- ಹೆಕ್ಕಡ್ಕ–ಬೈಲೂರು ಭಾಗದ ಹಿರಿಯ ಶಿಕ್ಷಕ ಭುಜಬಲಿ ಅಧಿಕಾರಿ ವಿಧಿವಶ
- ಸೌಂದರ್ಯ ಸ್ಪರ್ಧೆ: ಮುಲ್ಕಿಯ ಶಿಖಾ ಸಿಶೀಲ್ ಗೆ ಮಿಸ್ಸ್ ದಾಯ್ಜಿವರ್ಲ್ಡ್-2026 ಕಿರೀಟ
- ಫೆಬ್ರವರಿ 22ರಂದು ಸಂಜೆ 5 ಗಂಟೆಗೆ ಕುಮಾರಿ ಶ್ರೇಯ ರಾವ್ ಸಣ್ಣಯ್ಯರ ಭರತನಾಟ್ಯ ರಂಗಪ್ರವೇಶ ಸಮಾರಂಭ
- ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಬ್ಯಾಂಕ್ ಮ್ಯಾನೇಜರ್ ವಿರುದ್ಧ ಪ್ರಕರಣ ದಾಖಲು
- ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ ಆರೋಪಿ ಸರೆ
- ಖ್ಯಾತ ಶಿಕ್ಷಣ ತಜ್ಞ, ದೀರ್ಘದೃಷ್ಟಿಯ ಶಿಕ್ಷಣ ಸಂಸ್ಥಾಪಕ ಹಾಗೂ ಉದ್ಯಮಿ ಡಾ. ಸಿಎ ಎ. ರಾಘವೇಂದ್ರ ರಾವ್ ನಿಧನ
- ಯಶ್ ಪಾಲ್ ಸುವರ್ಣ ನಿತೇಶ್ ರಾಣೆ ಭೇಟಿ ಅಂತಾರಾಜ್ಯ ಮೀನುಗಾರಿಕೆ ಸಮಸ್ಯೆ ಪರಿಹಾರಕ್ಕೆ ಭರವಸೆ
- ದಲಿತ ಮಹಿಳೆಯ ಗಂಬೀರ ಆರೋಪ ಸಿ.ಐ.ಡಿ. ತನಿಖೆ ಒಪ್ಪಿಸಿ ಆರೋಪಿತನ ಹಾಗೂ ಸಂಬಂಧಿತ ವ್ಯಕ್ತಿಗಳ ದೂರವಾಣಿ ಕರೆಗಳ ಪರಿಶೀಲನೆ ಮಾಡುವಂತೆ ತುಳುನಾಡ ರಕ್ಷಣಾ ವೇದಿಕೆ ಪ್ರಶಾಂತ್ ಭಟ್ ಕಡಬ ಆಗ್ರಹ
Author: Tulunada Surya
ಮಂಗಳೂರು: ಬಂಗ್ರಕೂಳೂರಿನ ಗೋಲ್ಡ್ಫಿಂಚ್ ಸಿಟಿಯಲ್ಲಿ ಮಂಗಳೂರು ಕಂಬಳ ಸಮಿತಿಯ ವತಿಯಿಂದ ಸಂಸದ ಬ್ರಿಜೇಶ್ ಚೌಟ ನೇತೃತ್ವದಲ್ಲಿ 9ನೇ ವರ್ಷದ ಮಂಗಳೂರು ಕಂಬಳ ಅದ್ದೂರಿಯಾಗಿ ನೆರವೇರಿತು. ಪರಂಪರೆ, ಸಂಭ್ರಮ ಮತ್ತು ಸ್ಪರ್ಧಾತ್ಮಕತೆಯ ಸಂಗಮವಾಗಿ ಮೂಡಿಬಂದ ಈ ಕಂಬಳ ಕೂಟದಲ್ಲಿ ಒಟ್ಟು 141 ಜೊತೆ ಕೋಣಗಳು ಭಾಗವಹಿಸಿ ಪ್ರೇಕ್ಷಕರನ್ನು ರಂಜಿಸಿವೆ. ವಿಭಾಗವಾರು ಸ್ಪರ್ಧೆಯಲ್ಲಿ ಕನೆಹಲಗೆ ವಿಭಾಗದಲ್ಲಿ 9 ಜೊತೆ, ಅಡ್ಡಹಲಗೆ ವಿಭಾಗದಲ್ಲಿ 10 ಜೊತೆ, ಹಗ್ಗ ಹಿರಿಯ ವಿಭಾಗದಲ್ಲಿ 17 ಜೊತೆ, ನೇಗಿಲು ಹಿರಿಯ ವಿಭಾಗದಲ್ಲಿ 26 ಜೊತೆ, ಹಗ್ಗ ಕಿರಿಯ ವಿಭಾಗದಲ್ಲಿ 19 ಜೊತೆ ಹಾಗೂ ನೇಗಿಲು ಕಿರಿಯ ವಿಭಾಗದಲ್ಲಿ 60 ಜೊತೆ ಕೋಣಗಳು ಪೈಪೋಟಿ ನಡೆಸಿದವು. ಫಲಿತಾಂಶಗಳು: ಅಡ್ಡಹಲಗೆ ವಿಭಾಗ ಹಗ್ಗ ಹಿರಿಯ ವಿಭಾಗ ಹಗ್ಗ ಕಿರಿಯ ವಿಭಾಗ ನೇಗಿಲು ಹಿರಿಯ ವಿಭಾಗ ನೇಗಿಲು ಕಿರಿಯ ವಿಭಾಗ ಪರಂಪರೆಯ ಕ್ರೀಡೆಗೆ ಹೊಸ ಉತ್ಸಾಹ ತುಂಬಿದ ಈ ವರ್ಷದ ಮಂಗಳೂರು ಕಂಬಳ ಕೂಟವು ಅಪಾರ ಜನಸ್ತೋಮದ ನಡುವೆ ಯಶಸ್ವಿಯಾಗಿ ಸಂಪನ್ನವಾಯಿತು.
ಪ್ರಮುಖ ಅರ್ಥಧಾರಿಗಳಾದ ಡಾ. ಎಂ. ಪ್ರಭಾಕರ ಜೋಶಿ, ಭಾಸ್ಕರ ರೈ ಕುಕ್ಕುವಳ್ಳಿ, ಜಬ್ಬಾರ್ ಸಮೋ ಸಂಪಾಜೆ ಮತ್ತು ಪ್ರಸಾದ ಪೂಜಾರಿ ಭಟ್ಕಳ ವಿವಿಧ ಪಾತ್ರ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ನಗರದ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯುತ್ತಿರುವ ಜಿಲ್ಲಾ ಕರಾವಳಿ ಉತ್ಸವ – 2025 ಅಂಗವಾಗಿ ದಶಂಬರ 21ರಂದು ದಕ್ಷಿಣೋತ್ತರ ಕನ್ನಡ ಜಿಲ್ಲೆಗಳ ಪ್ರಸಿದ್ಧ ಕಲಾವಿದರಿಂದ ಯಕ್ಷಗಾನ ತಾಳಮದ್ದಳೆ ಜರಗಿತು. ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ನೇತೃತ್ವದ ಆಕಾಶವಾಣಿ ಮತ್ತು ದೂರದರ್ಶನ ಖ್ಯಾತಿಯ ಕರ್ನಾಟಕ ಯಕ್ಷ ಭಾರತಿ ಪುತ್ತೂರು ತಂಡವು ಕರಾವಳಿ ಉತ್ಸವದ ವಸ್ತು ಪ್ರದರ್ಶನ ವೇದಿಕೆಯಲ್ಲಿ ‘ವೀರಮಣಿ ಕಾಳಗ’ ಪ್ರಸಂಗವನ್ನು ಪ್ರಸ್ತುತಪಡಿಸಿತು. ಯಕ್ಷಗಾನ ರಂಗದ ಪ್ರಮುಖ ಅರ್ಥಧಾರಿಗಳಾದ ಡಾ. ಎಂ. ಪ್ರಭಾಕರ ಜೋಶಿ, ಭಾಸ್ಕರ ರೈ ಕುಕ್ಕುವಳ್ಳಿ, ಜಬ್ಬಾರ್ ಸಮೋ ಸಂಪಾಜೆ ಮತ್ತು ಪ್ರಸಾದ ಪೂಜಾರಿ ಭಟ್ಕಳ ವಿವಿಧ ಪಾತ್ರಗಳನ್ನು ನಿರ್ವಹಿಸಿದರು. ಭಾಗವತ ಹರೀಶ ಶೆಟ್ಟಿ ಸೂಡ ಅವರ ಹಾಡುಗಾರಿಕೆಗೆ ವಿಕಾಸ್ ರಾವ್ ಕೆರೆಕಾಡ್ , ಶ್ರೀಶ ರಾವ್ ನಿಡ್ಲೆ…
