Author: Tulunada Surya

ಉಡುಪಿ, ಜೂನ್ 10: ತಮಿಳುನಾಡು ಮುಖ್ಯಮಂತ್ರಿ ಹಾಗೂ ಖ್ಯಾತ ನಟ C. Joseph Vijay ಅವರು ಜೂನ್ 12ರಂದು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಪ್ರಸಿದ್ಧ Kollur Mookambika Templeಗೆ ಭೇಟಿ ನೀಡಲಿದ್ದು, ದೇವಿ ಮೂಕಾಂಬಿಕೆಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಮುಖ್ಯಮಂತ್ರಿಯಾದ ಬಳಿಕ ಅವರು ಮೊದಲ ಬಾರಿಗೆ ಕ್ಷೇತ್ರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ದೇವಸ್ಥಾನ ಆಡಳಿತ ಹಾಗೂ ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆಗಳು ನಡೆಯುತ್ತಿವೆ. ಲಭ್ಯ ಮಾಹಿತಿಯ ಪ್ರಕಾರ, ಜೂನ್ 12ರಂದು ಮಧ್ಯಾಹ್ನ 12:30ಕ್ಕೆ ವಿಶೇಷ ವಿಮಾನದ ಮೂಲಕ ಅವರು Mangalore International Airportಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ರಸ್ತೆ ಮಾರ್ಗವಾಗಿ ಕೊಲ್ಲೂರಿಗೆ ಪ್ರಯಾಣ ಬೆಳೆಸಿ, ಮಧ್ಯಾಹ್ನ ಸುಮಾರು 3 ಗಂಟೆಗೆ ದೇವಸ್ಥಾನ ತಲುಪಲಿದ್ದಾರೆ. ದೇವಾಲಯದಲ್ಲಿ ವಿಶೇಷ ಪೂಜೆ, ಅರ್ಚನೆ ಹಾಗೂ ದೇವಿಯ ದರ್ಶನವನ್ನು ನೆರವೇರಿಸಲಿರುವ ಮುಖ್ಯಮಂತ್ರಿ ವಿಜಯ್, ಕೆಲಕಾಲ ದೇವಸ್ಥಾನದಲ್ಲಿ ಕಾಲ ಕಳೆಯಲಿದ್ದಾರೆ. ಮೂಕಾಂಬಿಕಾ ದೇವಿಯ ಮೇಲಿನ ಅಪಾರ ಭಕ್ತಿಗೆ ಹೆಸರಾದ ವಿಜಯ್ ಅವರ ಈ ಭೇಟಿ ರಾಜಕೀಯ ಹಾಗೂ ಸಿನಿರಂಗದ…

