- ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲಿನ ಹಲ್ಲೆ ಖಂಡನೀಯ: ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಉಡುಪಿ ಪತ್ರಕರ್ತರ ಸಂಘ ಆಗ್ರಹ
- ಆರೂರು ಅಡ್ಜಿಲು ಭಾಗದ ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಮೆಸ್ಕಾಂ ಒಂದು ತಿಂಗಳೊಳಗೆ ಹೊಸ ಟಿಸಿ ಅಳವಡಿಸುವ ಭರವಸೆ – ತುಳುನಾಡು ರಕ್ಷಣಾ ವೇದಿಕೆ ಆಗ್ರಹ
- ಆಗಸ್ಟ್ 23ರಂದು ಮಂಗಳೂರಿನಲ್ಲಿ ಅಂತರರಾಷ್ಟ್ರೀಯ ಬಂಟ್ಸ್ ವೆಲ್ಫೇರ್ ಟ್ರಸ್ಟ್ ವತಿಯಿಂದ “ಮರಿಯಾಳದ ಮಿನದನ” ಪೂರ್ವಭಾವಿ ಸಭೆ
- ₹5 ಕೋಟಿ ನಕಲಿ ಔಷಧಿ ಜಾಲ ಬಯಲು: ಫಾರ್ಮ್ಹೌಸ್ನಲ್ಲಿ ನಡೆಯುತ್ತಿದ್ದ ಅಕ್ರಮ ದಂಧೆಗೆ ಅಧಿಕಾರಿಗಳ ದಾಳಿ ಪ್ರತಿಷ್ಠಿತ ಕಂಪನಿಗಳ ಹೆಸರಿನಲ್ಲಿ ನಕಲಿ ಲೇಬಲ್ ಅಂಟಿಸಿ ಔಷಧಿಗಳ ಮರುಪ್ಯಾಕಿಂಗ್ – ಅವಧಿ ಮೀರಿದ ಔಷಧಿಗಳೂ ಪತ್ತೆ
- ಉಡುಪಿ: ತುಳುನಾಡಿನ ಸಂಸ್ಕೃತಿ, ಪರಂಪರೆ ಉಳಿಸುವುದು ಪ್ರತಿಯೊಬ್ಬರ ಜವಾಬ್ದಾರಿ: ಸೂರಜ್ ನಾಯಕ್ ಸೋನಿ
- INDIA through my EYES’ ಚಿತ್ರಕಲಾ ಸ್ಪರ್ಧೆಯಲ್ಲಿ ಚಿನ್ಮಯಿ ಎಸ್. ವಿಜೇತೆ
- ಕರಂಬಾರು ಶಾಲೆಯಲ್ಲಿ ಸಂಭ್ರಮ ಸಡಗರದಿಂದ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ
- ಕೋರ್ದಬ್ಬು ದೈವದ ಪಾತ್ರಿ ಸೀನ ಪಾತ್ರಿ ನಂದಿಕೂರು ಮೆರೆಗ್ ತುಳು ಕಲ್ಚರಲ್ ರಿಸರ್ಚ್ ಫೌಂಡೇಶನ್ದ “ತುಳುವಾಲ ಕುಲಸಿರಿ – 2026” ಪ್ರಶಸ್ತಿ ಘೋಷಣೆ
Author: Tulunada Surya
ಉಡುಪಿ: ಬ್ರಹ್ಮಾವರ ಸಮೀಪದ ಕಲ್ಲುಗೊಳಿ ಸರ್ಕಾರಿ ಹಾಡಿಯಲ್ಲಿ ಅಕ್ರಮವಾಗಿ ಅಂದರ್-ಬಾಹರ್ ಇಸ್ಪೀಟು ಜೂಜಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಆಧರಿಸಿ ಬ್ರಹ್ಮಾವರ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ದಾಳಿ ವೇಳೆ ಉಳಿದ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಬಂಧಿತರನ್ನು ಸುಕೇಶ್ ಶೆಟ್ಟಿ ಹಾಗೂ ಪ್ರತಾಪ್ ಶೆಟ್ಟಿ ಎಂದು ಗುರುತಿಸಲಾಗಿದ್ದು, ವಿಜಯ ನಾಯ್ಕ್ ಮುದ್ದುಮನೆ, ಗಣೇಶ್ ಬೆಳ್ವೆ, ಬಾಲಕೃಷ್ಣ ಕೀರಾಡಿ ಸೇರಿದಂತೆ ಇನ್ನಿತರರು ಪರಾರಿಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಜುಲೈ 19ರಂದು ಬ್ರಹ್ಮಾವರ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪನಿರೀಕ್ಷಕ ಜಯಕರ ಎ. ಅವರಿಗೆ ದೊರೆತ ಮಾಹಿತಿಯಂತೆ, 34ನೇ ಕುದಿ ಗ್ರಾಮದ ನುಕ್ಕೂರು ವ್ಯಾಪ್ತಿಯ ಕಲ್ಲುಗೊಳಿ ಸರ್ಕಾರಿ ಹಾಡಿಯಲ್ಲಿ ಹಣವನ್ನು ಪಣಕ್ಕಿಟ್ಟು ಜೂಜಾಟ ನಡೆಯುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಲಾಯಿತು. ಪೊಲೀಸರು ಸ್ಥಳಕ್ಕೆ ತಲುಪುತ್ತಿದ್ದಂತೆಯೇ ಜೂಜಾಟದಲ್ಲಿ ತೊಡಗಿದ್ದವರು ಓಡಿಹೋಗಲು ಯತ್ನಿಸಿದ್ದು, ಸಿಬ್ಬಂದಿ ಸುಕೇಶ್ ಶೆಟ್ಟಿ ಮತ್ತು ಪ್ರತಾಪ್ ಶೆಟ್ಟಿಯನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾದರು. ಆರೋಪಿಗಳಿಂದ ಜೂಜಾಟಕ್ಕೆ ಬಳಸಲಾಗಿದ್ದ ₹21,700 ನಗದು, ಇಸ್ಪೀಟು ಎಲೆಗಳು, ಒಂದು ಕಂದು…
ಉಡುಪಿ, ಜುಲೈ 21: ಬಂಟ್ವಾಳದ ಬಿ.ಸಿ.ರೋಡ್ನಲ್ಲಿ ನಡೆದ ಯುವತಿ ಲಾವಣ್ಯ ಅವರ ಅಮಾನುಷ ಹತ್ಯೆ ಪ್ರಕರಣದ ಆರೋಪಿಗೆ ಕಾನೂನು ಪ್ರಕಾರ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು, ಪ್ರಕರಣದ ತನಿಖೆಯನ್ನು ತ್ವರಿತ ಹಾಗೂ ನಿಷ್ಪಕ್ಷಪಾತವಾಗಿ ಪೂರ್ಣಗೊಳಿಸಿ ಮೃತೆಯ ಕುಟುಂಬಕ್ಕೆ ನ್ಯಾಯ ಹಾಗೂ ಸೂಕ್ತ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿ ತುಳುನಾಡ ರಕ್ಷಣಾ ವೇದಿಕೆ – ಉಡುಪಿ ಜಿಲ್ಲಾ ಮಹಿಳಾ ಘಟಕದ ವತಿಯಿಂದ ಸ್ಥಾಪಕ ಅದ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪುರವರ ಮತ್ತು ಜಿಲ್ಲಾದ್ಯಕ್ಷ ಫ್ರಾಂಕಿ ಡಿಸೋಜ ರವರ ಉಪಸ್ಥಿತಿಯಲ್ಲಿ ಜಿಲ್ಲಾ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ನಾಗಲಕ್ಷ್ಮಿ ಅವರ ನೇತೃತ್ವದಲ್ಲಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಭೇಟಿ ನೀಡಿದ ಪದಾಧಿಕಾರಿಗಳು, ಬಿ.ಸಿ.ರೋಡ್ನಲ್ಲಿ ನಡೆದ ಈ ಬರ್ಬರ ಹತ್ಯೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದು, ಮಹಿಳೆಯರ ಸುರಕ್ಷತೆ ಕುರಿತು ಗಂಭೀರ ಆತಂಕ ಮೂಡಿಸಿದೆ ಎಂದು ತಿಳಿಸಿದರು. ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಿರುವುದು ಸ್ವಾಗತಾರ್ಹವಾದರೂ, ಕೇವಲ ಬಂಧನದಿಂದ ನ್ಯಾಯ ಪೂರ್ಣಗೊಳ್ಳುವುದಿಲ್ಲ. ಯಾವುದೇ ಒತ್ತಡಗಳಿಗೆ ಮಣಿಯದೆ…
ಮಂಗಳೂರು, ಜುಲೈ 20: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಅಬ್ಬರದ ನಡುವೆ ಸೋಮವಾರ ಮಧ್ಯಾಹ್ನ ಬಾವುಟಗುಡ್ಡೆಯ ಅಲೋಶಿಯಸ್ ಕಾಲೇಜು ಸಮೀಪದ ಒಳ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರವೊಂದು ಉರುಳಿ ಬಿದ್ದ ಘಟನೆ ಸಂಭವಿಸಿದೆ. ಮರವು ಕಾರಿನ ಹಿಂಭಾಗದ ಮೇಲೆ ಬಿದ್ದ ಪರಿಣಾಮ ವಾಹನಕ್ಕೆ ತೀವ್ರ ಹಾನಿಯಾಗಿದ್ದು, ಸಮೀಪದಲ್ಲಿದ್ದ ಕ್ಯಾಂಟೀನ್ನ ಮೇಲ್ಛಾವಣಿಗೂ ಹಾನಿಯಾಗಿದೆ. ಆದರೆ ಕಾರಿನ ಚಾಲಕರು ಯಾವುದೇ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿರುವುದು ದೊಡ್ಡ ದುರಂತವೊಂದು ತಪ್ಪಿದಂತಾಗಿದೆ. ಘಟನೆಯ ಪರಿಣಾಮ ಕೆಲಕಾಲ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಮಾಹಿತಿ ತಿಳಿಯುತ್ತಿದ್ದಂತೆಯೇ ಪಾಂಡೇಶ್ವರ ಅಗ್ನಿಶಾಮಕ ದಳ, ಎಸ್ಡಿಆರ್ಎಫ್ (SDRF), ಮೆಸ್ಕಾಂ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಮರವನ್ನು ತೆರವುಗೊಳಿಸಿ ವಾಹನ ಸಂಚಾರವನ್ನು ಪುನಃ ಸುಗಮಗೊಳಿಸಿದರು. ನಗರದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ದುರ್ಬಲಗೊಂಡಿರುವ ಮರಗಳು ಯಾವಾಗ ಬೇಕಾದರೂ ಉರುಳುವ ಸಾಧ್ಯತೆ ಇರುವುದರಿಂದ, ಮರಗಳ ಸಮೀಪ ವಾಹನ ನಿಲ್ಲಿಸುವುದು ಹಾಗೂ ಸಂಚರಿಸುವುದನ್ನು ಸಾಧ್ಯವಾದಷ್ಟು ತಪ್ಪಿಸಿ ಎಚ್ಚರಿಕೆಯಿಂದ ಇರಬೇಕೆಂದು ಅಧಿಕಾರಿಗಳು ಸಾರ್ವಜನಿಕರಿಗೆ ಮನವಿ…
ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡರವರ ಧರ್ಮಪತ್ನಿ, ಮಾತೃಸ್ವರೂಪಿ ಶ್ರೀಮತಿ ಚೆನ್ನಮ್ಮ ದೇವೇಗೌಡರವರ ನಿಧನಕ್ಕೆ ಸುಳ್ಯ ತಾಲೂಕು ಜನತಾದಳ (ಜಾತ್ಯತೀತ) ಘಟಕ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಸರಳತೆ, ಸೌಮ್ಯತೆ, ಧರ್ಮನಿಷ್ಠೆ, ಸಂಸ್ಕಾರ ಹಾಗೂ ಕುಟುಂಬ ಮೌಲ್ಯಗಳ ಪ್ರತಿರೂಪವಾಗಿದ್ದ ಶ್ರೀಮತಿ ಚೆನ್ನಮ್ಮ ದೇವೇಗೌಡರವರು, ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡರವರ ಸಾರ್ವಜನಿಕ ಹಾಗೂ ರಾಜಕೀಯ ಜೀವನದ ಹಿಂದೆ ಸದಾ ಅಚಲ ಶಕ್ತಿಯಾಗಿ, ಆತ್ಮಸ್ಥೈರ್ಯ ತುಂಬಿದ ಮಹಾನ್ ವ್ಯಕ್ತಿತ್ವವಾಗಿದ್ದರು. ತಮ್ಮ ಮೌನ ಸೇವೆ, ತ್ಯಾಗ, ಸಹನೆ ಮತ್ತು ಕುಟುಂಬದ ಮೇಲಿನ ಅಪಾರ ಕಾಳಜಿಯ ಮೂಲಕ ಅವರು ಎಲ್ಲರಿಗೂ ಆದರ್ಶಪ್ರಾಯ ಜೀವನ ನಡೆಸಿದ್ದರು. ದೇಶ ಹಾಗೂ ರಾಜ್ಯ ರಾಜಕೀಯದಲ್ಲಿ ದೇವೇಗೌಡರು ಸಲ್ಲಿಸಿದ ದೀರ್ಘಕಾಲದ ಸೇವೆಯ ಹಿಂದೆ ಶ್ರೀಮತಿ ಚೆನ್ನಮ್ಮರವರ ಅಪಾರ ತ್ಯಾಗ, ಪ್ರೋತ್ಸಾಹ ಮತ್ತು ಬೆಂಬಲವಿದ್ದು, ಅವರ ಅಗಲಿಕೆ ದೇವೇಗೌಡರ ಕುಟುಂಬಕ್ಕೆ ಮಾತ್ರವಲ್ಲ, ಜನತಾದಳ (ಜಾತ್ಯತೀತ) ಪಕ್ಷದ ಸಮಸ್ತ ಕಾರ್ಯಕರ್ತರಿಗೆ ಹಾಗೂ ಅಪಾರ ಅಭಿಮಾನಿಗಳಿಗೆ ತುಂಬಲಾರದ ನಷ್ಟವಾಗಿದೆ. ಭಗವಂತನು ಅಗಲಿದ ಪುಣ್ಯಾತ್ಮೆಗೆ ಚಿರಶಾಂತಿ ಕರುಣಿಸಲಿ ಹಾಗೂ ಈ ದುಃಖವನ್ನು…
