Author: Tulunada Surya

ಮಂಗಳೂರು: ಬಹುಕೋಟಿ ಸಾಲ ವಂಚನೆ ಹಗರಣದ ತನಿಖೆಯಲ್ಲಿ ಜಾರಿ ನಿರ್ದೇಶನಾಲಯ (ED) ಹೊಸ ಹೆಜ್ಜೆ ಇಟ್ಟಿದೆ. ಮಂಗಳೂರು ಮೂಲದ ಉದ್ಯಮಿ ರೋಶನ್ ಸಲ್ದಾನಾ ಅವರ ವಿರುದ್ಧ ನಡೆಯುತ್ತಿರುವ ತನಿಖೆಯ ಭಾಗವಾಗಿ, ಸುಮಾರು ₹2.85 ಕೋಟಿ ಮೌಲ್ಯದ ಆಸ್ತಿಗಳನ್ನು ಇಡಿ ಅಧಿಕಾರಿಗಳು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ. ವಾರದ ಆರಂಭದಲ್ಲಿ ಮಂಗಳೂರು ಉಪವಲಯ ಕಚೇರಿಯ ಇಡಿ ಅಧಿಕಾರಿಗಳು ಸಲ್ದಾನಾ ಹಾಗೂ ಅವರ ಕುಟುಂಬ ಸದಸ್ಯರ ಹೆಸರಿನಲ್ಲಿದ್ದ ವಸತಿ ಆಸ್ತಿ ಮತ್ತು ಅನೇಕ ಬ್ಯಾಂಕ್ ಖಾತೆಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಾಥಮಿಕ ತನಿಖೆಗಳಲ್ಲಿ, ಸಲ್ದಾನಾ ದೇಶದ ವಿವಿಧ ಭಾಗಗಳಲ್ಲಿ ಶ್ರೀಮಂತ ಹೂಡಿಕೆದಾರರು ಹಾಗೂ ಉದ್ಯಮಿಗಳನ್ನು ಗುರಿಯಾಗಿಸಿಕೊಂಡು “ಹೆಚ್ಚು ಮೌಲ್ಯದ ವಿಶೇಷ ಸಾಲಗಳು” ನೀಡುವುದಾಗಿ ಭರವಸೆ ನೀಡಿ, ನೂರಾರು ಕೋಟಿಗಳ ವಂಚನೆ ನಡೆಸಿದ್ದಾರೆ ಎಂಬ ಆರೋಪಗಳು ದೃಢಪಟ್ಟಿವೆ. ಇಡಿ ಮೂಲಗಳ ಪ್ರಕಾರ, “ಆರೋಪಿಗಳು ನೂರಾರು ಕೋಟಿ ಮೌಲ್ಯದ ಸಾಲಗಳನ್ನು ಒದಗಿಸುವುದಾಗಿ ಹೇಳಿ, ಪ್ರತಿ ಗ್ರಾಹಕರಿಂದ 5 ರಿಂದ 10 ಕೋಟಿ ರೂ.ಗಳ ಮುಂಗಡ ಮೊತ್ತವನ್ನು ಸಂಗ್ರಹಿಸಿದರು. ಆದರೆ ಯಾವುದೇ ಸಾಲಗಳು…

Read More

ವಾಮಂಜೂರು: ಖ್ಯಾತ ಉದ್ಯಮಿ ತಿರುವೈಲು ಗುತ್ತು ನವೀನ್ ಚಂದ್ರ ಆಳ್ವ ಅವರ ಪುತ್ರ ಹಾಗೂ ಯುವ ಉದ್ಯಮಿ ಅಭಿಷೇಕ್ ಆಳ್ವ ಶಾಂಭವಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ನವೆಂಬರ್ 6ರಂದು ಮಧ್ಯಾಹ್ನ ಬಪ್ಪನಾಡು ಸೇತುವೆ ಬಳಿ ಅವರ ಕಾರು ಪತ್ತೆಯಾಗಿದ್ದು, ಬಳಿಕ ಅವರು ನಾಪತ್ತೆಯಾಗಿದ್ದರು. ಶೋಧ ಕಾರ್ಯ ನಡೆಸಿದ ಬಳಿಕ ಆತ್ಮಹತ್ಯೆಯ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ. ಘಟನೆಯ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಹೆಚ್ಚಿನ ಮಾಹಿತಿ ಶೀಘ್ರದಲ್ಲೇ ಲಭ್ಯವಾಗಲಿದೆ.