Read More

ಉಪ್ಪೂರು ಗ್ರಾಮದ ಅಳಿವಿನಂಚಿನಲ್ಲಿರುವ ಸೇಕ್ರೆಡ್ ಹಾರ್ಟ್ ಪ್ರಾಥಮಿಕ ಶಾಲೆ ಅಮ್ಮುಂಜೆ ಇದರ ಪ್ರಾರಂಭೋತ್ಸವವನ್ನು ಕೊಳಲಗಿರಿ ಸೇಕ್ರೆಡ್ ಹಾರ್ಟ್ ಚರ್ಚ ಧರ್ಮಗುರುಗಳಾದ ರೆವೆರೆಂಡ್ ಫಾದರ್ ಜೋಸೆಫ್ ಮಚಾದೋ ಅವರು ದೀಪ ಪ್ರಜ್ವಲನೆಯೊಂದಿಗೆ ಉದ್ಘಾಟಿಸಿ.. ಮಕ್ಕಳಿಗಾಗಿ ಆಸ್ತಿ ಮಾಡಬೇಡಿ, ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ ಎಂದು ಪೋಷಕರಿಗೆ ತಿಳಿಸಿದರು, ಹಾಗೂ ಶಿಕ್ಷಕರ ತ್ಯಾಗ ಮನೋಭಾವ ಹಾಗೂ ಮಾತೃವಾತ್ಸಲ್ಯವನ್ನು ನೀಡುವ ಶಿಕ್ಷಕರನ್ನು ಗೌರವದಿಂದ ಕಾಣಬೇಕು ಎಂದು ತಿಳಿಸಿದರು.. ಮುಖ್ಯ ಅತಿಥಿಯಾಗಿ ಆಗಮಿಸಿ ಈ ಶಾಲೆಯನ್ನು ಉಳಿಸಿಕೊಳ್ಳುವಲ್ಲಿ ಬಹುಮುಖ್ಯ ಪಾತ್ರವಹಿಸಿದ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾಧ್ಯಕ್ಷರಾದ ಫ್ರ್ಯಾಂಕಿ ಡಿಸೋಜ ಮಾತನಾಡುತ್ತಾ.. ಮಕ್ಕಳು ಇಷ್ಟ ಪಟ್ಟು ಶಾಲೆಗೆ ಬರುವಂತಾಗಬೇಕು. ಅವರ ಪೋಷಕರಿಗೆ ಯಾವುದೇ ರೀತಿಯ ಖರ್ಚು ಬರಬಾರದು. ಆಗ ಮಾತ್ರ ನಾವು ಶೈಕ್ಷಣಿಕ ಪ್ರಗತಿ ಕಾಣಲು ಸಾಧ್ಯ. ಶಾಲೆಯಲ್ಲಿ ಉತ್ತಮ ಶಿಕ್ಷಣದ ಜೊತೆಗೆ ಶ್ರೇಷ್ಠ ಸಂಸ್ಕಾರ ನೀಡುವ ಗುರುಗಳು ನಮಗೆಲ್ಲ ಶ್ರೇಷ್ಠರು ಅವರನ್ನು ಸದಾ ಗೌರವದಿಂದ ಕಾಣಬೇಕು. ಅವರಿಗೆ ವೈಯಕ್ತಿಕ ಬದುಕಿದೆ ಅನ್ನುವುದನ್ನು ನಾವು ಅರಿತುಕೊಳ್ಳಬೇಕೆಂದು ಹಾಗೂ ಶಾಲೆಯ…

Read More

ಮಾಲೂರು: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision – SIR) ಕಾರ್ಯವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಬೂತ್ ಮಟ್ಟದ ಏಜೆಂಟ್‌ಗಳ (BLA) ಕಾರ್ಯಾಗಾರವನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮದಲ್ಲಿ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉತ್ಸಾಹದಿಂದ ಭಾಗವಹಿಸಿದರು. ಕಾರ್ಯಾಗಾರದ ಮುಖ್ಯ ಉದ್ದೇಶ ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯನ್ನು ಸಮರ್ಪಕವಾಗಿ ಅರ್ಥಮಾಡಿಕೊಳ್ಳುವುದು ಹಾಗೂ ಚುನಾವಣಾ ಆಯೋಗದ ಮಾರ್ಗಸೂಚಿಗಳ ಅನುಸಾರ ಬೂತ್ ಮಟ್ಟದ ಏಜೆಂಟ್‌ಗಳು ನಿರ್ವಹಿಸಬೇಕಾದ ಜವಾಬ್ದಾರಿಗಳ ಕುರಿತು ಅರಿವು ಮೂಡಿಸುವುದಾಗಿತ್ತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಜೆಡಿಎಸ್ ಪಕ್ಷದ ರಾಜ್ಯ ವಕ್ತಾರರಾದ ಶ್ರೀ ದೇವರಾಜ್ ಅವರು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯ ವಿವಿಧ ಹಂತಗಳು, ಮತದಾರರ ಸೇರ್ಪಡೆ, ತಿದ್ದುಪಡಿ ಹಾಗೂ ಹೆಸರುಗಳ ಅಳವಡಿಕೆ ಕುರಿತಂತೆ ವಿವರವಾದ ಮಾಹಿತಿ ನೀಡಿದರು. ಜೊತೆಗೆ ಚುನಾವಣಾ ಆಯೋಗದ ನಿಯಮಾವಳಿಗಳನ್ನು ಪರಿಣಾಮಕಾರಿಯಾಗಿ ಪಾಲಿಸುವ ಮೂಲಕ ಮತದಾರರ ಪಟ್ಟಿಯನ್ನು ನಿಖರ ಮತ್ತು ಪಾರದರ್ಶಕವಾಗಿಡುವ ಅಗತ್ಯವನ್ನು ಒತ್ತಿ ಹೇಳಿದರು. ಬೂತ್ ಮಟ್ಟದ…

