Author: Tulunada Surya

ಉಡುಪಿ: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಇನ್ನಂಜೆ ಹಾಗೂ ಸುತ್ತಮುತ್ತಲಿನ ಗ್ರಾಮ ಪ್ರದೇಶಗಳಲ್ಲಿ ಇತ್ತೀಚೆಗೆ ಚಿರತೆಗಳ ಸಂಚರಣೆ ಹೆಚ್ಚಾಗಿದ್ದು, ಸಾರ್ವಜನಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ರಾತ್ರಿ ವೇಳೆಯಲ್ಲಿ ವಾಸಸ್ಥಾನಗಳ ಹತ್ತಿರ ಚಿರತೆ ಕಾಣಿಸಿಕೊಂಡಿರುವ ಘಟನೆಗಳು ವರದಿಯಾಗಿದ್ದು,ಇತ್ತಿಚಿನ ದಿನಗಳಲ್ಲಿ ಇನ್ನಂಜೆ ಪಾಂಗಳ ಮಂಡೆಡಿ ಪರಿಸರದಲ್ಲಿ ದಿನನಿತ್ಯ ಸಾಕುಪ್ರಾಣಿ ನಾಯಿಗಳನ್ನು ಮನೆ ಅವರಣದಿಂದ ದಾಳಿ ಮಾಡಿ ಕೊಂಡೊಯಿದ್ದರು ಅರಣ್ಯ ಇಲಾಖೆ ತುರ್ತು ಕ್ರಮ ಕೈಗೊಳ್ಳದಿರುವುದು ಸ್ಥಳೀಯರು ತುಳುನಾಡ ರಕ್ಷಣಾ ವೇದಿಕೆ ಗಮನಕ್ಕೆ ತಂದಿರುತ್ತಾರೆ. ಈ ಹಿನ್ನೆಲೆಯಲ್ಲಿ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾಧ್ಯಕ್ಷ ಫ್ರ್ಯಾಂಕಿ ಡಿಸೋಜ ಕೊಳಲಗಿರಿ ಅವರು ಅರಣ್ಯ ಇಲಾಖೆಯ ತುರ್ತು ಹಸ್ತಕ್ಷೇಪಕ್ಕೆ ಆಗ್ರಹಿಸಿದ್ದಾರೆ. ಜನವಸತಿ ಪ್ರದೇಶಗಳ ಸಮೀಪ ಚಿರತೆಗಳ ಓಡಾಟ ಹೆಚ್ಚುತ್ತಿರುವುದು ಗ್ರಾಮಸ್ಥರ ಸುರಕ್ಷತೆಗೆ ಗಂಭೀರ ಸವಾಲಾಗಿದ್ದು, ಯಾವುದೇ ಅನಾಹುತ ಸಂಭವಿಸುವ ಮುನ್ನವೇ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ. ಮುಖ್ಯ ಆಗ್ರಹಗಳು:1. ಚಿರತೆ ಸಂಚರಿಸುತ್ತಿರುವ ಪ್ರದೇಶಗಳಲ್ಲಿ ತಕ್ಷಣ ಬೋನುಗಳನ್ನು, ಕೇಜ್‌ಗಳನ್ನು ಅಳವಡಿಸಿ ಹಿಡಿಯುವ ಕ್ರಮ ಕೈಗೊಳ್ಳಬೇಕು.2. ರಾತ್ರಿ ವೇಳೆಯಲ್ಲಿ…

