Author: Tulunada Surya

ಮಂಗಳೂರು, ಜುಲೈ 14: ಜನತಾದಳ (ಜಾತ್ಯತೀತ) ಪಕ್ಷದ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ನೂತನ ಪದಾಧಿಕಾರಿಗಳಿಗೆ ಮಂಗಳವಾರ ನೇಮಕ ಪತ್ರ ವಿತರಣೆ ಕಾರ್ಯಕ್ರಮ ನಡೆಯಿತು. ಜಿಲ್ಲಾ ಅಧ್ಯಕ್ಷರಾದ ಜಾಕೆ ಮಾಧವ ಗೌಡ ಅವರ ಮಾರ್ಗದರ್ಶನದಂತೆ, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಎನ್.ಪಿ. ಪುಷ್ಪರಾಜನ್ ಅವರು ನೂತನ ಪದಾಧಿಕಾರಿಗಳಿಗೆ ಅಧಿಕೃತ ನೇಮಕ ಪತ್ರಗಳನ್ನು ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಎನ್.ಪಿ. ಪುಷ್ಪರಾಜನ್ ಅವರು, ಪಕ್ಷದ ತತ್ವ-ಸಿದ್ಧಾಂತಗಳನ್ನು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬ ಪದಾಧಿಕಾರಿಯೂ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ಪಕ್ಷ ಸಂಘಟನೆಗೆ ಹೊಸ ಚೈತನ್ಯ ತುಂಬುವ ಉದ್ದೇಶದಿಂದ ವಿವಿಧ ಹಂತಗಳಲ್ಲಿ ಸಮರ್ಥ ಕಾರ್ಯಕರ್ತರಿಗೆ ಜವಾಬ್ದಾರಿಗಳನ್ನು ನೀಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ರಮುಖರನ್ನು ವಿವಿಧ ಘಟಕಗಳಿಗೆ ನೇಮಕ ಮಾಡಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅನ್ನು ಇನ್ನಷ್ಟು ಬಲಿಷ್ಠಗೊಳಿಸಲಾಗುವುದು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಕ್ಷೇತ್ರದ ಕಾರ್ಯಾಧ್ಯಕ್ಷರಾದ ವಸಂತ ಪೂಜಾರಿ ಅವರು, ಹೊಸದಾಗಿ ನೇಮಕಗೊಂಡ ಪದಾಧಿಕಾರಿಗಳು ಪಕ್ಷದ ಸಂಘಟನೆ, ಸದಸ್ಯತ್ವ ವೃದ್ಧಿ ಹಾಗೂ…

