಡಿಸಿದ್ದಾರೆ. ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆಯ ಪ್ರತಿಯನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ…

Read More

ಮಂಗಳೂರು, ಆ.29: ವಾಮಂಜೂರಿನ ಸೇಂಟ್ ರೇಮಂಡ್ ಪದವಿಪೂರ್ವ ಕಾಲೇಜಿನ ವತಿಯಿಂದ ವಿದ್ಯಾರ್ಥಿಗಳ ಪ್ರತಿಭೆ, ಸೃಜನಶೀಲತೆ, ಆತ್ಮವಿಶ್ವಾಸ ಹಾಗೂ ತಂಡದ ಮನೋಭಾವವನ್ನು ಅನಾವರಣಗೊಳಿಸುವ ಉದ್ದೇಶದಿಂದ ‘ರೇ ಫಿಯೆಸ್ಟಾ 2K26 – ಪ್ರತಿಭಾ ಉತ್ಸವ’ ಕಾರ್ಯಕ್ರಮವನ್ನು ಶನಿವಾರ ಕಾಲೇಜು ಆವರಣದಲ್ಲಿ ಸಂಭ್ರಮದಿಂದ ಆಯೋಜಿಸಲಾಯಿತು. “ಪ್ರತಿಭೆಯನ್ನು ಅನಾವರಣಗೊಳಿಸಿ, ಜಗತ್ತಿಗೆ ಸ್ಫೂರ್ತಿ ನೀಡಿ” ಎಂಬ ಆಶಯದೊಂದಿಗೆ ನಡೆದ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಅಡಗಿರುವ ವಿವಿಧ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವುದರ ಜೊತೆಗೆ, ಆರೋಗ್ಯಕರ ಸ್ಪರ್ಧೆ, ಸಹಕಾರ ಮತ್ತು ಪರಸ್ಪರ ಮೆಚ್ಚುಗೆಯ ಮನೋಭಾವವನ್ನು ಬೆಳೆಸುವಲ್ಲಿ ಯಶಸ್ವಿಯಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೆವರೆಂಡ್ ಸಿಸ್ಟರ್ ಡಾ. ಸಾಧನಾ ಬಿ.ಎಸ್. ವಹಿಸಿದ್ದರು. ಅಧ್ಯಕ್ಷೀಯ ಭಾಷಣದಲ್ಲಿ ಅವರು ರೇ ಫಿಯೆಸ್ಟಾ 2K26ರ ಯಶಸ್ವಿ ಆಯೋಜನೆಗೆ ಶ್ರಮಿಸಿದ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯನ್ನು ಅಭಿನಂದಿಸಿದರು. ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಯನ್ನು ಗುರುತಿಸಿ, ಶಿಸ್ತು, ಸಮರ್ಪಣೆ ಮತ್ತು ಆತ್ಮವಿಶ್ವಾಸದಿಂದ ಅದನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು. ಶಿಕ್ಷಣವು ಕೇವಲ ಪಠ್ಯಾಧಾರಿತ ಜ್ಞಾನಕ್ಕೆ ಸೀಮಿತವಾಗಿರದೆ, ಸೃಜನಶೀಲತೆ, ನಾಯಕತ್ವ, ತಂಡದ ಕಾರ್ಯಕ್ಷಮತೆ ಹಾಗೂ ಉತ್ತಮ ವ್ಯಕ್ತಿತ್ವ…

