- ಮಂಗಳೂರು : ಕ್ರಿಸ್ ಮಸ್ ಹಬ್ಬ ಸಮಾಜದಲ್ಲಿ ಸತ್ಯ,ನ್ಯಾಯ ಹಾಗೂ ಸಹ ಜೀವನದ ಮೌಲ್ಯಗಳನ್ನು ಮರುಸ್ಥಾಪಿಸುವ ವಿಶಿಷ್ಟ ಅವಕಾಶ ಒದಗಿಸುತ್ತದೆ ; ಧರ್ಮಾಧ್ಯಕ್ಷ ಡಾ.ಪೀಟರ್ ಪಾವ್ಲ್ ಸಲ್ಡಾನ್ಹಾ.
- ಡಿಸೆಂಬರ್ 25ರಂದು ಮಂಗಳೂರಿನ ಕೂಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಎಂ.ಆರ್.ಜಿ. ಗ್ರೂಪ್ನ ಆಶಾ–ಪ್ರಕಾಶ್ ಶೆಟ್ಟಿ ಅವರ ಮಹತ್ವಾಕಾಂಕ್ಷಿ ಸಮಾಜಮುಖಿ ಯೋಜನೆ ‘ನೆರವು–2025’
- ಉಡುಪಿ: ಲಾಡ್ಜ್ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ಪಿಂಪ್ಗಳನ್ನು ಬಂಧಿಸಿದ ಪಡುಬಿದ್ರೆ ಪೊಲೀಸರು
- ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜು ಹಳೆ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ
- ಸಹಕಾರಿ ಬ್ಯಾಂಕ್ಗಳ ಆಡಳಿತ ಮಂಡಳಿಯಲ್ಲಿ ಯಾವುದೇ ವ್ಯಕ್ತಿ ಗರಿಷ್ಠ 10 ವರ್ಷಗಳ ಕಾಲ ಮಾತ್ರ ನಿರ್ದೇಶಕ ಸ್ಥಾನ , ನಿರ್ದೇಶಕರ ಭವಿಷ್ಯ ಕುರಿತಾಗಿ ಚರ್ಚೆಗೂ ದಾರಿ ?
- ಮಂಗಳೂರು: MDMA ಸಾಗಾಟ ಜಾಲ ಭೇದಿಸಿದ ಸಿಸಿಬಿ; ಮೂವರು ಆರೋಪಿಗಳು ಬಂಧನ
- ಕರ್ತವ್ಯಕ್ಕೆ ಅಡ್ಡಿ ಎಂಬ ಸುಳ್ಳು ಪ್ರಕರಣ ದಾಖಲಿಸಿದ ಪೊಲೀಸ್ ಕ್ರಮ ಖಂಡನೀಯ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯಿಂದ ತೀವ್ರ ಆಕ್ರೋಶ
- ಉಪ್ಪುರು ಪರಾರಿ ಬೊಬ್ಬರ್ಯ ದೈವಸ್ಥಾನದ ನೂತನ ಗರ್ಭಗುಡಿ ನಿರ್ಮಾಣಕ್ಕೆ ಶಿಲಾನ್ಯಾಸ–ನಿಧಿಕುಂಭ ಸ್ಥಾಪನೆ ವಿಜೃಂಭಣೆ
Author: Tulunada Surya
ಶರತ್ ಕುಮಾರ್ ಬಜಾಲ್ – ಮಂಗಳೂರು ನಗರ ಪ್ರಧಾನ ಕಾರ್ಯದರ್ಶಿಹರೀಶ್ ಶೆಟ್ಟಿ ಜಪ್ಪಿನಮೊಗರು – ಸಂಘಟನಾ ಕಾರ್ಯದರ್ಶಿ ಮಂಗಳೂರು:ತುಳುನಾಡದ ಗೌರವ, ಪರಂಪರೆ, ಸಂಸ್ಕೃತಿ ಮತ್ತು ಕನ್ನಡ–ತುಳು ಭಾವನೆಯನ್ನು ಉಳಿಸಿ ಬೆಳೆಸುವ ಅಭಿಯಾನದ ಮುಂಚೂಣಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ತುಳುನಾಡ ರಕ್ಷಣಾ ವೇದಿಕೆ ಕಳೆದ 16 ವರ್ಷಗಳಿಂದ ಜನಪರ ಚಟುವಟಿಕೆಗಳ ಮೂಲಕ ಕರಾವಳಿಯಲ್ಲಿ ಮಾತ್ರವಲ್ಲ, ದೇಶ–ವಿದೇಶಗಳಲ್ಲೂ ತನ್ನ ಅಸ್ತಿತ್ವವನ್ನು ಗಟ್ಟಿಯಾಗಿ ನಿರ್ಮಿಸಿಕೊಂಡಿದೆ. ಸಂಸ್ಥೆಯು ಸ್ಥಾಪನೆಯಾದ ದಿನದಿಂದಲೂ “ಮಾನವ ಸೇವೆಯೇ ಮಾಧವ ಸೇವೆ” ಎಂಬ ತತ್ವವನ್ನು ಅನುಸರಿಸಿ, ವಿವಿಧ ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ, ಶಿಕ್ಷಣ ಮತ್ತು ತುರ್ತು ಸೇವಾ ಕ್ಷೇತ್ರಗಳಲ್ಲಿ ಜನರಿಗೆ ನೆರವಾಗುತ್ತಾ ಬರುತ್ತಿದೆ. ಕರಾವಳಿ ಪ್ರದೇಶದಲ್ಲಿ ಸಂಭವಿಸಿದ ಪ್ರಾಕೃತಿಕ ವಿಪತ್ತುಗಳು, ಅಗ್ನಿ ಅವಘಡಗಳು, ವೈದ್ಯಕೀಯ ತುರ್ತು ಪರಿಸ್ಥಿತಿಗಳು, ಬಡ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು, ರೋಗಿಗಳಿಗೆ ಔಷಧಿ–ಆರ್ಥಿಕ ಸಹಾಯ, ರಕ್ತದಾನ ಶಿಬಿರಗಳು, ಪರಿಸರ ಸಂರಕ್ಷಣಾ ಕಾರ್ಯಕ್ರಮಗಳು, ದೇವಾಲಯ–ಸಮುದಾಯ ಕೇಂದ್ರಗಳ ಅಭಿವೃದ್ಧಿ ಸೇರಿದಂತೆ ನೂರಾರು ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿ ಸಂಸ್ಥೆ ವಿಶಿಷ್ಟ ಸ್ಥಾನ ಪಡೆದಿದೆ. ದೇಶ–ವಿದೇಶಗಳಲ್ಲಿ ಕಾರ್ಯಕರ್ತರ ಜಾಲ…
ಮಂಗಳೂರು: ದೋಣಿಂಜೆಗುತ್ತು ಗಡಿ ಪ್ರಧಾನರಾದ ಪ್ರಮೋದ್ ಕುಮಾರ್ ರೈ ಅವರ ಅಧ್ಯಕ್ಷತೆಯಲ್ಲಿ, ಯತಿವರ್ಯ ಹಾಗೂ ತಂತ್ರಿವರ್ಯರ ಅನುಗ್ರಹ ಮಾರ್ಗದರ್ಶನ ಮತ್ತು ಪವಿತ್ರ ಸಾನ್ನಿಧ್ಯದಲ್ಲಿ ಡಿಸೆಂಬರ್ 21ರಂದು ನಡೆಯಲಿರುವ ಧರ್ಮಮವಲೋಕನ ಸಭೆ ಯ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಶರವು ಮಹಾಗಣಪತಿ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ಜರುಗಿತು. ಈ ಕಾರ್ಯಕ್ರಮವನ್ನು ವಿಶ್ವ ಹಿಂದೂ ಪರಿಷತ್, ಹಿಂದೂ ಯುವಸೇನೆ ಮತ್ತು ತುಳುನಾಡ ರಕ್ಷಣಾ ವೇದಿಕೆಯ ಸಹಯೋಗದೊಂದಿಗೆ ಆಯೋಜಿಸಲಾಗಿದೆ. ಆಮಂತ್ರಣ ಪತ್ರಿಕೆ ಬಿಡುಗಡೆ ನಂತರ ಮಾತನಾಡಿದ ಗಡಿ ಪ್ರಧಾನ ಪ್ರಮೋದ್ ಕುಮಾರ್ ರೈ ಅವರು,“ಹಿಂದೂ ಧರ್ಮದ ಸಂರಕ್ಷಣೆ, ಧರ್ಮದ ಮೂಲ ಸಿದ್ಧಾಂತಗಳ ಅರಿವು ಮತ್ತು ಯುವಪೀಳಿಗೆಯಲ್ಲಿ ಧಾರ್ಮಿಕ ಜಾಗೃತಿ ಮೂಡಿಸಲು ಸಮಾಜದ ಎಲ್ಲ ವರ್ಗದ ಜನರನ್ನು ಒಂದೇ ವೇದಿಕೆಗೆ ತರಲು ಈ ಧರ್ಮವಲೋಕನ ಸಭೆಯನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಎಲ್ಲರಿಗೂ ಧರ್ಮದ ಒಳಿತು–ಕೆಡುಕುಗಳ ಅಧ್ಯಯನ ಮತ್ತು ಚಿಂತನೆಗೆ ಇದು ಮಹತ್ತ್ವದ ವೇದಿಕೆ ಆಗಲಿದೆ,” ಎಂದು ಹೇಳಿದರು. ಈ ಸಂದರ್ಭದಲ್ಲಿ ಹಿಂದೂ ಯುವಸೇನೆ ಗೌರವಾಧ್ಯಕ್ಷ ಭಾಸ್ಕರಚಂದ್ರ ಶೆಟ್ಟಿ, ವಿಶ್ವ…
ಮಂಗಳೂರು, ಡಿ.11: ತುಳು ಚಿತ್ರರಂಗಕ್ಕೆ ಮತ್ತೊಂದು ಹೊಸ ಉಸಿರು! ಯಸ್ ಬಿ ಗ್ರೂಪ್ಸ್ ಅರ್ಪಿಸುವ ಶಿಯಾನ್ ಪ್ರೊಡಕ್ಷನ್ ಹೌಸ್ ಬ್ಯಾನರ್ನಲ್ಲಿ ಪ್ರತೀಕ್ ಯು. ಪೂಜಾರಿ ಕಾವೂರು ನಿರ್ಮಾಣದ, ಭರತ್ ಶೆಟ್ಟಿ ಅವರ ಕಥೆ-ಪರಿಕಲ್ಪನೆ-ನಿರ್ದೇಶನದ ಬಹುನಿರೀಕ್ಷಿತ ತುಳು ಸಿನೆಮಾ ‘ಪಿಲಿಪಂಜ’ ಡಿಸೆಂಬರ್ ೧೨ರಿಂದ ಕರ್ನಾಟಕದ ಕರಾವಳಿ ಪಟ್ಟಿಯಾದ್ಯಂತ ತೆರೆಗೆ ಬರುತ್ತಿದೆ. ಈ ಬಾರಿ ಚಿತ್ರ ತೆರೆಕಾಣುವ ಥಿಯೇಟರ್ಗಳ ಪಟ್ಟಿ ಭರ್ಜರಿಯಾಗಿದೆ: ಮಂಗಳವಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ನಿರ್ದೇಶಕ ಭರತ್ ಶೆಟ್ಟಿ ಹೇಳಿದ್ದು:“ಕೊಕ್ಕಡ, ನರಿಂಗಾನ, ಇರಾ ಸೇರಿದಂತೆ ಹಲವು ಸುಂದರಕ್ಷಿತ ಹಾಗೂ ಸವಾಲಿನ ಸ್ಥಳಗಳಲ್ಲಿ ಚಿತ್ರೀಕರಣ ನಡೆಸಿದ್ದೇವೆ. ವಿಶೇಷವೆಂದರೆ ಅರ್ಧಕ್ಕಿಂತ ಹೆಚ್ಚು ಭಾಗ ರಾತ್ರಿ ಸಮಯದಲ್ಲೇ ಶೂಟ್ ಮಾಡಿದ್ದೇವೆ. ಹೊಸ ಶೈಲಿಯ ಕಥೆ, ಭಿನ್ನ ನಿರೂಪಣೆ – ‘ಪಿಲಿಪಂಜ’ ನಿಮ್ಮನ್ನು ಬೇರೆಯದೇ ಜಗತ್ತಿಗೆ ಕರೆದೊಯ್ಯಲಿದೆ.” ನಟ ರಮೇಶ್ ರೈ ಕುಕ್ಕುವಳ್ಳಿ ಉತ್ಸಾಹದಿಂದ ಹೇಳಿದ್ದು:“ಪುತ್ತೂರು, ಮಂಗಳೂರು ಸೇರಿ ಎಲ್ಲೆಡೆ ನಡೆದ ಪ್ರೀಮಿಯರ್ ಶೋಗಳಲ್ಲಿ ಪ್ರೇಕ್ಷಕರು ಚಪ್ಪಾಳೆ ತಟ್ಟಿ ಸ್ವಾಗತಿಸಿದ್ದಾರೆ. ‘ಇದು ತುಳು ಸಿನೆಮಾದಲ್ಲಿ ಹೊಸ ಅಧ್ಯಾಯ’…
ಮಂಗಳೂರು: ಅಮ್ಮುಂಜೆ ಹಾಗೂ ಸುತ್ತಮುತ್ತಲಿನ ಸಾರ್ವಜನಿಕರಿಂದ ಬಂದ ಮನವಿಯನ್ನು ಪರಿಗಣಿಸಿ, ಸೆೇಕ್ರೆಡ್ ಹಾರ್ಟ್ ಹಿರಿಯ ಪ್ರಾಥಮಿಕ ಶಾಲೆ, ಅಮ್ಮುಂಜೆ ಉಳಿಸುವ ಕುರಿತು ತಕ್ಷಣ ಕ್ರಮ ಕೈಗೊಳ್ಳುವಂತೆ ತುಳುನಾಡ ರಕ್ಷಣಾ ವೇದಿಕೆ ನಿಯೋಗ ಶಿಕ್ಷಣ ಇಲಾಖೆಗೆ ಮನವಿ ನೀಡಿ ವಿನಂತಿಸಿದೆ. ದಶಕಗಳಿಂದಲೂ ಗ್ರಾಮೀಣ ಮಕ್ಕಳಿಗೆ ಸುಲಭವಾಗಿ ಲಭ್ಯವಿರುವ ಗುಣಮಟ್ಟದ ಶಿಕ್ಷಣದ ಕೇಂದ್ರವಾಗಿರುವ ಈ ಶಾಲೆ, ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಮಕ್ಕಳಿಗೆ ಸಹ ಬೆಳಕಾಗಿದ್ದು, ಸಮುದಾಯದ ಶೈಕ್ಷಣಿಕ ಪ್ರಗತಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ. ಆದರೆ ಇತ್ತೀಚಿನ ಕೆಲವು ಆಡಳಿತಾತ್ಮಕ ಹಾಗೂ ಸೌಕರ್ಯ ಸಂಬಂಧಿತ ಸಮಸ್ಯೆಗಳು ಶಾಲೆಯ ಭವಿಷ್ಯ ಪ್ರಶ್ನಾರ್ಥಕವಾಗುವ ಸ್ಥಿತಿಗೆ ತಳ್ಳಿರುವುದು ಗಂಭೀರ ವಿಷಯವಾಗಿದೆ ಎಂದು ವೇದಿಕೆ ತಿಳಿಸಿದೆ. ಶಾಲೆಯ ಸ್ಥಗಿತ, ವಿಲೀನ ಅಥವಾ ಮುಚ್ಚುವಿಕೆಯ ಸಾಧ್ಯತೆಗಳು ಮಕ್ಕಳ ಶಿಕ್ಷಣದ ಹಕ್ಕಿಗೆ ಧಕ್ಕೆ ತರುವುದಲ್ಲದೆ, ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣದ ಅಭಾವವನ್ನು ಉಂಟುಮಾಡುವ ಅಪಾಯವಿದೆ. ಮಕ್ಕಳು ದೂರದ ಶಾಲೆಗಳತ್ತ ತೆರಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿ, ಶಿಕ್ಷಣ ಬಿಟ್ಟುಬಿಡುವ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳೂ ಇದ್ದಾವೆ ಎಂಬ ಆತಂಕವನ್ನು ವೇದಿಕೆ…
