- ಕರಂಬಾರು ಶಾಲೆಯಲ್ಲಿ ಸಂಭ್ರಮ ಸಡಗರದಿಂದ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ
- ಕೋರ್ದಬ್ಬು ದೈವದ ಪಾತ್ರಿ ಸೀನ ಪಾತ್ರಿ ನಂದಿಕೂರು ಮೆರೆಗ್ ತುಳು ಕಲ್ಚರಲ್ ರಿಸರ್ಚ್ ಫೌಂಡೇಶನ್ದ “ತುಳುವಾಲ ಕುಲಸಿರಿ – 2026” ಪ್ರಶಸ್ತಿ ಘೋಷಣೆ
- ಪುತ್ತೂರಿನ ಸಾನ್ವಿತಾ ಎಂ. ರೈ ಗಿನ್ನೆಸ್ ವಿಶ್ವ ದಾಖಲೆಗೆ ಸೇರ್ಪಡೆ
- ಗ್ರೀನ್ ವ್ಯೂ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ
- ಮಂಗಳೂರಿನ ಸಿಟಿ ಸೆಂಟರ್ KFC ಮಳಿಗೆಯಲ್ಲಿ 9 ತಿಂಗಳ ಹಿಂದಿನ ಮಾಂಸ ಪತ್ತೆ: ಆರೋಗ್ಯಾಧಿಕಾರಿಗಳಿಂದ ಮಳಿಗೆಗೆ ಬೀಗ
- ತಲ್ಲೂರಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ: ಆಟೋ ಚಾಲಕರಿಗೆ ಸಿಹಿ ವಿತರಣೆ, ಶೇ.90 ಅಂಕ ಗಳಿಸಿದ ಸ್ಪಂದಿತ ಪೂಜಾರಿಗೆ ಡಾ. ರವೀಂದ್ರ ತಲ್ಲೂರು ಅವರಿಂದ ಸನ್ಮಾನ
- ಡಿ.ಕೆ. ಯೂಸ್ಡ್ ವೆಹಿಕಲ್ ಡೀಲರ್ಸ್ ಅಸೋಸಿಯೇಷನ್ನ ನೂತನ ಕಾನೂನು ಸಲಹೆಗಾರರಾಗಿ ಶ್ರೀ ಸಿನಾನ್ ಸಿದ್ದೀಕ್ ನೇಮಕ
- ಕಾರ್ಕಳದ ಶ್ಯೈನಿ ಅಸ್ಮಾ ಸಲ್ಡಾನಗೆ ಐತಿಹಾಸಿಕ ಸಾಧನೆ ಉಡುಪಿ ಜಿಲ್ಲೆಯ ಪ್ರಥಮ ಮಹಿಳಾ ವಾಣಿಜ್ಯ ಪೈಲಟ್ ಎಂಬ ಹೆಗ್ಗಳಿಕೆ
Author: Tulunada Surya
ಕರಂಬಾರು ಶಾಲಾ ಮೈದಾನ ದಲ್ಲಿ ದೇಶದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆ ಹಾಗೂ ಸಡಗರದಿಂದ ಆಚರಿಸಲಾಯಿತು.ಧ್ವಜಾರೋಹಣವನ್ನು ಶಾಲಾ SDMC ಅಧ್ಯಕ್ಷರಾದ ಶ್ರೀ ಗುಣಪಲ್ ದೇವಾಡಿಗ ನೆರವೇರಿಸಿ ದೇಶದ ಸ್ವಾತಂತ್ರಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಮಹನೀಯರನ್ನು ಸ್ಮರಿಸ ಲಾಯಿತು, ಮಕ್ಕಳಲ್ಲಿ ದೇಶಪ್ರೇಮ ಬೆಳೆಸುವಲ್ಲಿ ಶಿಕ್ಷಕರ ಪಾತ್ರ ಮಹತ್ತರವಾದದ್ದು ಎಂದು ಹೇಳಿದರು. ಮುಖ್ಯ ಅತಿಥಿಗಳಾಗಿ ಕೌನ್ಸಿಲರ್ ದಿನೇಶ್ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸತೀಶ್ ದೇವಾಡಿಗ, ಶ್ರಿ ಮಾರಿಯಮ್ಮ ಕೋಟೆ ಬಬ್ಬು ಸ್ವಾಮಿ ದೈವಸ್ಥಾನ ಕರಂಬಾರು ಅಧ್ಯಕ್ಷರಾದ ಶ್ರೀ ಜಗನ್ನಾಥ ಸಾಲ್ಯಾನ್ , ನಮ್ಮ ಕ್ಲಿನಿಕ್ ಮಳವೂರು ವೈದ್ಯಾಧಿಕಾರಿ ಶ್ರೀ ನಚಿಕೇತ, ನಾಗರಿಕ ಸೇವಾ ಸಮಿತಿ (ರಿ) ಅಂಬೇಡ್ಕರ್ ನಗರ ಕರಂಬಾರು ಅಧ್ಯಕ್ಷರಾದ ಶ್ರಿ ಭೋಜರಾಜ್ ಕೋಟ್ಯಾನ್, ನಮ್ಮ ಜವನೆರ್ ಕರಂಬಾರು ಗೌರವ ಅಧ್ಯಕ್ಷರಾದ ಶ್ರೀ ರಮೇಶ್ ಸುವರ್ಣ, ಶ್ರಿ ಮಹಾಲಕ್ಷ್ಮಿ ದೇವಸ್ಥಾನ ಕರಂಬಾರು. ಅಧ್ಯಕ್ಷರಾದ ಶ್ರಿ ಲಕ್ಷ್ಮಣ್ ಬಂಗೇರ, ಸಾವಿತ್ರಿ ಟೀಚರ್, ಓಂಕಾರ್ ಫ್ರೆಂಡ್ಸ್ ಅಧ್ಯಕ್ಷರಾದ ಶ್ರೀ ಮನೋಜ್ ಶೆಟ್ಟಿ, ಪದ್ಮನಾಭ,…
ತುಳುನಾಡ್ಡ್, ಐಟ್ಲಾ ಮುಲ್ಕಿ, ಹೆಜಮಾಡಿ, ಉಡುಪಿ, ಮಂಗಳೂರುಡು ಕೋರ್ದಬ್ಬು ಕಂಬೆರ್ಲು ದೈವದ ಪಾತ್ರಿಯಾದ್ ಪುಗರ್ತೆ ದೆತೊಂದು, ಕರಿನ್ 37 ವರ್ಸಡ್ದ್ ದೈವದ ಸೇವೆನ್ ನಿಷ್ಠೆ ಬೊಕ್ಕ ಪ್ರಾಮಾಣಿಕತೆಡ್ ಮಲ್ತೊಂದು ಬೈದಿನ ಪ್ರಸ್ತುತ ನಂದಿಕೂರುದ ನಿವಾಸಿಯಾಯಿನ ಶ್ರೀ ಶೀನ ಪಾತ್ರಿ ಮೆರೆಗ್ ತುಳು ಕಲ್ಚರಲ್ ರಿಸರ್ಚ್ ಫೌಂಡೇಶನ್ (ರಿ.) ಮೊಕ್ಲೆನ ವರ್ಸದ “ತುಳುವ ಜವನೆರೆ ಆಯನ, ತುಳುನಾಡ್ ಕಾನ್ಕ್ಲೇವ್ – 2026″ದ ಜೀವಮಾನದ ಸಾಧನಾ ಪುರಸ್ಕಾರ “ತುಳುವಾಲ ಕುಲಸಿರಿ” ಪ್ರಶಸ್ತಿನ್ ಆಗಸ್ಟ್ 23ತ್ತಾನಿ ಮುಲ್ಕಿದ ಸರ್ಕಾರಿ ಪದವಿ ಪೂರ್ವ ಕಾಲೇಜಿಡ್ ನಡಪರೆ ಉಪ್ಪುನ ಸಮಾವೇಶೊಡು ಕೊರಿಯೆರೆ ನಿರ್ಧಾರ ಮಲ್ತ್ದೆರ್. ಶ್ರೀ ಶೀನ ಪಾತ್ರಿ ಮೇರ್ ಸುಮಾರು 37 ವರ್ಸಡ್ದ್ ಬಬ್ಬು ಸ್ವಾಮಿನ ದರ್ಶನ ಸೇವೆನ್ ಮಲ್ತೊಂದು ಬೈದೆರ್. ಬಬ್ಬುಸ್ವಾಮಿನ ಚರಿತ್ರೆಯಾಯಿನ “ಬೈದ”ನ್ ಎಡ್ಡೆಡೇ ತೆರಿದಿನಾರಾದ್ ನಾನಾ ಕಡೆಟ್ ಸೇವೆನ್ ಮಲ್ತ್ದೆರ್. ಕಚ್ಚೂರು ಮಾಲ್ದಿದೇವಿ ಬೊಕ್ಕ ಬಬ್ಬುಸ್ವಾಮಿನ ಮೂಲಕ್ಷೇತ್ರ ಕಚ್ಚೂರುಡುಲಾ ಬಬ್ಬು ಸ್ವಾಮಿನ ದರ್ಶನ ಪಾತ್ರಿಯಾದ್ ಸೇವೆ ಸಲ್ಲಿಸಾದೆರ್. ಮುಲ್ಕಿ ಮಟ್ಟು ಗ್ರಾಮದ ಕೂಡುಕಟ್ಟುಗು…
