- ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಏಪ್ರಿಲ್ 23 ಮತ್ತು 24 ರಂದು ನಡೆಯಲಿದೆ, ಸಿಇಟಿ ಸುವ್ಯವಸ್ಥಿತ ನಡೆಸಲು ಜಿಲ್ಲಾಧಿಕಾರಿ ಸೂಚನೆ
- ತುಳು ಚಲನಚಿತ್ರ “ದೇವ್ ದಾಸ್ ನ ಲೀಲಾ” ಇದೇ ಏಪ್ರಿಲ್ 24ರಂದು ಕರಾವಳಿಯಾದ್ಯಂತ ತೆರೆಗೆ
- ಮಂಗಳೂರಿನಲ್ಲಿ “ಕೊರಗ್ಲಾ ತನಿಯಾ” ಮತ್ತು “ಕನ” ಚಿತ್ರಗಳಿಗೆ ನಾಳೆ ಮುಹೂರ್ತ
- ಮೇ 28–29: ವಿಶ್ವವಿಖ್ಯಾತ ಮಾತಾ ಅಮೃತಾನಂದಮಯಿ ಅಮ್ಮಮಂಗಳೂರಿಗೆ, ಪೂರ್ವಭಾವಿ ಸಾಮೂಹಿಕ ಪ್ರಾರ್ಥನಾ ಸಭೆ ಹಾಗೂ ಶಿವಶಕ್ತಿ ಹೋಮ”.
- ತ್ರಿಶೂರ್ ಪಟಾಕಿ ದುರಂತ: ಪೂರಂ ಪಟಾಕಿ ಪ್ರದರ್ಶನದ ಬಗ್ಗೆ ಸರ್ಕಾರ ತೀರ್ಮಾನ – 24 ಕ್ಕೆ ಏರಿಕೆ
- ಅಲ್ಪಸಂಖ್ಯಾತರನ್ನ ಕಾಂಗ್ರೆಸ್ ಪಕ್ಷ ವೋಟ್ ಬ್ಯಾಂಕ್ ಗಾಗಿ ಉಪಯೋಗಿಸಿಕೊಳ್ಳುತ್ತಿದೆ :ನಿಖಿಲ್ ಕುಮಾರಸ್ವಾಮಿ
- ಜನರೊಂದಿಗೆ ಜನತಾದಳ” ಅಭಿಯಾನಕ್ಕೆ ಕಡೂರುನಲ್ಲಿ ಭಾರೀ ಸ್ಪಂದನೆ: ಕಾರ್ಯಕರ್ತರ ಮಹಾಸಂಗಮ
- ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 39ನೇ ಫನ್ನೀರ್ ವಾರ್ಡಿನ ಸೆಮಿನರಿ ವೀವ್ 1ನೇ ಅಡ್ಡರಸ್ತೆ ಅಭಿವೃದ್ಧಿ ಕಾಮಗಾರಿ ಗುದ್ದಲಿ ಪೂಜೆ
Author: Tulunada Surya
ಉಡುಪಿ: ಜಿಲ್ಲೆಯ ವಿದ್ಯಾರ್ಥಿಗಳಿಗೆ ಮಹತ್ವದ ಘಟ್ಟವಾದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಏಪ್ರಿಲ್ 23 ಮತ್ತು 24 ರಂದು ನಡೆಯಲಿದ್ದು, ಅದನ್ನು ವಿದ್ಯಾರ್ಥಿ ಸ್ನೇಹಿಯಾಗಿ, ಸುವ್ಯವಸ್ಥಿತವಾಗಿ ನಡೆಸಲು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಿಇಟಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ–2ರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಉಡುಪಿ ಜಿಲ್ಲೆಯ ಉಡುಪಿ, ಕುಂದಾಪುರ ಮತ್ತು ಕಾರ್ಕಳ ತಾಲೂಕುಗಳಲ್ಲಿ ಒಟ್ಟು 23 