Author: Tulunada Surya

ಕಾಪು, ಜುಲೈ 6: ಬದ್ರಿಯ ಜುಮ್ಮಾ ಮಸ್ಜಿದ್, ಮಲ್ಲಾರು-ಮಜೂರು ಆಶ್ರಯದಲ್ಲಿ ಎಸ್‌ಐಆರ್ (SIR) ಮಾಹಿತಿ ಶಿಬಿರ ಹಾಗೂ ದೇಶದ ಕಾನೂನು-ಸಂವಿಧಾನದ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಸ್ಜಿದ್ ಅಧ್ಯಕ್ಷ ಡಾ. ಫಾರೂಕ್ ಚಂದ್ರನಗರ ವಹಿಸಿ ಮಾತನಾಡಿ, ಎಸ್‌ಐಆರ್ ಕುರಿತು ಸಮಗ್ರ ಮಾಹಿತಿ ಪಡೆದು ಸರ್ಕಾರದ ನಿರ್ದೇಶನಗಳಿಗೆ ಅನುಗುಣವಾಗಿ ದೇಶದ ಕಾನೂನು ಹಾಗೂ ಸಂವಿಧಾನಕ್ಕೆ ಎಲ್ಲರೂ ಸಹಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕೆಂದು ಕರೆ ನೀಡಿದರು. ಕಾರ್ಯಕ್ರಮವನ್ನು ಮಸ್ಜಿದ್ ಖತೀಬರಾದ ಅಬ್ದುಲ್ ರಶೀದ್ ಸಖಾಫಿ ಅಲ್-ಖಾಮಿಲ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸಮಾಜಮುಖಿ ಹಾಗೂ ಜನಪರ ಕಾರ್ಯಕ್ರಮಗಳು ನಿರಂತರವಾಗಿ ನಡೆಯುವುದರಿಂದ ಸಮಾಜದಲ್ಲಿ ಉತ್ತಮ ಬದಲಾವಣೆ ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ನ್ಯಾಯವಾದಿ ಅಬ್ದುಲ್ ರೆಹಮಾನ್ ಎಸ್‌ಐಆರ್ ಪ್ರಕ್ರಿಯೆ ಹಾಗೂ ದೇಶದ ಕಾನೂನು-ಸಂವಿಧಾನದ ಕುರಿತು ಮಾಹಿತಿ ನೀಡಿದರು. ಭಾರತದ ಸಂವಿಧಾನ, ಕಾನೂನು ಮತ್ತು ನಾಗರಿಕರ ಹಕ್ಕು-ಕರ್ತವ್ಯಗಳ ಬಗ್ಗೆ ಅರಿವು ಹೊಂದಿರುವುದು ಪ್ರತಿಯೊಬ್ಬ ಭಾರತೀಯ ಪ್ರಜೆಯ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದರು. ಎಸ್‌ಐಆರ್…

Read More

ಮಂಗಳೂರು, ಜುಲೈ 6: ನಗರದ ಬೈಕಂಪಾಡಿ ಸಮೀಪ ಚಿನ್ನದ ವ್ಯಾಪಾರಿಯನ್ನು ಅಡ್ಡಗಟ್ಟಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ ಹಾಗೂ ನಗದು ದರೋಡೆ ನಡೆಸಿದ ಬಹುಚರ್ಚಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗಾಗಿ ಅವರ ಫೋಟೋಗಳು ಹಾಗೂ ಗುರುತು ವಿವರಗಳನ್ನು ಸಾರ್ವಜನಿಕರಿಗೆ ಬಿಡುಗಡೆ ಮಾಡಿದ್ದಾರೆ. ಪೊಲೀಸ್ ತನಿಖೆಯಲ್ಲಿ ಈ ದರೋಡೆ ಕೃತ್ಯದ ಮಾಸ್ಟರ್ ಮೈಂಡ್ ಪಾಂಡಿಚೇರಿ ಮೂಲದ ಶಿಬಿನ್ ಗಂಗಾಧರನ್ ಎಂಬುದು ಬೆಳಕಿಗೆ ಬಂದಿದ್ದು, ಪ್ರಕರಣದಲ್ಲಿ ಒಟ್ಟು 14 ಮಂದಿ ಆರೋಪಿಗಳು ಭಾಗಿಯಾಗಿರುವುದು ದೃಢಪಟ್ಟಿದೆ. ಆರೋಪಿಗಳ ವಿರುದ್ಧ ವಿವಿಧ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಅವರ ಬಂಧನಕ್ಕಾಗಿ ವಿಶೇಷ ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ. ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳು ಕೇರಳದ ವಿವಿಧ ಜಿಲ್ಲೆಗಳು ಹಾಗೂ ಕೇರಳ-ಕರ್ನಾಟಕ ಗಡಿ ಭಾಗಗಳಲ್ಲಿ ತಲೆಮರೆಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸರು ಕೇರಳ ಪೊಲೀಸರೊಂದಿಗೆ ಸಮನ್ವಯ ಸಾಧಿಸಿ ಹಲವು ಸ್ಥಳಗಳಲ್ಲಿ ವ್ಯಾಪಕ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಪೊಲೀಸರು ಗುರುತು ಬಹಿರಂಗಪಡಿಸಿರುವ…

Read More

ಉಳ್ಳಾಲ, ಜುಲೈ 5 (ತುಳುನಾಡ ಸೂರ್ಯ): ಉಳ್ಳಾಲ ಸಮೀಪದ ಕೋಟೆಕಾರ್‌ನಲ್ಲಿ ಉದ್ಯಮಿ, ಸಮಾಜಸೇವಕ ಹಾಗೂ ಕೋಟೆಕಾರು ಪಟ್ಟಣ ಪಂಚಾಯತ್ ಸದಸ್ಯರಾದ ರಾಘವ ಗಟ್ಟಿ ಮತ್ತು ಭಾರತಿ ರಾಘವ ಗಟ್ಟಿ ದಂಪತಿಗಳ ಕನಸಿನ ಯೋಜನೆಯಾದ ನೂತನ ಆರ್.ಬಿ. ಕಾಂಪ್ಲೆಕ್ಸ್ (R.B. Complex) ಭಾನುವಾರ ಧಾರ್ಮಿಕ ಹಾಗೂ ಸಾಂಸ್ಕೃತಿಕ ವೈಭವದ ನಡುವೆ ಲೋಕಾರ್ಪಣೆಗೊಂಡಿತು. ಮಾಡೂರು ಶಿವದುರ್ಗಾಂಭ ಮಠದ ಪೂಜ್ಯ ದುರ್ಗಾನಂದ ಸ್ವಾಮೀಜಿ ಅವರು ವಾಣಿಜ್ಯ ಸಂಕೀರ್ಣವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು. ಬಳಿಕ ಮಾತನಾಡಿದ ಅವರು, “ಯಶಸ್ವಿ ಉದ್ಯಮಿಯ ನಿಜವಾದ ಸಾಧನೆ ಸಮಾಜದ ಅಭಿವೃದ್ಧಿಯಲ್ಲಿ ಕಾಣಿಸಬೇಕು. ಉದ್ಯಮವು ಕೇವಲ ಲಾಭದ ವ್ಯವಹಾರವಾಗದೆ ಉದ್ಯೋಗ ಸೃಷ್ಟಿ, ಜನಸೇವೆ ಹಾಗೂ ಸಾಮಾಜಿಕ ಬದ್ಧತೆಯ ಪ್ರತೀಕವಾಗಬೇಕು. ಅಂತಹ ಉದ್ಯಮಗಳೇ ಸಮಾಜಕ್ಕೆ ಶಾಶ್ವತ ಕೊಡುಗೆ ನೀಡುತ್ತವೆ,” ಎಂದು ಹೇಳಿದರು. ನೂತನ ಆರ್.ಬಿ. ಕಾಂಪ್ಲೆಕ್ಸ್ ಸ್ಥಳೀಯ ವ್ಯಾಪಾರ ಚಟುವಟಿಕೆಗಳಿಗೆ ಹೊಸ ಚೈತನ್ಯ ನೀಡುವುದರೊಂದಿಗೆ ಕೋಟೆಕಾರ್ ಭಾಗದ ಆರ್ಥಿಕ ಬೆಳವಣಿಗೆಗೆ ಪೂರಕವಾಗಲಿ ಎಂದು ಹಾರೈಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಬಿಜೆಪಿ ದಕ್ಷಿಣ ಕನ್ನಡ…