Read More

ಮಂಗಳೂರು: ಸಹಕಾರ ಸಂಘಗಳ ಕಾನೂನು, ಭದ್ರತೆ ಹಾಗೂ ಸುರಕ್ಷತಾ ಕ್ರಮಗಳ ಕುರಿತು ಸಹಕಾರಿ ಸಂಘಗಳ ಆಡಳಿತ ಮಂಡಳಿ, ಅಧಿಕಾರಿಗಳು ಹಾಗೂ ಸಿಬ್ಬಂದಿಯಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಆಗಸ್ಟ್ 29ರಂದು ಮಂಗಳೂರಿನ ಆತ್ಮಾಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಪ್ರಧಾನ ಕಚೇರಿಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸಹಕಾರ ಸಂಘಗಳಿಗೆ ವಿಶೇಷ ಅರಿವು ಕಾರ್ಯಕ್ರಮ ಆಯೋಜಿಸಲಾಗಿದೆ. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಂಗಳೂರು ಇವರ ಸಹಯೋಗದೊಂದಿಗೆ ಆತ್ಮಾಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಪಡೀಲ್, ಮಂಗಳೂರು ಇದರ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ 10 ಗಂಟೆಗೆ ಆತ್ಮಾಶಕ್ತಿ ಸೌಧದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸಹಕಾರ ಸಂಘಗಳಿಗೆ ಸಂಬಂಧಿಸಿದ ಕಾನೂನು ವಿಚಾರಗಳು, ಸಂಘಗಳ ಭದ್ರತೆ ಮತ್ತು ಸುರಕ್ಷತಾ ಕ್ರಮಗಳು, ಕಾನೂನು ಸಮಸ್ಯೆಗಳಿಗೆ ಲಭ್ಯವಿರುವ ನೆರವು ಹಾಗೂ ಸಹಕಾರ ಸಂಘಗಳ ಸುಭದ್ರತೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ತಜ್ಞರಿಂದ ಮಾಹಿತಿ ನೀಡಲಾಗುವುದು.…

Read More

ಮಂಗಳೂರು: ಬಿಜೈ ಕಾಪಿಕಾಡ್ ರಸ್ತೆಯ ಜಯಲಕ್ಷ್ಮೀ–ಶೀಲಾ ಸಮೀಪದಲ್ಲಿ ನೂತನವಾಗಿ ಆರಂಭಗೊಳ್ಳಲಿರುವ ‘ಹೊಟೇಲ್ ನ್ಯೂ ಜಯಭಾರತ್’ ಫ್ಯಾಮಿಲಿ ರೆಸ್ಟೋರೆಂಟ್‌ನ ಉದ್ಘಾಟನಾ ಸಮಾರಂಭವು ಆಗಸ್ಟ್ 28, 2026ರಂದು ಶುಕ್ರವಾರ ಬೆಳಗ್ಗೆ 9 ಗಂಟೆಗೆ ನಡೆಯಲಿದೆ. ಗ್ರಾಹಕರಿಗೆ ಉತ್ತಮ ಗುಣಮಟ್ಟದ ಆಹಾರ, ರುಚಿಕರವಾದ ತಿನಿಸುಗಳು ಹಾಗೂ ಆತ್ಮೀಯ ಸೇವೆಯನ್ನು ಒದಗಿಸುವ ಉದ್ದೇಶದಿಂದ ಈ ನೂತನ ಫ್ಯಾಮಿಲಿ ರೆಸ್ಟೋರೆಂಟ್‌ನ್ನು ಆರಂಭಿಸಲಾಗುತ್ತಿದೆ. ಕುಟುಂಬ ಸಮೇತವಾಗಿ ಆಗಮಿಸಿ ಆಹಾರದ ಸವಿಯನ್ನು ಸವಿಯಲು ಅನುಕೂಲವಾಗುವಂತೆ ರೆಸ್ಟೋರೆಂಟ್‌ನ್ನು ರೂಪಿಸಲಾಗಿದೆ. ಉದ್ಘಾಟನಾ ಸಮಾರಂಭದಲ್ಲಿ ಗಣ್ಯರ ಉಪಸ್ಥಿತಿ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಿ ನೂತನ ರೆಸ್ಟೋರೆಂಟ್‌ಗೆ ಶುಭ ಹಾರೈಸಲಿದ್ದಾರೆ. ಶ್ರೀ ವಸಂತ್ ಪೂಜಾರಿ, ಅಧ್ಯಕ್ಷರು, ಉಡುಪಿ ವ್ಯವಸಾಯಿಕರ ಸಹಕಾರಿ ಸಂಘ ಹಾಗೂ ಕ್ಷೇತ್ರಕಲಾ ಗರಡಿ ಪರವಾರ ಮತ್ತು ದೈವಗಳ ಸೇವಾ ಟ್ರಸ್ಟ್, ಪಾಲೆಗುತ್ತು ಅವರು ಉದ್ಘಾಟನಾ ಸಮಾರಂಭದಲ್ಲಿ ಉಪಸ್ಥಿತರಿರುವರು. ಶ್ರೀ ಜನಾರ್ದನ ಪೂಜಾರಿ, ಅಧ್ಯಕ್ಷರು, ವೈದ್ಯನಾಥೇಶ್ವರ ದೈವಸ್ಥಾನ, ಪಾಲೆಗುತ್ತು; ಶ್ರೀ ಲಕ್ಷ್ಮಣ ಪೂಜಾರಿ ಬಾಳಿಗುಟ್ಟು, ಪಟೇಲರು, ಅನಂತಾತಿ ಉಳ್ಳಾಳ ಧೈವಸ್ಥಾನ; ಶ್ರೀ ಶ್ರೀಕಾಂತ್ ಪೂಜಾರಿ…

