Author: Tulunada Surya

ಲಯನ್ಸ್ ಕ್ಲಬ್ ಆಫ್ ಮಂಗಳೂರು ಬಲ್ಮಠ ದಲ್ಲಿ ಲಯನ್ಸ್ ರಿಜಿಯನ್ ಚೇರ್ ಪರ್ಸನ್ ಲಯನ್ ಗಾಯತ್ರಿ ರಾವ್ MJF ಅವರ ಅಧಿಕೃತ ಭೇಟಿ ಹಾಗೂ ಝೋನ್ ಸೋಷಿಯಲ್ ಲಯನ್ ಪ್ರೀತಿ ರೈ ಅವರ ಕಾರ್ಯಕ್ರಮ ನಡೆಯಿತು. ಲಯನ್ಸ್ ರಿಜಿಯನ್ ಚೇರ್ ಪರ್ಸನ್ ಲಯನ್ ಗಾಯತ್ರಿ ರಾವ್ MJF ಹಾಗೂ ರೀಜನಿನ ಫಸ್ಟ್ ಮ್ಯಾನ್ ಲಯನ್ ಕೆದಿಗೆ ಅರವಿಂದ್ ರಾವ್ MJF ಮತ್ತು ಝೋನ್ ಚೇರ್ ಪರ್ಸನ್ ಲಯನ್ ಪ್ರೀತಿ ರೈ ಅವರು ಸೆಪ್ಟೆಂಬರ್ 23 ರಂದು ಸಂಜೆ 7.30ಕ್ಕೆ ಮಂಗಳೂರಿನ ಎಂಪೈರ್ ಮಾಲ್‌ನ ಕ್ರೆಡೈ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಅವರು ಲಯನ್ಸ್ ಕ್ಲಬ್ ಆಫ್ ಬಲ್ಮಠದ ಅಧ್ಯಕ್ಷ ಲಯನ್ ಅವಿಲ್ ಡಿಸೋಜಾ, ಕಾರ್ಯದರ್ಶಿ ಲಯನ್ ಪ್ರಸಿಲ್ಲಾ ಡಿಸೋಜಾ, ಖಜಾಂಚಿ ಲಯನ್ ಮೆಲ್ವಿನ್ ಮಸ್ಕರೇನಸ್ ಹಾಗೂ ಕ್ಲಬ್‌ನ ಎಲ್ಲಾ ಸದಸ್ಯರಿಂದ ಸೌಹಾರ್ದ ಪೂರ್ಣವಾಗಿ ಸ್ವಾಗತಿಸಲ್ಪಟ್ಟರು. ಈ ದಿನ ಕ್ಲಬ್‌ನ ವಾರ್ಷಿಕ ಮಾಗಜೀನ್ ಬಿಡುಗಡೆಯಾಯಿತು. ಸಂಪಾದಕಿ ಲಯನ್ ಪ್ರೀತಿ ಕಾಮತ್ ಅವರು…

Read More

ಉಡುಪಿಯ ಎಕೆಎಂಎಸ್ ಬಸ್ ಮಾಲೀಕ, ರೌಡಿ ಶೀಟರ್ ಸೈಫುದ್ದೀನ್‌ನನ್ನು ಕೊಲೆ ಮಾಡಲಾಗಿದೆ. ಮಲ್ಪೆಯ ಕೊಡವೂರಿನ ಮನೆಯೊಂದರಲ್ಲಿ ತಲವಾರಿನಿಂದ ಕೊಚ್ಚಿ ಕೊಲೆಗೈಯ್ಯಲಾಗಿದೆ. ಸೈಫುದ್ದೀನ್‌ನ ಸಹಚರನೇ ಕೊಲೆ ಮಾಡಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಮಲ್ಪೆ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

Read More

ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಮಾಜಿ ಸಂಸದ ಶ್ರೀ ನಳಿನ್ ಕುಮಾ‌ರ್ ಕಟೀಲ್ ಮಾರ್ಗದರ್ಶನದಲ್ಲಿ ಕುಡ್ಲದ ಪಿಲಿಪರ್ಬದ ನಾಲ್ಕನೇ ಆವೃತ್ತಿಯ ಸ್ಪರ್ಧಾಕೂಟವು ಇದೇ ಸಪ್ಟೆಂಬರ್ 30 ರಂದು ಮಂಗಳೂರಿನ ಕೇಂದ್ರ ಮೈದಾನದಲ್ಲಿ ಬೆಳಗ್ಗೆ 9.30 ಕ್ಕೆ ಉದ್ಘಾಟನೆಗೊಳ್ಳಲಿದೆ ಎಂದು ಶಾಸಕ ಶ್ರೀ ಡಿ. ವೇದವ್ಯಾಸ್ ಕಾಮತ್ ರವರು ಹೇಳಿದರು. ನಂತರ ಮಾತನಾಡಿದ ಅವರು, ಬೆಳಿಗ್ಗೆ 10 ಗಂಟೆಗೆ ಸರಿಯಾಗಿ ಭವ್ಯ ವಿಶಾಲ ವೇದಿಕೆಯಲ್ಲಿ ಆರಂಭಗೊಳ್ಳಲಿರುವ ಸ್ಪರ್ಧಾಕೂಟದಲ್ಲಿ ಕರಾವಳಿ ಭಾಗದ ಅತ್ಯಂತ ಜನಪ್ರಿಯ ಎಂಬ ಹೆಗ್ಗಳಿಕೆ ಹೊಂದಿರುವ 10 ಹುಲಿವೇಷ ತಂಡಗಳು ಭಾಗವಹಿಸಲಿವೆ. ಪ್ರತಿ ತಂಡವೂ ವೈಭವದ ಮೆರವಣಿಗೆ ಮೂಲಕ ವೇದಿಕೆಗೆ ಪ್ರವೇಶ ಮಾಡಲಿದ್ದು, 20 ನಿಮಿಷಗಳ ಪ್ರದರ್ಶನ ನೀಡಲಿವೆ. ಅಕ್ಕಿಮುಡಿ ಹಾರಿಸುವುದು ಕಡ್ಡಾಯವಾಗಿದ್ದು ಕರಿಹುಲಿಗಳು, ಮರಿಹುಲಿಗಳು, ಹಿಮ್ಮೇಳ, ಧರಣಿ ಮಂಡಲ ಹೀಗೆ ಇಡೀ ಕೂಟವು ವೈವಿಧ್ಯತೆಯಿಂದ ಕೂಡಿರಲಿವೆ ಎಂದರು. ಸ್ಪರ್ಧಾಕೂಟದಲ್ಲಿ 6 ತೀರ್ಪುಗಾರರು ಇರಲಿದ್ದು, ನಾಲ್ವರು ವೇದಿಕೆಯಲ್ಲಿ ಮತ್ತು ಇಬ್ಬರು ಒಳಗೆ ವಿಡಿಯೋ ವೀಕ್ಷಿಸುತ್ತಾ ಥರ್ಡ್ ಅಂಪಾಯರ್ ರೂಪದಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ.…

Read More

ಮಂಗಳೂರು: ಸ್ಕ್ಯಾನಿಂಗ್ ಕೇಂದ್ರಗಳಲ್ಲಿ ರೋಗಿಗಳಿಂದ ಗುರುತಿನ ಚೀಟಿ ಕಡ್ಡಾಯವಾಗಿ ಪಡೆಯಬೇಕೆಂಬ ನಿಯಮವಿದೆ. ಈ ನಿಯಮವನ್ನು ಉಲ್ಲಂಘಿಸಿದರೆ, ಅಂತಹ ಕೇಂದ್ರಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್.ಆರ್. ತಿಮ್ಮಯ್ಯ ಎಚ್ಚರಿಸಿದ್ದಾರೆ. ಅವರು ಪ್ರಸವಪೂರ್ವ ಲಿಂಗ ನಿರ್ಣಯ ತಡೆ ಕಾಯ್ದೆ (PC-PNDT Act) 1994ರ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದರು. 🔍 ಮುಖ್ಯ ಸೂಚನೆಗಳು: ಸ್ಕ್ಯಾನಿಂಗ್‌ಗಾಗಿ ಬರುವ ಪ್ರತಿಯೊಬ್ಬ ರೋಗಿಯ ಗುರುತಿನ ಚೀಟಿ ಪರಿಶೀಲನೆ ಕಡ್ಡಾಯ. ತಜ್ಞ ವೈದ್ಯರ ಸಿಗ್ನೇಚರ್‌ವಿಲ್ಲದ ವರದಿ ಅಮಾನ್ಯ. ಸಿಬ್ಬಂದಿಯಿಂದ ವರದಿ ಅಂಕಿತಗೊಳ್ಳಬಾರದು. ವೈದ್ಯರ ಸೂಚನೆ ಇಲ್ಲದೆ ಗರ್ಭಪಾತ ಮಾತ್ರೆ ಮಾರಾಟ ಮಾಡುವುದು ನಿಷಿದ್ಧ. “ಸ್ಕ್ಯಾನಿಂಗ್ ಕೇಂದ್ರಗಳಿಗೆ ಆಕ್ರಮಣಾತ್ಮಕ ಭೇಟಿ ನೀಡಿ ಪರಿಶೀಲನೆ ನಡೆಯಲಿದೆ” ಎಂದು ಅವರು ಹೇಳಿದರು. ಔಷಧ ನಿಯಂತ್ರಣ ಇಲಾಖೆಯ ಸಹಯೋಗದೊಂದಿಗೆ ನಿರಂತರ ಪರಿಶೀಲನೆ ನಡೆಸಲಾಗುತ್ತಿದೆ. 📊 ಜಿಲ್ಲಾ ಸ್ಕ್ಯಾನಿಂಗ್ ಕೇಂದ್ರಗಳ ಮಾಹಿತಿ: ಒಟ್ಟು ಕೇಂದ್ರಗಳು: 189▪️ ಖಾಸಗಿ: 177▪️ ಸರ್ಕಾರಿ: 12 ಏಪ್ರಿಲ್–ಆಗಸ್ಟ್ 2025ರ ನಡುವೆ ಪರಿಶೀಲಿಸಿದ…

Read More

ಹಾಸನ, ಸೆಪ್ಟೆಂಬರ್ 24:ಹಾಸನದ ಹೆಸರಾಂತ ಹಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದಾಗಿ ಬಡ ಮಹಿಳೆ ತೀವ್ರ ನೋವು ಅನುಭವಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ರಾಡ್ ತೆಗೆಸಿಕೊಳ್ಳಲು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಗೆ ತಪ್ಪಾಗಿ ಮತ್ತೊಂದು ಕಾಲಿಗೆ ಶಸ್ತ್ರಚಿಕಿತ್ಸೆ ನಡೆಸಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ, ಬೂಚನಹಳ್ಳಿ ಕಾವಲು ಗ್ರಾಮದ ನಿವಾಸಿ ಜ್ಯೋತಿ ಎಂಬವರಿಗೆ ಸುಮಾರು ಎರಡು ವರ್ಷಗಳ ಹಿಂದೆ ಸಂಭವಿಸಿದ ಅಪಘಾತದಲ್ಲಿ ಎಡಗಾಲು ಮುರಿದಿತ್ತು. ಆಗ ಶಸ್ತ್ರಚಿಕಿತ್ಸೆ ಮೂಲಕ ಕಾಲಿಗೆ ಕಬ್ಬಿಣದ ರಾಡ್ ಅಳವಡಿಸಲಾಗಿತ್ತು. ಇತ್ತೀಚೆಗೆ ಆ ಕಾಲಿನಲ್ಲಿ ಮತ್ತೆ ನೋವು ಕಾಣಿಸಿಕೊಂಡ ಕಾರಣ, ಅವರು ಹಾಸನದ ಹಿಮ್ಸ್ ಆಸ್ಪತ್ರೆಗೆ ಹೋಗಿದ್ದರು. ಅಲ್ಲಿ ವೈದ್ಯರಾದ ಡಾ. ಸಂತೋಷ್ ಪರಿಶೀಲನೆ ನಡೆಸಿ, ಹಿಂದಿನ ರಾಡ್ ತೆಗೆಯಬೇಕೆಂದು ಶಸ್ತ್ರಚಿಕಿತ್ಸೆಗೆ ಸಲಹೆ ನೀಡಿದರು. ಬಳಿಕ, ಶನಿವಾರ ಜ್ಯೋತಿ ಆಸ್ಪತ್ರೆಗೆ ದಾಖಲಾಗಿದ್ದು, ನಿಶ್ಚೇತಕ ನೀಡಿದ ನಂತರ ಶಸ್ತ್ರಚಿಕಿತ್ಸೆಗೆ ತಯಾರಿ ನಡೆಯಿತು. ಆದರೆ ವೈದ್ಯರು ಎಡಗಾಲು ಬದಲಿಗೆ ತಪ್ಪಾಗಿ ಬಲಗಾಲಿಗೆ ಕತ್ತರಿಸಿ ಆಪರೇಷನ್ ಆರಂಭಿಸಿದರು. ಘಟನೆಯ ದೌರ್ಭಾಗ್ಯ ಇಷ್ಟೇ ಅಲ್ಲ –…

