- ತುಳುನಾಡ ರಕ್ಷಣಾ ವೇದಿಕೆ – ಉಡುಪಿ ಜಿಲ್ಲಾ ಘಟಕದ ಜಿಲ್ಲಾ ಮಟ್ಟದ ಸಭೆ ಯಶಸ್ವಿ ಆಟಿ ದೊಂಜಿ ದಿನ ಕಾರ್ಯಕ್ರಮದ ಸಿದ್ಧತೆ ಕುರಿತು ಮಹತ್ವದ ಚರ್ಚೆ – ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಕಾರ್ಯತಂತ್ರ ರೂಪಣೆ
- ಮಾತೃಸ್ವರೂಪಿ ಶ್ರೀಮತಿ ಚನ್ನಮ್ಮನವರ ನಿಧನಕ್ಕೆ ಎಂ. ಬಿ. ಸದಾಶಿವರಿಂದ ತೀವ್ರ ಸಂತಾಪ
- ಚೆನ್ನಮ್ಮ ದೇವೇಗೌಡರ ಅಗಲಿಕೆ: ಪಕ್ಷಕ್ಕೂ, ಕುಟುಂಬಕ್ಕೂ ತುಂಬಲಾರದ ನಷ್ಟ – ಯೋಗಿಶ್ ಶೆಟ್ಟಿ ಜೆಪ್ಪು
- ಧಾರವಾಡ ವಸತಿ ಶಾಲೆಯಲ್ಲಿ 34 ವಿದ್ಯಾರ್ಥಿನಿಯರಿಗೆ ಆರೋಗ್ಯ ಸಮಸ್ಯೆ – 8 ಮಂದಿಯ ಸ್ಥಿತಿ ಗಂಭೀರ, ಪೋಷಕರಲ್ಲಿ ತೀವ್ರ ಆತಂಕ
- ಲಯನ್ಸ್ ತಾರಾನಾಥ್ ಎಚ್.ಎಂ ಅವರಿಗೆ ಅಧಿಕಾರ ಹಸ್ತಾಂತರ
- ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಅಂತಿಮ ನಮನ
- ಚೆನ್ನಮ್ಮ ದೇವೆಗೌಡ ಅವರ ನಿಧನಕ್ಕೆ ತೀವ್ರ ಸಂತಾಪ: ಜಾಕೆ ಮಾಧವ ಗೌಡ
- ಲಾವಣ್ಯ ಕುಟುಂಬಕ್ಕೆ ಸಾಂತ್ವನ ಹೇಳಿದ ಜೆಡಿಎಸ್ ನಿಯೋಗ – ಆರೋಪಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ಬಂಟ್ವಾಳ ಪೊಲೀಸ್ ಠಾಣೆಗೆ ಮನವಿ
Author: Tulunada Surya
ಉಡುಪಿ, ಜುಲೈ 19: ತುಳುನಾಡ ರಕ್ಷಣಾ ವೇದಿಕೆ – ಉಡುಪಿ ಜಿಲ್ಲಾ ಘಟಕದ ಜಿಲ್ಲಾ ಮಟ್ಟದ ಮಹತ್ವದ ಸಭೆಯು ಭಾನುವಾರ ಉಡುಪಿಯ ಕಾಪಿಯಾ ಹೋಟೆಲ್ ಸಮೀಪದ ಅಕ್ಷಯ ಟವರ್ಸ್ನಲ್ಲಿರುವ ಜಿಲ್ಲಾ ಕಚೇರಿಯಲ್ಲಿ ಅತ್ಯಂತ ಯಶಸ್ವಿಯಾಗಿ ನಡೆಯಿತು. ಮುಂಬರುವ “ಆಟಿ ದೊಂಜಿ ದಿನ” ಕಾರ್ಯಕ್ರಮವನ್ನು ಅದ್ಧೂರಿಯಾಗಿ ಹಾಗೂ ತುಳುನಾಡಿನ ಸಾಂಸ್ಕೃತಿಕ ವೈಭವವನ್ನು ಪ್ರತಿಬಿಂಬಿಸುವ ರೀತಿಯಲ್ಲಿ ಆಯೋಜಿಸುವ ಕುರಿತು ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯಿತು. ಜೊತೆಗೆ ಸಂಘಟನೆಯ ಬಲವರ್ಧನೆ, ಸದಸ್ಯತ್ವ ವಿಸ್ತರಣೆ ಹಾಗೂ ಜನಪರ ಹೋರಾಟಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ರೂಪಿಸುವ ಕುರಿತು ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು.ಜೊತೆಗೆ ಸಂಘಟನೆಯ ಬಲವರ್ಧನೆ, ಸದಸ್ಯತ್ವ ವಿಸ್ತರಣೆ ಹಾಗೂ ಜನಪರ ಹೋರಾಟಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ರೂಪಿಸುವ ಕುರಿತು ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಸಭೆಯ ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಅಧ್ಯಕ್ಷ ಫ್ರಾಂಕಿ ಡಿಸೋಜ ಕೊಳಲಗಿರಿ ವಹಿಸಿದ್ದರು. ಕಾರ್ಮಿಕ ಘಟಕದ ಅಧ್ಯಕ್ಷ ಜಯ ಪೂಜಾರಿ ಲಕ್ಷ್ಮೀನಗರ ಹಾಗೂ ಮಹಿಳಾ ಘಟಕದ ಅಧ್ಯಕ್ಷೆ ನಾಗಲಕ್ಷ್ಮಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಸಂಘಟನೆಯ ಮುಂದಿನ…
ಮಂಗಳೂರು, ಜುಲೈ 18: ದೇಶದ ಹೆಮ್ಮೆಯ ಮಾಜಿ ಪ್ರಧಾನಮಂತ್ರಿಗಳೂ, ಜನತಾದಳ (ಜಾತ್ಯತೀತ)ದ ರಾಷ್ಟ್ರೀಯ ಹಿರಿಯ ನಾಯಕರೂ ಆದ ಶ್ರೀ ಎಚ್.ಡಿ. ದೇವೇಗೌಡರ ಧರ್ಮಪತ್ನಿ, ಮಾತೃಸ್ವರೂಪಿ ಶ್ರೀಮತಿ ಚನ್ನಮ್ಮನವರ ನಿಧನದ ಸುದ್ದಿ ತಿಳಿದು ತೀವ್ರ ಆಘಾತ ಮತ್ತು ಅಪಾರ ದುಃಖವಾಗಿದೆ ಎಂದು ಜನತಾದಳ (ಜಾತ್ಯತೀತ) ರಾಜ್ಯ ಉಪಾಧ್ಯಕ್ಷ ಎಂ. ಬಿ. ಸದಾಶಿವ ಅವರು ಸಂತಾಪ ಸೂಚಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಕಳೆದ ನಾಲ್ಕು ದಶಕಗಳಿಂದ ಶ್ರೀಮತಿ ಚನ್ನಮ್ಮನವರ ಅಕ್ಕರೆ, ಆತ್ಮೀಯತೆ, ಮಮತೆ ಮತ್ತು ಆಶೀರ್ವಾದದ ನೆರಳಿನಲ್ಲಿ ಬದುಕುವ ಭಾಗ್ಯ ನನಗೂ ನನ್ನ ಕುಟುಂಬಕ್ಕೂ ದೊರೆತಿತ್ತು. ಅವರ ಅಗಲಿಕೆ ನಮ್ಮ ಕುಟುಂಬದ ಹಿರಿಯ ತಾಯಿಯನ್ನು ಕಳೆದುಕೊಂಡಷ್ಟೇ ನೋವನ್ನು ಉಂಟುಮಾಡಿದ್ದು, ಈ ನಷ್ಟವನ್ನು ಯಾವತ್ತೂ ತುಂಬಲು ಸಾಧ್ಯವಿಲ್ಲ ಎಂದು ಭಾವುಕರಾಗಿ ತಿಳಿಸಿದ್ದಾರೆ. ಶ್ರೀ ಎಚ್.ಡಿ. ದೇವೇಗೌಡರು ದೇಶದ ಅತ್ಯುನ್ನತ ರಾಜಕೀಯ ಸ್ಥಾನವನ್ನು ಅಲಂಕರಿಸುವ ಹಾದಿಯಲ್ಲಿ ಸಾಗುವಾಗ, ಪ್ರತಿಯೊಂದು ಹೆಜ್ಜೆಯಲ್ಲೂ ಧೈರ್ಯ, ತ್ಯಾಗ, ಸಹನೆ ಮತ್ತು ನಿಸ್ವಾರ್ಥ ಸೇವಾ ಮನೋಭಾವದಿಂದ ಬೆನ್ನೆಲುಬಾಗಿ ನಿಂತ ಮಹಾನ್…
