- ಹೆಕ್ಕಡ್ಕ–ಬೈಲೂರು ಭಾಗದ ಹಿರಿಯ ಶಿಕ್ಷಕ ಭುಜಬಲಿ ಅಧಿಕಾರಿ ವಿಧಿವಶ
- ಸೌಂದರ್ಯ ಸ್ಪರ್ಧೆ: ಮುಲ್ಕಿಯ ಶಿಖಾ ಸಿಶೀಲ್ ಗೆ ಮಿಸ್ಸ್ ದಾಯ್ಜಿವರ್ಲ್ಡ್-2026 ಕಿರೀಟ
- ಫೆಬ್ರವರಿ 22ರಂದು ಸಂಜೆ 5 ಗಂಟೆಗೆ ಕುಮಾರಿ ಶ್ರೇಯ ರಾವ್ ಸಣ್ಣಯ್ಯರ ಭರತನಾಟ್ಯ ರಂಗಪ್ರವೇಶ ಸಮಾರಂಭ
- ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಬ್ಯಾಂಕ್ ಮ್ಯಾನೇಜರ್ ವಿರುದ್ಧ ಪ್ರಕರಣ ದಾಖಲು
- ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ ಆರೋಪಿ ಸರೆ
- ಖ್ಯಾತ ಶಿಕ್ಷಣ ತಜ್ಞ, ದೀರ್ಘದೃಷ್ಟಿಯ ಶಿಕ್ಷಣ ಸಂಸ್ಥಾಪಕ ಹಾಗೂ ಉದ್ಯಮಿ ಡಾ. ಸಿಎ ಎ. ರಾಘವೇಂದ್ರ ರಾವ್ ನಿಧನ
- ಯಶ್ ಪಾಲ್ ಸುವರ್ಣ ನಿತೇಶ್ ರಾಣೆ ಭೇಟಿ ಅಂತಾರಾಜ್ಯ ಮೀನುಗಾರಿಕೆ ಸಮಸ್ಯೆ ಪರಿಹಾರಕ್ಕೆ ಭರವಸೆ
- ದಲಿತ ಮಹಿಳೆಯ ಗಂಬೀರ ಆರೋಪ ಸಿ.ಐ.ಡಿ. ತನಿಖೆ ಒಪ್ಪಿಸಿ ಆರೋಪಿತನ ಹಾಗೂ ಸಂಬಂಧಿತ ವ್ಯಕ್ತಿಗಳ ದೂರವಾಣಿ ಕರೆಗಳ ಪರಿಶೀಲನೆ ಮಾಡುವಂತೆ ತುಳುನಾಡ ರಕ್ಷಣಾ ವೇದಿಕೆ ಪ್ರಶಾಂತ್ ಭಟ್ ಕಡಬ ಆಗ್ರಹ
Author: Tulunada Surya
ಉಡುಪಿಬೇರೆ ದೇಶಗಳಲ್ಲಿ ಉದ್ಯೋಗ ಪಡೆಯಲು ಬಯಸಿದ ಅನೇಕ ಜನರನ್ನು ವಂಚಿಸಿರುವ ಆರೋಪ ಎದುರಿಸುತ್ತಿರುವ ಬಂಗಲೂರಿನ ವಿವರ್ಸ್ ಕಾಲೋನಿ, ಅಂಕಲ್ ನಿವಾಸಿ ಶ್ರೀ ಎಲ್ಟನ್ ರೆಬೆಲೊ ಅವರ ಪತ್ನಿ ಪ್ರಕೃತಿ ವಿರುದ್ಧ ಉಡುಪಿ ಜಿಲ್ಲೆಯ ಪೊಲೀಸ್ ಇಲಾಖೆ ತನಿಖೆ ಪ್ರಾರಂಭಿಸಿದೆ. ಸಂತ್ರಸ್ತರಿಂದ ಬಂದ ದೂರುಗಳ ಪ್ರಕಾರ, ಆರೋಪಿಗಳು ಆಸ್ಟ್ರೇಲಿಯಾ ಹಾಗೂ ಲಂಡನ್ ದೇಶಗಳಿಗೆ ಕೆಲಸದ ವೀಸಾ ಒದಗಿಸುವ ಭರವಸೆ ನೀಡಿ ಅನೇಕ ಜನರಿಂದ ಕೋಟಿಗಟ್ಟಲೆ ಹಣ ವಸೂಲು ಮಾಡಿದರೂ, ಯಾವುದೇ ವೀಸಾ ನೀಡದೆ ಹಣ ಹಿಂತಿರುಗಿಸಲು ನಿರಾಕರಿಸಿದ್ದಾರೆ ಎಂದು