- ತಂದೆ-ಮಗ ಹತ್ಯೆ ಪ್ರಕರಣದಲ್ಲಿ ಐತಿಹಾಸಿಕ ತೀರ್ಪು ತೂತುಕುಡಿ ಲಾಕಪ್ ಸಾವು ಪ್ರಕರಣ: 9 ಪೊಲೀಸರಿಗೆ ಮರಣದಂಡನೆ
- ಮತದಾನದ ಮಹತ್ವ ಸಾರುವ ಕಂದಮ್ಮ – ಐದು ಭಾಷೆಗಳಲ್ಲಿ ಜಾಗೃತಿ ಮೂಡಿಸುತ್ತಿರುವ ಸನ್ನಿಧಿ
- ಬಾವುಟ ಗುಡ್ಡ ತುಳುನಾಡ ಸ್ವಾತಂತ್ರ್ಯ ದಿನಾಚರಣೆ ಭಕ್ತಿಭಾವದಿಂದ ಆಚರಣೆ – ಅಮರಸುಳ್ಯ ಕ್ರಾಂತಿಯ ಸ್ಮರಣೆ
- ಕಾರ್ಕಳ-ಹೆಬ್ರಿ : ಜೆಡಿಎಸ್ ರಜತ ಮಹೋತ್ಸವ ಭರ್ಜರಿ ಯಶಸ್ಸು – ಜನಸಾಗರದ ನಡುವೆ ಅದ್ದೂರಿ ಸಂಭ್ರಮಾಚರಣೆ
- ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ – 2025-26ರಲ್ಲಿ ರೂ. 3.50 ಕೋಟಿಗೂ ಅಧಿಕ ಲಾಭ
- ಎಸ್ಸಿಡಿಸಿಸಿ ಬ್ಯಾಂಕ್ಗೆ ದಾಖಲೆ ಸಾಧನೆ – ರೂ.20,226 ಕೋಟಿ ವ್ಯವಹಾರ
- 🕯️ ಬಂಟ್ವಾಳದಲ್ಲಿ ಭಕ್ತಿ ಭಾವದಿಂದ ಶುಭ ಶುಕ್ರವಾರ ಆಚರಣೆ
- ಹೇರಾಡಿ ಆದಿಶೇಷನಾಗ ಸನ್ನಿಧಿ ವಾರ್ಷಿಕೋತ್ಸವ: ಪೊಲೀಸರಿಗೆ ಗೌರವ ಸನ್ಮಾನ
Author: Tulunada Surya
ಬೆಂಗಳೂರು : ದಕ್ಷಿಣ ಕನ್ನಡ–ಉಡುಪಿ ಜಿಲ್ಲೆಗಳ ರಾಜಕೀಯ ವಲಯದಲ್ಲಿ ಇಂದು ಗಮನ ಸೆಳೆಯುವ ಬೆಳವಣಿಗೆಯೊಂದು ನಡೆದಿದೆ. ಕೆಲವು ಕಾಲ ಸಕ್ರಿಯ ರಾಜಕಾರಣದಿಂದ ದೂರವಾಗಿದ್ದ ಜನತಾದಳ ಪಕ್ಷದ ಹಳೆಯ ಮುಖಂಡರು ಇದೀಗ ಮತ್ತೆ ರಾಜಕೀಯ ರಂಗ ಪ್ರವೇಶಿಸಿದ್ದು, ಜಿಲ್ಲೆಯ ರಾಜಕೀಯ ಚಟುವಟಿಕೆಗಳಿಗೆ ಹೊಸ ಚೈತನ್ಯ ತುಂಬುವ ಲಕ್ಷಣಗಳು ಕಾಣಿಸುತ್ತಿವೆ. ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಮುಖಂಡರಾಗಿ ಗುರುತಿಸಿಕೊಂಡಿದ್ದ ಶಶಿರಾಜ್ ಶೆಟ್ಟಿ ಕೊಳಂಬೆ ಹಾಗೂ ದಕ್ಷಿಣ ಕನ್ನಡ–ಉಡುಪಿ ಜಿಲ್ಲಾ ವಿದ್ಯಾರ್ಥಿ ಜನತಾದಳದ ಜಿಲ್ಲಾಧ್ಯಕ್ಷರಾಗಿಯೂ, ರಾಜ್ಯ ಸಮಿತಿ ಪದಾಧಿಕಾರಿಯಾಗಿಯೂ ಕಾರ್ಯನಿರ್ವಹಿಸಿದ್ದ ಯೋಗಿಶ್ ಶೆಟ್ಟಿ ಜಪ್ಪು ಅವರು ಅಧಿಕೃತವಾಗಿ Janata Dal (Secular) ಪಕ್ಷಕ್ಕೆ ಮರು ಸೇರ್ಪಡೆಗೊಂಡಿದ್ದಾರೆ. ಈ ಇಬ್ಬರು ನಾಯಕರು ಹಿಂದೆ ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿ ಸಂಘಟನೆಯ ಬಲವರ್ಧನೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಆದರೆ ಕೆಲ ಕಾರಣಗಳಿಂದ ಸಕ್ರಿಯ ರಾಜಕಾರಣದಿಂದ ಹಿಂದೆ ಸರಿದಿದ್ದರು. ಇದೀಗ ಪಕ್ಷದ ಸಿದ್ಧಾಂತ, ನಾಯಕತ್ವ ಹಾಗೂ ಕಾರ್ಯಪದ್ಧತಿಗಳ ಮೇಲೆ ಮತ್ತೊಮ್ಮೆ ನಂಬಿಕೆ ವ್ಯಕ್ತಪಡಿಸಿ ರಾಜಕೀಯ ಬದುಕಿನ ಹೊಸ ಅಧ್ಯಾಯಕ್ಕೆ ಚಾಲನೆ…
ಮಂಗಳೂರು: ನಗರದ ಪಿ.ಎ. ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಆಯಿಷತ್ ಲುತ್ಫಾ ನಜಾ ಕೆ.ಎ. ಅವರು ಬಿ.ಎಸ್.ಸಿ. (ಆಹಾರ, ಪೋಷಣಾ ವಿಜ್ಞಾನ ಮತ್ತು ಡಯಟೆಟಿಕ್ಸ್) ಪದವಿ ಪರೀಕ್ಷೆಯಲ್ಲಿ ಪ್ರಥಮ ರ್ಯಾಂಕ್ ಗಳಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಒಟ್ಟು 4550 ಅಂಕಗಳಲ್ಲಿ 4220 ಅಂಕಗಳನ್ನು ಪಡೆದಿರುವ ಅವರು ಶೇಕಡಾ 92.75 ಫಲಿತಾಂಶದೊಂದಿಗೆ 9.56 ಸಿಜಿಪಿಎ (CGPA) ದಾಖಲಿಸಿ ಅತ್ಯುತ್ತಮ ಶೈಕ್ಷಣಿಕ ಸಾಧನೆ ಮೆರೆದಿದ್ದಾರೆ. ತಮ್ಮ ನಿರಂತರ ಪರಿಶ್ರಮ ಮತ್ತು ಗುರಿಯುತ ಅಧ್ಯಯನದ ಫಲವಾಗಿ ಈ ಯಶಸ್ಸು ಸಾಧ್ಯವಾಗಿದೆ. ಈ ಗಣನೀಯ ಸಾಧನೆಗಾಗಿ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿ, ಮುಂದಿನ ವಿದ್ಯಾಭ್ಯಾಸದಲ್ಲಿಯೂ ಹೆಚ್ಚಿನ ಯಶಸ್ಸು ದೊರಕಲಿ ಎಂದು ಹಾರೈಸಿದ್ದಾರೆ. ಕುಮಾರಿ ಲುತ್ಫಾ ಅವರು ಕಾಸರಗೋಡು ಜಿಲ್ಲೆಯ ತೆಕ್ಕಿಲ್ ನಿವಾಸಿಗಳಾದ ಶ್ರೀ ಅಬ್ದುಲ್ಲ ಕೆ ಹಾಗೂ ಶ್ರೀಮತಿ ಆಯಿಶತ್ ಫರೀದಾ ಅವರ ಪುತ್ರಿ. ಪ್ರಸ್ತುತ ಅವರು ಮಂಗಳೂರು ವಿಶ್ವವಿದ್ಯಾಲಯದ ಮಂಗಳಗಂಗೋತ್ರಿ ಕ್ಯಾಂಪಸ್ನಲ್ಲಿ ಆಹಾರ ವಿಜ್ಞಾನ ಮತ್ತು ಪೋಷಣಾ…
ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಘಟನೆ ಬಲಪಡಿಸುವ ಉದ್ದೇಶದಿಂದ ಜಿಲ್ಲಾ ಓಬಿಸಿ ಮೋರ್ಚಾ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಪಕ್ಷದ ಜಿಲ್ಲಾ ಅಧ್ಯಕ್ಷರಾದ ಸತೀಶ್ ಕುಂಪಲ ತಿಳಿಸಿದ್ದಾರೆ. ಜಿಲ್ಲಾ ಓಬಿಸಿ ಮೋರ್ಚಾದ ಅಧ್ಯಕ್ಷರಾಗಿ ಮಹೇಶ್ ಜೋಗಿ ಅವರನ್ನು ನೇಮಕ ಮಾಡಲಾಗಿದೆ. ಉಪಾಧ್ಯಕ್ಷರಾಗಿ ದಿನೇಶ್ ಉಚ್ಚಿಲ, ವಸಂತ್ ಹೊಸಬೆಟ್ಟು, ರಾಘವೇಂದ್ರ ರಾವ್, ಪುರುಷೋತ್ತಮ ಸಾಲ್ಯಾನ್ ಹಾಗೂ ಚಂದ್ರಹಾಸ ರಾವ್ ತಾರನಾಥ್ ಕಂಪ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಧಾನ ಕಾರ್ಯದರ್ಶಿಗಳಾಗಿ ಮೋನಪ್ಪ ದೇವಸ್ಯ ಶಶ್ದರ ಕಲ್ಮಂಜ ಮತ್ತು ಬಾಲಕೃಷ್ಣ ಅವರನ್ನು ನೇಮಕ ಮಾಡಲಾಗಿದೆ. ಕಾರ್ಯದರ್ಶಿಗಳಾಗಿ ಕಿಶೋರ್ ಬಾಬು, ಶ್ರೀಮತಿ ದೀಪಿಕಾ ಮನೋಜ್, ರವಿ ಸೋವುರು, ಸಂಪತ್ ಕುಕ್ಯನ್ ಮತ್ತು ಚಂದ್ರಶೇಖರ್ ಪನ್ನೆ ಅವರು ಜವಾಬ್ದಾರಿ ವಹಿಸಲಿದ್ದಾರೆ. ಖಜಾಂಚಿಯಾಗಿ ಸತೀಶ್ ದೇವಾಡಿಗ ಅವರನ್ನು ನೇಮಕ ಮಾಡಲಾಗಿದೆ. ಜಿಲ್ಲಾ ಪ್ರಾಭಾರಿಯನ್ನಾಗಿ ಸೀತಾರಾಮ್ ಬೆಳಾಲ್ ರವರನ್ನು ನೇಮಕ ಮಾಡಲಾಗಿದೆ ನೂತನ ಪದಾಧಿಕಾರಿಗಳು ಪಕ್ಷದ ಸಂಘಟನೆ ಬಲವರ್ಧನೆ, ಓಬಿಸಿ ಸಮುದಾಯದ ಹಕ್ಕುಗಳು ಹಾಗೂ ಅಭಿವೃದ್ಧಿ ಕುರಿತ ವಿಚಾರಗಳಲ್ಲಿ…
ಬೆಂಗಳೂರು: ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಪ್ರಸ್ತಾಪದ ಹಿನ್ನೆಲೆ, ಆಂಧ್ರಪ್ರದೇಶದಲ್ಲಿ ಹೆಚ್ಚುವರಿ ಅಧಿಕೃತ ಭಾಷೆ ಘೋಷಣೆಯ ಸಂದರ್ಭದಲ್ಲಿ ಅನುಸರಿಸಿದ ಮಾನದಂಡಗಳ ಅಧ್ಯಯನಕ್ಕಾಗಿ ಸರ್ಕಾರ ನೇಮಿಸಿದ್ದ ಸಮಿತಿ ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಂದಿನ ನಿರ್ದೇಶಕಿ ಕೆ.