- ನಟ ಚೇತನ್ ಅಹಿಂಸಾಗೆ ತುಳುನಾಡ ರಕ್ಷಣಾ ವೇದಿಕೆಯಿಂದ ಆಟಿಡೊಂಜಿ ದಿನ ಕಾರ್ಯಕ್ರಮಕ್ಕೆ ಆಹ್ವಾನ
- ಕಾಪು: ಮುದರಂಗಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ, ಡೇವಿಡ್ ಡಿಸೋಜಾ ಮೇಲೆ ಗುಂಡಿನ ದಾಳಿ -ಭೀಕರ ಹತ್ಯೆ!
- ಬಂಟ್ವಾಳ: ಟಿಪ್ಪರ್ ಹರಿದು ಸ್ಕೂಟರ್ ಹಿಂಬದಿ ಸವಾರ ಸಾವು; ಲಾರಿ ಚಾಲಕ ವಶಕ್ಕೆ, ಅಪಘಾತದ ಬಗ್ಗೆ ವಿಭಿನ್ನ ಮಾಹಿತಿ
- ಮಂಗಳೂರು: ಬಾರ್ಗಳ ಮೇಲೆ ಅಬಕಾರಿ ಇಲಾಖೆಯ ದಿಢೀರ್ ದಾಳಿ – ಅಪ್ರಾಪ್ತರಿಗೆ ಮದ್ಯ ಪೂರೈಕೆಗೆ ಕಟ್ಟುನಿಟ್ಟಿನ ಎಚ್ಚರಿಕೆ
- ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ, ಮಂಗಳೂರುನೀರುಮಾರ್ಗ ಶಾಖೆ ವತಿಯಿಂದ 113ನೇ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಹಾಗೂ ದಂತ ಚಿಕಿತ್ಸಾ ಶಿಬಿರ
- ಪೂರ್ವಭಾವಿಯಾಗಿ ಜೆಡಿಎಸ್ ಒತ್ತಾಯ – ಈಗ ಶಾಲಾ ವಾಹನಗಳ ವಿಶೇಷ ತಪಾಸಣೆ: ಮಕ್ಕಳ ಸುರಕ್ಷತೆಗೆ ಕ್ರಮ ಸ್ವಾಗತಾರ್ಹ
- ಉಡುಪಿ ಜಿಲ್ಲಾ ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ನಡೆಯುವ ‘ಆಟಿಡೊಂಜಿ ದಿನ’ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ
- ಶಾಲಾ ವಾಹನಗಳ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮಕ್ಕೆ ಆಗ್ರಹ: ಆರ್ಟಿಒಗೆ ಜೆಡಿಎಸ್ ನಿಯೋಗದಿಂದ ಮನವಿ
Author: Tulunada Surya
ಬೆಂಗಳೂರು, ಆ. 2: ಸಿರಿಗಂಧ ಸಾಹಿತ್ಯ ಹಾಗೂ ಸಾಂಸ್ಕೃತಿಕ ವೇದಿಕೆ, ಬೆಂಗಳೂರು-97 ವತಿಯಿಂದ ಆ. 2ರಂದು ಆಯೋಜಿಸಲಾದ ಭವ್ಯ ಸಮಾರಂಭದಲ್ಲಿ ಶಿಕ್ಷಣ ಕ್ಷೇತ್ರ, ಕಲಾ ಕ್ಷೇತ್ರ ಹಾಗೂ ಸಮಾಜಸೇವೆಯಲ್ಲಿ ಸಲ್ಲಿಸಿರುವ ಅಪೂರ್ವ ಕೊಡುಗೆಯನ್ನು ಗುರುತಿಸಿ ಸಂಘಟನಾ ಚತುರ ಹಾಗೂ ಕಲಾ ಲೋಕದ ಧ್ರುವತಾರೆ ಶ್ರೀ ಯು.ಆರ್. ಶೆಟ್ಟಿ ಅವರಿಗೆ ಪ್ರತಿಷ್ಠಿತ ‘ಸ್ವಾಮಿ ವಿವೇಕಾನಂದ ಪ್ರಶಸ್ತಿ’ ನೀಡಿ ಗೌರವಿಸಲಾಯಿತು. ಶಿಕ್ಷಣದ ಬೆಳವಣಿಗೆ, ಕಲಾ ಚಟುವಟಿಕೆಗಳ ಸಂಘಟನೆ ಹಾಗೂ ಸಮಾಜಮುಖಿ ಸೇವಾ ಕಾರ್ಯಗಳಲ್ಲಿ ಶ್ರೀ ಯು.