ಪುತ್ತೂರು, ಆ. 16: ಕರಾಟೆ ಕ್ಷೇತ್ರದಲ್ಲಿ ಜಾಗೃತಿ ಮೂಡಿಸುವ ಹಾಗೂ ದೇಶದ ನಾಗರಿಕರಿಗೆ ಆತ್ಮರಕ್ಷಣಾ ಕೌಶಲ್ಯವನ್ನು ತಲುಪಿಸುವ ಮಹತ್ವಾಕಾಂಕ್ಷೆಯೊಂದಿಗೆ ಕಾರ್ಯನಿರ್ವಹಿಸುತ್ತಿರುವ World Karate Masters Association (WKMA) ಸಂಸ್ಥೆಯ ವತಿಯಿಂದ ಚೆನ್ನೈನಲ್ಲಿ ಆಯೋಜಿಸಲಾದ 3ನೇ ಗಿನ್ನೆಸ್ ವಿಶ್ವ ದಾಖಲೆ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಧಾನ ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿ ಸಾನ್ವಿತಾ ಎಂ. ರೈ ಭಾಗವಹಿಸಿ ಗಿನ್ನೆಸ್ ವಿಶ್ವ ದಾಖಲೆಯ ಪ್ರಯತ್ನದ ಭಾಗವಾಗಿದ್ದಾರೆ. 2030ರೊಳಗೆ 8 ಕೋಟಿ ಭಾರತೀಯ ನಾಗರಿಕರಿಗೆ ಉಚಿತ ಆತ್ಮರಕ್ಷಣಾ ತರಬೇತಿ ನೀಡುವ ಗುರಿಯನ್ನು WKMA ಹೊಂದಿದ್ದು, ಕರಾಟೆಯ ಮಹತ್ವ, ಆತ್ಮರಕ್ಷಣಾ ಕೌಶಲ್ಯ ಹಾಗೂ ದೈಹಿಕ-ಮಾನಸಿಕ ಸದೃಢತೆಯ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. 2026ರ ಆಗಸ್ಟ್ 16ರಂದು ಚೆನ್ನೈನ ಕೋಯಂಬೇಡು, ಸೇಂಟ್ ಥಾಮಸ್ ಕಾಲೇಜ್ ಆಫ್ ಆರ್ಟ್ಸ್ ಅಂಡ್ ಸೈನ್ಸ್ನಲ್ಲಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಲಂಡನ್ನಲ್ಲಿರುವ ಗಿನ್ನೆಸ್ ವಿಶ್ವ ದಾಖಲೆಗಳ ಪ್ರಧಾನ ಕಚೇರಿಯಿಂದ ಗಿನ್ನೆಸ್ ಪ್ರತಿನಿಧಿ/ಅಧಿಕಾರಿ ಉಪಸ್ಥಿತರಿದ್ದು, ದಾಖಲೆಯ ಪ್ರಯತ್ನಕ್ಕೆ ಸಾಕ್ಷಿಯಾಗಿದ್ದರು. ಕಾರ್ಯಕ್ರಮದ ಪ್ರಮುಖ…
ಮಂಗಳೂರು, ಆ.15: ಅಳಪೆ–ಪಡೀಲ್ನ ಗ್ರೀನ್ ವ್ಯೂ ಅಂಗನವಾಡಿ ಕೇಂದ್ರದಲ್ಲಿ ದೇಶಭಕ್ತಿ ಹಾಗೂ ಸಂಭ್ರಮದ ವಾತಾವರಣದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕ ಅಧ್ಯಕ್ಷರಾದ ಯೋಗಿಶ್ ಶೆಟ್ಟಿ ಜಪ್ಪು ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಹಾಗೂ ದೇಶದ ಏಕತೆ ಮತ್ತು ಸಮಗ್ರತೆಯನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದು ಹೇಳಿದರು. ಮಕ್ಕಳಲ್ಲಿ ಚಿಕ್ಕ ವಯಸ್ಸಿನಿಂದಲೇ ದೇಶಪ್ರೇಮ, ರಾಷ್ಟ್ರಾಭಿಮಾನ, ಶಿಸ್ತು ಹಾಗೂ ಉತ್ತಮ ನಾಗರಿಕ ಮೌಲ್ಯಗಳನ್ನು ಬೆಳೆಸುವಲ್ಲಿ ಅಂಗನವಾಡಿ ಕೇಂದ್ರಗಳ ಪಾತ್ರ ಮಹತ್ವದ್ದಾಗಿದೆ. ಇಂತಹ ರಾಷ್ಟ್ರೀಯ ಹಬ್ಬಗಳ ಮೂಲಕ ಮಕ್ಕಳಿಗೆ ಸ್ವಾತಂತ್ರ್ಯದ ಮಹತ್ವವನ್ನು ಪರಿಚಯಿಸುವ ಕಾರ್ಯ ನಡೆಯುತ್ತಿರುವುದು ಶ್ಲಾಘನೀಯ ಎಂದರು. ಕಾರ್ಯಕ್ರಮದಲ್ಲಿ ಡಿ.ಕೆ. ಗ್ರೂಪ್ ಆಫ್ ಕಂಪನಿಯ ಆಡಳಿತ ನಿರ್ದೇಶಕರಾದ ಆಲ್ವೀನ್ ನೊರೊನ್ಹ, ಡಿ.ಕೆ. ಟ್ರಾನ್ಸ್ಪೋರ್ಟ್ ಕಂಪನಿಯ ಆಡಳಿತ ನಿರ್ದೇಶಕರಾದ ಲೆಜಿ ಡಿಸೋಜ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಅಂಗನವಾಡಿ ಮಕ್ಕಳು ದೇಶಭಕ್ತಿ ಗೀತೆಗಳು ಹಾಗೂ…
ಮಂಗಳೂರು : ನಗರದ ಪ್ರಮುಖ ವಾಣಿಜ್ಯ ಕೇಂದ್ರವಾಗಿರುವ ಸಿಟಿಸೆಂಟರ್ನಲ್ಲಿರುವ KFC ಮಳಿಗೆಯಲ್ಲಿ ಸುಮಾರು 9 ತಿಂಗಳ ಹಿಂದಿನ ಕೋಳಿ ಮಾಂಸ ಪತ್ತೆಯಾಗಿದೆ ಎನ್ನಲಾಗಿದ್ದು, ಘಟನೆ ಬೆಳಕಿಗೆ ಬಂದ ಬೆನ್ನಲ್ಲೇ ಆರೋಗ್ಯ ಹಾಗೂ ಆಹಾರ ಸುರಕ್ಷತಾ ಅಧಿಕಾರಿಗಳು ಮಳಿಗೆಗೆ ತಾತ್ಕಾಲಿಕವಾಗಿ ಬೀಗ ಜಡಿದಿರುವ ಘಟನೆ ನಡೆದಿದೆ. ಆಹಾರ ಪದಾರ್ಥಗಳ ಗುಣಮಟ್ಟ, ಸಂಗ್ರಹಣೆ ಮತ್ತು ಸುರಕ್ಷತಾ ಮಾನದಂಡಗಳ ಕುರಿತು ಅಧಿಕಾರಿಗಳು ನಡೆಸಿದ ಪರಿಶೀಲನೆಯ ಸಂದರ್ಭದಲ್ಲಿ ದೀರ್ಘಕಾಲದಿಂದ ಸಂಗ್ರಹಿಸಲಾಗಿದ್ದ ಹಳೆಯ ಮಾಂಸ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಆಹಾರ ಸೇವಿಸುವ ಗ್ರಾಹಕರ ಆರೋಗ್ಯದ ಮೇಲೆ ಯಾವುದೇ ರೀತಿಯ ದುಷ್ಪರಿಣಾಮ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಅಧಿಕಾರಿಗಳು ಮಳಿಗೆಯ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದ್ದಾರೆ ಎನ್ನಲಾಗಿದೆ. ಆಹಾರ ಸುರಕ್ಷತೆ ಕುರಿತು ಗಂಭೀರ ಪ್ರಶ್ನೆ ಸಾಮಾನ್ಯವಾಗಿ ಕೋಳಿ ಮಾಂಸದಂತಹ ಬೇಗನೆ ಹಾಳಾಗುವ ಆಹಾರ ಪದಾರ್ಥಗಳನ್ನು ನಿಗದಿತ ತಾಪಮಾನದಲ್ಲಿ ಸಂಗ್ರಹಿಸುವುದು, ಅವುಗಳ ಬಳಕೆಯ ಅವಧಿಯನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಹಾಗೂ ಅವಧಿ ಮೀರಿದ ಆಹಾರವನ್ನು ತಕ್ಷಣವೇ ವಿಲೇವಾರಿ ಮಾಡುವುದು ಆಹಾರ ಸುರಕ್ಷತಾ ನಿಯಮಗಳ ಪ್ರಮುಖ ಅಂಶಗಳಾಗಿವೆ. ಆದರೆ,…
ತಲ್ಲೂರು: ದೇಶದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ತಲ್ಲೂರಿನಲ್ಲಿ ಆಟೋ ಚಾಲಕರಿಗೆ ಸಿಹಿ ತಿಂಡಿ ವಿತರಿಸಿ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.ಈ ಸಂದರ್ಭದಲ್ಲಿ ಆಟೋ ಚಾಲಕರ ಕುಟುಂಬದ ಪ್ರತಿಭಾನ್ವಿತ ವಿದ್ಯಾರ್ಥಿನಿ ಕುಮಾರಿ ಸ್ಪಂದಿತ ಪೂಜಾರಿ ಅವರು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.90ರಷ್ಟು ಅಂಕಗಳನ್ನು ಗಳಿಸಿ ಉತ್ತಮ ಸಾಧನೆ ಮಾಡಿರುವ ಹಿನ್ನೆಲೆಯಲ್ಲಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ವಿದ್ಯಾರ್ಥಿನಿಯ ಸಾಧನೆಯನ್ನು ಗುರುತಿಸಿ ತುಳುನಾಡ ರಕ್ಷಣಾ ವೇದಿಕೆಯ ವೈದ್ಯರ ಘಟಕದ ರಾಜ್ಯ ಸಂಘಟನಾ ಕಾರ್ಯದರ್ಶಿ ಡಾ. ರವೀಂದ್ರ ತಲ್ಲೂರು ಅವರು ಸನ್ಮಾನಿಸಿ, ಪ್ರೋತ್ಸಾಹ ಧನ ನೀಡಿ ಮುಂದಿನ ವಿದ್ಯಾಭ್ಯಾಸಕ್ಕೆ ಶುಭ ಹಾರೈಸಿದರು. ಸ್ಪಂದಿತ ಪೂಜಾರಿ ಅವರು ಸವಿತಾ ಪೂಜಾರಿ ಮತ್ತು ಸುಧೀರ್ ಪೂಜಾರಿ ದಂಪತಿಯ ಪುತ್ರಿಯಾಗಿದ್ದಾರೆ. ಕಾರ್ಯಕ್ರಮದಲ್ಲಿ ತುಳುನಾಡ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷರಾದ ಡಾ. ಸತೀಶ್ ಕಾರ್ವಿ, M.D. ರೆಸಿಡೆನ್ಸಿಯ ಅಧ್ಯಕ್ಷರಾದ ಶ್ರೀ ಆನಂದ್ ಸಿರಿಯನ್, ಆಟೋ ರಿಕ್ಷಾ ಚಾಲಕರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು. ದೇಶದ ಸ್ವಾತಂತ್ರ್ಯವನ್ನು ಸ್ಮರಿಸುವುದರ ಜೊತೆಗೆ, ದುಡಿಯುವ ವರ್ಗದ…
