- ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣ ಕೂಗಿಗೆ ಧ್ವನಿಗೂಡಿಸಿದ ಶಾಸಕ ಕಾಮತ್:-
- ಮಂಗಳೂರು : ದ.ಕ ಜಿಲ್ಲಾಡಳಿತ, ಪೊಲೀಸ್ ಇಲಾಖೆ ತೆಗೆದುಕೊಂಡಿರುವ ತೀರ್ಮಾನಗಳಿಂದ ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಪೂರೈಕೆಯಲ್ಲಿ ತೀವ್ರ ತೊಂದರೆ : ಶಾಸಕ ವೇದವ್ಯಾಸ ಕಾಮತ್.!
- ತುಮಕೂರು ; ಅಪ್ರಾಪ್ತ ಬಾಲಕನಿಗೆ ಚಲಾಯಿಸಲು ಬೈಕ್ ಕೊಟ್ಟ ತಂದೆಗೆ ಜೈಲು ಶಿಕ್ಷೆ,ತುಮಕೂರು ಜಿಲ್ಲೆಯ ಗುಬ್ಬಿ ಪ್ರಧಾನ ನ್ಯಾಯಾಲಯ ಮಹತ್ವದ ತೀರ್ಪು
- ಮಂಗಳೂರು : ಸಹಕಾರಿ ಬ್ಯಾಂಕ್ನಲ್ಲಿ ಗೋಲ್ಡ್’ ಗೋಲ್ಮಾಲ್| ಗ್ರಾಹಕರು ಅಡವಿಟ್ಟ ಚಿನ್ನಕ್ಕೆ ಕನ್ನ ಹಾಕಿದ ಬ್ಯಾಂಕ್ ಕ್ಯಾಷಿಯರ್
- ತುಳುರಂಗಭೂಮಿಯ ಹೆಸರಾಂತ ನಾಟಕ ಸಂಸ್ಥೆ ಚಾಪರ್ಕ ತಂಡದ 60ನೇ ನಾಟಕ “ಎನ್ನನೇ ಕಥೆ” ಮುಹೂರ್ತ
- ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಹ್ವಾನ..!
- ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ , ವೈದ್ಯ ಸಂಘ ಅಧ್ಯಕ್ಷರುಗಳಿಗೆ ಗೌರವ ಸನ್ಮಾನ
- ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ ಆಯ್ಕೆ
Author: Tulunada Surya
ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಎಂದು ಮರುನಾಮಕರಣ ಮಾಡುವ ಬಗ್ಗೆ ಹೋರಾಟಗಳು ತೀವ್ರಗೊಂಡಿದ್ದು, ಸರ್ವ ಧರ್ಮ-ಪಕ್ಷ-ಸಂಘಟನೆಗಳು ಒಗ್ಗೂಡಿರುವ “ಮಂಗಳೂರು ಜಿಲ್ಲೆ ತುಳುಪರ ಹೋರಾಟ ಸಮಿತಿ” ಸಂಚಾಲಕನಾಗಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತೇನೆಂದು ಶಾಸಕ ವೇದವ್ಯಾಸ ಕಾಮತ್ ರವರು ಹೇಳಿದರು. ಪೋರ್ಚುಗೀಸರು ಬ್ರಿಟಿಷರ ಕಾಲದಲ್ಲಿ ತುಳುನಾಡು ಹೋಗಿ ಸೌತ್ ಕೆನರಾ ಆಯ್ತು, ಸ್ವತಂತ್ರ ಭಾರತದಲ್ಲಿ ರಾಜ್ಯ ವಿಂಗಡಣೆ ಸಂದರ್ಭದಲ್ಲಿ ಸೌತ್ ಕೆನರಾ ದಕ್ಷಿಣ ಕನ್ನಡವಾಗಿ ಬದಲಾಯಿತು, ಹಾಗಾಗಿ ಈ ನೆಲಕ್ಕೂ ದಕ್ಷಿಣ ಕನ್ನಡ ಹೆಸರಿಗೂ ಯಾವುದೇ ಸಂಬಂಧವಿಲ್ಲ ಎಂದು ಇತಿಹಾಸದ ಪುಟಗಳು ಹೇಳುತ್ತವೆ. ಜಿಲ್ಲೆಗೆ ಮರುನಾಮಕರಣದ ಬಗ್ಗೆ ಹೋರಾಟಗಳು ನಿನ್ನೆ ಮೊನ್ನೆ ಆರಂಭವಾಗಿದ್ದಲ್ಲ ಸುಮಾರು ನೂರು ವರ್ಷಗಳ ಹಿಂದಿನಿಂದಲೂ ಆಗ್ರಹವಿದೆ. ಜಿಲ್ಲೆಯ ಹೆಸರು ಬದಲಾವಣೆಯಾದಲ್ಲಿ ತುಳುಭಾಷೆಯ ಹೋರಾಟಕ್ಕೂ ಇನ್ನಷ್ಟು ಪುಷ್ಟಿ ಸಿಗಲಿದೆ. ಈಗಾಗಲೇ ನಮ್ಮ ಜಿಲ್ಲೆಗೆ ಆರ್ಥಿಕವಾಗಿ ಬಹಳಷ್ಟು ಅನ್ಯಾಯವಾಗುತ್ತಿದ್ದರೂ ಸಹಿಸಿಕೊಂಡಿದ್ದೇವೆ. ಆದರೆ ಇಲ್ಲಿನ ಸಂಸ್ಕೃತಿಯ ಮೇಲೆ ಅನ್ಯಾಯವಾಗುವುದನ್ನು ಸ್ವಾಭಿಮಾನಿಗಳಾದ ತುಳುವರು ಸಹಿಸುವುದಿಲ್ಲ.ಎಂದರು. ಉತ್ತರ ಪ್ರದೇಶ, ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಸ್ಥಳೀಯ ಹೆಸರುಗಳ…
ಮಂಗಳೂರು : ದ.ಕ ಜಿಲ್ಲಾಡಳಿತ, ಪೊಲೀಸ್ ಇಲಾಖೆ ತೆಗೆದುಕೊಂಡಿರುವ ತೀರ್ಮಾನಗಳಿಂದ ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಪೂರೈಕೆಯಲ್ಲಿ ತೀವ್ರ ತೊಂದರೆ ಉಂಟಾಗಿದ್ದು ಕಟ್ಟಡ ನಿರ್ಮಾಣ ಕಾಮಗಾರಿಗಳು ಸ್ಥಗಿತವಾಗಿದೆ. ಇದರಿಂದ ಕಾರ್ಮಿಕರು, ಗುತ್ತಿಗೆದಾರರು, ಸಾರ್ವಜನಿಕರಿಗೆ ತೀವ್ರ ಸಮಸ್ಯೆಯುಂಟಾಗಿ ಕೆಲಸವೇ ಇಲ್ಲದ ವಾತಾವರಣ ನಿರ್ಮಾಣವಾಗಿದ್ದಲ್ಲದೇ, ಅಭಿವೃದ್ಧಿ ಕಾರ್ಯಗಳಿಗೂ ತೀವ್ರ ಹಿನ್ನಡೆಯಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮುಂಚೆ ಮರಳು ನೀತಿ ಮಾಡುತ್ತೇವೆ ಅಂತ ಪ್ರಣಾಳಿಕೆಯಲ್ಲಿ ಘೋಷಿಸಿತ್ತು. ಆದರೆ ಅಧಿಕಾರಕ್ಕೆ ಬಂದು ಎರಡೂವರೆ ವರ್ಷವಾಗುತ್ತಾ ಬಂದರೂ ಈ ಬಗ್ಗೆ ಸ್ಪಷ್ಟ ಕಾನೂನು ರೂಪಿಸಿಲ್ಲವಾದ್ದರಿಂದ ಈಗಲೂ ಸಹ ಸಿ.ಆರ್.ಝಡ್ ವ್ಯಾಪ್ತಿಯಲ್ಲಿ ಮರಳು ಸಿಗುತ್ತಿಲ್ಲ. ಈ ಬಗ್ಗೆ ಸರ್ಕಾರ ಒಂದಾದರೂ ಸಭೆ ನಡೆಸಿದೆಯಾ? ಕ್ಷೇತ್ರದ ಶಾಸಕನಾಗಿರುವ ನನಗಂತೂ ಈ ಬಗ್ಗೆ ಯಾವ ಮಾಹಿತಿಯೂ ಬಂದಿಲ್ಲ. ಕೇರಳದಲ್ಲಿ ಒಂದು ಟನ್ ಕೆಂಪು ಕಲ್ಲಿಗೆ 32 ರೂ. ರಾಯಲ್ಟಿ ಇದ್ದರೆ, ಕರ್ನಾಟಕದಲ್ಲಿ 282 ರೂ. ಇದೆ. ಹಾಗಾಗಿ ಕೇರಳದಿಂದ ಉಳ್ಳಾಲ ಕಡೆಗೆ…
