- ಸಂತೆಕಟ್ಟೆಯಲ್ಲಿ 50 ವರ್ಷ ಹಳೆಯ ಬೃಹತ್ ಮರ ಕಡಿತ ಪರಿಸರದ ಮೇಲಿನ ಕ್ರೌರ್ಯ; ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಿ: ತುಳುನಾಡ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಪ್ರಾಂಕಿ ಡಿಸೋಜ ಕೊಳಲಗಿರಿ
- ಉಡುಪಿ ಜಿಲ್ಲೆಯಲ್ಲಿ ಮಳೆ ಹಾನಿ ಪ್ರದೇಶಗಳಿಗೆ ಜೆಡಿಎಸ್ ಬರ ಹಾಗೂ ಪ್ರಕೃತಿ ವಿಕೋಪ ಅಧ್ಯಯನ ತಂಡ ಭೇಟಿ- ಕೂಡಲೇ ಸ್ಪಂದಿಸಿ ಅಧಿಕಾರಿಗಳಿಗೆ ಎಸ್. ಎಲ್. ಭೋಜೆಗೌಡ ಆಗ್ರಹ
- ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಕಾರ್ಯವೈಖರಿಗೆ ಮೆಚ್ಚುಗೆ; ನಮ್ಮ ಕರ್ನಾಟಕ ಸೇನೆಯಿಂದ ಅಭಿನಂದನೆ
- ಬಿ.ಸಿ.ರೋಡ್ ಹತ್ಯೆ ಪ್ರಕರಣ: ಮರಣೋತ್ತರ ಪರೀಕ್ಷೆ ಪೂರ್ಣ – ಲಾವಣ್ಯ ಪಾರ್ಥಿವ ಶರೀರ ಸ್ವಗ್ರಾಮಕ್ಕೆ ರವಾನೆ
- ಮಂಗಳೂರು :ನಾಗೋರಿ ಭೂಕುಸಿತ ಹಾಗೂ ಸೋಮೇಶ್ವರ ಕಡಲುಕೊರೆತ ಪ್ರದೇಶಗಳಿಗೆ ಭೇಟಿ ನೀಡಿದ ವಿಧಾನ ಪರಿಷತ್ ಶಾಸಕ ಎಸ್.ಎಲ್. ಭೋಜೆಗೌಡ, ಸಂತ್ರಸ್ತರಿಗೆ ಶಾಶ್ವತ ಪರಿಹಾರ ಕಲ್ಪಿಸಲು ಸರ್ಕಾರಕ್ಕೆ ಶಿಫಾರಸು – ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ
- ಬಿ.ಸಿ.ರೋಡ್ನಲ್ಲಿ ಯುವತಿಯ ಭೀಕರ ಹತ್ಯೆ,ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಮಾರಕಾಸ್ತ್ರದಿಂದ ದಾಳಿ; ಆರೋಪಿ ಪರಾರಿ – ವ್ಯಾಪಕ ತನಿಖೆ ಆರಂಭ
- ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಜೆಡಿಎಸ್ ನೂತನ ಪದಾಧಿಕಾರಿಗಳಿಗೆ ನೇಮಕ ಪತ್ರ ವಿತರಣೆ,ಪಕ್ಷ ಸಂಘಟನೆಗೆ ಮತ್ತಷ್ಟು ವೇಗ ನೀಡಲಾಗುವುದು: ಎನ್.ಪಿ. ಪುಷ್ಪರಾಜನ್
- ಡಿ.ಕೆ. ಟ್ರಾನ್ಸ್ಪೋರ್ಟ್ & ಲಾಜಿಸ್ಟಿಕ್ ಸರ್ವೀಸಸ್ಗೆ ಯಶಸ್ವಿ ಒಂದು ವರ್ಷದ ಸಂಭ್ರಮ,ವಿಶ್ವಾಸ, ಸಮಯಪಾಲನೆ ಮತ್ತು ಗುಣಮಟ್ಟದ ಸೇವೆಯಿಂದ ಸಾರಿಗೆ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು
Author: Tulunada Surya
