Author: Tulunada Surya

ಮಂಗಳೂರು, ಜುಲೈ 1: ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆಯ ಹಿಂಭಾಗದ ನಾಗೋರಿ ಪ್ರದೇಶದಲ್ಲಿ ಭಾರೀ ಮಳೆಯ ಪರಿಣಾಮ ಸಂಭವಿಸಿದ ಗೋಡೆ ಕುಸಿತದಿಂದ ಮನೆ ಭಾಗಶಃ ಕುಸಿದು ಮಹಿಳೆಯೊಬ್ಬರು ಹಾಗೂ ಇಬ್ಬರು ಬಾಲಕಿಯರು ಸೇರಿದಂತೆ ಮೂವರು ಮೃತಪಟ್ಟಿರುವ ದುರಂತದ ಹಿನ್ನೆಲೆಯಲ್ಲಿ ಜನತಾದಳ (ಜಾತ್ಯತೀತ) ಪಕ್ಷದ ನಿಯೋಗವು ಮಂಗಳವಾರ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ದುರಂತದಲ್ಲಿ ಅಮೂಲ್ಯ ಜೀವಗಳು ಬಲಿಯಾಗಿರುವುದು ಅತ್ಯಂತ ದುಃಖದ ಸಂಗತಿಯಾಗಿದೆ ಎಂದು ಸಂತಾಪ ವ್ಯಕ್ತಪಡಿಸಿದ ಜೆಡಿಎಸ್ ಮುಖಂಡರು, ಮೃತರ ಆತ್ಮಕ್ಕೆ ಚಿರಶಾಂತಿ ಹಾಗೂ ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದರು. ಅಲ್ಲದೆ, ಮೃತರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿ ದೊರೆಯಲಿ ಎಂದು ಸಾಂತ್ವನ ಹೇಳಿದರು. ಬಳಿಕ ಮಾತನಾಡಿದ ಜೆಡಿಎಸ್ ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ ಯೋಗೀಶ್ ಶೆಟ್ಟಿ ಜಪ್ಪು, ಕಳೆದ ಕೆಲವು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಸಂದರ್ಭಗಳಲ್ಲಿ ಭೂಕುಸಿತ, ಗುಡ್ಡ ಕುಸಿತ, ಮನೆ ಕುಸಿತ ಹಾಗೂ ನೆರೆ ಅವಾಂತರಗಳು ನಿರಂತರವಾಗಿ ಮರುಕಳಿಸುತ್ತಿವೆ. ಅಪಾಯದ…

Read More

ಮಂಗಳೂರು, ಜುಲೈ 1: ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆಯ ಹಿಂಭಾಗದ ನಾಗೋರಿ ಪ್ರದೇಶದಲ್ಲಿ ಭಾರೀ ಮಳೆಯ ಪರಿಣಾಮ ಸಂಭವಿಸಿದ ಗೋಡೆ ಕುಸಿತದ ಪರಿಣಾಮ ಮನೆ ಬಾಗಶಃ ಬಿದ್ದು ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ದುರಂತದ ಹಿನ್ನೆಲೆಯಲ್ಲಿ ಜನತಾದಳ (ಜಾತ್ಯತೀತ) ಪಕ್ಷದ ನಿಯೋಗವು ಇಂದು ಘಟನಾ ಸ್ಥಳಕ್ಕೆ ಭೇಟಿ ನೀಡಿತು. ದುರಂತದಲ್ಲಿ ಮಹಿಳೆಯೊಬ್ಬರು ಹಾಗೂ ಇಬ್ಬರು ಬಾಲಕಿಯರು ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ. ಈ ದುರಂತದಲ್ಲಿ ಗಾಯಗೊಂಡಿರುವವರು ಶೀಘ್ರ ಗುಣಮುಖರಾಗಲಿ ಹಾಗೂ ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪಕ್ಷದ ಮುಖಂಡರು ಪ್ರಾರ್ಥಿಸಿದರು. ಮೃತರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿ ದೊರೆಯಲಿ ಎಂದು ಸಂತಾಪ ಸೂಚಿಸಿದರು. ಭೇಟಿ ಬಳಿಕ ಮಾತನಾಡಿದ ಜೆಡಿಎಸ್ ಮುಖಂಡರುಗಳು ಕಳೆದ ಕೆಲವು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಸಂದರ್ಭಗಳಲ್ಲಿ ಭೂಕುಸಿತ, ಗುಡ್ಡ ಕುಸಿತ . ಮನೆಕುಸಿತ ಹಾಗೂ ನೆರೆ ಅವಾಂತರಗಳು ಮರುಕಳಿಸುತ್ತಿದ್ದು, ಅಪಾಯದ ಪ್ರದೇಶಗಳನ್ನು ಮುಂಚಿತವಾಗಿ ಗುರುತಿಸಿ ಅಲ್ಲಿನ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವ…

