- ಲೈಂಗಿಕ ಕಿರುಕುಳ ಆರೋಪಕ್ಕೆ ಬಿಗಿ ಕ್ರಮ: ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಫಾರ್ಮಸಿ ಅಧಿಕಾರಿ ಅಮಾನತು
- ಎಂಸಿಸಿ ಬ್ಯಾಂಕ್ ವ್ಯವಹಾರ ವಹಿವಾಟು ₹1,535 ಕೋಟಿಗೆ ಏರಿಕೆ : ಅಧ್ಯಕ್ಷ ಅನಿಲ್ ಲೋಬೊ
- ಶರಣಾಗಲು ಸಿದ್ಧನಿದ್ದ ವ್ಯಕ್ತಿಯ ಎನ್ಕೌಂಟರ್? ಭರತ್ ಭೂಷಣ ತಿವಾರಿ ಪ್ರಕರಣಕ್ಕೆ ಭಾರೀ ಟ್ವಿಸ್ಟ್ – ಪೊಲೀಸರ ಲೋಪ ಒಪ್ಪಿಕೊಂಡ ಎಡಿಜಿಪಿ, ಐವರು ಅಧಿಕಾರಿಗಳ ಅಮಾನತು!
- ಕಾಡಿನ ಮಧ್ಯೆ ಹೆಬ್ರಿ ಪೊಲೀಸ್ ಠಾಣೆ: ಸಾರ್ವಜನಿಕರು ಹಾಗೂ ಸಿಬ್ಬಂದಿ ಸಂಕಷ್ಟದಲ್ಲಿ – ಸ್ಥಳಾಂತರಕ್ಕೆ ಜೆಡಿಎಸ್ ಆಗ್ರಹ
- ಮಂಗಳೂರು ಖಾಝಿ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ ಗಣ್ಯರ ಸಂತಾಪ
- ಹೊಸ ಪಡಿತರ ಚೀಟಿ ವಿತರಣೆಗೆ ಆಗ್ರಹಿಸಿ ಸಚಿವರಿಗೆ ಜೆಡಿಎಸ್ ನಿಯೋಗದಿಂದ ಮನವಿ ಸಲ್ಲಿಕೆ
- ಉದ್ಯಾವರ ಪಾಪನಾಶಿನಿ ಸೇತುವೆಯಿಂದ ನದಿಗೆ ಹಾರಿ ಯುವಕ ಆತ್ಮಹತ್ಯೆ; ಮೃತದೇಹ ಪತ್ತೆ
- ಸರ್ಕಾರಿ ಆಸ್ಪತ್ರೆಗಳಲ್ಲಿ ದಲ್ಲಾಳಿಗಳಿಗೆ ಬ್ರೇಕ್: ಆರೋಗ್ಯ ಸಚಿವರಿಂದ 24×7 ನೇರ ಸಹಾಯವಾಣಿ ಘೋಷಣೆ
Author: Tulunada Surya
ಮಂಗಳೂರು, ಜೂನ್ 24: ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಫಾರ್ಮಸಿ ಅಧಿಕಾರಿ ಚಂದ್ರಶೇಖರ್ ವಿರುದ್ಧ ಲೈಂಗಿಕ ಕಿರುಕುಳದ ಗಂಭೀರ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯವು ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದ್ದ ಗ್ರೂಪ್-ಡಿ ಮಹಿಳಾ ನೌಕರಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂಬ ದೂರಿನ ಆಧಾರದ ಮೇಲೆ ಪ್ರಕರಣದ ತನಿಖೆ ಕೈಗೊಳ್ಳಲಾಗಿತ್ತು. ಈ ಸಂಬಂಧ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಸಲ್ಲಿಸಿದ ವರದಿ, ಸಾಕ್ಷಿದಾರರ ಲಿಖಿತ ಹೇಳಿಕೆಗಳು ಹಾಗೂ ಇತರ ದಾಖಲೆಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ ಪರಿಶೀಲನೆ ನಡೆಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿರುವುದರ ಜೊತೆಗೆ ಲಭ್ಯವಿರುವ ದಾಖಲೆಗಳು ಮತ್ತು ಸಾಕ್ಷ್ಯಾಧಾರಗಳ ಆಧಾರದ ಮೇಲೆ ಆರೋಪವು ಮೇಲ್ನೋಟಕ್ಕೆ ದೃಢಪಟ್ಟಿದೆ ಎಂದು ಇಲಾಖೆ ಅಭಿಪ್ರಾಯಪಟ್ಟಿದೆ. ಇದರ ಪರಿಣಾಮವಾಗಿ ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳಡಿ…
