- ಹೆಕ್ಕಡ್ಕ–ಬೈಲೂರು ಭಾಗದ ಹಿರಿಯ ಶಿಕ್ಷಕ ಭುಜಬಲಿ ಅಧಿಕಾರಿ ವಿಧಿವಶ
- ಸೌಂದರ್ಯ ಸ್ಪರ್ಧೆ: ಮುಲ್ಕಿಯ ಶಿಖಾ ಸಿಶೀಲ್ ಗೆ ಮಿಸ್ಸ್ ದಾಯ್ಜಿವರ್ಲ್ಡ್-2026 ಕಿರೀಟ
- ಫೆಬ್ರವರಿ 22ರಂದು ಸಂಜೆ 5 ಗಂಟೆಗೆ ಕುಮಾರಿ ಶ್ರೇಯ ರಾವ್ ಸಣ್ಣಯ್ಯರ ಭರತನಾಟ್ಯ ರಂಗಪ್ರವೇಶ ಸಮಾರಂಭ
- ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಬ್ಯಾಂಕ್ ಮ್ಯಾನೇಜರ್ ವಿರುದ್ಧ ಪ್ರಕರಣ ದಾಖಲು
- ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ ಆರೋಪಿ ಸರೆ
- ಖ್ಯಾತ ಶಿಕ್ಷಣ ತಜ್ಞ, ದೀರ್ಘದೃಷ್ಟಿಯ ಶಿಕ್ಷಣ ಸಂಸ್ಥಾಪಕ ಹಾಗೂ ಉದ್ಯಮಿ ಡಾ. ಸಿಎ ಎ. ರಾಘವೇಂದ್ರ ರಾವ್ ನಿಧನ
- ಯಶ್ ಪಾಲ್ ಸುವರ್ಣ ನಿತೇಶ್ ರಾಣೆ ಭೇಟಿ ಅಂತಾರಾಜ್ಯ ಮೀನುಗಾರಿಕೆ ಸಮಸ್ಯೆ ಪರಿಹಾರಕ್ಕೆ ಭರವಸೆ
- ದಲಿತ ಮಹಿಳೆಯ ಗಂಬೀರ ಆರೋಪ ಸಿ.ಐ.ಡಿ. ತನಿಖೆ ಒಪ್ಪಿಸಿ ಆರೋಪಿತನ ಹಾಗೂ ಸಂಬಂಧಿತ ವ್ಯಕ್ತಿಗಳ ದೂರವಾಣಿ ಕರೆಗಳ ಪರಿಶೀಲನೆ ಮಾಡುವಂತೆ ತುಳುನಾಡ ರಕ್ಷಣಾ ವೇದಿಕೆ ಪ್ರಶಾಂತ್ ಭಟ್ ಕಡಬ ಆಗ್ರಹ
Author: Tulunada Surya
ಉಡುಪಿ: ಹಾವಂಜೆ ಗ್ರಾಮದ ತ್ರಿವರ್ಣ ವಿಶ್ವವೇದಿಕೆ (ರಿ.), ಕೀಳಂಜೆ ಇದರ 12ನೇ ವಾರ್ಷಿಕೋತ್ಸವ ಸಮಾರಂಭ ಡಿ. 3ರಂದು ಕೀಳಂಜೆ ಶ್ರೀ ನಂದಿಕೇಶ್ವರ ದೈವಸ್ಥಾನದ ವಠಾರದಲ್ಲಿ ನಡೆಯಿತು. ಇದೆ ಸಂದರ್ಭದಲ್ಲಿ ನಂದಿಕೇಶ್ವರ ದೈವಸ್ಥಾನದ ವಿವಿಧ ಕಾಮಗಾರಿಗಳ ಉದ್ಘಾಟನಾ ಸಮಾರಂಭ ಹಾಗೂ ದಾನಿಗಳಿಗೆ ಸಮ್ಮಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಚಾಣಾಕ್ಯ ಮೇಲೋಡಿಸ್ ಹೆಬ್ರಿ ಇವರಿಂದ ಸಂಗೀತಾ ರಸಮಂಜರಿ, ಸುಪ್ರಸಿದ್ಧ ನಾಟಕ ತಂಡವಾದ ವಿಜಯಕುಮಾರ್ ಕೊಡಿಯಾಲ್ ಬೈಲ್ ನಿರ್ದೇಶನದಲ್ಲಿ ಶಶಿರಾಜ್ ರಾವ್ ಕಾವೂರು ಅವರ ಛತ್ರಪತಿ ಶಿವಾಜಿ ನಾಟಕ ಪ್ರದರ್ಶನ ನಡೆಯಿತು ಎಂದು ತ್ರಿವರ್ಣ ವಿಶ್ವವೇದಿಕೆ (ರಿ.),ಇದರ ಸ್ಥಾಪಕ ಅಧ್ಯಕ್ಷ ಸತೀಶ್ ಪೂಜಾರಿ ಕೀಳಿಂಜೆ ತಿಳಿಸಿದ್ದಾರೆ
ಜಾರ್ಖಂಡ್/ಬಿಹಾರ್: ಜಗದ್ಗುರು ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ವರ್ಯ ಮಹಾ ಸ್ವಾಮೀಜಿ ಅವರು ನವೆಂಬರ್ 27ರಿಂದ ಆರಂಭಿಸಿದ ಐದು ದಿನಗಳ ತೀರ್ಥಯಾತ್ರೆಯ ಅಂಗವಾಗಿ ರಾಂಚಿಯಿಂದ ಜೈನರ ಶಾಶ್ವತ ಸಿದ್ದ ಕ್ಷೇತ್ರವಾದ ಸಮ್ಮೇದ ಶಿಖರ್ಜಿಗೆ ಆಗಮಿಸಿ ನವೆಂಬರ್ 28ರ ಬೆಳಿಗ್ಗೆ 27 ಕಿಮೀ ಪರ್ವತ ಪರಿಕ್ರಮೆಯ 20 ಕೂಟಗಳಲ್ಲಿ ತೀರ್ಥಂಕರರ ಚರಣದರ್ಶನಮಾಡಿದರು. ಅಪರಾಹ್ನ ನಡೆದ ಬೀಸ್ ಪಂಥಿ ಕೋಠಿಯ ಸಿದ್ಧ ಚಕ್ರ ವಿಧಾನದಲ್ಲಿ ಸ್ವಾಮೀಜಿ ಉಪಸ್ಥಿತರಿದ್ದು, ನಡೆದ ಧಾರ್ಮಿಕ ಸಭೆಯಲ್ಲಿ ಆಚಾರ್ಯ ಗಿರಿ ನಾರಸಾಗರ್ ಹಾಗೂ ಸಂಘದ ಮುನಿಗಳು ಭಾಗವಹಿಸಿದರು. ಮೂಡುಬಿದಿರೆ ಸ್ವಾಮೀಜಿಯವರನ್ನು ಅಧ್ಯಕ್ಷ ಅಜಯ್ ಬಾಬು (ಅರಾ) ಪಾದಪೂಜೆ ಮಾಡಿ ಗೌರವಿಸಿದರು. ಗುಣಯತನ ತೀರ್ಥಕ್ಷೇತ್ರದಲ್ಲಿ, 108 ಮುನಿ ಸಮತಾ ಸಾಗರ್ ಮತ್ತು ಉಡುಪಿ ಜಿಲ್ಲೆಯ ಬಸರೂರ್ ಮೂಲದ ಆಚಾರ್ಯ 108 ಶಂಭವ ಸಾಗರ್ ಮುಂತಾದ ಮಹಾಸನ್ಯಾಸಿಗಳು ಸಭೆಯಲ್ಲಿ ಸೇರಿಕೊಂಡರು. ಶಿಖರ್ಜಿ ಅದಿನಾಥ ಸ್ವಾಮಿ ಪಂಚಕಲ್ಯಾಣ ಸಮಾರಂಭದ ಎರಡನೇ ದಿನದ ಕಾರ್ಯಕ್ರಮದಲ್ಲಿ ಆಚಾರ್ಯ ತನ್ಮಯ ಸಾಗರ್ ಮುನಿ ಮಹಾರಾಜ್ ಮೂಡುಬಿದಿರೆ ಸ್ವಾಮೀಜಿಯನ್ನು ಗೌರವಿಸಿ…
ಮಂಗಳೂರು:ಬೆಂಗರೆಯ ಐತಿಹಾಸಿಕ ವೀರಭಾರತಿ ವ್ಯಾಯಾಮ ಶಾಲೆ, 1926ರಲ್ಲಿ ಸ್ಥಾಪಿತವಾಗಿ ಶತಮಾನೋತ್ಸವದ ದಾರಿಯಲ್ಲಿ ಕಾಲಿರಿಸಿರುವ ಹಿನ್ನೆಲೆಯಲ್ಲಿ, ವ್ಯಾಯಾಮ ಶಾಲೆಯ ಜೀರ್ಣೋದ್ಧಾರ ಹಾಗೂ ಶ್ರೀ ರಾಮಚಂದ್ರ–ಆಂಜನೇಯ ದೇವರ ಪ್ರತ್ಯೇಕ ಗರ್ಭಗುಡಿ ನಿರ್ಮಾಣ ಕಾರ್ಯಗಳಿಗೆ ಸಂಚಿಕೆ ಹಾಕಲಾಗಿದೆ. ಈ ಹಿನ್ನೆಲೆಯಲ್ಲಿ ಡಿಸೆಂಬರ್ 5 ರಂದು ಬೆಳಿಗ್ಗೆ 8.55ಕ್ಕೆ ಶಿಲಾನ್ಯಾಸ ಕಾರ್ಯಕ್ರಮ ನಡೆಯಲಿದೆ.ವೇದಮೂರ್ತಿ ಶ್ರೀ ಶಿವಪ್ರಸಾದ್ ತಂತ್ರಿಗಳ ಮಾರ್ಗದರ್ಶನದಲ್ಲಿ ನಾಡೋಜ ಡಾ. ಜಿ. ಶಂಕರ್ ಅವರ ದಿವ್ಯ ಹಸ್ತದಿಂದ ಶಿಲಾನ್ಯಾಸ ನೆರವೇರಲಿದೆ ಎಂದು ಜೀರ್ಣೋದ್ಧಾರ ಶತಮಾನೋತ್ಸವ ಸಮಿತಿಯ ಗೌರವಾಧ್ಯಕ್ಷ ಮೋಹನ್ ಬೆಂಗ್ರೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಶಿಲಾನ್ಯಾಸ ಸಮಾರಂಭ – ಅತಿಥಿವರ್ಯರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಜಿತ್ ಜಿ. ಸುವರ್ಣ, ಅಧ್ಯಕ್ಷರು, ಮೊಗವೀರ ವ್ಯವಸ್ಥಾಪಕ ಶಿಕ್ಷಣ ಮಂಡಳಿ, ಮುಂಬೈ ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಭಾಗವಹಿಸುವವರು:• ಶ್ರೀ ವೇದವ್ಯಾಸ ಕಾಮತ್, ಶಾಸಕರು, ಮಂಗಳೂರು ದಕ್ಷಿಣ• ಶ್ರೀ ಐವನ್ ಡಿ’ಸೋಜಾ, ಸದಸ್ಯರು, ರಾಜ್ಯ ವಿಧಾನ ಪರಿಷತ್• ಶ್ರೀ ಶಶಿಕುಮಾರ್ ಬೆಂಗ್ರೆ (ಬಾಲು), ಮಾಜಿ ಅಧ್ಯಕ್ಷರು, ಜೀರ್ಣೋದ್ಧಾರ ಸಮಿತಿ• ಶ್ರೀ ಮಹಾವಿಷ್ಣು ಶೇಷಶಯನ ಭಜನಾ…
ಬಹು ಮಾಧ್ಯಮಗಳ ನಡುವೆ ಯಕ್ಷಗಾನ ಅಸ್ತಿತ್ವ ಉಳಿಸಿಕೊಂಡಿದೆ: ರವಿರಾಜ ಹೆಗ್ಡೆ ಮಂಗಳೂರು: ‘ಯಕ್ಷಗಾನ ಕರಾವಳಿಯ ಶ್ರೀಮಂತ ಕಲೆ. ಹಿಂದಿನಿಂದಲೂ ಕಲಾವಿದರು, ಸಂಘಟಕರು ಹಾಗೂ ಕಲಾ ಸಂಸ್ಥೆಗಳ ಪರಿಶ್ರಮದಿಂದ ಅದು ಬೆಳೆದು ಬಂದಿದೆ. ಇಂದಿನ ಬಹು ಮಾಧ್ಯಮಗಳ ನಡುವೆ ತಾಂತ್ರಿಕ ಜಗತ್ತಿನ ಸವಾಲುಗಳನ್ನು ಎದುರಿಸಿಯೂ ಯಕ್ಷಗಾನ ತನ್ನ ಅಸ್ತಿತ್ವವನ್ನು ಉಳಿಸಿಕೊಂಡಿದೆ. ಈ ದಿಸೆಯಲ್ಲಿ ಯಕ್ಷಾಂಗಣ ಸಂಸ್ಥೆ ಕಳೆದ ಹನ್ನೆರಡು ವರ್ಷಗಳಿಂದ ಯಕ್ಷಗಾನ ತಾಳಮದ್ದಳೆ ಪ್ರಕಾರಕ್ಕೆ ದೊಡ್ಡ ಮಟ್ಟದ ಕೊಡುಗೆ ನೀಡುತ್ತಾ ಬಂದಿದೆ’ ಎಂದು ದ.