Read More

ಹಾಸನ, ಜುಲೈ 1: ಹಾಸನ ಜಿಲ್ಲಾ ಚೊಚ್ಚಲ ಚುಟುಕು ಸಾಹಿತ್ಯ ಸಮ್ಮೇಳನ–2026ರ ಅಂಗವಾಗಿ ಹಾಸನ ನಗರದ ಎ.ವಿ. ಕಾಂತಮ್ಮ ಮಹಿಳಾ ಕಾಲೇಜಿನಲ್ಲಿ ಆಯೋಜಿಸಲಾದ ಬಹುಭಾಷಾ ಚುಟುಕು ಕವಿಗೋಷ್ಠಿಯಲ್ಲಿ ಪುತ್ತೂರಿನ ಖ್ಯಾತ ಸಾಹಿತಿ, ಅಂಕಣಕಾರ್ತಿ ಹಾಗೂ ಕವಯತ್ರಿ ಮಲ್ಲಿಕಾ ಜೆ ರೈ (ತುಳುನಾಡ್) ಅವರು ತಮ್ಮ ವಿಶಿಷ್ಟ ಶೈಲಿಯ ತುಳು ಚುಟುಕು ಕವನಗಳನ್ನು ವಾಚಿಸಿ ಸಾಹಿತ್ಯಾಸಕ್ತರ ಮೆಚ್ಚುಗೆಗೆ ಪಾತ್ರರಾದರು. ಸಮ್ಮೇಳನದಲ್ಲಿ ಕನ್ನಡ, ತುಳು ಸೇರಿದಂತೆ ವಿವಿಧ ಭಾಷೆಗಳ ಚುಟುಕು ಸಾಹಿತ್ಯಕ್ಕೆ ವಿಶೇಷ ಆದ್ಯತೆ ನೀಡಲಾಗಿದ್ದು, ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಕವಿಗಳು ಹಾಗೂ ಸಾಹಿತ್ಯಾಸಕ್ತರು ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ತಂದರು. ಮಲ್ಲಿಕಾ ಜೆ ರೈ ಅವರು ತುಳು ಭಾಷೆಯ ಸೊಗಡನ್ನು, ಜನಪದ ಬದುಕಿನ ಅನುಭವಗಳನ್ನು, ಸಾಮಾಜಿಕ ಕಾಳಜಿಯನ್ನು ಹಾಗೂ ಸಮಕಾಲೀನ ಚಿಂತನೆಗಳನ್ನು ಒಳಗೊಂಡ ಚುಟುಕುಗಳ ಮೂಲಕ ಪ್ರೇಕ್ಷಕರ ಮನ ಗೆದ್ದರು. ಈ ಸಂದರ್ಭದಲ್ಲಿ ಕಳೆದ ಹಲವು ವರ್ಷಗಳಿಂದ ಚುಟುಕು ಸಾಹಿತ್ಯ ಕ್ಷೇತ್ರದಲ್ಲಿ ಸಲ್ಲಿಸಿರುವ ನಿರಂತರ ಸೇವೆ, ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ತೋರಿರುವ ಅಸಾಧಾರಣ…

