Author: Tulunada Surya

ಕಾರ್ಮಿಕರ ಆರೋಗ್ಯ ವಿಮೆ (ಇಎಸ್ಐ) ಅಡಿಯಲ್ಲಿ ಚಿಕಿತ್ಸೆ ಪಡೆಯುವ ವಿಮೆದಾರರು ಹಾಗೂ ಅವರ ಕುಟುಂಬ ಸದಸ್ಯರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯದಿಂದಾಗಿ ವೈದ್ಯಕೀಯ ಸೌಲಭ್ಯ ಪಡೆಯುವಲ್ಲಿ ತೀವ್ರ ತೊಂದರೆಯಾಗುತ್ತಿದ್ದು ಇನ್ನೂ ಸಹ ಸರ್ಕಾರ ಎಚ್ಚೆತ್ತುಕೊಳ್ಳದಿರುವುದು ಖಂಡನೀಯವೆಂದು ಶಾಸಕ ವೇದವ್ಯಾಸ ಕಾಮತ್ ರವರು ಆಕ್ರೋಶ ವ್ಯಕ್ತಪಡಿಸಿದರು. ಇಎಸ್ಐ ಆಸ್ಪತ್ರೆಗಳು ಖಾಸಗಿ ಆಸ್ಪತ್ರೆಗಳೊಂದಿಗೆ ಮಾಡಿಕೊಂಡಿರುವ ಹೊಂದಾಣಿಕೆ ಅವಧಿಯು ಕಳೆದ ಸಪ್ಟೆಂಬರ್ 30ನೇ ತಾರೀಕಿನಂದು ಅಂತ್ಯಗೊಂಡಿದೆ. ಹೀಗಾಗಿ ಅಕ್ಟೋಬರ್ 1 ರಿಂದ ರೋಗಿಗಳಿಗೆ ತುರ್ತು ಸಂದರ್ಭಗಳಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಉನ್ನತ ಮಟ್ಟದ ಖಾಸಗಿ ಆಸ್ಪತ್ರೆಗಳಿಗೆ ದಾಖಲಾಗಲು ಸಾಧ್ಯವಾಗುತ್ತಿಲ್ಲ. ನಾವು ಇಎಸ್ಐ ಸೌಲಭ್ಯ ಹೊಂದಿದ್ದರೂ ಯಾಕೆ ಕೊಡುತ್ತಿಲ್ಲ ಎಂದು ರೋಗಿಗಳ ಸಂಬಂಧಿಕರು ಆಸ್ಪತ್ರೆಯ ವೈದ್ಯಾಧಿಕಾರಿಗಳನ್ನು ಪ್ರಶ್ನಿಸುತ್ತಿದ್ದು, ರಾಜ್ಯ ಸರ್ಕಾರದ ತಪ್ಪಿಗೆ ಅಧಿಕಾರಿಗಳು ಪರಿತಪಿಸುವಂತಾಗಿದೆ. ಈ ಬಗ್ಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೂ ಮನವಿ ಮಾಡಲಾಗಿದೆ ಎಂದರು. ರಾಜ್ಯ ಸರ್ಕಾರ ನಿಗದಿತ ಮೊತ್ತವನ್ನು ಪಾವತಿಸಿ ಸೂಕ್ತ ಕ್ರಮ ಕೈಗೊಂಡಿದ್ದರೆ ರೋಗಿಗಳು ಇಂದು ಪರದಾಡುವ ಸ್ಥಿತಿ ಬರುತ್ತಿರಲಿಲ್ಲ. ಇದೇ…

