- ಕಾರ್ಕಳ: ಜಿಡಿಎಸ್ 25ರ ರಜತ ಮಹೋತ್ಸವ ಸಂಭ್ರಮ – ಏಪ್ರಿಲ್ 4ರಂದು ಭವ್ಯ ಕಾರ್ಯಕ್ರಮ
- ಪರಾರಿ ಶ್ರೀ ಬೊಬ್ಬರ್ಯ ದೈವಸ್ಥಾನದಲ್ಲಿ ಮುಂಬರುವ ಪ್ರತಿಷ್ಠಾ ಬ್ರಹ್ಮಕಲಶ ಹಾಗೂ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ
- ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆಯ ಸಿಲಿಂಡರ್ ಅನಿಲ ಕೊರತೆ ನೀಗಿಸುವ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಜಿಲ್ಲಾಧ್ಯಕ್ಷರಾದ ಸುಜಯ ಪೂಜಾರಿ ಇವರ ಆಗ್ರಹ.
- ಚೇತನ್ ಯೋಗಿಶ್ ಶೆಟ್ಟಿ ಸೇರಿದಂತೆ ಹಲವು ವಿದ್ಯಾರ್ಥಿಗಳು ವಿದ್ಯಾರ್ಥಿ ಜನತಾದಳ(ಜಾ) ಸಭೆಯಲ್ಲಿ ಸೇರ್ಪಡೆ
- ಶಿವಮೊಗ್ಗ: ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮನಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ (27) ಸಾವು
- ಮಂಗಳೂರು : ಮೂಡುಬಿದಿರೆ ಇನ್ಸ್ಪೆಕ್ಟರ್ ವಿರುದ್ಧದ ಆರೋಪಗಳು ಸುಳ್ಳು — ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸ್ಪಷ್ಟನೆ
- ಕೇರಳ, ತಮಿಳುನಾಡು, ಪಾಂಡಿಚೇರಿ, ಅಸ್ಸಾಂ ಹಾಗೂ ಪಶ್ಚಿಮ ಬಂಗಾಳ ರಾಜ್ಯಗಳ ಚುನಾವಣೆ: 90ಕ್ಕೂ ಹೆಚ್ಚು ನಾಯಕರು ನಿಯೋಜನೆ
- ಉಡುಪಿ : ‘ಸಮಾಧಾನ ಮಹೋತ್ಸವ’ಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್ – ಪ್ರಶಾಂತ್ ಜತ್ತನ್ನ
Author: Tulunada Surya
ಕಾರ್ಕಳ : ಕಾರ್ಕಳ ಜನತಾದಳ (ಜಿಡಿಎಸ್) ವಿಧಾನಸಭಾ ಕ್ಷೇತ್ರ ಹಾಗೂ ಹೆಬ್ರಿ ತಾಲೂಕು, ಉಡುಪಿ ಜಿಲ್ಲೆ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಜಿಡಿಎಸ್ ಪಕ್ಷದ 25ನೇ ವರ್ಷದ ರಜತ ಮಹೋತ್ಸವವನ್ನು ಏಪ್ರಿಲ್ 4, 2026ರಂದು ಶನಿವಾರ ಅದ್ದೂರಿಯಾಗಿ ಆಚರಿಸಲು ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಈ ಮಹೋತ್ಸವ ಕಾರ್ಯಕ್ರಮವು ಹೆಬ್ರಿ ಸಮೀಪದ ಪರಿಮಳ ಲೇಔಟ್, ಮದಗ ಕುಚ್ಚೂರು ರಸ್ತೆಯಲ್ಲಿ ಸಂಜೆ 6.00 ಗಂಟೆಗೆ ಆರಂಭವಾಗಲಿದ್ದು, ರಾತ್ರಿ 8.00 ಗಂಟೆಗೆ ಪ್ರಮುಖ ಸಭಾ ಕಾರ್ಯಕ್ರಮ ಜರುಗಲಿದೆ. ಕಾರ್ಯಕ್ರಮ ಸ್ಥಳದಲ್ಲಿ ವಿಶಾಲ ವೇದಿಕೆ, ಸಭಾ ವ್ಯವಸ್ಥೆ ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ಈ ವಿಶೇಷ ಕಾರ್ಯಕ್ರಮದಲ್ಲಿ ಯುವ ಜೆಡಿಎಸ್ ರಾಜ್ಯಾಧ್ಯಕ್ಷರಾದ ಶ್ರೀ ನಿಖಿಲ್ ಕುಮಾರಸ್ವಾಮಿ ಅವರು ಭಾಗವಹಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಜೊತೆಗೆ ಜಿಡಿಎಸ್ ಶಾಸಕಾಂಗ ಪಕ್ಷದ ನಾಯಕರು ಶ್ರೀ ಸುರೇಶ್ ಬಾಬು, ವಿಧಾನ ಪರಿಷತ್ ಸದಸ್ಯರಾದ ಶ್ರೀ ಎಸ್.ಎಲ್. ಭೋಜೇಗೌಡ, ಮಾಜಿ ಸಚಿವರು ಹಾಗೂ ಮಾಜಿ ಸಂಸದರಾದ ಶ್ರೀ ಸಿ.ಎಸ್. ಪುಟ್ಟರಾಜು, ರಾಜ್ಯ…
ಉಡುಪಿ/ಪರಾರಿ: ಇಲ್ಲಿನ ಪರಾರಿ ಶ್ರೀ ಬೊಬ್ಬರ್ಯ ದೈವಸ್ಥಾನದಲ್ಲಿ ಮುಂಬರುವ ಪ್ರತಿಷ್ಠಾ ಬ್ರಹ್ಮಕಲಶ ಹಾಗೂ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ದೈವಸ್ಥಾನದ ವಠಾರದಲ್ಲಿ ದಿನಾಂಕ 22-03-2026 ಭಾನುವಾರ ದಂದು ಭಕ್ತಿಪೂರ್ವಕವಾಗಿ ಜರುಗಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಇವರ ತಿಪ್ಪೇಶ್ ಬಿ ಎಂ ಮಣಿಪಾಲ ಠಾಣಾಧಿಕಾರಿ ಹಾಗೂ ಬ್ರಹ್ಮಾವರ ಪೊಲೀಸ್ ಠಾಣಾಧಿಕಾರಿ ಅಶೋಕ್ ಮಳಬಾಗಿ ಅವರು ಜಂಟಿಯಾಗಿ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ, ಮುಂಬರುವ ಧಾರ್ಮಿಕ ಕಾರ್ಯಕ್ರಮಗಳಿಗೆ ಶುಭ ಹಾರೈಸಿದರು.