ಆರ್. ಶೆಟ್ಟಿ ಅವರು ಹಲವು ವರ್ಷಗಳಿಂದ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಅವರ ಸಮರ್ಪಿತ ಸೇವೆಯನ್ನು ಪರಿಗಣಿಸಿ ಈ ಗೌರವವನ್ನು ಪ್ರದಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ಗಣ್ಯ ಅತಿಥಿಗಳು, ಸಾಹಿತ್ಯಾಸಕ್ತರು, ಕಲಾವಿದರು, ಶಿಕ್ಷಣ ತಜ್ಞರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದು, ಶ್ರೀ ಯು.ಆರ್. ಶೆಟ್ಟಿ ಅವರ ಸಾಧನೆಗಳನ್ನು ಶ್ಲಾಘಿಸಿದರು. ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಈ ಗೌರವವು ತಮ್ಮ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದ್ದು, ಮುಂದಿನ ದಿನಗಳಲ್ಲಿಯೂ ಶಿಕ್ಷಣ, ಕಲೆ ಹಾಗೂ…
ಮಂಗಳೂರು, ಆ. 3: ಸಹಕಾರ ಕ್ಷೇತ್ರದ ಪಿತಾಮಹರೆಂದೇ ಖ್ಯಾತರಾದ ಮೊಳಹಳ್ಳಿ ಶಿವರಾವ್ ಅವರ ಆದರ್ಶಮಯ ಬದುಕು, ತ್ಯಾಗ, ದೂರದೃಷ್ಟಿ ಮತ್ತು ಸಮಾಜಮುಖಿ ಸೇವೆಯನ್ನು ದಾಖಲಿಸುವ ‘ತ್ಯಾಗಮಯಿ ಮೊಳಹಳ್ಳಿ’ ಕೃತಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಸೋಮವಾರ ಬ್ಯಾಂಕಿನ ಸಭಾಂಗಣದಲ್ಲಿ ಬಿಡುಗಡೆಗೊಳಿಸಿದರು. ಬ್ಯಾಂಕಿನ ಪ್ರಧಾನ ಕಚೇರಿಯ ಕಿರಿಯ ನಿರೀಕ್ಷಕರಾಗಿದ್ದು, ಸುಮಾರು 35 ವರ್ಷಗಳಿಂದ ಕ್ರೀಡಾ ಪತ್ರಿಕೋದ್ಯಮದಲ್ಲಿ ವಿಶಿಷ್ಟ ಗುರುತನ್ನು ಮೂಡಿಸಿರುವ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್ಪೇಟೆ ಅವರು ಈ ಕೃತಿಯನ್ನು ರಚಿಸಿದ್ದಾರೆ. ಸಹಕಾರ ಚಳವಳಿಯ ಮೂಲಕ ಗ್ರಾಮೀಣ ಜನರ ಆರ್ಥಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಅಭಿವೃದ್ಧಿಗೆ ಬದುಕನ್ನೇ ಸಮರ್ಪಿಸಿದ ಮೊಳಹಳ್ಳಿ ಶಿವರಾವ್ ಅವರ ಜೀವನ ಸಾಧನೆ ಮತ್ತು ಸೇವಾ ಪರಂಪರೆಯನ್ನು ಈ ಕೃತಿ ದಾಖಲಿಸುತ್ತದೆ. ಕೃತಿ ಬಿಡುಗಡೆಗೊಳಿಸಿ ಮಾತನಾಡಿದ ಡಾ. ಎಂ.ಎನ್. ರಾಜೇಂದ್ರ ಕುಮಾರ್, “ಸಹಕಾರ ಕ್ಷೇತ್ರದ ಬೆಳವಣಿಗೆಯಲ್ಲಿ ಮೊಳಹಳ್ಳಿ ಶಿವರಾವ್ ಅವರ ಕೊಡುಗೆ ಅಪಾರವಾಗಿದೆ. ಎತ್ತಿನಗಾಡಿಯಲ್ಲಿ ಸಂಚರಿಸಿ ಜಿಲ್ಲೆಯ ವಿವಿಧ…