Read More

ಮೂಡುಬಿದಿರೆ ಠಾಣೆಯ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ನೇತೃತ್ವದ ಪೊಲೀಸರು ಮೂಡಬಿದ್ರೆ ಗಂಟಾಲ್ ಕಟ್ಟೆಯ ಜಲೀಲ್ ಎಂಬಾತನ ಮನೆ ಹಿಂಭಾಗದ ಗುಡ್ಡೆಯ ಕಾಡಿನಲ್ಲಿ ಜಾನುವಾರುಗಳನ್ನು ವಧಿಸಿ ಮತ್ತು ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ದಾಳಿ ನಡೆಸಿದ್ದಾರೆ. ಪೊಲೀಸ್‌ ದಾಳಿಯ ವೇಳೆ ಜಲೀಲ್ ಕಲ್ಲಬೆಟ್ಟು, ಸಾಹಿಲ್, ಈತನ ಪುತ್ರ ಸೊಹೇಲ್ ಮತ್ತು ಕುದ್ರೋಳಿ ನಿವಾಸಿ ಮೊಹಮ್ಮದ್ ಅಶ್ರಫ್ ಪರಾರಿಯಾಗಿದ್ದಾರೆ.ಸ್ಥಳದಲ್ಲಿ 50 ಕೆ.ಜಿ. ಜಾನುವಾರು ಮಾಂಸ ಹಾಗೂ ಮಾಂಸ ತಯಾರಣೆಗೆ ಬಳಸುವ ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ. ಜೊತೆಗೆ, ಮಾಂಸಕ್ಕಾಗಿ ತಂದಿದ್ದ ಮೂರು ಜಾನುವಾರುಗಳನ್ನು ವಶಕ್ಕೆ ಪಡೆದು ಸ್ಥಳೀಯ ಗೋಶಾಲೆಗೆ ಒಪ್ಪಿಸಲಾಗಿದೆ. ಮೂಡಬಿದ್ರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣದ ಬಗ್ಗೆ ತನಿಖೆ ಮುಂದುವರಿದಿದೆ.

Read More

ಉಡುಪಿ, ಅ.7: ಉಡುಪಿ ಮತ್ತು ಸುತ್ತಮುತ್ತಲಿನ ಶಾಲೆಗಳಿಗೆ ನಕಲಿ ಬಸ್ ವಿಮಾ ಪಾಲಿಸಿಗಳನ್ನು ನೀಡಿದ ಆರೋಪದ ಮೇರೆಗೆ ಖಾಸಗಿ ವಿಮಾ ಕಂಪನಿಯ ಇಬ್ಬರು ಮಾಜಿ ಉದ್ಯೋಗಿಗಳನ್ನು ಉಡುಪಿ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಸುಮಾರು ₹1.5 ಕೋಟಿ ಮೌಲ್ಯದ ದೊಡ್ಡ ಪ್ರಮಾಣದ ವಿಮಾ ವಂಚನೆ ಪ್ರಕರಣವು ಬಯಲಿಗೆ ಬಂದಿದೆ. ಬಂಧಿತರು:ಈ ಪ್ರಕರಣದಲ್ಲಿ ಬ್ರಹ್ಮಾವರದ ರಾಕೇಶ್ ಎಸ್ (33) ಹಾಗೂ ಶಿರಸಿಯ ಚರಣ್ ಬಾಬು ಮೇಸ್ತ ಎಂಬುವರನ್ನು ಬಂಧಿಸಲಾಗಿದೆ. ಇಬ್ಬರೂ ಈಗಾಗಲೇ ಖಾಸಗಿ ವಿಮಾ ಕಂಪನಿಯಲ್ಲಿ ಕೆಲಸ ನಿರ್ವಹಿಸಿದ್ದವರು. ವಂಚನೆಯ ಬಗೆಗಿನ ವಿವರಗಳು:ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಸೋಮವಾರ ಉಡುಪಿ ಎಸ್ಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, ಆರೋಪಿಗಳು ವಿವಿಧ ಶಾಲೆಗಳಿಗೆ ಬೇಟಿ ನೀಡಿ, “ವೈಧ ವಿಮಾ ಸಂಸ್ಥೆ ಪ್ರತಿನಿಧಿಸುತ್ತೇವೆ” ಎಂದು ನಂಬಿಸಿ ಶಾಲಾ ಬಸ್‌ಗಳಿಗೆ ನಕಲಿ ಪಾಲಿಸಿಗಳನ್ನು ನೀಡಿದ್ದರೆಂದು ತಿಳಿಸಿದ್ದಾರೆ. ಅವರು ನೀಡಿದ ಪಾಲಿಸಿಗಳು ನಿಜವಾದವು ಎಂದು ನಂಬಿದ ಹಲವಾರು ಶಾಲೆಗಳು ಆಫರ್‌ಗಳನ್ನು ಸ್ವೀಕರಿಸಿದ್ದವು. ಆದರೆ, ಕುಂದಾಪುರದಲ್ಲಿ ನಡೆದ ಅಪಘಾತ…