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದ್ದು, ಈ ಬಾರಿ 8,746 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ತಿಳಿಸಿದರು. ಉಡುಪಿಯಲ್ಲಿ 11, ಕಾರ್ಕಳದಲ್ಲಿ 5 ಮತ್ತು ಕುಂದಾಪುರದಲ್ಲಿ 7 ಕೇಂದ್ರಗಳನ್ನು ಸಿದ್ಧಪಡಿಸಲಾಗಿದೆ. ವಿದ್ಯಾರ್ಥಿಗಳು ಪರೀಕ್ಷೆ ಆರಂಭವಾಗುವ ಕನಿಷ್ಠ ಎರಡೂವರೆ ಗಂಟೆ ಮೊದಲು ಪರೀಕ್ಷಾ ಕೇಂದ್ರಕ್ಕೆ ಆಗಮಿಸಬೇಕು. ಪರಿಶೋಧನಾ ಪ್ರಕ್ರಿಯೆಯನ್ನು ಗೊಂದಲವಿಲ್ಲದೆ ಸುಗಮವಾಗಿ ನಡೆಸಿ, ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೊಠಡಿಗಳಿಗೆ ಪ್ರವೇಶಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಪ್ರತಿ ಪರೀಕ್ಷಾ ಕೊಠಡಿಯಲ್ಲಿ ಗಡಿಯಾರ ವ್ಯವಸ್ಥೆ,…
ಮಂಗಳೂರು: ಕರಾವಳಿ ಸಿನಿ ಪ್ರೇಕ್ಷಕರಿಗೆ ಮತ್ತೊಂದು ಹೊಸ ಮನರಂಜನಾ ಪ್ಯಾಕೇಜ್ ಸಿದ್ಧವಾಗಿದೆ. ಜಯಂತಿ ಪ್ರೊಡಕ್ಷನ್ ಲಾಂಛನದಲ್ಲಿ, ಡಿ.ಎಸ್ ಎಂಟರ್ಟೈನೆಂಟ್ಸ್ ಹಾಗೂ ಅಪ್ಸರಾ ಎಂಟರ್ಟೈನೆಂಟ್ಸ್ ಸಹಭಾಗಿತ್ವದಲ್ಲಿ ತಯಾರಾದ ತುಳು ಚಲನಚಿತ್ರ “ದೇವ್ ದಾಸ್ ನ ಲೀಲಾ” ಇದೇ ಏಪ್ರಿಲ್ 24ರಂದು ಕರಾವಳಿಯಾದ್ಯಂತ ತೆರೆಗೆ ಬರಲು ಸಜ್ಜಾಗಿದೆ. ನಗರದ ಪ್ರೆಸ್ ಕ್ಲಬ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಿರ್ದೇಶಕ ತೇಜೇಶ್ ಪೂಜಾರಿ, ತಮ್ಮ ಹಿಂದಿನ ಯಶಸ್ವಿ ತುಳು ಚಿತ್ರ “ಯಶಸ್ವಿ ತುಡರ್” ನಂತರ ಮತ್ತೊಂದು ವಿಭಿನ್ನ ಕಥಾಹಂದರದೊಂದಿಗೆ ಈ ಚಿತ್ರವನ್ನು ಪ್ರೇಕ್ಷಕರ ಮುಂದಿಡುತ್ತಿರುವುದಾಗಿ ತಿಳಿಸಿದರು. ಈಗಾಗಲೇ ಚಿತ್ರದ ಟೀಸರ್, ಹಾಡುಗಳು ಮತ್ತು ಟ್ರೇಲರ್ ಜಯಂತಿ ಪ್ರೊಡಕ್ಷನ್ ಯೂಟ್ಯೂಬ್ ಚಾನಲ್ನಲ್ಲಿ ಬಿಡುಗಡೆಯಾಗಿ ಉತ್ತಮ ಪ್ರತಿಕ್ರಿಯೆ ಪಡೆದಿವೆ ಎಂದರು. ಚಿತ್ರದಲ್ಲಿ ಎಲ್ಟನ್ ಜೆಫ್ ನಾಯಕನಾಗಿ, ಅದ್ವಿತಿ ಶೆಟ್ಟಿ ನಾಯಕಿಯಾಗಿ ಅಭಿನಯಿಸಿದ್ದು, ಹಾಸ್ಯ ಮತ್ತು ಮನರಂಜನೆಗೆ ಹೆಚ್ಚಿನ ಒತ್ತು ನೀಡಲಾಗಿದೆ. ಕುಟುಂಬ ಸಮೇತರಾಗಿ ವೀಕ್ಷಿಸಬಹುದಾದ ಸಂಪೂರ್ಣ ಮನರಂಜನಾ ಚಿತ್ರವಾಗಿರಲಿದೆ ಎಂಬ ವಿಶ್ವಾಸವನ್ನು ನಿರ್ದೇಶಕರು ವ್ಯಕ್ತಪಡಿಸಿದರು. ಸುಮಾರು 35 ದಿನಗಳ ಕಾಲ…
ಮಂಗಳೂರು :ಪ್ರಾರ್ಥನಾ ಕ್ರಿಯೇಷನ್ಸ್ ಮಂಗಳೂರು ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಬಹುಭಾಷಾ ಚಿತ್ರ “ಕೊರಗ್ಲಾ ತನಿಯಾ” ಹಾಗೂ ತುಳು ಚಲನಚಿತ್ರ “ಕನ” ಚಿತ್ರದ ಮುಹೂರ್ತ ಸಮಾರಂಭವು ಏಪ್ರಿಲ್ 23ರಂದು ಗುರುವಾರ ಬೆಳಿಗ್ಗೆ 9 ಗಂಟೆಗೆ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದಲ್ಲಿ ನಡೆಯಲಿದೆ ಎಂದು ನಿರ್ದೇಶಕ ಆರ್. ಧನರಾಜ್ ತಿಳಿಸಿದ್ದಾರೆ. ನಗರದ ಖಾಸಗಿ ಹೋಟೆಲ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ದೀಪ ಪ್ರಜ್ವಲನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದು ಹೇಳಿದರು. “ಕೊರಗ್ಲಾ ತನಿಯಾ” ಸಿನಿಮಾಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆರಂಭ ಫಲಕ ತೋರಿಸಲಿದ್ದು, ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಕ್ಯಾಮೆರಾ ಚಾಲನೆಗೈಯಲಿದ್ದಾರೆ. ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ ವೇದವ್ಯಾಸ ಕಾಮತ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಇನ್ನೊಂದೆಡೆ “ಕನ” ತುಳು ಸಿನಿಮಾಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಆರಂಭ ಫಲಕ ತೋರಿಸಲಿದ್ದು, ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಹಾಗೂ…
