What's Hot
- ಮಂಗಳೂರು ಜೈಲಿಗೆ ಡಿಜಿಪಿ ಅಲೋಕ್ ಕುಮಾರ್ ಭೇಟಿ: ಎಐ ತಂತ್ರಜ್ಞಾನ ಪ್ರಯೋಗ, ಕಟ್ಟುನಿಟ್ಟಿನ ನಿಯಂತ್ರಣಕ್ಕೆ ಒತ್ತು
- ಮಂಗಳೂರು : ಕ್ರಿಸ್ ಮಸ್ ಹಬ್ಬ ಸಮಾಜದಲ್ಲಿ ಸತ್ಯ,ನ್ಯಾಯ ಹಾಗೂ ಸಹ ಜೀವನದ ಮೌಲ್ಯಗಳನ್ನು ಮರುಸ್ಥಾಪಿಸುವ ವಿಶಿಷ್ಟ ಅವಕಾಶ ಒದಗಿಸುತ್ತದೆ ; ಧರ್ಮಾಧ್ಯಕ್ಷ ಡಾ.ಪೀಟರ್ ಪಾವ್ಲ್ ಸಲ್ಡಾನ್ಹಾ.
- ಡಿಸೆಂಬರ್ 25ರಂದು ಮಂಗಳೂರಿನ ಕೂಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಎಂ.ಆರ್.ಜಿ. ಗ್ರೂಪ್ನ ಆಶಾ–ಪ್ರಕಾಶ್ ಶೆಟ್ಟಿ ಅವರ ಮಹತ್ವಾಕಾಂಕ್ಷಿ ಸಮಾಜಮುಖಿ ಯೋಜನೆ ‘ನೆರವು–2025’
- ಉಡುಪಿ: ಲಾಡ್ಜ್ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ಪಿಂಪ್ಗಳನ್ನು ಬಂಧಿಸಿದ ಪಡುಬಿದ್ರೆ ಪೊಲೀಸರು
- ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜು ಹಳೆ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ
- ಸಹಕಾರಿ ಬ್ಯಾಂಕ್ಗಳ ಆಡಳಿತ ಮಂಡಳಿಯಲ್ಲಿ ಯಾವುದೇ ವ್ಯಕ್ತಿ ಗರಿಷ್ಠ 10 ವರ್ಷಗಳ ಕಾಲ ಮಾತ್ರ ನಿರ್ದೇಶಕ ಸ್ಥಾನ , ನಿರ್ದೇಶಕರ ಭವಿಷ್ಯ ಕುರಿತಾಗಿ ಚರ್ಚೆಗೂ ದಾರಿ ?
- ಮಂಗಳೂರು: MDMA ಸಾಗಾಟ ಜಾಲ ಭೇದಿಸಿದ ಸಿಸಿಬಿ; ಮೂವರು ಆರೋಪಿಗಳು ಬಂಧನ
- ಕರ್ತವ್ಯಕ್ಕೆ ಅಡ್ಡಿ ಎಂಬ ಸುಳ್ಳು ಪ್ರಕರಣ ದಾಖಲಿಸಿದ ಪೊಲೀಸ್ ಕ್ರಮ ಖಂಡನೀಯ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯಿಂದ ತೀವ್ರ ಆಕ್ರೋಶ
Author: Tulunada Surya
ಧ್ವನಿ ಬೆಳಕು ಮಾಲಕರ ಸಂಘ, ಮಂಗಳೂರು ತಾಲೂಕು (ರಿ) ಇದರ ಕಾವೂರು ವಲಯದ ಆಶ್ರಯದಲ್ಲಿ ತೃತೀಯ ವರ್ಷದ ಸಾಂಸ್ಕೃತಿಕ ಕಾರ್ಯಕ್ರಮ ಸಂಭ್ರಮ್ 2025 ಧ್ವನಿ ಬೆಳಕು ಮಾಲಕರ ಸಂಗಮ ಕಾರ್ಯಕ್ರಮ ಕಾವೂರು ಕೇಂದ್ರ ಮೈದಾನದಲ್ಲಿ ದಿನಾಂಕ- 