ತಿಳಿದುಬಂದಿದೆ. ಈ ಕೃತ್ಯ ನಂಬಿಕೆ ಭಂಗ (Breach of Trust), ವಂಚನೆ (Cheating), ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (KCOCA) ಹಾಗೂ ಸೈಬರ್ ಅಪರಾಧ (Online Fraud) ವಿಭಾಗಗಳಿಗೆ ಒಳಪಟ್ಟಿದೆ ಎಂದು ಸಂತ್ರಸ್ತರು ತಿಳಿಸಿದ್ದಾರೆ.ತುಳುನಾಡ ರಕ್ಷಣಾ ವೇದಿಕೆಯ ಮುಖಂಡರು ಹಾಗೂ ಸಂತ್ರಸ್ತರು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಹರಿರಾಮ ಶಂಕರ್ ರವರಿಗೆ ಅಧಿಕೃತವಾಗಿ ದೂರು ಸಲ್ಲಿಸಿದ್ದು,ತನಿಖೆಗಾಗಿ ವಂಚನೆಗೊಳ್ಳಗಾದ ದಾಖಲೆಗಳನ್ನು ಒದಗಿಸಿದ್ದಾರೆಪೊಲೀಸ್ ಅಧೀಕ್ಷಕರು…
ಉಡುಪಿ :ಶ್ರೀ ಎಲ್ಟನ್ ರೆಬೆಲೊ ಅವರ ಪತ್ನಿ ಪ್ರಕೃತಿ, ವಿಳಾಸ: Vivers Colony, Ankal, Bangalore, ಇವರು ಆಸ್ಟ್ರೇಲಿಯಾ ಹಾಗೂ ಲಂಡನ್ ದೇಶಗಳಿಗೆ ಕೆಲಸದ ವೀಸಾ ನೀಡುವ ಭರವಸೆ ನೀಡಿ ಅನೇಕ ಜನರನ್ನು ನಂಬಿಸಿದ್ದಾರೆ. ವೀಸಾ ಪ್ರಕ್ರಿಯೆಗೆ ಸಹಾಯ ಮಾಡುವ ಹೆಸರಿನಲ್ಲಿ ಇವರು ಸಂತ್ರಸ್ತರಿಂದ ಕೋಟಿಗಟ್ಟಲೆ ರೂಪಾಯಿಗಳನ್ನು ಸಂಗ್ರಹಿಸಿ ನಂತರ ಯಾವುದೇ ವೀಸಾ ನೀಡದೇ ಮೋಸ ಮಾಡಿದ್ದಾರೆ.ಸಂತ್ರಸ್ತರು ಹಲವು ಬಾರಿ ಅವರೊಂದಿಗೆ ಸಂಪರ್ಕಿಸಲು ಪ್ರಯತ್ನಿಸಿದರೂ, ಅವರು ಯಾವುದೇ ಸ್ಪಷ್ಟ ಉತ್ತರ ನೀಡದೆ ಹಣ ಹಿಂತಿರುಗಿಸಲು ನಿರಾಕರಿಸಿದ್ದಾರೆ. ಈ ಕೃತ್ಯವು ನಂಬಿಕೆ ಭಂಗ (Breach of Trust), ವಂಚನೆ (Cheating), ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (KCOCA act) ಮತ್ತು ಸೈಬರ್ ಮೋಸದ (Online Fraud) ವಿಭಾಗಕ್ಕೆ ಸೇರುತ್ತದೆ.ಆರೋಪಿಗಳ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಿದಲ್ಲಿ ನಮ್ಮಲ್ಲಿ ಸಹಾಯ ಯಾಚಿಸಿದ ಸಂತ್ರಸ್ತರಂತೆ ವಿದೇಶಗಳಲ್ಲಿ ವೀಸಾ ಪಡೆಯಲು ಪ್ರಯತ್ನಿಸಿದ್ದ ನೂರಾರು ಜನರಿಂದ ಕೋಟಿಗಟ್ಟಲೆ ಹಣ ಪಡೆದು ವಂಚಿಸಿದ ವಿಷಯವು ಬಯಲಿಗೆ ಬರಬಹುದು. ಇಂತಹ ವೀಸಾ…