ಮಂಗಳೂರು, ಮೇ 28–29: ವಿಶ್ವವಿಖ್ಯಾತ ಆದ್ಯತ್ಮಿಕ ನಾಯಕಿ ಮಾತಾ ಅಮೃತಾನಂದಮಯಿ ಅಮ್ಮ ಮಂಗಳೂರಿಗೆ ಆಗಮಿಸುವ ಹಿನ್ನೆಲೆಯಲ್ಲಿ, ನಗರದ ಬೋಳೂರಿನಲ್ಲಿರುವ ಮಾತಾ ಅಮೃತಾನಂದಮಯಿ ಮಠದಲ್ಲಿ ಭಾನುವಾರ ಪೂರ್ವಭಾವಿ ಪ್ರಾರ್ಥನಾ ಸಭೆ ಭಕ್ತಿಭಾವದಿಂದ ಜರುಗಿತು. ಕಾರ್ಯಕ್ರಮಕ್ಕೆ ಪೂರ್ವಾಹ್ನ ಶ್ರೀ ಬ್ರಹ್ಮಸ್ಥಾನಂ ಕ್ಷೇತ್ರದಲ್ಲಿ ಶಿವಶಕ್ತಿ ಹೋಮದೊಂದಿಗೆ ಚಾಲನೆ ನೀಡಲಾಯಿತು. ಸ್ವಾಮಿನಿ ಮಂಗಳಾಮೃತ ಪ್ರಾಣ ಅವರ ಸಾನ್ನಿಧ್ಯದಲ್ಲಿ ಬ್ರಹ್ಮಚಾರಿ ರತೀಶ್ ಹೋಮ ನೆರವೇರಿಸಿದರು. ಅರ್ಚಕ ಗೋವಿಂದ ಸಹಕರಿಸಿದರು. ಬಳಿಕ ನಡೆದ “ಗುರುವಂದನ” ಕಾರ್ಯಕ್ರಮದಲ್ಲಿ ಸೇವಾ ಸಮಿತಿಯ ಅಧ್ಯಕ್ಷ ಸುರೇಶ್ ಅಮಿನ್ ದಂಪತಿಗಳು ಪಾದಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಸ್ವಾಮಿನಿ ಮಂಗಳಾಮೃತ ಪ್ರಾಣ, ಕಳೆದ ಏಳು ವರ್ಷಗಳಿಂದ ಅಮ್ಮನವರ ಆಗಮನಕ್ಕಾಗಿ ಭಕ್ತರು ಮತ್ತು ಸ್ವಯಂಸೇವಕರು ಅಪಾರ ಭಕ್ತಿಭಾವದಿಂದ ಕಾಯುತ್ತಿರುವುದಾಗಿ ತಿಳಿಸಿದರು. “ಅಮ್ಮನವರ ದರ್ಶನವು ಜೀವನದಲ್ಲಿ ನವಚೈತನ್ಯ ತುಂಬುವ ಅನುಭವ. ಮಂಗಳೂರಿನ ಮೇಲಿನ ವಿಶೇಷ ಒಲವಿನಿಂದ ಈ ಬಾರಿ ಇಲ್ಲಿ ದರ್ಶನದ ಸೌಭಾಗ್ಯ ದೊರೆತಿದೆ” ಎಂದರು. ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲು ಸರ್ವರ ಸಹಕಾರ ಕೋರಿದರು. ವಿಶೇಷ “ಉದಯಾಸ್ತಮಾನ”…
ತ್ರಿಶೂರ್: ಕೇರಳದ ತ್ರಿಶೂರ್ ಪೂರಂ ಹಬ್ಬಕ್ಕೆ ಭರ್ಜರಿ ಸಿದ್ಧತೆ ನಡೆಸುತ್ತಿದ್ದಾಗಲೇ ದೊಡ್ಡ ದುರಂತ ಸಂಭವಿಸಿದ್ದು, ತಿರುವಂಬಾಡಿ ದೇವಸ್ಥಾನಕ್ಕೆ ಸಂಬಂಧಿಸಿದ ಪಟಾಕಿ ಕಾರ್ಖಾನೆಯಲ್ಲಿ ಪ್ರಬಲವಾದ ಸ್ಫೋಟ ಸಂಭವಿಸಿದ್ದು, 20 ಕ್ಕೂ ಹೆಚ್ಚು ಕಾರ್ಮಿಕರು ಮೃತಪಟ್ಟಿದ್ದಾರೆ ಮತ್ತು ಹಲವಾರಿಗೆ ಗಂಭೀರ ಸುಟ್ಟ ಗಾಯಗಳಾಗಿವೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾದ್ಯತೆ ಇದೆ ಎಂದು ಮೂಲಗಳಿಂದ ತಿಳಿದು ಬಂದಿದೆ ಅಧಿಕಾರಿಗಳ ಪ್ರಕಾರ, ಸ್ಫೋಟ ಸಂಭವಿಸಿದಾಗ ಸುಮಾರು 70 ಕಾರ್ಮಿಕರು ಕಾರ್ಖಾನೆಯಲ್ಲಿದ್ದರು ಮತ್ತು ಅವರಲ್ಲಿ ಹೆಚ್ಚಿನವರು ಕುಂದನೂರಿನವರು