ತುಮಕೂರು ; ಅಪ್ರಾಪ್ತ ಬಾಲಕನಿಗೆ ಬೈಕ್ ಚಲಾಯಿಸಲು ಕೊಟ್ಟ ತಂದೆಗೆ ಜೈಲು ಶಿಕ್ಷೆ ನೀಡಿ ತುಮಕೂರು ಜಿಲ್ಲೆಯ ಗುಬ್ಬಿ ಪ್ರಧಾನ ನ್ಯಾಯಾಲಯ ತೀರ್ಪು ನೀಡಿ ಆದೇಶ ಹೊರಡಿಸಿದ ಘಟನೆ ನಡೆದಿದೆ. ಅಪ್ರಾಪ್ತ ಬಾಲಕನ ತಂದೆಗೆ ಒಂದು ದಿನ ಜೈಲು ಶಿಕ್ಷೆ ನೀಡಿ 30 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ. 2024 ನವೆಂಬರ್ 06 ರಂದು ಬಾಲಕ ಬೈಕ್ ಚಲಾಯಿಸಿ ಅಪಘಾತ ಮಾಡಿದ್ದನು.ತುಮಕೂರಿನಿಂದ ಅರಸೀಕೆರೆಗೆ ಹೋಗುತ್ತಿದ್ದ ವೇಳೆ ಗುಬ್ಬಿಯಲ್ಲಿ ಬೈಕ್ ಅಪಘಾತ ನಡೆದಿತ್ತು. ಗುಬ್ಬಿ ಸಿಐಟಿ ಕಾಲೇಜು ಬಳಿ ಮಣ್ಣಿನ ಗುಡ್ಡೆಗೆ ಡಿಕ್ಕಿಯಾಗಿ ಬಿದ್ದಿದ್ದು ಈ ಬಗ್ಗೆ ಗುಬ್ಬಿ ಪೊಲೀಸರು ಪ್ರಕರಣ ದಾಖಲಿಸಿ ಕೊಂಡು ಚಾರ್ಜ್ ಶೀಟ್ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಗುಬ್ಬಿ ಸಿವಿಲ್ ನ್ಯಾಯಾಲಯ ಬಾಲಕನಿಗೆ ಬೈಕ್ ಕೊಟ್ಟ ತಪ್ಪಿಗೆ ತಂದೆಗೆ ಶಿಕ್ಷೆ ನೀಡಿ ತೀರ್ಪು ನೀಡಿದೆ. ಮಗನಿಗೆ ಬೈಕ್ ಕೊಟ್ಟ ತಪ್ಪಿಗೆ ಕೋರ್ಟ್ ಒಂದು ದಿನ ಜೈಲು ಶಿಕ್ಷೆ ನೀಡಿದೆ. ಈ ಮೂಲಕ ಅಪ್ರಾಪ್ತರಿಗೆ ಬೈಕ್…
ಮಂಗಳೂರು: ಮಂಗಳೂರು ಸಹಕಾರಿ ಬ್ಯಾಂಕ್ ಒಂದರಲ್ಲಿ ಭಾರಿ ಗೋಲ್ಡ್ ಗೋಲ್ಮಾಲ್ ನಡೆದಿದೆ. ಗ್ರಾಹಕರು ತಮ್ಮ ಕಷ್ಟಕ್ಕೆ ಅಡವಿಟ್ಟ ಚಿನ್ನಕ್ಕೆ ಅದೇ ಬ್ಯಾಂಕ್ನ ಕ್ಯಾಷಿಯರ್ ಕನ್ನ ಹಾಕಿ ಎಗರಿಸಿದ್ದಾನೆ. ಕದ್ದ ಬಂಗಾರವನ್ನು ಬೇರೊಂದು ಬ್ಯಾಂಕ್ನಲ್ಲಿ ಅಡವಿಟ್ಟು ಕೋಟ್ಯಂತರ ರೂಪಾಯಿ ಹಣ ಸಾಲ ಪಡೆದು ಮಜಾ ಮಾಡಿ, ಈಗ ಸಿಕ್ಕಿಬಿದ್ದಿದ್ದಾನೆ. ಮಂಗಳೂರಿನ ಶಕ್ತಿನಗರದ ಪದುವ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ನಲ್ಲಿ ಅದೇ ಬ್ಯಾಂಕ್ನ ಕ್ಯಾಷಿಯರ್ ಗ್ರಾಹಕರು ಅಡವಿಟ್ಟ ಚಿನ್ನಕ್ಕೆ ಕನ್ನ ಹಾಕಿದ್ದಾನೆ. ಪ್ರೀತೇಶ್ ಕಳೆದ ಕೆಲ ವರ್ಷಗಳಿಂದ ಈ ಬ್ಯಾಂಕ್ನಲ್ಲಿ ಕ್ಯಾಷಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದ. ಅದರ ಜೊತೆಗೆ ಗ್ರಾಹಕರು ಸಾಲಕ್ಕಾಗಿ ಚಿನ್ನವನ್ನು ಅಡವಿಟ್ಟಾಗ ಅದರ ಜವಾಬ್ದಾರಿಯನ್ನು ನೋಡಿಕೊಳ್ಳುತ್ತಿದ್ದ. ಇತ್ತ ಗ್ರಾಹಕರು ಬ್ಯಾಂಕ್ನ ಖಜಾನೆಗೆ ಚಿನ್ನ ಒಪ್ಪಿಸುತ್ತಿದ್ದಂತೆಯೇ ಪ್ರೀತೇಶ್ಗೆ ಚಿನ್ನದ ಮೇಲಿನ ವ್ಯಾಮೋಹ ಹೆಚ್ಚಾಗಿದೆ. ಎರಡು ಸಾವಿರಕ್ಕೂ ಅಧಿಕ ಗ್ರಾಹಕರು ಇರುವ ಬ್ಯಾಂಕ್ನ ಇಪ್ಪತ್ತಾರು ಗ್ರಾಹಕರ ಚಿನ್ನಕ್ಕೆ ಪ್ರೀತೇಶ್ ಕನ್ನ ಹಾಕಿದ್ದಾನೆ. ಬ್ಯಾಂಕ್ನ ದಾಖಲೆಗಳಲ್ಲಿ ಚಿನ್ನಕ್ಕಾಗಿ ಮಾಡಿದ ಲೋನ್ಗಳು ಕ್ಲಿಯರ್ ಆಗಿದೆ ಅಂತಾ ನಕಲಿ…
ತುಳುರಂಗಭೂಮಿಯ ಹೆಸರಾಂತ ನಾಟಕ ಸಂಸ್ಥೆ ಚಾಪರ್ಕ ತಂಡದ 60ನೇ ನಾಟಕದ ಮುಹೂರ್ತ ಇಂದು ಬೆಳಗ್ಗೆ ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯಿತು.ತುಳುರಂಗಭೂಮಿಯಲ್ಲಿ ಹಾಸ್ಯದೊಂದಿಗೆ ಕೌಟುಂಬಿಕ ವಿಚಾರಗಳೊಂದಿಗೆ ಕಳೆದ 3 ಧಶಕಗಳಿಂದ ದೇಶ ವಿದೇಶದ ತುಳು ಕಲಾಭಿಮಾನಿಗಳನ್ನು ರಂಜಿಸುತ್ತಿರುವ ತೆಲಿಕೆದ ಬೊಳ್ಳಿ ಡಾl ದೇವುದಾಸ್ ಕಾಪಿಕಾಡ್ ರವರ ಬತ್ತಳಿಕೆಯಿಂದ ಮೂಡಿಬರುತ್ತಿರುವ ಮತ್ತೊಂದು ಕೌಟುಂಬಿಕ ಹಾಸ್ಯ ನಾಟಕ “ಎನ್ನನೇ ಕಥೆ” ವಿಭಿನ್ನ ಕಥಾ ಹಂದರವನ್ನು ಹೊಂದಿದ್ದು ಈ ಬಾರಿ ಕಲಾಪ್ರೇಕ್ಷಕರನ್ನು ರಂಜಿಸಲು ಸಕಲ ತಯಾರಿಯಲ್ಲಿ ಚಾಪರ್ಕ ತಂಡ ನಿರತವಾಗಿದೆ.ಕಾಪಿಕಾಡ್ ರವರ ದಶಕದ ಹಿಂದಿನ ಕೌಟುಂಬಿಕ ಸೂಪರ್ ಹಿಟ್ ನಾಟಕ “ಇಲ್ಲ ಇಲ್ಲದ ಕಥೆ”, “ಕಥೆ ನನ ಬರೆಯೋಡು” ಸಾಲಿಗೆ “ಎನ್ನನೇ ಕಥೆ” ಸೇರ್ಪಡೆಯಾಗಲಿದೆ ಎನ್ನುವುದು ಕಾಪಿಕಾಡ್ ರವರ ಅಭಿಮಾನಿಗಳ ನಿರೀಕ್ಷೆ.ಎಂದಿನಂತೆ ಕಾಪಿಕಾಡ್ ರ ಬಳಗದಲ್ಲಿ ಹಾಸ್ಯ ದಿಗ್ಗಜರಾದ ಬೋಜರಾಜ್ ವಾಮಂಜೂರು, ಸಾಯಿಕೃಷ್ಷಕುಡ್ಲರ ಜೊತೆ ಸ್ವತ ಕಾಪಿಕಾಡ್ ಕಮಾಲ್ ಮಾಡಲಿದ್ದಾರೆ,ಹಿರಿಯ ಕಲಾವಿದರಾದ ಸದಾಶಿವ ಅಮೀನ್, ತಿಮ್ಮಪ್ಪ ಕುಲಾಲ್, ಸುರೇಶ್ ಕುಲಾಲ್, ಸುಜಾತ ಶಕ್ತಿ ನಗರ, ಶರತ್…