Read More

ವಿಶೇಷ ವರದಿ | ತುಳುನಾಡ ಸೂರ್ಯ ಮಂಗಳೂರು, ಜುಲೈ 14: ಮಂಗಳೂರಿನ ನಾಗೂರಿಯ ಏಂಜಲ್ ರೆಸಿಡೆನ್ಸಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಿ.ಕೆ. ಟ್ರಾನ್ಸ್‌ಪೋರ್ಟ್ & ಲಾಜಿಸ್ಟಿಕ್ ಸರ್ವೀಸಸ್ ತನ್ನ ಯಶಸ್ವಿ ಕಾರ್ಯಾಚರಣೆಯ ಪ್ರಥಮ ವಾರ್ಷಿಕೋತ್ಸವವನ್ನು ಸಂಭ್ರಮದಿಂದ ಆಚರಿಸುತ್ತಿದೆ. ಕೇವಲ ಒಂದು ವರ್ಷದ ಅವಧಿಯಲ್ಲಿ ವಿಶ್ವಾಸಾರ್ಹ ಸೇವೆ, ಸಮಯಪಾಲನೆ, ಸುರಕ್ಷಿತ ಸರಕು ಸಾಗಣೆ ಹಾಗೂ ವೃತ್ತಿಪರ ನಿರ್ವಹಣೆಯ ಮೂಲಕ ಗ್ರಾಹಕರ ಮೆಚ್ಚುಗೆ ಗಳಿಸಿರುವ ಸಂಸ್ಥೆ, ಕರಾವಳಿ ಭಾಗದ ಉದಯೋನ್ಮುಖ ಲಾಜಿಸ್ಟಿಕ್ಸ್ ಸಂಸ್ಥೆಗಳಲ್ಲಿ ಒಂದಾಗಿ ತನ್ನದೇ ಆದ ಸ್ಥಾನವನ್ನು ನಿರ್ಮಿಸಿಕೊಂಡಿದೆ. 2025ರ ಜುಲೈ 13ರಂದು ಆರಂಭಗೊಂಡ ಸಂಸ್ಥೆಯು ಆರಂಭದಿಂದಲೇ “ಗ್ರಾಹಕರ ವಿಶ್ವಾಸವೇ ನಮ್ಮ ಬಂಡವಾಳ” ಎಂಬ ಧ್ಯೇಯದೊಂದಿಗೆ ಕಾರ್ಯನಿರ್ವಹಿಸುತ್ತಿದ್ದು, ಗುಣಮಟ್ಟದ ಸೇವೆ, ಪಾರದರ್ಶಕತೆ ಹಾಗೂ ಸಮಯಪ್ರಜ್ಞೆಗೆ ಆದ್ಯತೆ ನೀಡುವ ಮೂಲಕ ಗ್ರಾಹಕರ ವಿಶ್ವಾಸವನ್ನು ಗಳಿಸುತ್ತಾ ನಿರಂತರ ಬೆಳವಣಿಗೆಯತ್ತ ಸಾಗುತ್ತಿದೆ. ಶ್ರೀಮತಿ ಲಿಝಿ ನೋರೊನ್ಹಾ ಅವರ ಮಾಲಕತ್ವದಲ್ಲಿ ಹಾಗೂ ಡಿ.ಕೆ.ಜಿ.ಒ.ಸಿ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಒಡೆತನದ ಪ್ರತಿಷ್ಠಿತ ಬ್ರಾಂಡ್ ಆಗಿ ಕಾರ್ಯನಿರ್ವಹಿಸುತ್ತಿರುವ ಈ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ…

Read More

ಬಂಟ್ವಾಳ, ಜುಲೈ 12: ಕರ್ನಾಟಕ ರಾಜ್ಯ ಕುಂಬಾರರ ಯುವ ವೇದಿಕೆ ಹಾಗೂ ಮಹಿಳಾ ಸಂಘಟನೆಗಳ ಒಕ್ಕೂಟ (ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಆಶ್ರಯದಲ್ಲಿ, ಬೆಂಕಿ ಅವಘಡದಿಂದ ಸಂತ್ರಸ್ತಗೊಂಡಿದ್ದ ಬಂಟ್ವಾಳ ತಾಲೂಕಿನ ಸಾಲೆತ್ತೂರು ಸಮೀಪದ ಬೊಳ್ಪಾದೆ-ಕನ್ಯಾನದ ಕುಲಾಲ ಕುಟುಂಬಕ್ಕೆ ನಿವೇಶನ ಸಹಿತ ನಿರ್ಮಿಸಲಾದ ‘ಕುಂಭ ಕುಟೀರ’ ಮನೆಯನ್ನು ಭಾನುವಾರ ಹಸ್ತಾಂತರಿಸಲಾಯಿತು. ಇದು ಬಂಟ್ವಾಳ ತಾಲೂಕಿನ ಎಂಟನೇ ಹಾಗೂ ಕರಾವಳಿ-ಮಲೆನಾಡು ಭಾಗದ ಹದಿನೈದನೇ ಮನೆ ನಿರ್ಮಾಣ ಯೋಜನೆಯಾಗಿದ್ದು, ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಯುವ ವೇದಿಕೆಯ ಮಾನವೀಯ ಸಮಾಜಸೇವೆಯ ಮಾದರಿಯಾಗಿ ಗುರುತಿಸಿಕೊಂಡಿದೆ. 2025ರ ಡಿಸೆಂಬರ್ 19ರಂದು ಕನ್ಯಾನದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಈ ಕುಟುಂಬದ ಮನೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿಗಾಹುತಿಯಾಗಿ ಸಂಪೂರ್ಣ ಸುಟ್ಟುಹೋಗಿತ್ತು. ಘಟನೆಯ ವೇಳೆ ಮನೆಯವರು ಹೊರಗಿದ್ದ ಕಾರಣ ಪ್ರಾಣಾಪಾಯ ತಪ್ಪಿದರೂ, ಮನೆಯಲ್ಲಿದ್ದ ಹಣ, ಚಿನ್ನಾಭರಣ, ಬಟ್ಟೆ ಹಾಗೂ ಇತರ ಅಗತ್ಯ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದವು. ನಂತರ ಕನ್ಯಾನ ಗ್ರಾಮ ಪಂಚಾಯಿತಿ ತಾತ್ಕಾಲಿಕ ಆಶ್ರಯವಾಗಿ ಕೊಠಡಿಯನ್ನು ನೀಡಿದ್ದು, ಅಂದಿನ ಗ್ರಾಮ…

