Author: Tulunada Surya

ಮಂಗಳೂರು, ಜುಲೈ 20: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಅಬ್ಬರದ ನಡುವೆ ಸೋಮವಾರ ಮಧ್ಯಾಹ್ನ ಬಾವುಟಗುಡ್ಡೆಯ ಅಲೋಶಿಯಸ್ ಕಾಲೇಜು ಸಮೀಪದ ಒಳ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರವೊಂದು ಉರುಳಿ ಬಿದ್ದ ಘಟನೆ ಸಂಭವಿಸಿದೆ. ಮರವು ಕಾರಿನ ಹಿಂಭಾಗದ ಮೇಲೆ ಬಿದ್ದ ಪರಿಣಾಮ ವಾಹನಕ್ಕೆ ತೀವ್ರ ಹಾನಿಯಾಗಿದ್ದು, ಸಮೀಪದಲ್ಲಿದ್ದ ಕ್ಯಾಂಟೀನ್‌ನ ಮೇಲ್ಛಾವಣಿಗೂ ಹಾನಿಯಾಗಿದೆ. ಆದರೆ ಕಾರಿನ ಚಾಲಕರು ಯಾವುದೇ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿರುವುದು ದೊಡ್ಡ ದುರಂತವೊಂದು ತಪ್ಪಿದಂತಾಗಿದೆ. ಘಟನೆಯ ಪರಿಣಾಮ ಕೆಲಕಾಲ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಮಾಹಿತಿ ತಿಳಿಯುತ್ತಿದ್ದಂತೆಯೇ ಪಾಂಡೇಶ್ವರ ಅಗ್ನಿಶಾಮಕ ದಳ, ಎಸ್‌ಡಿಆರ್‌ಎಫ್ (SDRF), ಮೆಸ್ಕಾಂ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಮರವನ್ನು ತೆರವುಗೊಳಿಸಿ ವಾಹನ ಸಂಚಾರವನ್ನು ಪುನಃ ಸುಗಮಗೊಳಿಸಿದರು. ನಗರದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ದುರ್ಬಲಗೊಂಡಿರುವ ಮರಗಳು ಯಾವಾಗ ಬೇಕಾದರೂ ಉರುಳುವ ಸಾಧ್ಯತೆ ಇರುವುದರಿಂದ, ಮರಗಳ ಸಮೀಪ ವಾಹನ ನಿಲ್ಲಿಸುವುದು ಹಾಗೂ ಸಂಚರಿಸುವುದನ್ನು ಸಾಧ್ಯವಾದಷ್ಟು ತಪ್ಪಿಸಿ ಎಚ್ಚರಿಕೆಯಿಂದ ಇರಬೇಕೆಂದು ಅಧಿಕಾರಿಗಳು ಸಾರ್ವಜನಿಕರಿಗೆ ಮನವಿ…