Read More

ಸಹಕಾರ ಕ್ಷೇತ್ರದ ಸಾಧಕರಿಗೆ “ತೌಳವ ಸಹಕಾರ ಮಾಣಿಕ್ಯ” ಮತ್ತು “ತೌಳವ ಸಹಕಾರ ರತ್ನ” ಪ್ರಶಸ್ತಿಗಳು ಮಂಗಳೂರು: ತುಳುನಾಡ ರಕ್ಷಣಾ ವೇದಿಕೆ ಮತ್ತು ತುಳುನಾಡ ಸೂರ್ಯ ಪ್ರತಿಕೆ ಸಂಸ್ಥೆಗಳ ವತಿಯಿಂದ ಉರ್ವ ಸ್ಟೋರ್ ಬಳಿಯಿರುವ ತುಳು ಭವನ ದಿನಾಂಕ 16-11-2025 ರಂದು ನಡೆಯುವ “ಸಹಕಾರ ಸಪ್ತಾಹ” ಅಂಗವಾಗಿ ಸಹಕಾರ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ಸಲ್ಲಿಸುತ್ತಿರುವವರನ್ನು ಗುರುತಿಸಿ ಗೌರವಿಸುವ ಸನ್ಮಾನ ಸಮಾರಂಭವನ್ನು ಆಯೋಜಿಸಲಾಗಿದೆ. ಸಹಕಾರ ಕ್ಷೇತ್ರದಲ್ಲಿ ಅಸಾಧಾರಣ ಸೇವೆ ಮತ್ತು ಸಾಧನೆ ತೋರಿದವರಿಗೆ “ತೌಳವ ಸಹಕಾರ ಮಾಣಿಕ್ಯ ಪ್ರಶಸ್ತಿ” ಹಾಗೂ “ತೌಳವ ಸಹಕಾರ ರತ್ನ ಪ್ರಶಸ್ತಿ” ನೀಡಿ ಗೌರವಿಸಲಾಗುವುದು. ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸಾಧಕರಿಗೂ ಸನ್ಮಾನ ನಡೆಯಲಿದೆ. ಈ ಕುರಿತು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿರುವಂತೆ, ತಮ್ಮ ತಮ್ಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಅರ್ಹ ವ್ಯಕ್ತಿಗಳ ಹೆಸರು ಮತ್ತು ವಿಳಾಸ Bio -data 2025ರ ನವೆಂಬರ್ 10 ಸೋಮವಾರ ಮುಂಚಿತವಾಗಿ ಕಳುಹಿಸಲು ವಿನಂತಿಸಲಾಗಿದೆ. ಶಿಫಾರಸು ಬಂದವರ ಪೈಕಿ ಆಯ್ದ ಕೆಲವರನ್ನು ಪ್ರಶಸ್ತಿ ಮತ್ತು…