ಮಾಜಿ ಪ್ರಧಾನಮಂತ್ರಿ ಹಾಗೂ ಜನತಾದಳ (ಜಾತ್ಯತೀತ)ದ ಹಿರಿಯ ರಾಷ್ಟ್ರ ನಾಯಕ ಎಚ್.ಡಿ. ದೇವೇಗೌಡ ಅವರ ಕುಟುಂಬದ ಹಿರಿಯ ಸದಸ್ಯೆ ಶ್ರೀಮತಿ ಚೆನ್ನಮ್ಮ ದೇವೇಗೌಡ ಅವರ ಅಗಲಿಕೆಯ ಸುದ್ದಿ ಮನಸ್ಸಿಗೆ ಅಪಾರ ನೋವನ್ನುಂಟು ಮಾಡಿದೆ. ಒಂದು ರಾಜಕೀಯ ಕುಟುಂಬದ ಯಶಸ್ಸಿನ ಹಿಂದೆ ವೇದಿಕೆಯ ಮೇಲೆ ಕಾಣಿಸಿಕೊಳ್ಳದ ಅನೇಕ ಮಹನೀಯರ ತ್ಯಾಗ, ಸಹನೆ ಮತ್ತು ಆಶೀರ್ವಾದ ಅಡಗಿರುತ್ತವೆ. ಅಂತಹ ಅಪರೂಪದ ವ್ಯಕ್ತಿತ್ವಗಳಲ್ಲಿ ಶ್ರೀಮತಿ ಚೆನ್ನಮ್ಮ ಅವರು ಪ್ರಮುಖರು. ಅವರು ಅಧಿಕಾರ, ಪ್ರಚಾರ ಅಥವಾ ಹುದ್ದೆಗಳಿಗಾಗಿ ಬದುಕಿದವರಲ್ಲ. ಕುಟುಂಬದ ಏಕತೆ, ಸಂಸ್ಕಾರ, ಮಾನವೀಯತೆ ಮತ್ತು ಸೇವೆಯ ಮೌಲ್ಯಗಳನ್ನು ತಮ್ಮ ಬದುಕಿನ ಮೂಲಕ ಸಾರಿದ ಆದರ್ಶ ಮಹಿಳೆಯಾಗಿದ್ದರು. ದೇವೇಗೌಡರು ರಾಷ್ಟ್ರ ರಾಜಕೀಯದಲ್ಲಿ ಅನೇಕ ಸವಾಲುಗಳನ್ನು ಎದುರಿಸಿ ದೇಶದ ಪ್ರಧಾನಮಂತ್ರಿಯಾಗಿ ಸೇವೆ ಸಲ್ಲಿಸುವವರೆಗಿನ ಪಯಣದಲ್ಲಿ, ಕುಟುಂಬದೊಳಗೆ ಧೈರ್ಯ, ಸ್ಥೈರ್ಯ ಮತ್ತು ನೈತಿಕ ಶಕ್ತಿಯನ್ನು ತುಂಬಿದ ಮಹಾನ್ ವ್ಯಕ್ತಿತ್ವ ಚೆನ್ನಮ್ಮ ಅವರದು. ಸಾರ್ವಜನಿಕ ಜೀವನದಲ್ಲಿ ಕಾಣಿಸದಿದ್ದರೂ, ಅವರ ತ್ಯಾಗ ಮತ್ತು ಮೌನ ಸೇವೆ ದೇವೇಗೌಡ ಕುಟುಂಬದ ಬಲಿಷ್ಠ ಅಡಿಪಾಯವಾಗಿತ್ತು. ಇಂದಿನ…
ಧಾರವಾಡ, ಜುಲೈ 19: ಧಾರವಾಡ ಜಿಲ್ಲೆಯ ಅಳ್ನಾವರ ಸಮೀಪದ ಕಸ್ತೂರಬಾ ಬಾಲಕಿಯರ ವಸತಿ ಶಾಲೆಯಲ್ಲಿ 34 ವಿದ್ಯಾರ್ಥಿನಿಯರು ಏಕಾಏಕಿ ಅಸ್ವಸ್ಥಗೊಂಡಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ವಿದ್ಯಾರ್ಥಿನಿಯರು 10 ರಿಂದ 15 ನಿಮಿಷಗಳಿಗೊಮ್ಮೆ ಒದ್ದಾಡುವುದು, ಚೀರಾಡುವುದು ಹಾಗೂ ಅಸಹಜವಾಗಿ ವರ್ತಿಸುವಂತಹ ಲಕ್ಷಣಗಳನ್ನು ತೋರಿಸುತ್ತಿದ್ದು, ಪೋಷಕರು ಮತ್ತು ಸ್ಥಳೀಯರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.