ಸಮಿತಿಯ ಅಧ್ಯಕ್ಷರಾದ ಗುರುರಾಜ್ ಭಟ್ ಕೊಳಲಗಿರಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಮಾಹಿತಿ ನೀಡಿದರು. ಇದಕ್ಕೂ ಮುನ್ನ ಕ್ಷೇತ್ರದ ಪ್ರಧಾನ ಅರ್ಚಕರಾದ ಲಕ್ಷ್ಮೀಶ ಭಟ್ ಉಪ್ಪೂರು ಅವರು ಪೂಜಾ ವಿಧಿವಿಧಾನಗಳನ್ನು ನೆರವೇರಿಸಿ ದೇವರಿಗೆ ಪ್ರಾರ್ಥನೆ ಸಲ್ಲಿಸಿದರು. ಈ ಶುಭ ಸಂದರ್ಭದಲ್ಲಿ ಸಮಿತಿಯ ಗೌರವಾಧ್ಯಕ್ಷರಾದ ಸತೀಶ್ ಪೂಜಾರಿ ಕೇಳಂಜೆ ಗ್ರಾಮಸ್ಥರು ಹೊರ ಊರಿನ ದಾನಿಗಳ ಸಹಾಯದಿಂದ ಶ್ರೀ ಗೊಬ್ಬರಿಯ ದೇವರು ಗುಡಿಯು ಬಹಳ ಸುಂದರವಾಗಿ ಮುಂದಿನ ದಿನಗಳಲ್ಲಿ ಮೂಡಿ ಬರುತ್ತದೆ ಎಂದು ಇವರು…
ಇರಾನ್ನಲ್ಲಿ ನಡೆಯುತ್ತಿರುವ ನಿರಂತರ ಯುದ್ಧದಿಂದ ಉಡುಪಿ ಜಿಲ್ಲೆಯಲ್ಲಿಯೂ ದಿನದಿಂದ ದಿನಕ್ಕೆ ಗ್ಯಾಸ್ ಸಿಲಿಂಡರಿನ ಸಮಸ್ಯೆ ಉಲ್ಬಣಿಸುತ್ತಿದೆ. ಸಾಮಾನ್ಯ ಜನರ ಜೀವನಕ್ಕೂ ಇದರ ಬಿಸಿ ತಟ್ಟುತ್ತಿದೆ. ಈವರೆಗೆ ಗೃಹ ಬಳಕೆಯ ಸಿಲಿಂಡರ್ ಆದರೂ ಸಿಗುತ್ತಿತ್ತು. ಈಗ ಅದರ ಲಭ್ಯತೆಯು ಇಲ್ಲದಂತಾಗಿ ಜನಸಾಮಾನ್ಯರಿಗೂ ಸಹ ಅಡುಗೆ ಮಾಡಲಾಗದೆ ಪರಿತಪಿಸುವಂತಾಗಿದೆ. ಸಣ್ಣ ಹೋಟೆಲ್ಗಳು, ದೊಡ್ಡ ಹೋಟೆಲ್ಗಳು, ಲಾಡ್ಜ್ಗಳು, ಸ್ವಂತ ಮನೆಯಲ್ಲಿ ವಾಸಿಸುವವರು, ಬಾಡಿಗೆ ಮನೆಯಲ್ಲಿರುವ ಜನಸಾಮಾನ್ಯರು ಎಂಬ ತಾರತಮ್ಯವಿಲ್ಲದೇ ಎಲ್ಲರೂ ಸಹ ಸಿಲಿಂಡರಿನ ಸಮಸ್ಯೆಗೆ ಸಿಲುಕಿದ್ದಾರೆ. ಕಾರ್ಮಿಕರು ಕೆಲಸವಿಲ್ಲದೆ ಕಂಗಾಲಾಗಿದ್ದು ತುತ್ತು ಅನ್ನಕ್ಕೂ ಪರದಾಡುವಂತಾಗಿದೆ. ವರ್ಷವೂ ಈ ಸಂದರ್ಭದಲ್ಲಿ ಧಾರ್ಮಿಕ ಉತ್ಸವ, ವಿವಾಹ ಮುಂತಾದ ಸಮಾರಂಭ ನಡೆಯುವ ಕಾಲವಾಗಿದ್ದು, ಈಗ ಅದಕ್ಕೂ ಅನಿಲ ಪೂರೈಕೆಯ ಸಮಸ್ಯೆಯಾಗಿದ್ದು, ಸಾರ್ವಜನಿಕರಿಗೆ ಯಾವುದೇ ಸಭೆ ಸಮಾರಂಭವವನ್ನು ನಡೆಸಲಾಗದೆ ಸಿಲಿಂಡರಿನ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಸಂಬಂಧಪಟ್ಟವರು ಈ ಬಗ್ಗೆ ಸೂಕ್ತ ಗಮನಹರಿಸಬೇಕಾಗಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಜಿಲ್ಲಾಧ್ಯಕ್ಷರಾದ ಸುಜಯ ಪೂಜಾರಿ ಇವರ ವಿನಂತಿ.