ಮಂಗಳೂರು, ಜುಲೈ 19: ಪರಮಜ್ಯೋತಿ ಭಜನಾ ಮಂಡಳಿ ವತಿಯಿಂದ ಬಜಾಲದಲ್ಲಿ ತುಳುನಾಡಿನ ವಿಶಿಷ್ಟ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿಬಿಂಬಿಸುವ “ಆಟಿ ದೊಂಜಿ ದಿನ” ಕಾರ್ಯಕ್ರಮ ಅತ್ಯಂತ ಸಂಭ್ರಮ, ಭಕ್ತಿ ಹಾಗೂ ಸಾಂಸ್ಕೃತಿಕ ವೈಭವದೊಂದಿಗೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪರಮಜ್ಯೋತಿ ಭಜನಾ ಮಂಡಳಿಯ ಅಧ್ಯಕ್ಷರಾದ ನ್ಯಾಯವಾದಿ ದಿನಕರ್ ಶೆಟ್ಟಿ ವಹಿಸಿದ್ದರು. ಅವರು ಅತಿಥಿಗಳು ಹಾಗೂ ನೆರೆದಿದ್ದ ಗಣ್ಯರನ್ನು ಆತ್ಮೀಯವಾಗಿ ಸ್ವಾಗತಿಸಿ, ಆಟಿ ತಿಂಗಳ ಆಚರಣೆಗಳು ನಮ್ಮ ಸಂಸ್ಕೃತಿಯ ಜೀವಾಳವಾಗಿದ್ದು, ಇಂತಹ ಕಾರ್ಯಕ್ರಮಗಳ ಮೂಲಕ ಮುಂದಿನ ಪೀಳಿಗೆಗೆ ನಮ್ಮ ಸಂಪ್ರದಾಯವನ್ನು ಪರಿಚಯಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಹೇಳಿದರು. ಪ್ರಾರ್ಥನೆ ಹಾಗೂ ವಂದೇ ಮಾತರಂ ಗಾಯನದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು. ಬಳಿಕ ಬಜಾಲದ ಹೆಮ್ಮೆಯ ಮಹಿಳೆ, ಇತ್ತೀಚೆಗೆ ಡಾಕ್ಟರೇಟ್ ಪದವಿ ಪಡೆದ ಡಾ. ಆಶಾಲತಾ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಮುಖ್ಯ ಭಾಷಣಕಾರರಾಗಿ ಭಾಗವಹಿಸಿದ್ದ ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅದ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ಅವರು ಆಟಿ ತಿಂಗಳ ಧಾರ್ಮಿಕ,…
ಉಡುಪಿ, ಜುಲೈ 19: ತುಳುನಾಡ ರಕ್ಷಣಾ ವೇದಿಕೆ – ಉಡುಪಿ ಜಿಲ್ಲಾ ಘಟಕದ ಜಿಲ್ಲಾ ಮಟ್ಟದ ಮಹತ್ವದ ಸಭೆಯು ಭಾನುವಾರ ಉಡುಪಿಯ ಕಾಪಿಯಾ ಹೋಟೆಲ್ ಸಮೀಪದ ಅಕ್ಷಯ ಟವರ್ಸ್ನಲ್ಲಿರುವ ಜಿಲ್ಲಾ ಕಚೇರಿಯಲ್ಲಿ ಅತ್ಯಂತ ಯಶಸ್ವಿಯಾಗಿ ನಡೆಯಿತು. ಮುಂಬರುವ “ಆಟಿ ದೊಂಜಿ ದಿನ” ಕಾರ್ಯಕ್ರಮವನ್ನು ಅದ್ಧೂರಿಯಾಗಿ ಹಾಗೂ ತುಳುನಾಡಿನ ಸಾಂಸ್ಕೃತಿಕ ವೈಭವವನ್ನು ಪ್ರತಿಬಿಂಬಿಸುವ ರೀತಿಯಲ್ಲಿ ಆಯೋಜಿಸುವ ಕುರಿತು ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯಿತು. ಜೊತೆಗೆ ಸಂಘಟನೆಯ ಬಲವರ್ಧನೆ, ಸದಸ್ಯತ್ವ ವಿಸ್ತರಣೆ ಹಾಗೂ ಜನಪರ ಹೋರಾಟಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ರೂಪಿಸುವ ಕುರಿತು ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು.ಜೊತೆಗೆ ಸಂಘಟನೆಯ ಬಲವರ್ಧನೆ, ಸದಸ್ಯತ್ವ ವಿಸ್ತರಣೆ ಹಾಗೂ ಜನಪರ ಹೋರಾಟಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ರೂಪಿಸುವ ಕುರಿತು ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಸಭೆಯ ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಅಧ್ಯಕ್ಷ ಫ್ರಾಂಕಿ ಡಿಸೋಜ ಕೊಳಲಗಿರಿ ವಹಿಸಿದ್ದರು. ಕಾರ್ಮಿಕ ಘಟಕದ ಅಧ್ಯಕ್ಷ ಜಯ ಪೂಜಾರಿ ಲಕ್ಷ್ಮೀನಗರ ಹಾಗೂ ಮಹಿಳಾ ಘಟಕದ ಅಧ್ಯಕ್ಷೆ ನಾಗಲಕ್ಷ್ಮಿ ಕಾಪು ತಾಲೂಕು ಅಧ್ಯಕ್ಷ ನಿತಿನ್ ಕುಮಾರ್…
ಮಂಗಳೂರು, ಜುಲೈ 18: ದೇಶದ ಹೆಮ್ಮೆಯ ಮಾಜಿ ಪ್ರಧಾನಮಂತ್ರಿಗಳೂ, ಜನತಾದಳ (ಜಾತ್ಯತೀತ)ದ ರಾಷ್ಟ್ರೀಯ ಹಿರಿಯ ನಾಯಕರೂ ಆದ ಶ್ರೀ ಎಚ್.ಡಿ. ದೇವೇಗೌಡರ ಧರ್ಮಪತ್ನಿ, ಮಾತೃಸ್ವರೂಪಿ ಶ್ರೀಮತಿ ಚನ್ನಮ್ಮನವರ ನಿಧನದ ಸುದ್ದಿ ತಿಳಿದು ತೀವ್ರ ಆಘಾತ ಮತ್ತು ಅಪಾರ ದುಃಖವಾಗಿದೆ ಎಂದು ಜನತಾದಳ (ಜಾತ್ಯತೀತ) ರಾಜ್ಯ ಉಪಾಧ್ಯಕ್ಷ ಎಂ. ಬಿ. ಸದಾಶಿವ ಅವರು ಸಂತಾಪ ಸೂಚಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಕಳೆದ ನಾಲ್ಕು ದಶಕಗಳಿಂದ ಶ್ರೀಮತಿ ಚನ್ನಮ್ಮನವರ ಅಕ್ಕರೆ, ಆತ್ಮೀಯತೆ, ಮಮತೆ ಮತ್ತು ಆಶೀರ್ವಾದದ ನೆರಳಿನಲ್ಲಿ ಬದುಕುವ ಭಾಗ್ಯ ನನಗೂ ನನ್ನ ಕುಟುಂಬಕ್ಕೂ ದೊರೆತಿತ್ತು. ಅವರ ಅಗಲಿಕೆ ನಮ್ಮ ಕುಟುಂಬದ ಹಿರಿಯ ತಾಯಿಯನ್ನು ಕಳೆದುಕೊಂಡಷ್ಟೇ ನೋವನ್ನು ಉಂಟುಮಾಡಿದ್ದು, ಈ ನಷ್ಟವನ್ನು ಯಾವತ್ತೂ ತುಂಬಲು ಸಾಧ್ಯವಿಲ್ಲ ಎಂದು ಭಾವುಕರಾಗಿ ತಿಳಿಸಿದ್ದಾರೆ. ಶ್ರೀ ಎಚ್.ಡಿ. ದೇವೇಗೌಡರು ದೇಶದ ಅತ್ಯುನ್ನತ ರಾಜಕೀಯ ಸ್ಥಾನವನ್ನು ಅಲಂಕರಿಸುವ ಹಾದಿಯಲ್ಲಿ ಸಾಗುವಾಗ, ಪ್ರತಿಯೊಂದು ಹೆಜ್ಜೆಯಲ್ಲೂ ಧೈರ್ಯ, ತ್ಯಾಗ, ಸಹನೆ ಮತ್ತು ನಿಸ್ವಾರ್ಥ ಸೇವಾ ಮನೋಭಾವದಿಂದ ಬೆನ್ನೆಲುಬಾಗಿ ನಿಂತ ಮಹಾನ್…