Read More

ಸುಳ್ಯ: ಸಾಮಾಜಿಕ ಸೇವೆ, ಸಂಘಟನಾ ಚಟುವಟಿಕೆ ಹಾಗೂ ಸಾರ್ವಜನಿಕ ಜೀವನದಲ್ಲಿ ಸಲ್ಲಿಸಿರುವ ಗಮನಾರ್ಹ ಸೇವೆಯನ್ನು ಗುರುತಿಸಿ ಸುಳ್ಯ ಪಯಸ್ವಿನಿ ಜೆಸಿಐನ ಮಾಜಿ ಅಧ್ಯಕ್ಷ, ಸುಳ್ಯ ಲಯನ್ಸ್ ಕ್ಲಬ್‌ನ ಮಾಜಿ ಅಧ್ಯಕ್ಷ, ಲಯನ್ಸ್ ಜಿಲ್ಲಾ ಮಾಜಿ ರಾಜ್ಯಪಾಲ ಹಾಗೂ ಎಂ.ಬಿ. ಫೌಂಡೇಶನ್ ಅಧ್ಯಕ್ಷ ಎಂ.ಬಿ. ಸದಾಶಿವ ಅವರಿಗೆ ಜೆಸಿಐ ಸುಳ್ಯ ಸಿಟಿ ವತಿಯಿಂದ ಪ್ರತಿಷ್ಠಿತ ‘ಇನ್‌ಸ್ಪೈರ್ ಅವಾರ್ಡ್’ ಪ್ರದಾನ ಮಾಡಲಾಗುತ್ತಿದೆ. ವಿವಿಧ ಸಾಮಾಜಿಕ ಹಾಗೂ ಸೇವಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಎಂ.ಬಿ. ಸದಾಶಿವ ಅವರು ಜೆಸಿಐ ಹಾಗೂ ಲಯನ್ಸ್ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಮೂಲಕ ಸಮಾಜಮುಖಿ ಕಾರ್ಯಗಳಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಸಂಘಟನಾ ಕ್ಷೇತ್ರದಲ್ಲಿ ವಿವಿಧ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸುವ ಮೂಲಕ ಸೇವಾ ಮನೋಭಾವ ಹಾಗೂ ನಾಯಕತ್ವದ ಗುಣಗಳನ್ನು ಪ್ರದರ್ಶಿಸಿರುವ ಅವರ ಸಾಧನೆಯನ್ನು ಗುರುತಿಸಿ ಈ ಗೌರವವನ್ನು ನೀಡಲಾಗುತ್ತಿದೆ. ಆ.29ರಂದು ಪ್ರಶಸ್ತಿ ಪ್ರದಾನ ಆಗಸ್ಟ್ 29ರಂದು ಸಂಜೆ ಪರಿವಾರಕಾನನದ ಉಡುಪಿ ಗಾರ್ಡನ್ ಗ್ರ್ಯಾಂಡ್ ಪಾರಿವಾರ್ ಸಭಾಭವನದಲ್ಲಿ ನಡೆಯಲಿರುವ ವಿಶೇಷ ಕಾರ್ಯಕ್ರಮದಲ್ಲಿ ಎಂ.ಬಿ.…