ಕ.ಜಿಲ್ಲಾ ಹಾಲುತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ. ರವಿರಾಜ ಹೆಗ್ಡೆ ಹೇಳಿದ್ದಾರೆ. ಯಕ್ಷಾಂಗಣ ಮಂಗಳೂರು, ಯಕ್ಷಗಾನ ಚಿಂತನ – ಮಂಥನ ಮತ್ತು ಪ್ರದರ್ಶನ ವೇದಿಕೆಯು ಮಂಗಳೂರು ವಿ.ವಿ.ಡಾ|ದಯಾನಂದ ಪೈ, ಶ್ರೀ ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರ ಮತ್ತು ಕರ್ನಾಟಕ ಯಕ್ಷ ಭಾರತಿ (ರಿ.) ಪುತ್ತೂರು ಇವರ ಸಹಯೋಗದೊಂದಿಗೆ ನ. 23 ರಿಂದ 29 ರವರೆಗೆ ಮಂಗಳೂರು ವಿವಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಜರಗಿದ ಕರ್ನಾಟಕ ರಾಜ್ಯೋತ್ಸವ ಕಲಾ ಸಂಭ್ರಮದ…
ಮಂಗಳೂರು, ನವೆಂಬರ್ 29, 2025: “ಎಂಸಿಎಫ್ ಹೆಸರು ಉಳಿಸಿ” ಅಭಿಯಾನದ ಪ್ರಾರಂಭಿಕ ಸಭೆ ಶುಕ್ರವಾರ ಮಂಗಳೂರಿನ ವುಡ್ಲ್ಯಾಂಡ್ಸ್ ಹೋಟೆಲ್ನಲ್ಲಿ ಭರ್ಜರಿಯಾಗಿ ನೆರವೇರಿತು. ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ ಎಂಸಿಎಫ್ನ ಮಾಜಿ ಉದ್ಯೋಗಿಗಳು ತಮ್ಮ ಒಗ್ಗಟ್ಟು ಮತ್ತು ಬದ್ಧತೆಯನ್ನು ಸ್ಪಷ್ಟವಾಗಿ ತೋರಿಸಿದರು. ಸಭೆಯ ಆರಂಭವನ್ನು ಹಿರಿಯರು ವೈ.ಎಂ. ದೇವದಾಸ್ ಮತ್ತು ಶೀನ ಪೂಜಾರಿ ದೀಪ ಪ್ರಜ್ವಲನದಿಂದ ನೆರವೇರಿಸಿದರು. ಜಯರಾಮ ಶೆಟ್ಟಿ ಸ್ವಾಗತ ಭಾಷಣ ಮಾಡಿ ಸಭೆಯ ಕಾರ್ಯಾರಂಭ ಮಾಡಿದರು. ಅಭಿಯಾನದ ಹಿನ್ನೆಲೆ, ಅಗತ್ಯತೆ ಮತ್ತು “ಎಂಸಿಎಫ್” ಹೆಸರಿನೊಂದಿಗೆ ಬೆರೆತಿರುವ ಭಾವನಾತ್ಮಕ ಬಾಂಧವ್ಯ ಕುರಿತು ಶಿವರಾಂ ಶೆಟ್ಟಿ ಹೃದಯಸ್ಪರ್ಶಿ ಮಾತುಗಳನ್ನು ಹಂಚಿಕೊಂಡರು. ಉದ್ಯಮದ ಹೆಸರಿನ ಬದಲಾವಣೆ ತಂದಿರುವ ಅಸಮಾಧಾನ, ಮಾನಸಿಕ ನೋವು ಮತ್ತು ಸಾರ್ವಜನಿಕ ವಲಯದಲ್ಲಿ ಹೋರಾಟದ ಧ್ವನಿಯನ್ನು ಪ್ರಬಲವಾಗಿ ಎತ್ತಿಹಿಡಿಯುವ ಅಗತ್ಯತೆಯನ್ನು ಅವರು ಒತ್ತಿ ಹೇಳಿದರು. ಅನಂತರ ನಡೆದ ಮುಕ್ತ ಚರ್ಚೆಯಲ್ಲಿ ಮಾಜಿ ಸಿಬ್ಬಂದಿ ವಿಷ್ಣು ಶಬರಾಯ, ಕೃಷ್ಣಮೂರ್ತಿ ರೈ, ರಾಮಕೃಷ್ಣ ಭಟ್, ರವೀಂದ್ರ ವಿ., ವೈ.ಎಂ. ದೇವದಾಸ್, ಜನಾರ್ಧನ ಗಟ್ಟಿ, ನವಚಂದ್ರ ರಾವ್,…
ಕಾಪು ಸಮೀಪದ ಕೋತಲ್ಕಟ್ಟೆ ಬಳಿ ಭಾನುವಾರ ಮಧ್ಯಾಹ್ನ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ದುರ್ಮರಣಕ್ಕಿಳಿದ ಘಟನೆ ಸ್ಥಳೀಯರಲ್ಲಿ ಬೆಚ್ಚಿಬೀಳುವಂತಾಗಿದೆ. ಅಲಂಕಾರಿಕ ಸಾಮಗ್ರಿ ಸಾಗಿಸುತ್ತಿದ್ದ ಗೂಡ್ಸ್ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಮಧ್ಯದ ಡಿವೈಡರ್ಗೆ ಡಿಕ್ಕಿ ಹೊಡೆದು, ಬಳಿಕ ಸರ್ವಿಸ್ ರಸ್ತೆಗೆ ಪಲ್ಟಿಯಾಗಿ ಬಿದ್ದಿದೆ ಎಂದು ತಿಳಿದುಬಂದಿದೆ. ಟೆಂಪೋದಲ್ಲಿ ಆ ಸಂದರ್ಭದಲ್ಲಿ ಒಟ್ಟು 10 ಮಂದಿ ಕೆಲಸಗಾರರು ಇದ್ದರು ಎಂದು ಮೂಲಗಳು ತಿಳಿಸಿವೆ. ಅಪಘಾತದಲ್ಲಿ ಹಲವು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರಲ್ಲಿ ನಾಲ್ವರು ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಪ್ರಾಣ ಕಳೆದುಕೊಂಡಿರುವುದು ದುರಂತವಾಗಿದೆ. ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆಯೇ ಕಾಪು ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಕುರಿತು ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.
ಮಂಗಳೂರು: ತೀಯಾ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ಪ್ರತ್ಯೇಕ ನಿಗಮ ರಚನೆ ಅಗತ್ಯವಾಗಿದೆ ಎಂದು ಭಾರತೀಯ ತೀಯಾ ಸಮಾಜ ಕೇಂದ್ರ ಸಮಿತಿ ಅಧ್ಯಕ್ಷ ಸದಾಶಿವ ಉಳ್ಳಾಲ್ ಹೇಳಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯಕ್ಕೆ ಡಿಸೆಂಬರ್ 3ರಂದು ಆಗಮಿಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತೀಯಾ ಸಮಾಜದ ವಿವಿಧ ಬೇಡಿಕೆಗಳ ಮನವಿಯನ್ನು ಸಲ್ಲಿಸಲಾಗುವುದಾದ್ದಾಗಿ ಅವರು ತಿಳಿಸಿದರು. ಕುದ್ರೋಳಿ ಭಗವತಿ ಕ್ಷೇತ್ರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವರ್ಕಳದ ಶಿವಗಿರಿ ಮಠ ಹಾಗೂ ಮಂಗಳೂರು ವಿವಿಯ ಶ್ರೀ ನಾರಾಯಣ ಗುರು ಅಧ್ಯಯನ ಪೀಠದ ಸಂಯುಕ್ತ ಆಶ್ರಯದಲ್ಲಿ ಮಹಾತ್ಮಾ ಗಾಂಧೀಜಿ – ನಾರಾಯಣ ಗುರು ವರ್ಕಳ ಸಂವಾದದ ಶತಮಾನೋತ್ಸವ ಹಾಗೂ ಶ್ರೀ ನಾರಾಯಣ ಗುರು ಮಹಾನಿರ್ವಾಣ ಶತಮಾನೋತ್ಸವ ಕಾರ್ಯಕ್ರಮವನ್ನು ಡಿಸೆಂಬರ್ 3ರಂದು ಕೊಣಾಜೆಯ ಮಂಗಳೂರು ವಿವಿಯಲ್ಲಿ ಉದ್ಘಾಟಿಸಲಾಗುತ್ತಿದೆ ಎಂದು ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಮಹೋತ್ಸವಕ್ಕೆ ಚಾಲನೆ ನೀಡಲಿದ್ದು, ಇದೇ ವೇಳೆ ತೀಯಾ ಸಮುದಾಯದ ಬೇಡಿಕೆಯ ಮನವಿಯನ್ನು ಅವರ ಕೈಗೆ ಒಪ್ಪಿಸಲಾಗುವುದು. ಈ ಕುರಿತು ಕುದ್ರೋಳಿ, ಉಳ್ಳಾಲ, ಸಸಿಹಿಟ್ಟು ಮತ್ತು…
ನಾಗೋರಿ, ಮಂಗಳೂರು: ಡಿ.ಕೆ. ಟ್ರಾನ್ಸ್ಪೋರ್ಟ್ & ಲಾಜಿಸ್ಟಿಕ್ ಸರ್ವೀಸಸ್ ಸಂಸ್ಥೆಯ ಹೊಸ ಕಚೇರಿ ಉದ್ಘಾಟನಾ ಹಾಗೂ ಆಶೀರ್ವಾದ ಸಮಾರಂಭವು ನವೆಂಬರ್ 29, 2025ರಂದು ನಾಗೋರಿ, ಕಂಕನಾಡಿ ‘ಬಿ’ ವಿಲ್ಲೇಜ್ ಪ್ರದೇಶದ ಏಂಜಲ್ ರೆಸಿಡೆನ್ಸಿಯಲ್ಲಿ ಭವ್ಯವಾಗಿ ನೆರವೇರಿತು. ಕಾರ್ಯಕ್ರಮವು ಬೆಳಿಗ್ಗೆ 10.30ಕ್ಕೆ ಗಾರ್ಡಿಯನ್ ಏಂಜಲ್ ಚರ್ಚ್ ಪಾರಿಷ್ ಪ್ರೀಸ್ಟ್ ರೆವ್. ಫಾ. ಫ್ರೆಡ್ರಿಕ್ ಮೋಂಟೆರೋ ಹಾಗೂ ಸೋಸಿಯಸ್ ವಿಕಾರ್ ರೆವ್. ಫಾ. ಸ್ಟ್ಯಾನಿ ಫರ್ನಾಂಡ್ಸ್ ಅವರ ಆಶೀರ್ವಾದದೊಂದಿಗೆ ಆರಂಭಗೊಂಡಿತು. ಧರ್ಮಗುರುಗಳು ಸಂಸ್ಥೆಯ ಪ್ರಗತಿ, ಸೇವಾ ನಿಷ್ಠೆಗೆ ಶುಭ ಹಾರೈಸಿದರು. ಮುಖ್ಯ ಅತಿಥಿಗಳು ಮತ್ತು ಗೌರವ ಅತಿಥಿಗಳು ಕಾರ್ಯಕ್ರಮದಲ್ಲಿ ಡಕ್ಷಿಣ ಕನ್ನಡ ಟ್ರಕ್ ಓನರ್ಸ್ ಅಸೋಸಿಯೇಷನ್ ಅಧ್ಯಕ್ಷ ಸುಶಾಂತ್ ಶೆಟ್ಟಿ, ಡಕ್ಷಿಣ ಕನ್ನಡ ಟ್ರಾನ್ಸ್ಪೋರ್ಟ್ ಅಸೋಸಿಯೇಷನ್ ಅಧ್ಯಕ್ಷ ಚಿತ್ರಂಜನ್, ಏಂಜಲ್ ರೆಸಿಡೆನ್ಸಿ ಮಾಲೀಕ ಯೋಗೀಶ್ ಪೂಜಾರಿ ಗೌರವ ಅತಿಥಿಗಳಾಗಿ ಭಾಗವಹಿಸಿ ಸಂಸ್ಥೆಯ ಹೊಸ ಪ್ರಯತ್ನಕ್ಕೆ ಬೆಂಬಲ ಸೂಚಿಸಿದರು. ಹಾಜರಿದ್ದ ಗಣ್ಯರು ಎಂಸಿಸಿ ಬ್ಯಾಂಕ್ ನ ಅದ್ಯಕ್ಷ ಅನಿಲ್ ಲೋಬೊ, ಮಂಗಳೂರು ಮಹಾನಗರ ಪಾಲಿಕೆಯ ವಾರ್ಡ್…
ಮಂಗಳೂರು: ಶಿಯಾನ ಪ್ರೊಡಕ್ಷನ್ ಹೌಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ “ಪಿಲಿಪಂಜ” ತುಳು ಚಲನಚಿತ್ರದ ಎರಡನೇ ಹಾಡಾದ ಫ್ರೆಂಡ್ಷಿಪ್ ಸಾಂಗ್, ಭಾನುವಾರ ಮಂಗಳೂರಿನ ಭಾರತ್ ಮಾಲ್ನಲ್ಲಿ ಅದ್ಧೂರಿಯಾಗಿ ಬಿಡುಗಡೆಗೊಂಡಿತು. ಪ್ರತೀಕ್ ಯು. ಪೂಜಾರಿ ಕಾವೂರು ಅವರ ನಿರ್ಮಾಣದ ಈ ಚಿತ್ರಕ್ಕೆ ಭರತ್ ಶೆಟ್ಟಿ ಕಥೆ, ಪರಿಕಲ್ಪನೆ ಹಾಗೂ ನಿರ್ದೇಶನ ನೀಡುತ್ತಿದ್ದಾರೆ. ಬಿಡುಗಡೆ ಸಮಾರಂಭಕ್ಕೆ ತುಳು ಚಿತ್ರರಂಗ ಮತ್ತು ಸಮಾಜದ ಗಣ್ಯರು ಹಾಜರಿದ್ದು, ಕಾರ್ಯಕ್ರಮಕ್ಕೆ ಮತ್ತಷ್ಟು ಕಳೆ ತುಂಬಿದರು. ತುಳು ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಆರ್. ಧನರಾಜ್, ತುಳುನಾಡ ರಕ್ಷಣಾ ವೇದಿಕೆಯ ಸಂಸ್ಥಾಪಕ ಯೋಗೀಶ್ ಶೆಟ್ಟಿ ಜಪ್ಪು, ನಿರ್ದೇಶಕ ರಝಾಕ್ ಪುತ್ತೂರು, ಮಹಾನಗರ ಪಾಲಿಕೆಯ ಮಾಜಿ ಸದಸ್ಯ ದೀಪಕ್ ಪೂಜಾರಿ, ವೀಣಾ ಮಂಗಳ, ಕ್ಯಾಮ್ಕೋ ಮಾಜಿ ಅಧ್ಯಕ್ಷ ಪ್ರಮೋದ್ ರೈ, ಪ್ರೇಮ್ ಶೆಟ್ಟಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಚಿತ್ರದ ನಿರ್ಮಾಪಕ ಪ್ರತೀಕ್ ಯು. ಪೂಜಾರಿ, ಸಹ-ನಿರ್ಮಾಪಕಿ ಬಿಂದಿಯಾ ಪ್ರತೀಕ್, ನಿರ್ದೇಶಕ ಭರತ್ ಶೆಟ್ಟಿ, ಎಕ್ಸಿಕ್ಯುಟಿವ್ ಪ್ರೊಡ್ಯೂಸರ್ ರಮೇಶ್ ರೈ ಕುಕ್ಕುವಳ್ಳಿ, ಸಂಗೀತ ನಿರ್ದೇಶಕ…
ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರು ಸೇನಾ ಹೆಲಿಕಾಪ್ಟರ್ ಮೂಲಕ ಇಂದು ಮಧ್ಯಾಹ್ನ ಉಡುಪಿಗೆ ಆಗಮಿಸಿದ್ದು, ಆಗಮನ ಕ್ಷಣದಿಂದಲೇ ನಗರದಲ್ಲಿ ಸಂಭ್ರಮದ ವಾತಾವರಣ ಮನೆಮಾಡಿತು. ಉಡುಪಿ ಕರಾವಳಿ ಬೈಪಾಸ್ನಿಂದ ಬನ್ನಂಜೆ ಮಾರ್ಗವಾಗಿ ಕಲ್ಸಂಕದವರೆಗೆ ನಡೆದ ಭವ್ಯ ರೋಡ್ ಶೋದಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ್ದು, ಸಾವಿರಾರು ಜನರ ಘೋಷಣೆಗಳು, ಹರ್ಷೋದ್ಗಾರಗಳು ಹಾಗೂ ಕೈ ಬೀಸುವ ಸಂಭ್ರಮದ ನಡುವೆ ಪ್ರಧಾನಿಯವರ ವಾಹನ ಮೆರವಣಿಗೆ ಮುಂದುವರಿಯಿತು. ರಸ್ತೆ ತುದಿಗಳಲ್ಲಿ ಭದ್ರತಾ ವ್ಯವಸ್ಥೆ ಬಿಗಿಗೊಂಡವು ರೋಡ್ ಶೋ ಹಿನ್ನೆಲೆಯಲ್ಲಿ ಉಡುವಪಿಯ ಪ್ರಮುಖ ರಸ್ತೆಗಳಲ್ಲಿ ಪೊಲೀಸ್ ಇಲಾಖೆಯು ಕಟ್ಟು ನಿಟ್ಟಿನ ಭದ್ರತಾ ಕ್ರಮಗಳನ್ನು ಹಮ್ಮಿಕೊಂಡಿತ್ತು. ಜನರ ಸುರಕ್ಷತೆ ಹಾಗೂ ನಿಯಂತ್ರಣಕ್ಕಾಗಿ ಸಂಪೂರ್ಣ ಮಾರ್ಗದ ಎರಡೂ ಬದಿಗಳಲ್ಲೂ ಉದ್ದಕ್ಕೂ ಬ್ಯಾರಿಕೇಡ್ಗಳನ್ನು ಅಳವಡಿಸಲಾಗಿದ್ದು, ಸಾವಿರಾರು ಜನರು ಸರಿನಿಯಮದಲ್ಲಿ ನಿಂತು ಪ್ರಧಾನಿಯವರನ್ನು ನೋಡುವ ಅಪಾರ ಕುತೂಹಲ ತೋರಿದರು. ಪ್ರಧಾನಿಯವರಿಗೆ ಪುಷ್ಪಾರ್ಚನೆಯೊಂದಿಗೆ ಸ್ವಾಗತ ರೋಡ್ ಶೋ ಆರಂಭವಾದ ಕ್ಷಣದಿಂದಲೇ ಜನರು ಹೂಗುಚ್ಛಗಳು, ಪುಷ್ಪವೃಷ್ಠಿಯ ಮೂಲಕ ಪ್ರಧಾನಿ ನರೇಂದ್ರ ಮೋದಿಗೆ ಸ್ವಾಗತ ಸಲ್ಲಿಸಿದರು. ಪುಟ್ಟ ಮಕ್ಕಳಿಂದ…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
