- ಮದರಸೆಗೆ ನುಗ್ಗಿ ಉಸ್ತಾದ್ ಮೇಲೆ ಹಲ್ಲೆ; ದಂಪತಿ ವಿರುದ್ಧ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲು
- ಆದರ್ಶ ಆಸ್ಪತ್ರೆಯ ರಕ್ತಸಂಗ್ರಹ ಘಟಕ ಸಂಪೂರ್ಣ ಕಾನೂನುಬದ್ಧ; ಜಿಲ್ಲಾ ಆಸ್ಪತ್ರೆಯ ರಕ್ತನಿಧಿಯಿಂದ ನಿಯಮಾನುಸಾರವೇ ರಕ್ತ ಪೂರೈಕೆ – ಆಧಾರರಹಿತ ವದಂತಿಗಳಿಗೆ ಕಿವಿಗೊಡಬೇಡಿ: ಆಸ್ಪತ್ರೆ ಆಡಳಿತ
- ಕೃಷ್ಣಾಪುರ ಉಸ್ತಾದ್ ಮೇಲಿನ ಹಲ್ಲೆ ಖಂಡನೀಯ; ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಿ: ಇಕ್ಬಲ್ ಮೂಲ್ಕಿ ಆಗ್ರಹ
- ಜುಲೈ 12ರಂದು ಸುಳ್ಯದಲ್ಲಿ ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ ಪ್ರಮುಖ ಪದಾಧಿಕಾರಿಗಳ ಸಭೆ
- ಪುತ್ತೂರು ಆಘಾತ ಸುದ್ದಿ: ಕಂಬಳ ಲೋಕದ ಖ್ಯಾತ ವೀಕ್ಷಕ ವಿವರಣೆಗಾರ ನಿರಂಜನ್ ರೈ ಮಠಂತಬೆಟ್ಟು ಹೃದಯಾಘಾತದಿಂದ ನಿಧನ
- ಹಿರಿಯಡ್ಕ ರೆಸಾರ್ಟ್ನಲ್ಲಿ ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ; 26 ಮಂದಿ ವಶಕ್ಕೆ
- ಗ್ರಾಮ ಪಂಚಾಯತ್ ಚುನಾವಣೆಗೆ ವೇಗ; ರಾಜ್ಯ ಚುನಾವಣಾ ಆಯೋಗದಿಂದ ಮಹತ್ವದ ಸಿದ್ಧತೆ, ಕೆಲವೇ ತಿಂಗಳಲ್ಲಿ ಚುನಾವಣೆ ?
- ಹೆಬ್ರಿ ತಾಲೂಕಿನಲ್ಲಿ ಸಿಬ್ಬಂದಿ ಕೊರತೆ ತೀವ್ರ: ಖಾಲಿ ಹುದ್ದೆಗಳ ಭರ್ತಿಗೆ ಜಿಲ್ಲಾಧಿಕಾರಿಗಳಿಗೆ ಜೆಡಿಎಸ್ ಮನವಿ
Author: Tulunada Surya
ಕುಂದಾಪುರ: ಗಣರಾಜ್ಯೋತ್ಸವ ಸಂದರ್ಭದಲ್ಲಿ ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕಕ್ಕೆ ಭಾಜನರಾದ ಜಿಲ್ಲಾ ಪೊಲೀಸ್ ಕಛೇರಿಯ ಹೆಡ್ ಕಾನ್ ಸ್ಟೇಬಲ್ ಶಿವಾನಂದ ನಾಯರಿ ಅವರ ಸೇವೆಯನ್ನು ಗುರುತಿಸಿ ತುಳುನಾಡ ರಕ್ಷಣಾ ವೇದಿಕೆ ಕುಂದಾಪುರ ಘಟಕ ಅವರ ಮನೆಗೆ ತೆರಳಿ ಕುಟುಂಬದವರ ಸಮ್ಮುಖದಲ್ಲಿ ಶಿವಾನಂದ ಬಾಯರಿ ರವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕುಂದಾಪುರ ತುಳುನಾಡ ರಕ್ಷಣಾ ವೇದಿಕೆ ಅಧ್ಯಕ್ಷರಾದ ಸತೀಶ್ ಖಾರ್ವಿ ಅಂತರಾಷ್ಟ್ರೀಯ ಪವರ್ ಲಿಫ್ಟ್ ರ್ ಕ್ರೀಡಾಪಟು, ತುಳುನಾಡ ರಕ್ಷಣಾ ವೇದಿಕೆ ವೈದ್ಯರ ಘಟಕ ರಾಜ್ಯ ಸಂಘಟನಾ ಕಾರ್ಯದರ್ಶಿ ಡಾಕ್ಟರ್ ರವೀಂದ್ರ ತಲ್ಲೂರು, ಅಂತರಾಷ್ಟ್ರೀಯ ಮಾನವ ಹಕ್ಕು ಆಯೋಗ ಸಂಯೋಜಕರು ಶಿವಾನಂದ ತಲ್ಲೂರು ಹಾಗೂ ಕುಂದಾಪುರ ಘಟಕ ತುಳುನಾಡ ರಕ್ಷಣಾ ವೇದಿಕೆ ಪದಾಧಿಕಾರಿಗಳಾದ ಆನಂದ್ ಖಾರ್ವಿ, ಕೇಶವ ಖಾರ್ವಿ, ನಿತ್ಯಾನಂದ ನಾಯ್ಕ್ , ಉಮೇಶ್ ನಾಯರಿ ಕಿರಿಮಂಜೇಶ್ವರ, ನವೀನ್ ನಾಯರಿ ಬೆಂಗಳೂರು ಮುಂತಾದವರು ಉಪಸ್ಥಿತರಿದ್ದರು. ಹರ್ಷವರ್ಧನ್ ಖಾರ್ವಿ ಯವರು ಕಾರ್ಯಕ್ರಮ ನಿರೂಪಿಸಿದರು
ಮಂಗಳೂರು : ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ತಲಪಾಡಿ ಕೆ.ಸಿ.ರೋಡ್ ಶಾಖೆಯಲ್ಲಿ ಜ.17 ರಂದು ನಡೆದ ದರೋಡೆ ಪ್ರಕರಣದ ನಾಲ್ವರು ಆರೋಪಿಗಳನ್ನು ತಮಿಳುನಾಡು ಸಮೀಪದ ಪದ್ಮನೇರಿ ಗ್ರಾಮದಲ್ಲಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದರು ಆದರೆ ಸಿಸಿಬಿ ಪೊಲೀಸರು ಹಾಗೂ ಉಳ್ಳಾಲ ಪೊಲೀಸರು ಜಂಟಿಯಾಗಿ ಆರೋಪಿಗಳನ್ನು ಸ್ಥಳ ಮಹಜರಿಗೆ ತಲಪಾಡಿಯ ಅಲಂಕಾರು ಗುಡ್ಡದ ಬಳಿ ಕರೆದುಕೊಂಡು ಹೋಗಿದ್ದರು. ಸ್ಥಳ ಮಹಜರು ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ ತಪ್ಪಿಸಿಕೊಳ್ಳಲು ಯತ್ನ ಹಿನ್ನೆಲೆ ಆರೋಪಿ ಕಣ್ಣನ್ಮಣಿ ಕಾಲಿಗೆ ಫೈರಿಂಗ್ ಮಾಡಲಾಗಿತ್ತು ಆದರೆ ಇದೀಗ ಮತ್ತೋರ್ವ ಆರೋಪಿ ಮಹಜರ್ ಸಂದರ್ಭದಲ್ಲಿ ಪೊಲೀಸರ ಮೇಲೆ ದಾಳಿ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಮುರುಗನ್ ಮೇಲೆ ಪೊಲೀಸರು