ಉಡುಪಿ, ಜುಲೈ 18: ಉಡುಪಿ ಜಿಲ್ಲೆಯ ಸಂತೆಕಟ್ಟೆ ಪ್ರದೇಶದಲ್ಲಿ ಸುಮಾರು ಐವತ್ತು ವರ್ಷಗಳಿಂದ ಸಾರ್ವಜನಿಕರಿಗೆ ವಿಶಾಲವಾದ ನೆರಳು, ಶುದ್ಧ ಗಾಳಿ ಹಾಗೂ ಪರಿಸರ ಸಮತೋಲನವನ್ನು ಒದಗಿಸುತ್ತಿದ್ದ ಬೃಹತ್ ಮರವನ್ನು ಏಕಾಏಕಿ ಕಡಿದು ಹಾಕಿರುವ ಘಟನೆಗೆ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕ ತೀವ್ರ ಆಕ್ರೋಶ ಹಾಗೂ ಖಂಡನೆ ವ್ಯಕ್ತಪಡಿಸಿದೆ. ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾಧ್ಯಕ್ಷ ಪ್ರಾಂಕಿ ಡಿಸೋಜ ಕೊಳಲಗಿರಿ ಮಾತನಾಡಿ, ದಶಕಗಳಿಂದ ಸಾವಿರಾರು ಸಾರ್ವಜನಿಕರಿಗೆ ಆಶ್ರಯ ನೀಡುತ್ತಿದ್ದ, ಪರಿಸರದ ಅಮೂಲ್ಯ ಸಂಪತ್ತಾಗಿದ್ದ ಮರವನ್ನು ಯಾವುದೇ ಸ್ಪಷ್ಟ ಕಾರಣವಿಲ್ಲದೆ ಹಾಗೂ ಸಾರ್ವಜನಿಕರ ಭಾವನೆಗಳನ್ನು ಲೆಕ್ಕಿಸದೆ ಕಡಿದು ಹಾಕಿರುವುದು ಅತ್ಯಂತ ದುಃಖಕರ ಮತ್ತು ಖಂಡನೀಯ ಕೃತ್ಯವಾಗಿದೆ. ಇದು ಕೇವಲ ಒಂದು ಮರದ ನಾಶವಲ್ಲ, ಪ್ರಕೃತಿಯ ಮೇಲಿನ ಕ್ರೌರ್ಯ ಹಾಗೂ ಪರಿಸರ ಸಂರಕ್ಷಣೆಯ ಮೌಲ್ಯಗಳಿಗೆ ಮಾಡಿದ ಅಪಮಾನವಾಗಿದೆ ಎಂದು ಹೇಳಿದರು. ಇತ್ತೀಚಿನ ದಿನಗಳಲ್ಲಿ ಹವಾಮಾನ ವೈಪರೀತ್ಯ, ಅತಿಯಾದ ಉಷ್ಣಾಂಶ ಹಾಗೂ ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಸಂದರ್ಭದಲ್ಲಿ, ಹಳೆಯ ಮರಗಳನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ.…
ಉಡುಪಿ, ಜುಲೈ 18: ಮುಂಗಾರು ಮಳೆಯ ತೀವ್ರ ಕೊರತೆಯಿಂದ ಉಡುಪಿ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಬರದ ಛಾಯೆ ಆವರಿಸಿದ್ದು, ಕೃಷಿ ಚಟುವಟಿಕೆಗಳು ಸಂಪೂರ್ಣವಾಗಿ ಹಿನ್ನಡೆ ಅನುಭವಿಸುತ್ತಿವೆ. ರೈತರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯರು ಹಾಗೂ ಜೆಡಿಎಸ್ ನೆರೆ-ಬರ ಅಧ್ಯಯನ ತಂಡದ ಅಧ್ಯಕ್ಷರಾದ ಎಸ್.ಎಲ್. ಭೋಜೇಗೌಡ ಅವರು, ಜಾತ್ಯತೀತ ಜನತಾದಳ ಉಡುಪಿ ಜಿಲ್ಲಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಅವರ ನೇತೃತ್ವದಲ್ಲಿಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ರೈತರ ಸಮಸ್ಯೆಗಳನ್ನು ಆಲಿಸಿದರು. ಬಳಿಕ ಮಾತನಾಡಿದ ಎಸ್.ಎಲ್. ಭೋಜೇಗೌಡ ಅವರು, ಈ ವರ್ಷ ನಿರೀಕ್ಷಿತ ಪ್ರಮಾಣದಲ್ಲಿ ಮುಂಗಾರು ಮಳೆಯಾಗದ ಕಾರಣ ರೈತರು ಬಿತ್ತನೆ ಮಾಡಿದ ಭತ್ತ ಸೇರಿದಂತೆ ಹಲವು ಬೆಳೆಗಳು ಒಣಗಿ ನಾಶವಾಗುತ್ತಿವೆ. ಅನೇಕ ಪ್ರದೇಶಗಳಲ್ಲಿ ಬಿತ್ತನೆಯೇ ಸಾಧ್ಯವಾಗದೆ ರೈತರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಕುಡಿಯುವ ನೀರು ಹಾಗೂ ಕೃಷಿಗೆ ಅಗತ್ಯವಾದ ನೀರಿನ ಕೊರತೆಯೂ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಗ್ರಾಮೀಣ ಜನತೆ ಸಂಕಷ್ಟದ ಜೀವನ ನಡೆಸುವಂತಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು. ರೈತರು ಎದುರಿಸುತ್ತಿರುವ…