Read More

ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡರವರ ಧರ್ಮಪತ್ನಿ, ಮಾತೃಸ್ವರೂಪಿ ಶ್ರೀಮತಿ ಚೆನ್ನಮ್ಮ ದೇವೇಗೌಡರವರ ನಿಧನಕ್ಕೆ ಸುಳ್ಯ ತಾಲೂಕು ಜನತಾದಳ (ಜಾತ್ಯತೀತ) ಘಟಕ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಸರಳತೆ, ಸೌಮ್ಯತೆ, ಧರ್ಮನಿಷ್ಠೆ, ಸಂಸ್ಕಾರ ಹಾಗೂ ಕುಟುಂಬ ಮೌಲ್ಯಗಳ ಪ್ರತಿರೂಪವಾಗಿದ್ದ ಶ್ರೀಮತಿ ಚೆನ್ನಮ್ಮ ದೇವೇಗೌಡರವರು, ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡರವರ ಸಾರ್ವಜನಿಕ ಹಾಗೂ ರಾಜಕೀಯ ಜೀವನದ ಹಿಂದೆ ಸದಾ ಅಚಲ ಶಕ್ತಿಯಾಗಿ, ಆತ್ಮಸ್ಥೈರ್ಯ ತುಂಬಿದ ಮಹಾನ್ ವ್ಯಕ್ತಿತ್ವವಾಗಿದ್ದರು. ತಮ್ಮ ಮೌನ ಸೇವೆ, ತ್ಯಾಗ, ಸಹನೆ ಮತ್ತು ಕುಟುಂಬದ ಮೇಲಿನ ಅಪಾರ ಕಾಳಜಿಯ ಮೂಲಕ ಅವರು ಎಲ್ಲರಿಗೂ ಆದರ್ಶಪ್ರಾಯ ಜೀವನ ನಡೆಸಿದ್ದರು. ದೇಶ ಹಾಗೂ ರಾಜ್ಯ ರಾಜಕೀಯದಲ್ಲಿ ದೇವೇಗೌಡರು ಸಲ್ಲಿಸಿದ ದೀರ್ಘಕಾಲದ ಸೇವೆಯ ಹಿಂದೆ ಶ್ರೀಮತಿ ಚೆನ್ನಮ್ಮರವರ ಅಪಾರ ತ್ಯಾಗ, ಪ್ರೋತ್ಸಾಹ ಮತ್ತು ಬೆಂಬಲವಿದ್ದು, ಅವರ ಅಗಲಿಕೆ ದೇವೇಗೌಡರ ಕುಟುಂಬಕ್ಕೆ ಮಾತ್ರವಲ್ಲ, ಜನತಾದಳ (ಜಾತ್ಯತೀತ) ಪಕ್ಷದ ಸಮಸ್ತ ಕಾರ್ಯಕರ್ತರಿಗೆ ಹಾಗೂ ಅಪಾರ ಅಭಿಮಾನಿಗಳಿಗೆ ತುಂಬಲಾರದ ನಷ್ಟವಾಗಿದೆ. ಭಗವಂತನು ಅಗಲಿದ ಪುಣ್ಯಾತ್ಮೆಗೆ ಚಿರಶಾಂತಿ ಕರುಣಿಸಲಿ ಹಾಗೂ ಈ ದುಃಖವನ್ನು…

Read More

ಮಂಗಳೂರು, ಜುಲೈ 19: ಪರಮಜ್ಯೋತಿ ಭಜನಾ ಮಂಡಳಿ ವತಿಯಿಂದ ಬಜಾಲದಲ್ಲಿ ತುಳುನಾಡಿನ ವಿಶಿಷ್ಟ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿಬಿಂಬಿಸುವ “ಆಟಿ ದೊಂಜಿ ದಿನ” ಕಾರ್ಯಕ್ರಮ ಅತ್ಯಂತ ಸಂಭ್ರಮ, ಭಕ್ತಿ ಹಾಗೂ ಸಾಂಸ್ಕೃತಿಕ ವೈಭವದೊಂದಿಗೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪರಮಜ್ಯೋತಿ ಭಜನಾ ಮಂಡಳಿಯ ಅಧ್ಯಕ್ಷರಾದ ನ್ಯಾಯವಾದಿ ದಿನಕರ್ ಶೆಟ್ಟಿ ವಹಿಸಿದ್ದರು. ಅವರು ಅತಿಥಿಗಳು ಹಾಗೂ ನೆರೆದಿದ್ದ ಗಣ್ಯರನ್ನು ಆತ್ಮೀಯವಾಗಿ ಸ್ವಾಗತಿಸಿ, ಆಟಿ ತಿಂಗಳ ಆಚರಣೆಗಳು ನಮ್ಮ ಸಂಸ್ಕೃತಿಯ ಜೀವಾಳವಾಗಿದ್ದು, ಇಂತಹ ಕಾರ್ಯಕ್ರಮಗಳ ಮೂಲಕ ಮುಂದಿನ ಪೀಳಿಗೆಗೆ ನಮ್ಮ ಸಂಪ್ರದಾಯವನ್ನು ಪರಿಚಯಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಹೇಳಿದರು. ಪ್ರಾರ್ಥನೆ ಹಾಗೂ ವಂದೇ ಮಾತರಂ ಗಾಯನದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು. ಬಳಿಕ ಬಜಾಲದ ಹೆಮ್ಮೆಯ ಮಹಿಳೆ, ಇತ್ತೀಚೆಗೆ ಡಾಕ್ಟರೇಟ್ ಪದವಿ ಪಡೆದ ಡಾ. ಆಶಾಲತಾ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಮುಖ್ಯ ಭಾಷಣಕಾರರಾಗಿ ಭಾಗವಹಿಸಿದ್ದ ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅದ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ಅವರು ಆಟಿ ತಿಂಗಳ ಧಾರ್ಮಿಕ,…

