- ಉಡುಪಿ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಅಗ್ರ ಸಾಧನೆಗೆ ತುರವೇ ಉಡುಪಿ ಜಿಲ್ಲಾ ಅಧ್ಯಕ್ಷ ಫ್ರಾಂಕಿ ಡಿಸೋಜ ಕೊಳಲಗಿರಿ ಅಭಿನಂದನೆ
- ಮಂಗಳೂರು :ಏಪ್ರಿಲ್ 12ರಂದು ಬಂಟರ ಯಾನೆ ನಾಡವರ ಮಾತೃ ಸಂಘದ ಮಹತ್ವದ ಅಧಿವೇಶನ ಪ್ರಶಸ್ತಿ ಪ್ರದಾನ ಹಾಗೂ ಸನ್ಮಾನ ಕಾರ್ಯಕ್ರಮ
- ಬೆಂಗಳೂರು–ಮೈಸೂರು ಮಾರ್ಗಕ್ಕೆ ಇನ್ನಷ್ಟು ವೇಗ ಮತ್ತು ಸುಧಾರಣೆ : ಕುಮಾರಸ್ವಾಮಿ ಮೈಸೂರು ವಿಭಾಗದಲ್ಲಿ ಕಾಮಗಾರಿಗಳು ಶೀಘ್ರ ಪೂರ್ಣಗೊಳ್ಳಲಿದೆ: ಸೋಮಣ್ಣ
- ಸರ್ಕಾರಿ ಕಚೇರಿಗಳಲ್ಲಿ ನಿಯಮ ಪಾಲನೆ ಕಡ್ಡಾಯ: ಲೋಕಾಯುಕ್ತ ಡಿವೈಎಸ್ಪಿ ದಿನಕರ ಶೆಟ್ಟಿ ಎಚ್ಚರಿಕೆ
- ನೆತ್ತಿಲ ಕೋಟೆಕಾರ್ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭಕ್ತಿಭಾವದಿಂದ ನೆರವೇರಿದ ಧಾರ್ಮಿಕ ಕಾರ್ಯಕ್ರಮ
- ಕುಂದಾಪುರ: ಎಕ್ಸಲೆಂಟ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಂದ ರಾಜ್ಯ ಮಟ್ಟದ ಅದ್ಭುತ ಸಾಧನೆ
- ದ್ವಿತೀಯ ಪಿಯುಸಿ ಫಲಿತಾಂಶ: ಆಳ್ವಾಸ್ ಕಾಲೇಜಿನ ದಿಶಾ ಟಾಪರ್ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ ಮೂಡುಬಿದಿರೆಯ ದಿಶಾ – 600ಕ್ಕೆ 600 ಅಂಕಗಳ ಸಾಧನೆ
- ಏಪ್ರಿಲ್ 12ರಂದು 3 ಗಂಟೆಗೆ ಉಡುಪಿಯಲ್ಲಿ ತುಳುನಾಡ ರಕ್ಷಣಾ ವೇದಿಕೆ ಪ್ರಮುಖ ಸಭೆ, ಸದಸ್ಯರಿಗೆ ಕಡ್ಡಾಯ ಹಾಜರಾತಿ, ಸಂಘಟನಾ ಅಭಿವೃದ್ಧಿಗೆ ಮಹತ್ವದ ಚರ್ಚೆ
Author: Tulunada Surya
ಪಡುಬಿದ್ರೆ : ಬಿಗ್ಬಾಸ್ ಕನ್ನಡ ಸೀಸನ್–12ರಲ್ಲಿ ರನ್ನರ್ಅಪ್ ಪ್ರಶಸ್ತಿ ಗೆದ್ದು ಮನೆಮಂದಿಯ ಹೃದಯ ಗೆದ್ದ ರಕ್ಷಿತಾ ಶೆಟ್ಟಿ ಹುಟ್ಟೂರಿಗೆ ಆಗಮಿಸಿದ ಕ್ಷಣವೇ ಸಂಭ್ರಮದ ಮಹಾಪೂರ ಹರಿದುಬಂದಿತು. ಉಡುಪಿ ಜಿಲ್ಲೆಯ ಹೆಜಮಾಡಿ ಟೋಲ್ಗೇಟ್ ಬಳಿ ರಕ್ಷಿತಾಳಿಗೆ ಅಭಿಮಾನಿಗಳು ಅದ್ಧೂರಿ ಸ್ವಾಗತ ನೀಡಿ ಗೌರವಿಸಿದರು. ಹೆಜಮಾಡಿ ಟೋಲ್ನಿಂದ ಪಡುಬಿದ್ರೆಯವರೆಗೆ ಭರ್ಜರಿ ಮೆರವಣಿಗೆಯೊಂದಿಗೆ ರಕ್ಷಿತಾ ಶೆಟ್ಟಿಯನ್ನು ಕರೆತರಲಾಯಿತು. ತೆರೆದ ವಾಹನದಲ್ಲಿ ನಿಂತು ಅಭಿಮಾನಿಗಳಿಗೆ ಕೈಬೀಸಿದ ರಕ್ಷಿತಾ, ಮೆರವಣಿಗೆಯ ಮಧ್ಯೆ ಕೈಯಲ್ಲಿ ಬಂಗುಡೆ ಮೀನು ಹಿಡಿದು ಸಂಭ್ರಮ ವ್ಯಕ್ತಪಡಿಸಿದ ದೃಶ್ಯ ಎಲ್ಲರ ಗಮನ ಸೆಳೆಯಿತು. ರಕ್ಷಿತಾ ಆಗಮನದ ಸುದ್ದಿ ತಿಳಿಯುತ್ತಿದ್ದಂತೆ ನೂರಾರು ಅಭಿಮಾನಿಗಳು ಹೆಜಮಾಡಿ ಟೋಲ್ನಲ್ಲಿ ಜಮಾಯಿಸಿದ್ದು, ಹೂಗುಚ್ಛ, ಹಾರಗಳೊಂದಿಗೆ ಅಭಿನಂದನೆ ಸಲ್ಲಿಸಿದರು. ಸೆಲ್ಫಿ ಪಡೆಯಲು ಅಭಿಮಾನಿಗಳ ಮುಗಿಬಿದ್ದ ದೃಶ್ಯ ಕಂಡುಬಂದಿತು. ಬಳಿಕ ರಕ್ಷಿತಾ ಅವರ ವಾಹನದ ಜೊತೆಗೆ ಅಭಿಮಾನಿಗಳು ಹೆಜ್ಜೆ ಹಾಕಿ ಸಂಭ್ರಮಕ್ಕೆ ಮತ್ತಷ್ಟು ಮೆರುಗು ತಂದರು. ಬಿಗ್ಬಾಸ್ ರನ್ನರ್ಅಪ್ ಗೌರವದೊಂದಿಗೆ ಹುಟ್ಟೂರಿಗೆ ಮರಳಿದ ರಕ್ಷಿತಾ ಶೆಟ್ಟಿಗೆ ಎಲ್ಲೆಡೆ ಅಭಿನಂದನೆಗಳ ಮಹಾಪೂರವೇ ಹರಿದು, ಪಡುಬಿದ್ರೆ ಸಂಭ್ರಮದ…
ಪುಣೆ: ಬಂಟ್ಸ್ ಅಸೋಸಿಯೇಷನ್ ಪುಣೆ (ರಿ.) ವತಿಯಿಂದ 14ನೇ ವಾರ್ಷಿಕ ಸಮಾವೇಶವನ್ನು ಫೆಬ್ರವರಿ 6, 2026 (ಶುಕ್ರವಾರ)ರಂದು ಮಧ್ಯಾಹ್ನ 2.30 ಗಂಟೆಯಿಂದ ಪುಣೆಯ ಬಾನೇರ್ನಲ್ಲಿರುವ “ಬಂಟರ ಭವನ”ದಲ್ಲಿ ಆಯೋಜಿಸಲಾಗಿದೆ. ಮರ್ಸಿಡಿಸ್ ಶೋರೂಮ್ ಸಮೀಪ, ಪುಣೆ–ಬೆಂಗಳೂರು ಹೆದ್ದಾರಿಯ ಬಾನೇರ್ ಪ್ರದೇಶದಲ್ಲಿರುವ ಬಂಟರ ಭವನದಲ್ಲಿ ನಡೆಯಲಿರುವ ಈ ಸಮಾವೇಶಕ್ಕೆ ಬಂಟ ಸಮುದಾಯದ ಸದಸ್ಯರು ಹಾಗೂ ಸಾರ್ವಜನಿಕರು ಕುಟುಂಬ ಸಮೇತ ಭಾಗವಹಿಸುವಂತೆ ಸಂಘದ ಪದಾಧಿಕಾರಿಗಳು ಮನವಿ ಮಾಡಿದ್ದಾರೆ. ಕಾರ್ಯಕ್ರಮದ ಅಂಗವಾಗಿ ಮಧ್ಯಾಹ್ನ 2.30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಸಂಜೆ 6 ಗಂಟೆಗೆ ಅಧಿಕೃತ ವಾರ್ಷಿಕ ಸಮಾರಂಭಕ್ಕೆ ಚಾಲನೆ ದೊರೆಯಲಿದೆ. ರಾತ್ರಿ 9 ಗಂಟೆಗೆ ಭೋಜನ ವ್ಯವಸ್ಥೆ ಮಾಡಲಾಗಿದೆ. ಸಮಾವೇಶದ ವಿಶೇಷ ಆಕರ್ಷಣೆಯಾಗಿ ಶ್ರೀ ಶಕ್ತಿ ಸಾಂಸ್ಕೃತಿಕ ತಂಡದ ಆಶ್ರಯದಲ್ಲಿ “ಸಾಮರ್ಥ್ಯ ಕಲಾವೈಭವ” ಎಂಬ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಭಕ್ತಿ, ಶಕ್ತಿ ಹಾಗೂ ಸಂಸ್ಕೃತಿಯ ಸೊಗಡನ್ನು ಒಳಗೊಂಡ ಈ ಕಾರ್ಯಕ್ರಮವು ಪ್ರೇಕ್ಷಕರಿಗೆ ಮನಮುಗ್ಧಗೊಳಿಸುವ ಅನುಭವ ನೀಡಲಿದೆ ಎಂದು ಸಂಘದವರು ತಿಳಿಸಿದ್ದಾರೆ. ಕಾರ್ಯಕ್ರಮಕ್ಕೆ ಬಂಟ್ಸ್ ಅಸೋಸಿಯೇಷನ್ ಪುಣೆ…
ಕಾರವಾರ: ಕಾರವಾರ ತಾಲೂಕಿನ ಕದ್ರಾ ನಿವಾಸಿ ಯುವತಿ ರಿಶೆಲ್ ಡಿಸೋಜಾ ಆತ್ಮಹತ್ಯೆ ಪ್ರಕರಣದ ತನಿಖೆಯಲ್ಲಿ ಗಂಭೀರ ನಿರ್ಲಕ್ಷ್ಯ ವಹಿಸಿದ ಆರೋಪದ ಹಿನ್ನೆಲೆಯಲ್ಲಿ ಕದ್ರಾ ಪೊಲೀಸ್ ಠಾಣೆಯ ಪಿಎಸ್ಐ ಸುನೀಲ್ ಬಂಡಿವಡ್ಡರ್ ಅವರನ್ನು ಅಮಾನತುಗೊಳಿಸಲಾಗಿದೆ. ಪ್ರಕರಣವು ರಾಜಕೀಯ ಹಾಗೂ ಸಾಮಾಜಿಕವಾಗಿ ತೀವ್ರ ತಿರುವು ಪಡೆದುಕೊಂಡ ಬೆನ್ನಲ್ಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಈ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.ಕದ್ರಾ ನಿವಾಸಿಗಳಾದ ರೀನಾ ಮತ್ತು ಕ್ರೀಸ್ತೋದ್ ಡಿಸೋಜ ದಂಪತಿಯ ಪುತ್ರಿ ರಿಶೆಲ್ ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಾವಿಗೆ ಜೆಡಿಎಸ್ ಮುಖಂಡೆ ಚೈತ್ರಾ ಕೊಠಾರ್ ಅವರ ಪುತ್ರ ಚಿರಾಗ್ ನೀಡುತ್ತಿದ್ದ ನಿರಂತರ ಕಿರುಕುಳವೇ ಕಾರಣ ಎಂದು ಪೋಷಕರು ಗಂಭೀರ ಆರೋಪ ಮಾಡಿದ್ದಾರೆ. ಯುವತಿಯನ್ನು ಪ್ರೀತಿಸುವಂತೆ ಒತ್ತಡ ಹೇರುತ್ತಿದ್ದಲ್ಲದೆ, ಸಾವಿಗೂ ಮುನ್ನ ಅತ್ಯಾಚಾರ ಎಸಗಿರುವ ಸಂಶಯವಿದೆ ಎಂದೂ ಅವರು ದೂರಿದ್ದಾರೆ.ಮೃತ ಯುವತಿಯ ಮೊಬೈಲ್ನಲ್ಲಿ ಸುಮಾರು 230 ಪುಟಗಳಷ್ಟು ವಾಟ್ಸಪ್ ಚಾಟ್ಗಳು ಲಭ್ಯವಿದ್ದರೂ, ಅವುಗಳನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿಲ್ಲ ಎಂಬ ಆರೋಪಗಳು ಕೇಳಿಬಂದಿವೆ. ಅಲ್ಲದೆ, ಪ್ರಾಥಮಿಕ ಹಂತದಲ್ಲೇ ಪ್ರಮುಖ ಆರೋಪಿಯನ್ನು…