Read More

ಮಂಗಳೂರು: ಪ್ರಸಿದ್ದ ಮಂಗಳೂರು ದಸರಾ ಹಬ್ಬಕ್ಕೆ ಇಡೀ ನಗರವು ವಿದ್ಯುತ್ ದೀಪಾಲಂಕಾರದಿಂದ ಸಿಂಗಾರಗೊಂಡಿದ್ದು ನಗರದ ಪಿವಿಎಸ್ ವೃತ್ತದ ಬಳಿ ನವರಾತ್ರಿಯ ಮೊದಲನೇ ದಿನದಂದು ಶಾಸಕ ವೇದವ್ಯಾಸ ಕಾಮತ್ ರವರು ದೀಪಾಲಂಕಾರವನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು, ಮಂಗಳೂರು ದಸರಾ ನಮ್ಮ ಜಿಲ್ಲೆಯ ಹೆಮ್ಮೆಯ ಸಂಕೇತವಾಗಿದ್ದು ದೇಶ ವಿದೇಶಗಳಿಂದ ಭಕ್ತರನ್ನು, ಪ್ರವಾಸಿಗರನ್ನು ಸೆಳೆಯುವ ಇಂತಹ ಹಬ್ಬದ ಸಂದರ್ಭದಲ್ಲಿ ಇಡೀ ನಗರಕ್ಕೆ ಪಾಲಿಕೆ ವತಿಯಿಂದಲೇ ದೀಪಾಲಂಕಾರಗೊಳ್ಳಬೇಕು ಎಂದು ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿಶೇಷವಾಗಿ ಚಿಂತನೆ ನಡೆಸಿ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿತ್ತು. ಇದಕ್ಕೆ ಅಂದಿನ ಬಿಜೆಪಿ ಆಡಳಿತದ ಪಾಲಿಕೆಯ ಮೇಯರ್, ಕಾರ್ಪೊರೇಟರ್, ಸ್ಥಾಯಿ ಸಮಿತಿ ಸದಸ್ಯರು, ಜಿಲ್ಲಾಧ್ಯಕ್ಷರು, ಹೀಗೆ ಎಲ್ಲರೂ ಒಕ್ಕೊರಲಿನಿಂದ ಸಹಕಾರವನ್ನು ನೀಡಿದ್ದರು. ವರ್ಷಕ್ಕೆ ಸುಮಾರು 50ರಿಂದ 60 ಲಕ್ಷದವರೆಗೆ ವೆಚ್ಚವಾಗುವ ಈ ದೀಪಾಲಂಕಾರದಿಂದಾಗಿ ದೇವಸ್ಥಾನಗಳಿಗೆ ಇದುವರೆಗೆ ಸುಮಾರು ಮೂರುವರೆ ಕೋಟಿ ಉಳಿತಾಯವಾದಂತಾಗಿದೆ. ಇಂದು ಮಂಗಳಾದೇವಿ, ಉರ್ವ ಮಾರಿಗುಡಿ, ಕಾರ್ ಸ್ಟ್ರೀಟ್, ಡೊಂಗರಕೇರಿ, ಹೀಗೆ ಎಲ್ಲೆಡೆ ದಸರಾ ಸಂದರ್ಭದಲ್ಲಿ ದೀಪಾಲಂಕಾರವನ್ನು ಕಂಡಾಗ ಮನಸ್ಸಿಗೆ…