Read More

ಉಡುಪಿ, ಜುಲೈ 19: ತುಳುನಾಡ ರಕ್ಷಣಾ ವೇದಿಕೆ – ಉಡುಪಿ ಜಿಲ್ಲಾ ಘಟಕದ ಜಿಲ್ಲಾ ಮಟ್ಟದ ಮಹತ್ವದ ಸಭೆಯು ಭಾನುವಾರ ಉಡುಪಿಯ ಕಾಪಿಯಾ ಹೋಟೆಲ್ ಸಮೀಪದ ಅಕ್ಷಯ ಟವರ್ಸ್‌ನಲ್ಲಿರುವ ಜಿಲ್ಲಾ ಕಚೇರಿಯಲ್ಲಿ ಅತ್ಯಂತ ಯಶಸ್ವಿಯಾಗಿ ನಡೆಯಿತು. ಮುಂಬರುವ “ಆಟಿ ದೊಂಜಿ ದಿನ” ಕಾರ್ಯಕ್ರಮವನ್ನು ಅದ್ಧೂರಿಯಾಗಿ ಹಾಗೂ ತುಳುನಾಡಿನ ಸಾಂಸ್ಕೃತಿಕ ವೈಭವವನ್ನು ಪ್ರತಿಬಿಂಬಿಸುವ ರೀತಿಯಲ್ಲಿ ಆಯೋಜಿಸುವ ಕುರಿತು ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯಿತು. ಜೊತೆಗೆ ಸಂಘಟನೆಯ ಬಲವರ್ಧನೆ, ಸದಸ್ಯತ್ವ ವಿಸ್ತರಣೆ ಹಾಗೂ ಜನಪರ ಹೋರಾಟಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ರೂಪಿಸುವ ಕುರಿತು ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು.ಜೊತೆಗೆ ಸಂಘಟನೆಯ ಬಲವರ್ಧನೆ, ಸದಸ್ಯತ್ವ ವಿಸ್ತರಣೆ ಹಾಗೂ ಜನಪರ ಹೋರಾಟಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ರೂಪಿಸುವ ಕುರಿತು ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಸಭೆಯ ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಅಧ್ಯಕ್ಷ ಫ್ರಾಂಕಿ ಡಿಸೋಜ ಕೊಳಲಗಿರಿ ವಹಿಸಿದ್ದರು. ಕಾರ್ಮಿಕ ಘಟಕದ ಅಧ್ಯಕ್ಷ ಜಯ ಪೂಜಾರಿ ಲಕ್ಷ್ಮೀನಗರ ಹಾಗೂ ಮಹಿಳಾ ಘಟಕದ ಅಧ್ಯಕ್ಷೆ ನಾಗಲಕ್ಷ್ಮಿ ಕಾಪು ತಾಲೂಕು ಅಧ್ಯಕ್ಷ ನಿತಿನ್ ಕುಮಾರ್…