ಬೆಂಗಳೂರು:ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಪ್ರತಿಷ್ಠಾನ ಟ್ರಸ್ಟ್, ಅಖಿಲ ಭಾರತ ಕನ್ನಡ ಕವಿಗಳ ಕಾವ್ಯ ಪರಿಷತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ 2025ರ ಅಕ್ಟೋಬರ್ 16ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಅಖಿಲ ಭಾರತ ಕನ್ನಡ ಕವಿಗಳ ಪ್ರಥಮ ಸಮ್ಮೇಳನದಲ್ಲಿ,ಗಾಯನ ಕ್ಷೇತ್ರದಲ್ಲಿನ ವಿಶಿಷ್ಟ ಸಾಧನೆ ಹಾಗೂ ಬಹುಮುಖ ಪ್ರತಿಭೆ ಪ್ರದರ್ಶನಕ್ಕಾಗಿ ಶ್ರೀ ಎನ್. ನಾಗೇಂದ್ರ ರವರಿಗೆ ಗೌರವಾನ್ವಿತ “ವಿಶ್ವೇಶ್ವರಯ್ಯ ಅಂತರಾಷ್ಟ್ರೀಯ ಪ್ರಶಸ್ತಿ” ಪ್ರದಾನ ಮಾಡಲಾಯಿತು. ಈ ಪ್ರಶಸ್ತಿಯನ್ನು ಮಾಜಿ ಲೋಕಾಯುಕ್ತರು ಹಾಗೂ ಸುಪ್ರೀಂ ಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿಗಳಾದ ಡಾ. ಎನ್. ಸಂತೋಷ್ ಹೆಗ್ಡೆ ರವರು ಪ್ರಧಾನ ಮಾಡಿದರು. ಕಾರ್ಯಕ್ರಮದ ಸಂದರ್ಭದಲ್ಲಿ ಸಮ್ಮೇಳನ ಅಧ್ಯಕ್ಷರು ಡಾ. ಸಿ. ಸೋಮಶೇಖರ್, ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷರು ಡಾ. ಎಂ. ಎಸ್. ಮುತ್ತುರಾಜ್, ಕರ್ನಾಟಕ ಸವಿತಾ ಸಮಾಜ ಅಧ್ಯಕ್ಷರು, ಶ್ರೀ ಶ್ರೀ ಶ್ರೀ ಪ್ರಭು ಚನ್ನಬಸವ ಮಹಾಸ್ವಾಮಿಗಳು (ಅಥಣಿ), ಶ್ರೀ ಶ್ರೀ ರಮಾನಂದ ಗುರೂಜಿ…
ಮಂಗಳೂರು : ತುಳು ಕೂಟದ ಅಧ್ಯಕ್ಷರಾಗಿ, ಸಾಮಾಜಿಕ, ರಾಜಕೀಯ ಕಾರ್ಯಕರ್ತನಾಗಿ ಸೇವೆ ಸಲ್ಲಿಸಿದ ಸುಂದರರಾಜ್ ರೈ ಅವರು ರಾಜಧಾನಿಯಲ್ಲಿ ತುಳುವರ ಗಟ್ಟಿ ಧ್ವನಿಯಾಗಿ ಕಾರ್ಯನಿರ್ವಹಿಸುವುದರ ಮೂಲಕ ಸಮಾಜಕ್ಕಾಗಿ ಅನನ್ಯ ಸೇವೆ ಸಲ್ಲಿಸಿದ ಸಮಾಜಮುಖಿ ವ್ಯಕ್ತಿಯಾಗಿದ್ದರು ಎಂದು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಹೇಳಿದರು.ಇತ್ತೀಚಿಗೆ ನಿಧನರಾದ ಕೆ.ಸುಂದರರಾಜ್ ರೈ ಅವರಿಗೆ ಮಂಗಳೂರಿನ ತುಳುಭವನದಲ್ಲಿ ಆಯೋಜಿಸಲಾದ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮದಲ್ಲಿ ಅವರು ನುಡಿ ನಮನ ಸಲ್ಲಿಸಿ ಮಾತನಾಡಿದರು.ಸುಂದರರಾಜ್ ರೈ ಅವರ ಆಶಯಗಳನ್ನು ಮುಂದುವರಿಸುವ ಮೂಲಕ ಅವರಿಗೆ ಗೌರವ ಅರ್ಪಣೆ ಮಾಡಬೇಕಾಗಿದೆ ಎಂದು ಅವರು ಹೇಳಿದರು.ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಅವರ ಮಾತನಾಡಿ , ಸಾಮಾನ್ಯ ಮಧ್ಯಮ ವರ್ಗದ ಕುಟುಂಬದಿಂದ ಬಂದಂತಹ ಸುಂದರರಾಜ್ ರೈ ಅವರು ಬೆಂಗಳೂರಿನಲ್ಲಿ ನೆಲೆಯಾಗಿ ತುಳು ಸಂಘಟನೆ , ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಅನನ್ಯ ಸೇವೆ ಸಲ್ಲಿಸಿ ಅಪಾರವಾದ ಜನಪ್ರಿಯತೆಯನ್ನು ಪಡೆದಿದ್ದರೂ, ತನ್ನ ವೈಯುಕ್ತಿಕ ಲಾಭ ಉದ್ದೇಶಕ್ಕಾಗಿ ಏನನ್ನು ಮಾಡದೆ ಸರ್ವಸ್ವವೂ ಸಮಾಜಕ್ಕಾಗಿ ಎಂಬ ರೀತಿಯಲ್ಲಿ…
ಮಂಗಳೂರು:ನಗರದ ಕಾವೂರು ಸಮೀಪ ವಿದೇಶ ಉದ್ಯೋಗದ ಹೆಸರಿನಲ್ಲಿ ಹಣ ವಸೂಲಿಸಿ ಜನರನ್ನು ವಂಚಿಸುತ್ತಿದ್ದ ಇಬ್ಬರನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬೆಂಗಳೂರಿನ ಆನೆಕಲ್ ತಾಲೂಕಿನ ಪ್ರಕೃತಿ ಯು (34) ಹಾಗೂ ಕುಂದಾಪುರ ತಾಲೂಕಿನ ಗಂಗೊಳ್ಳಿ ಮೂಲದ ಆಲ್ಡನ್ ರೆಬೇರೋ (42) ಎಂದು ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಆರೋಪಿಗಳು ಕಾವೂರು ಠಾಣಾ ವ್ಯಾಪ್ತಿಯ ಹಲವರಿಗೆ “ವಿದೇಶದಲ್ಲಿ ಉತ್ತಮ ವೇತನದ ಉದ್ಯೋಗ ಕೊಡಿಸುತ್ತೇವೆ” ಎಂದು ನಂಬಿಸಿ, ಒಟ್ಟು ₹1 ಕೋಟಿಗೂ ಅಧಿಕ ಹಣ ವಸೂಲಿ ಮಾಡಿ ವಂಚನೆ ನಡೆಸಿದ್ದರು. ಅವರು ಜನರಿಂದ ಪಾಸ್ಪೋರ್ಟ್ಗಳನ್ನು ಕೂಡ ಸಂಗ್ರಹಿಸಿ ಮನೆಯಲ್ಲಿ ಅಕ್ರಮವಾಗಿ ಇರಿಸಿಕೊಂಡಿದ್ದರು ಎಂದು ತಿಳಿದುಬಂದಿದೆ. ಕಾವೂರು ಪೊಲೀಸರು ಆರೋಪಿಗಳ ಮನೆಗಳ ಮೇಲೆ ದಾಳಿ ನಡೆಸಿ 24 ಪಾಸ್ಪೋರ್ಟ್ಗಳು, 43 ಗ್ರಾಂ ಚಿನ್ನ ಮತ್ತು 2 ಮೊಬೈಲ್ಫೋನ್ಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ನಂತರ ಇಬ್ಬರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈ ಕಾರ್ಯಾಚರಣೆಯನ್ನು ಮಂಗಳೂರು ಉತ್ತರ ಉಪವಿಭಾಗದ ಎ.ಸಿ.ಪಿ. ಶ್ರೀಕಾಂತ್ ಕೆ. ಅವರ ಮಾರ್ಗದರ್ಶನದಲ್ಲಿ ಕಾವೂರು ಠಾಣೆಯ ಇನ್ಸ್ಪೆಕ್ಟರ್ ರಾಘವೇಂದ್ರ ಎಂ.…
ಮೂಡಬಿದಿರೆ ವಿಧಾನಸಭಾ ಕ್ಷೇತ್ರದ ಪೇಜಾವರ ಪೊರ್ಕೋಡಿಯ ಅಂಬೇಡ್ಕರ್ ಭವನದಲ್ಲಿ ಬಹುಜನ ಸಮಾಜ ಪಾರ್ಟಿ (ಬಿಎಸ್ಪಿ) ದಕ್ಷಿಣ ಕನ್ನಡ ಜಿಲ್ಲಾ ಮಾಸಿಕ ಸಭೆ ಭಾನುವಾರ ಮಧ್ಯಾಹ್ನ 2.30 ಗಂಟೆಗೆ ಜರುಗಿತು. ಸಭೆಗೆ ರಾಜ್ಯಾಧ್ಯಕ್ಷ ಎಂ. ಕೃಷ್ಣಮೂರ್ತಿ ಅವರು ಮುಖ್ಯ ಅತಿಥಿಯಾಗಿ ಹಾಜರಾಗಿ ಮಾರ್ಗದರ್ಶನ ನೀಡಿದರು. ಸಭೆಯ ಅಧ್ಯಕ್ಷತೆ ಜಿಲ್ಲಾ ಅಧ್ಯಕ್ಷ ಗೋಪಾಲ್ ಮುತ್ತೂರು ವಹಿಸಿದರು. ಮುಖ್ಯ ಅತಿಥಿಗಳಾಗಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕಾಂತಪ್ಪ ಅಲಂಗಾರ್ ಭಾಗವಹಿಸಿದರು. ವೇದಿಕೆಯಲ್ಲಿ ಜಿಲ್ಲಾ ಉಸ್ತುವಾರಿಗಳಾದ ನಾರಾಯಣ್ ಬೋಧ್, ದೇವಪ್ಪ ಬೋಧ್, ಉಪಾಧ್ಯಕ್ಷ ಶಿವಪ್ಪ ಗರ್ಡಾಡಿ, ಖಜಾಂಚಿ ಶಿವರಾಮ ಪೇಜಾವರ, ಹಾಗೂ ಬಿವಿಫ್ ಸಂಯೋಜಕ ನಿತಿನ್ ಮುತ್ತೂರು ಉಪಸ್ಥಿತರಿದ್ದರು. ಸಭೆಯಲ್ಲಿ ಮಾತನಾಡಿದ ರಾಜ್ಯಾಧ್ಯಕ್ಷ ಎಂ. ಕೃಷ್ಣಮೂರ್ತಿ ಅವರು, ಮುಂಬರುವ ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿ ಬಿಎಸ್ಪಿ ಸ್ಪರ್ಧಿಸಲು ತೀರ್ಮಾನಿಸಿರುವುದಾಗಿ ತಿಳಿಸಿದರು. ಜಿಲ್ಲೆಯಾದ್ಯಂತ ಪಕ್ಷದ ಚಟುವಟಿಕೆಗಳು ಈಗಾಗಲೇ ಚುರುಕುಗೊಂಡಿದ್ದು, ಮುಂದಿನ ಎಲ್ಲ ಚುನಾವಣೆಗಳಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ದೃಢ ನಂಬಿಕೆಯನ್ನು ವ್ಯಕ್ತಪಡಿಸಿದರು.…