Read More

ಬೆಂಗಳೂರು, ಜೂನ್ 10: ರಾಜ್ಯಸಭಾ ಟಿಕೆಟ್ ವಿಚಾರವಾಗಿ ಕಳೆದ ಕೆಲವು ದಿನಗಳಿಂದ ರಾಜಕೀಯ ವಲಯದಲ್ಲಿ ನಡೆಯುತ್ತಿರುವ ಚರ್ಚೆಗಳಿಗೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್ ಡಿ ದೇವೆಗೌಡರವರು ಸ್ಪಷ್ಟನೆ ನೀಡಿದ್ದು, ರಾಜ್ಯಸಭಾ ಸದಸ್ಯನಾಗಬೇಕೆಂಬ ಯಾವುದೇ ವ್ಯಾಮೋಹ ಅಥವಾ ಹಂಬಲ ತಮ್ಮಲ್ಲಿಲ್ಲ ಎಂದು ತಿಳಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು, ತಮ್ಮ ಏಳು ದಶಕಗಳ ಸುದೀರ್ಘ ರಾಜಕೀಯ ಪಯಣವನ್ನು ಸ್ಮರಿಸಿ, “1954-55ರಿಂದಲೇ ನಾನು ಸಕ್ರಿಯ ರಾಜಕಾರಣದಲ್ಲಿ ತೊಡಗಿದ್ದೇನೆ. ಗುತ್ತಿಗೆ ಕೆಲಸದ ಜೊತೆಗೆ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಾ ರಾಜಕೀಯ ಜೀವನ ಆರಂಭಿಸಿದ್ದೆ. ಅಂದಿನಿಂದ ಇಂದಿನವರೆಗೆ ಜನರ ನಡುವೆ ಕೆಲಸ ಮಾಡುತ್ತಾ ಬಂದಿದ್ದೇನೆ. ಹೀಗಿರುವಾಗ ಇಂದು ಯಾವುದೇ ಹುದ್ದೆ ಅಥವಾ ಸ್ಥಾನಕ್ಕಾಗಿ ಹಾತೊರೆಯುವ ಪ್ರಶ್ನೆಯೇ ಇಲ್ಲ” ಎಂದು ಹೇಳಿದರು. ರಾಜ್ಯಸಭಾ ಟಿಕೆಟ್ ಕೈತಪ್ಪಿರುವುದು ತಮ್ಮಗೆ ಅಪಮಾನವಾಗಿದೆ ಎಂಬ ಬೆಂಬಲಿಗರ ಅಭಿಪ್ರಾಯಗಳ ಕುರಿತು ಪ್ರತಿಕ್ರಿಯಿಸಿದ ದೇವೇಗೌಡರು, “ನನ್ನ ಸ್ನೇಹಿತರು ಮತ್ತು ಹಿತೈಷಿಗಳು ಕಾಳಜಿಯಿಂದ ಮಾತನಾಡುತ್ತಿದ್ದಾರೆ. ಆದರೆ ನನ್ನ ಹೆಸರು ಪರಿಗಣನೆಯಲ್ಲಿದೆ ಎಂಬುದು ಮಾಧ್ಯಮಗಳ ವರದಿಗಳಲ್ಲಷ್ಟೇ ಕೇಳಿಬಂದಿದ್ದು,…