ಡಿ.ಕೆ. ಡಿಸ್ಟ್ರಿಕ್ಟ್ ಯೂಸ್ಡ್ ವೆಹಿಕಲ್ ಡೀಲರ್ಸ್ & ಏಜೆಂಟ್ಸ್ ಅಸೋಸಿಯೇಷನ್ (ರಿ.), ಮಂಗಳೂರು ಇದರ ನೂತನ ಕಾನೂನು ಸಲಹೆಗಾರರಾಗಿ ಯುವ ವಕೀಲರಾದ ಶ್ರೀ ಸಿನಾನ್ ಸಿದ್ದೀಕ್ ಅವರನ್ನು ಆಯ್ಕೆ ಮಾಡಲಾಗಿದೆ. ಸಂಘದ ಕಾನೂನು ಸಲಹೆಗಾರರಾಗಿ ಇದುವರೆಗೆ ಸೇವೆ ಸಲ್ಲಿಸುತ್ತಿದ್ದ ಹಿರಿಯ ವಕೀಲರಾದ ಶ್ರೀ ಎಸ್.ಪಿ. ಚಂಗಪ್ಪ ಅವರು ಅನಾರೋಗ್ಯದ ಕಾರಣದಿಂದ ಕಾನೂನು ಸಲಹೆಗಾರರ ಜವಾಬ್ದಾರಿಯಿಂದ ನಿವೃತ್ತರಾಗಿರುವ ಹಿನ್ನೆಲೆಯಲ್ಲಿ, ಅವರ ಸ್ಥಾನಕ್ಕೆ ಶ್ರೀ ಸಿನಾನ್ ಸಿದ್ದೀಕ್ ಅವರನ್ನು ನೂತನ ಕಾನೂನು ಸಲಹೆಗಾರರಾಗಿ ನೇಮಕ ಮಾಡಲಾಗಿದೆ. ಮಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ವಕೀಲರಾಗಿ ಕಾನೂನು ವೃತ್ತಿ ನಿರ್ವಹಿಸುತ್ತಿರುವ ಶ್ರೀ ಸಿನಾನ್ ಸಿದ್ದೀಕ್ ಅವರು ಕಾನೂನು ಕ್ಷೇತ್ರದಲ್ಲಿ ಉತ್ತಮ ಜ್ಞಾನ, ಅನುಭವ ಹಾಗೂ ಪರಿಣಾಮಕಾರಿಯಾಗಿ ವಾದ ಮಂಡಿಸುವ ಸಾಮರ್ಥ್ಯ ಹೊಂದಿರುವ ಯುವ ವಕೀಲರಾಗಿದ್ದಾರೆ. ಕಾನೂನು ಸಂಬಂಧಿತ ವಿಚಾರಗಳಲ್ಲಿ ಸೂಕ್ತ ಮಾರ್ಗದರ್ಶನ ನೀಡುವುದರೊಂದಿಗೆ, ನ್ಯಾಯಸಮ್ಮತ ಹಕ್ಕುಗಳ ರಕ್ಷಣೆಗೆ ಹಾಗೂ ಅಗತ್ಯವಿರುವವರಿಗೆ ಕಾನೂನು ನೆರವು ಒದಗಿಸುವ ನಿಟ್ಟಿನಲ್ಲಿ ಅವರು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಂಘದ ಸದಸ್ಯರಿಗೆ ಎದುರಾಗುವ ವಿವಿಧ ಕಾನೂನು ಸಮಸ್ಯೆಗಳು,…
ಕಾರ್ಕಳ, ಆ. 12: ಕಾರ್ಕಳ ತಾಲೂಕಿನ ಕೌಡೂರು ರಂಗನಪಳ್ಳಿಯ ಶ್ಯೈನಿ ಅಸ್ಮಾ ಸಲ್ಡಾನ ಅವರು ವಾಣಿಜ್ಯ ಪೈಲಟ್ ಪರವಾನಗಿ (Commercial Pilot Licence) ಪಡೆದುಕೊಳ್ಳುವ ಮೂಲಕ ಉಡುಪಿ ಜಿಲ್ಲೆಯ ಪ್ರಥಮ ಮಹಿಳಾ ವಾಣಿಜ್ಯ ಪೈಲಟ್ ಎಂಬ ಐತಿಹಾಸಿಕ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅಶೋಕ್ ಜಾಕೋಬ್ ಸಲ್ಡಾನ ಮತ್ತು ಮರಿಯಾ ಗ್ರೆಟ್ಟಾ ಸಲ್ಡಾನ ದಂಪತಿಯ ಪುತ್ರಿಯಾಗಿರುವ ಶ್ಯೈನಿ, ತಮ್ಮ ಪ್ರಾಥಮಿಕ ಶಿಕ್ಷಣದಿಂದ ಪಿಯುಸಿ ವರೆಗಿನ ವಿದ್ಯಾಭ್ಯಾಸವನ್ನು ಕಾರ್ಕಳದ ಕ್ರೈಸ್ಟ್ ಕಿಂಗ್ ವಿದ್ಯಾಸಂಸ್ಥೆಯಲ್ಲಿ ಪೂರ್ಣಗೊಳಿಸಿದರು. ಬಾಲ್ಯದಿಂದಲೇ ಆಕಾಶದಲ್ಲಿ ಹಾರುವ ಕನಸು ಕಂಡಿದ್ದ ಅವರು, ಅದನ್ನು ನನಸಾಗಿಸುವ ನಿಟ್ಟಿನಲ್ಲಿ ಉನ್ನತ ಶಿಕ್ಷಣದ ಹಾದಿಯನ್ನು ಆಯ್ಕೆ ಮಾಡಿಕೊಂಡರು. ಪೈಲಟ್ ತರಬೇತಿಗೆ ಪ್ರವೇಶ ಪಡೆಯುವ ಉದ್ದೇಶದಿಂದ ಬೆಂಗಳೂರಿನಲ್ಲಿ ಇಂದಿರಾಗಾಂಧಿ ರಾಷ್ಟ್ರೀಯ ಉಡಾನ್ ಅಕಾಡೆಮಿಯ ಪ್ರವೇಶ ಪರೀಕ್ಷೆ ಬರೆದು ತೇರ್ಗಡೆ ಹೊಂದಿದ ಶ್ಯೈನಿ, 2023ರ ಆಗಸ್ಟ್ನಲ್ಲಿ ಉತ್ತರ ಪ್ರದೇಶದ ಫುರ್ಸತ್ಗಂಜ್ನಲ್ಲಿರುವ ಇಂದಿರಾಗಾಂಧಿ ರಾಷ್ಟ್ರೀಯ ಉಡಾನ್ ಅಕಾಡೆಮಿಗೆ ಆಯ್ಕೆಯಾದರು. ಅಕಾಡೆಮಿಯಲ್ಲಿ ಕಠಿಣವಾದ ಸೈದ್ಧಾಂತಿಕ ಹಾಗೂ ಪ್ರಾಯೋಗಿಕ ವಿಮಾನ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಅವರು,…
ಮಂಗಳೂರು: ಮಂಗಳೂರಿನ ಹೆಸರಾಂತ ಶೆಟ್ಟಿ ಟ್ರೇಡರ್ಸ್ ಸಂಸ್ಥೆಯ ಮಾಲಕರಾಗಿ ವ್ಯಾಪಾರ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಹಾಗೂ ಸಮಾಜಮುಖಿ ಕಾರ್ಯಗಳ ಮೂಲಕವೂ ಗುರುತಿಸಿಕೊಂಡಿದ್ದ ಧರ್ಮೇಂದ್ರ ಶೆಟ್ಟಿ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರ ಅಗಲಿಕೆಯ ಸುದ್ದಿ ಕುಟುಂಬಸ್ಥರು, ಬಂಧು-ಬಳಗ, ಸ್ನೇಹಿತರು, ವ್ಯಾಪಾರ ಕ್ಷೇತ್ರದ ಸಹೋದ್ಯೋಗಿಗಳು ಹಾಗೂ ಅಪಾರ ಸಂಖ್ಯೆಯ ಅಭಿಮಾನಿಗಳಲ್ಲಿ ತೀವ್ರ ದುಃಖವನ್ನುಂಟು ಮಾಡಿದೆ. ಅಂತಿಮ ದರ್ಶನ ನಿಧನರಾದ ಆತ್ಮೀಯರಾದ ಧರ್ಮೇಂದ್ರ ಶೆಟ್ಟಿ ಅವರ ಅಂತಿಮ ದರ್ಶನವು 14-08-2026ರಂದು ಬೆಳಿಗ್ಗೆ 9:30ರಿಂದ ಅವರ ವಾಸ್ ಲೇನ್ನಲ್ಲಿರುವ ನಿವಾಸದಲ್ಲಿ ನಡೆಯಲಿದೆ. ಬಂಧು-ಮಿತ್ರರು ಹಾಗೂ ಅಭಿಮಾನಿಗಳು ಆಗಮಿಸಿ ಅಂತಿಮ ದರ್ಶನ ಪಡೆದು ಅಗಲಿದ ಆತ್ಮಕ್ಕೆ ಶ್ರದ್ಧಾಂಜಲಿ ಸಲ್ಲಿಸಬಹುದು. ವ್ಯಾಪಾರ ಕ್ಷೇತ್ರದಲ್ಲಿ ಹಲವು