ಎನ್ನಲಾಗಿದೆ. ಈ ಸ್ಫೋಟ ಎಷ್ಟು ಪ್ರಬಲವಾಗಿತ್ತೆಂದರೆ, ಹತ್ತಿರದ ಅನೇಕ ನಿವಾಸಿಗಳು ಆರಂಭದಲ್ಲಿ ಇದನ್ನು ಭೂಕಂಪ ಎಂದು ತಪ್ಪಾಗಿ ಭಾವಿಸಿದ್ದರು. ಆದರೆ ಆ ಪ್ರದೇಶದಲ್ಲಿ ದಟ್ಟವಾದ ಹೊಗೆ ಆವರಿಸಿದ ನಂತರ ಇದು ಸ್ಫೋಟ ಎಂದು ತಿಳಿದು ಬಂದಿದೆ. ಕೇರಳದ ತ್ರಿಶೂರ್ ಜಿಲ್ಲೆಯ ಮುಂಡತ್ತಿಕ್ಕೋಡ್ನಲ್ಲಿ ನಡೆದ ಭೀಕರ ಪಟಾಕಿ ಸ್ಫೋಟ ಪ್ರಕರಣದ ನಂತರ, ಇದೇ ತಿಂಗಳ 24ರಂದು ನಡೆಯಲಿರುವ ಪ್ರಸಿದ್ಧ ತ್ರಿಶೂರ್ ಪೂರಂ ಉತ್ಸವದ ಪಟಾಕಿ ಪ್ರದರ್ಶನ ನಡೆಸುವ ಬಗ್ಗೆ ಅಂತಿಮ ನಿರ್ಧಾರವನ್ನು…
ಚಿಕ್ಕಮಗಳೂರು: ಅಲ್ಪಸಂಖ್ಯಾತರನ್ನ ಕಾಂಗ್ರೆಸ್ ಪಕ್ಷ ವೋಟ್ ಬ್ಯಾಂಕ್ ಗಾಗಿ ಉಪಯೋಗಿಸಿಕೊಳ್ಳುತ್ತಿದೆ :ನಿಖಿಲ್ ಕುಮಾರಸ್ವಾಮಿ : ಜಾತ್ಯತೀತ ಜನತಾದಳ ಅನ್ನುವುದು ಅದರ ಘೋಷ ವಾಕ್ಯದಲ್ಲೇ ಇದೆ. ನಮ್ಮ ಸಿದ್ದಾಂತದಲ್ಲಿ ಯಾವುದೇ ಬದಲಾವಣೆ ಇಲ್ಲ. ನಾವು ಯಾವತ್ತಿದ್ರೂ ಜಾತ್ಯತೀತಾನೇ ಜಾತ್ಯಾತೀತವಾಗಿ ಉಳಿಯುತ್ತೇವೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಹೇಳಿದರು. ಈ ಬಗ್ಗೆ ಚಿಕ್ಕಮಗಳೂರಿನಲ್ಲಿ ಮಾತನಾಡಿ ಅವರು, ಬಿಜೆಪಿ ಜೆಡಿಎಸ್ ಜತೆ ಮೈತ್ರಿ ಆಗಿರುವುದಕ್ಕೆ ಕಾರ್ಯಕರ್ತರು ಗೊಂದಲದಲ್ಲಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿ ಅವರು ; ನಾವು NDA ಜೊತೆ ಮಿತ್ರ ಪಕ್ಷವಾಗಿ ಕೈ ಜೋಡಿಸಿದ್ದೇವೆ. ಆದರೆ ನಮ್ಮ ಸಿದ್ದಾಂತವನ್ನ ಯಾರ ಜೊತೆಗೆ ಮರ್ಜ್ ಮಾಡಿಲ್ಲ. ನಮ್ಮದು ಬೇರೆ ರಾಜಕೀಯ ಪಕ್ಷವಾಗಿದೆ ಎಂದು ಹೇಳಿದರು. ಜೆಡಿಎಸ್ ಧರ್ಮ ,ಜಾತಿ, ಸಮುದಾಯದ ಆಧಾರದ ಮೇಲೆ ರಾಜಕಾರಣ ಮಾಡಿಲ್ಲ ಜೆಡಿಎಸ್ ಸರ್ವ ಜನಾಂಗದ ಶಾಂತಿಯ ತೋಟದ ಬಗ್ಗೆ ಪರಿಕಲ್ಪನೆ ಇಟ್ಟಿರುವುದನ್ನ ನೋಡಿದ್ದೀರಾ. ಯಾವುದೇ ಧರ್ಮ ,ಜಾತಿ, ಸಮುದಾಯದ ಆಧಾರದ ಮೇಲೆ ರಾಜಕಾರಣ ಮಾಡಿಕೊಂಡು ಬಂದಿಲ್ಲ. ಎಲ್ಲರನ್ನೂ ಸಮಾನವಾಗಿ ನೋಡುವ ಕೆಲಸವನ್ನು…