Read More

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಉಳ್ಳಾಲ ಶಾಖೆಯ 11ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಸಂಘದ ಸದಸ್ಯರಾದ ಶ್ರೀ ವಿಜಯ್ ಕುಮಾರ್, ಶ್ರೀ ಪುರುಷೋತ್ತಮ ಕೆ., ಶ್ರೀ ಗೋಪಾಲ್ ಯು.ಕೆ. ಹಾಗೂ ಶ್ರೀಮತಿ ದೇವಕಿ ಆರ್. ಉಳ್ಳಾಲ್ ಅವರು ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಸಂಘದ ಸದಸ್ಯರಾದ ಶ್ರೀ ವಿಜಯ್ ಕುಮಾರ್ ಅವರು ಮಾತನಾಡಿ, “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ನಿರಂತರವಾಗಿ ಸೇವಾ ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಿದ್ದು, ಸಿಬ್ಬಂದಿಗಳ ನಗುಮುಖದ ಸೇವೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸಂಘವು ಇತರ ಸಂಘ ಸಂಸ್ಥೆಗಳ ಸಹಭಾಗಿತ್ವದೊಂದಿಗೆ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ನಿರಂತರವಾಗಿ ಆರೋಗ್ಯ ಶಿಬಿರವನ್ನು ಏರ್ಪಡಿಸುತ್ತಿರುವುದು ಶ್ಲಾಘನೀಯ” ಎಂದರು.ಸಂಘದ ಸದಸ್ಯರಾದ ಶ್ರೀ ಪುರುಷೋತ್ತಮ ಕೆ. ಅವರು ಮಾತನಾಡಿ, “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷರಾದ ಸಹಕಾರ ರತ್ನ ಶ್ರೀಯುತ ಚಿತ್ತರಂಜನ್ ಬೋಳಾರ್ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳುತ್ತಿರುವ ಸಮಾಜಮುಖಿ ಕಾರ್ಯಕ್ರಮಗಳು ಶ್ಲಾಘನೀಯ” ಎಂದರು.ಸಂಘದ ಸದಸ್ಯರಾದ…

Read More

ಮಂಗಳೂರು, ಜೂನ್ 10: ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗಾಗಿ ಬರುವ ರೋಗಿಗಳೊಂದಿಗೆ ಪರಿಣಾಮಕಾರಿ ಸಂವಹನ ನಡೆಸುವ ಉದ್ದೇಶದಿಂದ ವೆನ್‌ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಕನ್ನಡ ಭಾಷೆಯ ಬಳಕೆಗೆ ಆದ್ಯತೆ ನೀಡುವ ಕ್ರಮಕ್ಕೆ ಕಸ್ತೂರ್ಬಾ ವೈದ್ಯಕೀಯ ಕಾಲೇಜು (ಕೆಎಂಸಿ) ವಿದ್ಯಾರ್ಥಿಗಳು ಉತ್ತಮ ಸ್ಪಂದನೆ ವ್ಯಕ್ತಪಡಿಸಿದ್ದಾರೆ ಎಂದು ಕೆಎಂಸಿ ಡೀನ್ ಡಾ. ಬಿ. ಉಣ್ಣಿಕೃಷ್ಣನ್ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಪ್ರತಿದಿನ ಸಾವಿರಾರು ರೋಗಿಗಳು ವೆನ್‌ಲಾಕ್ ಆಸ್ಪತ್ರೆಗೆ ಆಗಮಿಸುತ್ತಾರೆ. ಅವರಲ್ಲಿ ಹೆಚ್ಚಿನವರು ಕನ್ನಡ ಭಾಷೆಯನ್ನೇ ಮಾತನಾಡುವವರಾಗಿದ್ದು, ಕೆಲ ವೈದ್ಯರು, ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ ಇಂಟರ್ನ್‌ಗಳು ಕನ್ನಡದಲ್ಲಿ ಸಂವಹನ ನಡೆಸದ ಕಾರಣ ರೋಗಿಗಳಿಗೆ ತೊಂದರೆ ಉಂಟಾಗುತ್ತಿದೆ ಎಂಬ ದೂರುಗಳು ಇತ್ತೀಚೆಗೆ ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಸರಕಾರಿ ವೆನ್ಲಾಕ್ ಆಸ್ಪತ್ರೆ ಜಿಲ್ಲಾ ವೈದ್ಯಾಧಿಕಾರಿ (DMO) ಡಾ.ಶಿವಪ್ರಕಾಶ್ ರವರು ರೋಗಿಗಳೊಂದಿಗೆ ಕನ್ನಡದಲ್ಲಿಯೇ ವ್ಯವಹರಿಸುವಂತೆ ಸೂಚನೆ ನೀಡಿದ್ದು, ಹೊರರಾಜ್ಯಗಳಿಂದ ಆಗಮಿಸುವ ವೈದ್ಯಕೀಯ ವಿದ್ಯಾರ್ಥಿಗಳು ಮೂರು ತಿಂಗಳೊಳಗೆ ಕನ್ನಡ ಕಲಿಯಬೇಕು ಎಂದು ನಿರ್ದೇಶನ ನೀಡಿದೆ. ಈ ಕುರಿತು ಪ್ರತಿಕ್ರಿಯಿಸಿದ ಡಾ. ಬಿ.…