Read More

ಸಾಮಾಜಿಕಮುಖಿ ಕೆಲಸ ಕಾರ್ಯಗಳಿಂದ ಸಂಘ ಸಂಸ್ಥೆಗಳು ಬಲಿಷ್ಠವಾಗಿ ಬೆಳೆಯಲು ಸಾಧ್ಯ: ಡಾ. ಅತ್ತೂರು ಸದಾನಂದ ಶೆಟ್ಟಿ ಮಂಗಳೂರು: ಸಾರ್ವಜನಿಕ ಸೇವಾ ಸಂಘ ಸಂಸ್ಥೆಗಳ ನಿರಂತರ ಸಾಮಾಜಿಕಮುಖಿ ಕೆಲಸ ಕಾರ್ಯಗಳಿಂದ ಸಂಘಟನೆಗಳು ಬಲಿಷ್ಠವಾಗಿ ಬೆಳೆಯಲು ಸಾಧ್ಯ. ಈ ನಿಟ್ಟಿನಲ್ಲಿ ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಕಾರ್ಯಕ್ರಮಗಳ ಯಶಸ್ಸಿನಲ್ಲಿ ನಾವೆಲ್ಲರೂ ಜೊತೆಯಾಗಿ ಕೆಲಸ ಮಾಡಬೇಕಾಗಿದೆ ಎಂದು ಇಂಟರ್‌ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್‌ನ ಸ್ಥಾಪಕ ಅಧ್ಯಕ್ಷ ಡಾ. ಅತ್ತೂರು ಸದಾನಂದ ಶೆಟ್ಟಿ ಅಭಿಪ್ರಾಯಪಟ್ಟರು. ಗ್ರ್ಯಾಂಡ್ ಬೇ ಮರವುರಿನಲ್ಲಿ ನಡೆದ ಮರಿಯಾಳದ ಮಿನದನ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮುಖ್ಯ ಅತಿಥಿಯಾಗಿ ಮಾತನಾಡಿದ ಕರುಣಾಕರ ಎಂ. ಶೆಟ್ಟಿ, ಮಧ್ಯಗುತುತ್ತು, ವಿ.ಕೆ. ಗ್ರೂಪ್‌ನ ವ್ಯವಸ್ಥಾಪಕ ನಿರ್ದೇಶಕರು, ಮುಂಬೈ, ಅವರು ಮಾತನಾಡಿ, ಹಲವಾರು ವರ್ಷಗಳಿಂದ ಇಂಟರ್‌ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ನಮ್ಮ ಸಂಸ್ಕೃತಿ ಹಾಗೂ ಸಂಪ್ರದಾಯ ಉಳಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಹಾಗೂ ಸಮಾರಂಭಗಳನ್ನು ನಡೆಸುತ್ತಿರುವುದು ಶ್ಲಾಘನೀಯ. ಯುವ ಪ್ರತಿಭೆಗಳನ್ನು ಗುರುತಿಸಿ, ಅವರನ್ನು ಉಳಿಸಿ ಬೆಳೆಸುವಲ್ಲಿ ನಾವೆಲ್ಲರೂ…