Read More

ಉಡುಪಿ: ನಗರದ ಹೃದಯ ಭಾಗದಲ್ಲಿರುವ ಸರ್ವಿಸ್ ಬಸ್ ನಿಲ್ದಾಣದ ಅವ್ಯವಸ್ಥೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಉಡುಪಿ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ ನಗರಸಭೆ ಅಧಿಕಾರಿಗಳಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಉಡುಪಿ ಸರ್ವಿಸ್ ಬಸ್ ನಿಲ್ದಾಣಕ್ಕೆ ಪ್ರತಿದಿನ ಸಾವಿರಾರು ಪ್ರಯಾಣಿಕರು ಆಗಮಿಸುತ್ತಾರೆ. ಆದರೆ ಮೂಲಭೂತ ಸೌಕರ್ಯಗಳ ಕೊರತೆಯಿಂದ ನಿಲ್ದಾಣವು ಅವ್ಯವಸ್ಥೆಯ ಆಗರವಾಗಿ ಪರಿಣಮಿಸಿದೆ. ಕುಡಿಯುವ ನೀರಿನ ಘಟಕ ಅಶುದ್ಧವಾಗಿದ್ದು, ಪ್ರಯಾಣಿಕರು ಹಣ ಕೊಟ್ಟು ನೀರು ಖರೀದಿಸಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರಯಾಣಿಕರಿಗಾಗಿ ಅಳವಡಿಸಿರುವ ಕುರ್ಚಿಗಳಲ್ಲಿ ಹಲವು ಮುರಿದು ಬಿದ್ದಿದ್ದು, ಸಮರ್ಪಕ ಆಸನ ವ್ಯವಸ್ಥೆ ಇಲ್ಲದ ಕಾರಣ ವೃದ್ಧರು, ಮಹಿಳೆಯರು ಹಾಗೂ ಮಕ್ಕಳಿಗೆ ತೀವ್ರ ತೊಂದರೆ ಉಂಟಾಗಿದೆ. ಮಹಿಳೆಯರು ಮತ್ತು ಪುರುಷರಿಗಾಗಿ ಪ್ರತ್ಯೇಕ ಶೌಚಾಲಯಗಳಿದ್ದರೂ ಅವು ನಿರ್ವಹಣೆಯ ಕೊರತೆಯಿಂದ ನಿರುಪಯುಕ್ತವಾಗಿವೆ. ಕಳಪೆ ಕಾಮಗಾರಿ ಹಾಗೂ ಸ್ವಚ್ಛತೆಯ ಅಭಾವದಿಂದ ಸುತ್ತಮುತ್ತ ದುರ್ವಾಸನೆ ವ್ಯಾಪಿಸಿದೆ. ನಿಲ್ದಾಣದ ಆವರಣದಲ್ಲಿ ಧೂಳು, ಕಸದ ರಾಶಿ ಹಾಗೂ ತಿಂಡಿ ಪೊಟ್ಟಣಗಳ ಅವಶೇಷಗಳು…

Read More

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಪಳ್ಳಿ ಗ್ರಾಮದ ಜನವಸತಿ ಪ್ರದೇಶದಲ್ಲಿ ಸ್ಥಾಪನೆಯಾಗುತ್ತಿರುವ ಫಿಶ್ ಮೀಲ್ ಘಟಕದ ವಿರುದ್ಧ ಗ್ರಾಮಸ್ಥರ ಆಕ್ರೋಶ ತಾರಕಕ್ಕೇರಿದೆ. ಪರಿಸರ ಮತ್ತು ಸಾರ್ವಜನಿಕ ಆರೋಗ್ಯಕ್ಕೆ ಹಾನಿಕಾರಕವಾಗಬಹುದಾದ ಈ ಘಟಕವನ್ನು ತಕ್ಷಣವೇ ಕೈಬಿಡುವಂತೆ ಒತ್ತಾಯಿಸಿ, ಫೆಬ್ರವರಿ 23 ಸೋಮವಾರ ಬೆಳಿಗ್ಗೆ ಪಳ್ಳಿ ಗ್ರಾಮ ಪಂಚಾಯತ್ ಕಚೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ಹಾಗೂ ಶಾಂತಿಯುತ ಧರಣಿ ಹಮ್ಮಿಕೊಳ್ಳಲಾಗಿದೆ. ಈ ಹಿಂದೆ ಪಡುಬಿದ್ರೆ ಪ್ರದೇಶದಲ್ಲಿ ಸಾರ್ವಜನಿಕರ ತೀವ್ರ ವಿರೋಧಕ್ಕೆ ಗುರಿಯಾಗಿ ಸ್ಥಳಾಂತರಗೊಂಡಿದ್ದ ಫಿಶ್ ಮೀಲ್ ಘಟಕವೊಂದು ಇದೀಗ ಪಳ್ಳಿಯ ಶಾಂತ ಹಾಗೂ ಹಸಿರ್ಮಯ ವಾತಾವರಣಕ್ಕೆ ಬರುತ್ತಿರುವುದು ಗ್ರಾಮಸ್ಥರಲ್ಲಿ ಆತಂಕ ಮತ್ತು ಆಕ್ರೋಶ ಹುಟ್ಟಿಸಿದೆ. ಜನವಸತಿ ಪ್ರದೇಶದ ಸಮೀಪದಲ್ಲೇ ಇಂತಹ ಕೈಗಾರಿಕಾ ಘಟಕ ಸ್ಥಾಪನೆಯಾಗುತ್ತಿರುವುದು ಸ್ಥಳೀಯರ ಜೀವನಮಟ್ಟದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಗ್ರಾಮಸ್ಥರ ಪ್ರಕಾರ, ಫಿಶ್ ಮೀಲ್ ಘಟಕದಿಂದ ಹೊರಬರುವ ಭಾರೀ ದುರ್ವಾಸನೆ ವಾತಾವರಣವನ್ನು ದುಷ್ಪರಿಣಾಮಗೊಳಿಸುವುದಲ್ಲದೆ, ತ್ಯಾಜ್ಯ ನೀರಿನ ನಿರ್ವಹಣೆ ಸರಿಯಾಗಿ ನಡೆಯದಿದ್ದರೆ ಅಂತರ್ಜಲ…