Read More

ಬಿಜೆಪಿ ಮುಲ್ಕಿ ಮೂಡಬಿದರೆ ಮಂಡಲದ ಮಹಿಳಾ ಮೋರ್ಚಾ ಹಾಗೂ ಬಜಪೆ ಶಕ್ತಿ ಕೇಂದ್ರದ ಸಹಯೋಗದಲ್ಲಿ ಸೇವಾ ಪಕ್ಷಿಕಾ ಅಂಗವಾಗಿ ಸ್ವಚ್ಚಾತ ಕಾರ್ಯಕ್ರಮ ಹಾಗೂ ವೃಕ್ಷಾರೋಹಣ ಕಾರ್ಯಕ್ರಮ ಬಜಪೆ ಪಶುಸಂಗೊಪಾನ ಇಲಾಖೆ ಆಸ್ಪತ್ರೆ ಯ ವಠಾರದಲ್ಲಿ ನಡೆಯಿತ್ತು. ಬಜಪೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಶ್ರೀ ವಿಜಯಕುಮಾರ್ ಕಾನ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ದಿನೇಶ್ ಶೆಟ್ಟಿ ಕೆಂಜಾರು ದೋಟ ಮನೆ, ಮುಲ್ಕಿ-ಮೂಡಬಿದಿರೆ ಮಂಡಲದ ಕಾರ್ಯದರ್ಶಿ ಶ್ರೀಮತಿ ಸುಮಾ. ಬಿ. ಶೆಟ್ಟಿ ಬಜಪೆ, ಮುಲ್ಕಿ – ಮೂಡಬಿದಿರೆ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಶ್ರೀಮತಿ ಗೀತಾಲಕ್ಷ್ಮಿ ಶೆಟ್ಟಿ , ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಶ್ರೀಮತಿ ಸುಪ್ರೀತಾ ಶೆಟ್ಟಿ, ಜಿಲ್ಲಾ ಎಸ್.ಸಿ ಮೋರ್ಚಾದ ಕಾರ್ಯದರ್ಶಿ ವಿನಯ್ ಸಾಲ್ಯಾನ್ ಕರಂಬಾರು, ಮುಲ್ಕಿ -ಮೂಡಬಿದರೆ ಮಂಡಲದ ಎಸ್ ಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ವಾಸುದೇವ್ ಅಮೀನ್, ಗ್ರಾಮ ಪಂಚಾಯತ್ ನಿಕಟಪೂರ್ವ ಸದಸ್ಯರಾದ ಶ್ರೀ ಲಕ್ಷ್ಮಣ ಬಂಗೇರ, ಶ್ರೀಮತಿ ಶೋಭ ರೈ ಶ್ರೀಮತಿ ಯಶೋಧ ಬಜಪೆ ನಗರ ಶಕ್ತಿ ಕೇಂದ್ರದ ಅಧ್ಯಕ್ಷರಾದ…

Read More

ಮಂಗಳೂರು : ಇವತ್ತಿನ ಸಂದರ್ಭದಲ್ಲಿ ಕವಿಗಳಿಗೆ ಸಾಮಾಜಿಕ ಜಾಲತಾಣ ಸೇರಿದಂತೆ ಬರೆಯಲು ಅನೇಕ ಅವಕಾಶಗಳು ಇವೆ. ಆದರೆ ಬರಹಗಾರನು ಸಾಮಾಜಿಕ ಜವಬ್ದಾರಿಯ ಧ್ವನಿಯಾಗಿ ಶೋಷಣೆಯ ವಿರುದ್ಧ ಬರೆದಾಗಲೇ ಒಳ್ಳೆಯ ಕವಿತೆ ಸೃಷ್ಟಿಯಾಗಲು ಸಾಧ್ಯ ಎಂದು ಬಹುಭಾಷಾ ಕವಿ ವಿಲ್ಸನ್ ಕಟೀಲು ಅವರು ಹೇಳಿದರು.ಅವರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ತುಳು ಪರಿಷತ್ ಹಾಗೂ ಮಯೂರಿ ಫೌಂಡೇಶನ್ ಜಂಟಿಯಾಗಿ ಉರ್ವಾಸ್ಟೋರಿನ ತುಳುಭವನದಲ್ಲಿ ಹಮ್ಮಿಕೊಂಡ 5ನೇ ವರ್ಷದ ದಸರಾ ಬಹುಭಾಷಾ ಕವಿಗೋಷ್ಠಿಯನ್ನು ಡೋಲು ಬಾರಿಸಿ ಉದ್ಘಾಟಿಸಿ ಮಾತನಾಡಿದರು.ಇಂದಿನ ಸನ್ನಿವೇಶದಲ್ಲಿ ಸಾಮಾಜಿಕ ಸ್ವಾಸ್ಥ್ಯವನ್ನು ಹಾಗೂ ಸಾಮರಸ್ಯವನ್ನು ಕಾಪಾಡಲು ತುಳುನಾಡಿನ ಪಾಡ್ದನಗಳಲ್ಲಿ ಉಲ್ಲೇಖ ಮಾಡಿರುವ ಸತ್ಯ, ನ್ಯಾಯ, ಧರ್ಮದ ಆಶಯಗಳು ಹಾಗೂ ಬ್ರಹ್ಮ ಶ್ರೀ ನಾರಾಯಣ ಗುರು, ಮಾಹಾತ್ಮ ಗಾಂಧಿ , ಬಸವಣ್ಣ ಅವರಂತ ದಾರ್ಶನಿಕರ ಆದರ್ಶಗಳನ್ನು ನಮ್ಮ ಪರಿಸರದ ಹಾಗೂ ನಮ್ಮ ಊರಿನ ಭಾಷೆಗಳ ಮೂಲಕ ಅಭಿವ್ಯಕ್ತಪಡಿಸುವ ತುರ್ತು ಅಗತ್ಯ ಇದೆ ಎಂದು ವಿಲ್ಸನ್ ಕಟೀಲು ಅಭಿಪ್ರಾಯಪಟ್ಟರು.ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿದ ಹಿರಿಯ ಪತ್ರಕರ್ತ ಹಾಗೂ ಸಾಹಿತಿ…

Read More

ಬಿಲ್ಲವ ಸಂಘ (ರಿ ) ಉರ್ವ – ಅಶೋಕನಗರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 171 ನೇ ಜನ್ಮದಿನ ಕಾರ್ಯಕ್ರಮ ನಡೆಯಿತು. ಸಭಾ ಕಾರ್ಯಕ್ರಮ ಉದ್ಘಾಟನೆಯನ್ನು ದಾಮೋದರ ದಂಡಕೇರಿ, ಮಾಲಕರು ಯಾಮಿನಿ ಬಿಲ್ಡರ್ಸ್ & ಡೆವಲಪರ್ಸ್, ಮಂಗಳೂರು, ಮಾತನಾಡುತ್ತ, ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂದು ಹೇಳಿದ ನಾರಾಯಣ ಗುರುಗಳ ವಿಚಾರಗಳನ್ನು ನಾವು ಜೀವನದಲ್ಲಿ ಅಳವಡಿಸ ಬೇಕೆಂದು ಹೇಳಿದರು. ನಾರಾಯಣ ಗುರುಗಳ ಕುರಿತ ಉಪನ್ಯಾಸವನ್ನು ಡಾ, ಮೀನಾಕ್ಷಿ ರಾಮಚಂದ್ರ, ಹಿರಿಯ ಸಾಹಿತಿ ಮಂಗಳೂರು ಮಾತನಾಡುತ್ತ ಕೇರಳದಲ್ಲಿ ಸಾಮಾಜಿಕ ಮತ್ತು ಧಾರ್ಮಿಕ ಕ್ರಾಂತಿ ಮಾಡಿದವರು ನಾರಾಯಣ ಗುರುಗಳು ಮಹಾನ್ ಸಂತ, ಕೇರಳದಲ್ಲಿ ಶೂದ್ರ ವರ್ಗ ಮತ್ತು ಕೆಳ ವರ್ಗದವರಿಗೆ ಸ್ವಾಭಿಮಾನ ಮತ್ತು ಧೈರ್ಯ ತುಂಬಿದವರು ನಾರಾಯಣ ಗುರುಗಳು, ವಿದ್ಯೆ ಮತ್ತು ಉದ್ಯೋಗ ಹೆಚ್ಚಿನ ಮಹತ್ವ ನೀಡಿದವರು ಎಂದು ಹೇಳಿದರು.ಮುಖ್ಯ ಅತಿಥಿಗಳಾಗಿ ಶ್ರೀ ಡಿ. ವೇದವ್ಯಾಸ ಕಾಮತ್, ಶಾಸಕರು, ಮಂಗಳೂರು ದಕ್ಷಿಣ ಕ್ಷೇತ್ರ ನಾರಾಯಣ ಗುರುಗಳ ಜಯಂತಿಯ ಶುಭಾಶಯ ಕೋರಿದರು.ಶ್ರೀ ಐವನ್…