Read More

ಮಂಗಳೂರು, ಜುಲೈ 18: ದೇಶದ ಹೆಮ್ಮೆಯ ಮಾಜಿ ಪ್ರಧಾನಮಂತ್ರಿಗಳೂ, ಜನತಾದಳ (ಜಾತ್ಯತೀತ)ದ ರಾಷ್ಟ್ರೀಯ ಹಿರಿಯ ನಾಯಕರೂ ಆದ ಶ್ರೀ ಎಚ್.ಡಿ. ದೇವೇಗೌಡರ ಧರ್ಮಪತ್ನಿ, ಮಾತೃಸ್ವರೂಪಿ ಶ್ರೀಮತಿ ಚನ್ನಮ್ಮನವರ ನಿಧನದ ಸುದ್ದಿ ತಿಳಿದು ತೀವ್ರ ಆಘಾತ ಮತ್ತು ಅಪಾರ ದುಃಖವಾಗಿದೆ ಎಂದು ಜನತಾದಳ (ಜಾತ್ಯತೀತ) ರಾಜ್ಯ ಉಪಾಧ್ಯಕ್ಷ ಎಂ. ಬಿ. ಸದಾಶಿವ ಅವರು ಸಂತಾಪ ಸೂಚಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಕಳೆದ ನಾಲ್ಕು ದಶಕಗಳಿಂದ ಶ್ರೀಮತಿ ಚನ್ನಮ್ಮನವರ ಅಕ್ಕರೆ, ಆತ್ಮೀಯತೆ, ಮಮತೆ ಮತ್ತು ಆಶೀರ್ವಾದದ ನೆರಳಿನಲ್ಲಿ ಬದುಕುವ ಭಾಗ್ಯ ನನಗೂ ನನ್ನ ಕುಟುಂಬಕ್ಕೂ ದೊರೆತಿತ್ತು. ಅವರ ಅಗಲಿಕೆ ನಮ್ಮ ಕುಟುಂಬದ ಹಿರಿಯ ತಾಯಿಯನ್ನು ಕಳೆದುಕೊಂಡಷ್ಟೇ ನೋವನ್ನು ಉಂಟುಮಾಡಿದ್ದು, ಈ ನಷ್ಟವನ್ನು ಯಾವತ್ತೂ ತುಂಬಲು ಸಾಧ್ಯವಿಲ್ಲ ಎಂದು ಭಾವುಕರಾಗಿ ತಿಳಿಸಿದ್ದಾರೆ. ಶ್ರೀ ಎಚ್.ಡಿ. ದೇವೇಗೌಡರು ದೇಶದ ಅತ್ಯುನ್ನತ ರಾಜಕೀಯ ಸ್ಥಾನವನ್ನು ಅಲಂಕರಿಸುವ ಹಾದಿಯಲ್ಲಿ ಸಾಗುವಾಗ, ಪ್ರತಿಯೊಂದು ಹೆಜ್ಜೆಯಲ್ಲೂ ಧೈರ್ಯ, ತ್ಯಾಗ, ಸಹನೆ ಮತ್ತು ನಿಸ್ವಾರ್ಥ ಸೇವಾ ಮನೋಭಾವದಿಂದ ಬೆನ್ನೆಲುಬಾಗಿ ನಿಂತ ಮಹಾನ್…