ಉಡುಪಿ, ಜುಲೈ 17: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ (UUDA) ಆಯುಕ್ತ ಮಂಜುನಾಥ್ ಅವರು ದಕ್ಷತೆ, ಪಾರದರ್ಶಕತೆ ಹಾಗೂ ಜನಪರ ಆಡಳಿತದ ಮೂಲಕ ಉತ್ತಮ ಕಾರ್ಯನಿರ್ವಹಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ನಮ್ಮ ಕರ್ನಾಟಕ ಸೇನೆ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು. ಶುಕ್ರವಾರ ನಮ್ಮ ಕರ್ನಾಟಕ ಸೇನೆ ಉಡುಪಿ ಜಿಲ್ಲಾಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸುಜಯ ಪೂಜಾರಿ ಅವರ ನೇತೃತ್ವದಲ್ಲಿ ನಿಯೋಗವು ಆಯುಕ್ತರ ಕಚೇರಿಗೆ ಭೇಟಿ ನೀಡಿ ಗೌರವಿಸಿ ಶುಭ ಹಾರೈಸಿತು. ಈ ವೇಳೆ ಮಾತನಾಡಿದ ಸುಜಯ ಪೂಜಾರಿ, ಕಳೆದ ಮೂರು ತಿಂಗಳ ಅವಧಿಯಲ್ಲಿ ಸುಮಾರು 600ಕ್ಕೂ ಹೆಚ್ಚು ಕಡತಗಳನ್ನು ವಿಲೇವಾರಿ ಮಾಡುವ ಮೂಲಕ ಸಾರ್ವಜನಿಕರ ಕೆಲಸಗಳಿಗೆ ವೇಗ ನೀಡಿರುವುದು ಶ್ಲಾಘನೀಯ ಸಾಧನೆ ಎಂದು ಹೇಳಿದರು. ಜನಸ್ನೇಹಿ ಆಡಳಿತ ನೀಡುತ್ತಿರುವ ಅಧಿಕಾರಿಗಳ ವಿರುದ್ಧ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಸುಳ್ಳು ಆರೋಪಗಳನ್ನು ಮಾಡಿ ಅವರ ಆತ್ಮಸ್ಥೈರ್ಯ ಕುಗ್ಗಿಸಲು ಯತ್ನಿಸುತ್ತಿರುವುದು ಖಂಡನೀಯ ಎಂದರು. ಯಾವುದೇ ವದಂತಿಗಳಿಗೆ ಕಿವಿಗೊಡದೆ, ಸಾರ್ವಜನಿಕರು ತಮ್ಮ ಕೆಲಸಗಳಿಗೆ ನೇರವಾಗಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರನ್ನು…
ವಿಶೇಷ ವರದಿ | ತುಳುನಾಡ ಸೂರ್ಯ ಮಂಗಳೂರು, ಜುಲೈ 17: ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ನಡೆದ ಭೀಕರ ಚೂರಿ ದಾಳಿಯಲ್ಲಿ ಮೃತಪಟ್ಟ ಯುವತಿ ಲಾವಣ್ಯ ಅವರ ಮರಣೋತ್ತರ ಪರೀಕ್ಷೆ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ಪೂರ್ಣಗೊಂಡಿದೆ. ಮರಣೋತ್ತರ ಪರೀಕ್ಷೆಯ ಬಳಿಕ ಲಾವಣ್ಯ ಅವರ ಪಾರ್ಥಿವ ಶರೀರವನ್ನು ಬಂಟ್ವಾಳ ತಾಲೂಕಿನ ಕಕ್ಯಪದವು ಗ್ರಾಮದ ಕೊಡಂಗೆಯಲ್ಲಿರುವ ನಿವಾಸಕ್ಕೆ ರವಾನೆ ಮಾಡಲಾಗಿದೆ. ಮೃತದೇಹದ ಅಂತಿಮ ದರ್ಶನಕ್ಕೆ ಕುಟುಂಬಸ್ಥರು, ಬಂಧು-ಬಳಗ, ಸ್ನೇಹಿತರು ಹಾಗೂ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದ್ದು, ನೂರಾರು ಮಂದಿ ಆಗಮಿಸಿ ಕಂಬನಿ ಮಿಡಿಯುತ್ತಿದ್ದಾರೆ. ಗ್ರಾಮದಲ್ಲಿ ಶೋಕದ ವಾತಾವರಣ ಆವರಿಸಿದೆ. ಶುಕ್ರವಾರ ಸಂಜೆ ಬಿ.