13-9-2025,ಶನಿವಾರ,ಸಂಜೆ 7 ಗಂಟೆಗೆ ಸರಿಯಾಗಿ ಸಭಾ ಕಾರ್ಯಕ್ರಮ ನಡೆಯಿತು, ಈ ಕಾರ್ಯಕ್ರಮವನ್ನು ಮುಲ್ಕಿ ಮೂಡಬಿದ್ರಿ ಶಾಸಕರಾದಂತಹ ಶ್ರೀ ಉಮನಾಥ್ ಕೋಟ್ಯಾನ್ ಇವರು ಉದ್ಘಾಟಿಸಿ, ಮಾತನಾಡಿ, ಧ್ವನಿ ಬೆಳಕು ಮಾಲಕರ ಸಮಸ್ಯೆಯೂ ನನಗೆ ತಿಳಿದಿದೆ, ಇವರ ಜೀವನ ಕಷ್ಟದ ಜೀವನ, ನಿಮ್ಮ ಸಂಘಟನೆ ಇರುವುದರಿಂದ ನಿಮ್ಮ ಒಗ್ಗಟ್ಟು, ಎದ್ದು ಕಾಣುತ್ತಿದೆ, ಈಗಿನ ಪ್ರಸ್ತುತ ಸಮಸ್ಯೆಗಳಿಗೆ ಸಂಘಟನೆ ಇರುವುದರಿಂದ ಸಮಸ್ಯೆಗೆ ಪರಿಹಾರ ಸಿಗುತ್ತದೆ ಎಂದರು, ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ವೈ ಭರತ್ ಶೆಟ್ಟಿ ಮಾತನಾಡಿ ನಿಮ್ಮ ಸಮಸ್ಯೆಯನ್ನು ಸದನದಲ್ಲಿ ನಾವು ಧ್ವನಿಯೆತ್ತಿದ್ದೇವೆ, ನಿಮ್ಮ ಜೊತೆ ಯಾವಾಗಲೂ ನಾವು ಇರುತ್ತೇವೆ ಎಂದರು, ಧ್ವನಿ ಬೆಳಕು ಮಾಲಕರ ಸಂಘದ ಅಧ್ಯಕ್ಷರಾದ ಬೆನಟ್ ಡಿ ಸಿಲ್ವ ಮಾತನಾಡಿ ಕಾರ್ಯಕ್ರಮಕೆ ಶುಭ…
ಉಡುಪಿ, ಸೆಪ್ಟೆಂಬರ್ 14 – ಕೋವಿಡ್-19 ಸಂದರ್ಭದಲ್ಲಿ ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಸಾವಿರಾರು ಅಭ್ಯರ್ಥಿಗಳು ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಾಗಿ ಅನೇಕ ವರ್ಷಗಳಿಂದ ನಿರೀಕ್ಷೆಯಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗದ ಉಪಾಧ್ಯಕ್ಷ ನಾಗೇಂದ್ರ ಪುತ್ರನ್ ಕೋಟ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹಸಚಿವ ಜಿ. ಪರಮೇಶ್ವರ್ ಅವರಿಗೆ ಮನವಿ ಸಲ್ಲಿಸಿ, ಪೊಲೀಸರಿಗೆ ನೇಮಕಾತಿ ಮಾಡುವಾಗ ವಯೋಮಿತಿಯನ್ನು 30ರಿಂದ 33 ವರ್ಷಕ್ಕೆ ಹೆಚ್ಚಿಸಲು ಒತ್ತಾಯಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರದ ಅವಧಿಯಲ್ಲಿ ವಯೋಮಿತಿ 30 ವರ್ಷವರೆಗೆ ನಿಗದಿಯಾಗಿದ್ದರೆ, ಆ ಸಮಯದಲ್ಲಿಯೇ ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರಾಗಿ ವಯೋಮಿತಿ 33 ವರ್ಷಕ್ಕೆ ಹೆಚ್ಚಿಸಲು ಆಗ್ರಹಿಸಿದ್ದರು. ಆದರೆ, ಆಗ ಸರಕಾರದ ಅವಧಿಯಲ್ಲಿ ಈ ಮುಂದುವರಿಕೆ ಸಾಧ್ಯವಾಗಿಲ್ಲ. ಇದೀಗ ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿದ್ದು, ಮತ್ತೆ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಗೆ ಸಿದ್ಧತೆ ನಡೆಯುತ್ತಿದೆ. ಈ ಸಂದರ್ಭ, ಕೋವಿಡ್ ಪರಿಣಾಮದಿಂದಾಗಿ ವಯೋಮಿತಿಯ ಜತೆಗೆ ಬಲಿಯಾದ ಯುವಕರಿಗೆ ನ್ಯಾಯ ಒದಗಿಸಲು ವಯೋಮಿತಿ 33 ವರ್ಷಕ್ಕೆ…
ಕಾಪು : ಚಂದ್ರನಗರ ಖಿಲ್ರಿಯ ಜುಮ್ಮಾ ಮಸ್ಜಿದ್ ವತಿಯಿಂದ ಮಲ್ಲಾರು-ಮಜೂರು ಬದ್ರಿಯ ಜುಮ್ಮಾ ಮಸ್ಜಿದ್ ಅಧ್ಯಕ್ಷರು ಕಾಪುವಿನ ಖ್ಯಾತ ಸಮಾಜ ಸೇವಕರಾದ ಡಾ.ಫಾರೂಕ್ ಚಂದ್ರನಗರ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು ಈ ಸಂದರ್ಭದಲ್ಲಿ ಮಾತನಾಡಿದ ಅವರು ಚಂದ್ರನಗರ ನನ್ನ ಹುಟ್ಟಿದ ಊರು ಇಲ್ಲಿಯ ಜನರ ಪ್ರೀತಿ ವಿಶ್ವಾಸ ನಾನು ಎಂದಿಗೂ ಮರೆಯಲು ಸಾಧ್ಯವಿಲ್ಲ ಈ ಮಸ್ಜಿದ್ ಗೆ ಯಾವುದೇ ವರಮಾನ ಇಲ್ಲದಿದ್ದರೂ ಇಲ್ಲಿಯ ಯುವಕರು ಜಮಾತಿಗರ ಸೇವೆ ದೇವರು ಮೆಚ್ಚುವಂತಹದು ಎಲ್ಲರಿಗೂ ಒಳ್ಳೆದಾಗಲಿ ಎಂದು ಶುಭ ಹಾರೈಸಿದರು ಈ ಸಂದರ್ಭದಲ್ಲಿ ಅನಿವಾಸಿ ಭಾರತೀಯ ಉದ್ಯಮಿ ಏನ್.ಟಿ ಎಕ್ಸ್ ಪ್ರೆಸ್ ಮಾಲಕರಾದ ಪರ್ಕಳ ರಜಬ್ ಬ್ಯಾರಿ, ಉದ್ಯಮಿ ಅಬ್ದುಲ್ಲ ಉಂಜಿ ಕತಾರ್, ಮೊಯಿದಿನ್ ಬ್ಯಾರಿ ಪರ್ಕಳ, ಖಿಲ್ರಿಯ ಜುಮ್ಮಾ ಮಸ್ಜಿದ್ ಖತಿಬರಾದ ಮುಸ್ತಫಾ ಸಖಾಫಿ, ಖಿಲ್ರಿಯ ಜುಮ್ಮಾ ಮಸ್ಜಿದ್ ಅಧ್ಯಕ್ಷರಾದ ಶಂಶುದ್ದಿನ್, ಮಸ್ಜಿದ್ ಅಭಿವೃದ್ಧಿ ಅಧ್ಯಕ್ಷರಾದ ಕೆ. ಎಂ ಉಮ್ಮರಬ್ಬ ಹಾಗೂ ಇನ್ನಿತರರು ಉಪಸ್ಥಿತರಿದ್ದರು