Read More

ಮಂಗಳೂರು, ಜುಲೈ 1: ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆಯ ಹಿಂಭಾಗದ ನಾಗೋರಿ ಪ್ರದೇಶದಲ್ಲಿ ಇಂದು ಮುಂಜಾನೆ ಸುರಿದ ಭಾರೀ ಮಳೆಯ ಪರಿಣಾಮ ಸಂಭವಿಸಿದ ಭೂಕುಸಿತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ಅತ್ಯಂತ ದುಃಖಕರವಾಗಿದ್ದು, ತುಳುನಾಡ ರಕ್ಷಣಾ ವೇದಿಕೆ ಈ ದುರಂತದ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದೆ. ದುರಂತದಲ್ಲಿ ಮಹಿಳೆಯೊಬ್ಬರು ಹಾಗೂ ಇಬ್ಬರು ಬಾಲಕಿಯರು ಮೃತಪಟ್ಟಿದ್ದು, ಇನ್ನೂ ಮೂವರು ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ಅವರ ಕುಟುಂಬದವರಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ವೇದಿಕೆ ಪ್ರಾರ್ಥಿಸಿದೆ. ತುಳುನಾಡ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು ಅವರು ಮಾತನಾಡಿ, “ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ವರ್ಷಗಳಿಂದ ಭಾರೀ ಮಳೆಯ ಸಂದರ್ಭಗಳಲ್ಲಿ ಭೂಕುಸಿತ ಹಾಗೂ ಗುಡ್ಡ ಕುಸಿತದಂತಹ ಘಟನೆಗಳು ಮರುಕಳಿಸುತ್ತಲೇ ಇವೆ. ಈ ಹಿಂದೆಯೂ ಇದೇ ರೀತಿಯ ದುರಂತಗಳು ಸಂಭವಿಸಿದ್ದರೂ, ಅಪಾಯದ ಪ್ರದೇಶಗಳನ್ನು ಗುರುತಿಸಿ ಅಲ್ಲಿನ ನಿವಾಸಿಗಳನ್ನು ಮುಂಚಿತವಾಗಿ ಸುರಕ್ಷಿತ ಸ್ಥಳಗಳಿಗೆ…

Read More

ಮಂಗಳೂರು, ಜೂನ್ 30: ಸೀಮೆಎಣ್ಣೆ ಬೆಲೆ ಭಾರೀ ಏರಿಕೆಯಿಂದ ಕರ್ನಾಟಕ ಕರಾವಳಿಯ ಸಾಂಪ್ರದಾಯಿಕ ನಾಡದೋಣಿ ಮೀನುಗಾರರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ತಕ್ಷಣ ಮಧ್ಯಪ್ರವೇಶಿಸಿ ಮೀನುಗಾರರ ಬದುಕು ಉಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜೆಡಿಎಸ್ ರಾಜ್ಯ ಮೀನುಗಾರರ ಘಟಕದ ಅಧ್ಯಕ್ಷ ರತ್ನಾಕರ ಸುವರ್ಣ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸೀಮೆಎಣ್ಣೆಯ ಬೆಲೆ ಲೀಟರಿಗೆ ₹58ರಿಂದ ₹118ಕ್ಕೆ ಏರಿಕೆಯಾಗಿರುವುದರಿಂದ ನಾಡದೋಣಿ ಮೀನುಗಾರಿಕೆ ನಡೆಸುವುದು ದುಸ್ತರವಾಗಿದೆ ಎಂದು ತಿಳಿಸಿದ್ದಾರೆ. ಪ್ರತಿದಿನ ಒಂದು ನಾಡದೋಣಿಗೆ ಸುಮಾರು 50 ಲೀಟರ್ ಸೀಮೆಎಣ್ಣೆ ಅಗತ್ಯವಿದ್ದು, ಮೀನು ಸಿಗದ ದಿನಗಳಲ್ಲಿ ಮೀನುಗಾರರು ಸಂಪೂರ್ಣ ನಷ್ಟ ಅನುಭವಿಸುವಂತಾಗಿದೆ ಎಂದಿದ್ದಾರೆ. ಇಂಧನ ವೆಚ್ಚದ ಭಾರದಿಂದ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಸುಮಾರು 70 ಶೇಕಡಾ ನಾಡದೋಣಿಗಳು ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದ್ದು, ಸಾವಿರಾರು ಮೀನುಗಾರ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ ಎಂದು ಅವರು ಹೇಳಿದ್ದಾರೆ. ತಮಿಳುನಾಡು ಹಾಗೂ ಕೇರಳ ರಾಜ್ಯಗಳಲ್ಲಿ ಮೀನುಗಾರರಿಗೆ ರಿಯಾಯಿತಿ ದರದಲ್ಲಿ ಸೀಮೆಎಣ್ಣೆ ಪೂರೈಕೆ…