Read More

ಮಂಗಳೂರು: ‘ದಸರಾ ಕನ್ನಡಿಗರ ನಾಡಹಬ್ಬ. ವಿಜಯನಗರ ಅರಸರ ಕಾಲದಿಂದಲೂ ಅದು ಕೇವಲ ಧಾರ್ಮಿಕ ಆಚರಣೆಯಾಗಿರದೆ ಅದರಲ್ಲಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಒತ್ತು ನೀಡಲಾಗುತ್ತಿತ್ತು. ಆಧುನಿಕ ಸಮಾಜದ ಸಂಭ್ರಮೋಲ್ಲಾಸ ಏನೇ ಇದ್ದರೂ ಈ ಉತ್ಸವ ನಡೆವಲ್ಲಿ ನಮ್ಮ ಸಾಹಿತ್ಯ- ಸಂಸ್ಕೃತಿಯ ಮೆರುಗು ನೀಡಿ ದಸರಾವನ್ನು ಅರ್ಥಪೂರ್ಣವಾಗಿ ಆಚರಿಸುವ ಅಗತ್ಯವಿದೆ’ ಎಂದು ಕವಿ, ಸಾಹಿತಿ ಮತ್ತು ಮಾಧ್ಯಮ ತಜ್ಞ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಹೇಳಿದ್ದಾರೆ.ಶರನ್ನವರಾತ್ರಿ ಪ್ರಯುಕ್ತ ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ಅಕ್ಟೋಬರ್ 2ರಂದು ಜರಗಿದ ‘ದಸರಾ ಕವಿಗೋಷ್ಠಿ – 2025′ ನವರಸ ರಂಜನೆಯ ಬಹುಭಾಷಾ ಕವಿಮೇಳದ ಅಧ್ಯಕ್ಷ ಸ್ಥಾನದಿಂದ ಅವರು ಮಾತನಾಡಿದರು.’ನವರಾತ್ರಿ ಧಾರ್ಮಿಕ ಹಬ್ಬ. ಹಬ್ಬಗಳಲ್ಲಿ ರಾಷ್ಟ್ರೀಯ, ನಾಡ ಹಬ್ಬ, ಜಾತಿ-ಧರ್ಮಗಳಿಗೆ ಸಂಬಂಧಿಸಿದವುಗಳಿವೆ. ಹಿಂದಿನ ಕಾಲದಲ್ಲೂ ಹಬ್ಬಗಳಿದ್ದವು. ಆಗ ಮಾಧ್ಯಮಗಳ ಸೌಕರ್ಯ ಈಗಿನಷ್ಟು ಇರಲಿಲ್ಲ. ಇಚ್ಛಾಶಕ್ತಿಯಿಂದ ನೈತಿಕ ನೆಲೆಯಲ್ಲಿ ಆಚರಣೆ ಇತ್ತು’ ಎಂದ ಅವರು ‘ಹಬ್ಬ ಎನ್ನುವುದು ಮನುಕುಲವನ್ನು ಬೆಸೆಯುವ ಆಚರಣೆಯಾಗಬೇಕು. ಈ ಆಚರಣೆಗಳು ವಿಘಟನೆಯನ್ನು ಮಾಡುವುದಾಗಬಾರದು ಎಂಬ ಮರ್ಮವನ್ನು ನಾವೆಲ್ಲ…