ಉಡುಪಿ: ಕಟಪಾಡಿಯ ಫಾರೆಸ್ಟ್ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿಗೆ ತಾಗಿ ಕೌಸ್ತುಬಾ ರೆಸಿಡೆನ್ಸಿ ಕಟ್ಟಡವಿರುತ್ತದೆ ಇದು ಸದಾಕಾಲ ರಾಜ್ಯದ ಹೊರ ರಾಜ್ಯದ ಪ್ರವಾಸಿಗರು ನಿಲ್ಲುವ ತಲವಾಗಿದೆ ಇದು ಜನಜಂಗುಳಿಯಿಂದ ಕೂಡಿದ ತಡವಾಗಿದೆ ಆದರೆ ಇಲ್ಲೇ ಇರುವ ರೆಸಿಡೆನ್ಸಿ ಯವರು ಪರಿಸರದ ಸ್ವಚ್ಛತೆಗೆ ಸಂಬಂಧಿಸಿದ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ ಕೊಳಚೆ ನೀರು ಹೋಗಲು ಸರಿಯಾದ ಯಾವುದೇ ವ್ಯವಸ್ಥೆ ಕಲ್ಪಿಸದೆ ರಸ್ತೆಯಲ್ಲಿ ಹರಿಯ ಬಿಡುತ್ತಿದ್ದಾರೆ. ಸಾರ್ವಜನಿಕರು ಮೂಗು ಮುಚ್ಚಿಕೊಂಡು ಹೋಗುವಂತ ಪರಿಸ್ಥಿತಿ ನಿರ್ಮಾಣವಾಗಿದೆ ತ್ಯಾಜ್ಯ ವಸ್ತುಗಳನ್ನು ಕಂಡ ಕಂಡಲ್ಲಿ ಹಾಕುತ್ತಿದ್ದು ಪರಿಸ್ಥಿತಿ ಅಸಹನೀಯವಾಗಿದೆ ಕಟ್ಟಡದ ಬದಿಯಲ್ಲಿಯೇ ಪ್ರವಾಸಿಗರು ಮೂತ್ರ ವಿಸರ್ಜನೆ ಮಾಡುತ್ತಿದ್ದಾರೆ ಈ ಬಗ್ಗೆ ಸ್ಥಳೀಯರು ಮೌಖಿಕವಾಗಿ ಪಂಚಾಯಿತಿಗೆ ದೂರಿ ನೀಡಿದ್ದು ಯಾವುದೇ ಕ್ರಮ ಎರಗಿಸಿರುವುದಿಲ್ಲ ಆದ್ದರಿಂದ ತುಳುನಾಡ ರಕ್ಷಣಾ ವೇದಿಕೆ ನಿಯೋಗ ಜಿಲ್ಲಾಧ್ಯಕ್ಷ ಫ್ರ್ಯಾಂಕಿ ಡಿಸೋಜ ಕೊಳಲಗಿರಿ ನೇತೃತ್ವದಲ್ಲಿ ದಿನಾಂಕ 28-10-2025 ರಂದು ಕಟಪಾಡಿ ಗ್ರಾಮ ಪಂಚಾಯತ್ ಗೆ ಭೇಟಿ ನೀಡಿ ಕೂಡಲೇ ಕ್ರಮ ಕೈಗೊಳ್ಳುವಂತೆ ಮನವಿ ನೀಡಿ ಒತ್ತಾಯಿಸಿದ್ದಾರೆ ಕ್ರಮ ಕೈಗೊಳ್ಳುವಲ್ಲಿ…