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಕೈಪಿಡಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಬೆಂಗಳೂರು ವಾರ್ತಾಭವನ ದಲ್ಲಿ ಬಿಡುಗಡೆಗೊಳಿಸಿದರು.ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಕಾರ್ಯಕ್ರಮ ಉದ್ಘಾಟನೆಗೆ ಆಹ್ವಾನಿಸಲಾಯಿತು. ಈ ವೇಳೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ ವಿ ಪ್ರಭಾಕರ್, ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಷಾ ಖಾನಮ್,ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿ ಲೋಕೇಶ್, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ, ಕೋಶಾಧಿಕಾರಿ ಪುಷ್ಪರಾಜ್ ಬಿ ಎನ್, ಕಾರ್ಯಕಾರಿ ಸಮಿತಿ ಸದಸ್ಯ ರಾಜೇಶ್ ದಡ್ಡಂಗಡಿ, ಬೆಂಗಳೂರು ನಗರ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಸೋಮಶೇಖರ್ ಗಾಂಧಿ ಉಪಸ್ಥಿತರಿದ್ದರು.
ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ವೈದ್ಯರ ಘಟಕ ವತಿಯಿಂದ ದಿನಾಂಕ 01-07-2025 ರಂದು ಮದ್ಯಾಹ್ನ 2 ಗಂಟೆಗೆ ಉಡುಪಿ ಅಕ್ಷಯ ಟವರ್ ನಲ್ಲಿ ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ರವರ ಅಧ್ಯಕ್ಷತೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ ನಡೆಯಿತು. ಕಾರ್ಯಕ್ರಮ ಉದ್ಘಾಟನೆ ಯನ್ನು ಆಯುಷ್ ಫೆಡರೇಷನ್ ಆಫ್ ಇಂಡಿಯಾ (ಎಎಫ್ಐ) ಉಡುಪಿ ಜಿಲ್ಲಾಧ್ಯಕ್ಷ ಡಾ. ಎನ್. ಟಿ. ಅಂಚನ್. ಇಂಡಿಯನ್ ಮೆಡಿಕಲ್ಅಸೋಸಿಯೇಷನ್ , ಉಡುಪಿ ಜಿಲ್ಲಾಧ್ಯಕ್ಷ ಡಾ. ಸುರೇಶ್ ಶೆಣೈ, ಇಂಡಿಯನ್ ಡೆಂಟಲ್ ಅಸೋಸಿಯೇಷನ್ ಉಡುಪಿ ಜಿಲ್ಲಾಧ್ಯಕ್ಷ ಡಾ ಯು ಬಿ ಶಬರಿ ರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಕೇಂದ್ರೀಯ ಸಂಘಟನಾ ಕಾರ್ಯದರ್ಶಿ ಭಟ್ ಕಡಬ ಪ್ರಾಸ್ತಾವಿಕವಾಗಿ ಮಾತನಾಡಿದರು ವೈದ್ಯರ ಘಟಕ ರಾಜ್ಯ ಸಂಘಟನಾ ಕಾರ್ಯದರ್ಶಿ ಡಾ ರವೀಂದ್ರ ಸ್ವಾಗತ ಭಾಷಣ ಗೈದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾಧ್ಯಕ್ಷ ಫ್ರ್ಯಾಂಕಿ ಡಿಸೋಜ ಕೊಳಲಗಿರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಪೂಜಾರಿ ಹಾವಂಜೆ, ಜಿಲ್ಲಾ ಕಾರ್ಮಿಕ…