Read More

ಬೈರಂಪಳ್ಳಿ: ಬೈರಂಪಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಳ್ಳರ್ಪಾಡಿಗ್ರಾಮದ ಮಾಣೈ ಹರಿಖಂಡಿಗೆ ರಸ್ತೆ ಸಮೀಪ ಇರುವ ಸರ್ಕಾರಿ ಆಟದ ಮೈದಾನವನ್ನು ಅತಿಕ್ರಮಿಸುವ ಪ್ರಯತ್ನವನ್ನು ತಡೆಯುವಲ್ಲಿ ತುಳುನಾಡ ರಕ್ಷಣಾ ವೇದಿಕೆ ಮಹತ್ವದ ಪಾತ್ರ ವಹಿಸಿದ್ದು, ಸುಮಾರು 38 ವರ್ಷಗಳಿಂದ ಗ್ರಾಮಸ್ಥರು, ಮಕ್ಕಳು ಹಾಗೂ ಯುವಕರು ಬಳಸಿಕೊಂಡು ಬರುತ್ತಿದ್ದ ಮೈದಾನವನ್ನು ಪುನಃ ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಿದೆ. ಸ್ಥಳೀಯ ಖಾಸಗಿ ವ್ಯಕ್ತಿಗಳು ಸರ್ಕಾರಿ ಜಾಗವನ್ನು ತಮ್ಮದಾಗಿಸಿಕೊಳ್ಳುವ ಉದ್ದೇಶದಿಂದ ವಾಲಿಬಾಲ್ ಮೈದಾನದ ಮಧ್ಯಭಾಗದಲ್ಲಿ ಜೆಸಿಬಿ ಮೂಲಕ ಹೊಂಡ ತೋಡಿ, ಕ್ರೀಡಾ ಚಟುವಟಿಕೆಗಳಿಗೆ ಅಡ್ಡಿಪಡಿಸಿದ ಘಟನೆ ನಡೆದಿತ್ತು. ಈ ಬಗ್ಗೆ ಗ್ರಾಮಸ್ಥರು ಹಾಗೂ ಯುವಕರು ತುಳುನಾಡ ರಕ್ಷಣಾ ವೇದಿಕೆಯನ್ನು ಸಂಪರ್ಕಿಸಿದ ಹಿನ್ನೆಲೆಯಲ್ಲಿ ಸಂಘಟನೆಯ ಉಡುಪಿ ಜಿಲ್ಲಾಧ್ಯಕ್ಷ ಪ್ರಾಂಕಿ ಡಿಸೋಜ ಅವರ ನೇತೃತ್ವದಲ್ಲಿ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಪೂಜಾರಿ, ಕಾಪು ತಾಲೂಕು ಅಧ್ಯಕ್ಷ ನಿತಿನ್ ಕುಮಾರ್ ಶೆಟ್ಟಿ, ಬೈರಂಪಳ್ಳಿ ಘಟಕದ ಅಧ್ಯಕ್ಷ ಕೃಷ್ಣಾನಂದ ನಾಯಕ್ ಹಾಗೂ ಉಪಾಧ್ಯಕ್ಷ ಗುಣಾಕಾರ್ ಸೇರಿದಂತೆ ಪ್ರಮುಖರು ಹಿರಿಯಡ್ಕ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದರು. ದೂರಿನ ಮೇರೆಗೆ…