ಬೆಂಗಳೂರು: ತುಳು ಭಾಷೆಯನ್ನು ಕರ್ನಾಟಕ ರಾಜ್ಯದ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಘೋಷಿಸುವ ದಿಸೆಯಲ್ಲಿ ಅಗತ್ಯವಿರುವ ಕಾನೂನು ಪ್ರಕ್ರಿಯೆಗಳು ಹಾಗೂ ಅನುಷ್ಠಾನದ ವಿಧಾನಗಳನ್ನು ಅಧ್ಯಯನ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ನೇಮಿಸಿದ್ದ ಅಧ್ಯಯನ ಸಮಿತಿಯು ಆಂಧ್ರ ಪ್ರದೇಶಕ್ಕೆ ಭೇಟಿ ನೀಡಿ, ಎರಡು ದಿನಗಳ ಕಾಲ ವಿವಿಧ ಸರ್ಕಾರಿ ಇಲಾಖೆಗಳೊಂದಿಗೆ ಸಮಾಲೋಚನೆ ನಡೆಸಿ ಮಾಹಿತಿ ಸಂಗ್ರಹಿಸಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ರಾಜ್ಯ ನಿರ್ದೇಶಕಿ ಕೆ.ಎಂ. ಗಾಯತ್ರಿ ಅವರ ಅಧ್ಯಕ್ಷತೆಯಲ್ಲಿ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಅವರ ಉಪಸ್ಥಿತಿಯಲ್ಲಿ ಏಳು ಸದಸ್ಯರ ಈ ಸಮಿತಿ ಕಾರ್ಯನಿರ್ವಹಿಸಿದೆ. ಆಂಧ್ರ ಪ್ರವಾಸ ಅಧ್ಯಯನ ಸಮಿತಿಯು ಜನವರಿ 19 ಮತ್ತು 20ರಂದು ಆಂಧ್ರ ಪ್ರದೇಶದ ರಾಜಧಾನಿ ಅಮರಾವತಿ, ಎನ್.ಟಿ.ಆರ್ ಜಿಲ್ಲೆಯಲ್ಲಿ ವಿವಿಧ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಿತು. ಮೊದಲ ದಿನದ ಸಮಾಲೋಚನೆ ಮೊದಲ ದಿನ ಅಧ್ಯಯನ ತಂಡವು ಆಂಧ್ರ ಪ್ರದೇಶ ರಾಜ್ಯದ ಮುಖ್ಯ ಕಾರ್ಯದರ್ಶಿ ವಿಜಯಾನಂದ ಅವರನ್ನು ಸಚಿವಾಲಯದಲ್ಲಿ…
ಸುರತ್ಕಲ್ನ ಎಂ.ಆರ್.ಪಿ.ಎಲ್. (MRPL) ಘಟಕದಲ್ಲಿ ಮಂಗಳವಾರ ಬೆಳಗ್ಗೆ ಸುಮಾರು 11 ಗಂಟೆಗೆ ಬೆಂಕಿ ಅವಘಡ ಸಂಭವಿಸಿರುವ ಘಟನೆ ವರದಿಯಾಗಿದೆ. ಜೋಕಟ್ಟೆ–ಬಜ್ಪೆ ನಡುವಿನ ಫೇಸ್–3 ಘಟಕದಲ್ಲಿರುವ ಪೆಟ್ರೋಲಿಯಂ ತ್ಯಾಜ್ಯ ಸಂಸ್ಕರಣಾ ಘಟಕದ ಬಳಿ ಈ ದುರ್ಘಟನೆ ನಡೆದಿದೆ. ಮಾಹಿತಿಯಂತೆ, ಘಟಕದ ಸಮೀಪ ವೆಲ್ಡಿಂಗ್ ಕಾಮಗಾರಿ ನಡೆಯುತ್ತಿದ್ದ ವೇಳೆ ಬೆಂಕಿಯ ಕಿಡಿಯೊಂದು ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಸಂಪರ್ಕ ಹೊಂದಿರುವ ಕೊಳವೆಗೆ ತಗುಲಿದ್ದು, ಅಲ್ಲಿಂದ ಸುಮಾರು 10 ಸಾವಿರ ಲೀಟರ್ ಸಾಮರ್ಥ್ಯದ ತ್ಯಾಜ್ಯ ಸಂಸ್ಕರಣಾ ಟ್ಯಾಂಕ್ಗೆ ಬೆಂಕಿ ಹರಡಿದೆ. ಪರಿಣಾಮ ಟ್ಯಾಂಕ್ನಲ್ಲಿ ಭಾರೀ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಹಾಗೂ ಎಂ.ಆರ್.ಪಿ.ಎಲ್.ನ ತುರ್ತು ಸ್ಪಂದನಾ ತಂಡ ಸ್ಥಳಕ್ಕೆ ಧಾವಿಸಿ ಬೆಂಕಿ ನಿಯಂತ್ರಣಕ್ಕೆ ಕ್ರಮ ಕೈಗೊಂಡಿದೆ. ಘಟನೆಯಿಂದ ಸಂಭವಿಸಿದ ಹಾನಿ ಹಾಗೂ ಪ್ರಾಣಹಾನಿ ಕುರಿತು ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿವೆ.
ಮಂಗಳೂರು ಸೆಂಟ್ರಲ್ನಿಂದ ಬಂದರ್ ಗೂಡ್ಸ್ ಶೆಡ್ ಗೆ ಹೋಗುವ ಖಾಲಿ ರೈಲುಗಳ ಓಡಾಟದಿಂದಾಗಿ ದಿನನಿತ್ಯ ಟ್ರಾಫಿಕ್ ಜಾಮ್ ಉಂಟಾಗುವುದು ಸೇರಿದಂತೆ ನಗರದ ವಿವಿಧ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ದ.ಕ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜನಪ್ರತಿನಿಧಿಗಳ, ಅಧಿಕಾರಿಗಳ, ಸಾರ್ವಜನಿಕರ ಸಭೆ ನಡೆಯಿತು. ವಿಷಯ ಪ್ರಸ್ತಾಪಿಸಿದ ಶಾಸಕ ವೇದವ್ಯಾಸ್ ಕಾಮತ್ ಅವರು, ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ಗೇಟ್ ಮೂಲಕ ದಿನಕ್ಕೆ ಕನಿಷ್ಠ 16 ಸಲವಾದರೂ ಖಾಲಿ ಪ್ಯಾಸೆಂಜರ್ ಮತ್ತು ಗೂಡ್ಸ್ ರೈಲುಗಳು ಬಂದರ್ ಯಾರ್ಡ್ ಗೆ ಹೋಗುವುದರಿಂದ ಪ್ರತೀ ಬಾರಿ ಕನಿಷ್ಠ 15 ರಿಂದ 20 ನಿಮಿಷ ಟ್ರಾಫಿಕ್ ಜಾಮ್ ಉಂಟಾಗಿ ಶಾಲಾ ಕಾಲೇಜು ವಿದ್ಯಾರ್ಥಿಗಳು, ಕೆಲಸಕ್ಕೆ ತೆರಳುವ ಉದ್ಯೋಗಿಗಳು, ಆಂಬುಲೆನ್ಸ್, ಅಗ್ನಿಶಾಮಕ ವಾಹನಗಳು ತೊಂದರೆಗೀಡಾಗುತ್ತಿವೆ. ಈ ಬಗ್ಗೆ ಸ್ಥಳೀಯರು ಹಲವು ಬಾರಿ ನನಗೆ ದೂರು ನೀಡಿದ್ದು, ಅದನ್ನು ಖುದ್ದು ಪರಿಶೀಲಿಸಿ ಸಂಸದರ ಗಮನಕ್ಕೆ ತಂದು ಸಮಸ್ಯೆಯನ್ನು ಬಗೆಹರಿಸುವ ಪ್ರಯತ್ನ ನಡೆಸಲಾಗಿದೆ ಎಂದರು.ಜಿಲ್ಲಾಧಿಕಾರಿಗಳಾದ ದರ್ಶನ್ ಎಚ್.ವಿ ಮಾತನಾಡಿ, ರೈಲು ಬರುವ ಸಮಯವನ್ನು ಆಯಾ ಪ್ರದೇಶಗಳಲ್ಲಿ ದೊಡ್ಡ…