Read More

ಉಳ್ಳಾಲ, ಜುಲೈ 5: ಉಳ್ಳಾಲ ಸಮೀಪದ ಕೋಟೆಕಾರ್‌ನಲ್ಲಿ ಉದ್ಯಮಿ ಹಾಗೂ ಕೋಟೆಕಾರು ಪಟ್ಟಣ ಪಂಚಾಯತ್ ಸದಸ್ಯರಾದ ರಾಘವ ಗಟ್ಟಿ ಮತ್ತು ಭಾರತಿ ರಾಘವ ಗಟ್ಟಿ ದಂಪತಿಗಳ ಮಾಲಕತ್ವದ ನೂತನ ಆರ್.ಬಿ. ಕಾಂಪ್ಲೆಕ್ಸ್ (R.B. Complex) ಉದ್ಘಾಟನಾ ಸಮಾರಂಭವು ಧಾರ್ಮಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ವಾತಾವರಣದಲ್ಲಿ ಅದ್ದೂರಿಯಾಗಿ ನೆರವೇರಿತು. ಮಾಡೂರು ಶಿವದುರ್ಗಾಂಭ ಮಠದ ಪೂಜ್ಯ ದುರ್ಗಾನಂದ ಸ್ವಾಮೀಜಿ ಅವರು ನೂತನ ವಾಣಿಜ್ಯ ಸಂಕೀರ್ಣವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಉದ್ಯಮವು ಕೇವಲ ಲಾಭ ಗಳಿಸುವ ಸಾಧನವಾಗಿರದೆ ಸಮಾಜದ ಅಭಿವೃದ್ಧಿ, ಉದ್ಯೋಗ ಸೃಷ್ಟಿ ಹಾಗೂ ಸೇವಾ ಮನೋಭಾವವನ್ನು ಬೆಳೆಸುವ ಮಾಧ್ಯಮವಾಗಬೇಕು ಎಂದು ತಿಳಿಸಿದರು. ನೂತನ ಕಟ್ಟಡವು ವ್ಯಾಪಾರ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಜೊತೆಗೆ ಸ್ಥಳೀಯ ಆರ್ಥಿಕ ಅಭಿವೃದ್ಧಿಗೆ ಸಹಕಾರಿಯಾಗಲಿ ಎಂದು ಹಾರೈಸಿದರು. ಉದ್ಘಾಟನಾ ಸಮಾರಂಭದಲ್ಲಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಮುಖಂಡರಾದ ಚಂದ್ರಶೇಖರ್ ಉಚ್ಚಿಲ, ಸತ್ಯಶಂಕರ ಬೊಳ್ಳವ, ತುಳುನಾಡು ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಯೋಗೀಶ್ ಶೆಟ್ಟಿ…