Read More

ಮಂಗಳೂರು, ಜೂನ್ 9: ಜೆಇಇ ಅಡ್ವಾನ್ಸ್-2026 ಪರೀಕ್ಷೆಯಲ್ಲಿ ಆಲ್ ಇಂಡಿಯಾ ರ‍್ಯಾಂಕ್ (ಎಐಆರ್) 79 ಹಾಗೂ ಜೆಇಇ ಮೈನ್ಸ್-2026 ಪರೀಕ್ಷೆಯಲ್ಲಿ ಆಲ್ ಇಂಡಿಯಾ ರ‍್ಯಾಂಕ್ 335 ಗಳಿಸುವ ಮೂಲಕ ರಾಷ್ಟ್ರ ಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಿದ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಬೆಂದೂರ್ ವೆಲ್ ನಿವಾಸಿ ಪ್ರತಿಭಾವಂತ ವಿದ್ಯಾರ್ಥಿ ಬಿ. ವಿಶ್ರುತ್ ಕೃಷ್ಣ ಆರ್. ಭಟ್ ಅವರ ಮನೆಗೆ ಶಾಸಕ ವೇದವ್ಯಾಸ ಕಾಮತ್ ಭೇಟಿ ನೀಡಿ ಸನ್ಮಾನಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ದೇಶದ ಅತ್ಯಂತ ಕಠಿಣ ಮತ್ತು ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಒಂದಾದ ಜೆಇಇ ಅಡ್ವಾನ್ಸ್‌ನಲ್ಲಿ ವಿಶ್ರುತ್ ಸಾಧಿಸಿರುವ ಯಶಸ್ಸು ದಕ್ಷಿಣ ಕನ್ನಡ ಜಿಲ್ಲೆಯ ಯುವ ಸಮುದಾಯಕ್ಕೆ ಪ್ರೇರಣಾದಾಯಕವಾಗಿದೆ ಎಂದು ಹೇಳಿದರು. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಟಾಪರ್ ಆಗಿ ಹೊರಹೊಮ್ಮಿರುವುದರ ಜೊತೆಗೆ ಕರ್ನಾಟಕದ ಅಗ್ರ ಹತ್ತು ವಿದ್ಯಾರ್ಥಿಗಳ ಪೈಕಿ ಸ್ಥಾನ ಪಡೆದಿರುವುದು ಜಿಲ್ಲೆಯ ಶೈಕ್ಷಣಿಕ ಸಾಮರ್ಥ್ಯವನ್ನು ರಾಷ್ಟ್ರ ಮಟ್ಟದಲ್ಲಿ ಅನಾವರಣಗೊಳಿಸಿದೆ ಎಂದು…

Read More

ಮಂಗಳೂರು, ಜೂನ್ 9: ಸಮಾಜಸೇವೆಯ ಮೂಲಕ ದಿವಂಗತ ತಾಯಿಯ ಆದರ್ಶವನ್ನು ಜೀವಂತವಾಗಿರಿಸುವ ಉದ್ದೇಶದಿಂದ ಮೂಡುಶೆಡ್ಡೆ ಹೊಸಲಕ್ಕೆ ಕುಟುಂಬವು ಮಾನವೀಯ ಕಾರ್ಯವೊಂದನ್ನು ನೆರವೇರಿಸಿದೆ. ದಿವಂಗತ ದೇವಕಿ ಸಂಜೀವ ಶೆಟ್ಟಿ ಅವರ ನಾಲ್ಕನೇ ವರ್ಷದ ಪುಣ್ಯಸ್ಮರಣೆಯ ಅಂಗವಾಗಿ ಬಡ ಕುಟುಂಬಕ್ಕೆ ನೂತನವಾಗಿ ನಿರ್ಮಿಸಲಾದ ಸುಸಜ್ಜಿತ ಮನೆಯ ಹಸ್ತಾಂತರ ಕಾರ್ಯಕ್ರಮ ಮಂಗಳವಾರ ನೆರವೇರಿತು. ಮೂಡುಶೆಡ್ಡೆ ನೇಜಿಗುರಿಯ ನಿವಾಸಿ ಗಿರಿಜ ಅವರ ಕುಟುಂಬವು ಹಲವು ವರ್ಷಗಳಿಂದ ವಾಸದ ಸಂಕಷ್ಟ ಅನುಭವಿಸುತ್ತಿದ್ದು, ಅವರ ಮನೆ ಸಂಪೂರ್ಣವಾಗಿ ಕುಸಿದುಬಿದ್ದ ಹಿನ್ನೆಲೆಯಲ್ಲಿ ವಕೀಲ ಉಮೇಶ್ ಶೆಟ್ಟಿ ಹೊಸಲಕ್ಕೆ ಹಾಗೂ ಅವರ ಸಹೋದರರು ಸುಮಾರು 10 ಲಕ್ಷ ರೂ. ವೆಚ್ಚದಲ್ಲಿ ನೂತನ ಮನೆ ನಿರ್ಮಿಸಿ ಕೊಟ್ಟಿದ್ದಾರೆ. ಕಾರ್ಯಕ್ರಮದಲ್ಲಿ ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ನೆರವೇರಿಸಿ, ಮನೆಯ ಕೀಲಿಯನ್ನು ಕುಟುಂಬಕ್ಕೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವಕೀಲ ಉಮೇಶ್ ಶೆಟ್ಟಿ ಹೊಸಲಕ್ಕೆ, “ನಮ್ಮ ತಾಯಿ ದೇವಕಿ ಶೆಟ್ಟಿಯವರು ಸಂಕಷ್ಟದಲ್ಲಿರುವವರಿಗೆ ನೆರವಾಗುವುದನ್ನೇ ಜೀವನದ ಧ್ಯೇಯವನ್ನಾಗಿಸಿಕೊಂಡಿದ್ದರು. ಅವರ ಆದರ್ಶಗಳಿಂದ ಪ್ರೇರಿತರಾಗಿ ಸಮಾಜಕ್ಕೆ ಉಪಯುಕ್ತವಾದ ಸೇವೆ ಸಲ್ಲಿಸಬೇಕೆಂಬ…