Read More

ಸುಬ್ರಹ್ಮಣ್ಯ, ಜುಲೈ 13: ಮಾಜಿ ಸಚಿವರಾದ ಎಚ್.ಡಿ. ರೇವಣ್ಣ ಅವರು ದಿನಾಂಕ 13ರಂದು ಸೋಮವಾರ ಬೆಳಿಗ್ಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಜನತಾದಳ (ಜಾತ್ಯತೀತ) ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಜಾಕೆ ಮಾಧವ ಗೌಡ ಹಾಗೂ ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಘಟಕದ ಕಾರ್ಯಾಧ್ಯಕ್ಷೆ ಪ್ರಿಯಾ ಸಾಲಿಯಾನ್, ಸಾಮಾಜಿಕ ಮುಖಂಡ ಜಾಕೆ ಸಂತೋಷ್ ಅವರು ಜೊತೆಗಿದ್ದು, ದೇವರ ಆಶೀರ್ವಾದ ಪಡೆದರು. ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಅವರು ಕುಕ್ಕೆ ಸುಬ್ರಹ್ಮಣ್ಯ ಮಠದ 38ನೇ ಪೀಠಾಧಿಪತಿಗಳಾಗಿದ್ದಾರೆ. ಅವರ ಮಾರ್ಗದರ್ಶನ ಪಡೆದರು ರಾಜ್ಯದ ಸುಭಿಕ್ಷತೆ, ರೈತರ ಕಲ್ಯಾಣ ಹಾಗೂ ಜನರ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಲಾಯಿತು.