Read More

ಉಡುಪಿ, ಜುಲೈ 5: ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ನೂತನವಾಗಿ ಆಯ್ಕೆಯಾದ ಮಹಿಳಾ ಜಿಲ್ಲಾ ಘಟಕ ಹಾಗೂ ಬ್ರಹ್ಮಾವರ ತಾಲೂಕು ಘಟಕದ ಪದಾಧಿಕಾರಿಗಳಿಗೆ ಅಭಿನಂದನಾ ಸಮಾರಂಭವು ದಿನಾಂಕ 05-07-2026 ರಂದು ಭಾನುವಾರ ಉಡುಪಿಯ ಅಕ್ಷಯ ಟವರ್ ನಲ್ಲಿರುವ ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ಕಚೇರಿಯಲ್ಲಿ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮವು ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ಬಳಿಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಪೂಜಾರಿ ಹಾವಂಜೆ ಅವರು ಅತಿಥಿಗಳನ್ನು ಸ್ವಾಗತಿಸಿದರು. ವೇದಿಕೆಯಲ್ಲಿದ್ದ ಗಣ್ಯರು ದೀಪ ಪ್ರಜ್ವಲನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮೊದಲ ಹಂತದಲ್ಲಿ ಬ್ರಹ್ಮಾವರ ತಾಲೂಕು ಘಟಕದ ನೂತನ ಪದಾಧಿಕಾರಿಗಳನ್ನು ಗೌರವಿಸಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಮಹೇಂದ್ರ ಆಚಾರ್ಯ ಹೇರಂಜೆ, ಉಪಾಧ್ಯಕ್ಷ ನಿತಿನ್ ಶೆಟ್ಟಿ ಪೇತ್ರಿ, ಸಂಘಟನಾ ಕಾರ್ಯದರ್ಶಿ ವಿಜಯ್ ನಾಯಕ್, ಖಜಾಂಚಿ ವಿಘ್ನೇಶ್ ನಾಯಕ್ ಸೇರಿದಂತೆ ನೂತನ ಪದಾಧಿಕಾರಿಗಳಿಗೆ ಶಾಲು ಹೊದಿಸಿ ಸನ್ಮಾನಿಸಲಾಯಿತು. ಬ್ರಹ್ಮಾವರ ತಾಲೂಕು ಘಟಕದ ಅಧ್ಯಕ್ಷ ಶರತ್ ರಾಜ್ ಆರೂರು ಅವರು ನೂತನ…

Read More

ಉಡುಪಿ, ಜುಲೈ 5: ಅಜ್ಜರಕಾಡಿನ ನೂತನ ಜಿಲ್ಲಾ ಸರ್ಕಾರಿ ಆಸ್ಪತ್ರೆಯನ್ನು ತಕ್ಷಣವೇ ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭಗೊಳಿಸಿ, ಜಿಲ್ಲೆಯ ಸಾರ್ವಜನಿಕರಿಗೆ ಗುಣಮಟ್ಟದ ಹಾಗೂ ಸಮಗ್ರ ಆರೋಗ್ಯ ಸೇವೆಯನ್ನು ಒದಗಿಸಬೇಕು ಎಂದು ಆಗ್ರಹಿಸಿ ತುಳುನಾಡು ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕವು ಆರೋಗ್ಯ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಅವರಿಗೆ ತುಳುನಾಡಿನ ಸೂರ್ಯ ಚಂದ್ರರ ಗುರುತಿನ ತುಳುನಾಡು ಶಾಲು ಹಾಕಿ ಸ್ವಾಗತಿಸಿ ಮನವಿ ಸಲ್ಲಿಸಿ ಆರೋಗ್ಯ ಕ್ಷೇತ್ರದ ಸಮಸ್ಯೆಗಳ ನಿವಾರಣೆಗೆ ಆಗ್ರಹಿಸಿತ್ತು. ಉಡುಪಿ ಜಿಲ್ಲಾ ಪ್ರವಾಸದ ಸಂದರ್ಭದಲ್ಲಿ ಸಚಿವರನ್ನು ಭೇಟಿ ಮಾಡಿದ ವೇದಿಕೆಯ ಪದಾಧಿಕಾರಿಗಳು ಆಜ್ಜರಕಾಡಿನಲ್ಲಿ ನಿರ್ಮಾಣಗೊಂಡಿರುವ ನೂತನ ಜಿಲ್ಲಾ ಆಸ್ಪತ್ರೆ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಸಜ್ಜುಗೊಂಡಿದ್ದರೂ, ಆಸ್ಪತ್ರೆಯ ಎಲ್ಲಾ ವಿಭಾಗಗಳು ಇನ್ನೂ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸದಿರುವುದು ಸಾರ್ವಜನಿಕರಲ್ಲಿ ತೀವ್ರ ನಿರಾಸೆ ಮೂಡಿಸಿದೆ ಎಂದು ತಿಳಿಸಿದರು. ಜಿಲ್ಲೆಯ ಸಾವಿರಾರು ಬಡವರು, ಕಾರ್ಮಿಕರು, ರೈತರು, ಹಿರಿಯ ನಾಗರಿಕರು ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗದ ಜನರು ಸರ್ಕಾರಿ ಆಸ್ಪತ್ರೆಗಳನ್ನೇ ಅವಲಂಬಿಸಿರುವುದರಿಂದ ಸಮರ್ಪಕ ಆರೋಗ್ಯ…

