- ನಾಗರಿಕ ವೇದಿಕೆ ನರ್ನಾಡು–ಮದಗ ಲೇಔಟ್ನ 4ನೇ ವರ್ಷದ ಗಣೇಶೋತ್ಸವ ವಿಜೃಂಭಣೆಯಿಂದ ಧಾರ್ಮಿಕ ಸಭೆ, ಸಾಂಸ್ಕೃತಿಕ ಕಾರ್ಯಕ್ರಮ, ಸಮಾಜ ಸೇವಕರಿಗೆ ಸನ್ಮಾನ
- ವಿಘ್ನವಿನಾಯಕನ ಆಗಮನಕ್ಕೆ ತುಳುನಾಡಿನಲ್ಲಿ ಕಂಗೊಳಿಸಿದೆ ಮನೆಮನೆಗಳಲ್ಲಿ ಭಕ್ತಿ–ಮಂಟಪಗಳಲ್ಲಿ ಸಂಭ್ರಮ; ಶಾಂತಿ, ಸೌಹಾರ್ದಕ್ಕೆ ಪೊಲೀಸ್ ಕಟ್ಟೆಚ್ಚರ
- ಕದ್ರಿ ಮಾರ್ಕೆಟ್ನಲ್ಲಿ ಕೊಂಕಣ್ ಕ್ಯಾಥೊಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಪ್ರಧಾನ ಶಾಖೆ ಉದ್ಘಾಟನೆ ಗ್ರಾಹಕರಿಗೆ ಸುಲಭ ಹಣಕಾಸು ಸೇವೆ ಒದಗಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ
- ಮಾದಕ ವ್ಯಸನದ ವಿರುದ್ಧ ಮಂಗಳೂರು ಪೊಲೀಸರ ಸಮರ: 9 ಮಂದಿ ಬಂಧನ
- ಸರಕಾರಿ ಜಮೀನಿನಲ್ಲಿ ಅಕ್ರಮವಾಗಿ ಬಂಡೆ ಸ್ಫೋಟ: ಇಬ್ಬರ ಬಂಧನ
- ಡಾ.ಎಂ ಫಾರೂಕ್ ಚಂದ್ರನಗರ ಇವರಿಗೆ ಸುನ್ನಿ ಯುವ ಸಂಘ, ಕೆ.ಎಂ.ಜೆ, ಎಸ್.ಎಸ್.ಎಫ್ ಮಜೂರು ಘಟಕದ ವತಿಯಿಂದ ಸನ್ಮಾನ
- ಸತೀಶ್ ಜಾರಕಿಹೊಳಿ ಆಪ್ತರ ನಿವಾಸ, ಕಚೇರಿಗಳ ಮೇಲೆ ಇ.ಡಿ. ಶೋಧ ₹3.3 ಕೋಟಿ ಲೆಕ್ಕಕ್ಕೆ ಬಾರದ ನಗದು, ₹15 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿ ವಶ
- ಗಣೇಶೋತ್ಸವ ಹಿನ್ನೆಲೆ: ಉಡುಪಿ ಜಿಲ್ಲೆಯಲ್ಲಿ ಸೆ. 14, 16 ಮತ್ತು 18ರಂದು ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಉಡುಪಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಕ್ರಮ: ಈ 3 ದಿನಗಳ ಕಾಲ ಜಿಲ್ಲಾದ್ಯಂತ ಬಾರ್, ವೈನ್ಶಾಪ್ ಬಂದ್ಉಡುಪಿ ಜಿಲ್ಲಾಧಿಕಾರಿ ಖಡಕ್ ಆದೇಶ
Author: Tulunada Surya