ಇತ್ತೀಚೆಗೆ ಬಜ್ಪೆ ನಾಗರಿಕರ ಹಿತರಕ್ಷಣಾ ವೇದಿಕೆಯ ವತಿಯಿಂದ ಬಜ್ಪೆ ಪಟ್ಟಣ ಪಂಚಾಯತ್ ಸಭಾಭವನದಲ್ಲಿ ಬಜ್ಪೆ ನಾಗರಿಕರ ಹಿತ ರಕ್ಷಣೆಯ ಬಗ್ಗೆ ನಡೆಸಿ, ಬಜ್ಪೆ ಪೇಟೆಯ ಸರ್ವಾಂಗೀಣ ಅಭಿವೃದ್ದಿ, ಬೆಳೆಯುತ್ತಿರುವ ಬಜ್ಪೆ ಪಟ್ಟಣ ಪಂಚಾಯತ್ನೊಳಗೊಂಡಂತೆ,ಸಮೀಪದ 4 ಗ್ರಾಮಪಂಚಾಯತ್ ಸೇರಿಸಿಕೊಂಡು, ಬಜ್ಪೆ ಪ್ರಾಥಮಿಕ ಅರೋಗ್ಯ ಕೇಂದ್ರವನ್ನು ,ಸಮುದಾಯ ಅರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೆ ಏರಿಸುವುದರ ಬಗ್ಗೆ ರಾಜಕೀಯ ಪಕ್ಷಗಳು, ನಮಗೆ ಇದುವರೆಗೆ ಆಶ್ವಾಸನೆ ಕೊಟ್ಟದು ಸಾಕು, ನಾವು ಇನ್ನೂ ತಡಮಾಡದೆ ಹಿತ ರಕ್ಷಣಾ ವೇದಿಕೆಯ ಮುಂದಾಳತ್ವದಲ್ಲಿ ಬೀದಿಗಿಳಿದು ಹೋರಾಟ ಮಾಡುವುದಾಗಿ ತೀರ್ಮಾನಿಸಲಾಯಿತು. ಬಜ್ಪೆ ಪೇಟೆಯಲ್ಲಿ ಸುಸಜ್ಜಿತ ಬಸ್ಸು ನಿಲ್ದಾಣ ನಿರ್ಮಿಸುವಲ್ಲಿ ಮನವಿ ಕೊಡುವುದಾಗಿ ತೀರ್ಮಾನಿಸಿ, ನೆನಗುದ್ದಿಗೆ ಬಿದ್ದ ಇಂದಿರಾ ಕ್ಯಾಂಟೀನ್ ಅದಷ್ಟು ಬೇಗ ಉದ್ಘಾಟನೆ ಮಾಡಿಸಿ,ಸಾರ್ವಜನಿಕರಿಗೆ ಅನುಕೂಲಮಾಡಿಕೊಡುವ ವಿಷಯದಲ್ಲಿ ಪ್ರಯತ್ನಿಸಲು ತಿರ್ಮಾಣಕೈಗೊಳ್ಳಲಾಯಿತು. ಬಜ್ಪೆ ಪೇಟೆಯ ಪ್ರತಿಯೊಂದು ಅಭಿವೃದ್ಧಿಯಲ್ಲಿ ಬಜ್ಪೆ ನಾಗರಿಕರ ಹಿತರಕ್ಷಣಾ ವೇದಿಕೆ ಸಂಪೂರ್ಣವಾಗಿ ಸೇರಿಕೊಂಡು, ಸಂಬಂಧ ಪಟ್ಟ ಸಚಿವರು, ಅಧಿಕಾರಿಗಳು ಬೇಟಿಯಾಗುವುದಾಗಿ ನಿರ್ಣಯಿಸಲಾಯಿತು. ವಿಶೇಷವಾಗಿ ತಮ್ಮ ಗ್ರಾಮದ ಸ್ವಂತ ಭೂಮಿಯನ್ನು ಕೊಟ್ಟು ತ್ಯಾಗ ಮಾಡಿದ…
ಮಂಗಳೂರು, ಸೆಪ್ಟೆಂಬರ್ 13 – ಯಾವುದೇ ಧಾರ್ಮಿಕ ಹಬ್ಬ, ಉತ್ಸವ, ಮೆರವಣಿಗೆಗಳಿಗೆ ಮಂಗಳೂರು ನಗರ ಪೊಲೀಸ್ ಇಲಾಖೆ ಯಾವುದೇ ರೀತಿಯ ಅಡ್ಡಿಯನ್ನೂ ಹಾಕಿಲ್ಲ ಎಂಬುದಾಗಿ ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ಸ್ಪಷ್ಟಪಡಿಸಿದ್ದಾರೆ. ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಸಾರ್ವಜನಿಕ ಹಬ್ಬಗಳ ಆಚರಣೆ ಹಾಗೂ ಮೆರವಣಿಗೆಗಳಿಗೆ ಯಾವುದೇ ಕಾಲಮಿತಿಯನ್ನೂ ನಿಗದಿಪಡಿಸಿಲ್ಲ. ಆದರೆ ಧ್ವನಿಯ ಮಿತಿಯನ್ನು ಮಾತ್ರ ಕಾನೂನಿನಂತೆ ಪಾಲಿಸಲು ಸೂಚಿಸಲಾಗಿದೆ” ಎಂದು