ಯಕ್ಷಗಾನ ಮೇಳಗಳಿಂದ ಜನರಿಗೆ ಕಲಾ ಸಂಸ್ಕಾರ: ಡಾ|ಜೋಶಿ ಸೂಡ: ‘ಯಕ್ಷಗಾನ ಕಲೆಯನ್ನು ಬೆಳೆಸುವ ನಿಟ್ಟಿನಲ್ಲಿ ಸಂರಕ್ಷಣೆ, ಸಂವರ್ಧನೆ ಮತ್ತು ವಿಸ್ತರಣೆ ಮಾಡಿ ಮುಂದಿನ ಜನಾಂಗಕ್ಕೆ ನೀಡುವ ಹೊಣೆಗಾರಿಕೆ ನಮ್ಮ ಮೇಲಿದೆ. ಯಕ್ಷಗಾನದ ಗುಣಮಟ್ಟ ಮತ್ತು ಸೌಂದರ್ಯವನ್ನು ವರ್ಧಿಸುವ ಕೆಲಸವನ್ನು ತಿರುಗಾಟಕ್ಕೆ ಹೊರಟ ಸೂಡ ಮೇಳ ನಡೆಸುತ್ತಿದ್ದು, ಕಲಾವಿದರಿಗೆ ಉತ್ತಮ ವೇದಿಕೆ ಒದಗಿಸಿ,ಜನರಿಗೆ ಕಲಾಸಂಸ್ಕಾರ ನೀಡುವ ಪ್ರಯತ್ನ ಮಾಡಿದೆ’ ಎಂದು ಪ್ರಸಿದ್ಧ ಯಕ್ಷಗಾನ ಅರ್ಥಧಾರಿ ಮತ್ತು ಬಹುಶ್ರುತ ವಿದ್ವಾಂಸ ಡಾ|ಎಂ.ಪ್ರಭಾಕರ ಜೋಶಿ ಹೇಳಿದರು. ಸೂಡ ಮಯೂರವಾಹನ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ದಶಮ ಸಂಭ್ರಮ, ಸಪ್ತಾಹ ಮತ್ತು 10ನೇ ವರ್ಷದ ತಿರುಗಾಟ ಶುಭಾರಂಭ ಸಂದರ್ಭ ಸೂಡ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಬೆಳ್ಳಿಹಬ್ಬದ ಪ್ರಯುಕ್ತ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಸೂಡ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತಸರ ಶಿರ್ವ ಕೋಡು ಜಯಶೀಲ ಹೆಗ್ಡೆ ಮೇಳದ ಸಂಚಾಲಕ ಮತ್ತು ಭಾಗವತ ಸೂಡ…
ಪಣಜಿ:ಗೋವಾದ ಅರ್ಪೋರಾ ಪ್ರದೇಶದಲ್ಲಿರುವ ಬಿರ್ಚ್ ಬೈ ರೆಮೆಯೊ ಲೇನ್ ಕ್ಲಬ್ನಲ್ಲಿ ಭಾನುವಾರ ನಸುಕಿನ ವೇಳೆ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 23 ಮಂದಿ ಸಜೀವ ದಹನಗೊಂಡು ಪ್ರಾಣ ಕಳೆದುಕೊಂಡಿದ್ದಾರೆ. ಸುಟ್ಟಿಗಾಯಗಳು ಮತ್ತು ತೀವ್ರವಾದ ಹೊಗೆ ಆಕರ್ಷಣೆಯಿಂದ ಸಾವಿನ ಪ್ರಕರಣಗಳು ಸಂಭವಿಸಿದ್ದು, ಘಟನೆಯನ್ನು ಸ್ಥಳದಲ್ಲೇ ಪರಿಶೀಲಿಸಿದ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಮೃತರ ಸಂಖ್ಯೆಯನ್ನು ದೃಢಪಡಿಸಿದ್ದಾರೆ. ಸಿಎಂ ಸಾವಂತ್ ಅವರು ದುರಂತದ ಕಾರಣ ಪತ್ತೆಹಚ್ಚಲು ಕಟ್ಟುನಿಟ್ಟಿನ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, “ಈ ಘಟನೆಗೆ ಕಾರಣರಾದವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಭರವಸೆ ನೀಡಿದ್ದಾರೆ. ಪೊಲೀಸರು