Read More

ಉಡುಪಿ: ಆಯುಷ್ ವೈದ್ಯರು ತಮ್ಮ ವ್ಯಾಸಂಗದ ಅವಧಿಯಲ್ಲಿ ಪಡೆದುಕೊಂಡ ತರಬೇತಿ ಹಾಗೂ ಅರ್ಹತೆಯ ಆಧಾರದ ಮೇಲೆ ಅಲೋಪಥಿ ಸೇವೆಗೆ ಸಂಬಂಧಿಸಿದ ವೈದ್ಯಕೀಯ ಪದ್ಧತಿಗಳ ಮೂಲಕ ಚಿಕಿತ್ಸೆ ನೀಡಲು ಕಾನೂನಿನಲ್ಲಿ ಸ್ಪಷ್ಟ ಅವಕಾಶವಿದೆ ಎಂದು ತುಳುನಾಡ ರಕ್ಷಣಾ ವೇದಿಕೆ ವೈದರ ಘಟಕದ ರಾಜ್ಯ ಸಂಘಟನಾ ಕಾರ್ಯದರ್ಶಿ ಡಾ. ರವೀಂದ್ರ ತಿಳಿಸಿದ್ದಾರೆ. ಇಂತಹ ಚಿಕಿತ್ಸೆಯನ್ನು ನೀಡುತ್ತಿರುವ ಆಯುಷ್ ವೈದ್ಯರ ವಿರುದ್ಧ ಯಾವುದೇ ರೀತಿಯ ಕಾನೂನು ಕ್ರಮ ಕೈಗೊಳ್ಳಬಾರದು ಎಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿರುವುದನ್ನು ಸ್ಮರಿಸಿದರು. ಸುಪ್ರೀಂ ಕೋರ್ಟ್ ಆದೇಶದ ಅನ್ವಯ, ಅರ್ಹತೆ ಹಾಗೂ ತರಬೇತಿ ವ್ಯಾಪ್ತಿಯೊಳಗೆ ಸೇವೆ ಸಲ್ಲಿಸುವ ಆಯುಷ್ ವೈದ್ಯರ ವಿರುದ್ಧ ದೌರ್ಜನ್ಯ ಅಥವಾ ಅನಗತ್ಯ ಕಾನೂನು ಕ್ರಮ ಕೈಗೊಳ್ಳುವುದು ನ್ಯಾಯಾಂಗ ಅವಮಾನಕ್ಕೆ ಒಳಪಡುವ ವಿಷಯವಾಗುತ್ತದೆ ಎಂದು ಎಚ್ಚರಿಸಿದರು. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೆಲವು ಅಧಿಕಾರಿಗಳು ಹಾಗೂ ಸಂಘಟನೆಗಳು ರಾಜಕೀಯ ಪ್ರೇರಿತವಾಗಿ ಆಯುಷ್ ವೈದ್ಯರನ್ನು ಗುರಿಯಾಗಿಸಿಕೊಂಡು ತಂತ್ರಗಳನ್ನು ರೂಪಿಸುತ್ತಿರುವುದು ಗಮನಕ್ಕೆ ಬಂದಿದೆ. ಇದು ವೈದ್ಯಕೀಯ ಸೇವಾ ವಲಯದಲ್ಲಿ ಅನಗತ್ಯ ಗೊಂದಲ ಉಂಟುಮಾಡುವುದಲ್ಲದೆ,…