ಮಂಗಳೂರು: ವಿದ್ಯಾರ್ಥಿ ಜನತಾದಳದ ಜಿಲ್ಲಾ ಅಧ್ಯಕ್ಷರಾದ ನಿಹಾಲ್ ಎಸ್. ಕೋಡ್ತುಗುಳಿ ಅವರ ಅಧ್ಯಕ್ಷತೆಯಲ್ಲಿ ದಿನಾಂಕ 21-03-2026 ರಂದು ಮಂಗಳೂರಿನ ಕೊಟ್ಟಾರ ಯುವ ಘಟಕ ಕಚೇರಿಯಲ್ಲಿ ಮಹತ್ವದ ಸಭೆ ನಡೆಯಿತು. ದಕ್ಷಿಣ ಕನ್ನಡ ಜಿಲ್ಲೆ ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯದ ಮುಂಚೂಣಿಯಲ್ಲಿರುವ ಜಿಲ್ಲೆಗಳಲ್ಲಿ ಒಂದಾಗಿ ಗುರುತಿಸಿಕೊಂಡಿದ್ದು, ಇಲ್ಲಿನ ಅನೇಕ ಶಿಕ್ಷಣ ಸಂಸ್ಥೆಗಳಲ್ಲಿ ಸಹಸ್ರಾರು ವಿದ್ಯಾರ್ಥಿ-ಯುವಜನರು ತಮ್ಮ ಭವಿಷ್ಯ ನಿರ್ಮಾಣದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಯುವಶಕ್ತಿಯನ್ನು ಸಮರ್ಥವಾಗಿ ಸಂಘಟಿಸಿ, ಎಳವೆಯಲ್ಲೇ ಸಾಮಾಜಿಕ ಹಾಗೂ ರಾಜಕೀಯ ಜಾಗೃತಿ ಮೂಡಿಸುವ ಮೂಲಕ ಭವಿಷ್ಯದಲ್ಲಿ ರಾಜ್ಯ ಮತ್ತು ದೇಶಕ್ಕೆ ಸಮರ್ಥ ನಾಯಕರನ್ನು ರೂಪಿಸುವ ಮಹತ್ವಾಕಾಂಕ್ಷಿ ಉದ್ದೇಶವನ್ನು ಹೊಂದಿ ವಿದ್ಯಾರ್ಥಿ ಜನತಾದಳ (ಜಾ) ತನ್ನ ಸಂಘಟನೆಯನ್ನು ಬಲಪಡಿಸುವ ಕಾರ್ಯದಲ್ಲಿ ತೊಡಗಿಕೊಂಡಿದೆ. ಸಭೆಯಲ್ಲಿ ವಿದ್ಯಾರ್ಥಿ ಸಮುದಾಯವನ್ನು ಸಂಘಟಿಸುವ ವಿವಿಧ ಕಾರ್ಯಯೋಜನೆಗಳ ಕುರಿತು ಚರ್ಚೆ ನಡೆಸಲಾಗಿದ್ದು, ಮುಂದಿನ ದಿನಗಳಲ್ಲಿ ಸಂಘಟನೆಯನ್ನು ಗ್ರಾಮ ಮಟ್ಟದಿಂದ ಕಾಲೇಜು ಮಟ್ಟದವರೆಗೆ ವಿಸ್ತರಿಸುವ ಸಂಕಲ್ಪವನ್ನು ವ್ಯಕ್ತಪಡಿಸಲಾಯಿತು. ಈ ಸಂದರ್ಭದಲ್ಲಿ ಚೇತನ್ ಯೋಗಿಶ್ ಶೆಟ್ಟಿ ಅವರ ನೇತೃತ್ವದಲ್ಲಿ ಹಲವು ವಿದ್ಯಾರ್ಥಿಗಳು ವಿದ್ಯಾರ್ಥಿ ಜನತಾದಳಕ್ಕೆ…
ಶಿವಮೊಗ್ಗ: ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮನಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ (27) ಮೃತಪಟ್ಟ ಘಟನೆ ರಾಜ್ಯದಾದ್ಯಂತ ದುಃಖದ ವಾತಾವರಣ ನಿರ್ಮಿಸಿದೆ. ಬೆಂಗಳೂರು ಮೂಲದ ಡಾ. ಸಮೀಕ್ಷಾ ರೆಡ್ಡಿ ಅವರು ಗುರುವಾರ ರಾತ್ರಿ ಸುಮಾರು 11:45ರ ವೇಳೆ ಮೃಗಾಲಯದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ‘ಸನ್ ಕಾನರ್’ ಹಕ್ಕಿಗೆ ಚಿಕಿತ್ಸೆ ನೀಡುವ ವೇಳೆ, ಅಲ್ಲಿದ್ದ ಗರ್ಭಿಣಿ ನೀರಾನೆಯ ಆರೋಗ್ಯ ತಪಾಸಣೆಗೆ ಮುಂದಾಗಿದ್ದಾರೆ ಎನ್ನಲಾಗಿದೆ. ಥರ್ಮಲ್ ಕ್ಯಾಮೆರಾ ಮೂಲಕ ಪರೀಕ್ಷೆ ನಡೆಸಲು ನೀರಾನೆಯ ಆವರಣದೊಳಗೆ ಪ್ರವೇಶಿಸಿದ ವೇಳೆ, ಏಕಾಏಕಿ ಕೆರಳಿದ ನೀರಾನೆ ಅವರ ಮೇಲೆ ದಾಳಿ ನಡೆಸಿದೆ. ತೀವ್ರವಾಗಿ ಗಾಯಗೊಂಡ ಅವರನ್ನು ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತುರ್ತು ಶಸ್ತ್ರಚಿಕಿತ್ಸೆ ನಡೆದರೂ ಗಂಭೀರ ಗಾಯಗಳಿಂದಾಗಿ ಅವರು ಇಂದು ಮುಂಜಾನೆ 6:30ರ ಸುಮಾರಿಗೆ ನಿಧನರಾದರು. ಇತ್ತೀಚೆಗಷ್ಟೇ ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ ಅವರು ತರಬೇತಿ ಹಂತದಲ್ಲಿದ್ದರು ಎಂದು ತಿಳಿದುಬಂದಿದೆ. ಘಟನೆಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ…
ಮಂಗಳೂರು : ಮೂಡುಬಿದಿರೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧ ಇತ್ತೀಚೆಗೆ ಇಬ್ಬರು ಮಹಿಳೆಯರು ಮಾಡಿದ್ದ ಲೈಂಗಿಕ ಕಿರುಕುಳ ಆರೋಪಗಳು ಸಂಪೂರ್ಣವಾಗಿ ಸುಳ್ಳು ಹಾಗೂ ದುರುದ್ದೇಶಪೂರಿತವಾಗಿವೆ ಎಂದು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಈ ಪ್ರಕರಣದ ಕುರಿತು ನಡೆಸಲಾದ ಸಮಗ್ರ ಪ್ರಾಥಮಿಕ ತನಿಖೆಯಲ್ಲಿ, ಸುಮತಿ ನಾಯಕ್ ಮತ್ತು ಅವಿತಾ ಮೆನೆಜಸ್ ಸಲ್ಲಿಸಿದ ದೂರುಗಳಲ್ಲಿ ಯಾವುದೇ ಸತ್ಯಾಂಶ ಪತ್ತೆಯಾಗಿಲ್ಲ ಎಂದು ಆಯುಕ್ತರು ಸ್ಪಷ್ಟಪಡಿಸಿದ್ದಾರೆ. ದುರುದ್ದೇಶದಿಂದ ಸುಳ್ಳು ದೂರು: ತನಿಖೆಯ ಪ್ರಕಾರ, ಇಬ್ಬರು ಮಹಿಳೆಯರು ಸಲ್ಲಿಸಿದ ದೂರುಗಳು ದುರುದ್ದೇಶದಿಂದ ಪ್ರೇರಿತವಾಗಿದ್ದು, ಸಂಬಂಧಿತ ಅಧಿಕಾರಿಯನ್ನು ಬಲೆಗೆ ಬೀಳಿಸುವ ಉದ್ದೇಶ ಹೊಂದಿದ್ದವು. ಆರೋಪಗಳನ್ನು ದೃಢೀಕರಿಸಲು ಯಾವುದೇ ಪೂರಕ ಸಾಕ್ಷ್ಯಾಧಾರಗಳು ಲಭ್ಯವಾಗಿಲ್ಲ ಎಂದು ಅವರು ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣದ ಆಡಿಯೋ-ವೀಡಿಯೊ ಕುರಿತು ಸ್ಪಷ್ಟನೆ: ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಆಡಿಯೋ ಹಾಗೂ ವೀಡಿಯೊ ತುಣುಕುಗಳ ಬಗ್ಗೆ ಮಾತನಾಡಿದ ಆಯುಕ್ತರು, ಅವುಗಳಲ್ಲಿ ಕಾಣಿಸಿಕೊಳ್ಳುವ ಮಹಿಳೆಯರು ಆ ತುಣುಕುಗಳು ತಮ್ಮದೇ ಎಂದು ಒಪ್ಪಿಕೊಂಡಿದ್ದಾರೆ. ಆದರೆ, ಇನ್ಸ್ಪೆಕ್ಟರ್…
ಬೆಂಗಳೂರು : ದಕ್ಷಿಣ ಭಾರತದ ರಾಜಕೀಯ ಸಮೀಕರಣಗಳಲ್ಲಿ ತಮ್ಮ ಪಾದಾರ್ಪಣೆ ಬಲಪಡಿಸುವ ಉದ್ದೇಶದಿಂದ ರಾಜ್ಯ ಬಿಜೆಪಿ ಮಹತ್ವದ ತಂತ್ರ ರೂಪಿಸಿದೆ. ಕೇರಳ, ತಮಿಳುನಾಡು, ಪಾಂಡಿಚೇರಿ , ಅಸ್ಸಾಂ ಹಾಗೂ ಪಶ್ಚಿಮ ಬಂಗಾಳ ರಾಜ್ಯಗಳ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು, ಕರ್ನಾಟಕದಿಂದ ಸಂಸದರು, ಶಾಸಕರು ಸೇರಿದಂತೆ ಒಟ್ಟು 90ಕ್ಕೂ ಹೆಚ್ಚು ಮುಖಂಡರನ್ನು ವಿವಿಧ ಕ್ಷೇತ್ರಗಳಿಗೆ ನಿಯೋಜಿಸಲಾಗಿದೆ. ಮತದಾನ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಅವರು ನಿಯೋಜಿತ ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆ ಹಾಗೂ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ನೆರೆಯ ಕೇರಳದಲ್ಲಿ ಈ ಬಾರಿ ಕನಿಷ್ಠ 20ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಗೆಲ್ಲುವ ಗುರಿಯನ್ನು ಬಿಜೆಪಿ ಹೊಂದಿದ್ದು, ಈ ಹಿನ್ನೆಲೆಯಲ್ಲಿ ಎನ್. ರವಿಕುಮಾರ್, ಕೆ.ಎಸ್. ನವೀನ್, ಹರೀಶ್ ಪೂಂಜ, ವೇದವ್ಯಾಸ ಕಾಮತ್, ಮಹೇಶ್ ಟೆಂಗಿನಕಾಯಿ, ಭರತ್ ಶೆಟ್ಟಿ, ಶಶಿಕಲಾ ಜೊಲ್ಲೆ, ಸಂಸದ ಬೃಜೇಶ್ ಚೌಟ ಸೇರಿದಂತೆ 30 ಮಂದಿ ಮುಖಂಡರನ್ನು ಅಲ್ಲಿ ನಿಯೋಜಿಸಲಾಗಿದೆ. ಇದೇ ವೇಳೆ ತಮಿಳುನಾಡಿನ ವಿವಿಧ ಕ್ಷೇತ್ರಗಳಲ್ಲಿ ಚುನಾವಣಾ ಸಿದ್ಧತೆಗಳಿಗೆ ರಾಜ್ಯ ಬಿಜೆಪಿ ಮಾಧ್ಯಮ ಸಂಚಾಲಕ ಕರುಣಾಕರ್ ಖಾಸಲೆ ಸೇರಿದಂತೆ…