ಈಗಾಗಲೇ ಎಲ್ಲ ಮೃತದೇಹಗಳನ್ನು ಪತ್ತೆಹಚ್ಚಿ, ಅಗ್ನಿ ಅವಘಡದ ಮೂಲ ಕಾರಣದ ಕುರಿತು ತನಿಖೆ ಮುಂದುವರಿಸಿದ್ದಾರೆ. ದುರಂತದ ತೀವ್ರತೆಯ ಹಿನ್ನೆಲೆ, ರಾಜ್ಯದ ವಿವಿಧ ಮನರಂಜನಾ ಕೇಂದ್ರಗಳು ಹಾಗೂ ಕ್ಲಬ್ಗಳಲ್ಲಿ ಸುರಕ್ಷತಾ ಪರಿಶೀಲನೆ ನಡೆಸುವ ಅಗತ್ಯತೆಯನ್ನು ತುರ್ತುವಾಗಿ ಅಧಿಕಾರಿಗಳು ಒತ್ತಿ ಹೇಳಿದ್ದಾರೆ. ಘಟನೆಯನ್ನು “ತೀರಾ ಕಳವಳಕಾರಿ” ಎಂದು ಪ್ರತಿಪಾದಿಸಿದ ಬಿಜೆಪಿ ಶಾಸಕ ಮೈಕೆಲ್ ಲೋಬೊ ಅವರು,“ಗೋವಾದ…
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ದತ್ತ ಜಯಂತಿ ಬ್ಯಾನರ್ ತೆರವು ವಿಷಯ ಉದ್ವಿಗ್ನತೆಯಾಗಿ ಮಾರ್ಪಟ್ಟು, ಅಂತಿಮವಾಗಿ ಕಾಂಗ್ರೆಸ್ಸಿನ ಕಾರ್ಯಕರ್ತ ಗಣೇಶ್ ಗೌಡ (40) ಅವರ ಕೊಲೆಗೆ ದಾರಿ ಮಾಡಿಕೊಟ್ಟಿದೆ. ಘಟನೆ ಹೀಗೆ—ಗಣೇಶ್ ಗೌಡ ಅವರು ಕಾರಿನಲ್ಲಿ ಕಲ್ಮರಡಿ ಮಠದ ರಸ್ತೆಯ ಮೂಲಕ ತೆರಳುತ್ತಿದ್ದ ವೇಳೆ, ಬೈಕ್ ನಲ್ಲಿ ಹಿಂಬಾಲಿಸುತ್ತ ಬಂದ ಸಂಜಯ್ ಮತ್ತು ಮಿಥುನ್ ಸೇರಿ ಹಂತಕರ ತಂಡ ವಾಹನವನ್ನು ಅಡ್ಡಗಟ್ಟಿ ಮಚ್ಚಿನಿಂದ ಅಮಾನವೀಯ ಹಲ್ಲೆ ನಡೆಸಿದೆ. ಘಟನೆಯಲ್ಲಿ ಗಣೇಶ್ ಗೌಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಈ ದಾಳಿಯಲ್ಲಿ ಆರೋಪಿಯಾಗಿರುವ ಸಂಜಯ್ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದು, ಚಿಕ್ಕಮಗಳೂರಿನ ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರು ಎಚ್ಚರಿಕೆ ಕ್ರಮಗಳು ಹೆಚ್ಚಿಸಿದರುಘಟನೆ ಬಳಿಕ ಸಖರಾಯಪಟ್ಟಣದಲ್ಲಿ ಪೊಲೀಸ್ ಬಂದೋಬಸ್ತ್ ಬಿಗಿಗೊಳಿಸಲಾಗಿದೆ. ಆರೋಪಿಗಳ ಪತ್ತೆಗೆ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಈಗಾಗಲೇ ಐವರು ಪೊಲೀಸರ ವಶದಲ್ಲಿದ್ದಾರೆ. ಗಣೇಶ್ ಗೌಡ ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯರಾಗಿದ್ದರಿಂದ ಗ್ರಾಮದಲ್ಲಿ ಉದ್ವಿಗ್ನತೆಯ ವಾತಾವರಣ ಮೂಡಿದೆ. ಶವಗಾರಕ್ಕೆ ಭೇಟಿ ನೀಡಿದ ಶಾಸಕ ಆನಂದ್ ಚಾಟಿಮಲ್ಲೇಗೌಡ…