ಮಾಜಿ ಪ್ರಧಾನಮಂತ್ರಿ ಹಾಗೂ ಜನತಾದಳ (ಜಾತ್ಯತೀತ)ದ ಹಿರಿಯ ರಾಷ್ಟ್ರ ನಾಯಕ ಎಚ್.ಡಿ. ದೇವೇಗೌಡ ಅವರ ಕುಟುಂಬದ ಹಿರಿಯ ಸದಸ್ಯೆ ಶ್ರೀಮತಿ ಚೆನ್ನಮ್ಮ ದೇವೇಗೌಡ ಅವರ ಅಗಲಿಕೆಯ ಸುದ್ದಿ ಮನಸ್ಸಿಗೆ ಅಪಾರ ನೋವನ್ನುಂಟು ಮಾಡಿದೆ. ಒಂದು ರಾಜಕೀಯ ಕುಟುಂಬದ ಯಶಸ್ಸಿನ ಹಿಂದೆ ವೇದಿಕೆಯ ಮೇಲೆ ಕಾಣಿಸಿಕೊಳ್ಳದ ಅನೇಕ ಮಹನೀಯರ ತ್ಯಾಗ, ಸಹನೆ ಮತ್ತು ಆಶೀರ್ವಾದ ಅಡಗಿರುತ್ತವೆ. ಅಂತಹ ಅಪರೂಪದ ವ್ಯಕ್ತಿತ್ವಗಳಲ್ಲಿ ಶ್ರೀಮತಿ ಚೆನ್ನಮ್ಮ ಅವರು ಪ್ರಮುಖರು. ಅವರು ಅಧಿಕಾರ, ಪ್ರಚಾರ ಅಥವಾ ಹುದ್ದೆಗಳಿಗಾಗಿ ಬದುಕಿದವರಲ್ಲ. ಕುಟುಂಬದ ಏಕತೆ, ಸಂಸ್ಕಾರ, ಮಾನವೀಯತೆ ಮತ್ತು ಸೇವೆಯ ಮೌಲ್ಯಗಳನ್ನು ತಮ್ಮ ಬದುಕಿನ ಮೂಲಕ ಸಾರಿದ ಆದರ್ಶ ಮಹಿಳೆಯಾಗಿದ್ದರು. ದೇವೇಗೌಡರು ರಾಷ್ಟ್ರ ರಾಜಕೀಯದಲ್ಲಿ ಅನೇಕ ಸವಾಲುಗಳನ್ನು ಎದುರಿಸಿ ದೇಶದ ಪ್ರಧಾನಮಂತ್ರಿಯಾಗಿ ಸೇವೆ ಸಲ್ಲಿಸುವವರೆಗಿನ ಪಯಣದಲ್ಲಿ, ಕುಟುಂಬದೊಳಗೆ ಧೈರ್ಯ, ಸ್ಥೈರ್ಯ ಮತ್ತು ನೈತಿಕ ಶಕ್ತಿಯನ್ನು ತುಂಬಿದ ಮಹಾನ್ ವ್ಯಕ್ತಿತ್ವ ಚೆನ್ನಮ್ಮ ಅವರದು. ಸಾರ್ವಜನಿಕ ಜೀವನದಲ್ಲಿ ಕಾಣಿಸದಿದ್ದರೂ, ಅವರ ತ್ಯಾಗ ಮತ್ತು ಮೌನ ಸೇವೆ ದೇವೇಗೌಡ ಕುಟುಂಬದ ಬಲಿಷ್ಠ ಅಡಿಪಾಯವಾಗಿತ್ತು. ಇಂದಿನ…
ಧಾರವಾಡ, ಜುಲೈ 19: ಧಾರವಾಡ ಜಿಲ್ಲೆಯ ಅಳ್ನಾವರ ಸಮೀಪದ ಕಸ್ತೂರಬಾ ಬಾಲಕಿಯರ ವಸತಿ ಶಾಲೆಯಲ್ಲಿ 34 ವಿದ್ಯಾರ್ಥಿನಿಯರು ಏಕಾಏಕಿ ಅಸ್ವಸ್ಥಗೊಂಡಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ವಿದ್ಯಾರ್ಥಿನಿಯರು 10 ರಿಂದ 15 ನಿಮಿಷಗಳಿಗೊಮ್ಮೆ ಒದ್ದಾಡುವುದು, ಚೀರಾಡುವುದು ಹಾಗೂ ಅಸಹಜವಾಗಿ ವರ್ತಿಸುವಂತಹ ಲಕ್ಷಣಗಳನ್ನು ತೋರಿಸುತ್ತಿದ್ದು, ಪೋಷಕರು ಮತ್ತು ಸ್ಥಳೀಯರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.