Read More

ಪುತ್ತೂರು, ಜುಲೈ 12: ಜನತಾದಳ (ಜಾತ್ಯತೀತ) ಪಕ್ಷದ ಪುತ್ತೂರು ವಿಧಾನಸಭಾ ಕ್ಷೇತ್ರ ಮಹಿಳಾ ಘಟಕದ ಸಭೆಯು ಭಾನುವಾರ ಸಂಜೆ 3.00 ರಿಂದ ನಡೆಯಿತು. ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಆಯೋಜಿಸಲಾದ ಈ ಸಭೆಯಲ್ಲಿ ಸಂಘಟನೆ ವಿಸ್ತರಣೆ, ಮಹಿಳೆಯರ ಸಕ್ರಿಯ ಭಾಗವಹಿಸುವಿಕೆ ಹಾಗೂ ಸದಸ್ಯತ್ವ ಅಭಿಯಾನದ ಕುರಿತು ಸಮಗ್ರ ಚರ್ಚೆ ನಡೆಯಿತು. ಸಭೆಯಲ್ಲಿ ಪಕ್ಷದ ಬಲವರ್ಧನೆಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಪ್ರಥಮ ಹಂತದ ಮಹಿಳಾ ಸಂಘಟನಾ ಸಭೆಯನ್ನು ಯಶಸ್ವಿಯಾಗಿ ನಡೆಸಲಾಯಿತು. ಇದೇ ಸಂದರ್ಭದಲ್ಲಿ ಹಲವು ಮಹಿಳೆಯರನ್ನು ಜೆಡಿಎಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಳಿಸಲಾಯಿತು. ಪುತ್ತೂರು ತಾಲೂಕು ಅಧ್ಯಕ್ಷ ಪ್ರಭಾಕರ್ ಸಾಲಿಯಾನ್ ಪಕ್ಷ ಸಂಘಟನೆ ಕುರಿತು ಮಾತನಾಡಿದರು ಸಭೆಯಲ್ಲಿ ಜೆಡಿಎಸ್ ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ರಮೀಜಾ ಭಾನು ಅವರು ಮಾತನಾಡಿ, ಮಹಿಳೆಯರು ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಾಗ ಮಾತ್ರ ಪಕ್ಷ ಮತ್ತಷ್ಟು ಸದೃಢವಾಗಲಿದೆ ಎಂದು ಹೇಳಿದರು. ಗ್ರಾಮ ಮಟ್ಟದಿಂದ ಮಹಿಳಾ ಸಂಘಟನೆಯನ್ನು ವಿಸ್ತರಿಸಿ ಪಕ್ಷವನ್ನು…

Read More

ಬ್ರಹ್ಮಾವರ, ಜುಲೈ 12: ತುಳುನಾಡ ರಕ್ಷಣಾ ವೇದಿಕೆ (ರಿ.) ಬ್ರಹ್ಮಾವರ ತಾಲೂಕು ಘಟಕದ ಪದಾಧಿಕಾರಿಗಳ ಸಭೆಯು ಭಾನುವಾರ ಮಧ್ಯಾಹ್ನ ನಡೆಯಿತು. ಉಡುಪಿ ಜಿಲ್ಲಾಧ್ಯಕ್ಷ ಫ್ರ್ಯಾಂಕಿ ಡಿಸೋಜಾ ಕೊಳಲಗಿರಿ ಅವರ ಸೂಚನೆಯಂತೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಹಾವಂಜೆ ಅವರ ನೇತೃತ್ವದಲ್ಲಿ ಸಭೆ ಜರುಗಿತು. ಸಭೆಯಲ್ಲಿ ಸಂಘಟನೆಯ ಸಂಘಟನಾ ಶಕ್ತಿ ಹಾಗೂ ಸದಸ್ಯತ್ವವನ್ನು ಮತ್ತಷ್ಟು ಬಲಪಡಿಸುವ ಕುರಿತು ಸವಿಸ್ತಾರವಾಗಿ ಚರ್ಚಿಸಲಾಯಿತು. ಸಂಘದ ಎಲ್ಲಾ ವಲಯದ ಪದಾಧಿಕಾರಿಗಳು ಹಾಗೂ ಸದಸ್ಯರು ಕಡ್ಡಾಯವಾಗಿ ಗುರುತಿನ ಚೀಟಿ (ಐಡಿ ಕಾರ್ಡ್) ಮತ್ತು ಸಂಘದ ಶಾಲು ಪಡೆದುಕೊಳ್ಳುವಂತೆ ಸೂಚಿಸಲಾಯಿತು. ಇದೇ ವೇಳೆ ಆಗಸ್ಟ್ 16ರಂದು ಬ್ರಹ್ಮಾವರ ತಾಲೂಕು ಘಟಕದ ವತಿಯಿಂದ ನಡೆಯಲಿರುವ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲು ಅಗತ್ಯ ಪೂರ್ವಸಿದ್ಧತೆಗಳ ಕುರಿತು ಚರ್ಚೆ ನಡೆಸಲಾಯಿತು. ಜೊತೆಗೆ ಆರೂರು ಗ್ರಾಮದಲ್ಲಿ ತಲೆದೋರಿರುವ ಕುಡಿಯುವ ನೀರಿನ ಸರಬರಾಜು ಸಮಸ್ಯೆಗೆ ಸಂಬಂಧಿಸಿದಂತೆ ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ಕೈಗೊಳ್ಳಬಹುದಾದ ಹೋರಾಟ ಹಾಗೂ ಮುಂದಿನ ಕ್ರಮಗಳ ಬಗ್ಗೆಯೂ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಯಿತು.…