Read More

ಉಚ್ಚಿಲ: ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ನಡೆದ ಭವ್ಯ ಶೋಭಾ ಯಾತ್ರೆಯಲ್ಲಿ ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಜಿಲ್ಲಾ ಘಟಕದ ಅಧ್ಯಕ್ಷೆ ಸುನಂದ ಕೋಟ್ಯಾನ್ ನೇತೃತ್ವದಲ್ಲಿ ತಂಡದ ಸದಸ್ಯರು ಭಕ್ತಿಪೂರ್ವಕವಾಗಿ ಭಾಗವಹಿಸಿದರು. ಈ ಪವಿತ್ರ ಯಾತ್ರೆಯಲ್ಲಿ ಶ್ರೀಮತಿ ಹರಿಣಾಕ್ಷಿ ಉಚ್ಚಿಲ, ಜ್ಞಾನವಿ ಉಚ್ಚಿಲ, ನಿರ್ಮಲ ಎಂ. ಎಂಡನ್, ಉಷಾ ಉಡುಪಿ, ಗುಣವತಿ ಬೆಳಪು, ಪುಷ್ಪಲತಾ ಉದ್ಯಾವರ, ಕುಶಲ, ಲಕ್ಷ್ಮಿ, ಶ್ವೇತಾ ಉದ್ಯಾವರ, ರಾಜೇಶ್ವರಿ ಉಚ್ಚಿಲ, ಕೇಸರಿ ಶೆಟ್ಟಿ ಉಚ್ಚಿಲ, ಸುನಂದ ಉಚ್ಚಿಲ, ರೋಹನ್ ಉಚ್ಚಿಲ ಹಾಗೂ ಕವನ್ ಉಚ್ಚಿಲ ಮುಂತಾದವರು ಉಪಸ್ಥಿತರಿದ್ದರು. ಈ ಸಂದರ್ಭ ಧಾರ್ಮಿಕ ಶ್ರದ್ಧೆ, ಸಂಸ್ಕೃತಿಯ ಸಂರಕ್ಷಣೆ ಹಾಗೂ ಸಮಾಜದ ಒಗ್ಗಟ್ಟು ಪುನರುಚ್ಚರಿಸಲಾಯಿತು. ಶೋಭಾಯಾತ್ರೆ ಊರಿನ ಭಕ್ತರಲ್ಲಿ ಉತ್ಸಾಹ ಮೂಡಿಸಿತು

Read More

ಬೆಂಗಳೂರು, ಅ.2 – ಬಹುನಿರೀಕ್ಷಿತ “ಕಾಂತಾರ ಚಾಪ್ಟರ್ 1” ಸಿನಿಮಾ ಇಂದು ವಿಜaydಶಮಿ ವಿಶೇಷವಾಗಿ ವಿಶ್ವದಾದ್ಯಂತ ಗ್ರ್ಯಾಂಡ್ ರಿಲೀಸ್ ಆಗಿದೆ. ಸಿನಿಮಾ ವೀಕ್ಷಣೆಗೆ ಅಭಿಮಾನಿಗಳು ಮುಂಜಾವೆಯೇ ಚಿತ್ರಮಂದಿರಗಳಿಗೆ ಹರಿದು ಬಂದ ದೃಶ್ಯಗಳು ನಗರಾದ್ಯಂತ ಕಂಡು ಬಂದವು. ನಗರದ ವೀರೇಶ್, ಸಂತೋಷ್ ಚಿತ್ರಮಂದಿರ ಹಾಗೂ ಪ್ರಮುಖ ಮಲ್ಟಿಪ್ಲೆಕ್ಸ್‌ಗಳಲ್ಲಿ ಬೆಳಗ್ಗೆ 6:30ಕ್ಕೆ ಮೊದಲ ಶೋ ಆರಂಭವಾಗಿದ್ದು, ಎಲ್ಲಾ ಥಿಯೇಟರ್‌ಗಳಲ್ಲಿ ಹೌಸ್‌ಫುಲ್Crowd ಕಂಡು ಬಂದಿದೆ. 🎥 ಬೃಹತ್‌ ಪ್ರಮಾಣದ ರಿಲೀಸ್:• ಕರ್ನಾಟಕದಾದ್ಯಂತ 350+ ಚಿತ್ರಮಂದಿರಗಳಲ್ಲಿ ಬಿಡುಗಡೆ• ಮೊದಲ ದಿನವೇ 2,000+ ಶೋಗಳು• ಭಾರತ ಮತ್ತು ವಿದೇಶಗಳಲ್ಲಿ 7,000+ ಸ್ಕ್ರೀನ್‌ಗಳಲ್ಲಿ, 7 ಭಾಷೆಗಳಲ್ಲಿ ಬಿಡುಗಡೆ ⭐ ತಾರಾಬಳಗ ಮತ್ತು ನಿರ್ದೇಶನ: ರಿಷಬ್ ಶೆಟ್ಟಿ ನಿರ್ದೇಶಿಸಿ ನಟನೆಯನ್ನೂ ಹೊತ್ತಿದ್ದರೆ, ಅವರೊಂದಿಗೆ ರುಕ್ಮಿಣಿ ವಸಂತ್, ಗುಲ್ಶನ್ ದೇವಯ್ಯ, ತಮಿಳು ನಟ ಜಯರಾಂ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. 🙌 ಪ್ರೀಮಿಯರ್‌ ಶೋಗೆ ಭರ್ಜರಿ ಪ್ರತಿಕ್ರಿಯೆ: ಪ್ರಮುಖ ಥಿಯೇಟರ್‌ಗಳಲ್ಲಿ ನಡೆದ ಪ್ರೀಮಿಯರ್ ಶೋಗೆ ಅಭೂತಪೂರ್ವ ಪ್ರತಿಕ್ರಿಯೆ ದೊರೆತಿದ್ದು, ರಿಷಬ್ ಶೆಟ್ಟಿ ಅವರ ನಿರ್ದೇಶನ,…