ಪ್ರಾಥಮಿಕ ವೈದ್ಯಕೀಯ ಮಾಹಿತಿಯ ಪ್ರಕಾರ, ವೈರಲ್ ಜ್ವರದ ಹಿನ್ನೆಲೆಯಲ್ಲೇ ಈ ಲಕ್ಷಣಗಳು ಕಾಣಿಸಿಕೊಂಡಿರುವ ಸಾಧ್ಯತೆ ಇದ್ದು, ಇನ್ಫ್ಲೂಯೆನ್ಸಾ A ಮತ್ತು B ಸೋಂಕು ಇರಬಹುದೆಂಬ ಶಂಕೆ ವ್ಯಕ್ತವಾಗಿದೆ. ಸೋಂಕಿತ ವಿದ್ಯಾರ್ಥಿನಿಯರ ಪೈಕಿ 8 ಮಂದಿಯ ಆರೋಗ್ಯ ಸ್ಥಿತಿ ಗಂಭೀರವಾಗಿರುವುದರಿಂದ ಅವರನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ತಜ್ಞ ವೈದ್ಯರ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ ಕೆಲ ವಿದ್ಯಾರ್ಥಿನಿಯರಿಗೆ ಅಳ್ನಾವರ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.ಆಸ್ಪತ್ರೆಯಲ್ಲಿಯೂ ವಿದ್ಯಾರ್ಥಿನಿಯರು ಒದ್ದಾಡುವುದು ಹಾಗೂ ಚೀರಾಡುತ್ತಿರುವ ದೃಶ್ಯಗಳು ಪೋಷಕರ ಆತಂಕವನ್ನು ಮತ್ತಷ್ಟು ಹೆಚ್ಚಿಸಿವೆ. ಮಕ್ಕಳ ಆರೋಗ್ಯದ ಬಗ್ಗೆ ನಿಖರ ಮಾಹಿತಿ ನೀಡುವಂತೆ ಪೋಷಕರು ಅಧಿಕಾರಿಗಳನ್ನು ಒತ್ತಾಯಿಸುತ್ತಿದ್ದಾರೆ.ಘಟನೆಯ ಬೆನ್ನಲ್ಲೇ ವಸತಿ…
ಉಡುಪಿ ಜಿಲ್ಲೆ 317 ಡಿ 2025-26ನೇ ಸಾಲಿನ ಜಿಲ್ಲಾ ರಾಜ್ಯಪಾಲರಾದ ಶ್ರೀ ಅರವಿಂದ್ ಶೆಣೈ ಅವರು 2026-27ನೇ ಸಾಲಿನ ಜಿಲ್ಲಾ ರಾಜ್ಯಪಾಲರಾದ ತಾರಾನಾಥ್ ಎಚ್.ಎಂ ಅವರಿಗೆ ಜಿಲ್ಲಾ ಕಚೇರಿಯಲ್ಲಿ ಅಧಿಕಾರ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಪ್ರಥಮ ಉಪರಾಜ್ಯಪಾಲ ಗೋವರ್ಧನ್ ಶೆಟ್ಟಿ, ದ್ವಿತೀಯ ಉಪರಾಜ್ಯಪಾಲ ವೆಂಕಟೇಶ್ ಹೆಬ್ಬಾರ್, ನಿಕಟಪೂರ್ವ ಕೋಶಾಧಿಕಾರಿ ಬಾಲಕೃಷ್ಣ ಹೆಗಡೆ, ನಿಕಟಪೂರ್ವ ಪಿ.ಆರ್.ಒ. ಸುಧರ್ಶನ್ ಪಡಿಯಾರ್ ವಿಟ್ಲ, ನಿಕಟಪೂರ್ವ ಹೆಚ್ಚುವರಿ ಕಾರ್ಯದರ್ಶಿ ಚಂದ್ರಹಾಸ ರೈ ಹಾಗೂ ಪ್ರಥಮ ಮಹಿಳಾ ಸಭಿತಾ ತಾರಾನಾಥ್ ಉಪಸ್ಥಿತರಿದ್ದರು.