ಮಂಗಳೂರು, ಜೂನ್ 24: 114 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಎಂಸಿಸಿ ಬ್ಯಾಂಕ್ ಲಿಮಿಟೆಡ್ 2025-26ನೇ ಹಣಕಾಸು ವರ್ಷದಲ್ಲಿ ಗಮನಾರ್ಹ ಸಾಧನೆ ದಾಖಲಿಸಿದ್ದು, ಬ್ಯಾಂಕಿನ ಒಟ್ಟು ವ್ಯವಹಾರ ವಹಿವಾಟು 22.89 ಶೇಕಡಾ ಏರಿಕೆಯೊಂದಿಗೆ ₹1,535 ಕೋಟಿ ತಲುಪಿದೆ ಎಂದು ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ತಿಳಿಸಿದ್ದಾರೆ. ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾಂಕಿನ ನಿವ್ವಳ ಮೌಲ್ಯ ₹83.76 ಕೋಟಿಯಿಂದ ₹91.80 ಕೋಟಿಗೆ ಏರಿಕೆಯಾಗಿದೆ. ವಿಶೇಷವಾಗಿ ಎನ್ಆರ್ಐ ಗ್ರಾಹಕರ ವಿಶ್ವಾಸ ಮತ್ತು ಬೆಂಬಲ ಬ್ಯಾಂಕಿನ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸಿದೆ ಎಂದು ಹೇಳಿದರು. 2018ರಲ್ಲಿ ಪ್ರಸ್ತುತ ಆಡಳಿತ ಮಂಡಳಿ ಅಧಿಕಾರ ವಹಿಸಿಕೊಂಡ ಬಳಿಕ ಬ್ಯಾಂಕ್ ವೇಗವಾಗಿ ಅಭಿವೃದ್ಧಿ ಹೊಂದಿದೆ. ಈ ಅವಧಿಯಲ್ಲಿ ಠೇವಣಿಗಳು ₹304 ಕೋಟಿಯಿಂದ ₹876 ಕೋಟಿಗೆ, ಸಾಲ ಮತ್ತು ಮುಂಗಡಗಳು ₹191 ಕೋಟಿಯಿಂದ ₹657 ಕೋಟಿಗೆ ಹಾಗೂ ಷೇರು ಬಂಡವಾಳ ₹13 ಕೋಟಿಯಿಂದ ₹34 ಕೋಟಿಗೆ ಏರಿಕೆಯಾಗಿದೆ. ಒಟ್ಟು ವ್ಯವಹಾರ ವಹಿವಾಟು ₹496 ಕೋಟಿಯಿಂದ ₹1,535 ಕೋಟಿಗೆ ತಲುಪುವ…
ಪಟ್ನಾ, ಜೂನ್ 24: ಬಿಹಾರದ ಬೋಜ್ಪುರ ಜಿಲ್ಲೆಯ ಬಿಲೌಟಿ ಗ್ರಾಮದಲ್ಲಿ ನಡೆದ ಸಾಮಾಜಿಕ ಕಾರ್ಯಕರ್ತ ಭರತ್ ಭೂಷಣ ತಿವಾರಿ ಎನ್ಕೌಂಟರ್ ಪ್ರಕರಣ ಇದೀಗ ದೇಶವ್ಯಾಪಿ ಸಂಚಲನ ಸೃಷ್ಟಿಸಿದೆ. ಆರಂಭದಲ್ಲಿ ಪೊಲೀಸರ ಯಶಸ್ವಿ ಕಾರ್ಯಾಚರಣೆ ಎಂದು ಬಿಂಬಿತವಾಗಿದ್ದ ಘಟನೆ, ಇದೀಗ ಗಂಭೀರ ಅನುಮಾನಗಳು, ವಿವಾದಗಳು ಮತ್ತು ಮಾನವ ಹಕ್ಕುಗಳ ಪ್ರಶ್ನೆಗಳನ್ನು ಎಬ್ಬಿಸಿದೆ. ಪ್ರಕರಣದಲ್ಲಿ ಅತ್ಯಂತ ಮಹತ್ವದ ಬೆಳವಣಿಗೆಯೆಂದರೆ, ಬಿಹಾರದ ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಸುಧಾಂಶು ಕುಮಾರ್ ಅವರು ಸ್ವತಃ ಮಾಧ್ಯಮಗಳ ಮುಂದೆ ಬಂದು “ಪೊಲೀಸ್ ನಿರ್ವಹಣೆಯಲ್ಲಿ ಲೋಪವಾಗಿದೆ” ಎಂದು ಒಪ್ಪಿಕೊಂಡಿರುವುದು. ಈ ಹೇಳಿಕೆ ಪ್ರಕರಣದ ದಿಕ್ಕನ್ನೇ ಬದಲಿಸಿದ್ದು, ಎನ್ಕೌಂಟರ್ನ ನೈಜತೆಯ ಕುರಿತು ಹೊಸ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ವೈರಲ್ ವಿಡಿಯೋದಿಂದ ಆರಂಭವಾದ ಕಥೆ ಜೂನ್ 16ರಂದು ಭರತ್ ಭೂಷಣ ತಿವಾರಿ ಅಕ್ರಮ ಪಿಸ್ತೂಲ್ ಹಿಡಿದು ಪೊಲೀಸರಿಗೆ ಸವಾಲು ಹಾಕುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ವಿಡಿಯೋ ರಾಜ್ಯ ಪೊಲೀಸ್ ಇಲಾಖೆಗೆ ದೊಡ್ಡ ಸವಾಲಾಗಿ ಪರಿಣಮಿಸಿತ್ತು. ಆದರೆ, ಘಟನೆಯ ಮರುದಿನವೇ ಎಸ್ಟಿಎಫ್…
ಹೆಬ್ರಿ, ಜೂನ್ 24: ಸಾರ್ವಜನಿಕರ ಭದ್ರತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಪ್ರಮುಖ ಕೇಂದ್ರವಾಗಿರುವ ಹೆಬ್ರಿ ಪೊಲೀಸ್ ಠಾಣೆಯು ಪೇಟೆಯಿಂದ ಸುಮಾರು ಒಂದೂವರೆ ಕಿಲೋಮೀಟರ್ ದೂರದ ಕಾಡಿನ ಮಧ್ಯೆ ಕಾರ್ಯನಿರ್ವಹಿಸುತ್ತಿರುವುದರಿಂದ ಸಾರ್ವಜನಿಕರು ಮತ್ತು ಪೊಲೀಸ್ ಸಿಬ್ಬಂದಿ ನಾನಾ ರೀತಿಯ ತೊಂದರೆಗಳನ್ನು ಎದುರಿಸುತ್ತಿದ್ದಾರೆ ಎಂದು ಜೆಡಿಎಸ್ ಹೆಬ್ರಿ ತಾಲೂಕು ಅಧ್ಯಕ್ಷ ಶ್ರೀಕಾಂತ್ ಪೂಜಾರಿ ಕುಚ್ಚೂರು ಆರೋಪಿಸಿದ್ದಾರೆ. ಪೊಲೀಸ್ ಠಾಣೆಗೆ ಸಂಪರ್ಕಿಸುವ ರಸ್ತೆಯು ಸಮರ್ಪಕವಾಗಿ ಅಭಿವೃದ್ಧಿಯಾಗಿಲ್ಲ. ರಸ್ತೆ ಡಾಂಬರೀಕರಣಗೊಂಡಿಲ್ಲದ ಕಾರಣ ಸಾರ್ವಜನಿಕರು ಕಷ್ಟಪಟ್ಟು ಠಾಣೆಗೆ ತೆರಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಜೊತೆಗೆ ರಸ್ತೆಯುದ್ದಕ್ಕೂ ದಾರಿದೀಪಗಳ ವ್ಯವಸ್ಥೆ ಇಲ್ಲದ ಕಾರಣ ರಾತ್ರಿ ವೇಳೆಯಲ್ಲಿ ಸಂಚರಿಸುವುದು ಅಪಾಯಕಾರಿಯಾಗಿದೆ. ತುರ್ತು ಸಂದರ್ಭದಲ್ಲಿ ದೂರು ದಾಖಲಿಸಲು ಅಥವಾ ಪೊಲೀಸ್ ನೆರವು ಪಡೆಯಲು ಬರುವ ಮಹಿಳೆಯರು, ಹಿರಿಯ ನಾಗರಿಕರು ಹಾಗೂ ಸಾರ್ವಜನಿಕರು ಭಯ ಮತ್ತು ಅನಾನುಕೂಲತೆಯನ್ನು ಎದುರಿಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಹೆಬ್ರಿ ಪೇಟೆಯ ಸಮೀಪದಲ್ಲೇ ಸಾರ್ವಜನಿಕ ಸೌಲಭ್ಯಗಳಿಗೆ ಅನುಕೂಲಕರವಾದ ಸ್ಥಳಗಳಿದ್ದರೂ, ಪೊಲೀಸ್ ಠಾಣೆಯನ್ನು ಜನವಸತಿ ಪ್ರದೇಶದಿಂದ ದೂರದಲ್ಲಿ ಸ್ಥಾಪಿಸಿರುವುದು ಸಾರ್ವಜನಿಕ ಸೇವೆಯ…