ಮಂಗಳೂರು, ಆ. 2: ನಗರದ ಬಾಂಬೆ ಲಕ್ಕಿ ರೆಸ್ಟೋರೆಂಟ್ನಲ್ಲಿ ಭಾನುವಾರ ನಡೆದ ಅದ್ದೂರಿ ಸಮಾರಂಭದಲ್ಲಿ ಕ್ರಿಸ್ಟಲ್ ಪ್ಯೂರ್ ಹರ್ಬಲ್ ಬ್ಯೂಟಿ & ವೆಲ್ನೆಸ್ ಸಂಸ್ಥೆಯ ನೂತನ ಹರ್ಬಲ್ ಸೌಂದರ್ಯ ಮತ್ತು ವೆಲ್ನೆಸ್ ಉತ್ಪನ್ನಗಳನ್ನು ಅಧಿಕೃತವಾಗಿ ಅನಾವರಣಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ನೈಸರ್ಗಿಕ ಪದಾರ್ಥಗಳಿಂದ ತಯಾರಿಸಲಾದ ಹೇರ್ ಕೇರ್, ಸ್ಕಿನ್ ಕೇರ್ ಹಾಗೂ ಬಾಡಿ ಕೇರ್ ಉತ್ಪನ್ನಗಳನ್ನು ಬಿಡುಗಡೆಗೊಳಿಸಿದರು. ಇಂದಿನ ಜೀವನಶೈಲಿಯಲ್ಲಿ ರಾಸಾಯನಿಕಯುಕ್ತ ಉತ್ಪನ್ನಗಳ ಬಳಕೆ ಹೆಚ್ಚುತ್ತಿರುವ ಸಂದರ್ಭದಲ್ಲಿ, ನೈಸರ್ಗಿಕ ಹರ್ಬಲ್ ಉತ್ಪನ್ನಗಳು ಆರೋಗ್ಯಕರ ಹಾಗೂ ಸುರಕ್ಷಿತ ಜೀವನಶೈಲಿಗೆ ಪೂರಕವಾಗಿವೆ ಎಂದು ಅವರು ಅಭಿಪ್ರಾಯಪಟ್ಟರು. ಇದೇ ಸಂದರ್ಭದಲ್ಲಿ, ಸಮಾಜಮುಖಿ ಸೇವೆ, ತುಳುನಾಡಿನ ಸಂಸ್ಕೃತಿ, ಭಾಷೆ ಮತ್ತು ಪರಂಪರೆಯ ಸಂರಕ್ಷಣೆಯಲ್ಲಿ ಸಲ್ಲಿಸಿರುವ ವಿಶಿಷ್ಟ ಸೇವೆಯನ್ನು ಪರಿಗಣಿಸಿ ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕ ಅಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ಅವರನ್ನು ಮತ್ತಿತರ ಗಣ್ಯರನ್ನು ಸಂಸ್ಥೆಯ ವತಿಯಿಂದ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಆತ್ಮೀಯವಾಗಿ ಸನ್ಮಾನಿಸಲಾಯಿತು. ಗಣ್ಯರು ಅವರ ಸಾಮಾಜಿಕ ಕಳಕಳಿ…
ಉಡುಪಿ, ಆ. 3: ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ ಬಾರ್ ಹಾಗೂ ಪಬ್ಗಳಲ್ಲಿ 21 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಅಕ್ರಮವಾಗಿ ಮದ್ಯ ಹಾಗೂ ಹುಕ್ಕಾ ಪೂರೈಕೆ ಮಾಡಲಾಗುತ್ತಿದೆ ಎಂಬ ಮಾಹಿತಿಯ ಆಧಾರದ ಮೇಲೆ ಮಣಿಪಾಲ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದು, ಯುವಕ-ಯುವತಿಯರು ಹಾಗೂ ಅಪ್ರಾಪ್ತರು ಮದ್ಯ ಸೇವಿಸುತ್ತಿರುವುದು ಪತ್ತೆಯಾಗಿದೆ. ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರ ನಿರ್ದೇಶನದ ಮೇರೆಗೆ ಮಣಿಪಾಲ ಪೊಲೀಸ್ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಯಿತು. 50ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಒಳಗೊಂಡ ಆರು ವಿಶೇಷ ತಂಡಗಳನ್ನು ರಚಿಸಿ ಏಕಕಾಲದಲ್ಲಿ ವಿವಿಧ ಬಾರ್ ಹಾಗೂ ಪಬ್ಗಳ ಮೇಲೆ ದಾಳಿ ನಡೆಸಲಾಯಿತು. ಪರಿಶೀಲನೆ ವೇಳೆ ಬಾರ್ನಲ್ಲಿ 21 ವರ್ಷಕ್ಕಿಂತ ಕಡಿಮೆ ವಯಸ್ಸಿನ 12 ಯುವಕರು ಹಾಗೂ 2 ಯುವತಿಯರು, ಒಟ್ಟು 14 ಮಂದಿ ಪತ್ತೆಯಾಗಿದ್ದಾರೆ. ಅಲ್ಲದೆ, 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಪ್ರವೇಶ ನಿಷೇಧಿಸಿರುವ ಬಗ್ಗೆ ಯಾವುದೇ ಸೂಚನಾ ಫಲಕ ಇಲ್ಲ ಎಂದು ಬಾರ್ ಮ್ಯಾನೇಜರ್…
ಬೈರಂಪಳ್ಳಿ, ಆ. 2: ತುಳುನಾಡಿನ ಭಾಷೆ, ಸಂಸ್ಕೃತಿ, ಸಂಪ್ರದಾಯ, ಆಚರಣೆ, ಪರಂಪರೆ ಹಾಗೂ ಜನಪರ ಹಕ್ಕುಗಳ ಸಂರಕ್ಷಣೆ ಮತ್ತು ಅಭಿವೃದ್ಧಿಯನ್ನು ಧ್ಯೇಯವಾಗಿಸಿಕೊಂಡಿರುವ ತುಳುನಾಡ ರಕ್ಷಣಾ ವೇದಿಕೆ (ರಿ) ಕಾಪು ತಾಲೂಕು ಹಾಗೂ ಬೈರಂಪಳ್ಳಿ ಘಟಕದ ಆಶ್ರಯದಲ್ಲಿ ಭಾನುವಾರ ಬೈರಂಪಳ್ಳಿ ಸಾಂತ್ಯಾರ್ನ ಅಂಬೇಡ್ಕರ್ ಸಭಾಭವನದಲ್ಲಿ ಕಾರ್ಯಕರ್ತರ ಸ್ನೇಹ ಸಮ್ಮಿಲನ ಹಾಗೂ ನೂತನ ಸದಸ್ಯತ್ವ ಸೇರ್ಪಡೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವು ನವ್ಯ, ದಿವ್ಯ, ಹರ್ಷಿಣಿ ಹಾಗೂ ನಮೃತ ಅವರ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ಕಾಪು ತಾಲೂಕು ಅಧ್ಯಕ್ಷ ನಿತಿನ್ ಕುಮಾರ್ ಶೆಟ್ಟಿ ಹಾಗೂ ರಂಜಿತ್ ಕುಲಾಲ್ ಅತಿಥಿಗಳನ್ನು ಸ್ವಾಗತಿಸಿದರು. ಸಂಘಟನೆಯ ಸ್ಥಾಪಕ ಅಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ತುಳುನಾಡಿನ ಭಾಷೆ, ಸಂಸ್ಕೃತಿ, ನೆಲ-ಜಲ, ಪರಂಪರೆ ಹಾಗೂ ಐತಿಹಾಸಿಕ ಮೌಲ್ಯಗಳ ಸಂರಕ್ಷಣೆ ಪ್ರತಿಯೊಬ್ಬ ತುಳುವರ ಜವಾಬ್ದಾರಿಯಾಗಿದೆ ಎಂದರು. ಸಮಾಜಸೇವೆ, ಪರಿಸರ ಸಂರಕ್ಷಣೆ, ಸಾಮಾಜಿಕ ನ್ಯಾಯ ಹಾಗೂ ಜನಜಾಗೃತಿ ಕಾರ್ಯಕ್ರಮಗಳ ಮೂಲಕ ತುಳುನಾಡ ರಕ್ಷಣಾ ವೇದಿಕೆ ಜನಪರ…