Read More

ಮಂಗಳೂರು, ಜುಲೈ 4: ನಗರದ ಅತ್ತಾವರದಲ್ಲಿ ಮಾದಕ ವಸ್ತು ಸೇವನೆ ಮಾಡಿದ್ದ ಇಬ್ಬರು ಯುವಕರನ್ನು ಮಂಗಳೂರು ದಕ್ಷಿಣ ಠಾಣೆ ಪೊಲೀಸರು ವಶಕ್ಕೆ ಪಡೆದು, ಎನ್‌ಡಿಪಿಎಸ್ (NDPS) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಜುಲೈ 2ರಂದು ತಡರಾತ್ರಿ ಸುಮಾರು 12.30 ಗಂಟೆಗೆ ಅತ್ತಾವರ ಪ್ರದೇಶದಲ್ಲಿ ಗಸ್ತು ಕರ್ತವ್ಯದಲ್ಲಿದ್ದ ಎಎಸ್‌ಐ ಗಣೇಶ್ ಕುಮಾರ್ ಹಾಗೂ ಪೊಲೀಸ್ ಕಾನ್ಸ್‌ಟೇಬಲ್ ಶಿವಾನಂದ ಅವರಿಗೆ ಅತ್ತಾವರಕಟ್ಟೆ ಸಮೀಪ ಇಬ್ಬರು ಮಾದಕ ವಸ್ತು ಸೇವಿಸಿರುವ ಕುರಿತು ಮಾಹಿತಿ ದೊರೆತಿದೆ. ತಕ್ಷಣ ಸ್ಥಳಕ್ಕೆ ತೆರಳಿದ ವೇಳೆ, ಸಮವಸ್ತ್ರದಲ್ಲಿದ್ದ ಪೊಲೀಸರನ್ನು ಕಂಡು ಇಬ್ಬರು ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಅವರನ್ನು ಬೆನ್ನಟ್ಟಿದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಚಾರಣೆಯಲ್ಲಿ ಆರೋಪಿಗಳು ಕುದ್ರೋಳಿ ನಿವಾಸಿ 26 ವರ್ಷದ ಮೊಹಮ್ಮದ್ ಫರ್ಡೀನ್ ಹಾಗೂ ಸುರತ್ಕಲ್ ಕೃಷ್ಣಾಪುರ ನಿವಾಸಿ 27 ವರ್ಷದ ಅಮೀರ್ ಎಂದು ಗುರುತಿಸಲಾಗಿದೆ. ಅವರ ವರ್ತನೆ ಅನುಮಾನಾಸ್ಪದವಾಗಿದ್ದು, ಬಾಯಿಯಿಂದ ಅಮಲು ಪದಾರ್ಥದ ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಹೆಚ್ಚಿನ ವಿಚಾರಣೆ ನಡೆಸಿದಾಗ ಮಾದಕ ವಸ್ತು ಸೇವಿಸಿರುವುದನ್ನು ಒಪ್ಪಿಕೊಂಡಿದ್ದಾರೆ. ಬಳಿಕ ಇಬ್ಬರನ್ನೂ ವೈದ್ಯಕೀಯ…

Read More

ಮೂಲ್ಕಿ, ಜುಲೈ 3: ಬ್ಯಾರಿ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂರಕ್ಷಣೆ ಹಾಗೂ ಬೆಳವಣಿಗೆಗೆ ಮತ್ತೊಂದು ಮಹತ್ವದ ಹೆಜ್ಜೆಯಾಗಿ ಮೂಲ್ಕಿ ತಾಲೂಕು ಬ್ಯಾರಿ ಸಾಹಿತ್ಯ ಪರಿಷತ್ ವತಿಯಿಂದ ಉದ್ಘಾಟನಾ ಸಮಾರಂಭ, ಸದಸ್ಯತ್ವ ಅಭಿಯಾನ, ಪೂರ್ಣ ಪ್ರಮಾಣದ ಸಮಿತಿ ರಚನೆ ಮತ್ತು ಬ್ಯಾರಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಜುಲೈ 5ರಂದು (ಭಾನುವಾರ) ಹಳೆಯಂಗಡಿ ಸಾಗ್ ಬದ್ರಿಯಾ ಜುಮಾ ಮಸೀದಿಯ ಸಭಾಭವನದಲ್ಲಿ ನಡೆಯಲಿದೆ. ಮಧ್ಯಾಹ್ನ 2 ಗಂಟೆಗೆ ಆರಂಭಗೊಳ್ಳುವ ಕಾರ್ಯಕ್ರಮವನ್ನು ಸಾಗ್ ಬದ್ರಿಯಾ ಜುಮಾ ಮಸೀದಿಯ ಖತೀಬ್ ಇ.ಎಂ. ಅಬ್ದುಲ್ಲಾ ಮದನಿ ಅವರು ದುಆ ನೆರವೇರಿಸುವ ಮೂಲಕ ಉದ್ಘಾಟಿಸಲಿದ್ದಾರೆ. ಪರಿಷತ್ ಅಧ್ಯಕ್ಷ ನಿಸಾರ್ ಅಹ್ಮದ್ ಅಂಗರಗುಡ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಮೂಲ್ಕಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಬ್ಯಾರಿ ಸಮುದಾಯದ ಹಿರಿಯರು, ವಿವಿಧ ಸಂಘಟನೆಗಳ ಮುಖಂಡರು ಹಾಗೂ ಸಾಹಿತ್ಯಾಸಕ್ತರು ಉಪಸ್ಥಿತರಿರಲಿದ್ದಾರೆ. ಹಳೆಯಂಗಡಿ ಸಾಗ್ ಬದ್ರಿಯಾ ಜುಮಾ ಮಸೀದಿಯ ಅಧ್ಯಕ್ಷ ಅಬ್ದುಲ್ ಖಾದರ್ (ಅದ್ದು), ಅಬ್ದುಲ್ ರಹಿಮಾನ್ ಕುಡುಂಬೂರು,…

Read More

ಮಂಗಳೂರು, ಜುಲೈ 3: ಕೆಲವು ದಿನಗಳ ಹಿಂದೆ ಮಂಗಳೂರಿನ ನಾಗೋರಿ ಪ್ರದೇಶದಲ್ಲಿ ಭಾರೀ ಮಳೆಯ ಪರಿಣಾಮ ಸಂಭವಿಸಿದ ಗುಡ್ಡ ಕುಸಿತದ ದುರಂತದಲ್ಲಿ ಅಮೂಲ್ಯ ಜೀವಗಳು ಬಲಿಯಾದ ಘಟನೆ ಇನ್ನೂ ಜನರ ಮನಸ್ಸಿನಿಂದ ಮಾಸುವ ಮುನ್ನವೇ, ನಗರದ ಬಿಕರ್ಣಕಟ್ಟೆ–ಬಜ್ಜೋಡಿ ಪ್ರದೇಶದಲ್ಲೂ ಗುಡ್ಡ ಕುಸಿತದ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಜನತಾದಳ (ಜಾತ್ಯತೀತ) ಪಕ್ಷದ ಮುಖಂಡರು ಇಂದು ಅಪಾಯದ ಪ್ರದೇಶಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಯೋಗೀಶ್ ಶೆಟ್ಟಿ ಜಪ್ಪು ರವರು ಅಪಾಯದ ಪ್ರದೇಶವನ್ನು ವೀಕ್ಷಿಸಿ ಸ್ಥಳೀಯ ನಿವಾಸಿಗಳ ಅಹವಾಲುಗಳನ್ನು ಆಲಿಸಿತು. ನಿರಂತರ ಮಳೆಯಿಂದ ಗುಡ್ಡದಲ್ಲಿ ಬಿರುಕುಗಳು ಕಾಣಿಸಿಕೊಂಡಿದ್ದು, ಮತ್ತಷ್ಟು ಮಳೆಯಾದರೆ ಗುಡ್ಡ ಕುಸಿಯುವ ಆತಂಕ ಎದುರಾಗಿದೆ ಎಂದು ಸ್ಥಳೀಯರು ತಿಳಿಸಿದರು. ಹಲವು ಕುಟುಂಬಗಳು ಜೀವಭಯದ ನಡುವೆ ದಿನ ಕಳೆಯುತ್ತಿದ್ದು, ಆಡಳಿತ ತಕ್ಷಣ ಮಧ್ಯಪ್ರವೇಶಿಸಿ ಸುರಕ್ಷತಾ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು., “ನಾಗೋರಿ ದುರಂತದಲ್ಲಿ ಅಮೂಲ್ಯ ಜೀವಗಳು ಕಳೆದುಹೋದ ನಂತರ ಪರಿಹಾರ ಕಾರ್ಯಗಳು ನಡೆದವು.…