ಬೆಂಗಳೂರು, ಜುಲೈ 19: ಮಾಜಿ ಪ್ರಧಾನಮಂತ್ರಿ ಹಾಗೂ ಜನತಾದಳ (ಜಾತ್ಯತೀತ)ದ ರಾಷ್ಟ್ರೀಯ ನಾಯಕ ಎಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ಶ್ರೀಮತಿ ಚೆನ್ನಮ್ಮ ದೇವೇಗೌಡ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ಸೂಚಿಸಿ, ಕುಟುಂಬದ ದುಃಖದಲ್ಲಿ ಭಾಗಿಯಾಗಿದ್ದಾರೆ. ಶ್ರೀಮತಿ ಚೆನ್ನಮ್ಮ ದೇವೇಗೌಡ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣ ‘ಎಕ್ಸ್’ ಮೂಲಕ ಭಾವುಕ ಸಂತಾಪ ಸಂದೇಶ ಪ್ರಕಟಿಸಿದರು. ತಮ್ಮ ಸಂದೇಶದಲ್ಲಿ, ಚೆನ್ನಮ್ಮ ದೇವೇಗೌಡ ಅವರ ಅಗಲಿಕೆಯಿಂದ ಉಂಟಾಗಿರುವ ನೋವಿಗೆ ಸಂತಾಪ ಸೂಚಿಸಿ, ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಾಗೂ ಕುಟುಂಬದ ಸದಸ್ಯರಿಗೆ ಈ ದುಃಖವನ್ನು ಭರಿಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಿದರು. ಬಳಿಕ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ, ಚೆನ್ನಮ್ಮ ದೇವೇಗೌಡ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಪುಷ್ಪನಮನ ಸಲ್ಲಿಸಿದರು. ಬಳಿಕ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರೊಂದಿಗೆ ಕೆಲಕಾಲ ಕುಳಿತು ಮಾತನಾಡಿದ ಅವರು, ದೇವೇಗೌಡರ ಕೈಹಿಡಿದು…
ಮಂಗಳೂರು, ಜುಲೈ 18: ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಪ್ರಧಾನಮಂತ್ರಿ ಹಾಗೂ ಜನತಾದಳ (ಜಾತ್ಯತೀತ)ದ ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ. ದೇವೇಗೌಡ ಅವರ ಕುಟುಂಬದ ಹಿರಿಯ ಸದಸ್ಯೆ ಶ್ರೀಮತಿ ಚೆನ್ನಮ್ಮ ದೇವೆಗೌಡ ಅವರ ನಿಧನದ ಸುದ್ದಿ ಅತ್ಯಂತ ದುಃಖಕರವಾಗಿದೆ. ಅವರ ಅಗಲಿಕೆಯು ದೇವೇಗೌಡರ ಕುಟುಂಬಕ್ಕೆ ಮಾತ್ರವಲ್ಲದೆ, ಜನತಾದಳ (ಜಾತ್ಯತೀತ) ಪಕ್ಷದ ಸಮಸ್ತ ಕಾರ್ಯಕರ್ತರು ಹಾಗೂ ಅಭಿಮಾನಿಗಳಿಗೆ ಅಪಾರ ನೋವನ್ನುಂಟು ಮಾಡಿದ್ದು, ತುಂಬಲಾರದ ನಷ್ಟವಾಗಿದೆ ಎಂದು ಜನತಾದಳ (ಜಾತ್ಯತೀತ) ದಕ್ಷಿಣ ಕನ್ನಡ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಂತಾಪ ಸಂದೇಶ ನೀಡಿರುವ ಅವರು, ಶ್ರೀಮತಿ ಚೆನ್ನಮ್ಮ ದೇವೆಗೌಡ ಅವರು ಸರಳತೆ, ಸೌಜನ್ಯ, ಮಾನವೀಯ ಮೌಲ್ಯಗಳು ಹಾಗೂ ಕುಟುಂಬದ ಒಗ್ಗಟ್ಟಿನ ಪ್ರತೀಕವಾಗಿದ್ದರು. ತಮ್ಮ ಜೀವನದುದ್ದಕ್ಕೂ ಕುಟುಂಬದ ಆಧಾರಸ್ತಂಭವಾಗಿ ನಿಂತು ಉತ್ತಮ ಸಂಸ್ಕಾರ, ಸೇವಾ ಮನೋಭಾವ ಹಾಗೂ ಸಾಮಾಜಿಕ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ನೀಡಿದ ಆದರ್ಶ ವ್ಯಕ್ತಿತ್ವ ಅವರದ್ದಾಗಿತ್ತು. ಅವರ ಜೀವನ ಶೈಲಿ ಎಲ್ಲರಿಗೂ ಪ್ರೇರಣೆಯಾಗಿದ್ದು,…