ಮಂಗಳೂರು: ವಿದೇಶದಲ್ಲಿ ಕಳೆದ ಒಂದೂವರೆ ದಶಕಕ್ಕೂ ಹೆಚ್ಚು ಕಾಲ ತುಳು–ಕನ್ನಡ ಸಂಸ್ಕೃತಿಯ ವೈಭವವನ್ನು ಜಾಗತಿಕ ವೇದಿಕೆಯಲ್ಲಿ ಪ್ರತಿಬಿಂಬಿಸುತ್ತಾ, ನಿರಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಸಾಮಾಜಿಕ ಸೇವಾ ಚಟುವಟಿಕೆಗಳ ಮೂಲಕ ಗುರುತಿಸಿಕೊಂಡಿರುವ ಗಮ್ಮತ್ ಕಲಾವಿದೆರ್ ದುಬೈ ಸಂಸ್ಥೆಯ 2026–27ನೇ ಸಾಲಿನ ಅಧ್ಯಕ್ಷರಾಗಿ ಖ್ಯಾತ ರಂಗಕಲಾವಿದ ವಾಸುಕುಮಾರ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಸಂಸ್ಥೆಯ ಪ್ರಧಾನ ಕಾರ್ಯದರ್ಶಿಯಾಗಿ ಸಮಂತಾ ಗಿರೀಶ್, ಕೋಶಾಧಿಕಾರಿಯಾಗಿ ಜೆನೆಟ್ ಸಿಕ್ವೆರಾ ನೇಮಕಗೊಂಡಿದ್ದಾರೆ. ಸಲಹಾ ಸಮಿತಿಯ ಗೌರವ ಪೋಷಕರಾಗಿ ಉದ್ಯಮಿ ಹರೀಶ್ ಬಂಗೇರ್ ಅವರನ್ನು ಆಯ್ಕೆ ಮಾಡಲಾಗಿದ್ದು, ರಂಗ ಸಾರಥಿ ಹಾಗೂ ಖ್ಯಾತ ರಂಗ ನಿರ್ದೇಶಕ ವಿಶ್ವನಾಥ ಬಿ. ಶೆಟ್ಟಿ ಕೂಡ ಸಲಹಾ ಸಮಿತಿಯಲ್ಲಿ ಸ್ಥಾನ ಪಡೆದಿದ್ದಾರೆ. ಹೊಸ ಪದಾಧಿಕಾರಿಗಳ ನೇತೃತ್ವದಲ್ಲಿ ಗಮ್ಮತ್ ಕಲಾವಿದೆರ್ ದುಬೈ ಸಂಸ್ಥೆ ಇನ್ನಷ್ಟು ಬಲಿಷ್ಠವಾಗಿ ತುಳು–ಕನ್ನಡ ನಾಡಿನ ಕಲೆ, ಸಂಸ್ಕೃತಿ ಮತ್ತು ಸಾಮಾಜಿಕ ಸೇವೆಯನ್ನು ವಿದೇಶದಲ್ಲಿಯೂ ಉತ್ತೇಜಿಸಲಿದೆ ಎಂಬ ವಿಶ್ವಾಸ ವ್ಯಕ್ತವಾಗಿದೆ. ವರದಿ: ಕರುಣಾಕರ್ ಶೆಟ್ಟಿ ಮುಲ್ಕಿ
ಮಂಗಳೂರು: ಬಜ್ಪೆ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕೆಂಜಾರು 3ನೇ ವಾರ್ಡ್ನ ಮೂಡುಬಾಳಿಕೆ ಪ್ರದೇಶದಲ್ಲಿ ವಾಸವಾಗಿರುವ ಪರಿಶಿಷ್ಟ ಜಾತಿಯ ಎದುರಾಗಿದೆ. ಭಾರತೀಯ ಕೋಸ್ಟ್ ಗಾರ್ಡ್ ವತಿಯಿಂದ ಕಂಪೌಂಡ್ ನಿರ್ಮಾಣ ಕಾಮಗಾರಿ ಆರಂಭಿಸಿರುವುದರಿಂದ ಈ ಕುಟುಂಬಗಳ ದೈನಂದಿನ ಜೀವನವೇ ಅಸ್ತವ್ಯಸ್ತವಾಗುವ ಭೀತಿ ಉಂಟಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ.)