Read More

ಮಾಜಿ ಪ್ರಧಾನಮಂತ್ರಿ ಹಾಗೂ ಜನತಾದಳ (ಜಾತ್ಯತೀತ)ದ ಹಿರಿಯ ರಾಷ್ಟ್ರ ನಾಯಕ ಎಚ್.ಡಿ. ದೇವೇಗೌಡ ಅವರ ಕುಟುಂಬದ ಹಿರಿಯ ಸದಸ್ಯೆ ಶ್ರೀಮತಿ ಚೆನ್ನಮ್ಮ ದೇವೇಗೌಡ ಅವರ ಅಗಲಿಕೆಯ ಸುದ್ದಿ ಮನಸ್ಸಿಗೆ ಅಪಾರ ನೋವನ್ನುಂಟು ಮಾಡಿದೆ. ಒಂದು ರಾಜಕೀಯ ಕುಟುಂಬದ ಯಶಸ್ಸಿನ ಹಿಂದೆ ವೇದಿಕೆಯ ಮೇಲೆ ಕಾಣಿಸಿಕೊಳ್ಳದ ಅನೇಕ ಮಹನೀಯರ ತ್ಯಾಗ, ಸಹನೆ ಮತ್ತು ಆಶೀರ್ವಾದ ಅಡಗಿರುತ್ತವೆ. ಅಂತಹ ಅಪರೂಪದ ವ್ಯಕ್ತಿತ್ವಗಳಲ್ಲಿ ಶ್ರೀಮತಿ ಚೆನ್ನಮ್ಮ ಅವರು ಪ್ರಮುಖರು. ಅವರು ಅಧಿಕಾರ, ಪ್ರಚಾರ ಅಥವಾ ಹುದ್ದೆಗಳಿಗಾಗಿ ಬದುಕಿದವರಲ್ಲ. ಕುಟುಂಬದ ಏಕತೆ, ಸಂಸ್ಕಾರ, ಮಾನವೀಯತೆ ಮತ್ತು ಸೇವೆಯ ಮೌಲ್ಯಗಳನ್ನು ತಮ್ಮ ಬದುಕಿನ ಮೂಲಕ ಸಾರಿದ ಆದರ್ಶ ಮಹಿಳೆಯಾಗಿದ್ದರು. ದೇವೇಗೌಡರು ರಾಷ್ಟ್ರ ರಾಜಕೀಯದಲ್ಲಿ ಅನೇಕ ಸವಾಲುಗಳನ್ನು ಎದುರಿಸಿ ದೇಶದ ಪ್ರಧಾನಮಂತ್ರಿಯಾಗಿ ಸೇವೆ ಸಲ್ಲಿಸುವವರೆಗಿನ ಪಯಣದಲ್ಲಿ, ಕುಟುಂಬದೊಳಗೆ ಧೈರ್ಯ, ಸ್ಥೈರ್ಯ ಮತ್ತು ನೈತಿಕ ಶಕ್ತಿಯನ್ನು ತುಂಬಿದ ಮಹಾನ್ ವ್ಯಕ್ತಿತ್ವ ಚೆನ್ನಮ್ಮ ಅವರದು. ಸಾರ್ವಜನಿಕ ಜೀವನದಲ್ಲಿ ಕಾಣಿಸದಿದ್ದರೂ, ಅವರ ತ್ಯಾಗ ಮತ್ತು ಮೌನ ಸೇವೆ ದೇವೇಗೌಡ ಕುಟುಂಬದ ಬಲಿಷ್ಠ ಅಡಿಪಾಯವಾಗಿತ್ತು. ಇಂದಿನ…

Read More

ಧಾರವಾಡ, ಜುಲೈ 19: ಧಾರವಾಡ ಜಿಲ್ಲೆಯ ಅಳ್ನಾವರ ಸಮೀಪದ ಕಸ್ತೂರಬಾ ಬಾಲಕಿಯರ ವಸತಿ ಶಾಲೆಯಲ್ಲಿ 34 ವಿದ್ಯಾರ್ಥಿನಿಯರು ಏಕಾಏಕಿ ಅಸ್ವಸ್ಥಗೊಂಡಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ವಿದ್ಯಾರ್ಥಿನಿಯರು 10 ರಿಂದ 15 ನಿಮಿಷಗಳಿಗೊಮ್ಮೆ ಒದ್ದಾಡುವುದು, ಚೀರಾಡುವುದು ಹಾಗೂ ಅಸಹಜವಾಗಿ ವರ್ತಿಸುವಂತಹ ಲಕ್ಷಣಗಳನ್ನು ತೋರಿಸುತ್ತಿದ್ದು, ಪೋಷಕರು ಮತ್ತು ಸ್ಥಳೀಯರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.ಪ್ರಾಥಮಿಕ ವೈದ್ಯಕೀಯ ಮಾಹಿತಿಯ ಪ್ರಕಾರ, ವೈರಲ್ ಜ್ವರದ ಹಿನ್ನೆಲೆಯಲ್ಲೇ ಈ ಲಕ್ಷಣಗಳು ಕಾಣಿಸಿಕೊಂಡಿರುವ ಸಾಧ್ಯತೆ ಇದ್ದು, ಇನ್‌ಫ್ಲೂಯೆನ್ಸಾ A ಮತ್ತು B ಸೋಂಕು ಇರಬಹುದೆಂಬ ಶಂಕೆ ವ್ಯಕ್ತವಾಗಿದೆ. ಸೋಂಕಿತ ವಿದ್ಯಾರ್ಥಿನಿಯರ ಪೈಕಿ 8 ಮಂದಿಯ ಆರೋಗ್ಯ ಸ್ಥಿತಿ ಗಂಭೀರವಾಗಿರುವುದರಿಂದ ಅವರನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ತಜ್ಞ ವೈದ್ಯರ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ ಕೆಲ ವಿದ್ಯಾರ್ಥಿನಿಯರಿಗೆ ಅಳ್ನಾವರ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.ಆಸ್ಪತ್ರೆಯಲ್ಲಿಯೂ ವಿದ್ಯಾರ್ಥಿನಿಯರು ಒದ್ದಾಡುವುದು ಹಾಗೂ ಚೀರಾಡುತ್ತಿರುವ ದೃಶ್ಯಗಳು ಪೋಷಕರ ಆತಂಕವನ್ನು ಮತ್ತಷ್ಟು ಹೆಚ್ಚಿಸಿವೆ. ಮಕ್ಕಳ ಆರೋಗ್ಯದ ಬಗ್ಗೆ ನಿಖರ ಮಾಹಿತಿ ನೀಡುವಂತೆ ಪೋಷಕರು ಅಧಿಕಾರಿಗಳನ್ನು ಒತ್ತಾಯಿಸುತ್ತಿದ್ದಾರೆ.ಘಟನೆಯ ಬೆನ್ನಲ್ಲೇ ವಸತಿ…