Read More

ಉಡುಪಿ, ಜುಲೈ 12: ತುಳುನಾಡ ರಕ್ಷಣಾ ವೇದಿಕೆ (ರಿ.) ಭೈರಂಪಳ್ಳಿ ಘಟಕದ ಪದಾಧಿಕಾರಿಗಳ ಸಭೆಯು ಭಾನುವಾರ ಸಂಜೆ ಭೈರಂಪಳ್ಳಿ ಸಾಂತ್ಯಾರ್ ಅಂಬೇಡ್ಕರ್ ಸಭಾಭವನದಲ್ಲಿ ಉಡುಪಿ ಜಿಲ್ಲಾಧ್ಯಕ್ಷ ಫ್ರ್ಯಾಂಕಿ ಡಿಸೋಜಾ ಕೊಳಲಗಿರಿ ಅವರ ನೇತೃತ್ವದಲ್ಲಿ ಹಾಗೂ ಕಾಪು ತಾಲೂಕು ಅಧ್ಯಕ್ಷ ನಿತಿನ್ ಕುಮಾರ್ ಶೆಟ್ಟಿ ಅವರ ಉಪಸ್ಥಿತಿಯಲ್ಲಿ ನಡೆಯಿತು. ಸಭೆಯಲ್ಲಿ ಸಂಘಟನೆಯ ಬಲವರ್ಧನೆ, ಸದಸ್ಯತ್ವ ವಿಸ್ತರಣೆ, ಸಂಘಟನಾ ಚಟುವಟಿಕೆಗಳು ಹಾಗೂ ಮುಂದಿನ ಕಾರ್ಯಕ್ರಮಗಳ ಕುರಿತು ಸಮಗ್ರ ಚರ್ಚೆ ನಡೆಯಿತು. ಇದೇ ವೇಳೆ ಭೈರಂಪಳ್ಳಿ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ನಿಶಾಂತ್ ಪೂಜಾರಿ ಮುಟ್ಟಿಕಲ್ಲು, ಶಿರೂರು ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಜಿಲ್ಲಾಧ್ಯಕ್ಷ ಫ್ರ್ಯಾಂಕಿ ಡಿಸೋಜಾ ಅವರು ತುಳುನಾಡ ಸೂರ್ಯ-ಚಂದ್ರ ಚಿಹ್ನೆಯ ಧ್ವಜವನ್ನು ನೀಡಿ ಅಭಿನಂದಿಸಿ, ಅಧಿಕಾರವನ್ನು ಅಧಿಕೃತವಾಗಿ ಹಸ್ತಾಂತರಿಸಿದರು. ಬರುವ ಆಗಸ್ಟ್ 2ರಂದು ಭೈರಂಪಳ್ಳಿ ಘಟಕದ ವತಿಯಿಂದ ಬೃಹತ್ ಕಾರ್ಯಕರ್ತರ ಸೇರ್ಪಡೆ ಕಾರ್ಯಕ್ರಮ ಆಯೋಜಿಸಲು ತೀರ್ಮಾನಿಸಲಾಯಿತು. ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಕುರಿತು ಸಭೆಯಲ್ಲಿ ಸವಿಸ್ತಾರವಾಗಿ ಚರ್ಚಿಸಲಾಯಿತು. ಜೊತೆಗೆ ಭೈರಂಪಳ್ಳಿಯಲ್ಲಿ ಮಹಿಳಾ ಘಟಕವನ್ನು ಆರಂಭಿಸುವ ಕುರಿತು ಸಹ…