ಗುಂಡು ಹಾರಿಸಲಾಗಿದೆ. ಮಂಗಳೂರು ಹೊರವಲಯದ ಉಳ್ಳಾಲದ ಅಜ್ಜಿನಡ್ಕ ಎಂಬಲ್ಲಿ ಘಟನೆ ನಡೆದಿದ್ದು, ಸದ್ಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು ಆರೋಪಿ ದರೋಡೆಗೆ ಬಳಸಿದ್ದ ಪಿಸ್ತೂಲ್ ಅನ್ನು ಬಚ್ಚಿಟ್ಟಿದ್ದ. ಅದನ್ನು ರಿಕವರಿ ಮಾಡಲು ಆತನನ್ನು ಸ್ಥಳಕ್ಕೆ ಕರೆದುಕೊಂಡು ಹೋಗಲಾಗಿತ್ತು. ಈ…
ಮಂಗಳೂರು : ಕಳೆದ 12 ವರ್ಷಗಳಿಂದ ತುಳು ಪತ್ರಿಕಾ ಮಾಧ್ಯಮದಲ್ಲಿ ಟೈಮ್ಸ್. ಆಫ್ ಕುಡ್ಲ. ಎನ್ನುವ ತುಳು ಪತ್ರಿಕೆಯ ಮೂಲಕ ತುಳು ಭಾಷೆ ಆಚಾರ ವಿಚಾರ ಸಂಸ್ಕೃತಿ ಬೆಳವಣಿಗೆಗೆ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದ ಶಶಿ ಬಂಡಿಮಾರ್ ಅಸ್ತಂಗತ ರಾಗಿರುತ್ತಾರೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ರಾಜ್ಯ ಮಾಧ್ಯಮ ಪ್ರಶಸ್ತಿ ಪುರಸ್ಕೃತರಾಗಿದ್ದು , ಅವರ ತುಳು ಭಾಷೆ ನೀಡಿದ ಕೊಡುಗೆ ಗುರುತಿಸಿ ತುಳುನಾಡ ರಕ್ಷಣಾ ವೇದಿಕೆ, ಜೈ ತುಳುನಾಡು ಸಂಘಟನೆ ಸೇರಿದಂತೆ ಹಲವು ಸಂಘಟನೆ ಗಳು ಗೌರವ ಸನ್ಮಾನ ಮಾಡಿತ್ತು. ಮಂಗಳೂರು ಲೋಕಸಭಾ ಸದಸ್ಯ ಬ್ರಿಜೇಶ್ ಚೌಟ, ವಿಧಾನಸಭಾಧ್ಯಕ್ಷ ಯುಟಿ ಖಾದರ್, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಶಾಸಕ ವೇದವ್ಯಾಸ ಕಾಮತ್, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾ ಡ್ , ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ದಯಾನಂದ್ ಕತ್ತಲ್ ಸರ್ , ಹಿರಿಯ ಸಾಹಿತಿ ಡಾ.ವೈ. ಎನ್.ಶೆಟ್ಟಿ , ತುಳು ಅಕಾಡೆಮಿ ಮಾಜಿ ಸದಸ್ಯ ಡಾ ಆಕಾಶ್…
ನವದೆಹಲಿ : ದೇಶಾದ್ಯಂತ ಗಣರಾಜ್ಯೋತ್ಸದ ಸಂಭ್ರಮ. ಬಾನೆತ್ತರಕ್ಕೆ ಹಾರಾಡಿದ ತ್ರಿವರ್ಣ ಧ್ವಜಗಳು, ರಾಜಧಾನಿ ಕರ್ತವ್ಯ ಪಥಧಲ್ಲಿ ಅನಾವರಣಗೊಂಡ ಸೇನಾ ಶಕ್ತಿಯ ಅನಾವರಣ.ಭವ್ಯ ಪರಂಪರೆ,ವಿವಿಧತೆಯಲ್ಲಿ ಏಕತೆ ಸಾರುವ ಸಂಸ್ಕೃತಿಯ ವೈಭವ ಗಮನ ಸೆಳೆಯಿತು. ಗಣ್ಯಾತಿಗಣ್ಯರ ಸಮ್ಮುಖದಲ್ಲಿ ರಾಷ್ಟçಪತಿ ದ್ರೌಪದಿ ಮುರ್ಮು ಧ್ವಜಾರೋಹಣ ನೆರವೇರಿಸುವ ಮೂಲಕ 76 ನೇ ಗಣರಾಜ್ಯೋತ್ಸಕ್ಕೆ ವಿಧ್ಯುಕ್ತ ಚಾಲನೆ ನೀಡಿದರು. ಭಾರತೀಯ ಸೇನಾ ಪಡೆಗಳು ತಮ್ಮ ಶಕ್ತಿ ಸಾಮರ್ಥ್ಯವನ್ನು ಕತ್ಯವ್ಯ ಪಥದಲ್ಲಿ ಜಗತ್ತಿನ ಮುಂದೆ ಅನಾವರಣದ ಜೊತೆಗೆ ವಿವಿಧ ರಾಜ್ಯಗಳ ಸಂಸ್ಕೃತಿ, ಆಚಾರ ವಿಚಾರ, ಪರಂಪರೆ ಬಿಂಬಿಸುವ ಸ್ತಬ್ಧಚಿತ್ರಗಳ ಪ್ರದರ್ಶನ ಎಲ್ಲರನ್ನು ಹುಬ್ಬೇರಿಸುವಂತೆ ಮಾಡಿತು. ಬಾರಿ ವಿಶೇಷ ಅತಿಥಿಯಾಗಿ ಪಾಲ್ಗೊಂಡಿದ್ದ ಇಂಡೋನೇಶಿಯಾ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಸಮ್ಮುಖದಲ್ಲಿ ರಾಷ್ಟçಪತಿ ದ್ರೌಪದಿ ಮುರ್ಮು ಅವರು ಸಶಸ್ತç ಪಡೆಗಳಿಂದ ಗೌರವ ವಂದನೆ ಸ್ವೀಕಾರ ಮಾಡಿದರು. ಈ ವೇಳೆ ಭೂ ಸೇನೆ, ವಾಯು ಸೇನೆ ಮತ್ತು ನೌಕಾಪಡೆಯ ಯೋಧರು ಆಕರ್ಷಕ ಪಥಸಂಚಲನ ನಡೆಸಿದರು. ದೇಶದ ನಾನಾ ಭಾಗಗಳ ಕಲಾವಿದರ ಆಕರ್ಷಕ ನೃತ್ಯ ಜನರನ್ನು ಸೂಜಿಗಲ್ಲಿನಂತೆ…
ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಜೈ ಭಾರತಿ ತರುಣವೃಂದ ರಿಜಿಸ್ಟ್ರೇಡ್ ಊರ್ವ ಹೊಯ್ಗೆಬೈಲ್ ಇದರ 60ನೇ ವರ್ಷದ ವಜ್ರ ಮಹೋತ್ಸವದ ಉದ್ಘಾಟನೆ ಕಾರ್ಯಕ್ರಮ ಹಾಗೂ ಲಾಂಛನ ಅನಾವರಣ ವನ್ನು ರಿಯ ಫೌಂಡೇಶನ್ ವಿಶೇಷ ಚೇತನ ಮಕ್ಕಳ ವಸತಿ ಕೇಂದ್ರ ಕುಲಶೇಖರ ಕೋಟಿಪುರ ಇಲ್ಲಿ ನಡೆಯಿತು ಈ ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರಿನ ಪ್ರಸಿದ್ಧ ಖ್ಯಾತ ವಕೀಲರಾದ ರಾಘವೇಂದ್ರ ರಾವ್ ಉದ್ಘಾಟಿಸಿ ಮಾತನಾಡಿ ಜೈ ಭಾರತಿ ತರುಣವೃಂದ ರಿ. ಇವರು ದಿನಚರಿ ಸಾಮಗ್ರಿಗಳನ್ನು