ಎಂ. ಗಾಯತ್ರಿ ಅವರ ಅಧ್ಯಕ್ಷತೆಯಲ್ಲಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಅವರ ಉಪಸ್ಥಿತಿಯಲ್ಲಿ ಆರು ಸದಸ್ಯರ ಸಮಿತಿ ರಚಿಸಲಾಗಿತ್ತು. ಸಮಿತಿಯು ಜನವರಿ 19 ಮತ್ತು 20ರಂದು ಆಂಧ್ರಪ್ರದೇಶ ರಾಜ್ಯದ ಸಚಿವಾಲಯ ಹಾಗೂ ವಿವಿಧ ಇಲಾಖೆಗಳು ಮತ್ತು ಕಚೇರಿಗಳಿಗೆ ಭೇಟಿ ನೀಡಿ, ಅಲ್ಲಿ ಉರ್ದು ಭಾಷೆಯನ್ನು ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ವೇಳೆ ಅನುಸರಿಸಿದ ವಿಧಿವಿಧಾನಗಳು ಮತ್ತು ಆಡಳಿತಾತ್ಮಕ ಮಾನದಂಡಗಳ ಬಗ್ಗೆ ವಿವರವಾದ ಅಧ್ಯಯನ ನಡೆಸಿತು. ಅಧ್ಯಯನದ ಬಳಿಕ ಸಿದ್ಧಪಡಿಸಿದ ವರದಿಯನ್ನು ವಿಕಾಸ ಸೌಧದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಜೆ. ಮಂಜುನಾಥ್ ಅವರಿಗೆ ಸಮಿತಿ ಸದಸ್ಯರು ಅಧಿಕೃತವಾಗಿ ಸಲ್ಲಿಸಿದರು.…
🌼 ಬಂಗಾರಿ ಪರ್ಬೊದ ಸಭಿ ನೆನಪು – 2026 🌼 (56ನೇ ವರ್ಷದ ಕಡೀರ್ದ ತುಳು ಸಂಘಟನೆ) 📅 ದಿನಾಂಕ: 09–03–2026, ಸೋಮವಾರ⏰ ಸಮಯ: ಕಾಂಡೆ 10.00 ಗಂಟೆ – ಮಧ್ಯಾಹ್ನ 1.00 ಗಂಟೆ📍 ಸ್ಥಳ: ಮಂಗಳೂರು ಥಿಯೋಸೋಫಿಕಲ್ ಸೊಸೈಟಿ (ರಿ.), ಪಿ.ವಿ.ಎಸ್. ವೃತ್ತದ ಬಳಿ ⸻ ಗುರ್ಕಾರ್ ಶ್ರೀಮತಿ ಹೇಮಾ ದಾಮೋದರ ನಿಸರ್ಗಗುರ್ಕಾರ್, ತುಳುನಾಡ ಕೂಟ (ರಿ.), ಕುಡ್ಲ ⸻ ಉದ್ಘಾಟನೆ ಶ್ರೀಮತಿ ಪಿ. ಕೆ. ಗೌರವಿ ರಾಜಶೇಖರ್ಉದ್ಯಮಿ ಹಾಗೂ ಅಭಿವೃದ್ಧಿ ಸಮಿತಿ ಸದಸ್ಯರುಶ್ರೀ ಗೋಕರ್ನ ನಾಥ ಕ್ಷೇತ್ರ, ಕೂದ್ರೋಳಿ, ಮಂಗಳೂರು ⸻ ಗಣ್ಯ ಅತಿಥಿಗಳು ಶ್ರೀ ನಿತ್ಯಾನಂದ ಶೆಟ್ಟಿ, ತುಪ್ಪೆಕಲ್ಉದ್ಯಮಿಗುರ್ಕಾರ್, ಮಂಗಳೂರು ಥಿಯೋಸೋಫಿಕಲ್ ಸೊಸೈಟಿ (ರಿ.) ಶ್ರೀಮತಿ ಕುಸುಮಾ ಹೆಚ್. ದೇವಾಡಿಗಅಧ್ಯಕ್ಷರು, ಜಿಲ್ಲಾ ಸಣ್ಣ ಕೈಗಾರಿಕಾ ಸಂಘ ⸻ 🎭 ಸಾಂಸ್ಕೃತಿಕ ಕಾರ್ಯಕ್ರಮ 🎭 ಶ್ರೀಮತಿ ಬಾಲಿನಿ ಎಸ್. ಕರ್ಕೇರ ಹಾಗೂ ತಂಡ ಇವರಿಂದ‘ಸತ್ಯದಪ್ಪೆ ದೇಯಿ ಬೈದೆದಿ’ಎಂಬ ಕಿರು ರೂಪಕ ಪ್ರದರ್ಶನ ⸻ ✍️ ಮಾತೆರ್ನಾ ಮೋಕೆಡ್ ಎದ್ಕೊನುನ•…