Read More

ವಿಟ್ಲ: ಪರಿಶಿಷ್ಟ ಜಾತಿಗೆ ಸೇರಿದ ಯುವತಿಯೋರ್ವರೊಂದಿಗೆ ಅನುಚಿತವಾಗಿ ವರ್ತಿಸಿ ಜಾತಿ ನಿಂದನೆ ಮಾಡಿದ್ದಲ್ಲದೆ ಜೀವ ಬೆದರಿಕೆ ಒಡ್ಡಿದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರಿನ ನ್ಯಾಯಾಲಯ ಶಿಕ್ಷೆ ವಿಧಿಸಿದೆ. 2022ರ ಅಕ್ಟೋಬರ್ 7ರಂದು ಘಟನೆ ನಡೆದಿದ್ದು, ಅಕ್ಟೋಬರ್ 11ರಂದು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆಗಿನ ಬಂಟ್ವಾಳ ಉಪವಿಭಾಗದ ಡಿವೈಎಸ್‌ಪಿ ಪ್ರತಾಪ್ ಸಿಂಗ್ ಥೋರಾಟ್ ಅವರು ಪ್ರಕರಣದ ತನಿಖೆ ನಡೆಸಿ ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಲ್ಲಿ ನಡೆಯಿತು. 2026ರ ಫೆಬ್ರವರಿ 20ರಂದು ನ್ಯಾಯಾಲಯ ಆರೋಪಿ ಉಸ್ಮಾನ್ ಅವರನ್ನು IPC ಕಲಂ 354, 506 ಹಾಗೂ SC/ST (ಅತ್ಯಾಚಾರ ನಿರೋಧಕ) ಕಾಯ್ದೆಯ ಕಲಂ 3(1)(w), 3(2)(va) ಅಡಿಯಲ್ಲಿ ದೋಷಿ ಎಂದು ಘೋಷಿಸಿತು. ನ್ಯಾಯಾಲಯವು IPC 354 ಹಾಗೂ ಸಂಬಂಧಿತ SC/ST ಕಾಯ್ದೆಯ ಕಲಂಗಳಡಿ ಒಂದು ವರ್ಷದ ಸರಳ ಜೈಲು ಶಿಕ್ಷೆ ಮತ್ತು ರೂ.10,000 ದಂಡ ವಿಧಿಸಿದೆ. ದಂಡ…

Read More

Mangaluru, February 2026: Nrithya Sudha (R), a prestigious Bharatanatyam and Music institution based in Mangaluru, proudly presents the Bharatanatyam Rangapravesha of Vidushi Shriya Rao Sannayya on Sunday, 22nd February 2026 at 5:00 PM at the Town Hall, Mangaluru. Shriya Rao Sannayya is the daughter and disciple of renowned Guru Vidushi Soumya Sudhindra Rao and Dr. Sudhindra Rao S. Currently pursuing her first year B.Sc. in Visual Communication and Computer Animation at St. Aloysius (Deemed to be University), Mangaluru, Shriya is a dedicated and passionate classical artist. Having successfully completed her Vidwat final examinations in 2025, Shriya has consistently showcased her…