Read More

ಮಂಗಳೂರು, ಅ. 2 :-ಸ್ವಾತಂತ್ರ ಹೋರಾಟದಲ್ಲಿ ಮಹಾತ್ಮ ಗಾಂಧೀಜಿಯವರ ಪಾತ್ರ ಸ್ಮರಣೀಯ. ಯುವಜನತೆ ಗಾಂಧೀಜಿಯವರ ಸಂದೇಶವನ್ನು ಅರ್ಥೈಸಿಕೊಂಡು ಅವರ ಜೀವನ ಚರಿತ್ರೆಯನ್ನು ತಿಳಿದುಕೊಳ್ಳಬೇಕು ಎಂದು ಅರೋಗ್ಯ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.ಅವರು ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಾರ್ವಜನಿಕ ಶಿಕ್ಷಣ ಇಲಾಖೆ ಭಾರತ ಸೇವಾದಳ ದಕ್ಷಿಣ ಕನ್ನಡ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಗುರುವಾರ ನಗರದ ರಾಜಾಜಿ ಪಾರ್ಕ್ ನಲ್ಲಿ ನಡೆದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು. ಗಾಂಧೀಜಿಯವರು ಅಸ್ಪೃಶ್ಯತೆ ವಿರುದ್ಧ ಮತ್ತು ಮಹಿಳೆಯರನ್ನು ಸಬಲರನ್ನಾಗಿ ಮಾಡಲು ಅನೇಕ ಹೋರಾಟಗಳನ್ನು ನಡೆಸಿದ್ದಾರೆ. ಬಡವರಿಗೆ ತಮ್ಮ ಹಕ್ಕುಗಳನ್ನು ದೊರಕಿಸುವಲ್ಲಿ ಅವರ ಪಾತ್ರ ಶ್ಲಾಘನೀಯ. ಮಹಾತ್ಮ ಗಾಂಧೀಜಿ ಅವರು ರಾಷ್ಟ್ರಕ್ಕೆ ನೀಡಿದ ಕೊಡುಗೆ ಅಪಾರವಾದದ್ದು. ವಿದ್ಯಾರ್ಥಿಗಳು ಗಾಂಧೀಜಿಯ ತತ್ವಗಳನ್ನು ತಮ್ಮಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅವರು ಹೇಳಿದರು. ಜನರು ಪರಸ್ಪರ ಸಹೋದರತ್ವ, ಪ್ರೀತಿ…