ಉಡುಪಿ, ಸೆ.14: ನಾಗರಿಕ ವೇದಿಕೆ ನರ್ನಾಡು–ಮದಗ ಲೇಔಟ್, ಉಪ್ಪೂರು ಇದರ ವತಿಯಿಂದ ಆಯೋಜಿಸಲಾದ 4ನೇ ವರ್ಷದ ಸಾರ್ವಜನಿಕ ಗಣೇಶೋತ್ಸವವು ಸೆ.14ರಂದು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಿತು. ಗಣೇಶೋತ್ಸವದ ಅಂಗವಾಗಿ ಗಣೇಶ ವಿಗ್ರಹವನ್ನು ವಿಶಿಷ್ಟವಾಗಿ ಅಲಂಕರಿಸಿದ ಪಲ್ಲಕ್ಕಿಯಲ್ಲಿ ಭವ್ಯ ಮೆರವಣಿಗೆಯ ಮೂಲಕ ಕರೆತಂದು ಗಣೇಶ ಮಂಟಪದಲ್ಲಿ ಪ್ರತಿಷ್ಠಾಪಿಸಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಉತ್ಸವಕ್ಕೆ ಚಾಲನೆ ನೀಡಲಾಯಿತು. ನಾಗರಿಕ ವೇದಿಕೆಯ ಗೌರವಾಧ್ಯಕ್ಷರಾದ ಹರೀಶ್ ಅಮೀನ್ ಹಾಗೂ ಅವರ ಧರ್ಮಪತ್ನಿ ಶ್ರೀ ದೇವರ ಗಣಯಾಗ ಸೇವೆಯನ್ನು ನೆರವೇರಿಸಿದರು. ಬೆಳಿಗ್ಗೆ ಗಣೇಶೋತ್ಸವದ ವೇದಿಕೆಯಲ್ಲಿ ಸ್ಥಳೀಯರ ಭಜನಾ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ ಲೇಔಟ್ನ ವಿವಿಧ ಪ್ರತಿನಿಧಿಗಳ ಸಹಕಾರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಸಂಜೆ 4.30ಕ್ಕೆ ನಡೆದ ಧಾರ್ಮಿಕ ಸಭೆಯನ್ನು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಸಾದ್ ನೇತ್ರಾಲಯ, ಉಡುಪಿ ಇದರ ಡಾ. ಕೃಷ್ಣಪ್ರಸಾದ್, ನಾಗರಿಕ ವೇದಿಕೆ ನಡೆಸುತ್ತಿರುವ ಸಮಾಜಮುಖಿ ಹಾಗೂ ಜನಪರ ಕಾರ್ಯಗಳನ್ನು…
ಮಂಗಳೂರು, ಸೆ.14: ವಿಘ್ನಗಳನ್ನು ನಿವಾರಿಸಿ ಸುಖ, ಶಾಂತಿ ಹಾಗೂ ಸಮೃದ್ಧಿ ಕರುಣಿಸುವ ವಿಘ್ನವಿನಾಯಕ ಗಣೇಶನ ಆರಾಧನೆಯ ಗಣೇಶ ಚತುರ್ಥಿ ಹಬ್ಬದ ಸಂಭ್ರಮ ಮಂಗಳೂರು, ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕದಾದ್ಯಂತ ಮನೆ ಮಾಡಿದೆ. ಮನೆಗಳು, ದೇವಸ್ಥಾನಗಳು ಹಾಗೂ ಸಾರ್ವಜನಿಕ ಗಣೇಶೋತ್ಸವ ಮಂಟಪಗಳು ಹೂವು, ವಿದ್ಯುತ್ ದೀಪಾಲಂಕಾರ ಹಾಗೂ ವಿವಿಧ ಅಲಂಕಾರಗಳಿಂದ ಕಂಗೊಳಿಸುತ್ತಿದ್ದು, ಭಕ್ತರು ಭಕ್ತಿ–ಭಾವದಿಂದ ಗಣೇಶನನ್ನು ಪ್ರತಿಷ್ಠಾಪಿಸಿ ಪೂಜಾ ಕೈಂಕರ್ಯಗಳಲ್ಲಿ ತೊಡಗಿದ್ದಾರೆ. ಬೆಳಗ್ಗೆಯಿಂದಲೇ ಗಣೇಶ ಮೂರ್ತಿಗಳನ್ನು ಮೆರವಣಿಗೆಯ ಮೂಲಕ ಮಂಟಪಗಳಿಗೆ ಕರೆತಂದು ಪ್ರತಿಷ್ಠಾಪಿಸುವ ದೃಶ್ಯಗಳು ಹಲವೆಡೆ ಕಂಡುಬಂದವು. ಗಣೇಶನ ದರ್ಶನ ಪಡೆಯಲು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು, ವಿವಿಧ ಗಣೇಶೋತ್ಸವ ಸಮಿತಿಗಳ ವತಿಯಿಂದ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನೂ ಆಯೋಜಿಸಲಾಗಿದೆ. ತುಳುನಾಡಿನಲ್ಲಿ ಸಾವಿರಾರು ಭಕ್ತರ ಸಂಭ್ರಮ ಈ ಬಾರಿ ದಕ್ಷಿಣ ಕನ್ನಡ ಪೊಲೀಸ್ ವ್ಯಾಪ್ತಿಯಲ್ಲಿ 230 ಸಾರ್ವಜನಿಕ ಗಣೇಶೋತ್ಸವ ಪ್ರತಿಷ್ಠಾಪನೆಗಳಿಗೆ ಅನುಮತಿ ನೀಡಲಾಗಿದ್ದು, ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 174 ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ನಡೆಯಲಿದೆ. ಅದೇ ರೀತಿ ಉಡುಪಿ…
ಮಂಗಳೂರು, ಸೆ.13: ಮಂಗಳೂರಿನ ಕದ್ರಿ ಮಾರ್ಕೆಟ್ನಲ್ಲಿ ನೂತನವಾಗಿ ಆರಂಭಗೊಂಡಿರುವ ಕೊಂಕಣ್ ಕ್ಯಾಥೊಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿಯಮಿತದ ಪ್ರಧಾನ ಶಾಖೆಯ ಉದ್ಘಾಟನಾ ಸಮಾರಂಭ ಸೆ.13ರಂದು ಭಾನುವಾರ ಗಣ್ಯರ ಉಪಸ್ಥಿತಿಯಲ್ಲಿ ಅದ್ಧೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ನೆರವೇರಿತು. ಕದ್ರಿ ಮಾರ್ಕೆಟ್ನ ಕಚೇರಿ ಸಂಖ್ಯೆ 01 ಮತ್ತು 02ರಲ್ಲಿ ನಡೆದ ಸಮಾರಂಭವನ್ನು ಡಿ.ಕೆ. ಗ್ರೂಪ್ ಆಫ್ ಕಂಪನೀಸ್ ಸಂಸ್ಥಾಪಕ, ಡಿ.ಕೆ. ಬಿಸಿನೆಸ್ ಆ್ಯಂಡ್ ಟೆಕ್ನಾಲಜಿ ಅಡ್ವೈಸರ್ಸ್ ಪ್ರೈವೇಟ್ ಲಿಮಿಟೆಡ್ ಹಾಗೂ ದಕ್ಷಿಣ ಕನ್ನಡ ಮ್ಯೂಚುವಲ್ ಬೆನಿಫಿಟ್ಸ್ ನಿಧಿ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕ ಆಲ್ವಿನ್ ಜೋಯಲ್ ನೊರೊನ್ಹಾ ಹಾಗೂ ಸಿ.ಒ.ಡಿ.ಪಿ. ನಿರ್ದೇಶಕ ರೆ| ಫಾ| ವಿನ್ಸೆಂಟ್ ಡಿಸೋಜಾ ಉದ್ಘಾಟಿಸಿದರು. ಮಂಗಳೂರು ಧರ್ಮಪ್ರಾಂತ್ಯದ ರೆ| ಫಾ| ಬೊನಾವೆಂಚರ್ ನಜರತ್ ಅವರು ಆಶೀರ್ವಚನ ನೀಡಿ, ಸಂಸ್ಥೆಯ ನೂತನ ಶಾಖೆಯು ಜನಸಾಮಾನ್ಯರಿಗೆ ಉತ್ತಮ ಹಣಕಾಸು ಸೇವೆಗಳನ್ನು ಒದಗಿಸುವ ಮೂಲಕ ಸಮಾಜಮುಖಿ ಕಾರ್ಯಗಳಿಗೆ ಪೂರಕವಾಗಲಿ ಎಂದು ಶುಭ ಹಾರೈಸಿದರು. ಗಣ್ಯರ ಉಪಸ್ಥಿತಿ ಉದ್ಘಾಟನಾ ಸಮಾರಂಭದಲ್ಲಿ ಶಾಸಕರಾದ ಡಿ. ವೇದವ್ಯಾಸ ಕಾಮತ್ ಮತ್ತು ಐವನ್…