ಸುರತ್ಕಲ್ : ಬಂಟರ ಸಂಘ (ರಿ) ಸುರತ್ಕಲ್ ಇದರ 2025-27 ನೇ ಸಾಲಿನ ನಿರ್ದೇಶಕರ ಸಭೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಿತು. ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ ಆಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ಪ್ರವೀಣ್ ಪಿ ಶೆಟ್ಟಿ , ಪ್ರಧಾನ ಕಾರ್ಯದರ್ಶಿಯಾಗಿ ಲೀಲಾಧರ್ ಶೆಟ್ಟಿ ಕಟ್ಲ , ಕೋಶಾಧಿಕಾರಿಯಾಗಿ ರತ್ನಾಕರ ಶೆಟ್ಟಿ ಸುರತ್ಕಲ್,ಸಹಕಾರ್ಯದರ್ಶಿಯಾಗಿ ಮೀರಾ ವಾಣಿ ಶೆಟ್ಟಿ ಕಾಟಿಪಳ್ಳ, ಸಂಘಟನಾ ಕಾರ್ಯದರ್ಶಿಯಾಗಿ ಪುಷ್ಪರಾಜ್ ಶೆಟ್ಟಿ ಕುಡುಂಬೂರು ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ದೇವೇಂದ್ರ ಕೆ ಶೆಟ್ಟಿ ಕ್ರೀಡಾ ಕಾರ್ಯದರ್ಶಿಯಾಗಿ ಪುಷ್ಪರಾಜ್ ಶೆಟ್ಟಿ ಮದ್ಯ ಆಯ್ಕೆಯಾಗಿದ್ದಾರೆ. ಕಾರ್ಯಕಾರಿ ಸಮಿತಿ ಸದಸ್ಯರಾಗಿ ಶ್ರೀಕಾಂತ್ ಶೆಟ್ಟಿ ಕಾಟಿಪಳ್ಳ, ಸುಜೀರ್ ಶೆಟ್ಟಿ ಸೂರಿಂಜೆ, ಗಿರೀಶ್ ಎಂ ಶೆಟ್ಟಿ ಪೆರ್ಮುದೆ, ಪ್ರಮೋದ್ ಶೆಟ್ಟಿ ಹೊಸಬೆಟ್ಟು, ಸುಕೇಶ್ ಶೆಟ್ಟಿ ಚೇಳಾರ್, ರಾಮಚಂದ್ರ ಶೆಟ್ಟಿ ಕುಳಾಯಿ, ದಾಮೋದರ ಶೆಟ್ಟಿ ತೋಕೂರು, ಪದ್ಮನಾಭ ಶೆಟ್ಟಿ ಕುತ್ತೆತ್ತೂರು, ಸವಿತಾ ಭವಾನಿ ಶಂಕರ್ ಶೆಟ್ಟಿ ಬಾಳ, ಜ್ಯೋತಿ ಜೆ ಶೆಟ್ಟಿ…
ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಹಮ್ಮಿಕೊಂಡಿರುವ ‘ಅಕಾಡೆಮಿಡ್ ಒಂಜಿ ದಿನ ಬಲೆ ತುಳು ಓದುಗ’ ಅಭಿಯಾನದ ಐದನೇ ಕೂಟವು ಜೂನ್ 30ರಂದು ನಡೆಯಲಿದೆ.ವಿದ್ಯಾರ್ಥಿ ಯುವ ಜನರಲ್ಲಿ ತುಳು ಸಾಹಿತ್ಯ ಓದಿನ ಅಭಿರುಚಿ ಮೂಡಿಸುವ ಸಲುವಾಗಿ ಹಮ್ಮಿಕೊಂಡಿರುವ ಈ ಅಭಿಯಾನದ ಐದನೇ ಕೂಟದಲ್ಲಿ ಮಂಗಳೂರಿನ ಸೈಂಟ್ ಅಲೋಷಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ತುಳು ವಿಭಾಗ ಹಾಗೂ ಕನ್ನಡ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸುವರು.ಕಾರ್ಯಕ್ರಮವನ್ನು ಬೆಳಿಗ್ಗೆ 10:00 ಗಂಟೆಗೆ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಸಹಾಯಕ ಪ್ರಾಧ್ಯಾಪಕ ಡಾ. ವಿಶ್ವನಾಥ ಬದಿಕಾನ ಅವರು ಉದ್ಘಾಟಿಸುವರು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅಧ್ಯಕ್ಷತೆ ವಹಿಸುವರು. ಅಕಾಡೆಮಿಯ ಮಾಜಿ ಸದಸ್ಯೆ ವಿಜಯಲಕ್ಷ್ಮಿ ಪ್ರಸಾದ ರೈ, ಸಂತ ಆಲೋಸಿಯಸ್ ಸಂಸ್ಥೆಯ ಉಪನ್ಯಾಸಕಿ ಪ್ರಶಾಂತಿ ಶೆಟ್ಟಿ ಇರುವೈಲು ಮುಖ್ಯ ಅತಿಥಿಯಾಗಿ ಭಾಗವಹಿಸುವರು ಎಂದು ಅಕಾಡೆಮಿಯ ಪ್ರಕಟಣೆ ತಿಳಿಸಿದೆ.
ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸಮೀಪ ಯುವಕನೊಬ್ಬ ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ಆಕೆ ಗರ್ಭಿಣಿಯಾದ ಬಳಿಕ ಆತ ವಿವಾಹವಾಗಲು ನಿರಾಕರಿಸಿರುವ ಪ್ರಕರಣದಲ್ಲಿ ಗರ್ಭಿಣಿ ವಿದ್ಯಾರ್ಥಿನಿ ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮನೀಡಿದ್ದಾಳೆ ಎಂದು ತಿಳಿದು ಬಂದಿದೆ. ಬಪ್ಪಳಿಗೆ ನಿವಾಸಿ ಕೃಷ್ಣರಾವ್ ಮತ್ತು ಸಂತ್ರಸ್ತ ಯುವತಿ ಇಬ್ಬರೂ ಮಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. 2024ರ ಅ.11ರಂದು ಆರೋಪಿ ಕೃಷ್ಣ ಸಂತ್ರಸ್ತ ಯುವತಿಯನ್ನು ತನ್ನ ಮನೆಗೆ ಕರೆಸಿಕೊಂಡು ಬಲವಂತದಿಂದ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಕೆಲವು ತಿಂಗಳ ನಂತರ ಸಂತ್ರಸ್ತೆ ಗರ್ಭಿಣಿಯಾಗಿದ್ದು, ವಿಚಾರವನ್ನು ಆರೋಪಿ ಕೃಷ್ಣನಿಗೆ ತಿಳಿಸಿದ್ದಾನೆ. ಈ ವೇಳೆ ಮನೆಯವರ ಬಳಿ ಈ ವಿಚಾರ ಹೇಳದಿದ್ದರೆ ತಾನು ಮದುವೆಯಾಗುವುದಾಗಿ ಹೇಳಿದ್ದ. ಬಳಿಕ ಮದುವೆಗೆ ನಿರಾಕರಿಸಿದ್ದ ಯುವಕನ ಮೇಲೆ ಯುವತಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಮತ್ತು ನಂಬಿಕೆ ದ್ರೋಹ ಪ್ರಕರಣ ದಾಖಲಿಸಿದ್ದಳು, ಪ್ರಕರಣ ದಾಖಲಾಗುತ್ತಿದ್ದಂತೆ ಯುವಕ ತಲೆಮರೆಸಿಕೊಂಡಿದ್ದಾನೆ. ಪೊಲೀಸರು ಅತ್ಯಚಾರ ಹಾಗೂ ನಂಬಿಕೆ ದ್ರೋಹ ಪ್ದಕರಣ ದಾಖಲಿಸಿಕೊಂಡು…