Read More

ಮಂಗಳೂರು: ನಗರದ ವಿ. ಟಿ. ರಸ್ತೆಯಲ್ಲಿರುವ ಶ್ರೀ ಕೃಷ್ಣ ಮಂದಿರದಲ್ಲಿ ವಿ.ಟಿ. ರೋಡ್ ಬಾಲಕ ವೃಂದ (ರಿ) ಆಶ್ರಯದಲ್ಲಿ 27 ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವವನ್ನು ಧಾರ್ಮಿಕ ವಿಧಿವಿಧಾನಗಳೊಂದಿಗೆ ವೈಭವಯುತವಾಗಿ ಆಚರಿಸಲಾಯಿತು. ಸೆಪ್ಟೆಂಬರ್ 29 ರಂದು ಶ್ರೀ ಶಾರದಾ ಮಾತೆಯನ್ನು ಪ್ರತಿಷ್ಠಾಪಿಸಲಾಯಿತು. ಮೂರು ದಿನಗಳ ತನಕ ನಡೆದ ಕಾರ್ಯಕ್ರಮದಲ್ಲಿ ವಿಶೇಷ ದೀಪಾಂಲಕಾರ ಸಹಿತ ವಿವಿಧ ಕಾರ್ಯಕ್ರಮಗಳು ನಡೆದವು. ಸೆಪ್ಟೆಂಬರ್ 30 ರಂದು ಸಂಜೆ ಮಹರ್ಷಿ ವಾಣಿ ಖ್ಯಾತಿಯ ಬ್ರಹ್ಮರ್ಷಿ ಆನಂದ ಸಿದ್ದಿ ಪೀಠಂನ ಮಹರ್ಷಿ ಆನಂದ ಗುರೂಜಿ ಸಪತ್ನೀಕರಾಗಿ ಭೇಟಿ ನೀಡಿ ದೇವರ ದರ್ಶನ ಮಾಡಿ ಪ್ರಸಾದ ಸ್ವೀಕರಿಸಿದರು. ಇದೇ ಹೊತ್ತಿನಲ್ಲಿ ದೀಪಾಲಂಕಾರದ ವೈಭವವನ್ನು ಕಣ್ತುಂಬಿಕೊಂಡ ಗುರೂಜಿಯವರು ಯುವಕರ ಒಗ್ಗಟ್ಟು, ತನ್ಮಯತೆ ಮತ್ತು ಗುರುಹಿರಿಯರ ಮೇಲಿನ ಭಕ್ತಿಯನ್ನು ಶ್ಲಾಘಿಸಿದರು. ಮುಂದಿನ ವರ್ಷಗಳಲ್ಲಿ ಈ ಶಾರದಾ ಮಹೋತ್ಸವ ಇನ್ನಷ್ಟು ವೈಭವದಿಂದ ನಡೆಯುವಂತಾಗಲಿ ಎಂದು ಹಾರೈಸಿದರು. ಬಾಲಕ ವೃಂದದ ಪ್ರಮುಖರು, ಗಣ್ಯರು, ಭಕ್ತರು ಉಪಸ್ಥಿತರಿದ್ದರು. ಅಕ್ಟೋಬರ್ 1 ರಂದು ಶಾರದಾ ಮಾತೆಯ…

Read More

ಕಾಪು: ನವರಾತ್ರಿಯ ಪವಿತ್ರ ಸಂದರ್ಭ, ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದ ನೇತೃತ್ವದಲ್ಲಿ ಹಿರಿಯಡ್ಕದ ಶ್ರೀ ವೀರಭದ್ರ ದೇವಾಲಯದಲ್ಲಿ ಭಕ್ತಿಯಿಂದ ರಂಗೋಲಿ ಹಾಕಿ ದೀಪ ಬೆಳಗಿಸುವ ಮೂಲಕ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕಾಪು ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಅನುಸೂಯ ಶೆಟ್ಟಿ ನೇತೃತ್ವ ವಹಿಸಿದ್ದರು. ಗೌರವಾಧ್ಯಕ್ಷೆ ರೋಷನ್ ಬಳ್ಳಾಲ್, ಪ್ರಧಾನ ಕಾರ್ಯದರ್ಶಿ ದೀಪ ಶೆಟ್ಟಿ, ಸಾಮಾಜಿಕ ಜಾಲತಾಣ ಸಂಚಾಲಕಿ ಶಶಿಕಲಾ ಶೆಟ್ಟಿ, ಪ್ರಮುಖ ಪದಾಧಿಕಾರಿಗಳಾದ ರೋಹಿಣಿ ಶೆಟ್ಟಿ ,ಸವಿತಾ ಶೆಟ್ಟಿ, ಜಯಂತಿ ಆಚಾರಿ, ಶ್ಯಾಮಲಾ ಶೆಟ್ಟಿ, ವಿನೋದ ಮತ್ತು ಹಲವಾರು ಸಂಘಟಕರವರು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿದರು. ಸಾಂಸ್ಕೃತಿಕವಾಗಿ ನವರಾತ್ರಿ ಆಚರಿಸುವ ಮೂಲಕ ಮಹಿಳೆಯರ ಸೃಜನಶೀಲತೆಯನ್ನು ಪ್ರಚೋದಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಅದರಲ್ಲಿ ವಿವಿಧ ವರ್ಣಗಳ ರಂಗೋಲಿ ಮೂಲಕ ನವಚೈತನ್ಯ ಬಿಂಬಿಸಲಾಯಿತು.