ದಕ್ಷಿಣ ಬೆಂಗಳೂರಿನ ಖಾಸಗಿ ಆಸ್ಪತ್ರೆಯ ಹಿರಿಯ ಅಧಿಕಾರಿಯೊಬ್ಬರ ವಿರುದ್ಧ ಅತ್ಯಾಚಾರ ಹಾಗೂ ಕ್ರಿಮಿನಲ್ ಬೆದರಿಕೆ ಆರೋಪದಡಿ ಪ್ರಕರಣ ದಾಖಲಾಗಿರುವ ಘಟನೆ ಬೆಳಕಿಗೆ ಬಂದಿದೆ. ಸಂಸ್ಥೆಯ ಮಾಜಿ ಮಹಿಳಾ ನೌಕರಿಯೊಬ್ಬರು ಅಧಿಕೃತ ಸಭೆಗಳ ನೆಪದಲ್ಲಿ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾದ ದೂರಿನ ಪ್ರಕಾರ, ಜಯನಗರದ ಅಶೋಕ ಪಿಲ್ಲರ್ ಸಮೀಪದಲ್ಲಿರುವ ಖಾಸಗಿ ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕ ತ್ರಿವಿಕ್ರಮ್ ರಾವ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸುಮಾರು ಮೂರು ತಿಂಗಳ ಹಿಂದೆ ಸಂಸ್ಥೆಗೆ ಸೇರಿದ್ದ ಮಹಿಳೆಯನ್ನು ವಿವಿಧ ಗ್ರಾಹಕರ ಹಾಗೂ ಹೂಡಿಕೆದಾರರ ಸಭೆಗಳಿಗೆ ತನ್ನೊಂದಿಗೆ ಬರಲು ಅವರು ಒತ್ತಾಯಿಸುತ್ತಿದ್ದರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.ದೂರುದಾರಿಯ ಪ್ರಕಾರ, ವೃತ್ತಿಪರ ಚರ್ಚೆಗಳ ಹೆಸರಿನಲ್ಲಿ ಖಾಸಗಿ ಸ್ಥಳಗಳಲ್ಲಿ ಭೇಟಿಯಾಗಲು ಕರೆಸಿಕೊಂಡು, ಅನಾಚಾರ ವರ್ತನೆ ತೋರಲಾಗುತ್ತಿತ್ತು. ಕೆಲವೊಮ್ಮೆ ಕಚೇರಿ ಹೊರಗಿನ ಸಭೆಗಳ ಹೆಸರಿನಲ್ಲಿ ತಾರಾ ಹೋಟೆಲ್ಗಳಿಗೆ ಕರೆದೊಯ್ಯಲಾಗುತ್ತಿತ್ತು ಎಂದು ಅವರು ಆರೋಪಿಸಿದ್ದಾರೆ. ಒಂದು ಸಂದರ್ಭದಲ್ಲಿ ಎಂ.ಜಿ. ರಸ್ತೆಯ ಓಬೆರಾಯ್ ಹೋಟೆಲ್ನ ಕೊಠಡಿಯಲ್ಲಿ ತನ್ನ ಮೇಲೆ ಅತ್ಯಾಚಾರ…