ಮಂಗಳೂರು, ಜೂನ್ 23: ದಕ್ಷಿಣ ಕನ್ನಡ ಜಿಲ್ಲೆಯ ಖಾಝಿಯಾಗಿ ಸೇವೆ ಸಲ್ಲಿಸಿದ್ದ ಗೌರವಾನ್ವಿತ ಧಾರ್ಮಿಕ ನಾಯಕ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರ ನಿಧನಕ್ಕೆ ಆರೋಗ್ಯ ಸಚಿವರಾದ ಯುಟಿ ಕಾದರ್, ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್ ಮುಖಂಡರು ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದಾರೆ. ಸಂತಾಪ ಸಂದೇಶದಲ್ಲಿ ಸಚಿವ ಯು.ಟಿ. ಖಾದರ್ ಅವರು, ಮುಸ್ಲಿಯಾರ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಮುಸ್ಲಿಂ ಸಮುದಾಯಕ್ಕೆ ದೀರ್ಘಕಾಲ ಧಾರ್ಮಿಕ ಮಾರ್ಗದರ್ಶನ ನೀಡಿದ ಅಪರೂಪದ ಧಾರ್ಮಿಕ ನಾಯಕರಾಗಿದ್ದರು. ತಮ್ಮ ಜೀವನವನ್ನೆಲ್ಲ ಧರ್ಮ, ಶಿಕ್ಷಣ ಹಾಗೂ ಸಮಾಜ ಸೇವೆಗೆ ಸಮರ್ಪಿಸಿ ಸಾವಿರಾರು ಜನರಿಗೆ ದಾರಿದೀಪರಾಗಿದ್ದರು ಎಂದು ಸ್ಮರಿಸಿದ್ದಾರೆ. ಜೆಡಿಎಸ್ ಮುಖಂಡರಿಂದ ಸಂತಾಪ : ಜೆಡಿಎಸ್ ಮುಖಂಡರು ಸಂತಾಪ ಸೂಚಿಸಿ ಅವರ ಸರಳತೆ, ಆಳವಾದ ಧಾರ್ಮಿಕ ಜ್ಞಾನ, ಮಾನವೀಯತೆ ಹಾಗೂ ಸಮನ್ವಯದ ಮನೋಭಾವ ಎಲ್ಲರಿಗೂ ಪ್ರೇರಣೆಯಾಗಿತ್ತು. ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಧಾರ್ಮಿಕ ಮೌಲ್ಯಗಳನ್ನು ಬಲಪಡಿಸುವಲ್ಲಿ ಅವರು ಮಹತ್ವದ ಪಾತ್ರ ವಹಿಸಿದ್ದರು. ಅವರ ಅಗಲಿಕೆ ಮುಸ್ಲಿಂ ಸಮುದಾಯಕ್ಕೆ ಮಾತ್ರವಲ್ಲದೆ ಸಮಸ್ತ…
ಮಂಗಳೂರು, ಜೂನ್ 23: ಕಳೆದ ಎರಡು ವರ್ಷಗಳಿಂದ ರಾಜ್ಯದಲ್ಲಿ ಹೊಸ ಪಡಿತರ ಚೀಟಿ (ರೇಷನ್ ಕಾರ್ಡ್) ವಿತರಣೆಯ ಪ್ರಕ್ರಿಯೆ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಎದುರಿಸುತ್ತಿರುವ ಗಂಭೀರ ಸಮಸ್ಯೆಗಳ ಬಗ್ಗೆ ಜನತಾದಳ (ಜಾತ್ಯತೀತ) ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ನಿಯೋಗವು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು ಮತ್ತು ಜಿಲ್ಲಾಧಿಕಾರಿಗಳ ಮೂಲಕ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರಿಗೆ ಮನವಿ ಸಲ್ಲಿಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿತು. ಮನವಿಯಲ್ಲಿ, ರಾಜ್ಯದಾದ್ಯಂತ ಸಾವಿರಾರು ಅರ್ಹ ಕುಟುಂಬಗಳು ಹೊಸ ಪಡಿತರ ಚೀಟಿ ಪಡೆಯಲು ಎರಡು ವರ್ಷಗಳಿಂದ ಕಾಯುತ್ತಿರುವುದರಿಂದ ಸರ್ಕಾರದ ವಿವಿಧ ಜನಪರ ಯೋಜನೆಗಳು ಹಾಗೂ ಮೂಲಭೂತ ಸೌಲಭ್ಯಗಳಿಂದ ವಂಚಿತರಾಗುತ್ತಿರುವ ವಿಚಾರವನ್ನು ಗಂಭೀರವಾಗಿ ಪ್ರಸ್ತಾಪಿಸಲಾಯಿತು. ಹೊಸದಾಗಿ ವಿವಾಹವಾದ ದಂಪತಿಗಳು, ಪ್ರತ್ಯೇಕ ಕುಟುಂಬವಾಗಿ ಜೀವನ ಆರಂಭಿಸಿರುವವರು, ಬಾಡಿಗೆ ಮನೆಗಳಲ್ಲಿ ವಾಸಿಸುವವರು, ಆರ್ಥಿಕವಾಗಿ ಹಿಂದುಳಿದ ಕುಟುಂಬಗಳು ಸೇರಿದಂತೆ ಅನೇಕ ನಾಗರಿಕರು ಪಡಿತರ ಚೀಟಿ ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ತಿಳಿಸಲಾಯಿತು.…
ಉಡುಪಿ, ಜೂನ್ 23: ಉದ್ಯಾವರ ಪಾಪನಾಶಿನಿ ಸೇತುವೆ ಮೇಲಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಯುವಕನ ಮೃತದೇಹ ಸತತ ಹುಡುಕಾಟದ ಬಳಿಕ ಪತ್ತೆಯಾಗಿದೆ.ಮೃತರನ್ನು ಹರ್ಷಿತ್ ಶೆಟ್ಟಿ (28) ಎಂದು ಗುರುತಿಸಲಾಗಿದ್ದು, ಅವರು ಉದ್ಯಾವರ ಪಿತ್ರೋಡಿ ನಿವಾಸಿಯಾಗಿದ್ದಾರೆ.ಮಾಹಿತಿಯ ಪ್ರಕಾರ, ಸೋಮವಾರ ಮುಂಜಾನೆ ಸುಮಾರು 5 ಗಂಟೆಗೆ ಕ್ರಿಕೆಟ್ ಆಡಲು ಬೋಳಾರುಗುಡ್ಡೆ ಮೈದಾನಕ್ಕೆ ತೆರಳುವುದಾಗಿ ಮನೆಯಿಂದ ಹೊರಟಿದ್ದ ಹರ್ಷಿತ್ ಬಳಿಕ ಮನೆಗೆ ಮರಳಿರಲಿಲ್ಲ. ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದ್ದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಆತಂಕಗೊಂಡಿದ್ದರು. ಈ ನಡುವೆ ಹರ್ಷಿತ್ ಬಳಸುತ್ತಿದ್ದ ದ್ವಿಚಕ್ರ ವಾಹನ ಉದ್ಯಾವರ ಪಾಪನಾಶಿನಿ ಸೇತುವೆಯ ಮೇಲೆ ಪತ್ತೆಯಾಗಿದ್ದು, ಅವರು ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿತ್ತು.ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ಸ್ಥಳೀಯರು ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಖ್ಯಾತ ಮುಳುಗು ತಜ್ಞ ಈಶ್ವರ್ ಮಲ್ಪೆ ನೇತೃತ್ವದ ತಂಡ ಸೇರಿದಂತೆ ಹಲವರು ನದಿಯಲ್ಲಿ ವ್ಯಾಪಕ ಹುಡುಕಾಟ ನಡೆಸಿದರು. ಅಂತಿಮವಾಗಿ ಸತತ ಕಾರ್ಯಾಚರಣೆಯ ಬಳಿಕ ಯುವಕನ ಮೃತದೇಹ ಪತ್ತೆಯಾಗಿದೆ.ಮೃತ ಹರ್ಷಿತ್ ಶೆಟ್ಟಿ ಅವರು ರಮೇಶ್…
ಬೆಂಗಳೂರು, ಜೂನ್ 22: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಬರುವ ಬಡ ಹಾಗೂ ಸಾಮಾನ್ಯ ಜನರ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಆಸ್ಪತ್ರೆಗಳಲ್ಲಿ ರೋಗಿಗಳು ಎದುರಿಸುವ ತೊಂದರೆಗಳು, ದಲ್ಲಾಳಿಗಳ ಹಾವಳಿ, ಅನಧಿಕೃತ ಹಣ ವಸೂಲಿ ಹಾಗೂ ಸಿಬ್ಬಂದಿಗಳ ನಿರ್ಲಕ್ಷ್ಯದ ವಿರುದ್ಧ ದೂರು ಸಲ್ಲಿಸಲು ಆರೋಗ್ಯ ಸಚಿವರ ಕಚೇರಿಯಿಂದಲೇ ನೇರವಾಗಿ ನಿಯಂತ್ರಿಸಲ್ಪಡುವ 24×7 ಸಹಾಯವಾಣಿ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ U. T. Khader ತಿಳಿಸಿದ್ದಾರೆ. ‘ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್’ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಸಚಿವರು, ಸರ್ಕಾರಿ ಆಸ್ಪತ್ರೆಗಳಲ್ಲಿ ನಡೆಯುವ ಅಕ್ರಮ ಹಣ ವಸೂಲಿ ಹಾಗೂ ರೋಗಿಗಳ ಶೋಷಣೆಗೆ ಈ ವ್ಯವಸ್ಥೆ ಪರಿಣಾಮಕಾರಿ ತಡೆಗೋಡೆಯಾಗಲಿದೆ ಎಂದು ಹೇಳಿದ್ದಾರೆ. ಸಹಾಯವಾಣಿ ಮೂಲಕ ನೇರ ದೂರು ಸಲ್ಲಿಕೆ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಹೊಸ ಸಹಾಯವಾಣಿ ಸಂಖ್ಯೆಯನ್ನು ಸಾರ್ವಜನಿಕರಿಗೆ ಸ್ಪಷ್ಟವಾಗಿ ಕಾಣುವಂತೆ ಪ್ರದರ್ಶಿಸಲಾಗುವುದು. ರೋಗಿಗಳ ದೂರುಗಳಿಗೆ ತಕ್ಷಣ ಸ್ಪಂದಿಸದ ಅಧಿಕಾರಿಗಳು ಹಾಗೂ…
ಉಡುಪಿ, ಜೂನ್ 23: ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ ಸೋಮವಾರ ಬೆಳಿಗ್ಗೆ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.ಬೆದರಿಕೆ ಸಂದೇಶದ ಮಾಹಿತಿ ಲಭಿಸುತ್ತಿದ್ದಂತೆ ಉಡುಪಿ ನಗರ ಪೊಲೀಸರು, ಶ್ವಾನ ದಳ ಹಾಗೂ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ನ್ಯಾಯಾಲಯ ಸಂಕೀರ್ಣಕ್ಕೆ ಧಾವಿಸಿ ಶೋಧ ಕಾರ್ಯಾಚರಣೆ ಆರಂಭಿಸಿದರು. ನ್ಯಾಯಾಲಯದ ಕಟ್ಟಡ ಹಾಗೂ ಆವರಣದ ವಿವಿಧ ಭಾಗಗಳಲ್ಲಿ ಸುದೀರ್ಘ ಪರಿಶೀಲನೆ ನಡೆಸಲಾಯಿತು.ಭದ್ರತಾ ದೃಷ್ಟಿಯಿಂದ ನ್ಯಾಯಾಲಯ ಸಂಕೀರ್ಣದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ನ್ಯಾಯಾಲಯಕ್ಕೆ ಆಗಮಿಸುವ ಸಾರ್ವಜನಿಕರು ಹಾಗೂ ಸಿಬ್ಬಂದಿಯ ಮೇಲೂ ಕಟ್ಟುನಿಟ್ಟಿನ ನಿಗಾ ವಹಿಸಲಾಗಿದೆ.