ಸಿ.ರೋಡ್ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಎದುರಲ್ಲೇ ನಡೆದ ಮಾರಕ ಚೂರಿ ದಾಳಿಯಲ್ಲಿ ಲಾವಣ್ಯ ಅವರು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದರು. ಈ ಘಟನೆ ದಕ್ಷಿಣ ಕನ್ನಡ ಜಿಲ್ಲೆಯನ್ನೇ ಬೆಚ್ಚಿಬೀಳಿಸಿದ್ದು, ಮಹಿಳೆಯರ ಸುರಕ್ಷೆ ಕುರಿತ ಚರ್ಚೆಗೆ ಮತ್ತೆ ವೇದಿಕೆ ಒದಗಿಸಿದೆ. ಪ್ರಕರಣ ಸಂಬಂಧ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಹತ್ಯೆಗೆ ಕಾರಣವಾದ…
ಮಂಗಳೂರು, ಜುಲೈ 16: ರಾಜ್ಯದಲ್ಲಿ ಮುಂಗಾರು ಮಳೆಯಿಂದ ಉಂಟಾಗಿರುವ ಹಾನಿ ಹಾಗೂ ಪ್ರಕೃತಿ ವಿಕೋಪ ಪೀಡಿತ ಪ್ರದೇಶಗಳ ಅಧ್ಯಯನಕ್ಕಾಗಿ ರಚಿಸಲಾದ ಜನತಾದಳ (ಜಾತ್ಯತೀತ) ಅಧ್ಯಯನ ತಂಡದ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಶಾಸಕರು ಎಸ್.ಎಲ್. ಭೋಜೆಗೌಡ ಅವರು ಇಂದು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ವಿಕೋಪ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಬೆಳಿಗ್ಗೆ ಜಿಲ್ಲೆಯ ಜೆಡಿಎಸ್ ಜಿಲ್ಲಾಧ್ಯಕ್ಷರಾದ ಜಾಕೆ ಮಾಧವ ಗೌಡ,ಯುವ ಘಟಕ ಜಿಲ್ಲಾದ್ಯಕ್ಷ ಅದ್ಯಕ್ಷರಾದ ಅಕ್ಷಿತ್ ಸುವರ್ಣ, ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಯೋಗಿಶ್ ಶೆಟ್ಟಿ ಜಪ್ಪು , ಸೇರಿದಂತೆ ಪಕ್ಷದ ಜಿಲ್ಲಾ ಪ್ರಮುಖ ಪದಾಧಿಕಾರಿಗಳೊಂದಿಗೆ ನಿಯೋಗವು ಇತ್ತೀಚೆಗೆ ಭೂಕುಸಿತ ಸಂಭವಿಸಿ ಅಮೂಲ್ಯ ಜೀವಹಾನಿ ಉಂಟಾಗಿದ್ದ ನಾಗೋರಿ ಪ್ರದೇಶಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿತು. ಭೂಕುಸಿತದಿಂದ ಸಂಕಷ್ಟಕ್ಕೊಳಗಾದ ಕುಟುಂಬಗಳನ್ನು ಭೇಟಿ ಮಾಡಿ ಅವರ ನೋವು-ನಲಿವುಗಳನ್ನು ಆಲಿಸಿದ ಎಸ್.ಎಲ್. ಭೋಜೆಗೌಡ ಅವರು ಮೃತರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಸ್ಥಳೀಯ ಕಾರ್ಪೋರೇಟರ್ ಸಂದೀಪ್ ಗರೋಡಿ ಮತ್ತು…
ಬಂಟ್ವಾಳ, ಜುಲೈ 16: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ನಲ್ಲಿ ಗುರುವಾರ ಸಂಜೆ ನಡೆದ ಭೀಕರ ಘಟನೆಯೊಂದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬಿ.ಸಿ.ರೋಡ್ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಸಮೀಪ ಯುವತಿಯೊಬ್ಬಳ ಮೇಲೆ ದುಷ್ಕರ್ಮಿಯು ಮಾರಕಾಸ್ತ್ರದಿಂದ ದಾಳಿ ನಡೆಸಿ ಹತ್ಯೆಗೈದಿದ್ದಾನೆ. ಮೃತಳನ್ನು ಕಕ್ಕೆಪದವು ನಿವಾಸಿ ಲಾವಣ್ಯ (21) ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಸಂಜೆ ವೇಳೆಯಲ್ಲಿ ಬಸ್ ನಿಲ್ದಾಣದ ಸಮೀಪದಲ್ಲಿದ್ದ ವೇಳೆ ಆರೋಪಿಯು ಏಕಾಏಕಿ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡ ಲಾವಣ್ಯ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ನಡೆದ ತಕ್ಷಣ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಸುದ್ದಿ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಮೃತದೇಹವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಸ್ಥಳದಲ್ಲಿ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸುವ ಕಾರ್ಯವನ್ನು ಪೊಲೀಸರು ಕೈಗೊಂಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯ ಪತ್ತೆಗೆ ವಿಶೇಷ ಕಾರ್ಯಚರಣೆ ಆರಂಭಿಸಿದ್ದು, ಸಿಸಿಟಿವಿ ದೃಶ್ಯಗಳು ಸೇರಿದಂತೆ ವಿವಿಧ ಸಾಕ್ಷ್ಯಗಳನ್ನು ಪರಿಶೀಲಿಸುತ್ತಿದ್ದಾರೆ. ಹತ್ಯೆಗೆ ನಿಖರ ಕಾರಣ ಏನು…
ಮಂಗಳೂರು, ಜುಲೈ 14: ಜನತಾದಳ (ಜಾತ್ಯತೀತ) ಪಕ್ಷದ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ನೂತನ ಪದಾಧಿಕಾರಿಗಳಿಗೆ ಮಂಗಳವಾರ ನೇಮಕ ಪತ್ರ ವಿತರಣೆ ಕಾರ್ಯಕ್ರಮ ನಡೆಯಿತು. ಜಿಲ್ಲಾ ಅಧ್ಯಕ್ಷರಾದ ಜಾಕೆ ಮಾಧವ ಗೌಡ ಅವರ ಮಾರ್ಗದರ್ಶನದಂತೆ, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಎನ್.ಪಿ. ಪುಷ್ಪರಾಜನ್ ಅವರು ನೂತನ ಪದಾಧಿಕಾರಿಗಳಿಗೆ ಅಧಿಕೃತ ನೇಮಕ ಪತ್ರಗಳನ್ನು ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಎನ್.