Read More

ಬಿಜೆಪಿ ಮಂಗಳೂರು ನಗರ ದಕ್ಷಿಣದ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜಯಂತಿ ಆಚರಣೆ ಅಂಗವಾಗಿ ನಗರದ ನಾರಾಯಣಗುರು ವೃತ್ತದಲ್ಲಿರುವ ಪೂಜ್ಯರ ಪ್ರತಿಮೆಗೆ ಪುಷ್ಪ ನಮನಗಳನ್ನು ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ಸಾಮಾಜಿಕ ಪರಿವರ್ತನೆಯ ಹರಿಕಾರರಾಗಿ ಹಿಂದುಳಿದವರ ಸಹಿತ ಸರ್ವರ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ಇಂತಹ ಮಹಾನ್ ಸಂತರ ಗೌರವಾರ್ಥ ಹಿಂದಿನ ಬಿಜೆಪಿ ಸರ್ಕಾರ ಅವಧಿಯಲ್ಲಿ ಮಂಗಳೂರಿನ ಹೃದಯ ಭಾಗದಲ್ಲಿರುವ ಈ ವೃತ್ತಕ್ಕೆ ನಾರಾಯಣಗುರು ವೃತ್ತ ಎಂದು ಮರುನಾಮಕರಣ ಮಾಡಿ, ಪೂಜ್ಯರ ಪ್ರತಿಮೆಯನ್ನು ಸ್ಥಾಪಿಸಲಾಗಿತ್ತು. ನಂತರ ಉರ್ವದಲ್ಲಿ ಗುರುಗಳ ಸುಂದರವಾದ ಮಂದಿರ ಕಟ್ಟಲಾಗಿತ್ತು. ಅಲ್ಲದೇ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನೂ ಸಹ ಅಸ್ತಿತ್ವಕ್ಕೆ ತರಲಾಗಿತ್ತು. ನಂತರ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರವು ಮೂರು ವರ್ಷಗಳ ನಂತರ ಕಾಟಾಚಾರಕ್ಕೆ ನಿಗಮಕ್ಕೆ ಅಧ್ಯಕ್ಷರನ್ನು ನೇಮಕ ಮಾಡಿತು. ಆದರೆ ಪ್ರತಿ ವರ್ಷ 500 ಕೋಟಿ ಕೊಡುವುದಾಗಿ ನೀಡಿದ್ದ ಭರವಸೆ ನೀಡಿದ್ದ ಕಾಂಗ್ರೆಸ್ ಸರ್ಕಾರ ಒಂದು ಪೈಸೆಯನ್ನೂ…

Read More

ಮಂಗಳೂರು, ಆ.26: ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಶೀಘ್ರ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಜಿಲ್ಲಾ ಆದಿದ್ರಾವಿಡ ಸಮಾಜ ಸೇವಾ ಸಂಘದ ನಿಯೋಗವು ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ. ಆ.21ರಂದು ಬೆಂಗಳೂರಿನಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಅವರ ನೇತೃತ್ವದಲ್ಲಿ ನಿಯೋಗವು ಸಚಿವರನ್ನು ಭೇಟಿ ಮಾಡಿ, ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಅಗತ್ಯವಿರುವ ಅನುದಾನವನ್ನು ಶೀಘ್ರ ಬಿಡುಗಡೆ ಮಾಡುವಂತೆ ಮನವಿ ಮಾಡಿತು. ಅಂಬೇಡ್ಕರ್ ಭವನವು ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಪ್ರಮುಖ ಕೇಂದ್ರವಾಗಲಿದ್ದು, ಇದರ ನಿರ್ಮಾಣ ಕಾರ್ಯವನ್ನು ಶೀಘ್ರ ಆರಂಭಿಸಲು ಸರ್ಕಾರದಿಂದ ಅಗತ್ಯ ಅನುದಾನ ಮಂಜೂರು ಮಾಡಬೇಕು ಎಂದು ನಿಯೋಗವು ಸಚಿವರಲ್ಲಿ ಮನವಿ ಮಾಡಿತು. ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ಸಂಜೀವ ಕೋಟ್ಯಾನ್, ಗೌರವಾಧ್ಯಕ್ಷ ರಘುನಾಥ ಅತ್ತಾವರ, ಉಪಾಧ್ಯಕ್ಷ ಅಣ್ಣು ಕುಂಜತ್ತ್ ಬೈಲ್, ಚೈತನ್ಯ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಕೃಷ್ಣ ಸೂಟರ್ ಪೇಟೆ, ಜಿಲ್ಲಾ ವಕ್ತಾರ ರಾಮ್ ಕುಮಾರ್…