ಮಂಗಳೂರು, ಸೆ.12: ಮಂಗಳೂರು ನಗರವನ್ನು ಮಾದಕ ಮುಕ್ತ ನಗರವನ್ನಾಗಿಸುವ ನಿಟ್ಟಿನಲ್ಲಿ ನಗರ ಪೊಲೀಸರು ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಮಾದಕ ವಸ್ತು ಸೇವಿಸಿ ಅಸಭ್ಯವಾಗಿ ವರ್ತಿಸುತ್ತಿದ್ದ ಆರೋಪದಡಿ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಒಟ್ಟು ಒಂಬತ್ತು ಮಂದಿಯನ್ನು ಬಂಧಿಸಿದ್ದಾರೆ. ಮಾದಕ ವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಬಗ್ಗೆ ಮಾಹಿತಿ ಹಾಗೂ ಅನುಮಾನಗಳ ಆಧಾರದ ಮೇಲೆ ಪ್ರತ್ಯೇಕ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಪರೀಕ್ಷೆಯಲ್ಲಿ ಮಾದಕ ದ್ರವ್ಯ ಸೇವಿಸಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಆರೋಪಿಗಳ ವಿರುದ್ಧ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಪಾಂಡೇಶ್ವರ ಠಾಣೆ:ಸೆ.9ರಂದು ಸಂಜೆ ಮಾದಕ ವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಆರೋಪದಡಿ ಮಂಚಿ ಕೊಲ್ನಾಡು ನಿವಾಸಿ **ಅಬ್ದುಲ್ ತೌಫಿಕ್ (21)**ನನ್ನು ಪೊಲೀಸರು ಬಂಧಿಸಿದ್ದಾರೆ. ಕದ್ರಿ ಠಾಣೆ:ಸೆ.10ರಂದು ನಗರದ ಕಾರ್ಮಿಕ ಭವನಕ್ಕೆ ತೆರಳುವ ರಸ್ತೆಯಲ್ಲಿ ಮಾದಕ ವಸ್ತು ಸೇವಿಸಿದ್ದ ಆರೋಪದಡಿ ಕೇರಳ ಮೂಲದ ರಿತುಲ್ ಎಸ್. ಚಂದ್ರನ್ (24), ಅಬ್ದುಲ್ಲಾ (25)…
ಉಡುಪಿ: ಸಂಬಂಧಪಟ್ಟ ಇಲಾಖೆಯಿಂದ ಯಾವುದೇ ಪರವಾನಗಿ ಅಥವಾ ಅನುಮತಿ ಪಡೆಯದೆ ಸರಕಾರಿ ಜಮೀನಿನಲ್ಲಿ ಸ್ಫೋಟಕ ವಸ್ತುಗಳನ್ನು ಅನಧಿಕೃತವಾಗಿ ಬಳಸಿ ಬಂಡೆ ಕಲ್ಲುಗಳನ್ನು ಸ್ಫೋಟಿಸಿದ ಆರೋಪದ ಮೇರೆಗೆ ಮಣಿಪಾಲ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಉಡುಪಿ ತಾಲೂಕು ಮರ್ಣೆ ಗ್ರಾಮದ ಕುಕ್ಕಿಪಲ್ಕೆ, ಸರ್ವೆ ನಂ.112/2ರ 1.54 ಎಕರೆ ವಿಸ್ತೀರ್ಣದ ಸರಕಾರಿ ಸ್ಥಿರಾಸ್ತಿ ಜಮೀನಿನಲ್ಲಿ ಈ ಕೃತ್ಯ ನಡೆದಿರುವುದು ಬೆಳಕಿಗೆ ಬಂದಿದೆ. ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಠಾಣೆಯ ಪಿಎಸ್ಐ ತಿಮ್ಮೇಶ್ ಬಿ.ಎನ್. ಅವರು ತನಿಖೆ ಕೈಗೊಂಡಿದ್ದು, ಕಾರ್ಕಳ ತಾಲೂಕಿನ ಇನ್ನಾ ಗ್ರಾಮದ ಕೆ. ಗೋವಿಂದರಾಜ್ (40) ಹಾಗೂ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಗುಣಕರ್ಚಿ ಗ್ರಾಮದ ಶೇಖಪ್ಪ ಚಲವಾದಿ ಅಲಿಯಾಸ್ ಚಂದ್ರು (28) ಅವರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಡ್ರಿಲ್ಲಿಂಗ್ ಕಂಪ್ರೆಸರ್ ಯಂತ್ರ ಅಳವಡಿಸಿರುವ ಮಹೀಂದ್ರ ಟ್ರ್ಯಾಕ್ಟರ್ ಹಾಗೂ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಸಮಾಜ ಸೇವೆಯಲ್ಲಿ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಚೆನ್ನೈ ಯೂನಿವರ್ಸಿಟಿ ವತಿಯಿಂದ ಡಾಕ್ಟರೆಟ್ ಪದವಿ, ದುಬೈ ಗಡಿನಾಡ ಸಾಂಸ್ಕೃತಿಕ ಅಕಾಡಮಿ (ರಿ)ವತಿಯಿಂದ ಯೂತ್ ಐಕಾನ್ ಅವಾರ್ಡ್ ಸೇರಿದಂತೆ ನೂರಾರು ಸಂಘ ಸಂಸ್ಥೆಗಳಿಂದ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಪ್ರಶಸ್ತಿ ಪಡೆದು ಬದ್ರಿಯ ಜುಮ್ಮಾ ಮಸ್ಜಿದ್ (ರಿ)ಮಲ್ಲಾರು-ಮಜೂರು ಅಧ್ಯಕ್ಷರಾಗಿ ಕಳೆದ 2 ವರ್ಷದಲ್ಲಿ ಮಸ್ಜಿದ್ ನ ಸಮಗ್ರ ಅಭಿವೃದ್ಧಿ ಮಾಡಿ ಅಭಿವೃದ್ಧಿ ಹರಿಕಾರ, ಅಭಿವೃದ್ಧಿ ರತ್ನ ಎಂಬ ಬಿರುದು ಪಡೆದು ಹಾಗೂ ಸರ್ವ ದರ್ಮಿಯರ ನೋಡಬನ್ನಿ ನಮ್ಮ ಮಸೀದಿ ಕಾರ್ಯಕ್ರಮ ಮಾಡಿ 5000 ಕ್ಕೂ ಹೆಚ್ಚಿನ ಜನ ಮಸ್ಜಿದ್ ವೀಕ್ಷಣೆ ಮಾಡಿದ್ದು ಉಡುಪಿ ಜಿಲ್ಲೆಯಲ್ಲಿ ಸೌಹಾರ್ದತೆಯನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಹಲವಾರು ಸೌಹಾರ್ದತೆಯ ಕಾರ್ಯಕ್ರಮ ನೀಡಿ ಉತ್ತಮ ಸಾರಾಂಶ ಕೊಟ್ಟು ಜನಮೆಚ್ಚುಗೆ ಪಡೆದ ಸಮಾಜ ಸೇವಕರು ಉದ್ಯಮಿಗಳು ಆಗಿರುವ ಡಾ.