Read More

ಮಂಗಳೂರು, ಜೂನ್ 30: ಜನತಾದಳ (ಜಾತ್ಯತೀತ) ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಘಟಕದ ವತಿಯಿಂದ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಸಂಘಟನಾ ಸಭೆಯು ಮಂಗಳವಾರ ಮಂಗಳೂರಿನ ಹೋಟೆಲ್ ವುಡ್‌ಲ್ಯಾಂಡ್ಸ್‌ನಲ್ಲಿ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವು ಶಾರದಾ ಶೆಟ್ಟಿ ಅವರ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ಬಳಿಕ ಜ್ಯೋತಿ ಜೈನ್ ಅವರು ಸಭಿಕರನ್ನು ಸ್ವಾಗತಿಸಿದರು. ಪ್ರಸ್ತಾವಿಕವಾಗಿ ಮಾತನಾಡಿದ ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಯೋಗಿಶ್ ಶೆಟ್ಟಿ ಜಪ್ಪು ಅವರು, ಮಹಿಳಾ ಸಂಘಟನೆಯನ್ನು ಗ್ರಾಮ ಮಟ್ಟದಿಂದ ಜಿಲ್ಲಾ ಮಟ್ಟದವರೆಗೆ ಇನ್ನಷ್ಟು ಬಲಿಷ್ಠಗೊಳಿಸುವ ಅಗತ್ಯವನ್ನು ಒತ್ತಿ ಹೇಳಿದರು. ಮಹಿಳೆಯರು ರಾಜಕೀಯ, ಸಾಮಾಜಿಕ ಹಾಗೂ ಸಾರ್ವಜನಿಕ ಸೇವಾ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಮೂಲಕ ಪಕ್ಷದ ತತ್ವ-ಸಿದ್ಧಾಂತಗಳನ್ನು ಜನಸಾಮಾನ್ಯರಿಗೆ ತಲುಪಿಸಬೇಕು ಎಂದು ಕರೆ ನೀಡಿದರು. ಸದಸ್ಯತ್ವ ವಿಸ್ತರಣೆ, ಹೊಸ ನಾಯಕತ್ವ ಬೆಳೆಸುವುದು ಹಾಗೂ ಜನಪರ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ ಮಹಿಳಾ ಘಟಕದ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು. ಅಧ್ಯಕ್ಷೀಯ…

Read More

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಪಡುಬಿದ್ರೆ ಶಾಖೆಯ 4ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ಪಡುಬಿದ್ರೆ ಶಾಖೆಯಲ್ಲಿ ನಡೆಯಿತು.ಸಂಘದ ಸದಸ್ಯರಾದ ಶ್ರೀ ಶೀನ ಪೂಜಾರಿ ಅವರು ದೀಪ ಪ್ರಜ್ವಲನೆ ನೆರವೇರಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿ, “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಗತ್ಯ ಸಂದರ್ಭಗಳಲ್ಲಿ ಗ್ರಾಹಕರ ಮನೆಬಾಗಿಲಿಗೆ ಸೇವೆ ನೀಡುತ್ತಿದೆ. ಇಂತಹ ಸೇವೆಗಳು ಶ್ಲಾಘನೀಯ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಸಂಘದ ಸದಸ್ಯರಾದ ಶ್ರೀ ಸುನಿಲ್ ಕುಮಾರ್ ಮಾತನಾಡಿ, “ಆತ್ಮಶಕ್ತಿ ಸಂಘವು ಕೇವಲ ಬ್ಯಾಂಕಿಂಗ್ ಕ್ಷೇತ್ರಕ್ಕೆ ಮಾತ್ರ ಸೀಮಿತವಾಗದೆ ಹಲವು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ. ಸಂಘವು ಇನ್ನಷ್ಟು ಉನ್ನತ ಸ್ಥಾನಕ್ಕೇರಲಿ” ಎಂದು ಶುಭ ಹಾರೈಸಿದರು.ಗ್ರಾಹಕರಾದ ಶ್ರೀ ಶಶಿಕಾಂತ್ ಪಡುಬಿದ್ರೆ ಮಾತನಾಡಿ, “ಉತ್ತಮ ಮಾರ್ಗದರ್ಶನ ನೀಡುವ ಆಡಳಿತ ಮಂಡಳಿ ಹಾಗೂ ಉತ್ತಮ ಸೇವೆ ನೀಡುವ ಸಿಬ್ಬಂದಿಯಿಂದ ಸಂಘವು ಉತ್ತಮ ಪ್ರಗತಿಯನ್ನು ಸಾಧಿಸುತ್ತಿದೆ” ಎಂದರು.ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಸಹಕಾರ ರತ್ನ ಶ್ರೀ…