ಮಂಗಳೂರು: ರಾಜ್ಯದ ಕಾರಾಗೃಹ ವ್ಯವಸ್ಥೆಯ ಮೇಲ್ವಿಚಾರಣೆಯ ಭಾಗವಾಗಿ ಕಾರಾಗೃಹ ಇಲಾಖೆ ಡಿಜಿಪಿ ಅಲೋಕ್ ಕುಮಾರ್ ಅವರು ಮಂಗಳೂರು ಸೂಕ್ಷ್ಮ ಕಾರಾಗೃಹಕ್ಕೆ ಔಪಚಾರಿಕವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಾಜ್ಯದಲ್ಲಿ ಒಟ್ಟು 54 ಕಾರಾಗೃಹಗಳಿದ್ದು, ಅವುಗಳನ್ನು ಸಮಯಕ್ಕೆ ಸರಿಯಾಗಿ ಪರಿಶೀಲಿಸುವುದು ಅಗತ್ಯವಿದೆ ಎಂದು ಅವರು ಹೇಳಿದರು. ಮಂಗಳೂರು ಕಾರಾಗೃಹವನ್ನು ‘ಸೂಕ್ಷ್ಮ’ ಎಂದು ಗುರುತಿಸಿದ ಡಿಜಿಪಿ, ಈಗಾಗಲೇ ಇಲ್ಲಿ ವಿವಿಧ ರೈಡ್ಗಳನ್ನು ನಡೆಸಲಾಗಿದೆ ಎಂದು ತಿಳಿಸಿದರು. ಒಳಗಡೆ ಗಲಾಟೆ ಸೃಷ್ಟಿಸಿದ ಖೈದಿಗಳನ್ನು ಬೇರೆ ಕಾರಾಗೃಹಗಳಿಗೆ ಸ್ಥಳಾಂತರಿಸಲಾಗಿದ್ದು, ಇನ್ನೂ ಕೆಲವರನ್ನು ಸ್ಥಳಾಂತರಿಸುವ ಪ್ರಕ್ರಿಯೆ ನಡೆಯಲಿದೆ ಎಂದರು. ಉತ್ತಮ ನಡತೆ ಹೊಂದಿರುವ ಖೈದಿಗಳಿಗೆ ಅಗತ್ಯ ಸಹಕಾರ ನೀಡಲಾಗುತ್ತದೆ ಎಂದು ಭರವಸೆ ನೀಡಿದರು. ಕಾರಾಗೃಹದೊಳಗೆ ನಿಷೇಧಿತ ವಸ್ತುಗಳ ಪ್ರವೇಶವನ್ನು ತಡೆಗಟ್ಟುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗುತ್ತಿದ್ದು, ಯಾವ ರೀತಿಯಲ್ಲಿ ಅಕ್ರಮ ವಸ್ತುಗಳು ಒಳಗೆ ಬರುತ್ತಿವೆ ಎಂಬುದರ ಕುರಿತು ಸಮಗ್ರ ಪರಿಶೀಲನೆ ನಡೆಯುತ್ತಿದೆ ಎಂದರು. ಈ ಹಿನ್ನೆಲೆಯಲ್ಲಿ ಟ್ರಯಲ್ ಬೇಸಿಸ್ನಲ್ಲಿ ಎಐ (ಕೃತಕ ಬುದ್ಧಿಮತ್ತೆ) ತಂತ್ರಜ್ಞಾನವನ್ನು ಬಳಸಲಾಗುತ್ತಿದೆ. ಅದರ ಪರಿಣಾಮಕಾರಿತ್ವವನ್ನು…
ಮಂಗಳೂರು ; ಕ್ರಿಸ್ಮಸ್ ಹಬ್ಬದ ಈ ಪವಿತ್ರ ಸಂದರ್ಭದಲ್ಲಿ, ಯೇಸು ಕ್ರಿಸ್ತರು ಈ ಜಗತ್ತಿಗೆ ತಂದ ಪ್ರೀತಿ, ಶಾಂತಿ ಮತ್ತು ಮಾನವೀಯತೆಯ ಶಾಶ್ವತ ಸಂದೇಶವನ್ನು ನಾವು ಇವತ್ತು ಕೃತಜ್ಞತೆಯಿಂದ ಸ್ಮರಿಸುತ್ತೇವೆ. ಈ ಹಬ್ಬವು ಸಮಾಜದಲ್ಲಿ ಸತ್ಯ, ನ್ಯಾಯ ಹಾಗೂ ಸಹಜೀವನದ ಮೌಲ್ಯಗಳನ್ನು ಮರುಸ್ಥಾಪಿಸುವ ವಿಶಿಷ್ಟ ಅವಕಾಶವನ್ನು ಒದಗಿಸುತ್ತದೆ ಎಂದು ನಾವು ಸ್ಪಷ್ಟವಾಗಿ ಹೇಳಬಹುದು ಎಂದು ಧರ್ಮಾಧ್ಯಕ್ಷರಾದ ಡಾ.