Read More

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇ–ಖಾತಾಕ್ಕಾಗಿ ಜನಸಾಮಾನ್ಯರು ಅನುಭವಿಸುತ್ತಿರುವ ತೊಂದರೆ ಮುಂದುವರಿದಿದ್ದು ಇನ್ನೂ ಸಹ ಅದನ್ನು ಸರಿಪಡಿಸುವ ಗೋಜಿಗೆ ಹೋಗದ ರಾಜ್ಯ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿ ಖಂಡನೀಯವೆಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಮೊನ್ನೆಯವರೆಗೆ ಇದ್ದ ಬದ್ದ ಅಧಿಕಾರಿಗಳನ್ನೆಲ್ಲಾ ಅವೈಜ್ಞಾನಿಕ ಸಮೀಕ್ಷೆಗೆ ನಿಯೋಜಿಸಿಕೊಂಡ ಪರಿಣಾಮ ಎಷ್ಟೇ ತುರ್ತು ಪರಿಸ್ಥಿತಿಯಿದ್ದರೂ ಸಾರ್ವಜನಿಕರಿಗೆ ಇ-ಖಾತಾ ಲಭಿಸಿರಲಿಲ್ಲ. ಇದೀಗ ಸಮೀಕ್ಷೆ ಮುಗಿದು ಅಧಿಕಾರಿಗಳು ಬಂದಿದ್ದಾರೆ. ಆದರೆ ಸರ್ವರ್ ಇಲ್ಲ ಎನ್ನುತ್ತಿದ್ದು ಸಾರ್ವಜನಿಕರ ತಾಳ್ಮೆಯ ಕಟ್ಟೆಯೊಡೆಯುತ್ತಿದೆ. ಕಳೆದ ಎರಡು ವರ್ಷಗಳಿಂದಲೂ ಇರುವ ಈ ಸಮಸ್ಯೆಯ ಬಗ್ಗೆ ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆದಿದ್ದೇನೆ, ಸಂಬಂಧಪಟ್ಟ ಸಚಿವರಿಗೂ ಮನವಿ ಮಾಡಿದ್ದೇನೆ. ಆದರೂ ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದಾಗಿ ನಾಗರಿಕರಿಗೆ ತೊಂದರೆ ತಪ್ಪಿಲ್ಲ ಎಂದರು. ತುರ್ತು ಅಗತ್ಯವಿರುವ ಮಾರಾಟಗಾರರು, ಖರೀದಿದಾರರು, ತಮ್ಮ ಆಸ್ತಿ ನೋಂದಣಿ ಮಾಡಿಕೊಳ್ಳಲಾಗದೇ ದಿನನಿತ್ಯ ಕಚೇರಿಗಳಿಗೆ ಅಲೆದಾಡಿ, ಸಾಲುಗಟ್ಟಿ ನಿಲ್ಲುವಂತಾಗಿದೆ. ಇಷ್ಟಾದರೂ ಈ ದಪ್ಪ ಚರ್ಮದ ಕಾಂಗ್ರೆಸ್ ಸರ್ಕಾರ ಜನರ ಸಮಸ್ಯೆ ಬಗೆಹರಿಸುವುದು ಬಿಟ್ಟು ಬೇಜವಾಬ್ದಾರಿಯಾಗಿ…