ಉಡುಪಿ : ಘನ ಮೋಹನ್ ಸಿ. ಲಾಝರಸ್ ಅವರ ನೇತೃತ್ವದಲ್ಲಿ ಮಾರ್ಚ್ 20ರಿಂದ 22ರವರೆಗೆ ಉಡುಪಿಯ ಮಿಷನ್ ಕಾಂಪೌಂಡ್ನಲ್ಲಿ ನಡೆಯಲಿರುವ ‘ಸಮಾಧಾನ ಮಹೋತ್ಸವ’ ಕಾರ್ಯಕ್ರಮಕ್ಕೆ ರಾಜ್ಯ ಹೈಕೋರ್ಟ್ ಹಸಿರು ನಿಶಾನೆ ತೋರಿದೆ ಎಂದು ಭಾರತೀಯ ಕ್ರೈಸ್ತ ಒಕ್ಕೂಟದ ರಾಜ್ಯಾಧ್ಯಕ್ಷರಾದ ಪ್ರಶಾಂತ್ ಜತ್ತನ್ನ ತಿಳಿಸಿದ್ದಾರೆ. ಫೆಲೋಶಿಪ್ ಆಫ್ ಉಡುಪಿ ಚರ್ಚಸ್ ವತಿಯಿಂದ ಮೂರು ದಿನಗಳ ಈ ಮಹೋತ್ಸವವನ್ನು ಆಯೋಜಿಸಲಾಗಿದ್ದು, ಕಳೆದ ಐದಾರು ತಿಂಗಳುಗಳಿಂದ ಇದರಿಗಾಗಿ ಸಮಗ್ರ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಪ್ರಮುಖ ಪ್ರವಚನಕಾರರಾಗಿ ಘನ ಮೋಹನ್ ಸಿ. ಲಾಝರಸ್ ಭಾಗವಹಿಸಲಿದ್ದು, ಅವರು ಇದಕ್ಕೂ ಮೊದಲು ಎರಡು ಬಾರಿ ಉಡುಪಿಗೆ ಭೇಟಿ ನೀಡಿ ಪ್ರವಚನಗಳನ್ನು ನೀಡಿದ್ದರು. ಪ್ರಸ್ತುತ ಕ್ರೈಸ್ತ ಸಮುದಾಯಕ್ಕೆ ತಪಸ್ಸಿನ ಕಾಲವಾಗಿರುವ ಹಿನ್ನೆಲೆಯಲ್ಲಿ ಭಕ್ತಿ ಸಂಜೀವನ ಕೂಟಗಳನ್ನು ಆಯೋಜಿಸುವ ಪರಂಪರೆಯ ಭಾಗವಾಗಿ ಈ ಮಹೋತ್ಸವವನ್ನು ರೂಪಿಸಲಾಗಿದೆ. ಕಾರ್ಯಕ್ರಮದ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಗೆ ಸುಮಾರು 20 ದಿನಗಳ ಮುಂಚೆಯೇ ಮಾಹಿತಿ ನೀಡಲಾಗಿತ್ತು. ಆದರೆ ಕೆಲವು ಸಂಘಟನೆಗಳಿಂದ ಕಾರ್ಯಕ್ರಮವನ್ನು ನಡೆಸಲು ಬಿಡುವುದಿಲ್ಲ ಎಂಬ ಬೆದರಿಕೆಗಳು ಮಾಧ್ಯಮಗಳ…
ಮಂಗಳೂರು, ದಿನಾಂಕ : 19-03-2026 ನೂತನವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿದ್ಯಾರ್ಥಿ ಜನತಾದಳದ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡಿರುವ ನಿಹಾಲ್ ಎಸ್ ಕೋಡ್ತುಗುಳಿ ಅವರು, ತಮ್ಮ ಪದಗ್ರಹಣದ ಬಳಿಕ ಜಿಲ್ಲೆಯ ಹಿರಿಯ ರಾಜಕೀಯ ನಾಯಕರು ಹಾಗೂ ಗಣ್ಯರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಅವರು ಸಂಘಟನೆಯ ಬಲವರ್ಧನೆ, ವಿದ್ಯಾರ್ಥಿ ಸಮುದಾಯದ ಸಮಸ್ಯೆಗಳ ಪರಿಹಾರ ಹಾಗೂ ಸಂಘಟನೆಯನ್ನು ಇನ್ನಷ್ಟು ಸಕ್ರಿಯಗೊಳಿಸುವ ಬಗ್ಗೆ ಚರ್ಚಿಸಿದರು. ಹಿರಿಯ ನಾಯಕರು ನಿಹಾಲ್ ಅವರಿಗೆ ಶುಭಾಶಯಗಳನ್ನು ತಿಳಿಸಿ, ಸಂಘಟನೆಯನ್ನು ಶಕ್ತಿಯುತವಾಗಿ ಮುನ್ನಡೆಸುವಂತೆ ಸಲಹೆ ನೀಡಿದರು. ನಿಹಾಲ್ ಎಸ್ ಕೋಡ್ತುಗುಳಿ ಅವರು ಮಾತನಾಡಿ, ವಿದ್ಯಾರ್ಥಿ ಜನತಾದಳವನ್ನು ಇನ್ನಷ್ಟು ಬಲಪಡಿಸಿ, ವಿದ್ಯಾರ್ಥಿಗಳ ಹಿತಾಸಕ್ತಿಗಾಗಿ ಕಾರ್ಯನಿರ್ವಹಿಸುವುದಾಗಿ ಹೇಳಿದರು. ಜಿಲ್ಲೆಯಾದ್ಯಂತ ಸಂಘಟನೆಯನ್ನು ವಿಸ್ತರಿಸಿ, ಯುವಜನರಲ್ಲಿ ಜಾಗೃತಿ ಮೂಡಿಸುವತ್ತ ಕ್ರಮ ಕೈಗೊಳ್ಳುವುದಾಗಿ ಅವರು ತಿಳಿಸಿದ್ದಾರೆ. ಈ ಭೇಟಿ ಕಾರ್ಯಕ್ರಮದಲ್ಲಿ ಸಂಘಟನೆಯ ಪ್ರಮುಖ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಉಡುಪಿ : ದಿನಾಂಕ 19-03-2026 ಗುರುವಾರ ಸಾಯಂಕಾಲ ಅಸ್ತಮಿಸಿದ ಬಳಿಕ, ಶುಕ್ರವಾರ ರಾತ್ರಿ ಶವ್ವಾಲ್ ತಿಂಗಳ ಪ್ರಥಮ ಚಂದ್ರದರ್ಶನವಾಗಿರುವುದಾಗಿ ದಕ್ಷಿಣ ಕನ್ನಡ ಜಿಲ್ಲಾ ಖಾಝಿಯಾದ ಶೈಖುನಾ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ಅವರು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಇದರಂತೆ, ದಿನಾಂಕ 20-03-2026 ಶುಕ್ರವಾರದಂದು ಶವ್ವಾಲ್ 1, ಅಂದರೆ ಈದುಲ್ ಫಿತ್ರ್ ಹಬ್ಬವನ್ನು ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಆಚರಿಸಲಿದ್ದಾರೆ. ರಂಜಾನ್ ತಿಂಗಳ ಪವಿತ್ರ ಉಪವಾಸ ಅವಧಿ ಮುಕ್ತಾಯಗೊಂಡು, ಶವ್ವಾಲ್ ತಿಂಗಳ ಚಂದ್ರದರ್ಶನವಾದ ಹಿನ್ನೆಲೆಯಲ್ಲಿ ಈದ್ ಹಬ್ಬವು ಆಚರಣೆಗೊಳ್ಳುತ್ತದೆ. ಇಸ್ಲಾಮಿಕ್ ಚಂದ್ರಮಾನ ಕ್ಯಾಲೆಂಡರ್ ಪ್ರಕಾರ, ರಂಜಾನ್ ತಿಂಗಳು ಚಂದ್ರದರ್ಶನದಿಂದ ಆರಂಭವಾಗಿ, ಶವ್ವಾಲ್ ತಿಂಗಳ ಚಂದ್ರದರ್ಶನದೊಂದಿಗೆ ಅಂತ್ಯಗೊಳ್ಳುತ್ತದೆ. ಹೀಗಾಗಿ, ಶವ್ವಾಲ್ ಮೊದಲ ದಿನವನ್ನು ‘ಈದುಲ್ ಫಿತ್ರ್’ ಎಂದು ಸಂಭ್ರಮದಿಂದ ಆಚರಿಸಲಾಗುತ್ತದೆ. ರಂಜಾನ್ ತಿಂಗಳಾದ್ಯಂತ ಮುಸ್ಲಿಮರು ಪ್ರಾರ್ಥನೆ, ಉಪವಾಸ, ಧಾರ್ಮಿಕ ಚಿಂತನೆ ಹಾಗೂ ದಾನಧರ್ಮಗಳಲ್ಲಿ ತೊಡಗಿ ಆತ್ಮಶುದ್ಧಿಯನ್ನು ಸಾಧಿಸುತ್ತಾರೆ. ಈ 30 ದಿನಗಳ ಉಪವಾಸದ ಬಳಿಕ ಬರುವ ಈದುಲ್ ಫಿತ್ರ್ ಹಬ್ಬವು ಸಂತೋಷ, ಸಹೋದರತ್ವ…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