ಇದೇ ವೇಳೆ ಬೆದರಿಕೆ ಸಂದೇಶ ಕಳುಹಿಸಿದವರ ಪತ್ತೆಗಾಗಿ ಪೊಲೀಸರು ತನಿಖೆ ಆರಂಭಿಸಿದ್ದು, ಇಮೇಲ್ನ ಮೂಲವನ್ನು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ.ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದ್ದು, ಶೋಧ ಕಾರ್ಯಾಚರಣೆ ಪೂರ್ಣಗೊಂಡ ಬಳಿಕವೇ ಬೆದರಿಕೆ ಸಂದೇಶದ ಸತ್ಯಾಸತ್ಯತೆ ಕುರಿತು ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ
ಮಂಗಳೂರು, ಜೂನ್ 22: ಕೇವಲ ಎರಡು ನಿಮಿಷ ತಡವಾಗಿ ಬಂದ ಕಾರಣಕ್ಕೆ ವಿದ್ಯಾರ್ಥಿನಿಯರನ್ನು NEET ಮರುಪರೀಕ್ಷೆಯಿಂದ ವಂಚಿಸಿರುವ ಘಟನೆ ಶಿಕ್ಷಣ ವ್ಯವಸ್ಥೆಯ ಕ್ರೌರ್ಯ ಮತ್ತು ಅಮಾನವೀಯ ಮುಖವನ್ನು ಬಯಲಿಗೆಳೆದಿದೆ ಎಂದು ಅಂತರಾಷ್ಟೀಯ ತುಳುನಾಡ ರಕ್ಷಣಾ ವೇದಿಕೆಯ ಪ್ರಧಾನ ಕಾರ್ಯದರ್ಶಿ ವಿವೇಕಾನಂದ ರಾವ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಧ್ಯಪ್ರದೇಶದ ವಿದಿಶಾದಲ್ಲಿ ನಡೆದ NEET ಮರುಪರೀಕ್ಷೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ಕೇವಲ ಎರಡು ನಿಮಿಷ ತಡವಾಗಿ ಬಂದ ಕಾರಣ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಲಾಗಿದೆ. ಮತ್ತೊಬ್ಬ ವಿದ್ಯಾರ್ಥಿನಿ ಹಳೆಯ ಅಡ್ಮಿಟ್ ಕಾರ್ಡ್ ತಂದಿದ್ದ ಕಾರಣ ಪರೀಕ್ಷೆಯಿಂದ ವಂಚಿತಳಾಗಿದ್ದಾಳೆ. ಇದೇ ಸಂದರ್ಭದಲ್ಲಿ ತಮಿಳುನಾಡಿನಲ್ಲಿ ತಪ್ಪು ಪರೀಕ್ಷಾ ಕೇಂದ್ರಕ್ಕೆ ತೆರಳಿದ್ದ ವಿದ್ಯಾರ್ಥಿಯನ್ನು ಪೊಲೀಸರು ತಮ್ಮ ವಾಹನದಲ್ಲೇ ಸರಿಯಾದ ಪರೀಕ್ಷಾ ಕೇಂದ್ರಕ್ಕೆ ತಲುಪಿಸಿ ಮಾನವೀಯತೆಯ ಉದಾಹರಣೆ ಮೆರೆದಿದ್ದಾರೆ. ಒಂದೆಡೆ ವಿದ್ಯಾರ್ಥಿಯ ಭವಿಷ್ಯ ಉಳಿಸಲು ಆಡಳಿತ ವ್ಯವಸ್ಥೆ ಕೈಜೋಡಿಸುತ್ತಿದ್ದರೆ, ಮತ್ತೊಂದೆಡೆ ಕೇವಲ ಎರಡು ನಿಮಿಷಗಳ ವಿಳಂಬದ ನೆಪದಲ್ಲಿ ವಿದ್ಯಾರ್ಥಿಗಳ ಕನಸುಗಳನ್ನು ನಾಶಪಡಿಸುವ ಧೋರಣೆ ಖಂಡನೀಯವಾಗಿದೆ. ಇದು ಪರೀಕ್ಷಾ ವ್ಯವಸ್ಥೆಯಲ್ಲ, ಶಿಕ್ಷಾ ವ್ಯವಸ್ಥೆಯಾಗಿದೆ…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