ಕೊಟ್ಟು ಆ ಮಕ್ಕಳ ಜೊತೆ ಸೇರಿ ಸಹ ಭೋಜನವನ್ನು ಮಾಡಿರುವುದನ್ನು ಶ್ಲಾಘಿಸಿದರು. ಹಾಗೂ ಅವರ ವೈಯಕ್ತಿಕ ಜೀವನ ವನ್ನು ನೆನಪಿಸಿಕೊಂಡು ಅವರ ಮಕ್ಕಳ ಹುಟ್ಟುಹಬ್ಬವನ್ನು ಪ್ರತಿವರ್ಷ ಹಲವಾರು ಆಶ್ರಮದೊಂದಿಗೆ ಸೇರಿ ಆಚರಿಸುವುದನ್ನು ನೆನಪಿಸಿಕೊಂಡರು ಇಂತಹ ಸಮಾಜಮುಖಿ ಕೆಲಸಗಳನ್ನು ಇನ್ನು ಕೂಡ ಮಾಡಲಿ ಎಂದು ನಮ್ಮನ್ನು ಹಾರೈಸಿದರು. ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಹರೀಶ್ ರೈ ಮಾತನಾಡಿ ನೀವು ಮಾಡಿದ ಈ ಕಾರ್ಯಕ್ರಮ ಆ ದೇವರು ನಿಮ್ಮನ್ನು ಒಳ್ಳೆಯದನ್ನು ಮಾಡಲಿ…
ಭಾರತ ಜಾತ್ಯಾತೀತ ರಾಷ್ಟ್ರ. ಭಾರತದಲ್ಲಿ ಎಲ್ಲ ಪ್ರಜೆಗಳಿಗೂ ಸಮಾನ ಹಕ್ಕಿದೆ. ಶಿಕ್ಷಣ, ಸಮಾನತೆ, ವಾಕ್ ಸ್ವಾತಂತ್ರ್ಯ ಹಕ್ಕುಗಳು, ಇಚ್ಛೆಯ ಧರ್ಮವನ್ನು ಸ್ವೀಕರಿಸುವ ಹಕ್ಕುಗಳು, ಎಲ್ಲಿ ಬೇಕಾದರೂ ಜೀವಿಸುವ ಹಕ್ಕುಗಳು, ಭಾರತದ ಪ್ರಜೆ ದೇಶದ ಯಾವುದೇ ಭಾಗದಲ್ಲಿ ಬೇಕಾದರೂ ಜೀವನ ರೂಪಿಸಿಕೊಳ್ಳಲು ಹಕ್ಕು ಹೀಗೆ ಇಷ್ಟೆಲ್ಲ ಸ್ವತಂತ್ರ ಹಕ್ಕುಗಳು ಎಲ್ಲರಿಗೂ ಇರುವುದು ಭಾರತದಲ್ಲಿ 1950 ರ ಜನವರಿ 26 ರಂದು ಜಾರಿಗೆ ಬಂದ ಬೃಹತ್ ಸಂವಿಧಾನದಿಂದ. ಆದ್ದರಿಂದ ಪ್ರತಿ ವರ್ಷವು ಸಹ ಈ ದಿನವನ್ನು ಭಾರತೀಯ ಪ್ರಜೆಗಳು ಎಲ್ಲೇ ಇದ್ದರೂ ಸಹ ನೆನೆಯಬೇಕಾಗಿದೆ. ಹಾಗೆಯೇ ಆಚರಣೆ ಮಾಡಬೇಕಿದೆ. ಕಾನೂನಾತ್ಮಕವಾಗಿ ಈ ದಿನವನ್ನು ರಾಷ್ಟ್ರದೆಲ್ಲೆಡೆ ರಕ್ಷಣಾ ಪಡೆಗಳು ಪರೇಡ್ ಮಾಡುವ ಮೂಲಕ, ಶಾಲೆಗಳು, ಸರ್ಕಾರಿ ಕಚೇರಿಗಳಲ್ಲಿ ಧ್ವಜಾರೋಹಣ ಮಾಡುವ ಮೂಲಕ ಸಂವಿಧಾನ ಜಾರಿಗೆ ಬಂದ ದಿನವನ್ನು ಗಣರಾಜ್ಯೋತ್ಸವದ ಆಚರಣೆ ನಡೆಯುತ್ತದೆ. ದೇಶದಾದ್ಯಂತ ಪ್ರತಿಯೊಬ್ಬ ರಿಗೂ ಮಹತ್ವದ ದಿನವಾಗಿದೆ ಎಂದು ತುಳುನಾಡ ರಕ್ಷಣಾ ವೇದಿಕೆ ಕೇಂದ್ರೀಯ ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಭಟ್ ಕಡಬ ಅವರು ತುಳುನಾಡ…