ಪೀಟರ್ ಪಾವ್ಲ್ ಸಲ್ಡಾನ್ಹಾ ರವರು ತಿಳಿಸಿದ್ದಾರೆ. ನಮ್ಮ ಸಮಾಜದಲ್ಲಿ ಹಿಂಸೆ, ವಂಚನೆ, ತಪ್ಪು ಮಾಹಿತಿ ಮತ್ತು ಪರಸ್ಪರ ಅವಿಶ್ವಾಸವನ್ನು ಉತ್ತೇಜಿಸುವ ಸವಾಲುಗಳು ಹೆಚ್ಚುತ್ತಲೇ ಇವೆ. ಸಾರ್ವಜನಿಕ ವಲಯಗಳಲ್ಲಿ ಸತ್ಯ, ನ್ಯಾಯ, ಮತ್ತು ಸೌಹಾರ್ದ ಕುಂದುತ್ತಿರುವುದು ದೇಶದ ಭವಿಷ್ಯದ ಹಿತದೃಷ್ಟಿಯಿಂದ ಚಿಂತಾಜನಕವಾಗಿ ಪರಿಣಮಿಸಿವೆ. ವ್ಯಕ್ತಿಯ ಖಾಸಗಿತನ, ಗೌರವಯುತ ಜೀವನ, ಹಾಗೂ ಧಾರ್ಮಿಕ ಸ್ವಾತಂತ್ರ್ಯದಂತಹ ಮೂಲಭೂತ ಹಕ್ಕುಗಳು ದಿನದಿಂದ ದಿನಕ್ಕೆ ಅಪಾಯದ ಅಂಚಿಗೆ ಹೋಗುತ್ತಿವೆಯೇನೋ ಎಂಬಂತೆ ಕಾಣುತ್ತಿವೆ. ಜಾತಿ-ಧರ್ಮ-ಕುಲ-ಅಂತಸ್ತು ಇವುಗಳ ಆಧಾರದ ಮೇಲೆ ಒಬ್ಬರಿಗೊಬ್ಬರನ್ನು ಎತ್ತಿಕಟ್ಟುವುದು ಜಾಸ್ತಿಯಾಗುತ್ತಾ ಇದೆ. ಪ್ರತಿ ದಿನ ಸಾಕಷ್ಟು ಮುಗ್ಧ ಜನರು ವಂಚಕರ…
ಎಂ.ಆರ್.ಜಿ. ಗ್ರೂಪ್ನ ಆಶಾ–ಪ್ರಕಾಶ್ ಶೆಟ್ಟಿ ಅವರ ಮಹತ್ವಾಕಾಂಕ್ಷಿ ಸಮಾಜಮುಖಿ ಯೋಜನೆ ‘ನೆರವು–2025’ ಡಿಸೆಂಬರ್ 25ರಂದು ಮಂಗಳೂರಿನ ಕೂಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ ಸುಮಾರು 4,000 ಕುಟುಂಬಗಳು ಹಾಗೂ 100ಕ್ಕೂ ಅಧಿಕ ಸಂಘ–ಸಂಸ್ಥೆಗಳಿಗೆ ಒಟ್ಟು ₹9.5 ಕೋಟಿ ಮೊತ್ತದ ನೆರವು ವಿತರಿಸಲಾಗಲಿದೆ ಎಂದು ಎಂ.ಆರ್.ಜಿ. ಗ್ರೂಪ್ನ ಚೇರ್ಮನ್ ಡಾ. ಪ್ರಕಾಶ್ ಶೆಟ್ಟಿ ಪ್ರಕಟಿಸಿದರು. ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನೆರವು’ ಯೋಜನೆ ಈ ವರ್ಷ ಏಳನೇ ವರ್ಷಕ್ಕೆ ಕಾಲಿಟ್ಟಿದ್ದು, ಮುಂದಿನ ಮೂರು ವರ್ಷಗಳ ಕಾಲ ಮುಂದುವರಿಯಲಿದೆ ಎಂದು ತಿಳಿಸಿದರು. ದಶಮಾನೋತ್ಸವದ ನಂತರ ಫಲಾನುಭವಿಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಿ ಯೋಜನೆಗೆ ಸಾಮೂಹಿಕ ಸ್ವರೂಪ ನೀಡುವ ಚಿಂತನೆ ಇದೆ. ಈ ವಿಸ್ತರಣೆಯಿಂದ ಮುಂದಿನ ದಿನಗಳಲ್ಲಿ ಪ್ರತಿವರ್ಷ ಕನಿಷ್ಠ 14,000 ಕುಟುಂಬಗಳಿಗೆ ನೆರವು ನೀಡುವ ಸಾಧ್ಯತೆ ಇದೆ ಎಂದು ಹೇಳಿದರು. ಆಧುನಿಕ ತಂತ್ರಜ್ಞಾನ ಯುಗದಲ್ಲಿಯೂ ವೈದ್ಯಕೀಯ ಚಿಕಿತ್ಸೆ ಎಲ್ಲರಿಗೂ ಸುಲಭವಾಗಿ ಲಭ್ಯವಾಗುತ್ತಿಲ್ಲ ಎಂಬ ವಾಸ್ತವವನ್ನು ಉಲ್ಲೇಖಿಸಿದ ಡಾ. ಶೆಟ್ಟಿ, ಈ ಬಾರಿ…
ಉಡುಪಿ: ಲಾಡ್ಜ್ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ಪಿಂಪ್ಗಳನ್ನು ಪಡುಬಿದ್ರೆ ಪೊಲೀಸರು ಬಂಧಿಸಿ ಮಹಿಳೆಯರನ್ನು ರಕ್ಷಿಸಿದ ಘಟನೆ ಕಾಪು ಠಾಣಾ ವ್ಯಾಪ್ತಿಯ ನಡ್ಸಾಲು ಎಂಬಲ್ಲಿ ನಡೆದಿದೆ. ಉಚ್ಚಿಲ ಪೊಲ್ಯದ ಯತಿರಾಜ ಪೊಲ್ಯ ಶೆಟ್ಟಿ(48), ಮತ್ತು ಕಾಡಿಪಟ್ಣ ನವೀನ್ ಪೂಜಾರಿ(39) ಬಂಧಿತ ಆರೋಪಿಗಳು. ಕಾಪು ತಾಲೂಕು ನಡ್ಸಾಲು ಗ್ರಾಮದ ರಾ.ಹೆ 66ರ ಪಕ್ಕದಲ್ಲಿರುವ ಮಹಾದೇವಿ ಟೂರಿಸ್ಟ್ ಹೋಮ್ ಲಾಡ್ಜ್ನಲ್ಲಿ ಮಹಿಳೆಯರನ್ನು ಇರಿಸಿಕೊಂಡು ವೈಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಖಚಿತ ಮಾಹಿತಿಯಂತೆ ಪಡುಬಿದ್ರಿ ಪೊಲೀಸರು ಕಾಪು ಪೊಲೀಸರೊಂದಿಗೆ ದಾಳಿ ನಡೆಸಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
ಧರ್ಮಸ್ಥಳ: ಪ್ರತಿಷ್ಠಿತ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ 2026–28ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಗಾಗಿ ನಡೆದ ಮಹಾ ಚುನಾವಣೆಯು ಇಂದು ಬೆಳಿಗ್ಗೆ 10.30 ಗಂಟೆಗೆ ಕಾಲೇಜಿನ ಎಸ್ಡಿಎಂ ಸಭಾಂಗಣದಲ್ಲಿ ಯಶಸ್ವಿಯಾಗಿ ನೆರವೇರಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ತಾರನಾಥ್ ಶೆಟ್ಟಿ ಅವರ ನೇತೃತ್ವದಲ್ಲಿ ಕಳೆದ ಹತ್ತು ದಿನಗಳಿಂದ ನಡೆಯುತ್ತಿದ್ದ ಚುನಾವಣಾ ಪ್ರಕ್ರಿಯೆ ಇಂದು ಮತ ಎಣಿಕೆ ಹಾಗೂ ವಿಜೇತ ಅಭ್ಯರ್ಥಿಗಳ ಘೋಷಣೆಯೊಂದಿಗೆ ಸಂಪೂರ್ಣಗೊಂಡಿತು. ಮತ ಎಣಿಕೆ ಪ್ರಕ್ರಿಯೆಯು ಕಾಲೇಜಿನ ಎರಡನೇ ಮಹಡಿಯಲ್ಲಿ ಶಾಂತ ಹಾಗೂ ಪಾರದರ್ಶಕ ರೀತಿಯಲ್ಲಿ ನಡೆಯಿತು. ಚುನಾವಣೆಯ ಫಲಿತಾಂಶದಂತೆ 2026–28ನೇ ಸಾಲಿನ ಹಳೆ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ರಾಘವೇಂದ್ರ ರಾವ್, ಉಪಾಧ್ಯಕ್ಷರಾಗಿ ಉಮೇಶ್ ಗಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಈ ದಿನಕರ್ ಶೆಟ್ಟಿ, ಜೊತೆ ಕಾರ್ಯದರ್ಶಿಯಾಗಿ ಜಯಶ್ರೀ ರಟ್ಟಿಹಳ್ಳಿ, ಸಂಚಾಲಕರಾಗಿ ಅಶ್ವಿನ್ ಹಾಗೂ ವಿನೋದ್ ಕುಮಾರ್ ಎ. ರವರು ಆಯ್ಕೆಯಾಗಿದ್ದಾರೆ. ಎಲ್ಲಾ ವಿಜೇತ ಅಭ್ಯರ್ಥಿಗಳು ಪ್ರಚಂಡ ಬಹುಮತದಿಂದ ಗೆಲುವು ಸಾಧಿಸಿದ್ದಾರೆ. ಈ ಸಂದರ್ಭ ನಡೆದ…
ನವದೆಹಲಿ:ಸಹಕಾರಿ ಬ್ಯಾಂಕಿಂಗ್ ವಲಯದಲ್ಲಿ ನಿರ್ದೇಶಕರ ಅವಧಿಗೆ ಸಂಬಂಧಿಸಿದಂತೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಹೊರಡಿಸಿರುವ ಇತ್ತೀಚಿನ ಆದೇಶ/ಸುತ್ತೋಲೆ ಹೊಸ ಚರ್ಚೆಗೆ ಕಾರಣವಾಗಿದೆ. ಆಗಸ್ಟ್ 1ರಿಂದ ಜಾರಿಗೊಂಡಿರುವ ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ (ತಿದ್ದುಪಡಿ)–2025ರ ಸೆಕ್ಷನ್ 10ಎ(2)(ಜಿ) ಪ್ರಕಾರ, ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್, ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ಗಳು (ಡಿಸಿಸಿ) ಹಾಗೂ ಪಟ್ಟಣ ಸಹಕಾರಿ ಬ್ಯಾಂಕ್ಗಳ ಆಡಳಿತ ಮಂಡಳಿಯಲ್ಲಿ ಯಾವುದೇ ವ್ಯಕ್ತಿ ಗರಿಷ್ಠ 10 ವರ್ಷಗಳ ಕಾಲ ಮಾತ್ರ ನಿರ್ದೇಶಕರಾಗಿ ಮುಂದುವರಿಯಲು ಅವಕಾಶ ಇರುತ್ತದೆ. ಈ ಅವಧಿ ಮೀರಿದರೆ ಅವರು ಸ್ವಯಂಚಾಲಿತವಾಗಿ ಅನರ್ಹರಾಗುತ್ತಾರೆ. ಈ ಕಾನೂನು ತಿದ್ದುಪಡಿಯ ಅನುಷ್ಠಾನಕ್ಕಾಗಿ ಆರ್ಬಿಐ ಈಗಾಗಲೇ ದೇಶದ ಎಲ್ಲಾ ರಾಜ್ಯಗಳಂತೆ ಕರ್ನಾಟಕದ ಅಪೆಕ್ಸ್, ಡಿಸಿಸಿ ಹಾಗೂ ಪಟ್ಟಣ ಸಹಕಾರಿ ಬ್ಯಾಂಕ್ಗಳಿಗೆ ಸುತ್ತೋಲೆ ಜಾರಿ ಮಾಡಿದ್ದು, 2025ರ ಆಗಸ್ಟ್ 1ರಿಂದ ತಿದ್ದುಪಡಿ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಸೂಚಿಸಿದೆ. ಈ ನಿರ್ದೇಶನದಿಂದ ಸಹಕಾರಿ ಬ್ಯಾಂಕಿಂಗ್ ವಲಯದಲ್ಲಿ ಆಡಳಿತ ಸುಧಾರಣೆ ಹಾಗೂ ಹೊಸ ಮುಖಗಳಿಗೆ ಅವಕಾಶ ಸಿಗಲಿದೆ ಎನ್ನುವ ಅಭಿಪ್ರಾಯ ವ್ಯಕ್ತವಾಗಿದ್ದು,…
ಮಂಗಳೂರಿಗೆ ಬೆಂಗಳೂರಿನಿಂದ MDMA ಮಾದಕ ವಸ್ತು ತಂದು ಸ್ಥಳೀಯ ಡ್ರಗ್ ಪೆಡ್ಲರ್ಗಳಿಗೆ ಸರಬರಾಜು ಮಾಡುತ್ತಿದ್ದ ಸಂಘಟಿತ ತಂಡವನ್ನು ಮಂಗಳೂರು ನಗರ ಸಿಸಿಬಿ ಘಟಕದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭೇದಿಸಿದ್ದಾರೆ. ಡಿ.13ರಂದು ಕಾರಿನಲ್ಲಿ ಸಾಗುತ್ತಿದ್ದ ತಂಡವನ್ನು ಅರ್ಕುಳ ಬಳಿ ವಶಕ್ಕೆ ಪಡೆದ ಪೊಲೀಸರು, ಮಲ್ಲೂರು ನಿವಾಸಿ ಅಹಮ್ಮದ್ ಶಾಬೀತ್ (35), ಬಂಟ್ವಾಳ ನಿವಾಸಿ ಮಹಮ್ಮದ್ ಶಂಶೀರ್ (36) ಹಾಗೂ ಬಂಟ್ವಾಳದ ನಿವಾಸಿ ನೌಶೀನ (27) ಅವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 90 ಗ್ರಾಂ MDMA ಮಾದಕ ವಸ್ತು, ಬಿಳಿ ಬಣ್ಣದ ಮಾರುತಿ ಸ್ವಿಫ್ಟ್ ಕಾರು (KL-58-W-6342) ಮತ್ತು ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಅಹಮ್ಮದ್ ಶಾಬೀತ್ ಬೆಂಗಳೂರಿನಿಂದ ನಿರಂತರವಾಗಿ MDMA ತಂದು ಮಂಗಳೂರಿನ ಡ್ರಗ್ ಪೆಡ್ಲರ್ಗಳಿಗೆ ಪೂರೈಕೆ ಮಾಡುತ್ತಿದ್ದನು. ಶಂಕೆ ತಪ್ಪಿಸಲು ಮಹಿಳೆಯನ್ನು ಜೊತೆಗೆ ಇರಿಸಿಕೊಂಡು ಸಾಗಾಟ ನಡೆಸುತ್ತಿದ್ದ ಎಂಬುದು ಬೆಳಕಿಗೆ ಬಂದಿದೆ. ಖಚಿತ ಮಾಹಿತಿ ಸಂಗ್ರಹಿಸಿ ಕಾರ್ಯಾಚರಣೆ ನಡೆಸಿದ ಸಿಸಿಬಿ ತಂಡ ಆರೋಪಿಗಳನ್ನು ಬಂಧಿಸಿ, ಕಂಕನಾಡಿ ನಗರ ಪೊಲೀಸ್…
ಉಡುಪಿ: ಪೊಲೀಸರು ಆರೋಪಿಯನ್ನು ಹುಡುಕುವ ನೆಪದಲ್ಲಿ ಇತರರೊಂದಿಗೆ ಸೇರಿಕೊಂಡು ಕುಮಾರಿ ಅಕ್ಷತಾ ಪೂಜಾರಿ ಅವರ ಮನೆಗೆ ಅಕ್ರಮವಾಗಿ ಪ್ರವೇಶಿಸಿ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿ, ಬಳಿಕ ನಡೆದ ಪೊಲೀಸ್ ಕ್ರಮ ಸಂಪೂರ್ಣವಾಗಿ ಖಂಡನೀಯವಾಗಿದೆ ಎಂದು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಆರೋಪಿಸಿದೆ. ಘಟನೆಯ ವೇಳೆ ಹಲ್ಲೆಗೆ ಒಳಗಾದ ಕುಮಾರಿ ಅಕ್ಷತಾ ಪೂಜಾರಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಅವರು ಬ್ರಹ್ಮಾವರ ಪೊಲೀಸ್ ಠಾಣೆಗೆ ತೆರಳಿ ನಡೆದ ಘಟನೆಯ ಕುರಿತು ಹೇಳಿಕೆ ನೀಡಿದರೂ, ಠಾಣಾಧಿಕಾರಿಗಳು ಆಕೆಯ ದೂರನ್ನು ದಾಖಲಿಸದೆ, ಆರೋಪಿಗಳಾದ ಪೊಲೀಸರನ್ನು ರಕ್ಷಿಸುವ ಉದ್ದೇಶದಿಂದ ಅಕ್ಷತಾ ಪೂಜಾರಿ ಹಾಗೂ ಆಕೆಯ ತಾಯಿಯ ಮೇಲೆ “ಕರ್ತವ್ಯಕ್ಕೆ ಅಡ್ಡಿ” ಎಂಬ ಸುಳ್ಳು ಪ್ರಕರಣ ದಾಖಲಿಸಿರುವುದು ಗಂಭೀರ ಅನ್ಯಾಯವಾಗಿದೆ ಎಂದು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ಮುಖಂಡ ಪ್ರವೀಣ್ ಪೂಜಾರಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ಕಾನೂನಿನ ರಕ್ಷಕರಾಗಿರಬೇಕಾದರೆ, ಇಂತಹ ಅಕ್ರಮ ಪ್ರವೇಶ, ಹಲ್ಲೆ ಹಾಗೂ ನಂತರ ದೂರು ನೀಡಿದ ಮಹಿಳೆಯ ಮೇಲೆಯೇ ಪ್ರತಿಕಾರವಾಗಿ…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