Read More

ಮಂಗಳೂರು : ಕೃಷಿ ಬದುಕಿಗೆ ಬೆಸೆದು ಕೊಂಡಿರುವ ದೀಪಾವಳಿ ಹಬ್ಬವು ಪ್ರೀತಿ ಮತ್ತು ಭಾವೈಕ್ಯತೆಯಿಂದ ಎಲ್ಲರನ್ನೂ ಜೊತೆಗೂಡಿಸುವ ಹಬ್ಬವಾಗಿದೆ ಎಂದು ತುಳು ಪರಿಷತ್ತು ಅಧ್ಯಕ್ಷ ಶುಭೋದಯ ಆಳ್ವ ಹೇಳಿದರು.ಅವರು ಮಂಗಳೂರಿನ ಬಿಕರ್ಣಕಟ್ಟೆ ಕಲ್ಪನೆಯ ಐಕ್ಯಂ ವಿಶೇಷ ಮಕ್ಕಳ ತರಬೇತಿ ಕೇಂದ್ರದಲ್ಲಿ ತುಳು ಪರಿಷತ್ ವತಿಯಿಂದ ಆಯೋಜಿಸಲಾದ ದೀಪಾವಳಿ ಆಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದರು.ಸಮಾರಂಭದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್, ತುಳು ಪರಿಷತ್ತು ಉಪಾಧ್ಯಕ್ಷ ಡಾ. ಮೀನಾಕ್ಷಿ ರಾಮಚಂದ್ರ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಚಂದ್ರಕಲಾ ರಾವ್ ಶುಭಕೋರಿ ಮಾತನಾಡಿದರು.ಕಾರ್ಯಕ್ರಮದಲ್ಲಿ ಐಕ್ಯಂ ಸಂಸ್ಥೆಯ ಅಧ್ಯಕ್ಷೆ ಕಮಲಾಕ್ಷಿ ಕುಂದರ್, ಕಾರ್ಯದರ್ಶಿ ಸಂತೋಷ್ ಕುಮಾರ್ , ಟ್ರಸ್ಟಿ ಪದ್ಮನಾಭ ಕೆ .ಸಾಲಿಯಾನ್ , ಸಂಸ್ಥೆಯ ಹಿತೈಷಿ ಉಮನಾಥ ಕೊಟ್ಟಾರಿ ಅವರು ಸೇರಿದಂತೆ ಸಂಸ್ಥೆಯ ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಿದ್ದರು.ತುಳು ಪರಿಷತ್ ಸದಸ್ಯರಾದ ಸುಮತಿ ಹೆಗ್ಡೆ , ಅಮಿತಾ ಅಶ್ವಿನ್ , ದುರ್ಗಾ ಪ್ರಸಾದ್, ರಮೇಶ್ ಮಂಚಕಲ್, ರಾಕೇಶ್ ಕುಂದರ್, ಶಾಲಿನಿ ರೈ,…

Read More

ಬಜ್ಪೆ: ಶಾಂತಿ ನಗರದ ಜರ್ಗುಮ್ ಫೌಂಡೇಶನ್‌ನ ಸುಮಾರು 9 ಸದಸ್ಯರು ಪವಿತ್ರ ಉಮ್ರಾ ಯಾತ್ರೆಗೆ ತೆರಳಲಿದ್ದು, ಅವರನ್ನು ಗುರುತಿಸಿ ಟೀಮ್ ಕರಾವಳಿ ಬಜ್ಪೆಯ ಸ್ಥಾಪಕಾಧ್ಯಕ್ಷ ನಿಸಾರ್ ಕರಾವಳಿ ಹಾಗೂ ಅವರ ತಂಡದ ಸದಸ್ಯರು ಸೇರಿ ಆತ್ಮೀಯವಾಗಿ ಸನ್ಮಾನಿಸಿ ಬಿಳ್ಕೊಟ್ಟರು. ಈ ಸಂದರ್ಭದಲ್ಲಿ ಬಜ್ಪೆ ನಾಗರಿಕರ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ಸಿರಾಜ್ ಬಜ್ಪೆ, SDPI ಮುಖಂಡ ಇಸ್ಮಾಯಿಲ್ ಇಂಜಿನಿಯರ್, ಧರ್ಮಗುರುಗಳು, ಹಿರಿಯರಾದ ಮೊನಕ ಹಾಜಿ ಮತ್ತು ಸಲೀಮ್ ಹಾಜಿ, ಉದ್ಯಮಿ ಇಫ್ತಿಕಾರ್ ಹಾಜಿ, ಕೊಯಕಾ, ಹಫೀಜ್ ಕೊಳಂಬೆ, ಉದ್ಯಮಿ ಜಬ್ಬಾರ್ ಹಾಗೂ ಹಲವು ಗಣ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಯಾತ್ರಾರ್ಥಿಗಳಿಗೆ ಶುಭಾಶಯಗಳನ್ನು ಕೋರಿ, ಅವರ ಯಾತ್ರೆ ಯಶಸ್ವಿಯಾಗಿ ನೆರವೇರಲೆಂದು ಪ್ರಾರ್ಥಿಸಲಾಯಿತು.