ತಿಳಿಸಿದ್ದಾರೆ. ಕಮಿಷನರ್ ವ್ಯಾಪ್ತಿಯಲ್ಲಿ ಕಳೆದ ಕೆಲವು ದಿನಗಳಿಂದ ನಡೆದ ಗಣೇಶೋತ್ಸವದ ಮೆರವಣಿಗೆಗಳು ರಾತ್ರಿ 2.30ರವರೆಗೆ ನಡೆದಿದ್ದರೂ ಎಲ್ಲಿ ಒಂದೂ ಸಮಸ್ಯೆಯು ಉಂಟಾಗಿಲ್ಲವೆಂದು ಅವರು ಉದಾಹರಣೆ ನೀಡಿದರು. “ನೆಹರೂ ಮೈದಾನದಲ್ಲಿ ನಡೆದ ಮೆರವಣಿಗೆಯ ಟ್ಯಾಬ್ಲೋಗಳಲ್ಲಿ ನಿರ್ಧರಿಸಿದ ಮಟ್ಟದ ಸೌಂಡ್ ಬಳಕೆಯಾಗಿತ್ತು. ಎಲ್ಲವೂ ಅಚ್ಚುಕಟ್ಟಾಗಿ ನಿರ್ವಹಣೆಯಾಗಿದ್ದು ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗಿಲ್ಲ” ಎಂದು ಹೇಳಿದರು. ಯಕ್ಷಗಾನ, ನಾಟಕ ಮೊದಲಾದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿಯೂ ಇದೇ ರೀತಿಯ ಮಾರ್ಗಸೂಚಿಗಳನ್ನು ಪಾಲಿಸುವುದು ಅಗತ್ಯ ಎಂದು ಅವರು ನೆನಪಿಸಿದರು. 100 ಜನರ ಸಾಮರ್ಥ್ಯದ ಸ್ಥಳದಲ್ಲಿ…
ಹಾಸನ, ಸೆಪ್ಟೆಂಬರ್ 12 – ಹಾಸನ ತಾಲ್ಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಇಂದು ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ 373ರ ಬಳಿ ನಡೆದ ಗಣೇಶ ಮೆರವಣಿಗೆಯ ವೇಳೆ ಭೀಕರ ಅಪಘಾತ ಸಂಭವಿಸಿದ್ದು, ಲಾರಿಯೊಂದು ನಿಯಂತ್ರಣ ತಪ್ಪಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಜನರ ಮೇಲೆ ಹರಿದ ಪರಿಣಾಮ ಕನಿಷ್ಠ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 15ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆ ಮೂಲಗಳ ಪ್ರಕಾರ ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ಸಾವಿರಾರು ಭಕ್ತರು ಡಿಜೆ ಸಂಗೀತದೊಂದಿಗೆ ಸಂಭ್ರಮದ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದಾಗ ಈ ದುರ್ಘಟನೆ ಸಂಭವಿಸಿದ್ದು, ಘಟನೆಯ ದೃಶ್ಯವಿವೆಡೆ ವೈರಲ್ ಆಗುತ್ತಿವೆ. ಸ್ಥಳೀಯರು ಹಾಗೂ ಪೊಲೀಸರ ನೆರವಿನಿಂದ ಗಾಯಾಳುಗಳಿಗೆ ತಕ್ಷಣವೇ ನೆರವು ನೀಡಲಾಯಿತು. ಪ್ರತ್ಯಕ್ಷದರ್ಶಿಗಳ ಹೇಳಿಕೆಯ ಪ್ರಕಾರ, ಮೆರವಣಿಗೆ ಸಾಗುತ್ತಿರುವ ಸಮಯದಲ್ಲಿ ವೇಗವಾಗಿ ಬಂದ ಲಾರಿ ನಿಯಂತ್ರಣ ತಪ್ಪಿ ನೇರವಾಗಿ ಜನರ ಗುಂಪಿನಲ್ಲಿ ನುಗ್ಗಿದ್ದು, ಭಯಾನಕ ಪರಿಸ್ಥಿತಿ ಉಂಟಾಗಿದೆ. ಪೊಲೀಸರು ಈಗಾಗಲೇ ಪ್ರಕರಣ ದಾಖಲಿಸಿಕೊಂಡಿದ್ದು, ಲಾರಿ ಚಾಲಕನನ್ನು…
ಕಠ್ಮಂಡು: ನೇಪಾಳದಲ್ಲಿ ರಾಜಕೀಯ ಬಿರುಗಾಳಿ ಮುಂದುವರಿದಿರುವ ನಡುವೆ, ಸುಪ್ರೀಂ ಕೋರ್ಟ್ನ ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ಅವರನ್ನು ಮಧ್ಯಂತರ ಪ್ರಧಾನಿಯಾಗಿ ನೇಮಕ ಮಾಡಲಾಗಿದೆ. ಈ ಮೂಲಕ ಅವರು ನೇಪಾಳದ ಇತಿಹಾಸದಲ್ಲಿ ಪ್ರಧಾನಿಯಾಗಿ ಸೇವೆ ಸಲ್ಲಿಸುತ್ತಿರುವ ಮೊದಲ ಮಹಿಳೆ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. ರಾಜಕೀಯ ಪಟಾಪಟಕ್ಕೆ ಕರ್ಕಿಯ ಆಗಮನಪ್ರಧಾನಿ ಕೆ.ಪಿ. ಶರ್ಮಾ ಒಲಿ ನೇತೃತ್ವದ ಸರ್ಕಾರ ಭ್ರಷ್ಟಾಚಾರ ಆರೋಪಗಳು, ಸಾಮಾಜಿಕ ಮಾಧ್ಯಮ ನಿಷೇಧ, ಹಾಗೂ ಯುವ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಪತನಗೊಂಡಿದೆ. ಈ ಹಿನ್ನೆಲೆಯಲ್ಲಿ ಮಧ್ಯಂತರ ಸರ್ಕಾರ ರಚನೆಗಾಗಿ ನಡೆದ ಎರಡು ದಿನಗಳ ಮಾತುಕತೆಗಳಲ್ಲಿ ಕೊನೆಗೆ 73 ವರ್ಷದ ಸುಶೀಲಾ ಕರ್ಕಿ ಆಯ್ಕೆಯಾಗಿದ್ದಾರೆ. ಪ್ರಮಾಣ ವಚನ ಸಮಾರಂಭಪ್ರಮಾಣ ವಚನ ಸಮಾರಂಭದಲ್ಲಿ ರಾಷ್ಟ್ರಪತಿ ರಾಮ್ ಚಂದ್ರ ಪೌಡೆಲ್, ಸೇನಾ ಮುಖ್ಯಸ್ಥ ಆಶಾಕ್ ರಾಜ್ ಸೆಗ್ಡೆಲ್, ಹಾಗೂ ವಿವಿಧ ಪ್ರಜಾಪ್ರತಿನಿಧಿಗಳು ಉಪಸ್ಥಿತರಿದ್ದರು. ಮಧ್ಯಂತರ ಪ್ರಧಾನಿಯ ಸ್ಥಾನಕ್ಕೆ ಎಂಜಿನಿಯರ್ ಕುಲ್ಮನ್ ಗುಲ್ಸಿಂಗ್ ಮತ್ತು ಕಠ್ಮಂಡು ಮೇಯರ್ ಬಾಲೇಂದ್ರ ಶಾ ಅವರ ಹೆಸರುಗಳು ಸಹ ಮುಂದಾಗಿದ್ದರೂ, ಅಂತಿಮ ಆಯ್ಕೆಯಲ್ಲಿ…