ಉಡುಪಿ: ಯಕ್ಷಗಾನ ತಾಳಮದ್ದಳೆಯ ಹಿರಿಯ ಅರ್ಥಧಾರಿ ಬರೆ ಕೇಶವ ಭಟ್ಟ (84) ಶನಿವಾರ (25. 1. 25) ನಿಧನ ಹೊಂದಿದರು. ವೃತ್ತಿಯಲ್ಲಿ ಅಧ್ಯಾಪಕರಾಗಿದ್ದ ಕೇಶವ ಭಟ್ಟರು ಅರ್ಥಧಾರಿಯಾಗಿ, ಹವ್ಯಾಸಿ ವೇಷಧಾರಿಯಾಗಿ, ಕಲಾ ಸಂಯೋಜಕರಾಗಿ, ಕಲಾವಿಮರ್ಶಕರಾಗಿ, ಲೇಖಕರಾಗಿ ಸಾಹಿತ್ಯ ಮತ್ತು ಕಲಾ ಕ್ಷೇತ್ರಕ್ಕೆ ಅಪೂರ್ವ ಕೊಡುಗೆ ನೀಡಿದ್ದರು. ನಿವೃತ್ತಿಯ ಅನಂತರ ವಾಸುದೇವ ಸಾಮಗರ ಸಂಯಮಂ ತಂಡದಲ್ಲಿ ಕೆಲವು ವರ್ಷ ತಿರುಗಾಟ ಮಾಡಿದ್ದರು. ಅಪಾರ ಪುರಾಣ ಜ್ಞಾನ, ಭಾವಪೂರ್ಣ ಅರ್ಥಗಾರಿಕೆಯಿಂದ ಕಲಾಭಿಮಾನಿಗಳ ಗೌರವಕ್ಕೆ ಪಾತ್ರರಾಗಿದ್ದರು. ಸಂಸ್ಥೆಯ ತಾಳಮದ್ದಲೆ ಸಪ್ತಾಹದಲ್ಲಿ ಅರ್ಥಧಾರಿಯಾಗಿ, ಅವಲೋಕನಕಾರರಾಗಿ ಸಹಕರಿಸಿದ್ದರು. ಅವರು ಪತ್ನಿ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಸಂತಾಪ:ಬರೆ ಕೇಶವ ಭಟ್ಟ ನಿಧನದಿಂದ ಯಕ್ಷಗಾನ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿ ಕುಟುಂಬ ಬಳಗದವರಿಗೆ ನೀಡಲೆಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾದ ಡಾ.ತಲ್ಲೂರು ಶಿವರಾಮ ಶೆಟ್ಟಿಯವರು ಸಂತಾಪ ವ್ಯಕ್ತ ಪಡಿಸಿದ್ದಾರೆ
ಮಂಗಳೂರು ; ಹಿರಿಯ ಪತ್ರಕರ್ತ , ಹೊಸದಿಗಂತ ಪತ್ರಿಕೆಯ ವಿಶೇಷ ವರದಿಗಾರ ಗುರುವಪ್ಪ ಬಾಳೆಪುಣಿ (62) ಅಲ್ಪಕಾಲದ ಅಸೌಖ್ಯದಿಂದ ಇಂದು ಬಾಳೆಪುಣಿಯ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ, ಮಂಗಳೂರು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಬಾಳೆಪುಣಿ ಅವರು 26 ವರ್ಷ ಹೊಸದಿಗಂತ ಪತ್ರಿಕೆಯ ವರದಿಗಾರನಾಗಿಕಾರ್ಯ ನಿರ್ವಹಿಸಿದ್ದರು. ಮಂಗಳೂರು ಮಿತ್ರ , ಕರಾವಳಿ ಅಲೆ ಪತ್ರಿಕೆಗಳಲ್ಲಿಯೂ ವರದಿಗಾರನಾಗಿ ಕಾರ್ಯ ನಿರ್ವಹಿಸಿದ್ದರು. ಹರೇಕಳ ಹಾಜಬ್ಬ ಅವರನ್ನು ಮೊದಲ ಬಾರಿಗೆ ನಾಡಿಗೆ ಪರಿಚಯಿಸಿದ ಕೀರ್ತಿ ಇವರದ್ದು. ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ, ರಾಜ್ಯ ಸರ್ಕಾರದ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ, ರಾಷ್ಟ್ರೀಯ ಮಟ್ಟದ ಸರೋಜಿನಿ ನಾಯ್ಡು ಪ್ರಶಸ್ತಿ ಸಹಿತ ಹಲವು ಪ್ರಶಸ್ತಿ ಪುರಸ್ಕೃತರಾಗಿದ್ದಾರೆ.
ಮಂಗಳೂರು : ಅನೈತಿಕ ಚಟುವಟಿಕೆ ನಡೆಸುತ್ತಿದ್ದ ಮಸಾಜ್ ಪಾರ್ಲರ್ ಮೇಲೆ ಮಂಗಳೂರಿನ ಸಂಘಟನೆಯೊಂದರ ಕಾರ್ಯಕರ್ತರು ದಾಳಿ ನಡೆಸಿದ ಘಟನೆ ನಡೆದಿದೆ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಪಕ್ಕದಲ್ಲಿರುವ ಬಿಜೈ ಬಳಿಯ ಕಲರ್ಸ್ ಬ್ಯೂಟಿ ಪಾರ್ಲರ್ ನಲ್ಲಿ ಈ ಘಟನೆ ನಡೆದಿದೆ. ಮಸಾಜ್ ಸೆಂಟರ್ ಗೆ ದಾಳಿ ನಡೆಸಿ ಗಲಾಟೆ ನಡೆಸಿದ್ದು, ಸ್ಪಾ ಸೆಂಟರ್ ನಲ್ಲಿ ಅನೈತಿಕ ಚಟುವಟಿಕೆ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಬಿಜೈ ಬಳಿಯ ಕಲರ್ಸ್ ಹೆಸರಿನ ಮಸಾಜ್ ಪಾರ್ಲರ್ ಮೇಲೆ ದಾಳಿ ಮಾಡಿದ್ದಾರೆ. ಈ ವೇಳೆ ಇಲ್ಲಿ ಅನೈತಿಕ ಚಟುವಟಿಕೆ ಬೆಳಕಿಗೆ ಬಂದಿದೆ. ಮಸಾಜ್ ಸೆಂಟರ್ ಮೇಲೆ ದಾಳಿ ಮಾಡಿದೆ ಮಂಗಳೂರಿನ ಕೆಎಸ್ಆರ್ಟಿಸಿ ಬಳಿ ಇರುವ ಮಸಾಜ್ ಸೆಂಟರ್ ಗೆ ಕಾರ್ಯಕರ್ತರು ನುಗ್ಗಿದ್ದಾರೆ. ಮಸಾಜ್ ಪಾರ್ಲರ್ನ ಪೀಠೋಪಕರಣ, ಕಂಪ್ಯೂಟರ್ ಸೆಟ್, ಟೇಬಲ್ಗಳನ್ನು ಪುಡಿ ಮಾಡಲಾಗಿದೆ. ಅಲ್ಲಿದ್ದ ಹುಡುಗಿಯರಲ್ಲಿ ನೀವು ವೇಶ್ಯಾವಾಟಿಕೆ ದಂಧೆ ಮಾಡುತ್ತಿದ್ದೀರಾ.? ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲಿದ್ದ ಹುಡುಗಿಯರು ಕಿರುಚಾಡುವ ವೀಡಿಯೋ ವೈರಲ್ ಆಗಿದೆ.
ಮಂಗಳೂರು : ಅನೈತಿಕ ಚಟುವಟಿಕೆ ನಡೆಸುತ್ತಿದ್ದ ಮಸಾಜ್ ಪಾರ್ಲರ್ ಮೇಲೆ ಶ್ರೀರಾಮ ಸೇನೆ ಕಾರ್ಯಕರ್ತರು ದಾಳಿ ನಡೆಸಿದ ಘಟನೆ ನಡೆದಿದೆ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಪಕ್ಕದಲ್ಲಿರುವ ಬಿಜೈ ಬಳಿಯ ಕಲರ್ಸ್ ಬ್ಯೂಟಿ ಪಾರ್ಲರ್ ನಲ್ಲಿ ಈ ಘಟನೆ ನಡೆದಿದೆ. ಮಸಾಜ್ ಸೆಂಟರ್ ಗೆ ದಾಳಿ ನಡೆಸಿ ಶ್ರೀರಾಮ ಸೇನೆ ಗಲಾಟೆ ನಡೆಸಿದ್ದು, ಸ್ಪಾ ಸೆಂಟರ್ ನಲ್ಲಿ ಅನೈತಿಕ ಚಟುವಟಿಕೆ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಬಿಜೈ ಬಳಿಯ ಕಲರ್ಸ್ ಹೆಸರಿನ ಮಸಾಜ್ ಪಾರ್ಲರ್ ಮೇಲೆ ಶ್ರೀರಾಮ ಸೇನೆ ದಾಳಿ ಮಾಡಿದ್ದಾರೆ. ಈ ವೇಳೆ ಇಲ್ಲಿ ಅನೈತಿಕ ಚಟುವಟಿಕೆ ಬೆಳಕಿಗೆ ಬಂದಿದೆ. ಮಸಾಜ್ ಸೆಂಟರ್ ಮೇಲೆ ಶ್ರೀರಾಮ ಸೇನೆ ದಾಳಿ ಮಾಡಿದೆ ಮಂಗಳೂರಿನ ಕೆಎಸ್ಆರ್ಟಿಸಿ ಬಳಿ ಇರುವ ಮಸಾಜ್ ಸೆಂಟರ್ ಗೆ ಶ್ರೀರಾಮ ಸೇನೆ ಕಾರ್ಯಕರ್ತರು ನುಗ್ಗಿದ್ದಾರೆ. ಮಸಾಜ್ ಪಾರ್ಲರ್ನ ಪೀಠೋಪಕರಣ, ಕಂಪ್ಯೂಟರ್ ಸೆಟ್, ಟೇಬಲ್ಗಳನ್ನು ಪುಡಿ ಮಾಡಲಾಗಿದೆ. ಅಲ್ಲಿದ್ದ ಹುಡುಗಿಯರಲ್ಲಿ ನೀವು ವೇಶ್ಯಾವಾಟಿಕೆ ದಂಧೆ ಮಾಡುತ್ತಿದ್ದೀರಾ.? ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲಿದ್ದ…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