ಮಲ್ಪೆ: ಉಡುಪಿ ಜಿಲ್ಲೆಯ ಹಿಂದೂ ಸಂಘಟನೆಯ ಮುಖಂಡರಾದ ಮಂಜು ಕೊಳ ಅವರ ಮೇಲೆ ಮಂಗಳವಾರ ರಾತ್ರಿ ಮಲ್ಪೆ ಬೀಚ್ ಸಮೀಪ ಚೂರಿ ಇರಿತ ನಡೆದ ಘಟನೆ ಸಂಭವಿಸಿದೆ. ಗಾಯಗೊಂಡ ಅವರನ್ನು ತಕ್ಷಣವೇ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಮಂಜು ಕೊಳ ಅವರು ಹಿಂದೂ ಯುವಸೇನೆಯ ಮುಖಂಡರಾಗಿದ್ದು, ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಅವರ ಪತಿಯಾಗಿದ್ದಾರೆ. ಬೀಚ್ ಬಳಿ ಜೋಡಿಯೊಂದರ ಪ್ರೇಮ ಸಂಬಂಧಿತ ವಿಚಾರವಾಗಿ ರಾಜಿ ಪಂಚಾಯಿತಿ ನಡೆಸಲು ಅವರು ತೆರಳಿದ್ದ ವೇಳೆ ವಾಗ್ವಾದ ಜಗಳಕ್ಕೆ ತಿರುಗಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಧನುಷ್ ಎಂಬ ಯುವಕನ ವಿಚಾರದಲ್ಲಿ ಮಾತಿನ ಚಕಮಕಿ ತೀವ್ರಗೊಂಡು, ಯುವಕನೊಬ್ಬ ಹೊಟ್ಟೆ ಭಾಗಕ್ಕೆ ಚೂರಿ ಇರಿದಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ತೀವ್ರವಾಗಿ ಗಾಯಗೊಂಡ ಮಂಜು ಕೊಳ ಅವರು ಅಲ್ಲೇ ಕುಸಿದಿದ್ದು, ತಕ್ಷಣ ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದ್ದಾರೆ. ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಆದರ್ಶ್…
ಮಂಗಳೂರು: ನಿರಂತರ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ bunt community federation indiaറ് ಮುಲ್ಕಿಯಲ್ಲಿ ನಿರ್ಮಾಣಗೊಳ್ಳುತ್ತಿರುವ “ಡಾ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣ” ಕಾಮಗಾರಿಯನ್ನು ತ್ವರಿತಗತಿಯಲ್ಲಿ ಮುಂದುವರಿಸಿದೆ. ಡಿಸೆಂಬರ್ ತಿಂಗಳಲ್ಲಿ ಸಂಕೀರ್ಣವನ್ನು ಸಾರ್ವಜನಿಕರಿಗೆ ಸಮರ್ಪಿಸಲಾಗುವುದು ಎಂದು ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ತಿಳಿಸಿದ್ದಾರೆ. ಮಂಗಳೂರಿನ ಬಂಟ್ಸ್ ಹಾಸ್ಟೆಲ್ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ನಡೆದ ಒಕ್ಕೂಟದ ಆಡಳಿತ ಮಂಡಳಿ ಸಭೆಯಲ್ಲಿ ಮಾತನಾಡಿದ ಅವರು, ಮಹಾದಾನಿ ಡಾ. ಕನ್ಯಾನ ಸದಾಶಿವ ಶೆಟ್ಟಿಯವರ ಆಶಯ ಮತ್ತು ಆಶೀರ್ವಾದದಿಂದ ಸಂಕೀರ್ಣದ ಕಾಮಗಾರಿ ವೇಗವಾಗಿ ಸಾಗುತ್ತಿದೆ ಎಂದರು. ಸಂಕೀರ್ಣದ ಸೌಲಭ್ಯಗಳು ನಿರ್ಮಾಣ ಹಂತದಲ್ಲಿರುವ ಸಂಕೀರ್ಣದಲ್ಲಿ• ಶ್ರೀಮತಿ ಶಶಿರೇಖಾ ಆ ಶೆಟ್ಟಿ ವೇದಿಕೆ• ಕಿರು ಸಭಾಂಗಣ• ಧರ್ಮಚಾವಡಿ• ಪ್ರವೀಣ್ ಭೋಜ ಶೆಟ್ಟಿ ಆಡಳಿತ ಕಚೇರಿ ಇತ್ಯಾದಿ ವ್ಯವಸ್ಥೆಗಳು ಇರಲಿವೆ. ಸಭೆಯನ್ನು ಒಕ್ಕೂಟದ ಮಹಾ ನಿರ್ದೇಶಕ ತೋನ್ಸೆ ಆ ಶೆಟ್ಟಿ ಉದ್ಘಾಟಿಸಿದರು. 40 ವರ್ಷಗಳ ಇತಿಹಾಸ ಹೊಂದಿರುವ ಒಕ್ಕೂಟ, ಐಕಳ ಹರೀಶ್ ಶೆಟ್ಟಿ ಅವರ ನೇತೃತ್ವದಲ್ಲಿ ಹೊಸ ಚೈತನ್ಯ ಪಡೆದುಕೊಂಡಿದೆ. ಬಡವರು…
ಮಂಗಳೂರು, ಮಾ.02: ದ.ಕ ಜಿಲ್ಲೆಯಲ್ಲಿ ಲಂಚದ ಆರೋಪದ ಮೇರೆಗೆ ಮಂಗಳೂರು ವಿಭಾಗದ ಲೋಕಾಯುಕ್ತ ಪೊಲೀಸರು ಮತ್ತೊಂದು ಯಶಸ್ವಿ ಬಲೆ ಬೀಸಿದ್ದಾರೆ. ಕರ್ನಾಟಕ ಸರ್ಕಾರದ ಮಾನ್ಯತೆ ಪಡೆದ ಪ್ರಥಮ ದರ್ಜೆ ಇಲೆಕ್ಟ್ರಿಕಲ್ ಗುತ್ತಿಗೆದಾರರಾಗಿರುವ ಫಿರ್ಯಾದುದಾರರು 2025ನೇ ಸಾಲಿನಲ್ಲಿ ಉಡುಪಿ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ದಾರಿ ದೀಪ ವಿಸ್ತರಣೆಯ ಸರ್ಕಾರಿ ಕಾಮಗಾರಿಗಳನ್ನು ನಿರ್ವಹಿಸಿದ್ದರು. ಈ ಕಾಮಗಾರಿಗಳ ಬಿಲ್ ಪಾವತಿಗಾಗಿ 4 ಶೇಕಡಾ ಪ್ರಮಾಣದಲ್ಲಿ ರೂ.22,600/- ಲಂಚ ನೀಡುವಂತೆ ಮಂಗಳೂರು ಲೋಕೋಪಯೋಗಿ ಇಲಾಖೆಯ ವಿದ್ಯುತ್ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಸ್ಡಿಎ ಸಂಪತ್ ಬೇಡಿಕೆ ಇಟ್ಟಿದ್ದರೆಂದು ಆರೋಪಿಸಲಾಗಿದೆ. ಈ ಕುರಿತು ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಲಾಗಿತ್ತು. ಇಂದು (02.03.2026) ಆರೋಪಿತ ಎಸ್ಡಿಎ ಸಂಪತ್ ಅವರು ಫಿರ್ಯಾದುದಾರರಿಂದ ರೂ.22,600/- (ಇಪ್ಪತ್ತೆರಡು ಸಾವಿರದ ಆರು ನೂರು) ಲಂಚದ ಹಣ ಸ್ವೀಕರಿಸುವ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾರೆ. ತಕ್ಷಣವೇ ಅವರನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಲಾಗಿದೆ. ಈ…
ಕಾಪು: ಉಡುಪಿ ತಾಲೂಕಿನ ಬೈರಂಪಳ್ಳಿ ಗ್ರಾಮದ ಪಂಚಾಯತ್ ವ್ಯಾಪ್ತಿಯ ಸರ್ವೇ ನಂ. 82/3 ರಲ್ಲಿರುವ ಬೆಳ್ಳರ್ಪಾಡಿ ಮಾಣೈ ಹರಿಖಂಡಿಗೆ ರಸ್ತೆ ಪಕ್ಕ ಸುಂದರ ಪೂಜಾರಿ ಮತ್ತು ಶ್ರೀನಿವಾಸ ಪೂಜಾರಿ ಅವರ ಮನೆಗಳ ಸಮೀಪದ 0.79 ಎಕರೆ ಸರಕಾರಿ ಜಾಗವನ್ನು ಶಾಲಾ ಮಕ್ಕಳ ಹಾಗೂ ಗ್ರಾಮಸ್ಥರ ಕ್ರೀಡಾಂಗಣವಾಗಿ ಶಾಶ್ವತವಾಗಿ ಕಾಯ್ದಿರಿಸಲು ತುಳುನಾಡ ರಕ್ಷಣಾ ವೇದಿಕೆ ಕಾಪು ತಾಲೂಕು ಘಟಕದ ವತಿಯಿಂದ ಜಿಲ್ಲಾಧಿಕಾರಿ ಮತ್ತು ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು. ಸುಮಾರು 35 ವರ್ಷಗಳಿಂದ ಮಾತ್ರ ಫ್ರೆಂಡ್ಸ ಸಹಯೋಗದೊಂದಿಗೆ ಈ ಜಾಗವನ್ನು ಗ್ರಾಮಸ್ಥರು ಕ್ರೀಡಾಂಗಣವಾಗಿ ಉಪಯೋಗಿಸಿಕೊಂಡು ಬರುತ್ತಿದ್ದಾರೆ. ಸ್ಥಳೀಯ ಮಕ್ಕಳಿಗೆ, ಯುವಕರಿಗೆ ಹಾಗೂ ಸಾರ್ವಜನಿಕ ಕ್ರೀಡಾ ಚಟುವಟಿಕೆಗಳಿಗೆ ಈ ಮೈದಾನ ಅತ್ಯಂತ ಅಗತ್ಯವಾಗಿದೆ. ಗ್ರಾಮದಲ್ಲಿ ಪ್ರತ್ಯೇಕ ಕ್ರೀಡಾಂಗಣದ ವ್ಯವಸ್ಥೆ ಇಲ್ಲದಿರುವುದರಿಂದ ಈ ಜಾಗವೇ ಎಲ್ಲರಿಗೂ ಏಕೈಕ ಮೈದಾನವಾಗಿದ್ದು, ಗ್ರಾಮಸ್ಥರ ಹಿತದೃಷ್ಟಿಯಿಂದ ಇದನ್ನು ಶಾಶ್ವತವಾಗಿ ಕ್ರೀಡಾಂಗಣವಾಗಿ ಉಳಿಸಬೇಕೆಂದು ಒತ್ತಾಯಿಸಲಾಗಿದೆ. ಈ ಸಂಬಂಧ ಬೈರಂಪಳ್ಳಿ ಗ್ರಾಮ ಪಂಚಾಯತ್ 17.07.2014 ರಂದು ನಡೆದ ಸಭೆಯಲ್ಲಿ ನಿರ್ಣಯ ಸಂಖ್ಯೆ 3/14-15 ರಂತೆ…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