ಉಡುಪಿ: ಉಡುಪಿದಿಂದ ಮಂಗಳೂರು ಕಡೆಗೆ ಸಾಗುವ ರಾಷ್ಟ್ರೀಯ ಹೆದ್ದಾರಿ (NH-66) ವಿಪರೀತ ಗುಂಡಿಗಳಿಂದ ದುರಸ್ಥಿಯ ಅಗತ್ಯಕ್ಕೀಳಾಗಿದೆ. ಹೆದ್ದಾರಿಯ ಮೇಲೆ ಮೂಡಿರುವ ದೊಡ್ಡ ದೊಡ್ಡ ಗುಂಡಿಗಳು ವಾಹನ ಸಂಚಾರವನ್ನು ತೀವ್ರವಾಗಿ ವ್ಯತ್ಯಯಗೊಳಿಸುತ್ತಿದ್ದು, ಅಪಘಾತಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಈ ಮಾರ್ಗದ ಮೂಲಕ ದಿನನಿತ್ಯ ಸಂಚಾರಿಸುವ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳು, ನವಮಂಗಳೂರು ಬಂದರು ಪ್ರದೇಶ , ಬೈಕಂಪಾಡಿ ಕೈಗಾರಿಕಾ ಪ್ರದೇಶಗಳಿಗೆ ತೆರಳುವ ಕಾರ್ಮಿಕರು ಹಾಗೂ ಸಾರ್ವಜನಿಕರು ಭಯಭೀತರಾಗಿ ಪ್ರಯಾಣಿಸುವ ಸ್ಥಿತಿ ನಿರ್ಮಾಣವಾಗಿದೆ. ಈ ರಸ್ತೆ ದುಸ್ಥಿತಿಯು ಹಲವಾರು ಅಮೂಲ್ಯ ಜೀವಗಳನ್ನು ಬಲಿ ಪಡೆದಿದ್ದು, ಸಾರ್ವಜನಿಕರಲ್ಲಿ ಆಕ್ರೋಶ ಉಂಟುಮಾಡಿದೆ. ಇತ್ತೀಚೆಗಷ್ಟೆ, ದಕ್ಷಿಣ ಕನ್ನಡ ಜಿಲ್ಲೆಯ ಕೂಳೂರಿನಲ್ಲಿ ಹೆದ್ದಾರಿಯಲ್ಲಿದ್ದ ಗುಂಡಿಯಿಂದ ಸಂಭವಿಸಿದ ಅಪಘಾತದಲ್ಲಿ ಮಹಿಳೆಯೊಬ್ಬರು ಜೀವ ಕಳೆದುಕೊಂಡಿದ್ದಾರೆ. ಈ ದುರಂತದ ಹಿನ್ನೆಲೆಯಲ್ಲಿ, ತುಳುನಾಡ ರಕ್ಷಣಾ ವೇದಿಕೆ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು ಅವರು ತ್ವರಿತ ಕ್ರಮಕ್ಕೆ ಆಗ್ರಹಿಸಿದ್ದಾರೆ. “ರಸ್ತೆಗಳ ಸ್ಥಿತಿ ಹದಗೆಟ್ಟು, ಪ್ರಾಣಾಪಾಯದ ಮಟ್ಟಿಗೆ ತಲುಪಿದೆ. ಇನ್ನಷ್ಟು ಅಮೂಲ್ಯ ಜೀವಗಳು ಬಲಿಯಾಗದಂತೆ ಜಿಲ್ಲಾಡಳಿತ…
ವಯೋ ಸಮ್ಮಾನ್ ಪುರಸ್ಕೃತ ಸಾಹಿತಿ ಭೋಜ ಸುವರ್ಣ ಅವರ ಸಾಹಿತ್ಯದ 1971 ಫೆಬ್ರವರಿ 19 ರಂದು ಇತಿಹಾಸದಲ್ಲಿ ಮೊದಲ ತುಳು ಚಿತ್ರವಾಗಿ ಎನ್ನ ತಂಗಡಿ ಬಿಡುಗಡೆ ಕಂಡಿತ್ತು. ಆದರೆ ಆರ್ಥಿಕ ಕಾರಣಗಳಿಂದ ಅಂದಿನ ಗ್ರಾಮೋಪೋನ್ ನಲ್ಲಿ ಅದರ ಹಾಡುಗಳು ಬಿಡುಗಡೆಯಾಗದೆ ಜನ ಸಾಮಾನ್ಯರನ್ನು ಈ ಹಾಡುಗಳು ತಲುಪಲು ಸಾಧ್ಯವಾಗಲಿಲ್ಲ. ಈ ಕೊರಗು ಸಾಹಿತಿ ಭೋಜ ಸುವರ್ಣರನ್ನು ಸದಾ ಕೊರೆಯುತ್ತಿತ್ತು.