Read More

ಉಡುಪಿ ಜಿಲ್ಲೆ 317 ಡಿ 2025-26ನೇ ಸಾಲಿನ ಜಿಲ್ಲಾ ರಾಜ್ಯಪಾಲರಾದ ಶ್ರೀ ಅರವಿಂದ್ ಶೆಣೈ ಅವರು 2026-27ನೇ ಸಾಲಿನ ಜಿಲ್ಲಾ ರಾಜ್ಯಪಾಲರಾದ ತಾರಾನಾಥ್ ಎಚ್.ಎಂ ಅವರಿಗೆ ಜಿಲ್ಲಾ ಕಚೇರಿಯಲ್ಲಿ ಅಧಿಕಾರ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಪ್ರಥಮ ಉಪರಾಜ್ಯಪಾಲ ಗೋವರ್ಧನ್ ಶೆಟ್ಟಿ, ದ್ವಿತೀಯ ಉಪರಾಜ್ಯಪಾಲ ವೆಂಕಟೇಶ್ ಹೆಬ್ಬಾರ್, ನಿಕಟಪೂರ್ವ ಕೋಶಾಧಿಕಾರಿ ಬಾಲಕೃಷ್ಣ ಹೆಗಡೆ, ನಿಕಟಪೂರ್ವ ಪಿ.ಆರ್.ಒ. ಸುಧರ್ಶನ್ ಪಡಿಯಾರ್ ವಿಟ್ಲ, ನಿಕಟಪೂರ್ವ ಹೆಚ್ಚುವರಿ ಕಾರ್ಯದರ್ಶಿ ಚಂದ್ರಹಾಸ ರೈ ಹಾಗೂ ಪ್ರಥಮ ಮಹಿಳಾ ಸಭಿತಾ ತಾರಾನಾಥ್ ಉಪಸ್ಥಿತರಿದ್ದರು.