Read More

ಉಡುಪಿ: ನಗರಸಭಾ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಅನಧಿಕೃತವಾಗಿ ಆಹಾರ ಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ ನಗರಸಭೆ ಪೌರಾಯುಕ್ತ ಮಹಾಂತೇಶ್ ಎಚ್ಚರಿಸಿದ್ದಾರೆ. ರಸ್ತೆ ಚರಂಡಿ, ಶಾಲಾ ವಠಾರ, ಬಸ್ ನಿಲ್ದಾಣ, ಮಾರುಕಟ್ಟೆ ಪ್ರದೇಶ ಸೇರಿದಂತೆ ಜನನಿಬಿಡ ಸ್ಥಳಗಳಲ್ಲಿ ನಾಯಿಗಳಿಗೆ ಆಹಾರ ಹಾಕುವುದು ನಿಷೇಧವಾಗಿದೆ. ಈ ನಿಯಮ ಉಲ್ಲಂಘಿಸಿದರೆ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ. ಹಾಗೆಯೇ ಸಾಕು ನಾಯಿಗಳನ್ನು ಅಥವಾ ಅವುಗಳ ಮರಿಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಬಿಟ್ಟುಹೋಗುವವರ ಮೇಲೂ ಕಾನೂನು ಕ್ರಮ ಕೈಗೊಳ್ಳಲಾಗುವುದು. ಮನೆಗಳಲ್ಲಿ ನಾಯಿಗಳನ್ನು ಸಾಕುವವರು ನಾಯಿಗಳಿಗೆ ರೇಬಿಸ್ ಲಸಿಕೆ ಹಾಗೂ ಸಂತಾನಹರಣ ಶಸ್ತ್ರಚಿಕಿತ್ಸೆ ಕಡ್ಡಾಯವಾಗಿ ಮಾಡಿಸಬೇಕು ಎಂದು ಪೌರಾಯುಕ್ತರು ತಿಳಿಸಿದ್ದಾರೆ. ಜೊತೆಗೆ ಸಾಕು ನಾಯಿಗಳಿಗೆ ಗುರುತುಪಟ್ಟಿ (ಬೆಲ್ಟ್) ಅಳವಡಿಸಬೇಕಾಗಿದೆ. ಆಹಾರ ಹಾಕಲು ಗುರುತಿಸಿದ ಸ್ಥಳಗಳು ಬೀದಿ ನಾಯಿಗಳಿಗೆ ಆಹಾರ ಹಾಕಲು ನಗರಸಭೆ ನಿಗದಿಪಡಿಸಿದ ಸ್ಥಳಗಳು —• ಬೀಡಿನ ಗುಡ್ಡೆ ಹಿಂದೂ ರುದ್ರಭೂಮಿ ಎದುರುಗಡೆ• ಆದಿ ಉಡುಪಿ ಮಾರುಕಟ್ಟೆ ಹಿಂಬದಿ• ಇಂದ್ರಾಳಿ…