Read More

ಸುಳ್ಯ, ಜುಲೈ 12: ಜನತಾದಳ (ಜಾತ್ಯತೀತ) ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಪ್ರಮುಖ ಪದಾಧಿಕಾರಿಗಳ ಸಭೆಯು ಸುಳ್ಯದ ಬ್ರಹ್ಮಶ್ರೀ ಸಭಾಂಗಣದಲ್ಲಿ ಸುಳ್ಯ ತಾಲೂಕು ಅಧ್ಯಕ್ಷರಾದ ಸುಕುಮಾರ್ ಕೋಡ್ತುಗುಳಿ ಅವರ ಅಧ್ಯಕ್ಷತೆಯಲ್ಲಿ ದಿನಾಂಕ 12-07-2026 ರಂದು ಬೆಳಿಗ್ಗೆ 10.30 ರಿಂದ ಉತ್ಸಾಹಭರಿತವಾಗಿ ನಡೆಯಿತು. ಇತ್ತೀಚೆಗೆ ನಿಧನರಾದ ತೂಗುಸೇತುವೆ ಸರದಾರ ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು ಸಭೆಯನ್ನುದ್ದೇಶಿಸಿ ಮಾತನಾಡಿದ ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಜಾಕೆ ಮಾಧವ ಗೌಡ, 2028ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರುವ ಗುರಿಯೊಂದಿಗೆ ಪ್ರತಿಯೊಬ್ಬ ಕಾರ್ಯಕರ್ತರೂ ಈಗಿನಿಂದಲೇ ಸಂಘಟನಾ ಕಾರ್ಯದಲ್ಲಿ ಸಂಪೂರ್ಣ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.ಪ್ರತಿ ತಾಲೂಕಿನಲ್ಲಿ ಜಿಲ್ಲಾ ಪದಾಧಿಕಾರಿಗಳ ಸಭೆಯನ್ನು ನಡೆಸಬೇಕು ಎಂದು ಕಳೆದ ಜಿಲ್ಲಾ ಘಟಕದ ತೀರ್ಮಾನಿಸಲಾಗಿತ್ತು. ಗ್ರಾಮ ಮಟ್ಟದಿಂದ ಬೂತ್ ಮಟ್ಟದವರೆಗೆ ಪಕ್ಷವನ್ನು ಬಲಿಷ್ಠಗೊಳಿಸುವ ಮೂಲಕ ಜನರ ವಿಶ್ವಾಸ ಗಳಿಸಲು ಒಗ್ಗಟ್ಟಿನ ಪ್ರಯತ್ನ ಅಗತ್ಯ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ…