Read More

ಕೊಡಗು, ಸೆಪ್ಟೆಂಬರ್ 20:ವಿರಾಜಪೇಟೆ ಪಟ್ಟಣದ ಹೃದಯಭಾಗದಲ್ಲಿ ಬ್ಯೂಟಿ ಪಾರ್ಲರ್ ಪರವಾನಗಿ ಹೆಸರಿನಲ್ಲಿ ಅಕ್ರಮವಾಗಿ ಸ್ಪಾ ಮತ್ತು ಮಸಾಜ್ ಸೆಂಟರ್ ನಡೆಸುತ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ಮೇಲೆ ಪ್ರಕರಣ ದಾಖಲಿಸಿ, ತನಿಖೆಯನ್ನು ಗಂಭೀರವಾಗಿ ಮುಂದುವರೆಸಿದ್ದಾರೆ. ಬ್ಯೂಟಿ ಪಾರ್ಲರ್ ಕವಚದಲ್ಲಿ ಅಕ್ರಮ ಚಟುವಟಿಕೆ:ಕೇರಳ ಮೂಲದ ವ್ಯಕ್ತಿಯೊಬ್ಬರು ಖಾಸಗಿ ಕಟ್ಟಡವೊಂದನ್ನು ಬಾಡಿಗೆಗೆ ಪಡೆದು, ಬ್ಯೂಟಿ ಪಾರ್ಲರ್ ಆರಂಭಿಸಿದ್ದರು. ಆದರೆ, ಪರವಾನಗಿ ನಿಯಮ ಉಲ್ಲಂಘನೆ ಮಾಡಿಕೊಂಡು ಸ್ಪಾ ಹಾಗೂ ಮಸಾಜ್ ಕೇಂದ್ರದ ಹಣೆಪಟ್ಟಿಯ ಹಿಂದರಲ್ಲಿ ಅನುಮಾನಾಸ್ಪದ ಚಟುವಟಿಕೆಗಳನ್ನು (ವೇಶ್ಯಾವಾಟಿಕೆ) ನಡೆಸುತ್ತಿದ್ದಂತೆ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿದೆ. ರೈಡಿನ ವೇಳೆ ಅಚ್ಚರಿ:ಸ್ಥಳೀಯರ ಅನುಮಾನ ಮತ್ತು ದೂರಿನ ಆಧಾರದಲ್ಲಿ ಪೊಲೀಸರು ಕಟ್ಟಡದ ಮೇಲೆ ದಾಳಿ ನಡೆಸಿದಾಗ, ಇನ್ಸೈಡ್ ಪಾರ್ಲರ್ ಹೆಸರಿನಲ್ಲಿ ಅಕ್ರಮ ಮಸಾಜ್ ಸೆಂಟರ್ ಹಾಗೂ ವೇಶ್ಯಾವಾಟಿಕೆ ನಡೆಯುತ್ತಿರುವುದು ದೃಢಪಟ್ಟಿದೆ. ಈ ಸಂದರ್ಭದಲ್ಲಿ ಕೊಡಗು, ಮಂಗಳೂರು ಹಾಗೂ ತಮಿಳುನಾಡು ಮೂಲದ ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ. ಬಂಧಿತರು:ಪೊಲೀಸರ ವರದಿಯಂತೆ ಬಂಧಿತರಲ್ಲಿ ಕೇರಳದ ಕಣ್ಣೂರಿನ ಪ್ರದೀಪನ್ ಪಿ.ಪಿ (48), ಕಲೇಶ್…

Read More