Read More

ಕಡಬ: ಕಡಿಮೆ ಅವಧಿಯಲ್ಲಿ ಹೂಡಿಕೆ ಹಣವನ್ನು ದುಪ್ಪಟ್ಟುಗೊಳಿಸುವುದಾಗಿ ಆಮಿಷವೊಡ್ಡಿ ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಕಡಬ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ‘ಕಿಂಗ್ಸ್ ಬಜಾರ್’ ಹೆಸರಿನ ಹೂಡಿಕೆ ಯೋಜನೆಗೆ ಸಂಬಂಧಿಸಿದಂತೆ ಏಳು ಮಂದಿಯನ್ನು ಆರೋಪಿಗಳನ್ನಾಗಿ ಮಾಡಿ ಪ್ರಕರಣ ದಾಖಲಿಸಿದ್ದಾರೆ.ಕಡಬದಲ್ಲಿ ಹೂಡಿಕೆದಾರರನ್ನು ಸೇರಿಸಿ ಸಭೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿದ ಹಿನ್ನೆಲೆಯಲ್ಲಿ ತಕ್ಷಣ ಸ್ಥಳಕ್ಕೆ ತೆರಳಿದ ಪೊಲೀಸರು ಸಭೆಗೆ ದಾಳಿ ನಡೆಸಿ, ಅಲ್ಲಿದ್ದವರನ್ನು ವಿಚಾರಣೆಗೊಳಪಡಿಸಿದ್ದಾರೆ. ಈ ವೇಳೆ ಹೂಡಿಕೆ ಯೋಜನೆಗೆ ಸಂಬಂಧಿಸಿದ ದಾಖಲೆಗಳು ಹಾಗೂ ಹಣಕಾಸಿನ ವ್ಯವಹಾರಗಳ ಮಾಹಿತಿಯನ್ನು ಪರಿಶೀಲಿಸಲಾಗಿದೆ.ದುಪ್ಪಟ್ಟು ಲಾಭದ ಆಮಿಷ‘ಕಿಂಗ್ಸ್ ಬಜಾರ್’ ಸಂಸ್ಥೆಯಲ್ಲಿ ಸದಸ್ಯರಾಗಿ ಹಣ ಹೂಡಿಕೆ ಮಾಡಿದರೆ ಕಡಿಮೆ ಅವಧಿಯಲ್ಲಿ ಹೆಚ್ಚಿನ ಲಾಭ ಪಡೆಯಬಹುದು, ಬೆಲೆಬಾಳುವ ವಸ್ತುಗಳನ್ನು ರಿಯಾಯಿತಿ ದರದಲ್ಲಿ ಖರೀದಿಸಬಹುದು ಹಾಗೂ ಹೊಸ ಸದಸ್ಯರನ್ನು ಸೇರ್ಪಡೆಗೊಳಿಸಿದವರಿಗೆ ಭಾರೀ ಕಮಿಷನ್ ನೀಡಲಾಗುತ್ತದೆ ಎಂದು ಸಾರ್ವಜನಿಕರನ್ನು ಸೆಳೆಯಲಾಗುತ್ತಿತ್ತು ಎನ್ನಲಾಗಿದೆ.ಸ್ಥಳೀಯವಾಗಿ ಕೆಲವರನ್ನು ಏಜೆಂಟರನ್ನಾಗಿ ನೇಮಿಸಿ, ಅವರ ಮೂಲಕ ಹೊಸ ಸದಸ್ಯರ ಸೇರ್ಪಡೆ ಹಾಗೂ ಹಣ ಸಂಗ್ರಹಿಸುವ ಚಟುವಟಿಕೆ ನಡೆಸಲಾಗುತ್ತಿತ್ತು ಎಂಬ…

Read More