ಬಂಟ್ವಾಳ, ಜುಲೈ 18: ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ನಲ್ಲಿ ನಡೆದ ಯುವತಿ ಲಾವಣ್ಯ ಅವರ ಅಮಾನುಷ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ, ಜನತಾದಳ (ಜಾತ್ಯತೀತ) ದಕ್ಷಿಣ ಕನ್ನಡ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ ಅವರ ನಿರ್ದೇಶನದ ಮೇರೆಗೆ ಜೆಡಿಎಸ್ ನಿಯೋಗವು ಮೃತೆಯ ನಿವಾಸಕ್ಕೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ ದುಃಖದಲ್ಲಿ ಭಾಗಿಯಾಯಿತು. ಬಳಿಕ ನಿಯೋಗವು ಬಂಟ್ವಾಳ ಪೊಲೀಸ್ ಠಾಣೆಗೆ ತೆರಳಿ ಪೊಲೀಸ್ ನಿರೀಕ್ಷಕರಿಗೆ ಮನವಿ ಸಲ್ಲಿಸಿತು. ಈ ವೇಳೆ ಮಾತನಾಡಿದ ಜೆಡಿಎಸ್ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಯೋಗೀಶ್ ಶೆಟ್ಟಿ ಜಪ್ಪು, ಲಾವಣ್ಯ ಹತ್ಯೆ ಪ್ರಕರಣವು ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿರುವ ಅಮಾನವೀಯ ಕೃತ್ಯವಾಗಿದ್ದು, ಆರೋಪಿಯ ವಿರುದ್ಧ ಯಾವುದೇ ರೀತಿಯ ಒತ್ತಡಗಳಿಗೆ ಮಣಿಯದೆ ಸಂಪೂರ್ಣ ಪಾರದರ್ಶಕ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು. ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ವೈಜ್ಞಾನಿಕ ಸಾಕ್ಷ್ಯಾಧಾರಗಳನ್ನು ಸಮರ್ಪಕವಾಗಿ ಸಂಗ್ರಹಿಸಿ, ಶೀಘ್ರದಲ್ಲಿಯೇ ಬಲಿಷ್ಠ ದೋಷಾರೋಪಣಾ ಪತ್ರ (ಚಾರ್ಜ್ಶೀಟ್) ಸಲ್ಲಿಸಿ, ನ್ಯಾಯಾಲಯದಲ್ಲಿ ಸಮರ್ಥವಾಗಿ ಪ್ರಕರಣ ಮಂಡಿಸುವ ಮೂಲಕ…
ಉಡುಪಿ, ಜುಲೈ 18: ಉಡುಪಿ ಜಿಲ್ಲೆಯ ಸಂತೆಕಟ್ಟೆ ಪ್ರದೇಶದಲ್ಲಿ ಸುಮಾರು ಐವತ್ತು ವರ್ಷಗಳಿಂದ ಸಾರ್ವಜನಿಕರಿಗೆ ವಿಶಾಲವಾದ ನೆರಳು, ಶುದ್ಧ ಗಾಳಿ ಹಾಗೂ ಪರಿಸರ ಸಮತೋಲನವನ್ನು ಒದಗಿಸುತ್ತಿದ್ದ ಬೃಹತ್ ಮರವನ್ನು ಏಕಾಏಕಿ ಕಡಿದು ಹಾಕಿರುವ ಘಟನೆಗೆ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕ ತೀವ್ರ ಆಕ್ರೋಶ ಹಾಗೂ ಖಂಡನೆ ವ್ಯಕ್ತಪಡಿಸಿದೆ. ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾಧ್ಯಕ್ಷ ಪ್ರಾಂಕಿ ಡಿಸೋಜ ಕೊಳಲಗಿರಿ ಮಾತನಾಡಿ, ದಶಕಗಳಿಂದ ಸಾವಿರಾರು ಸಾರ್ವಜನಿಕರಿಗೆ ಆಶ್ರಯ ನೀಡುತ್ತಿದ್ದ, ಪರಿಸರದ ಅಮೂಲ್ಯ ಸಂಪತ್ತಾಗಿದ್ದ ಮರವನ್ನು ಯಾವುದೇ ಸ್ಪಷ್ಟ ಕಾರಣವಿಲ್ಲದೆ ಹಾಗೂ ಸಾರ್ವಜನಿಕರ ಭಾವನೆಗಳನ್ನು ಲೆಕ್ಕಿಸದೆ ಕಡಿದು ಹಾಕಿರುವುದು ಅತ್ಯಂತ ದುಃಖಕರ ಮತ್ತು ಖಂಡನೀಯ ಕೃತ್ಯವಾಗಿದೆ. ಇದು ಕೇವಲ ಒಂದು ಮರದ ನಾಶವಲ್ಲ, ಪ್ರಕೃತಿಯ ಮೇಲಿನ ಕ್ರೌರ್ಯ ಹಾಗೂ ಪರಿಸರ ಸಂರಕ್ಷಣೆಯ ಮೌಲ್ಯಗಳಿಗೆ ಮಾಡಿದ ಅಪಮಾನವಾಗಿದೆ ಎಂದು ಹೇಳಿದರು. ಇತ್ತೀಚಿನ ದಿನಗಳಲ್ಲಿ ಹವಾಮಾನ ವೈಪರೀತ್ಯ, ಅತಿಯಾದ ಉಷ್ಣಾಂಶ ಹಾಗೂ ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಸಂದರ್ಭದಲ್ಲಿ, ಹಳೆಯ ಮರಗಳನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ.…
ಉಡುಪಿ, ಜುಲೈ 18: ಮುಂಗಾರು ಮಳೆಯ ತೀವ್ರ ಕೊರತೆಯಿಂದ ಉಡುಪಿ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಬರದ ಛಾಯೆ ಆವರಿಸಿದ್ದು, ಕೃಷಿ ಚಟುವಟಿಕೆಗಳು ಸಂಪೂರ್ಣವಾಗಿ ಹಿನ್ನಡೆ ಅನುಭವಿಸುತ್ತಿವೆ. ರೈತರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯರು ಹಾಗೂ ಜೆಡಿಎಸ್ ನೆರೆ-ಬರ ಅಧ್ಯಯನ ತಂಡದ ಅಧ್ಯಕ್ಷರಾದ ಎಸ್.ಎಲ್. ಭೋಜೇಗೌಡ ಅವರು, ಜಾತ್ಯತೀತ ಜನತಾದಳ ಉಡುಪಿ ಜಿಲ್ಲಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಅವರ ನೇತೃತ್ವದಲ್ಲಿಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ರೈತರ ಸಮಸ್ಯೆಗಳನ್ನು ಆಲಿಸಿದರು. ಬಳಿಕ ಮಾತನಾಡಿದ ಎಸ್.ಎಲ್. ಭೋಜೇಗೌಡ ಅವರು, ಈ ವರ್ಷ ನಿರೀಕ್ಷಿತ ಪ್ರಮಾಣದಲ್ಲಿ ಮುಂಗಾರು ಮಳೆಯಾಗದ ಕಾರಣ ರೈತರು ಬಿತ್ತನೆ ಮಾಡಿದ ಭತ್ತ ಸೇರಿದಂತೆ ಹಲವು ಬೆಳೆಗಳು ಒಣಗಿ ನಾಶವಾಗುತ್ತಿವೆ. ಅನೇಕ ಪ್ರದೇಶಗಳಲ್ಲಿ ಬಿತ್ತನೆಯೇ ಸಾಧ್ಯವಾಗದೆ ರೈತರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಕುಡಿಯುವ ನೀರು ಹಾಗೂ ಕೃಷಿಗೆ ಅಗತ್ಯವಾದ ನೀರಿನ ಕೊರತೆಯೂ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಗ್ರಾಮೀಣ ಜನತೆ ಸಂಕಷ್ಟದ ಜೀವನ ನಡೆಸುವಂತಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು. ರೈತರು ಎದುರಿಸುತ್ತಿರುವ…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