Read More

ಉಳ್ಳಾಲ: ಛಾಯಾಗ್ರಹಣ ಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ ಹಿರಿಯ ಛಾಯಾಗ್ರಹಕ ಅಶೋಕ್ ಅವರನ್ನು, ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ (ರಿ.), ಉಳ್ಳಾಲ ವಲಯವು ವಿಶ್ವ ಛಾಯಾಗ್ರಹಣ ದಿನದ ಅಂಗವಾಗಿ ಸನ್ಮಾನಿಸಿತು. 1956ರ ಅಕ್ಟೋಬರ್ 8ರಂದು ಜನಿಸಿದ ಅವರು, ಕಳೆದ 30 ವರ್ಷಗಳಿಂದ ಛಾಯಾಗ್ರಹಣ ಮತ್ತು ವಿಡಿಯೋಗ್ರಫಿ ಕ್ಷೇತ್ರದಲ್ಲಿ ಅಹೋರಾತ್ರಿ ಶ್ರಮವಹಿಸಿದ್ದಾರೆ. 1975ರಲ್ಲಿ ಮುಂಬೈನಲ್ಲಿ ತಮ್ಮ ಮೊದಲ ಕ್ಯಾಮೆರಾವನ್ನು ಖರೀದಿಸಿ ಹವ್ಯಾಸಿ ಛಾಯಾಗ್ರಹಕರಾಗಿ ಆರಂಭಿಸಿದ ಅವರು, ನಂತರ ಊರಿನಲ್ಲಿ ಪೂರ್ಣಕಾಲಿಕ ಛಾಯಾಗ್ರಹಕರಾಗಿ ಕಾರ್ಯ ನಿರ್ವಹಿಸಿದರು. ಅನೇಕ ಶುಭ ಕಾರ್ಯಕ್ರಮಗಳ ಅವಿಸ್ಮರಣೀಯ ಕ್ಷಣಗಳನ್ನು ತಮ್ಮ ಕ್ಯಾಮೆರಾ ಕಣ್ಗಳಲ್ಲಿ ಸೆರೆಹಿಡಿದು ಅನೇಕ ಗ್ರಾಹಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ವಿಡಿಯೋಗ್ರಾಫರ್ ಆಗಿ ಅಪಾರ ಅನುಭವವನ್ನು ಸಂಪಾದಿಸಿರುವ ಅವರು, ಛಾಯಾಗ್ರಹಣ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಕೌಶಲ್ಯ ಮತ್ತು ನಿಷ್ಠೆಯಿಂದ ಗುರುತಿಸಿಕೊಂಡಿದ್ದಾರೆ. ಪತ್ನಿ ತಾರಾ, ಮಗ ಅಖಿಲೇಶ್, ಸೊಸೆ ಶ್ರುತಿ ಹಾಗೂ ಮೊಮ್ಮಕ್ಕಳಾದ ಆರಾಧ್ಯ ಮತ್ತು ಸಾನಿಧ್ಯ ಅವರೊಂದಿಗೆ ಸುಖೀ ಜೀವನ ಸಾಗಿಸುತ್ತಿರುವ ಇವರಿಗೆ ಈ ಸನ್ಮಾನ ದೊರೆತಿರುವುದು ಛಾಯಾಗ್ರಹಣ ಕ್ಷೇತ್ರದ…

Read More

ಉಡುಪಿ :ರಜತ ಸಂಭ್ರಮದಲ್ಲಿರುವ ಯುವ ವಿಚಾರ(ರಿ) ಉಪ್ಪೂರು ಕೊಳಲಗಿರಿ ಗೆ 2025-26 ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಕಳೆದ 25 ವರ್ಷಗಳಿಂದ ಸಾಮಾಜಿಕ, ಶೈಕ್ಷಣಿಕ, ವೈದ್ಯಕೀಯ, ಧಾರ್ಮಿಕ ಹೀಗೆ ಎಲ್ಲಾ ಕ್ಷೇತ್ರಗಳಲ್ಲಿ ವಿಶಿಷ್ಟ ಸೇವೆ ಸಲ್ಲಿಸುವುದನ್ನು ಗುರುತಿಸಿ “ಸಾಮಾಜಿಕ ಸೇವೆ” ವಿಭಾಗದಲ್ಲಿ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀಮತಿ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ರವರು ನಮ್ಮ ಅಧ್ಯಕ್ಷರಾದ ಶ್ರೀ ಸಂದೀಪ್ ಶೆಟ್ಟಿಯವರಿಗೆ ಪ್ರಧಾನ ಮಾಡಿದರು. ಜಿಲ್ಲಾಧಿಕಾರಿಯವರಾದ ಶ್ರೀಮತಿ ಸ್ವರೂಪ ಟಿ.ಕೆ., ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ, ಕಾಪು ಶಾಸಕರಾದ ಶ್ರೀ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ SP ಶ್ರೀ ‌ಹರಿರಾಮ್ ಶಂಕರ್, ಜಿ. ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರತೀಕ್ ಬಾಯಲ್, ರಾಜಕೀಯ ಮುಖಂಡರಾದ ರಮೇಶ್ ಕಾಂಚನ್, ಉದಯ್ ಕುಮಾರ್ ಶೆಟ್ಟಿ ಮುನಿಯಾಲು, ಎಂ.ಎ ಗಪೂರ್, ಅಶೋಕ್ ಕೊಡವೂರು, ದಿನಕರ್ ಹೇರೂರು, ಪ್ರಸಾದ್…