ಎಂ ಫಾರೂಕ್ ಚಂದ್ರನಗರ ಇವರಿಗೆ ಸುನ್ನಿ ಯುವ ಸಂಘ, ಕೆ.ಎಂ.ಜೆ, ಎಸ್.ಎಸ್ ಎಫ್ ಮಜೂರು ಘಟಕದ ವತಿಯಿಂದ ಸಿರಾಜುಮ್ಮನ್ನೀರ್ ಮಿಲಾದ್ ಫೆಸ್ಟ್ ಕಾರ್ಯಕ್ರಮದಲ್ಲಿ ಮುಖ್ಯ…
ಬೆಂಗಳೂರು: ಕರ್ನಾಟಕ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಆಪ್ತರು ಮತ್ತು ಕುಟುಂಬ ಸದಸ್ಯರಿಗೆ ಸಂಬಂಧಿಸಿದ 21 ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ (ED) ಸೆಪ್ಟೆಂಬರ್ 9 ಮತ್ತು 10ರಂದು ಶೋಧ ಕಾರ್ಯಾಚರಣೆ ನಡೆಸಿದೆ. ಬೆಂಗಳೂರು ವಲಯ ಕಚೇರಿಯ ಅಧಿಕಾರಿಗಳು ಬೆಂಗಳೂರು, ಬೆಳಗಾವಿ, ಗೋಕಾಕ್ ಹಾಗೂ ಕೋಲ್ಕತ್ತಾ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಏಕಕಾಲದಲ್ಲಿ ಶೋಧ ನಡೆಸಿದ್ದಾರೆ. ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (FEMA) ಅಡಿಯಲ್ಲಿ ಈ ಕಾರ್ಯಾಚರಣೆ ಕೈಗೊಳ್ಳಲಾಗಿದ್ದು, ಜಾರಕಿಹೊಳಿ ಕುಟುಂಬಕ್ಕೆ ಸಂಬಂಧಿಸಿದ ಬಹಿರಂಗಪಡಿಸದ ವಿದೇಶಿ ಹೂಡಿಕೆಗಳು, ಗಡಿ ದಾಟಿದ ಹಣಕಾಸು ವ್ಯವಹಾರಗಳು ಹಾಗೂ ಸಂಭಾವ್ಯ ಹಣಕಾಸು ಅಕ್ರಮಗಳ ಕುರಿತು ದಾಖಲೆ ಮತ್ತು ಸಾಕ್ಷ್ಯ ಸಂಗ್ರಹಿಸುವುದು ಕಾರ್ಯಾಚರಣೆಯ ಉದ್ದೇಶವಾಗಿದೆ ಎಂದು ಇ.ಡಿ. ತಿಳಿಸಿದೆ. ಕುಟುಂಬ ಸದಸ್ಯರು, ಆಪ್ತರ ಸ್ಥಳಗಳಲ್ಲೂ ಪರಿಶೀಲನೆ ಶೋಧ ಕಾರ್ಯಾಚರಣೆಯ ವೇಳೆ ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ, ಸಚಿವರ ಪುತ್ರ ರಾಹುಲ್ ಜಾರಕಿಹೊಳಿ ಹಾಗೂ ಭಾವ ವೈ.ಡಿ. ಮಂಜುನಾಥ್ ಅವರಿಗೆ ಸಂಬಂಧಿಸಿದ ಸ್ಥಳಗಳಲ್ಲೂ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.…