ಮಂಗಳೂರು, ಆ. 1: ತೀಯಾ ಸಮಾಜದ ಆರಾಧ್ಯ ಕ್ಷೇತ್ರವಾದ ಉಳ್ಳಾಲ ಶ್ರೀ ಚಿರುಂಭ ಭಗವತೀ ಕ್ಷೇತ್ರದ ಆಡಳಿತಕ್ಕೆ ಸಂಬಂಧಿಸಿದ ವಿವಾದ ಇದೀಗ ಹೊಸ ತಿರುವು ಪಡೆದಿದೆ. ಕ್ಷೇತ್ರದ ಆಡಳಿತ ಸಮಿತಿಯ ಅಧ್ಯಕ್ಷ ಚಿದಾನಂದ ಗುರಿಕಾರ ಅವರು ಎರಡು ವರ್ಷದ ಅಧಿಕಾರಾವಧಿ ಪೂರ್ಣಗೊಂಡಿದ್ದರೂ ಮಹಾಸಭೆ ಕರೆಯದೇ ಅಧಿಕಾರ ಮುಂದುವರಿಸಿರುವುದಾಗಿ ಆರೋಪಿಸಿ, ಆಡಳಿತ ಸಮಿತಿ ಸದಸ್ಯ ಪವನ್ ರಾಜ್ ಕೊಲ್ಯ ಅವರು ಜಿಲ್ಲಾ ನೋಂದಣಾಧಿಕಾರಿಗೆ ಸಲ್ಲಿಸಿದ್ದ ದೂರಿನ ಬೆನ್ನಲ್ಲೇ, ದೂರು ಹಿಂಪಡೆಯುವಂತೆ ಜೀವ ಬೆದರಿಕೆ ಹಾಕಿರುವ ಆರೋಪದ ಆಡಿಯೋ ವೈರಲ್ ಆಗಿದೆ. ವೈರಲ್ ಆಗಿರುವ ಆಡಿಯೋದಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಬೆಂಗಳೂರಿನ ಉದ್ಯಮಿ ಪ್ರಕಾಶ್ ಕುಂಪಲ ಅವರು ಪವನ್ ರಾಜ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ದೂರು ಹಿಂಪಡೆಯುವಂತೆ ಒತ್ತಡ ಹೇರಿರುವುದಾಗಿ ಆರೋಪಿಸಲಾಗಿದೆ. ಆಡಿಯೋದಲ್ಲಿನ ಸಂಭಾಷಣೆಯಲ್ಲಿ, “ಜಿಲ್ಲಾ ನೋಂದಣಾಧಿಕಾರಿಗೆ ನಾನು ಮಾತನಾಡಿದ್ದೇನೆ. ನೀನು ಮೌನವಾಗಿದ್ದರೆ ಮೇಲಾಧಿಕಾರಿಗಳಿಂದ ಕರೆ ಬರುತ್ತದೆ. ಭಗವತೀ ಕ್ಷೇತ್ರದ ವಿಚಾರದಲ್ಲಿ ಕೈ ಹಾಕಬೇಡ. ಮುಜರಾಯಿ ಇಲಾಖೆಯ ಕಮಿಷನರ್, ಜಿಲ್ಲಾಧಿಕಾರಿ ಸೇರಿದಂತೆ ವಿವಿಧ…
ಕುಂದಾಪುರ, ಆ. 1: ಕುಂದಾಪುರದ ಚರ್ಚ್ ರಸ್ತೆಯಲ್ಲಿ ಜುಲೈ 31ರಂದು ಶುಕ್ರವಾರ ನಸುಕಿನ ವೇಳೆ ನಡೆದ ಗುಂಡಿನ ದಾಳಿ ಹಾಗೂ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಅವರ ನೇತೃತ್ವದಲ್ಲಿ ರಚಿಸಲಾದ ವಿಶೇಷ ಪೊಲೀಸ್ ತಂಡ ಬಂಧಿಸಿದೆ. ಬಂಧಿತ ಆರೋಪಿಯನ್ನು ಹೆಮ್ಮಾಡಿ ಸಮೀಪದ ಕನ್ನಡಕುದ್ರು ಮೂಲದ, ಪ್ರಸ್ತುತ ಕುಂದಾಪುರದ ಫ್ಲ್ಯಾಟ್ನಲ್ಲಿ ವಾಸವಿರುವ ಡೆರಿಕ್ ಕ್ರಾಸ್ತಾ (55) ಎಂದು ಗುರುತಿಸಲಾಗಿದೆ. ಈತ ಹೆಬ್ರಿ ಮೂಲದ, ಪ್ರಸ್ತುತ ಬಾರ್ಕೂರು ಸಮೀಪದ ಕಚ್ಚೂರಿನ ಬಾಡಿಗೆ ಮನೆಯಲ್ಲಿ ವಾಸವಿದ್ದ ಐವನ್ ರಿಚರ್ಡ್ ಮಸ್ಕರೇನಸ್ ಅಲಿಯಾಸ್ ಮುನ್ನಾ (45) ಅವರನ್ನು ಗುಂಡಿಕ್ಕಿ ಹತ್ಯೆಗೈದ ಆರೋಪ ಎದುರಿಸುತ್ತಿದ್ದನು. ಘಟನೆ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದ. ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ವಿಶೇಷ ಪೊಲೀಸ್ ತಂಡವು ಶನಿವಾರ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ ಬೆಳಕೆ–ಹೇರಬುಡಿಕೆ ಪ್ರದೇಶದಲ್ಲಿ ಆರೋಪಿಯನ್ನು ಬಂಧಿಸಿದೆ. ಬಂಧಿತ ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ…
ಕರ್ನಾಟಕ ಪ್ರದೇಶ ಜಾತ್ಯಾತೀತ ಜನತಾದಳದ ರಾಜ್ಯ ಮೀನುಗಾರ ಘಟಕದ ಅಧ್ಯಕ್ಷರಾದ ಶ್ರೀ ರತ್ನಾಕರ್ ಸುವರ್ಣ ಅವರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅವರು ನಿಧನರಾಗಿದ್ದಾರೆ ಎಂಬ ಸುಳ್ಳು ಸುದ್ದಿಯನ್ನು ನಕಲಿ ಪೋಸ್ಟರ್ ಮೂಲಕ ಹರಡುವ ದುಷ್ಕೃತ್ಯವನ್ನು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಎನ್.ಪಿ. ಪುಷ್ಪರಾಜನ್ ತೀವ್ರವಾಗಿ ಖಂಡಿಸಿದ್ದಾರೆ. ಜೀವಂತವಾಗಿರುವ ವ್ಯಕ್ತಿಯನ್ನು ಮೃತಪಟ್ಟಿದ್ದಾರೆ ಎಂದು ಬಿಂಬಿಸುವುದು ಕೇವಲ ಸುಳ್ಳು ಮಾಹಿತಿ ಹರಡುವ ಕೃತ್ಯವಲ್ಲ; ಅದು ವ್ಯಕ್ತಿಯ ಗೌರವಕ್ಕೆ ಧಕ್ಕೆ ತರುವುದರ ಜೊತೆಗೆ ಅವರ ಕುಟುಂಬದವರು, ಸ್ನೇಹಿತರು ಹಾಗೂ ಸಾರ್ವಜನಿಕರಲ್ಲಿ ಅನಗತ್ಯ ಆತಂಕ ಮತ್ತು ಗೊಂದಲ ಉಂಟುಮಾಡುವ ಅತ್ಯಂತ ಜವಾಬ್ದಾರಿಯಿಲ್ಲದ ನಡೆ. ಸಾಮಾಜಿಕ ಜಾಲತಾಣಗಳ ದುರುಪಯೋಗದ ಮೂಲಕ ಇಂತಹ ಸುಳ್ಳು ಸುದ್ದಿಗಳನ್ನು ಹರಡುವವರ ವಿರುದ್ಧ ಕಾನೂನು ತನ್ನ ಕೆಲಸವನ್ನು ಕಟ್ಟುನಿಟ್ಟಾಗಿ ಮಾಡಬೇಕು. ಭಿನ್ನಾಭಿಪ್ರಾಯಗಳು ಪ್ರಜಾಪ್ರಭುತ್ವದ ಭಾಗವಾಗಿದ್ದರೂ, ವ್ಯಕ್ತಿಯ ತೇಜೋವಧೆ ಮಾಡುವ ಉದ್ದೇಶದಿಂದ ಸುಳ್ಳು ಪೋಸ್ಟರ್ಗಳನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದು ಯಾವುದೇ ನಾಗರಿಕ ಸಮಾಜ ಒಪ್ಪಿಕೊಳ್ಳುವಂತಹ ಕೃತ್ಯವಲ್ಲ. ಇಂತಹ ವಿಕೃತ ಮನೋಭಾವದ ಕೃತ್ಯಗಳು…