ಉಡುಪಿ: ಹಾವಂಜೆ ಗ್ರಾಮದ ತ್ರಿವರ್ಣ ವಿಶ್ವವೇದಿಕೆ (ರಿ.), ಕೀಳಂಜೆ ಇದರ 12ನೇ ವಾರ್ಷಿಕೋತ್ಸವ ಸಮಾರಂಭ ಡಿ. 3ರಂದು ಕೀಳಂಜೆ ಶ್ರೀ ನಂದಿಕೇಶ್ವರ ದೈವಸ್ಥಾನದ ವಠಾರದಲ್ಲಿ ನಡೆಯಿತು. ಇದೆ ಸಂದರ್ಭದಲ್ಲಿ ನಂದಿಕೇಶ್ವರ ದೈವಸ್ಥಾನದ ವಿವಿಧ ಕಾಮಗಾರಿಗಳ ಉದ್ಘಾಟನಾ ಸಮಾರಂಭ ಹಾಗೂ ದಾನಿಗಳಿಗೆ ಸಮ್ಮಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಚಾಣಾಕ್ಯ ಮೇಲೋಡಿಸ್ ಹೆಬ್ರಿ ಇವರಿಂದ ಸಂಗೀತಾ ರಸಮಂಜರಿ, ಸುಪ್ರಸಿದ್ಧ ನಾಟಕ ತಂಡವಾದ ವಿಜಯಕುಮಾರ್ ಕೊಡಿಯಾಲ್ ಬೈಲ್ ನಿರ್ದೇಶನದಲ್ಲಿ ಶಶಿರಾಜ್ ರಾವ್ ಕಾವೂರು ಅವರ ಛತ್ರಪತಿ ಶಿವಾಜಿ ನಾಟಕ ಪ್ರದರ್ಶನ ನಡೆಯಿತು ಎಂದು ತ್ರಿವರ್ಣ ವಿಶ್ವವೇದಿಕೆ (ರಿ.),ಇದರ ಸ್ಥಾಪಕ ಅಧ್ಯಕ್ಷ ಸತೀಶ್ ಪೂಜಾರಿ ಕೀಳಿಂಜೆ ತಿಳಿಸಿದ್ದಾರೆ
ಜಾರ್ಖಂಡ್/ಬಿಹಾರ್: ಜಗದ್ಗುರು ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ವರ್ಯ ಮಹಾ ಸ್ವಾಮೀಜಿ ಅವರು ನವೆಂಬರ್ 27ರಿಂದ ಆರಂಭಿಸಿದ ಐದು ದಿನಗಳ ತೀರ್ಥಯಾತ್ರೆಯ ಅಂಗವಾಗಿ ರಾಂಚಿಯಿಂದ ಜೈನರ ಶಾಶ್ವತ ಸಿದ್ದ ಕ್ಷೇತ್ರವಾದ ಸಮ್ಮೇದ ಶಿಖರ್ಜಿಗೆ ಆಗಮಿಸಿ ನವೆಂಬರ್ 28ರ ಬೆಳಿಗ್ಗೆ 27 ಕಿಮೀ ಪರ್ವತ ಪರಿಕ್ರಮೆಯ 20 ಕೂಟಗಳಲ್ಲಿ ತೀರ್ಥಂಕರರ ಚರಣದರ್ಶನಮಾಡಿದರು. ಅಪರಾಹ್ನ ನಡೆದ ಬೀಸ್ ಪಂಥಿ ಕೋಠಿಯ ಸಿದ್ಧ ಚಕ್ರ ವಿಧಾನದಲ್ಲಿ ಸ್ವಾಮೀಜಿ ಉಪಸ್ಥಿತರಿದ್ದು, ನಡೆದ ಧಾರ್ಮಿಕ ಸಭೆಯಲ್ಲಿ ಆಚಾರ್ಯ ಗಿರಿ ನಾರಸಾಗರ್ ಹಾಗೂ ಸಂಘದ ಮುನಿಗಳು ಭಾಗವಹಿಸಿದರು. ಮೂಡುಬಿದಿರೆ ಸ್ವಾಮೀಜಿಯವರನ್ನು ಅಧ್ಯಕ್ಷ ಅಜಯ್ ಬಾಬು (ಅರಾ) ಪಾದಪೂಜೆ ಮಾಡಿ ಗೌರವಿಸಿದರು. ಗುಣಯತನ ತೀರ್ಥಕ್ಷೇತ್ರದಲ್ಲಿ, 108 ಮುನಿ ಸಮತಾ ಸಾಗರ್ ಮತ್ತು