Read More

ಮಹಾಕಾವ್ಯಗಳ ವಾಚನ – ಪ್ರವಚನದಿಂದ ಪುರಾಣದ ಅರಿವು: ಡಾ| ಸತೀಶ್ ಭಂಡಾರಿ ಮಂಗಳೂರು: ‘ಹಿಂದೆ ಮಳೆಗಾಲ ಆರಂಭವಾಗಿ ಯಕ್ಷಗಾನ ಮೇಳಗಳು ಒಳ ಸೇರಿದಾಗ ಮನೆ ಮನೆಗಳಲ್ಲಿ ಪುರಾಣ ವಾಚನ ನಡೆಯುತ್ತಿತ್ತು. ನಮ್ಮ ಹಿರಿಯರು ಅವಿದ್ಯಾವಂತರಾಗಿದ್ದರೂ ಪುರಾಣ ಪುಣ್ಯ ಕಥೆಗಳನ್ನು ತಿಳಿದುಕೊಂಡದ್ದು ಭಾರತೀಯ ಮಹಾಕಾವ್ಯಗಳ ವಾಚನ – ಪ್ರವಚನಗಳಿಂದ’ ಎಂದು ನಿಟ್ಟೆ ವಿಶ್ವವಿದ್ಯಾನಿಲಯದ ನಿಕಟ ಪೂರ್ವ ಉಪಕುಲಪತಿ ಡಾ| ಸತೀಶ್ ಕುಮಾರ್ ಭಂಡಾರಿ ಹೇಳಿದ್ದಾರೆ. ಕರ್ನಾಟಕ ಗಮಕ ಕಲಾ ಪರಿಷತ್ತು ಮಂಗಳೂರು ತಾಲೂಕು ಘಟಕ ಮತ್ತು ತುಳು ಅಧ್ಯಯನ ಕೇಂದ್ರ ನಿಟ್ಟೆ ವಿಶ್ವವಿದ್ಯಾನಿಲಯ ಇದರ ಸಹಯೋಗದಲ್ಲಿ ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಆಯೋಜಿಸಿದ್ದ ಕವಿ ಮಂದಾರ ಕೇಶವ ಭಟ್ಟ ವಿರಚಿತ ತುಳು ಮಹಾಕಾವ್ಯ ‘ಮಂದಾರ ರಾಮಾಯಣ’ ಸಪ್ತಾಹದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.ವೇದಮೂರ್ತಿ ಕೃಷ್ಣರಾಜ ತಂತ್ರಿ ಕುಡುಪು ಮತ್ತು ವೇದಮೂರ್ತಿ ಹರಿ ಉಪಾಧ್ಯಾಯ ವಾಮಂಜೂರು, ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಧರ್ಮದರ್ಶಿ ಡಾ| ಹರಿಕೃಷ್ಣ ಪುನರೂರು ಸಭೆಯ ಅಧ್ಯಕ್ಷತೆ…

Read More