Read More

ಬೆಂಗಳೂರು, ಜುಲೈ 19: ಮಾಜಿ ಪ್ರಧಾನಮಂತ್ರಿ ಹಾಗೂ ಜನತಾದಳ (ಜಾತ್ಯತೀತ)ದ ರಾಷ್ಟ್ರೀಯ ನಾಯಕ ಎಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ಶ್ರೀಮತಿ ಚೆನ್ನಮ್ಮ ದೇವೇಗೌಡ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ಸೂಚಿಸಿ, ಕುಟುಂಬದ ದುಃಖದಲ್ಲಿ ಭಾಗಿಯಾಗಿದ್ದಾರೆ. ಶ್ರೀಮತಿ ಚೆನ್ನಮ್ಮ ದೇವೇಗೌಡ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣ ‘ಎಕ್ಸ್’ ಮೂಲಕ ಭಾವುಕ ಸಂತಾಪ ಸಂದೇಶ ಪ್ರಕಟಿಸಿದರು. ತಮ್ಮ ಸಂದೇಶದಲ್ಲಿ, ಚೆನ್ನಮ್ಮ ದೇವೇಗೌಡ ಅವರ ಅಗಲಿಕೆಯಿಂದ ಉಂಟಾಗಿರುವ ನೋವಿಗೆ ಸಂತಾಪ ಸೂಚಿಸಿ, ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಾಗೂ ಕುಟುಂಬದ ಸದಸ್ಯರಿಗೆ ಈ ದುಃಖವನ್ನು ಭರಿಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಿದರು. ಬಳಿಕ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ, ಚೆನ್ನಮ್ಮ ದೇವೇಗೌಡ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಪುಷ್ಪನಮನ ಸಲ್ಲಿಸಿದರು. ಬಳಿಕ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರೊಂದಿಗೆ ಕೆಲಕಾಲ ಕುಳಿತು ಮಾತನಾಡಿದ ಅವರು,…

Read More

ಮಂಗಳೂರು, ಜುಲೈ 18: ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಪ್ರಧಾನಮಂತ್ರಿ ಹಾಗೂ ಜನತಾದಳ (ಜಾತ್ಯತೀತ)ದ ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ. ದೇವೇಗೌಡ ಅವರ ಕುಟುಂಬದ ಹಿರಿಯ ಸದಸ್ಯೆ ಶ್ರೀಮತಿ ಚೆನ್ನಮ್ಮ ದೇವೆಗೌಡ ಅವರ ನಿಧನದ ಸುದ್ದಿ ಅತ್ಯಂತ ದುಃಖಕರವಾಗಿದೆ. ಅವರ ಅಗಲಿಕೆಯು ದೇವೇಗೌಡರ ಕುಟುಂಬಕ್ಕೆ ಮಾತ್ರವಲ್ಲದೆ, ಜನತಾದಳ (ಜಾತ್ಯತೀತ) ಪಕ್ಷದ ಸಮಸ್ತ ಕಾರ್ಯಕರ್ತರು ಹಾಗೂ ಅಭಿಮಾನಿಗಳಿಗೆ ಅಪಾರ ನೋವನ್ನುಂಟು ಮಾಡಿದ್ದು, ತುಂಬಲಾರದ ನಷ್ಟವಾಗಿದೆ ಎಂದು ಜನತಾದಳ (ಜಾತ್ಯತೀತ) ದಕ್ಷಿಣ ಕನ್ನಡ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಂತಾಪ ಸಂದೇಶ ನೀಡಿರುವ ಅವರು, ಶ್ರೀಮತಿ ಚೆನ್ನಮ್ಮ ದೇವೆಗೌಡ ಅವರು ಸರಳತೆ, ಸೌಜನ್ಯ, ಮಾನವೀಯ ಮೌಲ್ಯಗಳು ಹಾಗೂ ಕುಟುಂಬದ ಒಗ್ಗಟ್ಟಿನ ಪ್ರತೀಕವಾಗಿದ್ದರು. ತಮ್ಮ ಜೀವನದುದ್ದಕ್ಕೂ ಕುಟುಂಬದ ಆಧಾರಸ್ತಂಭವಾಗಿ ನಿಂತು ಉತ್ತಮ ಸಂಸ್ಕಾರ, ಸೇವಾ ಮನೋಭಾವ ಹಾಗೂ ಸಾಮಾಜಿಕ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ನೀಡಿದ ಆದರ್ಶ ವ್ಯಕ್ತಿತ್ವ ಅವರದ್ದಾಗಿತ್ತು. ಅವರ ಜೀವನ ಶೈಲಿ ಎಲ್ಲರಿಗೂ ಪ್ರೇರಣೆಯಾಗಿದ್ದು,…

Read More