ಉಡುಪಿ ಜಿಲ್ಲೆಯ ಬಸರೂರ್ ಮೂಲದ ಆಚಾರ್ಯ 108 ಶಂಭವ ಸಾಗರ್ ಮುಂತಾದ ಮಹಾಸನ್ಯಾಸಿಗಳು ಸಭೆಯಲ್ಲಿ ಸೇರಿಕೊಂಡರು. ಶಿಖರ್ಜಿ ಅದಿನಾಥ ಸ್ವಾಮಿ ಪಂಚಕಲ್ಯಾಣ ಸಮಾರಂಭದ ಎರಡನೇ ದಿನದ ಕಾರ್ಯಕ್ರಮದಲ್ಲಿ ಆಚಾರ್ಯ ತನ್ಮಯ ಸಾಗರ್ ಮುನಿ ಮಹಾರಾಜ್ ಮೂಡುಬಿದಿರೆ ಸ್ವಾಮೀಜಿಯನ್ನು ಗೌರವಿಸಿ…
ಮಂಗಳೂರು:ಬೆಂಗರೆಯ ಐತಿಹಾಸಿಕ ವೀರಭಾರತಿ ವ್ಯಾಯಾಮ ಶಾಲೆ, 1926ರಲ್ಲಿ ಸ್ಥಾಪಿತವಾಗಿ ಶತಮಾನೋತ್ಸವದ ದಾರಿಯಲ್ಲಿ ಕಾಲಿರಿಸಿರುವ ಹಿನ್ನೆಲೆಯಲ್ಲಿ, ವ್ಯಾಯಾಮ ಶಾಲೆಯ ಜೀರ್ಣೋದ್ಧಾರ ಹಾಗೂ ಶ್ರೀ ರಾಮಚಂದ್ರ–ಆಂಜನೇಯ ದೇವರ ಪ್ರತ್ಯೇಕ ಗರ್ಭಗುಡಿ ನಿರ್ಮಾಣ ಕಾರ್ಯಗಳಿಗೆ ಸಂಚಿಕೆ ಹಾಕಲಾಗಿದೆ. ಈ ಹಿನ್ನೆಲೆಯಲ್ಲಿ ಡಿಸೆಂಬರ್ 5 ರಂದು ಬೆಳಿಗ್ಗೆ 8.55ಕ್ಕೆ ಶಿಲಾನ್ಯಾಸ ಕಾರ್ಯಕ್ರಮ ನಡೆಯಲಿದೆ.ವೇದಮೂರ್ತಿ ಶ್ರೀ ಶಿವಪ್ರಸಾದ್ ತಂತ್ರಿಗಳ ಮಾರ್ಗದರ್ಶನದಲ್ಲಿ ನಾಡೋಜ ಡಾ. ಜಿ. ಶಂಕರ್ ಅವರ ದಿವ್ಯ ಹಸ್ತದಿಂದ ಶಿಲಾನ್ಯಾಸ ನೆರವೇರಲಿದೆ ಎಂದು ಜೀರ್ಣೋದ್ಧಾರ ಶತಮಾನೋತ್ಸವ ಸಮಿತಿಯ ಗೌರವಾಧ್ಯಕ್ಷ ಮೋಹನ್ ಬೆಂಗ್ರೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಶಿಲಾನ್ಯಾಸ ಸಮಾರಂಭ – ಅತಿಥಿವರ್ಯರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಜಿತ್ ಜಿ. ಸುವರ್ಣ, ಅಧ್ಯಕ್ಷರು, ಮೊಗವೀರ ವ್ಯವಸ್ಥಾಪಕ ಶಿಕ್ಷಣ ಮಂಡಳಿ, ಮುಂಬೈ ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಭಾಗವಹಿಸುವವರು:• ಶ್ರೀ ವೇದವ್ಯಾಸ ಕಾಮತ್, ಶಾಸಕರು, ಮಂಗಳೂರು ದಕ್ಷಿಣ• ಶ್ರೀ ಐವನ್ ಡಿ’ಸೋಜಾ, ಸದಸ್ಯರು, ರಾಜ್ಯ ವಿಧಾನ ಪರಿಷತ್• ಶ್ರೀ ಶಶಿಕುಮಾರ್ ಬೆಂಗ್ರೆ (ಬಾಲು), ಮಾಜಿ ಅಧ್ಯಕ್ಷರು, ಜೀರ್ಣೋದ್ಧಾರ ಸಮಿತಿ• ಶ್ರೀ ಮಹಾವಿಷ್ಣು ಶೇಷಶಯನ ಭಜನಾ…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