Read More

ಪುತ್ತೂರು, ಫೆ.21: ಹೈಕೋರ್ಟ್ ನಿರ್ದೇಶನದ ಮೇರೆಗೆ ಪುತ್ತೂರು ನಗರದಲ್ಲಿರುವ ಕೋವಿ (ಬಂದೂಕು) ಠೇವಣಾತಿ ಕೇಂದ್ರದ ಮೇಲೆ ಅಧಿಕಾರಿಗಳ ತಂಡ ಶುಕ್ರವಾರ ದಿಢೀರ್ ದಾಳಿ ನಡೆಸಿ 1500ಕ್ಕೂ ಅಧಿಕ ಬಂದೂಕುಗಳನ್ನು ಪತ್ತೆ ಹಚ್ಚಿದೆ. ಕಾರ್ಯಾಚರಣೆಗೆ ಉಪವಿಭಾಗಾಧಿಕಾರಿ (ಎಸಿ) ಸ್ಟೆಲ್ಲಾ ವರ್ಗೀಸ್ ನೇತೃತ್ವ ವಹಿಸಿದ್ದರು. ನಗರ ಪೊಲೀಸ್ ಠಾಣೆ ಸಮೀಪದ ದೇವಕಿಕೃಪಾ ಕಟ್ಟಡದ ಮೇಲಂತಸ್ತಿನ ಎರಡು ಕೊಠಡಿಗಳು ಹಾಗೂ ಪಕ್ಕದಲ್ಲಿರುವ ಎಸ್‌ಬಿಬಿ ಟವರ್‌ನ ಒಂದು ಕೊಠಡಿಯಲ್ಲಿ ಬಂದೂಕುಗಳನ್ನು ಸಂಗ್ರಹಿಸಲಾಗಿತ್ತು. ಮಧ್ಯಾಹ್ನದಿಂದ ಸಂಜೆವರೆಗೆ ವಿವಿಧ ಇಲಾಖೆಗಳ ಅಧಿಕಾರಿಗಳ ಸಮ್ಮುಖದಲ್ಲಿ ಪರಿಶೀಲನೆ ನಡೆಸಿದ ತಂಡ, ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್‌ 83ರ ಅಡಿ ತನಿಖೆ ಆರಂಭಿಸಿದ್ದು, ಸಂಬಂಧಿತ ಕೊಠಡಿಗಳನ್ನು ಸೀಲ್ ಮಾಡಲಾಗಿದೆ. ಎಸಿ ಸ್ಟೆಲ್ಲಾ ವರ್ಗೀಸ್ ಮಾಧ್ಯಮಗಳಿಗೆ ಮಾಹಿತಿ ನೀಡಿ, “ಕೇಂದ್ರದಲ್ಲಿ 1500ಕ್ಕೂ ಹೆಚ್ಚು ಕೋವಿಗಳು ಪತ್ತೆಯಾಗಿವೆ. ಮದ್ದುಗುಂಡುಗಳ ನಿಖರ ಪ್ರಮಾಣದ ಕುರಿತು ಎರಡು ದಿನಗಳೊಳಗೆ ಸಂಪೂರ್ಣ ವರದಿ ಸಲ್ಲಿಸಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ. ಪರವಾನಗಿ ಗೋಪಾಲಕೃಷ್ಣ ಭಟ್ ಹಾಗೂ ವಿವೇಕಾನಂದ ಭಟ್ ಅವರ ಹೆಸರಿನಲ್ಲಿ ಇರುವುದಾಗಿ ಪ್ರಾಥಮಿಕ…