Read More

ನವದೆಹಲಿ, ಅ.1: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸ್ಥಾಪನೆಯ 100ನೇ ವರ್ಷಾಚರಣೆಯ ಅಂಗವಾಗಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಬುಧವಾರ ವಿಶೇಷವಾಗಿ ವಿನ್ಯಾಸಗೊಳಿಸಲಾದ ₹100 ಮುಖಬೆಲೆಯ ನಾಣ್ಯ ಮತ್ತು ಸ್ಮರಣಾರ್ಥ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದರು. ಈ ನಾಣ್ಯದಲ್ಲಿ ಒಂದು ಬದಿಯಲ್ಲಿ ಭಾರತ ಸರ್ಕಾರದ ಲಾಂಛನ ಹಾಗೂ ‘ಸತ್ಯಮೇವ ಜಯತೆ’ ಮುದ್ರೆಯೊಂದಿಗೆ ಸಿಂಹದ ಮೇಲೆ ಕುಳಿತಿರುವ ಭಾರತ ಮಾತೆಯ ಚಿತ್ರವಿದೆ. ಇನ್ನೊಂದು ಬದಿಯಲ್ಲಿ, ಆಕೆಯ ಮುಂದೆ ನಮಸ್ಕಾರ ಸಲ್ಲಿಸುತ್ತಿರುವ ಸ್ವಯಂಸೇವಕರ ಚಿತ್ರವಿದೆ. “ಭಾರತೀಯ ಕರೆನ್ಸಿಯಲ್ಲಿ ಭಾರತ ಮಾತೆಯ ಚಿತ್ರಣ ಇದೇ ಮೊದಲು ಕಾಣಿಸಿಕೊಂಡಿದೆ,” ಎಂದು ಮೋದಿ ಅವರು ವಿವರಿಸಿದರು. ಅಂಚೆ ಚೀಟಿಯಲ್ಲಿ 1963ರ ಗಣರಾಜ್ಯೋತ್ಸವ ಮೆರವಣಿಗೆಯಲ್ಲಿ ಭಾಗವಹಿಸಿದ ಆರ್‌ಎಸ್‌ಎಸ್ ಸ್ವಯಂಸೇವಕರ ಐತಿಹಾಸಿಕ ದೃಶ್ಯವನ್ನು ಅಳವಡಿಸಲಾಗಿದೆ, ಇದು ಸಂಸ್ಥೆಯ ರಾಷ್ಟ್ರಪರ ಸೇವಾ ಇತಿಹಾಸವನ್ನು ಸ್ಮರಿಸುತ್ತದೆ. ಶತಮಾನೋತ್ಸವ ಸಮಾರಂಭದಲ್ಲಿ ಭಾಷಣ ಮಾಡುತ್ತಿದ್ದ ಪ್ರಧಾನಿ ಮೋದಿ, “ಆರ್‌ಎಸ್‌ಎಸ್ ನ ಹಾದಿಯಲ್ಲಿ ನೂರಾರು ಜೀವಗಳು ಅರಳಿವೆ. ಇದು ನದಿಯ ದಡದಲ್ಲಿ ಬೆಳೆಯುವ ನಾಗರಿಕತೆಗಳಂತೆ, ರಾಷ್ಟ್ರ ನಿರ್ಮಾಣದಲ್ಲಿ ಮಹತ್ವದ ಪಾತ್ರವಹಿಸಿದೆ,”…

Read More