ಉಡುಪಿಯಲ್ಲಿ ಗಣೇಶೋತ್ಸವದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಶಾಂತಿ-ಸುವ್ಯವಸ್ಥೆ ಕಾಪಾಡುವ ಸಲುವಾಗಿ ಜಿಲ್ಲಾಧಿಕಾರಿ ಸ್ವರೂಪ ಅವರು ನಿರ್ದಿಷ್ಟ ದಿನಗಳಲ್ಲಿ ಮದ್ಯ ಮಾರಾಟ ನಿಷೇಧಿಸಿ (Dry Days) ಮಹತ್ವದ ಆದೇಶ ಹೊರಡಿಸಿದ್ದಾರೆ. ಆದೇಶದ ಪ್ರಮುಖ ವಿವರಗಳು ಹಾಗೂ ದಿನಾಂಕಗಳು: ಸೆಪ್ಟೆಂಬರ್ 14 (ಇಡೀ ದಿನ): ಬೆಳಿಗ್ಗೆ 6.00 ರಿಂದ ರಾತ್ರಿ 12.00 ರವರೆಗೆ ಉಡುಪಿ ಜಿಲ್ಲೆಯಾದ್ಯಂತ ಮದ್ಯ ಮಾರಾಟ ಸಂಪೂರ್ಣ ಬಂದ್. ಸೆಪ್ಟೆಂಬರ್ 16 (ಉಡುಪಿ ನಗರ): ಮಧ್ಯಾಹ್ನ 2.00 ರಿಂದ ರಾತ್ರಿ 12.00 ರವರೆಗೆ ಉಡುಪಿ ನಗರ ವ್ಯಾಪ್ತಿಯಲ್ಲಿ ಮಾತ್ರ ಮದ್ಯ ಮಾರಾಟ ನಿಷೇಧ. ಸೆಪ್ಟೆಂಬರ್ 18 (ವಿಸರ್ಜನಾ ಸ್ಥಳಗಳು): ಗಣೇಶ ಮೂರ್ತಿ ವಿಸರ್ಜನೆ ನಡೆಯುವ ವಿವಿಧ ಪೋಲೀಸ್ ಠಾಣಾ ವ್ಯಾಪ್ತಿಗಳಲ್ಲಿ (ಗಂಗೊಳ್ಳಿ, ಕುಂದಾಪುರ ನಗರ ಹಾಗೂ ಕಾಪು ಠಾಣೆ ವ್ಯಾಪ್ತಿಯ ನಿರ್ದಿಷ್ಟ ಗ್ರಾಮಗಳು) ಮಧ್ಯಾಹ್ನ 2.00 ರಿಂದ ರಾತ್ರಿ 12.00 ರವರೆಗೆ ಮದ್ಯ ಮಾರಾಟ ಇರುವುದಿಲ್ಲ. ಸೂಚನೆ: ನಿಗದಿತ ದಿನ ಮತ್ತು ಸಮಯಗಳಲ್ಲಿ ಜಿಲ್ಲೆಯ ಎಲ್ಲಾ ವೈನ್ಶಾಪ್,…
ಮಂಗಳೂರು: ಕಂಕನಾಡಿಯ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ರೋಗಿಯೊಬ್ಬರಿಗೆ ತುರ್ತಾಗಿ ರಕ್ತದ ಅವಶ್ಯಕತೆ ಇದೆ ಎಂಬ ಮಾಹಿತಿ ಬಂದ ಹಿನ್ನೆಲೆಯಲ್ಲಿ, ತಕ್ಷಣ ಸ್ಪಂದಿಸಿದ ಮೊಹಮ್ಮದ್ ಅಲ್ತಾಫ್ ಹಾಗೂ ಯಾಶಿನ್ ಅವರು ಆಸ್ಪತ್ರೆಗೆ ತೆರಳಿ ರಕ್ತದಾನ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.ತುರ್ತು ಸಂದರ್ಭದಲ್ಲಿ ಯಾವುದೇ ವಿಳಂಬ ಮಾಡದೆ ರಕ್ತದಾನಕ್ಕೆ ಮುಂದಾದ ಇವರ ಸೇವಾ ಮನೋಭಾವ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.ತುಳುನಾಡ ರಕ್ಷಣಾ ವೇದಿಕೆ ಕಾರ್ಮಿಕ ಘಟಕ ಉಪಾದ್ಯಕ್ಷರಾದ ಫೇರಿ ಡಿಸೋಜರವರು ತುಳುನಾಡ ಸೂರ್ಯ ಪತ್ರಿಕೆ ಗಮನಕ್ಕೆ ತಂದಿದ್ದಾರೆ. ರಕ್ತದಾನವು ಮತ್ತೊಬ್ಬರ ಜೀವ ಉಳಿಸುವ ಮಹತ್ವದ ಮಾನವೀಯ ಸೇವೆಯಾಗಿದ್ದು, ಅಗತ್ಯದ ಸಂದರ್ಭದಲ್ಲಿ ರಕ್ತದಾನ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ.ರಕ್ತದ ಅವಶ್ಯಕತೆ ಇದೆ ಎಂಬ ತುರ್ತು ಕರೆ ಬಂದ ತಕ್ಷಣ ಸ್ಪಂದಿಸಿ ರಕ್ತದಾನ ಮಾಡಿದ ಮೊಹಮ್ಮದ್ ಅಲ್ತಾಫ್ ಮತ್ತು ಯಾಶಿನ್ ಅವರ ಸಾಮಾಜಿಕ ಕಳಕಳಿ ಹಾಗೂ ಸೇವಾ ಮನೋಭಾವಕ್ಕೆ ಅಭಿನಂದನೆಗಳು ವ್ಯಕ್ತವಾಗಿವೆ.“ತುರ್ತು ಸಂದರ್ಭದಲ್ಲಿ ಒಂದು ಯೂನಿಟ್ ರಕ್ತವೂ ಒಂದು ಜೀವಕ್ಕೆ ಅಮೂಲ್ಯವಾಗಬಹುದು. ರಕ್ತದಾನ ಮಾಡಿ, ಜೀವ ಉಳಿಸಿ” ಎಂಬ…
ಸೆ.18ರ ಸಚಿವ ಸಂಪುಟ ಸಭೆಯಲ್ಲೇ ತುಳುವಿಗೆ ದ್ವಿತೀಯ ಅಧಿಕೃತ ಭಾಷೆಯ ಸ್ಥಾನಮಾನ ಘೋಷಿಸಲು ಆಗ್ರಹ ಕಾಪು: ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡುವುದು ಯಾರ ದಯೆಯೂ ಅಲ್ಲ, ಅದು ತುಳುವರ ಜನ್ಮಸಿದ್ಧ ಹಕ್ಕು ಎಂದು ತುಳುನಾಡು ರಕ್ಷಣಾ ವೇದಿಕೆ ಕಾಪು ತಾಲೂಕು ಅಧ್ಯಕ್ಷ ನಿತಿನ್ ಕುಮಾರ್ ಶೆಟ್ಟಿ ಆಗ್ರಹಿಸಿದ್ದಾರೆ. ಕರಾವಳಿ ಕರ್ನಾಟಕ, ಮಲೆನಾಡು ಹಾಗೂ ಗಡಿ ಪ್ರದೇಶಗಳಲ್ಲಿ ಕೋಟ್ಯಂತರ ಜನರ ಆಡುಭಾಷೆಯಾಗಿರುವ ತುಳು, ತನ್ನದೇ ಆದ ಲಿಪಿ, ಪಾರಂಪರಿಕ ಸಾಹಿತ್ಯ, ಜಾನಪದ ಪರಂಪರೆ ಹಾಗೂ ಶ್ರೀಮಂತ ಸಾಂಸ್ಕೃತಿಕ ಹಿನ್ನೆಲೆಯನ್ನು ಹೊಂದಿದೆ. ಇಂತಹ ಪ್ರಾಚೀನ ಮತ್ತು ವೈಶಿಷ್ಟ್ಯಪೂರ್ಣ ಭಾಷೆಗೆ ಇಂದಿಗೂ ಅಧಿಕೃತ ಸ್ಥಾನಮಾನ ದೊರಕದಿರುವುದು ವಿಷಾದನೀಯ ಎಂದು ಅವರು ತಿಳಿಸಿದ್ದಾರೆ. ತುಳು ಕೇವಲ ಸಂವಹನದ ಭಾಷೆಯಲ್ಲ. ಅದು ತುಳುನಾಡಿನ ಇತಿಹಾಸ, ಸಂಸ್ಕೃತಿ, ಪರಂಪರೆ, ಜಾನಪದ, ದೈವಾರಾಧನೆ, ಕಲೆ ಮತ್ತು ಜನಜೀವನದ ಅವಿಭಾಜ್ಯ ಅಂಗವಾಗಿದೆ. ತುಳು ಭಾಷೆಯೊಂದಿಗೆ ತುಳುನಾಡಿನ ಅಸ್ಮಿತೆ ಮತ್ತು ಸ್ವಾಭಿಮಾನವೂ ಬೆಸೆದುಕೊಂಡಿದೆ. ಆದ್ದರಿಂದ ತುಳುವಿಗೆ ಅಧಿಕೃತ ಸ್ಥಾನಮಾನ ಕಲ್ಪಿಸುವುದು ಕೇವಲ ಭಾಷೆಯ…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