ಬೆಂಗಳೂರು ತುಳುಕೂಟ (ರಿ.) ಅಧ್ಯಕ್ಷರಾದ ಶ್ರೀ ಸುಂದರರಾಜ ರೈ ರವರ ನಿಧನದಿಂದ ತುಳು ಸಮುದಾಯದಲ್ಲಿ ಆಳವಾದ ದುಃಖವಿದೆ. ಶ್ರೀ ಸುಂದರರಾಜ ರೈ ಅವರು ತುಳು ಭಾಷೆಯ ಸಂರಕ್ಷಣೆಗೆ, ಕರಾವಳಿ ಸಂಸ್ಕೃತಿ ಹಾಗೂ ಪರಂಪರೆಯ ಉಳಿವಿಗೆ ಮತ್ತು ಬೆಂಗಳೂರು ಕಂಬಳದ ಯಶಸ್ಸಿಗಾಗಿ ಅನೇಕ ವರ್ಷಗಳ ಶ್ರಮ ಮತ್ತು ಸೇವೆಯನ್ನು ನಿಭಾಯಿಸಿದ್ದರು. ಅವರ ನಾಯಕತ್ವ, ಧೈರ್ಯ ಮತ್ತು ನಿರಂತರ ಸೇವಾಭಾವ ಹೊಂದಿರುವವರಾಗಿದ್ದಾರೆ. ನಮ್ಮಲ್ಲಿ ಒಬ್ಬ ನಿಜವಾದ ಕ್ರಿಯಾಶೀಲ ನಾಯಕರೊಬ್ಬರನ್ನು ಕಳೆದುಕೊಂಡಿದ್ದೇವೆ — ಅವರು ತುಳು ಮತ್ತು ಕರಾವಳಿ ಪ್ರದೇಶದ ಜನರ ಹಕ್ಕುಗಳು, ಭಾವನೆಗಳು ಮತ್ತು ಹಿತಾಸಕ್ತಿಗಳನ್ನು ಸದಾ ಹೋರಾಟಮಾಡಿ ಕಾಪಾಡಿದರು. ಶ್ರದ್ಧಾಂಜಲಿ ಸಭೆ:ದಿನಾಂಕ: 30-10-2025 ಸಮಯ: 4.00ಸ್ಥಳ: ಉರ್ವ ತುಳು ಭವನ ಶ್ರೀ ಸುಂದರ ರಾಜ್ ರೈ ಅವರ ಬಂಧುಮಿತ್ರರು, ಗೆಳೆಯರು ಹಾಗೂ ಸಮುದಾಯದ ಪ್ರತಿಯೊಬ್ಬರೂ ಸಭೆಯಲ್ಲಿ ಭಾಗವಹಿಸಿ ಅವರ ಆತ್ಮಕ್ಕೆ ಶ್ರದ್ಧಾಂಜಲಿ ಸಲ್ಲಿಸುವಂತೆ ವಿನಂತಿಸಲಾಗುತ್ತಿದೆ.
ಬಜಪೆ: ಬಂಟರ ಸಂಘ ಬಜಪೆ ವಲಯದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ವೇಣುಗೋಪಾಲ್ ಶೆಟ್ಟಿ, ಪಡುಮನೆ ಕರಂಬಾರು ರವರಿಗೆ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ ಕೋರಲಾಯಿತು. ವಿಮಾನ ನಿಲ್ದಾಣದಿಂದ ಪೋರ್ಕೊಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನವರೆಗೆ ಭವ್ಯ ಮೆರವಣಿಗೆಯ ಮೂಲಕ ಸ್ವಾಗತಿಸಲಾಯಿತು. ಮೆರವಣಿಗೆಯಲ್ಲಿ ಸಂಭ್ರಮದ ನಾದ, ಬಣ್ಣದ ಹೂವಿನ ಅಲಂಕಾರ, ಮತ್ತು ಅಭಿಮಾನಿಗಳ ಘೋಷಣೆಗಳು ಕಂಗೊಳಿಸಿತು. ಈ ಸಂದರ್ಭದಲ್ಲಿ ಶ್ರೀ ಜಯಶಂಕರ್ ಶೆಟ್ಟಿ ಕರಂಬಾರು ಗುತ್ತು, ಶ್ರೀಮತಿ ವಿಜಯ ಶೆಟ್ಟಿ ಗಂಡೋಟ್ಟು, ಕಿಶನ್ ಶೆಟ್ಟಿ ಮರವೂರು, ಮಂಜು ಪ್ರಸಾದ್ ಶೆಟ್ಟಿ ಕೆಂಜಾರು, ದಿನೇಶ್ ಶೆಟ್ಟಿ ಚಿಕ್ಕ ಪರಾರಿ, ಜಗನಾಥ್ ಸಾಲ್ಯಾನ್ ಕರಂಬಾರು, ಸೂರ್ಯ ಕಾಂತ್ ರೈ, ರಮೇಶ್ ಸುವರ್ಣ, ರಫೀಕ್ ಕೆಂಜಾರು, ಯತೀಶ್ ಪೂಜಾರಿ ಕೆಂಜಾರು, ಚಿತ್ತರಂಜನ್ ರೈ ಕೆಂಜಾರು, ನಿತಿನ್ ಪಕ್ಕಳ ಕೆಂಜಾರು, ರವಿ ಶೆಟ್ಟಿ ಕೆಂಜಾರು ಹಾಗೂ ಬಜಪೆ ಬಂಟರ ಸಂಘದ ಪದಾಧಿಕಾರಿಗಳು ಮತ್ತು ಅಪಾರ ಸಂಖ್ಯೆಯ ವೇಣುಗೋಪಾಲ್ ಶೆಟ್ಟಿ ಅಭಿಮಾನಿಗಳು ಉಪಸ್ಥಿತರಿದ್ದರು. ಈ ಸ್ವಾಗತ ಸಮಾರಂಭವು ಬಂಟರ…
ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ಪಿಎಂಇಜಿಪಿ (PMEGP) ಯೋಜನೆಯ ಹೆಸರಿನಲ್ಲಿ ಕೋಟ್ಯಾಂತರ ರೂಪಾಯಿ ವಂಚನೆ ನಡೆದಿದ್ದು, ಈ ಪ್ರಕರಣದಲ್ಲಿ ಮಹಿಳೆಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ಬ್ರಹ್ಮಾವರದ ಕೌಶಲ್ಯ ಎಂದು ಗುರುತಿಸಲಾಗಿದೆ. ಪೊಲೀಸರು ನೀಡಿರುವ ಮಾಹಿತಿಯಂತೆ, 2023ರ ನವೆಂಬರ್ನಲ್ಲಿ ಕೌಶಲ್ಯಳು ಬಾರಕೂರು ಹೇರಾಡಿಯ ಸರಿತಾ ಲೂವಿಸ್ ಎಂಬವರನ್ನು ಸಂಪರ್ಕಿಸಿ, ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿದ್ದರು. ಆ ನಂತರ ಲೋನ್ ಪ್ರಕ್ರಿಯೆ ಮುಂದುವರಿಸಲು ಬೇರೆ ಬೇರೆ ಕಾರಣಗಳನ್ನು ಹೇಳಿ ಸರಿತಾ ಲೂವಿಸ್ ಅವರಿಂದ ಹಂತ ಹಂತವಾಗಿ ಹಣ ಪಾವತಿಸುವಂತೆ ಕೇಳಿದ್ದಳು. ಅದರಂತೆ ಸರಿತಾ ಲೂವಿಸ್ ಕೌಶಲ್ಯಳ ಖಾತೆಗೆ ಹಾಗೂ ಆಕೆಯ ತಿಳಿಸಿದ ವ್ಯಕ್ತಿಗಳಾದ ಸಂದೇಶ್, ಪ್ರಕಾಶ, ಆಶೀಶ ಶೆಟ್ಟಿ, ರಾಜೇಂದ್ರ ಬೈಂದೂರು, ಗೀತ, ಹರಿಣಿ, ನವ್ಯ, ಕುಮಾರ್, ಮಾಲತಿ, ಪ್ರವೀಣ್, ಹರಿಪ್ರಸಾದ್, ನಾಗರಾಜ ಮತ್ತು ಭಾರತಿ ಸಿಂಗ್ ಇವರ ಖಾತೆಗಳಿಗೆ ಒಟ್ಟು ₹80,72,000 ಹಣ ವರ್ಗಾಯಿಸಿದ್ದಾಗಿ ದೂರು ನೀಡಲಾಗಿದೆ. ಇದೇ ರೀತಿಯಲ್ಲಿ, ಕೌಶಲ್ಯಳು ಅಂಜಲಿನ್ ಡಿಸಿಲ್ವಾ ಎಂಬ ಮಹಿಳೆಗೆ ಸಹ…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