ಯ ಜಿಲ್ಲಾ ಸಂಘಟನಾ ಸಂಚಾಲಕ ರಘು ಕೆ. ಎಕ್ಕಾರು ಆರೋಪಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಸುಮಾರು 70 ವರ್ಷಗಳಿಂದ ಈ ಕುಟುಂಬಗಳು ಇದೇ ಪ್ರದೇಶದಲ್ಲಿ ವಾಸಿಸುತ್ತಿದ್ದು, 1995ರಲ್ಲಿ ಸರ್ಕಾರದಿಂದ ಮನೆ ನಿವೇಶನದ ಹಕ್ಕುಪತ್ರವೂ ನೀಡಲಾಗಿದೆ. ಮನೆಗಳ ಸುತ್ತಲೂ ಖಾಸಗಿ ಜಮೀನುಗಳಿರುವ ಕಾರಣ ಸರ್ವೆ ನಂ.116/7ಕ್ಕೆ ಹೊಂದಿಕೊಂಡಿರುವ ಕಾಲುದಾರಿ ಹಾಗೂ ಕಚ್ಚಾ ರಸ್ತೆಯೇ ಈ ಕುಟುಂಬಗಳಿಗೆ ದೈನಂದಿನ ಸಂಚಾರ, ಮಕ್ಕಳ ವಿದ್ಯಾಭ್ಯಾಸ, ಅಗತ್ಯ ವಸ್ತುಗಳ ಸಾಗಣೆ ಮತ್ತು ತುರ್ತು ಸಂದರ್ಭಗಳಲ್ಲಿ ರೋಗಿಗಳು ಹಾಗೂ ಹಿರಿಯ ನಾಗರಿಕರನ್ನು ಕರೆದೊಯ್ಯುವ ಏಕೈಕ ಮಾರ್ಗವಾಗಿದೆ ಎಂದು ವಿವರಿಸಿದರು. ಮಳೆಗಾಲದಲ್ಲಿ ಈ ಪ್ರದೇಶ ಸಂಪೂರ್ಣ…
ರಾಣಿ ಅಬ್ಬಕ್ಕಳ ಬದುಕು ಪ್ರತಿಯೊಬ್ಬರಿಗೂ ಮಾದರಿ: ಅನಿತಾ ಮಂಗಳೂರು: ಕರ್ನಾಟಕ ರಾಜ್ಯಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಭಾಗವು ಮೂಡುಬಿ ದಿರೆಯ ಎಕ್ಸಲೆಂಟ್ ವಿದ್ಯಾಸಂಸ್ಥೆಯ ಆಶ್ರಯದಲ್ಲಿ ‘ಅಬ್ಬಕ್ಕ : 500 ಪ್ರೇರಣಾ ದಾಯಿ 100 ಸರಣಿ ಉಪನ್ಯಾಸದ 99ನೇ ಕಾರ್ಯಕ್ರಮ ಮತ್ತು ಸಾಧಕರ ಸಮ್ಮಾನ ಸಮಾರಂಭ ವಿದ್ಯಾಸಂಸ್ಥೆಯ ‘ರಾಜ ಸಭಾಂಗಣ’ ದಲ್ಲಿ ಯಶಸ್ವಿಯಾಗಿ ನಡೆಯಿತು.ಕಾರ್ಯಕ್ರಮವನ್ನು ಮೂಡಬಿದಿರೆ ಚೌಟ ಮನೆತನದ ಅಬ್ಬಕ್ಕ ವಂಶಸ್ಥೆ ಧರ್ಮಸ್ಥಳದ ಅನಿತಾ ಸುರೇಂದ್ರ ಕುಮಾರ್ ಉದ್ಘಾಟಿಸಿ ಮಾತನಾಡಿ, ‘ರಾಣಿ ಅಬ್ಬಕ್ಕರ ಶೌರ್ಯ, ಧೈರ್ಯ ಮತ್ತು ಸ್ವಾಭಿಮಾನ ಮುಂದಿನ ತಲೆಮಾರಿಗೆ ಪ್ರೇರಣೆಯಾಗಲಿದೆ. ಯುವ ಜನಾಂಗ ಅದರಿಂದ ಪ್ರೇರಣೆ ಪಡೆದು ಯಶಸ್ವಿ ಜೀವನವನ್ನು ನಡೆಸುವುದಕ್ಕೆ ಸಾಧ್ಯ. ಪ್ರತಿಯೊಬ್ಬ ವಿದ್ಯಾರ್ಥಿಯೂ ದೇಶ ಪ್ರೇಮವನ್ನು ಬೆಳೆಸಿ ಸಾರ್ಥಕ ಬದುಕನ್ನು ಕಾಣಬೇಕು’ ಎಂದರು. ಯಕ್ಷಗಾನ ಕಲಾವಿದ ಮತ್ತು ಶಿಕ್ಷಕ ವರ್ಕಾಡಿ ರವಿ ಅಲೆವೂರಾಯ, ರಾಣಿ ಅಬ್ಬಕ್ಕ ವಿದೇಶಿ ಆಕ್ರಮಣಕಾರರ ವಿರುದ್ಧ ನಡೆಸಿದ ಹೋರಾಟ, ಅವರ ನಾಯಕತ್ವ ಮತ್ತು ದೇಶಭಕ್ತಿಯ ಮೌಲ್ಯಗಳನ್ನು ವಿವರಿಸಿದರು.ಸಾಧಕರಿಗೆ ಸಮ್ಮಾನ:ಕಾರ್ಯಕ್ರಮದಲ್ಲಿ ರಾಣಿ ಅಬ್ಬಕ್ಕ ವಿಶೇಷ…
2026ನೇ ಸಾಲಿನ ಕೊಂಕಣಿ ಲೇಖಕ್ ಸಂಘ್ ಸಾಹಿತ್ಯ ಪ್ರಶಸ್ತಿಗೆ ಖ್ಯಾತ ಹಿರಿಯ ಕೊಂಕಣಿ ಸಾಹಿತಿ ಶ್ರೀ ಪೆಟ್ರಿಕ್ ಕಾಮಿಲ್ ಮೊರಾಸ್ (ಎಂ. ಪೆಟ್ರಿಕ್) ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಘದ ಸಂಚಾಲಕ ರಿಚರ್ಡ್ ಮೊರಾಸ್ ಅವರು ಪ್ರಕಟಿಸಿದರು. ನಗರದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2018ರಲ್ಲಿ ಸ್ಥಾಪನೆಯಾದ ಕೊಂಕಣಿ ಲೇಖಕ್ ಸಂಘ್ ಕರ್ನಾಟಕವು ಕೊಂಕಣಿ ಭಾಷೆ ಮತ್ತು ಸಾಹಿತ್ಯವನ್ನು ಉತ್ತೇಜಿಸುವ ಉದ್ದೇಶದಿಂದ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದು, 2022ರಿಂದ ಸಾಹಿತ್ಯ ಕ್ಷೇತ್ರಕ್ಕೆ ವಿಶೇಷ ಕೊಡುಗೆ ನೀಡಿದ ಲೇಖಕರನ್ನು ಗೌರವಿಸುವ ನಿರ್ಧಾರ ಕೈಗೊಂಡಿದೆ. ಅದರ ಭಾಗವಾಗಿ ಈ ಬಾರಿಯ ಗೌರವವನ್ನು ಹಿರಿಯ ಸಾಹಿತಿ ಎಂ. ಪೆಟ್ರಿಕ್ ಅವರಿಗೆ ನೀಡಲು ತೀರ್ಮಾನಿಸಲಾಗಿದೆ ಎಂದರು. ಪ್ರಶಸ್ತಿಯೊಂದಿಗೆ ಸ್ಮರಣಿಕೆ, ಪ್ರಶಸ್ತಿ ಪತ್ರ ಹಾಗೂ ₹25,000 ನಗದು ನೀಡಿ ಗೌರವಿಸಲಾಗುವುದು. ಪ್ರಶಸ್ತಿ ಪ್ರದಾನ ಸಮಾರಂಭವು ಫೆಬ್ರವರಿ 7ರಂದು (ಶನಿವಾರ) ಸಂಜೆ 6.30ಕ್ಕೆ ಸಂದೇಶ ಪ್ರತಿಷ್ಠಾನ, ಬಜ್ಜೋಡಿ, ಮಂಗಳೂರು ಇಲ್ಲಿ ನಡೆಯಲಿದೆ ಎಂದು ಮಾಹಿತಿ ನೀಡಿದರು. ಸಾಹಿತ್ಯ ಸಾಧನೆಯ ಹಾದಿ ನವೆಂಬರ್…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