ಕಡಬ , ಜು. 31: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಂತೂರು ಗ್ರಾಮದ ಕೇವಳದಲ್ಲಿ ಶನಿವಾರ ಸುರಿದ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಅಡಿಕೆಮರವೊಂದು ಮುರಿದು ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಮೃತ ವ್ಯಕ್ತಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಏಕಾಏಕಿ ಬೀಸಿದ ಬಿರುಗಾಳಿಗೆ ಅಡಿಕೆಮರ ಮುರಿದು ಅವರ ಮೇಲೆ ಬಿದ್ದಿದೆ. ತೀವ್ರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ಮಾಹಿತಿ ದೊರಕುತ್ತಿದ್ದಂತೆಯೇ ಕಡಬ ತಹಶೀಲ್ದಾರ್ ಗಣೇಶ್ ಸವಣೂರ, ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಯ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
ನವದೆಹಲಿ, ಜುಲೈ 31: ಭಾರತೀಯ ವೈದ್ಯಕೀಯ ಪದ್ಧತಿಯ ರಾಷ್ಟ್ರೀಯ ಆಯೋಗ (NCISM) ಮಹತ್ವದ ಸುತ್ತೋಲೆಯನ್ನು ಹೊರಡಿಸಿದ್ದು, ಕಾನೂನುಬದ್ಧವಾಗಿ ನೋಂದಾಯಿತರಾಗಿರುವ ಆಯುಷ್ ವೈದ್ಯರನ್ನು “ನಕಲಿ ವೈದ್ಯರು (Quacks)” ಅಥವಾ “ಬೋಗಸ್ ವೈದ್ಯರು” ಎಂದು ಕರೆಯುವುದಕ್ಕೆ ಯಾವುದೇ ಕಾನೂನು ಆಧಾರವಿಲ್ಲ ಎಂದು ಸ್ಪಷ್ಟಪಡಿಸಿದೆ. NCISM ಕಾಯಿದೆ, 2020ರ ಅಡಿಯಲ್ಲಿ ಹೊರಡಿಸಲಾದ ಈ ಸುತ್ತೋಲೆಯಲ್ಲಿ, ಬ್ಯಾಚುಲರ್ ಆಫ್ ಆಯುರ್ವೇದಿಕ್ ಮೆಡಿಸಿನ್ ಅಂಡ್ ಸರ್ಜರಿ (BAMS), ಬ್ಯಾಚುಲರ್ ಆಫ್ ಯುನಾನಿ ಮೆಡಿಸಿನ್ ಅಂಡ್ ಸರ್ಜರಿ (BUMS), ಬ್ಯಾಚುಲರ್ ಆಫ್ ಸಿದ್ಧ ಮೆಡಿಸಿನ್ ಅಂಡ್ ಸರ್ಜರಿ (BSMS) ಹಾಗೂ ಬ್ಯಾಚುಲರ್ ಆಫ್ ಸೋವಾ-ರಿಗ್ಪಾ ಮೆಡಿಸಿನ್ ಅಂಡ್ ಸರ್ಜರಿ (BSRMS) ಪದವಿಗಳನ್ನು ಪಡೆದ, ಸಂಬಂಧಪಟ್ಟ ರಾಜ್ಯ ಭಾರತೀಯ ವೈದ್ಯಕೀಯ ಮಂಡಳಿಗಳಲ್ಲಿ ನಿಯಮಾನುಸಾರ ನೋಂದಾಯಿತರಾಗಿರುವ ವೈದ್ಯರು ಕಾನೂನುಬದ್ಧವಾಗಿ ಮಾನ್ಯತೆ ಪಡೆದ ಆರೋಗ್ಯ ವೃತ್ತಿಪರರು ಎಂದು ತಿಳಿಸಲಾಗಿದೆ. ಸಾಮಾಜಿಕ ಜಾಲತಾಣಗಳು, ಮುದ್ರಣ ಹಾಗೂ ದೃಶ್ಯ ಮಾಧ್ಯಮಗಳು ಸೇರಿದಂತೆ ವಿವಿಧ ಸಾರ್ವಜನಿಕ ವೇದಿಕೆಗಳಲ್ಲಿ ಕೆಲವರು ಇಂತಹ ವೈದ್ಯರನ್ನು “ನಕಲಿ ವೈದ್ಯರು” ಅಥವಾ “ಬೋಗಸ್ ವೈದ್ಯರು”…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