ವಯೋ ಸಮ್ಮಾನ್ ಸಮಯದಲ್ಲಿ ಇದನ್ನು ಮನಗಂಡ ಐಲೇಸಾ ಆ ಹಾಡಿನ ಪುನರ್ ಸೃಷ್ಟಿಗೆ ಸಂಕಲ್ಪ ಮಾಡಿತ್ತು.ಅದೀಗ ನನಸಾಗುತ್ತಿದೆ. ‘ಮನಸ್ಸ್ ನ್ ನಿರ್ಮಲ ದೀದ್ ಬಾಳ್ಂಡ ಅವ್ವೇ ಒಂಜಿ ಮಂದಿರಾ’ ಎನ್ನುವ ಸಮಾಜ ಮುಖಿ ಸಂದೇಶದ ಆ ಹಾಡನ್ನು ವಿ.ಮನೋಹರ್ ಭೋಜ ಸುವರ್ಣ ಅವರ ಧ್ವನಿಯಲ್ಲೇ ಹಾಡಿಸಿ ಧ್ವನಿ ಮುದ್ರಿಸಿದ್ದಾರೆ. ಮೂಲ ಹಾಡಿನ ರಾಗ ಸಂಯೋಜನೆಯಲ್ಲಿಯೇ ಹಾಡು ಮೂಡಿ ಬಂದಿದ್ದು ಎಂಭತ್ತೈದರ ಹರೆಯದ ಭೋಜ ಸುವರ್ಣ ಶಕ್ತಿಮೀರಿ ಹಾಡಿ ಅದಕ್ಕೊಂದು ನ್ಯಾಯ ಒದಗಿಸಿದ್ದಾರೆ. ಇದರ ಜೊತೆಗೆ ಅವರೇ ಸಾಹಿತ್ಯ ನೀಡಿದ ”ಎನ್ನ ಜಾಗೆ ಉಂದು”…
ಮಂಗಳೂರು : ಕದರಿಕಾ ಚಾರಿಟೇಬಲ್ ಟ್ರಸ್ಟ್ (ರಿ) ಇದರ ಅಂಗ ಸಂಸ್ಥೆಯಾದ ಕದ್ರಿ ಕ್ರಿಕೆಟರ್ಸ್ (ರಿ) ಆಯೋಜಿಸುವ ಹದಿನಾರನೇ ವರ್ಷದ ಕದ್ರಿ ಸ್ಮಾರ್ ನೈಟ್ ಕಾರ್ಯಕ್ರಮವು ದಿನಾಂಕ 15/09/2025 ಸೋಮವಾರ, ಕದ್ರಿ ಮೊಸರು ಕುಡಿಕೆ ಉತ್ಸವದ ಸಂದರ್ಭದಲ್ಲಿ ಸಂಜೆ 6ರಿಂದ ಕದ್ರಿ ಮೈದಾನದಲ್ಲಿ ಅದ್ದೂರಿಯಾಗಿ ನಡೆಯಲಿದೆ ಎಂದು ಪತ್ರಿಕಾ ಗೋಷ್ಠಿಯಲ್ಲಿ ಸಂಸ್ಥೆಯ ಅಧ್ಯಕ್ಷರಾದ ಕದ್ರಿ ಮನೋಹರ್ ಶೆಟ್ಟಿ ಅವರು ತಿಳಿಸಿದ್ದಾರೆ ಈ ಬಾರಿ ಖ್ಯಾತ ಹಿನ್ನೆಲೆ ಗಾಯಕ ಶ್ರೀ ರಾಜೇಶ್ ಕೃಷ್ಣನ್, ಕನ್ನಡ ಸಿನಿಮಾ ನಟಿ ನಿಮಿಕ ರತ್ನಾಕರ್ ಹೆಸರಾಂತ, ಹಿನ್ನೆಲೆ ಗಾಯಕ ಶಶಾಂಕ್ ಶೇಷಗಿರಿ, ಜೀ ಸರಿಗಮಪ ಜೂರಿ ಶ್ರುತಿ ಪ್ರಹ್ಲಾದ್, ಹೆಸರಾಂತ ಹಿನ್ನೆಲೆ ಗಾಯಕ ಅನಿರುದ್ಧ ಶಾಸ್ತ್ರಿ ಬಹುಭಾಷಾ ಸಂಗೀತ ನಿರ್ದೇಶಕ ಮಣಿಕಾಂತ್ ಕದ್ರಿ, ಚಿತ್ರ ನಟ ರೂಪೇಶ್ ಶೆಟ್ಟಿ, ಇತ್ತೀಚಿಗೆ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ದಾಖಲೆ ಮಾಡಿರುವ ಗಾಯಕ ಯಶವಂತ್ ಎಂ ಜಿ, ಭಾರತ ನಾಟ್ಯ ಕಲಾವಿದೆ ವಿಧುಷಿ ದೀಕ್ಷಾ ಹಾಗೂ ರೇಮೊನ ಭಾಗವಹಿಸಲಿದ್ದಾರೆ ಅಲ್ಲದೆ…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