Read More

ಮಂಗಳೂರು: ಹಿರಿಯ ಯಕ್ಷಗಾನ ಕಲಾವಿದ ಹಾಗೂ ತಾಳಮದ್ದಳೆ ಅರ್ಥಧಾರಿ ವಿಟ್ಲ ಶಂಭು ಶರ್ಮ (74) ಶನಿವಾರ (ನವೆಂಬರ್ 1) ಬೆಳಗಿನ ಜಾವ ನಿಧನರಾದರು. ಅವರ ನಿಧನಕ್ಕೆ ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ತೀವ್ರ ಸಂತಾಪ ಸೂಚಿಸಿದ್ದಾರೆ. ಕುಂಬಳೆ ಸೀಮೆಯ ಎಡನಾಡು ಗ್ರಾಮದ ಶೆಡಂಪಾಡಿಯಲ್ಲಿ ಕೃಷ್ಣ ಭಟ್ಟ – ಹೇಮಾವತಿ ದಂಪತಿಗಳ ಪುತ್ರನಾಗಿ 1951 ಅಕ್ಟೋಬರ್ 13ರಂದು ಜನಿಸಿದ ಶಂಭು ಶರ್ಮ ಅವರು ತಾಳಮದ್ದಳೆ ಅರ್ಥ ಹೇಳುವ ಮೂಲಕ ಯಕ್ಷಗಾನ ಕ್ಷೇತ್ರಕ್ಕೆ ಕಾಲಿಟ್ಟರು. ನಂತರ ಇದೇ ಕ್ಷೇತ್ರದಲ್ಲಿ ತಮ್ಮ ಪ್ರತಿಭೆಯನ್ನು ತೊಡಗಿಸಿಕೊಂಡು ಖ್ಯಾತ ಅರ್ಥಧಾರಿಯಾಗಿ ಹೆಸರು ಮಾಡಿದರು. ವೃತ್ತಿಯಲ್ಲಿ ಉಪನ್ಯಾಸಕರಾಗಿದ್ದ ಅವರು ಯಕ್ಷಗಾನದ ಲೋಕದಲ್ಲಿ ತರ್ಕಪೂರ್ಣ ಅರ್ಥಗಾರಿಕೆ, ವಿಶಿಷ್ಟ ಸ್ವರಶಕ್ತಿ, ಹಾಗೂ ಸಮಗ್ರ ಪಾಠಭಾವನೆಗಳಿಂದ ಕಲಾಭಿಮಾನಿಗಳ ಮೆಚ್ಚುಗೆ ಗಳಿಸಿದ್ದರು. ಸುಬ್ರಹ್ಮಣ್ಯ ಮೇಳ, ಕದ್ರಿ ಮೇಳ ಮೊದಲಾದ ಖ್ಯಾತ ಯಕ್ಷಗಾನ ಮಂಡಳಿಗಳಲ್ಲಿ ಅತಿಥಿ ಕಲಾವಿದರಾಗಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದರು. ಅವರು ಪತ್ನಿ, ಪುತ್ರ ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.…

Read More