Read More

ಪುತ್ತೂರು: ಹೈಕೋರ್ಟ್‌ ನಿರ್ದೇಶನದ ಮೇರೆಗೆ ನಗರದಲ್ಲಿರುವ ಕೋವಿ (ಬಂದೂಕು) ಠೇವಣಾತಿ ಕೇಂದ್ರದ ಮೇಲೆ ಶುಕ್ರವಾರ ಅಧಿಕಾರಿಗಳ ತಂಡ ದಾಳಿ ನಡೆಸಿ 1500ಕ್ಕೂ ಅಧಿಕ ಕೋವಿಗಳನ್ನು ಪತ್ತೆ ಹಚ್ಚಿದೆ. ಉಪವಿಭಾಗಾಧಿಕಾರಿ (ಎಸಿ) ಸ್ಟೆಲ್ಲಾ ವರ್ಗೀಸ್ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್‌ 83ರ ಅಡಿ ತನಿಖೆ ಆರಂಭಿಸಲಾಗಿದೆ ಎಂದು ತಿಳಿದುಬಂದಿದೆ. ನಗರ ಪೊಲೀಸ್ ಠಾಣೆ ಸಮೀಪದ ದೇವಕಿಕೃಪಾ ಕಟ್ಟಡದ ಮೇಲಂತಸ್ತಿನ ಎರಡು ಕೊಠಡಿಗಳು ಹಾಗೂ ಪಕ್ಕದ ಎಸ್‌ಬಿಬಿ ಟವರ್‌ನ ಒಂದು ಕೊಠಡಿಯಲ್ಲಿ ಈ ಬಂದೂಕುಗಳನ್ನು ದಾಸ್ತಾನು ಮಾಡಲಾಗಿತ್ತು. ಶುಕ್ರವಾರ ಮಧ್ಯಾಹ್ನ ಮತ್ತು ಸಂಜೆ ವಿವಿಧ ಇಲಾಖೆಗಳ ಅಧಿಕಾರಿಗಳ ಸಮ್ಮುಖದಲ್ಲಿ ಸ್ಥಳ ಪರಿಶೀಲನೆ ನಡೆಸಿದ ಎಸಿ, ಕೋವಿ ಠೇವಣಿ ಇರಿಸಲಾಗಿದ್ದ ಕೊಠಡಿಗಳನ್ನು ಸೀಲ್ ಮಾಡಿದ್ದಾರೆ. ಮಾಧ್ಯಮಗಳಿಗೆ ಮಾಹಿತಿ ನೀಡಿದ ಎಸಿ ಸ್ಟೆಲ್ಲಾ ವರ್ಗೀಸ್, “ಪರಿಶೀಲನೆ ವೇಳೆ ಕೇಂದ್ರದಲ್ಲಿ 1500ಕ್ಕೂ ಹೆಚ್ಚು ಕೋವಿಗಳು ಪತ್ತೆಯಾಗಿವೆ. ಜೊತೆಗೆ ಇರುವ ಮದ್ದುಗುಂಡುಗಳ ನಿಖರ ಪ್ರಮಾಣದ ಕುರಿತು ಎರಡು ದಿನಗಳೊಳಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ…

Read More

ಶ್ರೀ ಹರಿಹರ ಪಾಂಡುರಂಗ ವಿಠ್ಠಲ ಭಜನಾ ಮಂದಿರ ಟ್ರಸ್ಟ್ (ರಿ ). ಬಿಕರ್ನಕಟ್ಟೆ. ಮಂಗಳೂರು . ಈ ಮಂದಿರದ ಸಭಾಂಗಣದಲ್ಲಿ 101.ನೇ. ವರ್ಷದ ಭಕ್ತರ ಸಭೆಯು ಶ್ರೀ ಪ್ರೊ. ವಿ ಜಯರಾಮ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಪದಾಧಿಕಾರಿಗಳ ಆಯ್ಕೆ ನಡೆಯಿತು . ಸರ್ವನು ಮತದಿಂದ ಶ್ರೀ ಅಡ್ಯಾರ್ ಗುತ್ತು, ಮನೋಹರ್ ರೈ ಯವರನ್ನು ಅಧ್ಯಕ್ಷರಾಗಿ ನೇಮಕ ಮಾಡಲಾಯಿತು . ಗೌರವ ಅಧ್ಯಕ್ಷರಾಗಿ ಭರತೇಶ್ ಕುಮಾರ್ ಆಯ್ಕೆಯಾದರು ಹಾಗು ಉಪ ಅಧ್ಯಕ್ಷರಾಗಿ ಡಾ ಚಂದ್ರಶೇಖರ್, ಶರತ್ ಬಿಕರ್ನಕಟ್ಟೆ, ಉಮಾವತಿ . ಕಾರ್ಯದರ್ಶಿಯಾಗಿ ಜಗದೀಶ್ ಆಚಾರ್ಯಜೊತೆ ಕಾರ್ಯದರ್ಶಿಯಾಗಿ ಶೋಭಾ ಶೇಖರ್ ಕೊಟ್ಟಾರಿ, ಅವಿನಾಶ್ , ಲೋಲಾಕ್ಷ ಆಚಾರ್ಯ ಮತ್ತು ಕೋಶಾಧಿಕಾರಿಯಾಗಿ ಶ್ರೀಮತಿ ಸುಚಿತ್ರ ಪ್ರಶಾಂತ್,ಭಜನಾ ಸಂಚಾಲಕರಾಗಿ ಶ್ರೀ ಶ್ರೇಯಸ್ (ವಕೀಲರು ) ಆಯ್ಕೆಯಾದರು ಇನ್ನಿತರ ಪದಾಧಿಕಾರಿಗಳ ಆಯ್ಕೆಯಾಯಿತು .ನಂತರ ಭಕ್ತಭಿಮಾನಿಗಳ ಉಪಸ್ಥಿತಿಯಲ್ಲಿ ಮಂದಿರದ ಸದಸ್ಯರಿಂದ ಭಕ್ತಿ ರಸಮಂಜರಿ ನಡೆಯಿತು..ಡಾ. ಚಂದ್ರಶೇಖರ ಸ್ವಾಗತಿಸಿದರು ರಾಜೇಶ್ ಶೆಟ್ಟಿ ಶಕ್ತಿನಗರ ಧನ್ಯವಾದಗೈದರು. ಶ್ರೇಯಸ್ ಕಾರ್ಯಕ್ರಮ ನಿರೂಪಿಸಿದರು.