Read More

ಮಂಗಳೂರು, ಜೂನ್ 29: ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಸಮೀಪದ ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ನಸುಕಿನ ಜಾವ ನಡೆದ ಸಿನಿಮೀಯ ಶೈಲಿಯ ದರೋಡೆ ಪ್ರಕರಣವು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಕೇರಳ ಮೂಲದ ಚಿನ್ನದ ವ್ಯಾಪಾರಿಯೊಬ್ಬರ ಕಾರನ್ನು ಅಡ್ಡಗಟ್ಟಿ ಅಪಹರಿಸಿದ ದುಷ್ಕರ್ಮಿಗಳು, ಕಾರಿನಲ್ಲಿದ್ದ ಅಂದಾಜು ₹20 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದೋಚಿ ಪರಾರಿಯಾಗಿದ್ದಾರೆ.ಕೇರಳದ ಕಣ್ಣೂರು ಜಿಲ್ಲೆಯ ಪಯ್ಯನ್ನೂರು ನಿವಾಸಿ ಹಾಗೂ ಚಿನ್ನದ ವ್ಯಾಪಾರಿಯಾಗಿರುವ ವಿಕಾಸ್ ಅವರು ಪತ್ನಿ ಮತ್ತು ಮಗನೊಂದಿಗೆ ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಭಾಗವಹಿಸಿ ತಮ್ಮ ಸ್ವಿಫ್ಟ್ ಕಾರಿನಲ್ಲಿ ಊರಿಗೆ ಮರಳುತ್ತಿದ್ದರು. ಉಡುಪಿಯಿಂದ ಮಂಗಳೂರಿನತ್ತ ಪ್ರಯಾಣಿಸುತ್ತಿದ್ದ ವೇಳೆ, ಇಂದು ನಸುಕಿನ ಸುಮಾರು 4 ಗಂಟೆಯ ವೇಳೆಗೆ ಬೈಕಂಪಾಡಿ ದ್ವಾರದ ಸಮೀಪ ಈ ಘಟನೆ ನಡೆದಿದೆ.ಪ್ರಾಥಮಿಕ ಮಾಹಿತಿಯಂತೆ, ಒಂದು ಇನ್ನೋವಾ ಹಾಗೂ ಮತ್ತೊಂದು ಸ್ವಿಫ್ಟ್ ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳ ತಂಡವು ವ್ಯಾಪಾರಿಯ ಕಾರನ್ನು ಯೋಜಿತವಾಗಿ ಅಡ್ಡಗಟ್ಟಿದೆ. ಬಳಿಕ ಕಾರಿನಲ್ಲಿದ್ದ ವಿಕಾಸ್ ಅವರನ್ನು ಬಲವಂತವಾಗಿ ಕೆಳಗಿಳಿಸಿ, ಅವರ…

Read More

ಮಂಗಳೂರು, ಜೂನ್ 29: ಜನತಾದಳ (ಜಾತ್ಯತೀತ) ಪಕ್ಷದ ಮೀನುಗಾರಿಕಾ ಘಟಕವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾ ಮೀನುಗಾರಿಕಾ ಘಟಕದ ನೂತನ ಪದಾಧಿಕಾರಿಗಳನ್ನು ರಾಜ್ಯಾಧ್ಯಕ್ಷರಾದ ರತ್ನಾಕರ್ ಸುವರ್ಣ ಅವರು ಪಕ್ಷದ ಶಾಲು ಹೊದಿಸಿ ಹಾಗೂ ಅಧಿಕೃತ ಆದೇಶ ಪತ್ರ ನೀಡಿ ನೇಮಕಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರತ್ನಾಕರ್ ಸುವರ್ಣ ಅವರು, ಮೀನುಗಾರರ ಸಮಸ್ಯೆಗಳ ಪರಿಹಾರ, ಅವರ ಹಕ್ಕುಗಳ ರಕ್ಷಣೆ ಹಾಗೂ ಸರ್ಕಾರದ ವಿವಿಧ ಯೋಜನೆಗಳನ್ನು ಮೀನುಗಾರ ಸಮುದಾಯಕ್ಕೆ ತಲುಪಿಸುವ ನಿಟ್ಟಿನಲ್ಲಿ ಜಿಲ್ಲಾ ಘಟಕವು ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು. ಪಕ್ಷದ ಸಂಘಟನೆಯನ್ನು ಗ್ರಾಮ ಮಟ್ಟದಿಂದ ಜಿಲ್ಲಾಮಟ್ಟದವರೆಗೆ ಇನ್ನಷ್ಟು ಸದೃಢಗೊಳಿಸಲು ಎಲ್ಲ ಪದಾಧಿಕಾರಿಗಳು ಒಗ್ಗಟ್ಟಿನಿಂದ ಶ್ರಮಿಸಬೇಕೆಂದು ಅವರು ತಿಳಿಸಿದರು. ನೇಮಕಗೊಂಡ ದಕ್ಷಿಣ ಕನ್ನಡ ಜಿಲ್ಲಾ ಮೀನುಗಾರಿಕಾ ಘಟಕದ ಪದಾಧಿಕಾರಿಗಳು: ನೂತನ ಪದಾಧಿಕಾರಿಗಳು ಪಕ್ಷದ ನಾಯಕತ್ವಕ್ಕೆ ಕೃತಜ್ಞತೆ ಸಲ್ಲಿಸಿ, ಮೀನುಗಾರರ ಹಿತಾಸಕ್ತಿಗಾಗಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವುದಾಗಿ ಹಾಗೂ ಪಕ್ಷದ ತತ್ವ-ಸಿದ್ಧಾಂತಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಶ್ರಮಿಸುವುದಾಗಿ ಭರವಸೆ ನೀಡಿದರು. ಈ ನೇಮಕಾತಿ ಕಾರ್ಯಕ್ರಮದಲ್ಲಿ ಪಕ್ಷದ…