ಪಿ. ಪುಷ್ಪರಾಜನ್ ಅವರು, ಪಕ್ಷದ ತತ್ವ-ಸಿದ್ಧಾಂತಗಳನ್ನು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬ ಪದಾಧಿಕಾರಿಯೂ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ಪಕ್ಷ ಸಂಘಟನೆಗೆ ಹೊಸ ಚೈತನ್ಯ ತುಂಬುವ ಉದ್ದೇಶದಿಂದ ವಿವಿಧ ಹಂತಗಳಲ್ಲಿ ಸಮರ್ಥ ಕಾರ್ಯಕರ್ತರಿಗೆ ಜವಾಬ್ದಾರಿಗಳನ್ನು ನೀಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ರಮುಖರನ್ನು ವಿವಿಧ ಘಟಕಗಳಿಗೆ ನೇಮಕ ಮಾಡಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅನ್ನು ಇನ್ನಷ್ಟು ಬಲಿಷ್ಠಗೊಳಿಸಲಾಗುವುದು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಕ್ಷೇತ್ರದ ಕಾರ್ಯಾಧ್ಯಕ್ಷರಾದ ವಸಂತ ಪೂಜಾರಿ ಅವರು, ಹೊಸದಾಗಿ ನೇಮಕಗೊಂಡ ಪದಾಧಿಕಾರಿಗಳು ಪಕ್ಷದ ಸಂಘಟನೆ, ಸದಸ್ಯತ್ವ ವೃದ್ಧಿ ಹಾಗೂ…
ವಿಶೇಷ ವರದಿ | ತುಳುನಾಡ ಸೂರ್ಯ ಮಂಗಳೂರು, ಜುಲೈ 14: ಮಂಗಳೂರಿನ ನಾಗೂರಿಯ ಏಂಜಲ್ ರೆಸಿಡೆನ್ಸಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಿ.ಕೆ. ಟ್ರಾನ್ಸ್ಪೋರ್ಟ್ & ಲಾಜಿಸ್ಟಿಕ್ ಸರ್ವೀಸಸ್ ತನ್ನ ಯಶಸ್ವಿ ಕಾರ್ಯಾಚರಣೆಯ ಪ್ರಥಮ ವಾರ್ಷಿಕೋತ್ಸವವನ್ನು ಸಂಭ್ರಮದಿಂದ ಆಚರಿಸುತ್ತಿದೆ. ಕೇವಲ ಒಂದು ವರ್ಷದ ಅವಧಿಯಲ್ಲಿ ವಿಶ್ವಾಸಾರ್ಹ ಸೇವೆ, ಸಮಯಪಾಲನೆ, ಸುರಕ್ಷಿತ ಸರಕು ಸಾಗಣೆ ಹಾಗೂ ವೃತ್ತಿಪರ ನಿರ್ವಹಣೆಯ ಮೂಲಕ ಗ್ರಾಹಕರ ಮೆಚ್ಚುಗೆ ಗಳಿಸಿರುವ ಸಂಸ್ಥೆ, ಕರಾವಳಿ ಭಾಗದ ಉದಯೋನ್ಮುಖ ಲಾಜಿಸ್ಟಿಕ್ಸ್ ಸಂಸ್ಥೆಗಳಲ್ಲಿ ಒಂದಾಗಿ ತನ್ನದೇ ಆದ ಸ್ಥಾನವನ್ನು ನಿರ್ಮಿಸಿಕೊಂಡಿದೆ. 2025ರ ಜುಲೈ 13ರಂದು ಆರಂಭಗೊಂಡ ಸಂಸ್ಥೆಯು ಆರಂಭದಿಂದಲೇ “ಗ್ರಾಹಕರ ವಿಶ್ವಾಸವೇ ನಮ್ಮ ಬಂಡವಾಳ” ಎಂಬ ಧ್ಯೇಯದೊಂದಿಗೆ ಕಾರ್ಯನಿರ್ವಹಿಸುತ್ತಿದ್ದು, ಗುಣಮಟ್ಟದ ಸೇವೆ, ಪಾರದರ್ಶಕತೆ ಹಾಗೂ ಸಮಯಪ್ರಜ್ಞೆಗೆ ಆದ್ಯತೆ ನೀಡುವ ಮೂಲಕ ಗ್ರಾಹಕರ ವಿಶ್ವಾಸವನ್ನು ಗಳಿಸುತ್ತಾ ನಿರಂತರ ಬೆಳವಣಿಗೆಯತ್ತ ಸಾಗುತ್ತಿದೆ. ಶ್ರೀಮತಿ ಲಿಝಿ ನೋರೊನ್ಹಾ ಅವರ ಮಾಲಕತ್ವದಲ್ಲಿ ಹಾಗೂ ಡಿ.ಕೆ.ಜಿ.ಒ.ಸಿ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಒಡೆತನದ ಪ್ರತಿಷ್ಠಿತ ಬ್ರಾಂಡ್ ಆಗಿ ಕಾರ್ಯನಿರ್ವಹಿಸುತ್ತಿರುವ ಈ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ…