ಪ್ರಾಥಮಿಕ ವೈದ್ಯಕೀಯ ಮಾಹಿತಿಯ ಪ್ರಕಾರ, ವೈರಲ್ ಜ್ವರದ ಹಿನ್ನೆಲೆಯಲ್ಲೇ ಈ ಲಕ್ಷಣಗಳು ಕಾಣಿಸಿಕೊಂಡಿರುವ ಸಾಧ್ಯತೆ ಇದ್ದು, ಇನ್ಫ್ಲೂಯೆನ್ಸಾ A ಮತ್ತು B ಸೋಂಕು ಇರಬಹುದೆಂಬ ಶಂಕೆ ವ್ಯಕ್ತವಾಗಿದೆ. ಸೋಂಕಿತ ವಿದ್ಯಾರ್ಥಿನಿಯರ ಪೈಕಿ 8 ಮಂದಿಯ ಆರೋಗ್ಯ ಸ್ಥಿತಿ ಗಂಭೀರವಾಗಿರುವುದರಿಂದ ಅವರನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ತಜ್ಞ ವೈದ್ಯರ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ ಕೆಲ ವಿದ್ಯಾರ್ಥಿನಿಯರಿಗೆ ಅಳ್ನಾವರ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.ಆಸ್ಪತ್ರೆಯಲ್ಲಿಯೂ ವಿದ್ಯಾರ್ಥಿನಿಯರು ಒದ್ದಾಡುವುದು ಹಾಗೂ ಚೀರಾಡುತ್ತಿರುವ ದೃಶ್ಯಗಳು ಪೋಷಕರ ಆತಂಕವನ್ನು ಮತ್ತಷ್ಟು ಹೆಚ್ಚಿಸಿವೆ. ಮಕ್ಕಳ ಆರೋಗ್ಯದ ಬಗ್ಗೆ ನಿಖರ ಮಾಹಿತಿ ನೀಡುವಂತೆ ಪೋಷಕರು ಅಧಿಕಾರಿಗಳನ್ನು ಒತ್ತಾಯಿಸುತ್ತಿದ್ದಾರೆ.ಘಟನೆಯ ಬೆನ್ನಲ್ಲೇ ವಸತಿ…
ಉಡುಪಿ ಜಿಲ್ಲೆ 317 ಡಿ 2025-26ನೇ ಸಾಲಿನ ಜಿಲ್ಲಾ ರಾಜ್ಯಪಾಲರಾದ ಶ್ರೀ ಅರವಿಂದ್ ಶೆಣೈ ಅವರು 2026-27ನೇ ಸಾಲಿನ ಜಿಲ್ಲಾ ರಾಜ್ಯಪಾಲರಾದ ತಾರಾನಾಥ್ ಎಚ್.ಎಂ ಅವರಿಗೆ ಜಿಲ್ಲಾ ಕಚೇರಿಯಲ್ಲಿ ಅಧಿಕಾರ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಪ್ರಥಮ ಉಪರಾಜ್ಯಪಾಲ ಗೋವರ್ಧನ್ ಶೆಟ್ಟಿ, ದ್ವಿತೀಯ ಉಪರಾಜ್ಯಪಾಲ ವೆಂಕಟೇಶ್ ಹೆಬ್ಬಾರ್, ನಿಕಟಪೂರ್ವ ಕೋಶಾಧಿಕಾರಿ ಬಾಲಕೃಷ್ಣ ಹೆಗಡೆ, ನಿಕಟಪೂರ್ವ ಪಿ.ಆರ್.ಒ. ಸುಧರ್ಶನ್ ಪಡಿಯಾರ್ ವಿಟ್ಲ, ನಿಕಟಪೂರ್ವ ಹೆಚ್ಚುವರಿ ಕಾರ್ಯದರ್ಶಿ ಚಂದ್ರಹಾಸ ರೈ ಹಾಗೂ ಪ್ರಥಮ ಮಹಿಳಾ ಸಭಿತಾ ತಾರಾನಾಥ್ ಉಪಸ್ಥಿತರಿದ್ದರು.
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