Read More

ಬೆಂಗಳೂರು, ಜುಲೈ 12: ಜನತಾದಳ (ಜಾತ್ಯತೀತ) ಪಕ್ಷದ ಬೆಂಗಳೂರು ನಗರ ಅಲ್ಪಸಂಖ್ಯಾತ ಘಟಕದ ಜಿಬಿಎ (GBA) ವಿಭಾಗದ ಉಪಾಧ್ಯಕ್ಷರಾಗಿ ಶ್ರೀ ಶೋಯಬ್ ಬಾಬಾ ಜಿ ಅವರನ್ನು ನೇಮಕ ಮಾಡಲಾಗಿದೆ. ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಹಾಗೂ ಅಲ್ಪಸಂಖ್ಯಾತ ಸಮುದಾಯದ ನಡುವೆ ಪಕ್ಷದ ತತ್ವ, ಸಿದ್ಧಾಂತ ಮತ್ತು ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ತಲುಪಿಸುವ ಉದ್ದೇಶದಿಂದ ಈ ನೇಮಕಾತಿ ಮಾಡಲಾಗಿದೆ. ಇದರೊಂದಿಗೆ ಪಕ್ಷ ಸಂಘಟನೆಯ ಹಿತದೃಷ್ಟಿಯಿಂದ ಇನ್ನೂ ಕೆಲವು ಹೆಚ್ಚುವರಿ ಜವಾಬ್ದಾರಿಗಳನ್ನು ಸಹ ವಿವಿಧ ಪದಾಧಿಕಾರಿಗಳಿಗೆ ವಹಿಸಲಾಗಿದೆ. ಈ ನೇಮಕಾತಿಯಿಂದ ಬೆಂಗಳೂರು ನಗರದಲ್ಲಿ ಜನತಾದಳ (ಜಾತ್ಯತೀತ) ಪಕ್ಷದ ಅಲ್ಪಸಂಖ್ಯಾತ ಘಟಕದ ಸಂಘಟನೆಗೆ ಹೊಸ ಚೈತನ್ಯ ದೊರೆಯಲಿದ್ದು, ಪಕ್ಷದ ಬೆಳವಣಿಗೆಗೆ ಶೋಯಬ್ ಬಾಬಾ ಜಿ ಅವರು ಸಮರ್ಥವಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಲಾಗಿದೆ. ಈ ಸಂದರ್ಭದಲ್ಲಿ ಬೆಂಗಳೂರು ನಗರ ಜಿಬಿಎ (GBA) ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಫ್ರೋಜ್ ಬೈಗ್ ಅವರು ಶ್ರೀ ಶೋಯಬ್ ಬಾಬಾ ಜಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿ, ನೂತನ ಜವಾಬ್ದಾರಿಯನ್ನು ಯಶಸ್ವಿಯಾಗಿ…

Read More

ಮಂಗಳೂರು, ಜುಲೈ 11: ಜನತಾದಳ (ಜಾತ್ಯತೀತ) ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಿಷ್ಠಗೊಳಿಸುವ ಉದ್ದೇಶದಿಂದ ಪ್ರಕಾಶ್ ಶೆಟ್ಟಿ ಅಸೈಗೋಳಿ ಅವರನ್ನು ಮಂಗಳೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ ಎಂದು ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಜಾಕೆ ಮಾಧವ ಗೌಡ ತಿಳಿಸಿದ್ದಾರೆ. ಉಳ್ಳಾಲ ಪತ್ರಿಕಾ ಭವನದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ನೇಮಕಾತಿಯನ್ನು ಅಧಿಕೃತವಾಗಿ ಘೋಷಿಸಿದ ಅವರು, ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷಕ್ಕೆ ಹೊಸ ಚೈತನ್ಯ ತುಂಬುವ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು. ಪ್ರಕಾಶ್ ಶೆಟ್ಟಿ ಅಸೈಗೋಳಿ ಅವರು ವಿದ್ಯಾರ್ಥಿ ಜೀವನದಿಂದಲೇ ನಾಯಕತ್ವದ ಗುಣಗಳನ್ನು ಬೆಳೆಸಿಕೊಂಡಿದ್ದು, ಸರ್ಕಾರಿ ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಹಾಗೂ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಬಳಿಕ ಜನತಾದಳ (ಜಾತ್ಯತೀತ) ಪಕ್ಷದ ವತಿಯಿಂದ ಮಂಗಳೂರು ತಾಲೂಕು ಪಂಚಾಯತ್ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿ ಜನಪರ ಆಡಳಿತ ಮತ್ತು ಸಂಘಟನಾ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಪಕ್ಷದ ಮೇಲಿನ ನಿಷ್ಠೆ, ಸಂಘಟನಾ…

Read More