ಬಂಟ್ವಾಳ, ಜುಲೈ 12: ಕರ್ನಾಟಕ ರಾಜ್ಯ ಕುಂಬಾರರ ಯುವ ವೇದಿಕೆ ಹಾಗೂ ಮಹಿಳಾ ಸಂಘಟನೆಗಳ ಒಕ್ಕೂಟ (ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಆಶ್ರಯದಲ್ಲಿ, ಬೆಂಕಿ ಅವಘಡದಿಂದ ಸಂತ್ರಸ್ತಗೊಂಡಿದ್ದ ಬಂಟ್ವಾಳ ತಾಲೂಕಿನ ಸಾಲೆತ್ತೂರು ಸಮೀಪದ ಬೊಳ್ಪಾದೆ-ಕನ್ಯಾನದ ಕುಲಾಲ ಕುಟುಂಬಕ್ಕೆ ನಿವೇಶನ ಸಹಿತ ನಿರ್ಮಿಸಲಾದ ‘ಕುಂಭ ಕುಟೀರ’ ಮನೆಯನ್ನು ಭಾನುವಾರ ಹಸ್ತಾಂತರಿಸಲಾಯಿತು. ಇದು ಬಂಟ್ವಾಳ ತಾಲೂಕಿನ ಎಂಟನೇ ಹಾಗೂ ಕರಾವಳಿ-ಮಲೆನಾಡು ಭಾಗದ ಹದಿನೈದನೇ ಮನೆ ನಿರ್ಮಾಣ ಯೋಜನೆಯಾಗಿದ್ದು, ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಯುವ ವೇದಿಕೆಯ ಮಾನವೀಯ ಸಮಾಜಸೇವೆಯ ಮಾದರಿಯಾಗಿ ಗುರುತಿಸಿಕೊಂಡಿದೆ. 2025ರ ಡಿಸೆಂಬರ್ 19ರಂದು ಕನ್ಯಾನದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಈ ಕುಟುಂಬದ ಮನೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿಗಾಹುತಿಯಾಗಿ ಸಂಪೂರ್ಣ ಸುಟ್ಟುಹೋಗಿತ್ತು. ಘಟನೆಯ ವೇಳೆ ಮನೆಯವರು ಹೊರಗಿದ್ದ ಕಾರಣ ಪ್ರಾಣಾಪಾಯ ತಪ್ಪಿದರೂ, ಮನೆಯಲ್ಲಿದ್ದ ಹಣ, ಚಿನ್ನಾಭರಣ, ಬಟ್ಟೆ ಹಾಗೂ ಇತರ ಅಗತ್ಯ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದವು. ನಂತರ ಕನ್ಯಾನ ಗ್ರಾಮ ಪಂಚಾಯಿತಿ ತಾತ್ಕಾಲಿಕ ಆಶ್ರಯವಾಗಿ ಕೊಠಡಿಯನ್ನು ನೀಡಿದ್ದು, ಅಂದಿನ ಗ್ರಾಮ…
ಸುಬ್ರಹ್ಮಣ್ಯ, ಜುಲೈ 13: ಮಾಜಿ ಸಚಿವರಾದ ಎಚ್.ಡಿ. ರೇವಣ್ಣ ಅವರು ದಿನಾಂಕ 13ರಂದು ಸೋಮವಾರ ಬೆಳಿಗ್ಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಜನತಾದಳ (ಜಾತ್ಯತೀತ) ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಜಾಕೆ ಮಾಧವ ಗೌಡ ಹಾಗೂ ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಘಟಕದ ಕಾರ್ಯಾಧ್ಯಕ್ಷೆ ಪ್ರಿಯಾ ಸಾಲಿಯಾನ್, ಸಾಮಾಜಿಕ ಮುಖಂಡ ಜಾಕೆ ಸಂತೋಷ್ ಅವರು ಜೊತೆಗಿದ್ದು, ದೇವರ ಆಶೀರ್ವಾದ ಪಡೆದರು. ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಅವರು ಕುಕ್ಕೆ ಸುಬ್ರಹ್ಮಣ್ಯ ಮಠದ 38ನೇ ಪೀಠಾಧಿಪತಿಗಳಾಗಿದ್ದಾರೆ. ಅವರ ಮಾರ್ಗದರ್ಶನ ಪಡೆದರು ರಾಜ್ಯದ ಸುಭಿಕ್ಷತೆ, ರೈತರ ಕಲ್ಯಾಣ ಹಾಗೂ ಜನರ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಲಾಯಿತು.
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