Read More

ಉಡುಪಿ ಜಿಲ್ಲಾ ಸುನ್ನೀ ಸಂಯುಕ್ತ ಜಮಾಅತ್ ಇದರ ಜನಪರ, ಸಾಮಾಜಿಕ ಚಟುವಟಿಕೆಗಳಲ್ಲಿ ಸಂಪೂರ್ಣ ಸಹಕಾರ ಹಾಗು ಉಡುಪಿ ಜಿಲ್ಲಾ ಖಾಝಿ ಯಾಗಿದ್ದ ತಾಜುಲ್ ಫುಕಹಾಹ್ ಬೇಕಲ್ ಉಸ್ತಾದ್ ಇಬ್ರಾಹಿಂ ಮುಸ್ಲಿಯಾರ್ ಅವರ ಅನುಸ್ಮರಣೆ ನಿಮಿತ್ತ ನಡೆದ ಬೃಹತ್ ವಿದ್ವಾಂಸ, ಉಮರಾ ಸಮಾವೇಶಕ್ಕೆ ಸ್ಥಳಾವಕಾಶ ಹಾಗೂ ಸಂಪೂರ್ಣ ಸಹಕಾರ ‌ನೀಡಿದ ಬದ್ರಿಯಾ ಜುಮುಅ ಮಸ್ಜಿದ್ ಮಲ್ಲಾರು – ಮಜೂರು ಆಡಳಿತ ಸಮಿತಿಗೆ ಸುನ್ನೀ ಸಂಯುಕ್ತ ಜಮಾಅತ್ ಕಮಿಟಿ ವತಿಯಿಂದ ಮೂಳೂರು ಸುನ್ನೀ ಸೆಂಟರ್ ನಲ್ಲಿ ನಡೆದ ಅಸಂಬ್ಲೇಜ್ ಕಾರ್ಯಕ್ರಮದಲ್ಲಿ ಉಪ ಖಾಝಿ ಅಬ್ದುರ್ರಹ್ಮಾನ್ ಮದನಿ ಯವರ ದಿವ್ಯ ಹಸ್ತದ ಮೂಲಕಗೌರವ ಸಲ್ಲಿಸಲಾಯಿತು. ಗೌರವ ಸಮರ್ಪಣೆಯನ್ನು ಸ್ವೀಕರಿಸಿದ ಅಧ್ಯಕ್ಷ ಡಾ.ಎಂ.ಫಾರೂಕ್ ರವರು ತುಂಬು ಹೃದಯದ ಕೃತಜ್ಞತೆಗಳನ್ನು ಸಲ್ಲಿಸಿದರು. ಮುಂದಿನ ದಿನಗಳಲ್ಲಿ ನಮ್ಮ ಸಹಕಾರವು ಮುಂದುವರೆಯಲಿದೆ ಎಂದು ಡಾ.ಫಾರೂಕ್ ರವರು ತಿಳಿಸಿದರು.ಸಂಯುಕ್ತ ಜಮಾಅತ್ ಅಧ್ಯಕ್ಷ ಹಾಜಿ ಅಬೂಬಕರ್ ನೇಜಾರ್,ಕಾರ್ಯದರ್ಶಿ ಬಾವು ಹಾಜಿ ಮೂಳೂರು, ಖತೀಬ್ ಅಬ್ದುರ್ರಶೀದ್ ಸಖಾಫಿ, ಮೂಳೂರು ಮುದರ್ರಿಸ್ ಹಾಫಿಳ್ ಅಶ್ರಫ್ ಸಖಾಫಿ, ಸುನ್ನೀ…

Read More