Read More

ಮಂಗಳೂರು: ರೆಡ್ ಕ್ರಾಸ್ ಡಿ.ಕೆ. ಜಿಲ್ಲಾ ಘಟಕದ ಆಡಳಿತ ಮಂಡಳಿಗೆ ಫೆ. 22ರಂದು ಚುನಾವಣೆ ನಡೆಯಲಿದ್ದು, ತಮದೇ ನೇತೃತ್ವದ ತಂಡದ ಅಭ್ಯರ್ಥಿಗಳನ್ನು ಬೆಂಬಲಿಸುವಂತೆ ಮಂಡಳಿ ಅಧ್ಯಕ್ಷ ಸಿ.ಪಿ. ಶಾಂತಾರಾಮ ಶೆಟ್ಟಿ ಮನವಿ ಮಾಡಿದ್ದಾರೆ. ವಿಧಿ ಪ್ರಕಾರಗಳಲ್ಲಿ ಮುಂದುವರಿದ ಸರ್ವದರ್ಶಿ ಅಭ್ಯರ್ಥಿಗಳಾದ ಡಾ. ಸತೀಶ್ ರಾವ್, ಯುವರಾಜ್ ಭಂಡಾರಿ, ಡಾ. ಬಿ. ಸುದರ್ಶನ ರಾವ್, ಸಚೇತಾ ಸುಭಾಷ್, ಡಾ. ಸುಮನ ಎಸ್., ಪ್ರಭುರಾಜ್ ಜೈನ್, ಗುರುದತ್ ನಾಯಕ್, ವಸಂತ, ನ್ಯಾಯವಾದಿ ರಾಘವೇಂದ್ರ ರಾವ್ ಮತ್ತು ಹಿರಿಯ ಪತ್ರಕರ್ತ ಪಿ.ವಿ. ಹರಿಪ್ರಸಾದ್ ಇವರನ್ನು ಸಿ.ಪಿ. ಶಾಂತಾರಾಮ ಶೆಟ್ಟಿ ನೇತೃತ್ವದ ತಂಡದ ಅಭ್ಯರ್ಥಿಗಳಾಗಿ ಸ್ಪರ್ಧೆಗಿಳಿಸಿದ್ದಾರೆ. ಕಳೆದ ಆಡಳಿತ ಮಂಡಳಿಯ ಅವಧಿಯಲ್ಲಿ ರೆಡ್ ಕ್ರಾಸ್ ಸಂಸ್ಥೆಯಲ್ಲಿ ನಡೆದ ಚುನಾವಣೆಯಲ್ಲಿ ಅತಿ ಹೆಚ್ಚು ಮತಗಳಿಂದ ರಾಜ್ಯ ಮಟ್ಟಕ್ಕೆ ಆಯ್ಕೆಯಾಗುವ ಅವಕಾಶ ಸಿಗುವಂತೆ ಮಾಡಿದ್ದಾರೆ. ಇದರಿಂದ ಮುಂದಿನ ದಿನಗಳಲ್ಲಿ ಡಿ.ಕೆ. ಜಿಲ್ಲಾ ಘಟಕ ಸೇವಾ ಕಾರ್ಯಗಳಲ್ಲಿ ಇನ್ನಷ್ಟು ನೆರವಾಗಲಿದೆ ಎಂದು ಸಿ.ಪಿ. ಶಾಂತಾರಾಮ ಶೆಟ್ಟಿ ತಿಳಿಸಿದ್ದಾರೆ.

Read More