ವರ್ಷಗಳ ಅನುಭವ ಹೊಂದಿದ್ದ ಧರ್ಮೇಂದ್ರ ಶೆಟ್ಟಿ ಅವರು ತಮ್ಮ ಉದ್ಯಮದ ಮೂಲಕ ಮಂಗಳೂರಿನಲ್ಲಿ ಉತ್ತಮ ಹೆಸರು ಗಳಿಸಿದ್ದರು. ರಾಜಕೀಯ ಪಕ್ಷದಲ್ಲಿ ಕೂಡ ಸಕ್ರಿಯರಾಗಿದ್ದು ಯುವ ಜನತಾದಳ ಅದ್ಯಕ್ಷ ರಾಗಿ ಕೂಡ ಕೆಲಸ ಮಾಡಿದವರಾಗಿರುತ್ತಾರೆ. ಬಳಿಕ ರಾಜಕೀಯ ಚಟುವಟಿಕೆಗಳಿಂದ ದೂರವಾಗಿದ್ದರು ವ್ಯವಹಾರದಲ್ಲಿ ಪ್ರಾಮಾಣಿಕತೆ,…
ಆಲಪ್ಪುಳ: ಭಾರತೀಯ ನೌಕಾಪಡೆಯ ಉದ್ಯೋಗಕ್ಕೆ ರಾಜೀನಾಮೆ ನೀಡಿ ಬಳಿಕ ಯೂಟ್ಯೂಬ್ ಹಾಗೂ ನಟನೆಯ ಮೂಲಕ ಜನಪ್ರಿಯತೆ ಗಳಿಸಿರುವ ಸೋಶಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ಅಖಿಲ್ ಎನ್ಆರ್ಡಿ ಅವರ ವೈಯಕ್ತಿಕ ಬದುಕಿನಲ್ಲಿ ಇದೀಗ ಅಚ್ಚರಿಯ ಬೆಳವಣಿಗೆಯೊಂದು ನಡೆದಿದೆ. ಎರಡು ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದ ಅವರ ಪತ್ನಿ ಮೇಘಾ ಮನೆಯಿಂದ ತೆರಳಿದ್ದು, ಬಳಿಕ ಸಂಪರ್ಕಕ್ಕೆ ಸಿಗದಿರುವ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆ ನಡೆಯುತ್ತಿದೆ. ಈ ಘಟನೆಗೆ ಸಂಬಂಧಿಸಿದಂತೆ ಅಖಿಲ್ ಪೊಲೀಸರಿಗೆ ದೂರು ನೀಡಿರುವುದಾಗಿ ವರದಿಯಾಗಿದೆ. ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದಾಗ, ಮೇಘಾ ಅವರು ಬ್ಯಾಗ್ವೊಂದನ್ನು ತೆಗೆದುಕೊಂಡು ಮತ್ತೊಬ್ಬ ವ್ಯಕ್ತಿಯೊಂದಿಗೆ ತೆರಳುತ್ತಿರುವ ದೃಶ್ಯಗಳು ಕಂಡುಬಂದಿವೆ ಎನ್ನಲಾಗಿದೆ. ಈ ನಡುವೆ, ಮೇಘಾ ಅವರು ಬಸ್ ಕಂಡಕ್ಟರ್ ಅಥವಾ ಬಸ್ ಕ್ಲೀನರ್ ಜೊತೆ ತೆರಳಿದ್ದಾರೆ ಎಂಬ ಆರೋಪಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ. ಆದರೆ, ಈ ಹೇಳಿಕೆಗೆ ಇದುವರೆಗೆ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ. ಮೇಘಾ ಹಾಗೂ ಸಂಬಂಧಿತ ವ್ಯಕ್ತಿಯ ಹೇಳಿಕೆ ದೊರೆತ ಬಳಿಕವೇ ಈ…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