ಕಡೂರು: ಜನತಾದಳ (ಜಾತ್ಯಾತೀತ) ಪಕ್ಷದ ಸಂಘಟನಾ ಬಲವರ್ಧನೆ ಮತ್ತು ತಳಮಟ್ಟದ ಕಾರ್ಯಕರ್ತರೊಂದಿಗೆ ನೇರ ಸಂಪರ್ಕ ಸಾಧಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿರುವ “ಜನರೊಂದಿಗೆ ಜನತಾದಳ” ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಕಡೂರು ವಿಧಾನಸಭಾ ಕ್ಷೇತ್ರದಲ್ಲಿ ಭಾರೀ ಸ್ಪಂದನೆ ವ್ಯಕ್ತವಾಗಿದೆ. ಕಡೂರು ಎಪಿಎಂಸಿ ಆವರಣದಲ್ಲಿ ನಡೆದ ಈ ಮಹತ್ವದ ಕಾರ್ಯಕ್ರಮವು ಕಾರ್ಯಕರ್ತರ ಮಹಾಸಂಗಮವಾಗಿ ರೂಪುಗೊಂಡಿತು. ವಿವಿಧ ಭಾಗಗಳಿಂದ ಆಗಮಿಸಿದ ಸಾವಿರಾರು ಕಾರ್ಯಕರ್ತರು ಮತ್ತು ಅಭಿಮಾನಿಗಳು ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಪಕ್ಷದ ತತ್ವ, ಸಂಘಟನೆ ಹಾಗೂ ಮುಂದಿನ ರಾಜಕೀಯ ದಿಕ್ಕು ಕುರಿತು ನಾಯಕರು ಸ್ಪಷ್ಟ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಮಾತನಾಡಿ, ಯುವಕರನ್ನು ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಅಗತ್ಯತೆಯನ್ನು ಒತ್ತಿ ಹೇಳಿದರು. ಗ್ರಾಮ ಮಟ್ಟದಿಂದಲೇ ಪಕ್ಷವನ್ನು ಬಲಿಷ್ಠಗೊಳಿಸುವುದು ನಮ್ಮ ಮುಖ್ಯ ಗುರಿ ಎಂದರು. ವಿಧಾನ ಪರಿಷತ್ ಶಾಸಕಾಂಗ ಪಕ್ಷದ ನಾಯಕರಾದ ಎಸ್.ಎಲ್. ಭೋಜೇಗೌಡ ಅವರು, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಪಕ್ಷವೇ ಜನತಾದಳ ಎಂದು ಹೇಳಿ, ಸದಸ್ಯತ್ವ ಅಭಿಯಾನವನ್ನು ಯಶಸ್ವಿಗೊಳಿಸಲು ಕರೆ…
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 39ನೇ ಫನ್ನೀರ್ ವಾರ್ಡಿನ ಸೆಮಿನರಿ ವೀವ್ 1ನೇ ಅಡ್ಡರಸ್ತೆ ಅಭಿವೃದ್ಧಿ ಕಾಮಗಾರಿಯು ರೂ. 65 ಲಕ್ಷ ವೆಚ್ಚದಲ್ಲಿ ನಡೆಯಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಗುದ್ದಲಿ ಪೂಜೆ ನಡೆಯಿತು ನಂತರ ಮಾತನಾಡಿದ ಶಾಸಕರು, ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ-1 ನ್ನು ಅನುಷ್ಠಾನಗೊಳಿಸಿ ನೂರಕ್ಕೂ ಹೆಚ್ಚು ಕೋಟಿ ಅನುದಾನವನ್ನು ಮೀಸಲಿಡಲಾಗಿತ್ತು. ಆದರೆ ನಂತರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಮಂಗಳೂರಿನ ಅಭಿವೃದ್ಧಿಗೆ ಮೀಸಲಿಟ್ಟಿದ್ದ ಅನುದಾನಕ್ಕೆ ತಡೆ ನೀಡಿತ್ತು. ಇದೀಗ ನಮ್ಮ ಸತತ ಪ್ರಯತ್ನದ ಫಲವಾಗಿ ಹಿಂದಿನ ಅನುದಾನಗಳನ್ನು ರಾಜ್ಯ ಸರ್ಕಾರವು ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ-2 ಹೆಸರಿನಲ್ಲಿ ಮತ್ತೆ ಬಿಡುಗಡೆ ಮಾಡಿದೆ ಎಂದರು. ಈ ಸಂದರ್ಭದಲ್ಲಿ ಅಜಿತ್ ಡಿಸಿಲ್ವ, ರಮೇಶ್ ಹೆಗ್ಡೆ, ಭರತ್ ಕುಮಾರ್, ಸಂದೀಪ್ ಗರೋಡಿ, ರಾಮ್ ಪ್ರಸಾದ್, ಪ್ರವೀಣ್ ನಿಡ್ಡೇಲ್, ನವೀನ್ ಶೆಣೈ, ಗಣೇಶ್, ರೋಹಿದಾಸ್, ರತನ್, ಸೇರಿದಂತೆ ಪಕ್ಷದ ಪ್ರಮುಖರು,…
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಜನತಾದಳ (ಜಾತ್ಯಾತೀತ) ಘಟಕದಲ್ಲಿ ಸಂಘಟನಾತ್ಮಕ ಚುರುಕು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ನಾಯಕತ್ವ ಮಹತ್ವದ ನೇಮಕಾತಿಗಳನ್ನು ಪ್ರಕಟಿಸಿದೆ. ಜಿಲ್ಲಾ ಘಟಕದ ನೂತನ ಕಾರ್ಯಧ್ಯಕ್ಷರಾಗಿ ಶಶಿರಾಜ ಶೆಟ್ಟಿ ಕೊಳಂಬೆ ಹಾಗೂ ಮಹಾ ಪ್ರಧಾನ ಕಾರ್ಯದರ್ಶಿಯಾಗಿ ಯೋಗಿಶ್ ಶೆಟ್ಟಿ ಜಪ್ಪು ಅವರನ್ನು ನೇಮಕ ಮಾಡಲಾಗಿದೆ. ಇದರೊಂದಿಗೆ ಜಿಲ್ಲಾ ಸಮಿತಿಯ ಸಂಪೂರ್ಣ ಪಟ್ಟಿಯನ್ನೂ ಬಿಡುಗಡೆ ಮಾಡಲಾಗಿದೆ. ಜಿಲ್ಲಾ ಅಧ್ಯಕ್ಷ ಜಾಕೆ ಮಾಧವ ಗೌಡ ಅವರ ಶಿಫಾರಸಿನಂತೆ ಈ ನೇಮಕಾತಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ, ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಬೆಂಗಳೂರಿನ ಪಕ್ಷದ ಕೇಂದ್ರ ಕಚೇರಿಯಲ್ಲಿ ಅಧಿಕೃತವಾಗಿ ಘೋಷಿಸಿದರು. ಜಿಲ್ಲಾ ಸಮಿತಿಯ ಪ್ರಮುಖರು:• ಅಧ್ಯಕ್ಷ: ಜಾಕೆ ಮಾಧವ ಗೌಡ ಪಂಜಿತ್ತಾಡಿ• ಕಾರ್ಯಧ್ಯಕ್ಷ: ಶಶಿರಾಜ ಶೆಟ್ಟಿ ಕೊಳಂಬೆ • ಮಹಾ ಪ್ರಧಾನ ಕಾರ್ಯದರ್ಶಿ :, ಯೋಗಿಶ್ ಶೆಟ್ಟಿ ಜಪ್ಪು• ಕಾರ್ಯದರ್ಶಿಗಳು: ಮೋಹನ್ದಾಸ್ ಶೆಟ್ಟಿ, ಪುತ್ತು ಮೋನು ಹುಸೇನ್ (ಮಂಗಳೂರು), ಪ್ರಿಯಾ ಸಾಲಿಯಾನ್ (ಪುತ್ತೂರು), ಮುನೀರ್ ಮುಕ್ಕಚೇರಿ• ಖಜಾಂಚಿ: ಗಂಗಾಧರ ಉಳ್ಳಾಲ•…
ಯಾದಗಿರಿ: ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ದುರ್ಮರಣಕ್ಕೀಡಾದ ಘಟನೆ ಬೀದರ್–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಖಾಸಗಿ ಸ್ಲೀಪರ್ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿ ನಂತರ ಉಂಟಾದ ಭಾರೀ ಬೆಂಕಿಯಿಂದ ಕಾರಿನಲ್ಲಿದ್ದ ಪ್ರಯಾಣಿಕರು ಸಜೀವ ದಹನಗೊಂಡಿದ್ದಾರೆ. ಲಿಂಗಸುಗೂರಿನಿಂದ ಕಲಬುರಗಿ ಕಡೆಗೆ ಸಾಗುತ್ತಿದ್ದ ಸ್ಲೀಪರ್ ಬಸ್ಗೆ ವಿರುದ್ಧ ದಿಕ್ಕಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ತಕ್ಷಣವೇ ಎರಡೂ ವಾಹನಗಳಿಗೆ ಬೆಂಕಿ ತಗುಲಿ, ಕೆಲವೇ ಕ್ಷಣಗಳಲ್ಲಿ ಅವು ಜ್ವಾಲಾಮುಖಿಯಾಗಿ ಹೊತ್ತಿ ಉರಿದವು. ಬೆಂಕಿಯ ತೀವ್ರತೆಗೆ ಕಾರಿನಲ್ಲಿದ್ದವರು ಹೊರಬರಲು ಸಾಧ್ಯವಾಗದೆ ಒಳಗಡೆಯೇ ಸಿಲುಕಿಕೊಂಡಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಒಟ್ಟು ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತದೇಹಗಳು ಸಂಪೂರ್ಣವಾಗಿ ಕರಕಲಾಗಿರುವುದರಿಂದ ಗುರುತು ಪತ್ತೆ ಕಷ್ಟವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನೊಂದೆಡೆ, ಬಸ್ಗೆ ಬೆಂಕಿ ತಗುಲುತ್ತಿದ್ದಂತೆಯೇ ಎಚ್ಚೆತ್ತ ಪ್ರಯಾಣಿಕರು ತುರ್ತು ದ್ವಾರ ಹಾಗೂ ಕಿಟಕಿಗಳ ಮೂಲಕ ಹೊರಗೆ ಜಿಗಿದು ಜೀವ ಉಳಿಸಿಕೊಂಡಿದ್ದಾರೆ. ಚಾಲಕ ಹಾಗೂ ನಿರ್ವಾಹಕರ ಸಮಯಪ್ರಜ್ಞೆಯಿಂದಾಗಿ ದೊಡ್ಡ ಅನಾಹುತ…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