Read More

ಮಂಗಳೂರು, ಜೂನ್ 29: ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ 2026ರ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಲಿರುವ ಯುವವಾಹಿನಿ ಕ್ರೀಡೋತ್ಸವ–2026ರ ಆಹ್ವಾನ ಪತ್ರವನ್ನು ಮಂಗಳೂರಿನ ಯುವವಾಹಿನಿ ಸಭಾಂಗಣದಲ್ಲಿ ನಡೆದ ಕೇಂದ್ರ ಸಮಿತಿಯ ಮಾಸಿಕ ಸಭೆಯಲ್ಲಿ ಅಧಿಕೃತವಾಗಿ ಬಿಡುಗಡೆಗೊಳಿಸಲಾಯಿತು. ಸಭೆಯಲ್ಲಿ ಕ್ರೀಡೋತ್ಸವದ ಯಶಸ್ವಿ ಆಯೋಜನೆ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು. ಕ್ರೀಡಾಕೂಟದ ರೂಪುರೇಷೆ, ವಿವಿಧ ಸ್ಪರ್ಧೆಗಳ ಆಯೋಜನೆ, ಸ್ಪರ್ಧಿಗಳ ನೋಂದಣಿ, ಸ್ವಯಂಸೇವಕರ ಜವಾಬ್ದಾರಿಗಳು, ಆತಿಥ್ಯ ವ್ಯವಸ್ಥೆ ಹಾಗೂ ಕಾರ್ಯಕ್ರಮದ ಯಶಸ್ಸಿಗೆ ಕೈಗೊಳ್ಳಬೇಕಾದ ಸಿದ್ಧತೆಗಳ ಕುರಿತು ಸದಸ್ಯರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ರಾಜ್ಯದ ವಿವಿಧ ಜಿಲ್ಲೆಗಳ ಯುವವಾಹಿನಿ ಘಟಕಗಳಿಂದ ನೂರಾರು ಸದಸ್ಯರು ಹಾಗೂ ಕ್ರೀಡಾಪಟುಗಳು ಕ್ರೀಡೋತ್ಸವದಲ್ಲಿ ಭಾಗವಹಿಸುವ ನಿರೀಕ್ಷೆಯಿದ್ದು, ಸಂಘಟನೆಯ ಸದಸ್ಯರ ನಡುವೆ ಬಾಂಧವ್ಯ ವೃದ್ಧಿ, ಆರೋಗ್ಯಕರ ಸ್ಪರ್ಧಾತ್ಮಕ ಮನೋಭಾವ ಹಾಗೂ ಸಂಘಟನಾ ಬಲವರ್ಧನೆಗೆ ಈ ಕ್ರೀಡೋತ್ಸವ ಸಹಕಾರಿಯಾಗಲಿದೆ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು. ಈ ಸಂದರ್ಭದಲ್ಲಿ ಕೇಂದ್ರ ಸಮಿತಿಯ ಪದಾಧಿಕಾರಿಗಳು, ವಿವಿಧ…

Read More